Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸುರತ್ಕಲ್ ಗೋವಿಂದದಾಸ ಕಾಲೇಜಿನ ಸಾಹಿತ್ಯ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಮತ್ತು ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 30ನೇ ಕೃತಿ ‘ಎನ್ನ ನಲಿಕೆ’ ತುಳು ಕವನ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮವು ಗೋವಿಂದದಾಸ ಕಾಲೇಜು ಸಭಾಂಗಣದಲ್ಲಿ ದಿನಾಂಕ 30-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೈವನರ್ತಕ ಲೋಕಯ್ಯ ಸೇರ ಮಾಣಿ ಇವರು ಕೃತಿ ಬಿಡುಗಡೆಗೊಳಿಸಿ “ತುಳುನೆಲದ ಸಂಸ್ಕೃತಿ, ಆಚಾರ-ವಿಚಾರ, ಸಂಪ್ರದಾಯ, ನಂಬಿಕೆಗಳಂತಹ ಜಾನಪದ ಸೊಗಡಿನ ಮಹತ್ವದ ಸಂಗತಿಗಳು ಪುಸ್ತಕ ರೂಪದಲ್ಲಿ ಶಾಶ್ವತವಾಗಿ ದಾಖಲಾಗಬೇಕು. ಸಾಹಿತಿಗಳು ಈ ನಿಟ್ಟಿನಲ್ಲಿ ಮನ ಮಾಡಬೇಕು. ಇಂದಿನ ಆಧುನಿಕತೆಯ ಭರಾಟೆಯಲ್ಲಿ ಹಳೆಯ ಆಚಾರ ವಿಚಾರಗಳು ಮರೆಗೆ ಸರಿಯುತ್ತಿದೆ. ಅದು ಮುಂದಿನ ಪೀಳಿಗೆಗೂ ಉಳಿಯುವಂತಾಗಲು ಗ್ರಂಥರೂಪದಲ್ಲಿ ದಾಖಲಾಗಬೇಕಾದುದು ಅಗತ್ಯ. ತುಳುನಾಡಿನ ದೈವಾರಾಧನೆಯ ಮೌಖಿಕ ಸಾಹಿತ್ಯದಲ್ಲಿ ಮೊಗೆದಷ್ಟೂ ಅದ್ಭುತ ವಿಚಾರಗಳಿವೆ. ಇಂದು ದೈವರಾಧನೆ ಬಗ್ಗೆ ಬಹಳಷ್ಟು ದಾಖಲೀಕರಣ…
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ಸುವರ್ಣ ಕರ್ನಾಟಕ ಭಾಷೆ-ಸಾಹಿತ್ಯ-ಸಂಸ್ಕೃತಿ ಆಶಯದಲ್ಲಿ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 17-12-2023ರಂದು ನಡೆಯಿತು. ಈ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಚಾರ್ಯ ಎ. ಕೃಷ್ಣಪ್ಪ ಪೂಜಾರಿ “ಜೀವನ ಮೌಲ್ಯಗಳು ಮಾತೃ ಭಾಷೆಯಿಂದಲೇ ಬರುವುದು. ಮಾತೃಭಾಷೆಯಲ್ಲಿ ಮೂಡಿ ಬಂದ ಸಾಹಿತ್ಯ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಉದಾತ್ತವಾದ ಸಮಾಜ ನಿರ್ಮಾಣವೇ ಸಾಹಿತ್ಯದ ಮುಖ್ಯ ಕಾರ್ಯವಾಗಲಿ” ಎಂದು ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ನಾಗರಾಜ್ ರಾವ್ ಕಲ್ಕಟ್ಟೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಭಾಷೆ ಎಂಬುದು ಜ್ಞಾನದ ವಾಹಿನಿಯೇ ಹೊರತು ಭಾಷೆಯೇ ಜ್ಞಾನ ಅಲ್ಲ. ಇಂಗ್ಲೀಷ್ ನಮಗೆ ವಿದ್ಯೆಯ ಮಾಧ್ಯಮವಾಗಿರಲಿ ಹೊರತು ಸಂಸ್ಕೃತಿಯಾಗಿ ಸಲ್ಲದು. ಸತ್ವಗುಣ ರೂಪಿಸಲು ಸಾಹಿತ್ಯ ಮುಖ್ಯವಾದುದು. ಜನರ ಜೊತೆ ಬೆರೆಸುವ, ಜನರ ಮಧ್ಯೆ…
ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು ಕದ್ರಿ ಶ್ರೀಕೃಷ್ಣ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಿದ ‘ಮಕ್ಕಳ ಹರಿಕಥೆ ಸ್ಪರ್ಧೆ’ಯನ್ನು ದಿನಾಂಕ 31-12-2023ರಂದು ವಿಜಯ ಬ್ಯಾಂಕ್, ನಿವೃತ್ತ ಚೀಫ್ ಮ್ಯಾನೇಜರ್ ಸುಂದರ ಶೆಟ್ಟಿ ಬೆಟ್ಟಂಪಾಡಿ ಇವರು ಉದ್ಘಾಟಿಸಿ “ಆಧುನಿಕ ಕಾಲಘಟ್ಟದಲ್ಲಿ ಬಹುಮಾಧ್ಯಮ ಮನೋರಂಜನೆಗಳ ಮಧ್ಯೆ ವಿದ್ಯಾರ್ಥಿಗಳಲ್ಲಿ ಹರಿಕಥೆಯಂತಹ ಶಾಸ್ತ್ರೀಯ ಕಲೆಗಳ ಮೇಲೆ ಒಲವು ಮೂಡಿಸುವ ಪ್ರಯತ್ನ ಆಗಬೇಕು. ವಿದ್ಯಾರ್ಜನೆಯೊಂದಿಗೆ ಶಿಷ್ಟಕಲೆಗಳ ಹವ್ಯಾಸವು ಮಕ್ಕಳನ್ನು ಪ್ರಜ್ಞಾವಂತ ಪ್ರಜೆಗಳನ್ನಾಗಿಸಲು ಸಹಕಾರಿಯಾಗುವುದು” ಎಂದು ಅಭಿಪ್ರಾಯಪಟ್ಟರು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರನ್ನೂ ಅಭಿನಂದಿಸಿದರು. ಅಧ್ಯಕ್ಷತೆ ವಹಿಸಿದ್ದ ಹರಿಕಥಾ ಪರಿಷತ್ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಅವರು ಮಾತನಾಡಿ “ಹರಿಕಥೆ ಕಲೆಯಲ್ಲೂ ಮಕ್ಕಳಿಗೆ ಆಸಕ್ತಿ ಬರಬೇಕೆನ್ನುವ ದೃಷ್ಟಿಯಲ್ಲಿ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ನಿರಂತರವಾಗಿಸುವಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪಂದಿಸಬೇಕು” ಎಂದರು. ಮುಖ್ಯ ಅಭ್ಯಾಗತರಾಗಿ ಕಲಾ ಸಾಹಿತಿ ಜನಾರ್ದನ ಹಂದೆ, ಹರಿಕಥಾ ಪರಿಷತ್ತಿನ ಉಡುಪಿ ಜಿಲ್ಲಾ ಸಂಚಾಲಕರಾದ ವೈ. ಅನಂತ ಪದ್ಮನಾಭ ಭಟ್ ಕಾರ್ಕಳ, ಶ್ರೀಮತಿ ಮಾಲತಿ ಭಂಡಾರ್ಕರ್…
ಉಡುಪಿ : ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ- ಐರೋಡಿ ಸಂಸ್ಥೆಗೆ ಐವತ್ತರ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮವು ದಿನಾಂಕ 01-01-2024ರಂದು ಉದ್ಘಾಟನೆಗೊಂಡಿತು. ಈ ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರು ಮಾತನಾಡುತ್ತಾ “ಇಂದಿನ ಯುವ ಪೀಳಿಗೆ ಹಿರಿಯರನ್ನು ಗೌರವಿಸುವಂತಾಗಲು, ತಮ್ಮ ತಂದೆತಾಯಿಯರ ಮಾತುಗಳನ್ನು ಪಾಲಿಸುವಂತಾಗಲು ರಾಮಾಯಣದ ನೈತಿಕ ಮೌಲ್ಯಗಳನ್ನು ಅವರಿಗೆ ದಾಟಿಸುವ ಕೆಲಸವಾಗಬೇಕು. ಯಕ್ಷಗಾನದಿಂದ ಈ ಕಾರ್ಯವನ್ನು ಮಾಡಲು ಸಾಧ್ಯವಿದೆ. ಇಂದು ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು, ವೃದ್ಧ ತಂದೆತಾಯಿ ವೃದ್ಧಾಶ್ರಮಗಳನ್ನು ಸೇರುತ್ತಿರುವುದನ್ನು ಕಂಡಾಗ ದಿಗಿಲು ಹುಟ್ಟುತ್ತದೆ. ದುಡ್ಡಿನಿಂದ ಮಾನವ ಸಂಬಂಧಗಳು ಬಲಗೊಳ್ಳಲಾರವು ಎಂಬುದನ್ನು ಈ ಘಟನೆಗಳು ಸಾಬೀತುಪಡಿಸುತ್ತವೆ. ಇಂದಿನ ಯುವಜನರಿಗೆ ವೃದ್ಧರೇಕೆ ಬೇಡವಾಗಿದ್ದಾರೆ ಎಂಬುದನ್ನು ವಿಮರ್ಶಿಸಿದಾಗ, ಅವರಲ್ಲಿ ಸಂಸ್ಕಾರ ಹಾಗೂ ನೈತಿಕ ಮೌಲ್ಯಗಳ ಅಧ:ಪತನ ಕಂಡು ಬರುತ್ತಿದೆ. ಈ ಸಮಸ್ಯೆಗೆ ಮರ್ಯಾದ ಪುರುಷೋತ್ತಮನ ಆದರ್ಶಗಳನ್ನು ಸಾರುವ ರಾಮಾಯಣ ರಾಮಬಾಣವಾಗಬಲ್ಲದು. ಆದ್ದರಿಂದ ಮಕ್ಕಳನ್ನು ಯಕ್ಷಗಾನ ಕಲಿಕೆಗೆ ಸೇರಿಸಿ.…
ಉಡುಪಿ : ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ಯನ್ನು ದಿನಾಂಕ 30-12-2023ರಂದು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಅಧ್ಯಕ್ಷ ರಮೇಶ್ ಸುರ್ವೆ, ಗೌರವಾಧ್ಯಕ್ಷ ರಮೇಶ್ ಎನ್. ಅಂಗಡಿ, ಬೆಳಗಾವಿ ಚಿಪ್ಪಲಕಟ್ಟಿ ಹಿರೇಮಠದ ಡಾ.ಕಲ್ಮೇಶ್ವರ ಸ್ವಾಮಿ, ಬೆಂಗಳೂರು ವನಕಲ್ಲು ಶ್ರೀ ಮಲ್ಲೇಶ್ವರ ಸುಕ್ಷೇತ್ರದ ಡಾ. ಬಸವರಮಾನಂದ ಮಹಾಸ್ವಾಮಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ನಟಿ ಮೀನಾ, ನಟ ಶಂಕರ ಭಟ್, ಸಾಹಿತಿ ಡಾ. ಮಹಂತೇಶ ಮಲ್ಲನಗೌಡರ ಹಾಗೂ ಮತ್ತಿತರ…
ಮೈಸೂರು : ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ (ರಿ.) ಮೈಸೂರು ಪ್ರಸ್ತುತ ಪಡಿಸುವ 32ನೇ ‘ಅಂತರರಾಷ್ಟ್ರೀಯ ನಿರಂತರ ಕಲೆಮನೆ ಫೆಸ್ಟಿವಲ್’ ಕಾರ್ಯಕ್ರಮವು ದಿನಾಂಕ 07-01-2024ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕಲೆಮನೆ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ವಿಶೇಷ ಆಹ್ವಾನಿತರಾದ ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ವಿದುಷಿ ಶ್ರೀಮತಿ ಆರ್.ಕೆ. ಚಂದ್ರಿಕಾ, ಶ್ರೀ ಸದ್ಗುರು ಸಂಗೀತ ಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ವಿ. ಮಹಾಲಕ್ಷ್ಮಿ, ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ಡಾ.ಎಸ್. ಗೀತಾ, ಮೈಸೂರಿನ ಕೆ.ಎಸ್.ಜಿ.ಎಚ್. ಸಂಗೀತ ವಿಶ್ವವಿದ್ಯಾಲಯದ ಬೋಧನಾ ವಿಭಾಗದ ಕಲಾರತ್ನ ವಿದ್ವಾನ್ ರಾವ್ ಆರ್. ಶರತ್, ಶಾಂತಲಾ ಅಕಾಡೆಮಿ ಆಫ್ ಮ್ಯೂಸಿಕ್ & ಡ್ಯಾನ್ಸ್ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶಾಂತಲಾ ವಟ್ಟಂ, ಖ್ಯಾತ ನೃತ್ಯ ಗುರು ಹಾಗೂ ಮೈಸೂರು ಆರ್ಟ್ ಗ್ಯಾಲರಿಯ ಕಾರ್ಯದರ್ಶಿಯಾದ ಡಾ. ಜಮುನಾರಾಣಿ ಮಿರ್ಲೆ, ಮಂಡ್ಯ ಮದ್ದೂರಿನ ಶ್ರೀ ನಂದಿಕೇಶ್ವರ ಭರತನಾಟ್ಯ ಕಲಾಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ…
ಮಂಗಳಾದೇವಿ : ಯಕ್ಷ ಪ್ರತಿಭೆ ಮಂಗಳೂರು ವತಿಯಿಂದ 15ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮವು ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ದಿನಾಂಕ 23-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಇವರು ಉದ್ಘಾಟಿಸಿ ಮಾತನಾಡುತ್ತಾ “ಕಲಾವಿದರನ್ನು, ಕಲಾ ಪೋಷರಕನ್ನು ಗುರುತಿಸಿ ಅವರಿಗೆ ಸಮ್ಮಾನ, ಪ್ರಶಸ್ತಿ ಪ್ರದಾನ ಮಾಡುವುದು ಶ್ರೇಷ್ಠ ಕಾರ್ಯ. ವರ್ಷದಿಂದ ವರ್ಷಕ್ಕೆ ಗೋಪಾಲಕೃಷ್ಣ ಆಸ್ರಣ್ಣ ಅವರನ್ನು ಸಂಸ್ಮರಣೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಕಷ್ಟು ಸಂಘಟನೆಗಳು ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿದೆ ಇಂದು ಸಂತೋಷದ ವಿಚಾರ, ಕಟೀಲಿನ ಒಂದು ಮೇಳ ಆರು ಮೇಳಗಳಾಗಿ ವಿಸ್ತರಣೆಗೊಳ್ಳಲೂ ಅವರೇ ಕಾರಣ ಎನ್ನಲು ಹೆಮ್ಮೆಯಾಗುತ್ತಿದೆ” ಎಂದು ಹೇಳಿದರು. ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮೂಡುಬಿದಿರೆಯ ಉದ್ಯಮಿ ಶ್ರೀಪತಿ ಭಟ್, ಬರ್ಕೆ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಸುಚೇಂದ್ರ ಅಮೀನ್, ಹರಿನಾರಾಯಣ ಬೈಪಡಿತ್ತಾಯ, ಸಂಸ್ಮರಣಾ ಸಮಿತಿ ಗೌರವಾಧ್ಯಕ್ಷ ಡಾ. ಹರಿಕೃಷ್ಣ…
ಮುಡಿಪು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಹರೇಕಳ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಸಂಭ್ರಮ’ ಕಾರ್ಯಕ್ರಮವು ದಿನಾಂಕ 29-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ. ಬಿ.ಕೆ. ಸರೋಜಿನಿ ಇವರು “ಕನ್ನಡದಲ್ಲಿರುವ ಶಾಲಾ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಪರಿಭಾಷೆಗಳನ್ನು ನೀಡುವಾಗ ಇಂಗ್ಲಿಷ್ ಮತ್ತು ಸಂಸ್ಕೃತ ಪದಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದ್ದು, ಸರಳ ಕನ್ನಡ ಪದಗಳನ್ನು ಅಳವಡಿಸುವ ಪ್ರಯತ್ನ ನಡೆಯಬೇಕಿದೆ. ಮಕ್ಕಳ ಸಾಹಿತ್ಯ ಎಳೆಯ ಮಕ್ಕಳಲ್ಲಿ ಭಾಷಾಭಿಮಾನವನ್ನೂ, ಕಲ್ಪನಾಶಕ್ತಿಯನ್ನೂ, ಮೌಲ್ಯಗಳನ್ನು ಬಿತ್ತುತ್ತವೆ. ಸರಕಾರ ಮತ್ತು ಸಂಘ ಸಂಸ್ಥೆಗಳು ಮಕ್ಕಳ ಸಾಹಿತ್ಯ ರಚನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು” ಎಂದು ಹೇಳಿದರು. ಅತಿಥಿಗಳಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಮಾತನಾಡಿ “ನಾವು ತುಳು, ಬ್ಯಾರಿ, ಕೊಂಕಣಿ ಯಾವ ಭಾಷೆಯನ್ನಾಡುವುದಾದರೂ ಕರ್ನಾಟಕದಲ್ಲಿರುವವರು ಕನ್ನಡಿಗರು ಎಂಬ ಭಾವನೆಯಿಂದ ಇರಬೇಕು. ಕನ್ನಡ ನನಗೆ ಎಲ್ಲವನ್ನೂ ನೀಡಿ…
ಕನ್ನಡದ ನಮ್ಮ ಸಂದರ್ಭದ ಬಹುಮುಖ್ಯ ಚಿಂತಕರಲ್ಲಿ ಲಕ್ಷ್ಮೀಶ ತೋಳ್ಪಾಡಿಯವರೂ ಒಬ್ಬರು. ತಮ್ಮ ವಿದ್ವತ್ಪೂರ್ಣ ಉಪನ್ಯಾಸಗಳಿಂದ, ಪ್ರಖರವಾದ ಯೋಚನೆಗಳ ಗುಚ್ಛದಂತಿರುವ ಬರವಣಿಗೆಗಳಿಂದ ನಾಡಿನಾದ್ಯಂತ ಪರಿಚಿತರಾದವರು. ಶ್ರೋತೃಗಳನ್ನು ಚಿಂತನೆಗೆ ಹಚ್ಚಿ ಮುನ್ನಡೆಸುವ ಅವರ ಮಾತಿನ ಶೈಲಿ ಅನನ್ಯವಾದುದು. ಸಾಹಿತಿ, ವಿಮರ್ಶಕ, ಚಿಂತಕ ಇಂತಹ ಉಪಾಧಿಗಳನ್ನೋ ಪ್ರಚಾರವನ್ನೋ ಯಾವತ್ತೂ ಇಷ್ಟಪಡದ ಅವರು ಸಹಜವಾಗಿ ಯೋಚಿಸುವ ಓರ್ವ ಜಿಜ್ಞಾಸು. ತಾನು ಯಾವುದೇ ವಿಷಯನ್ನು ಕುರಿತು ಮಾತನಾಡಿದರೂ ಅದರ ಬಗೆಗೆ ತೀವ್ರವಾಗಿ ಯೋಚಿಸಿ, ಹೊಸ ನೋಟಗಳನ್ನು ನೀಡಬಲ್ಲ ಸೃಜನಶೀಲ ಪ್ರತಿಭೆ ಅವರದ್ದು. ಹಾಗಾಗಿಯೇ ಸಹಜ ಕುತೂಹಲವನ್ನು ಬೆಳೆಸಿಕೊಂಡಿರುವ ಜ್ಞಾನ ಪಿಪಾಸುಗಳಿಗೆ ತೋಳ್ಪಾಡಿಯವರ ಸಂಪರ್ಕ ಹಿತವನ್ನುಂಟುಮಾಡಿದರೆ, ಪ್ರಚಾರ ಪ್ರಸಿದ್ಧಿ, ಸ್ಥಾನ-ಮಾನ ಬಯಸುವವರು ಅವರ ಹತ್ತಿರ ಸುಳಿಯುವುದಿಲ್ಲ. ಕನ್ನಡದಲ್ಲಿ ಕುರ್ತಕೋಟಿ, ಕಿ.ರಂ. ನಾಗರಾಜ ಮುಂತಾದವರನ್ನೊಳಗೊಂಡ ಮೌಖಿಕ ವಿದ್ವಾಂಸ ಪರಂಪರೆಯೊಂದನ್ನು ಗುರುತಿಸುವುದಿದೆ. ಇವರು ಬರೆದದ್ದು ಕಡಮೆ. ಆದರೆ ಉಪನ್ಯಾಸಕ್ಕೆ ನಿಂತರೆ, ಅವರ ಮೂಲಕ ಹರಿದು ಬರುವ ಜ್ಞಾನಪ್ರವಾಹವು ಎಂಥವರನ್ನೂ ವಿಸ್ಮಯಗೊಳಿಸುತ್ತದೆ. ತೋಳ್ಪಾಡಿಯವರನ್ನು ಇವರ ಸಾಲಿಗೆ ಸೇರಿಸಬಹುದು. ಅವರ ಉಪನ್ಯಾಸಗಳೆಂದರೆ ಮೊದಲೇ ಸಿದ್ಧಪಡಿಸಿಕೊಂಡ ಟಿಪ್ಪಣಿಗಳ…
ಕಾಸರಗೋಡು : ರಂಗಚಿನ್ನಾರಿ ಕಾಸರಗೋಡು (ರಿ.) ಇದರ ಸಂಗೀತ ಘಟಕ ‘ಸ್ವರಚಿನ್ನಾರಿ’ ಏರ್ಪಡಿಸುವ ಕನ್ನಡ ನಾಡಗೀತೆ – ಭಾವಗೀತೆಗಳ ಕಲಿಕಾ ಶಿಬಿರ ‘ಕನ್ನಡ ಧ್ವನಿ’ ಕಾರ್ಯಕ್ರಮವು ದಿನಾಂಕ 06-01-2024ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ಡಯಟ್ ಮಾಯ್ಪಾಡಿ ಇಲ್ಲಿ ನಡೆಯಲಿದೆ. ರಂಗಚಿನ್ನಾರಿಯ ನಿರ್ದೇಶಕರಾದ ಶ್ರೀ ಕೆ. ಸತೀಶ್ಚಂದ್ರ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಡಯಟ್ ಮಾಯ್ಪಾಡಿಯ ಪ್ರಾಂಶುಪಾಲರಾದ ಡಾ. ಕೆ. ರಘುರಾಮ್ ಭಟ್ ಇವರು ಉದ್ಘಾಟಿಸಲಿದ್ದಾರೆ. ಖ್ಯಾತ ಗಾಯಕರಾದ ಶ್ರೀ ಕಿಶೋರ್ ಪೆರ್ಲ ಮತ್ತು ಶ್ರೀಮತಿ ಪ್ರತಿಜ್ಞಾ ರಂಜಿತ್ ಶಿಬಿರ ನಿರ್ದೇಶಕರಾಗಿ ಈ ಕನ್ನಡ ನಾಡಗೀತೆ – ಭಾವಗೀತೆಗಳ ಕಲಿಕಾ ಶಿಬಿರವನ್ನು ನಡೆಸಲಿದ್ದಾರೆ.