Author: roovari

ಮಂಗಳೂರು : ಜೆನೆಸಿಸ್ ಪ್ರಕಾಶನ ಮಂಗಳೂರು ವತಿಯಿಂದ ಲೇಖಕ ಮಾರ್ಸೆಲ್ ಎಂ. ಡಿ’ಸೋಜಾ (ಮಾಚ್ಯಾ, ಮಿಲಾರ್)ರವರ ‘ಚಂದ್ರೆಮ್’ ಕೊಂಕಣಿ ಇ- ಮಾಸಿಕ ಪತ್ರಿಕೆಯ ಲೋಕಾರ್ಪಣೆಯು ದಿನಾಂಕ 20-03-2024ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಿಕೆಯನ್ನು ಎಂ.ಸಿ.ಸಿ. ಬ್ಯಾಂಕ್ ನಿರ್ದೇಶಕ ಜೆರಾಲ್ಡ್ ಪಿಂಟೊ (ಜೆರಿ ನಿಡ್ಡೋಡಿ) ಅವರು ಬಿಡುಗಡೆಗೊಳಿಸಿ “ಕೊಂಕಣಿ ಭಾಷೆಯಲ್ಲಿ ಮಕ್ಕಳ ಬರಹಕ್ಕಾಗಿ ಕೆಲವು ಪತ್ರಿಕೆಗಳು ಮಂಗಳೂರಿನಿಂದ ಪ್ರಕಟವಾಗುತ್ತಿದ್ದವು. ಕಾಲಕ್ರಮೇಣ ಅವು ಮುಚ್ಚಲ್ಪಟ್ಟವು. ಮಕ್ಕಳ ಸಾಹಿತ್ಯ ಉಳಿಸಿ, ಬೆಳೆಸಲು ಕೊಂಕಣಿ ಸಾಹಿತಿ ಮಾಚ್ಯಾ, ಮಿಲಾರ್ ಅವರ ಪ್ರಯತ್ನ ಯಶಸ್ವಿಯಾಗಲಿ. 20 ವರ್ಷಗಳಿಂದ ಲೇಖಕ ಮಾಚ್ಯಾ, ಮಿಲಾರ್ ರವರು ಜೆನೆಸಿಸ್ ಪ್ರಕಾಶನದ ಮೂಲಕ ಕೊಂಕಣಿ ಪುಸ್ತಕಗಳನ್ನು ಪ್ರಕಟಿಸಿ ಕೊಂಕಣಿಯ ಸೇವೆ ಮಾಡುತ್ತಿದ್ದಾರೆ. ಕೊಂಕಣಿ ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಇದೊಂದು ಉತ್ತಮ ಪ್ರಯತ್ನವಾಗಿದೆ” ಎಂದು ಹೇಳಿದರು. “2004ರ ಸೆಪ್ಟೆಂಬರ್ ನಲ್ಲಿ ಕೊಂಕಣಿ ಚುಟುಕು ಹಾಗೂ ಕವಿತಾ ಸಂಕಲನ ‘ಕಾಳ್ಜಾಪರ್ಜಳ್’ ಕೃತಿಯ ಪ್ರಕಟಣೆಯ ಮೂಲಕ ಆರಂಭವಾದ ಜೆನೆಸಿಸ್ ಪ್ರಕಾಶನಕ್ಕೆ ಈಗ ವಿಂಶತಿ ಸಂಭ್ರಮ. ಕೊಂಕಣಿ…

Read More

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳು ಕಾಟಿಪಳ್ಳ ಹಾಗೂ ‘ನಿನಾದ’ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ, ಪಾವಂಜೆ ಇವರ ಸಂಯೋಜನೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೆಲಸಂಸ್ಕೃತಿ ಹಾಗೂ ಜಲಸಂಸ್ಕೃತಿ ಪರಿಚಯಿಸುವ ‘ಯುವ ನಿನಾದ’ – ನಿನಾದ ನೆನಪು ಕಾರ್ಯಕ್ರಮವು ದಿನಾಂಕ 6-4-2024ರ ಶನಿವಾರ ಬೆಳಿಗ್ಗೆ 9.30ರಿಂದ ಪಾವಂಜೆಯ ನಿನಾದ ರಂಗಮಂದಿರದಲ್ಲಿ ನಡೆಯಲಿದೆ. ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಪಿ. ದಯಾಕರ್ ಇವರ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶ್ರೀಮತಿ ಶಕುಂತಲಾ ರಮಾನಂದ ಭಟ್ ಇಡ್ಯಾ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅನುರಾಧಾ ರಾಜೀವ್ ಸುರತ್ಕಲ್ ಇವರ ‘ಭಾವ ಘಮಲು’ ಮತ್ತು ‘ಅಂತರಂಗ ಸಂವಾದ’ ಎರಡು ಕೃತಿಗಳ ಲೋಕಾರ್ಪಣೆಗೊಳ್ಳಲಿದ್ದು, ಶ್ರೀ ಕಡಂಬೋಡಿ ಮಹಾಬಲ ಪೂಜಾರಿ, ಶ್ರೀಮತಿ ಕುಸುಮ ಮಹಾಬಲ ಪೂಜಾರಿ, ಅಡ್ವಕೇಟ್ ಮತ್ತು ನೋಟರಿಯಾದ ಲಯನ್ ಮಧುಕರ ಅಮೀನ್ ಕೃತಿ ಬಿಡುಗಡೆ ಗೊಳಿಸಲಿದ್ದಾರೆ. ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇದರ ಸಹ ಪ್ರಾಧ್ಯಾಪಕರಾದ ಶ್ರೀಮತಿ…

Read More

ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ 2024ರ ವಿನೂತನ ಕಾರ್ಯಕ್ರಮ ಸರಣಿಯಲ್ಲಿ ಶ್ರೀಮತಿ ಜಯಂತಿ ಗಣಪತಿ ಸೇರುಗಾರ್ ನೇತೃತ್ವದಲ್ಲಿ ಗಂಗೊಳ್ಳಿ ಸುಗ್ಗಿಬೈಲು ಇಲ್ಲಿರುವ ಹಾಲ್ಮಕ್ಕಿ ಜಟ್ಟಿಗೇಶ್ವರ ಭಜನಾ ಮಂಡಳಿಯವರಿಂದ ‘ಭಕ್ತಿ ಸಂಗೀತ’ ಕಾರ್ಯಕ್ರಮವು ದಿನಾಂಕ 07-04-2024ರಂದು ಸಂಜೆ ಗಂಟೆ 4ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.

Read More

ಕೋಟ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ ಇದರ ವತಿಯಿಂದ ಸಾಹಿತ್ಯ ಸಂಚಾರ 26ರ ‘ಸಾಹಿತ್ಯ ಪ್ರೇರಣೆ’ ಕಾರ್ಯಕ್ರಮವು ದಿನಾಂಕ 05-04-2024ರಂದು ಗಿಳಿಯಾರು ಕೋಟ ಶಾಂಭವೀ ವಿದ್ಯಾದಾಯಿನೀ ಅ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಚಿತ್ರಪಾಡಿ ಪ್ರೊ. ಉಪೇಂದ್ರ ಸೋಮಯಾಜಿ, ಉಡುಪಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾಲೂಕು ಘಟಕ ಕ.ಸಾ.ಪ. ಅಧ್ಯಕ್ಷರಾದ ಶ್ರೀ ರಾಮಚಂದ್ರ ಐತಾಳ ಗುಂಡ್ಮಿ, ಕೋಟ ಹೋಬಳಿ ಅಧ್ಯಕ್ಷರಾದ ಶ್ರೀ ಅಚ್ಚುತ ಪೂಜಾರಿ ಕಾರ್ಕಳ, ನಿವೃತ್ತ ಶಿಕ್ಷಕರಾದ ಶ್ರೀ ನಾಗೇಶ ಮಯ್ಯ ಗುಂಡ್ಮಿ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು.

Read More

ಸುಳ್ಯ : ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡದ ಸಾಹಿತಿ ಪ್ರೊ. ಎಲ್.ಎಸ್. ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ಅವರ ಹೆಸರಿನಲ್ಲಿ ಎಲ್.ಎಸ್.ಎಸ್. ವಿದ್ಯಾನಿಧಿಯ ಸ್ಥಾಪನೆಯ ಕಾರ್ಯಕ್ರಮವು ದಿನಾಂಕ 06-04-2024ರಂದು ನಡೆಯಲಿದೆ. ಪ್ರೊ. ಎಲ್.ಎಸ್. ಶೇಷಗಿರಿ ರಾವ್ ಅವರ ಜನ್ಮ ಶತಮಾನೋತ್ಸವದ ಸಂದರ್ಭ ಕನ್ನಡ ಮಾಧ್ಯಮದ ಸ್ನೇಹ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಎಲ್‌.ಎಸ್.ಎಸ್. ವಿದ್ಯಾನಿಧಿಯ ಸ್ಥಾಪಿಸಲು ಅವರ ಕುಟುಂಬದವರು ಮುಂದೆ ಬಂದಿದ್ದು, ಭಾರತಿ ಶೇಷಗಿರಿ ರಾವ್ ಅವರು ವಿದ್ಯಾನಿಧಿ ಸಮರ್ಪಣೆ ಮಾಡಲಿದ್ದಾರೆ. ಶೇಷಗಿರಿ ರಾವ್ ಅವರ ಸಾಂಸ್ಕೃತಿಕ ಕೊಡುಗೆಗಳ ಕುರಿತು ಸಾಹಿತಿ ಹಾಗೂ ಶಿಕ್ಷಣ ತಜ್ಞ ಶ್ರೀ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಲಿರುವರು. ಬೆಂಗಳೂರಿನ ಚಿಂತಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀ ರಾ.ನಂ. ಚಂದ್ರಶೇಖ‌ರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಕಾರ್ಯಕ್ರಮವಾಗಿ ಜರ್ಮನಿಯ ಹೋಮ ತಜ್ಞ ಡಾ. ಉಲ್ರಿಕ್ ಬರ್ಕ್ ಅವರು ‘ಅಗ್ನಿಹೋತ್ರದ ಮಹತ್ವ’ದ ಬಗ್ಗೆ ಉಪನ್ಯಾಸ ನೀಡಲಿದ್ದು, ಅದೇ ದಿನ ಸ್ನೇಹ ಶಾಲೆಯ…

Read More

ಬೆಂಗಳೂರು : ರಂಗ ಬದುಕು ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಡಾ. ಬೇಲೂರು ರಘುನಂದನ್ ರಚನೆ, ವಿನ್ಯಾಸ, ಸಂಗೀತ ಮತ್ತು ನಿರ್ದೇಶನದಲ್ಲಿ ಮೈಸೂರಿನ ಡಾ. ಹೆಲನ್ ಅಭಿನಯದ ಏಕವ್ಯಕ್ತಿ ಪ್ರಯೋಗ ಮಾನವತಾವಾದಿ ‘ಥೆರೇಸಮ್ಮ’ (ಮದರ್) ನಾಟಕ ಪ್ರದರ್ಶನವು ದಿನಾಂಕ 05-04-2024ರಂದು ಸಂಜೆ ಗಂಟೆ 4.00ಕ್ಕೆ ಬೆಂಗಳೂರಿನ ಜೆ.ಸಿ. ರಸ್ತೆ, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಡಾ. ಬೇಲೂರು ರಘುನಂದನ್, ನಾಟಕಕಾರ ಮತ್ತು ನಿರ್ದೇಶಕ : ಸಾಹಿತ್ಯ ಕ್ಷೇತ್ರ ಹಾಗೂ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರುವ ರಘುನಂದನ್, ಇಪ್ಪತ್ತೈದಕ್ಕೂ ಹೆಚ್ಚು ನಾಟಕಗಳನ್ನು ರಚಿಸಿದ್ದಾರೆ. ತಾವೇ ರಂಗರೂಪಗೊಳಿಸಿರುವ ‘ಅಕ್ಕಯ್’ ‘ಲೆಟರ್ಸ್ ಟು ಡೆತ್’. ‘ನಗರಪೂಜೆ’, ‘ಅಲೆಮಾರಿ ಭಾರತ’ ‘ಮಾತಾ’ ‘ಅಧಿನಾಯಕಿ’ ‘ಗರ್ಭ’ ಮುಂತಾದ ನಾಟಕಗಳನ್ನು ನಿರ್ದೇಶಿಸಿ ಯಶಸ್ವಿಯಾಗಿದ್ದಾರೆ. ಹುಟ್ಟಿದ್ದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಅಲ್ಲಿಯೇ ಪದವಿ ಶಿಕ್ಷಣ ಪೂರೈಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಕವಿ ಕೆ.ವಿ. ಪುಟ್ಟಪ್ಪ ಚಿನ್ನದ ಪದಕ ಸೇರಿದಂತೆ, ಮೂರು ಪದಕಗಳೊಂದಿಗೆ ಕನ್ನಡದಲ್ಲಿ ಎಂ.ಎ. ಮಾಡಿದ್ದಾರೆ. ಹಂಪಿ…

Read More

ಕಾಸರಗೋಡು : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು, ಸ್ವರ ಚಿನ್ನಾರಿ, ನಾರಿ ಚಿನ್ನಾರಿ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ರಂಗಚಿನ್ನಾರಿಯ 18ನೇ ವಾರ್ಷಿಕೋತ್ಸವ ಮತ್ತು ರಂಗಚಿನ್ನಾರಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 30-03-2024ರಂದು ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವಚನ ನೀಡಿ “ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ಕೈಂಕರ್ಯ ಶ್ಲಾಘನೀಯವಾದುದು. ಈ ನಿಟ್ಟಿನಲ್ಲಿ ರಂಗಚಿನ್ನಾರಿ ನಡೆಸುತ್ತಿರುವ ಸತ್ಕಾರ್ಯ ಮಾದರಿ ಹಾಗೂ ಆದರ್ಶವಾಗಿದೆ” ಎಂದು ಹೇಳಿದರು. ಧಾರ್ಮಿಕ ಮುಂದಾಳು ಡಾ. ಅನಂತ ಕಾಮತ್ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ ಅಡಪ ಅವರು ಮಾತನಾಡಿ ಯಕ್ಷಗಾನವನ್ನು ಉಳಿಸುವ ನಿಟ್ಟಿನಲ್ಲಿ ‘ಯಕ್ಷ ಚಿನ್ನಾರಿ’ ಘಟಕ ಆರಂಭಿಸುವಂತೆ ವಿನಂತಿಸಿಕೊಂಡರು. ಅತಿಥಿಗಳಾಗಿ ಭಾಗವಹಿಸಿದ ಪ್ರಸಿದ್ಧ ಕಾನತ್ತೂರು ನಾಲ್ವರ್ ದೈವಸ್ಥಾನದ ಟ್ರಸ್ಟಿ ಖ್ಯಾತ ಸಾಹಿತಿ ಕೆ.ಪಿ. ಶಶಿಧರನ್ ನಾಯರ್…

Read More

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗೀವ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಆಯೋಜಿಸಿದ ಯಶಸ್ವಿ ಕಲಾವೃಂದದ ಬೆಳ್ಳಿ ಹಬ್ಬದ ಪ್ರಯುಕ್ತ  ಶ್ವೇತಯಾನ ಶ್ವೇತ ಸಂಜೆ-13 ಕಾರ್ಯಕ್ರಮವು ದಿನಾಂಕ 31-03-2024 ರಂದು ನಡೆಯಿತು. ಕಾರ್ಯಕ್ರಮಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನದ  ಚಿಂತಕ ವಿಮರ್ಶಕರಾದ  ಹೆಚ್. ಸುಜಯೀಂದ್ರ ಹಂದೆ “ಕಲಾ ಮಾದ್ಯಮಗಳಿಗೆ ಭಾಷೆ, ದೇಶ ಹಾಗೂ ಧರ್ಮಗಳ ಎಲ್ಲೆಯನ್ನು ಮೀರಿ ಜಗದ ಜನರ ಮನಸ್ಸುಗಳನ್ನು ಬೆಸೆಯುವ ವಿಶಿಷ್ಟ ಗುಣವಿದೆ. ಅದರಲ್ಲಿಯೂ ಯಕ್ಷಗಾನ ತನ್ನ ಅನನ್ಯತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಯಕ್ಷಗಾನದ ನೇಪಥ್ಯ ಸಹಾಯಕರನ್ನೂ ಒಳಗೊಂಡು ಸರ್ವ ಕಲಾವಿದರ ಸಂಘಟಕರ ಪರಿಶ್ರಮ ಸಾರ್ಥಕವಾಗಬೇಕಾದರೆ ರಾಜ್ಯ ಕಲೆಯಾಗಿ ಮಾನ್ಯತೆ ಪಡೆಯಬೇಕು.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ತೆಕ್ಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಯಕ್ಷಾಂಗಣ ಟ್ರಸ್ಟಿನ ಸಂಚಾಲಕ ಸುದರ್ಶನ ಉರಾಳ, ಯಶಸ್ವಿ ಕಲಾವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ, ಕಾರ್ಯದರ್ಶಿ ವೆಂಕಟೇಶ ವೈದ್ಯ,…

Read More

ಬೆಂಗಳೂರು : ಶ್ರೀ ವಾಲ್ಮೀಕಿ ಗಮಕ ಪಾಠ ಶಾಲೆಯ ವತಿಯಿಂದ ಗಮಕಿ ಶ್ರೀಮತಿ ಪದ್ಮಿನಿ ರಾಮಮೂರ್ತಿ ಅವರ ಮನೆಯ ಆತ್ಮೀಯ ವಾತಾವರಣದಲ್ಲಿ ಕವಿ ಕುಮಾರ ವ್ಯಾಸ ಜಯಂತಿಯನ್ನು ದಿನಾಂಕ 24-03-2024ರ ಭಾನುವಾರ ಸಂಜೆ ಆಚರಿಸಲಾಯಿತು. ಗಮಕ ಭೀಷ್ಮ ದಿ. ಬಿ.ಎಸ್.ಎಸ್. ಕೌಶಿಕರ ಮಕ್ಕಳಾದ ಪದ್ಮಿನಿ ರಾಮಮೂರ್ತಿ ಮತ್ತು ಸತ್ಯವತಿ ಕೇಶವ ಮೂರ್ತಿಯವರ ನೇತೃತ್ವದಲ್ಲಿ ಆರಂಭವಾದ ಸಭೆಯಲ್ಲಿ ಮೊದಲು ಕುಮಾರ ಚಿರಾಗ್ ಕೌಶಿಕನ ಪ್ರಾರ್ಥನೆ, ಶ್ಯಾಮಲಾ ಅವಧಾನಿ ಮತ್ತು ಅವರ ಶಿಷ್ಯರಿಂದ ಸೌಂದರ್ಯ ಲಹರಿಯ ಕೆಲವು ಸೋತ್ರಗಳ ಗಾಯನ ನಡೆಯಿತು. ಕುಮಾರ ವ್ಯಾಸ ಭಾರತದ ಹನುಮ-ಭೀಮ ಸಮಾಗಮನದ ಭಾಗವನ್ನು ಶ್ರೀಮತಿಯರಾದ ಮಯೂರಿ ವಾಚನದಲ್ಲಿ ಮಾಧುರಿ ವ್ಯಾಖ್ಯಾನದಲ್ಲಿ ಹಿತಮಿತವಾಗಿಯೂ ಮಧುರವಾಗಿಯೂ ಎಲ್ಲರನ್ನೂ ಬೆರಗುಗೊಳಿಸಿದರು. ಸಹೋದರಿಯರಿಬ್ಬರೂ ಭವಿಷ್ಯದ ಉತ್ತಮ ಕಲಾವಿದರಾಗುವಲ್ಲಿ ಸಂದೇಹವಿಲ್ಲ. ಆನಂತರ ಹಿರಿಯರಾದ ಶ್ರೀಮತಿ ಜಯಲಕ್ಷ್ಮೀ ಗೋಪಿನಾಥ್, ಗೀತಾ ಪ್ರಭಾಕರ್, ವಿಶ್ವರೂಪ ದರ್ಶನವನ್ನು ಕೆಲವೇ ಪದ್ಯಗಳ ವಾಚನ, ವ್ಯಾಖ್ಯಾನಗಳ ಮೂಲಕ ಶ್ರೋತೃಗಳಿಗೆ ತಲುಪಿಸಿ ಭಾವಪರವಶರನ್ನಾಗಿಸಿದರು. ಮುಂದೆ ಹೊಸಹಳ್ಳಿಯ ವಿದ್ವಾನ್ ಶ್ರೀ ವೆಂಕಟರಮಣ ಅವರ ವಯೊಲಿನ್…

Read More

ಸುರತ್ಕಲ್ : ಪ್ರೊ. ಪಿ. ಕೆ. ಮೊಯ್ಲಿ ಅಭಿನಂದನಾ ಸಮಿತಿ ಸುರತ್ಕಲ್ ಮತ್ತು ಗೋವಿಂದ ದಾಸ ಕಾಲೇಜಿನ ಡಾ. ಸೀ. ಹೊಸಬೆಟ್ಟು ಅಧ್ಯಯನ ಕೇಂದ್ರ ಮತ್ತು ಮಾನವಿಕ ಸಂಘದ ಸಹಭಾಗಿತ್ವದಲ್ಲಿ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಹಿರಿಯ ಲೇಖಕ, ಶಿಕ್ಷಣ ತಜ್ಞ ಹಾಗೂ ಪತ್ರಕರ್ತರಾಗಿ ಜನಪ್ರಿಯರಾಗಿರುವ ಪ್ರೊ. ಪಿ.ಕೆ. ಮೊಯ್ಲಿ ಅವರ ಅಭಿನಂದನಾ ಸಮಾರಂಭವು ದಿನಾಂಕ 06-04-2024ರಂದು ಗೋವಿಂದ ದಾಸ ಕಾಲೇಜಿನ ದೃಶ್ಯಶ್ರಾವ್ಯ ಮಂದಿರದಲ್ಲಿ ಸಂಜೆ3.30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರೊ. ಪಿ. ಕೆ. . ಮೊಯ್ಲಿಯವರ ಅಭಿನಂದನಾ ಕೃತಿ ‘ಗುರುಭ್ಯೋ ನಮಃ’ ಲೋಕಾರ್ಪಣೆಗೊಳ್ಳಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ವಿದ್ಯಾದಾಯಿನೀ  ಸಂಘದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ವಹಿಸಲಿದ್ದು ಕೃತಿ ಬಿಡುಗಡೆಯನ್ನು ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಷಿ ನಡೆಸಿಕೊಡಲಿದ್ದಾರೆ. ಪ್ರೊ. ಪಿ. ಕೆ. ಮೊಯ್ಲಿಯವರು ದಕ್ಷಿಣ ಕನ್ನಡ ಜಿಲ್ಲಾ ಬೋರ್ಡಿನ ಆಡಳಿತಕ್ಕೊಳಪಟ್ಟ ವಿವಿಧ ಪ್ರೌಢಶಾಲೆಗಳಲ್ಲಿ ಪದವೀಧರ ಶಿಕ್ಷಕರಾಗಿ, ಹಿಂದಿ ಪಂಡಿತರಾಗಿ ಬೈಂದೂರಿನಿಂದ ತೊಡಗಿ ಪಂಜ, ಬೆಳ್ಳಾರೆ, ಹಿರಿಯಡ್ಕ, ಕಾರ್ಕಳದವರೆಗೆ…

Read More