Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಬ್ಯಾರಿ ಎಲ್ತ್ ಗಾರ್ತಿಮಾರೊ ಕೂಟದ ವತಿಯಿಂದ ಆಯೋಜಿಸಿದ್ದ ‘ಸಾಹಿತ್ಯತ್ತೊ ಒಸರ್ -2024’ (ಸಾಹಿತ್ಯದ ಒರತೆ) ಕಾರ್ಯಕ್ರಮವು ದಿನಾಂಕ 12-05-2024ರಂದು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರಗಿತು. ಈ ಕಾರ್ಯಕ್ರಮದ ನೆಪದಲ್ಲಿ ನಡೆದ ‘ಪಾಟೆಲ್ತ್ ರೊ ಒಸರ್’ ಬಹುಭಾಷಾ ಕವಿಗೋಷ್ಠಿಯಲ್ಲಿ ಮೊದಲು ಕವಿತೆ ಪ್ರಸ್ತುತಪಡಿಸಿದವರು ಆಯೆಷಾ ಯು.ಕೆ. “ಹೌದು, ಅಮ್ಮನೆಂದರೆ ನಾಟಕಕಾರ್ತಿ… ಕುಟುಂಬದ ಒಳಿತಿಗಾಗಿ ದುಃಖ ದುಮ್ಮಾನವನ್ನು ಹುದುಗಿಟ್ಟುಕೊಂಡು ಏನೂ ಆಗಲಿಲ್ಲ ಎಂಬಂತೆ ನಟಿಸುವಾಕೆ…’ ಅವರು ಸ್ವರಚಿತ ಕವನದ ಇಂಥ ಸಾಲುಗಳನ್ನು ಓದುತ್ತಿರುವಾಗ ಸಭಿಕರಲ್ಲಿ ಮೊದಲು ಮೌನ, ನಂತರ ಹೃದಯ ಭಾರ. ಕೆಲವರ ಕಣ್ಣಂಚು ತಮಗರಿವಿಲ್ಲದೇ ಒದ್ದೆ. ವಿಶ್ವ ಅಮ್ಮಂದಿರ ದಿನದ ಅಂಗವಾಗಿ ತಾಯಂದಿರ ಕುರಿತ ಕವಿತೆ ವಾಚಿಸಿದ ಅವರು, ಅಮ್ಮಂದಿರು ತಮ್ಮ ನೋವನ್ನು ನಾಟಕೀಯವಾಗಿ ಅಡಗಿಸಿಡುವುದನ್ನು ಕಾವ್ಯಾತ್ಮಕವಾಗಿ ನಿರೂಪಿಸಿ ಸಭಿಕರ ಹೃದಯವನ್ನು ಆರ್ದ್ರಗೊಳಿಸಿದರು. ನೋವನ್ನು ಕಣ್ಣೀರಿನ ಮೂಲಕ ಪ್ರಕಟಪಡಿಸದೆ ಅಡಗಿಸಿಟ್ಟ ಅಮ್ಮ ಕೊನೆಗೊಂದು ದಿನ ಕಣ್ಣೀರು ಹಾಕಿದಾಗ ಮಕ್ಕಳು ‘ಆಹಾ… ಅಮ್ಮ ನಾಟಕ ಮಾಡುತ್ತಿದ್ದಾಳೆ…’ ಎಂದು ಗೇಲಿ ಮಾಡಿದರು ಎಂಬ…
ಹೆಗ್ಗೋಡು : ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ ಹೆಗ್ಗೋಡು ಇದರ ವತಿಯಿಂದ ‘ಡಿಪ್ಲೊಮಾ ಇನ್ ಥಿಯೇಟರ್ ಆರ್ಟ್ಸ್’ 2024-25ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆಯ ಬಾಬ್ತು ಭಾಗಶಃ ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯ ಶ್ರಾವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.
ಕಾಸರಗೋಡಿನ ಹಿರಿಯ ತಲೆಮಾರಿನ ಕವಿಗಳಲ್ಲಿ ಒಬ್ಬರಾದ ಕೃಷ್ಣ ಭಟ್ಟ ಪಟ್ಟಾಜೆಯವರ ‘ಭಾವಾಂಜಲಿ’ಯು ಉತ್ತಮ ಕವಿತೆಗಳ ಸುಂದರ ಗುಚ್ಛ. ಇಲ್ಲಿ ಕೆಲವನ್ನು ರಾಗಬದ್ಧವಾಗಿ ಹಾಡಬಹುದಾದರೆ ಮತ್ತೆ ಕೆಲವನ್ನು ಭಾವಬದ್ಧವಾಗಿ ಓದಬಹುದು. ಇವುಗಳ ಹೃದ್ಯವಾದ ಭಾವ ಸಾಮರಸ್ಯದಲ್ಲಿ ನವ್ಯ-ನವೋದಯಗಳ ಕಲ್ಪನೆಯೇ ಒಮ್ಮೆ ಮರೆತುಹೋಗುತ್ತದೆ. ‘ಒಂದು ರಾತ್ರೆ’, ‘ಹಾಡು ಕೋಗಿಲೆ’, ‘ಹೇಮಂತ’, ‘ನಲಿದಾಡು ಕಂದ’, ‘ಬಾ ಕಾಡಿಗೆ’ ಮೊದಲಾದ ಕವಿತೆಗಳು ಮೊದಲ ಓದಿಗೇ ಸುಲಭವಾಗಿ ತೆರೆದುಕೊಳ್ಳುತ್ತವೆ. ಒಳನೋಟ-ಹೊರನೋಟಗಳಲ್ಲಿ ಮುಚ್ಚುಮರೆ, ಸಂದಿಗ್ಧತೆ ಮತ್ತು ಕ್ಲಿಷ್ಟತೆಗಳಿಲ್ಲ. ಪ್ರತಿಮೆ-ಸಂಕೇತಗಳ ಹಂಗುತೊರೆದ ಸರಳ ಅಭಿವ್ಯಕ್ತಿಯೇ ಇಲ್ಲಿನ ಕವಿತೆಗಳ ವೈಶಿಷ್ಟ್ಯ. ಹೊಗೆಯಾಡುತಿಹುದೊಂದು ಕಿಡಿಸಿಡಿಸಿದರದೆ ಸಾಕು ಆಗ ನೋಡಲ್ಲೆಲ್ಲು ಅಗ್ನಿ ವರ್ಷ ಆಸನ್ನವೈ ದೇವದಾನವರ ಯುದ್ಧವಿದು ಯುದ್ಧ ಯಜ್ಞದ ಫಲವೇ ಲೋಕನಾಶ (ಶಾಂತಿ) ಜಗತ್ತು ಎದುರಿಸುತ್ತಿರುವ ಬಹುಮುಖ್ಯ ಸಮಸ್ಯೆಯ ಬಗ್ಗೆ ಆತಂಕವನ್ನು ವ್ಯಕ್ತಪಡಿಸುವ ಈ ಸಾಲುಗಳು ಮನುಷ್ಯರ ನಡುವಿನ ಸ್ನೇಹದ ಬೆಸುಗೆಯನ್ನು ಇಲ್ಲವಾಗಿಸುತ್ತಿರುವ ಯುದ್ಧ ಮತ್ತು ಭಯೋತ್ಪಾದನೆಗಳನ್ನು ನೆನೆದು ತಲ್ಲಣಿಸುತ್ತವೆ. ಹೊತ್ತಿ ಉರಿಯುತ್ತಿರುವ ಯುದ್ಧಜ್ವಾಲೆಯ ಪರಿಣಾಮಗಳನ್ನು ಸೆರೆಹಿಡಿಯುತ್ತವೆ. ಪೂರ್ವಜರ ವಿಮಲ ಸಚ್ಚಾರಿತ್ರ್ಯ ಮುಕುರಕ್ಕೆ ಕರೆಗೊಡಲಾವ್…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಸರಗೋಡು ಸುಬ್ರಾಯ ಪಂಡಿತ ವಿರಚಿತ ‘ರಾವಣ ವಧೆ’ ಎಂಬ ತಾಳಮದ್ದಳೆಯು ಓ೦ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ದಿನಾಂಕ 11-05-2024ರಂದು ನಡೆಯಿತು. ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ ಮತ್ತು ಅಚ್ಯುತ ಪಾಂಗಣ್ಣಾಯ ಹಾಗೂ ಮುಮ್ಮೇಳದಲ್ಲಿ ಪೂಕಳ ಲಕ್ಷ್ಮೀನಾರಾಯಣ ಭಟ್ (ರಾವಣ), ಗುಡ್ಡಪ್ಪ ಬಲ್ಯ (ಶ್ರೀ ರಾಮ), ಭಾಸ್ಕರ್ ಬಾರ್ಯ (ಮಂಡೋದರಿ), ಮಾಂಬಾಡಿ ವೇಣುಗೋಪಾಲ ಭಟ್ (ಮಾತಲಿ), ಚಂದ್ರಶೇಖರ್ ಭಟ್ ಬಡೆಕ್ಕಲ (ದೂತ), ಪ್ರೇಮಲತಾ ಟಿ. ರಾವ್ (ವಿಭೀಷಣ) ಸಹಕರಿಸಿದರು. ಟಿ. ರಂಗನಾಥ ರಾವ್ ಹಾಗೂ ದುಗ್ಗಪ್ಪ ಎನ್. ಸಹಕರಿಸಿದರು.
ಉಡುಪಿ : ಗಾಂಧಿ ಆಸ್ಪತ್ರೆ ಉಡುಪಿ ಮೂವತ್ತನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂ ಮತ್ತು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂ ಅವರ ಆಶೀರ್ವಾದದೊಂದಿಗೆ ‘ವಯೋಲಿನ್ ಕಛೇರಿ’ಯನ್ನು ದಿನಾಂಕ 15-05-2024ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಛೇರಿಯನ್ನು ಖ್ಯಾತ ಬಾಲ ಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಮತ್ತು ಅವರ ಮಾರ್ಗದರ್ಶಕ ಶ್ರೀ ಸಿ.ಎಸ್. ಅನುರೂಪ್ ಅವರು ನಡೆಸಿಕೊಡಲಿದ್ದಾರೆ.
ಬೆಳ್ತಂಗಡಿ : ಕನ್ನಡ ಕಾವ್ಯ ಪರಂಪರೆಯ ಪರಿಚಯ ಮತ್ತು ಸಂಸ್ಕೃತಿಯನ್ನು ಉಳಿಸುವ ಹೊಸ ಆಂದೋಲನವನ್ನು ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ ಆರಂಭಿಸಿದೆ. ಮನೆ ಮನೆಗಳಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸುವ ಅಭಿಯಾನಕ್ಕೆ ಧರ್ಮಸ್ಥಳ ಗ್ರಾಮದ ನಾರ್ಯದ ಜಯರಾಮ ಕುದ್ರೆತ್ತಾಯರ ಮನೆಯಲ್ಲಿ ದಿನಾಂಕ 07-05-2024ರಂದು ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು. ಬೆಳ್ತಂಗಡಿ ತಾಲೂಕು ಘಟಕದ ಗಮಕ ಪರಿಷತ್ತಿನ ಪೂರ್ವಾಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಜಯರಾಮ ಕುದ್ರೆತ್ತಾಯರ ಮನೆಯಲ್ಲಿ ಮನೆಮನೆ ಗಮಕದ ಕಾರ್ಯಕ್ರಮವನ್ನು ಕಲಾಪೋಷಕರಾದ ಶ್ರೀ ಭುಜಬಲಿಯವರು ಉದ್ಘಾಟಿಸಿದರು. ನಂತರ ಶುಭಾಶಯಗಳನ್ನು ಕೋರಿದ ಅವರು “ಎಲ್ಲಾ ಕಲೆಗಳಿಗೂ ಸಂಗೀತವು ಮೂಲವಾಗಿದ್ದು, ವಾಚನ ಪ್ರಧಾನವಾದ ಗಮಕ ಕಲೆಯು ನಮ್ಮ ಸಂಸ್ಕೃತಿಯನ್ನು ಉಳಿಸಲು ಬಲು ಮುಖ್ಯ ಕಾರಣವಾಗಿದೆ. ಇಂತಹ ಗಮಕ ಕಲೆಯ ಮೂಲಕ ಕನ್ನಡದ ಕಾವ್ಯ ಸಂಪತ್ತನ್ನು ಮನೆ ಮನೆಗೆ ತಲುಪಿಸುವ ಕಾರ್ಯವು ಸ್ತುತ್ಯರ್ಹವಾಗಿದೆ. ಈ ಕಾರ್ಯದಲ್ಲಿ ನಾವೆಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು. ನಂತರ ಕುಮಾರವ್ಯಾಸ ವಿರಚಿತ ಕರ್ಣಾಟಕ ಕಥಾಮಂಜರಿಯ ಉದ್ಯೋಗ…
ಕೋಟ: ಯಶಸ್ವೀ ಕಲಾವೃಂದ ರಿ. ಕೊಮೆ-ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ’ ಕಾರ್ಯಕ್ರಮದ ಅಂಗವಾದ ‘ಶ್ವೇತಸಂಜೆ-27’ ಕಾರ್ಯಕ್ರಮವು ದಿನಾಂಕ 10-05-2024 ರಂದು ಧಮನಿ ಟ್ರಸ್ಟ್ ತೆಕ್ಕಟ್ಟೆ ಹಾಗೂ ದಿಮ್ಸಾಲ್ ಫಿಲ್ಮ್ಸ್ ಇದರ ಸಹಯೋಗದೊಂದಿಗೆ ಕೋಟದ ಹರ್ತಟ್ಟು ಎಂಬಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕಲಾವಿದ ಹಾಗೂ ಕಲಾ ಪ್ರೋತ್ಸಾಹಕ ಗೋಪಾಲ ಮೈಯ್ಯ ಹರ್ತಟ್ಟು ಮಾತನಾಡಿ “ಕಲಾ ಪ್ರತಿಭೆಗಳ ಜನ್ಮದಾತವಾಗಿರುವ ಸಂಸ್ಥೆ ಯಶಸ್ವೀ ಕಲಾವೃಂದ. ನಿರಂತರ ಸಾಂಸ್ಕೃತಿಕ ತರಗತಿಗಳನ್ನು ನಡೆಸುತ್ತಾ ವಿವಿಧ ಕಲಾ ಪ್ರಕಾರಗಳಲ್ಲಿ ಮಕ್ಕಳನ್ನು ಪಳಗಿಸಿ, ಅವರಿಗೆ ಅವಕಾಶ ನೀಡುತ್ತಾ ಪ್ರತಿಭೆಗಳನ್ನು ಬೆಳೆಸುತ್ತಾ ಸಾಧನೆ ಗೈಯುತ್ತಿರುವುದು ಶ್ಲಾಘನೀಯ ಕಾರ್ಯ. ಭವಿಷ್ಯದ ಕಲಾ ಪ್ರತಿಭೆಗಳಿಗೆ ನಿರಂತರ ವೇದಿಕೆ ಒದಗುತ್ತಿರಬೇಕು. ಈ ನಿಟ್ಟಿನಲ್ಲಿ 25ನೇ ವರ್ಷಾಚರಣೆಯ ಸಂದರ್ಭ ಸಮಾಜದ ಸನ್ಮಿತ್ರರು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ಸಂಗತಿ.” ಎಂದರು. ಮತ್ತೋರ್ವ ಅತಿಥಿ ಗುರು ಲಂಬೋದರ ಹೆಗಡೆ ಮಾತನಾಡಿ “ರಂಗ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸಿಕೊಡುವಲ್ಲಿ ಸಮಾಜದ ಗಣ್ಯರು ಮನಸ್ಸು ಮಾಡಬೇಕು. ಕಲಿಯುವ ಮನಸ್ಸುಗಳಿಗೆ ಅವಕಾಶದ ಪ್ರೋತ್ಸಾಹ ದೊರೆತರೆ ನೂರಾರು ಕಲಾವಿದರು…
ಮಂಗಳೂರು : ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ಲೇಖಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ದಿನಾಂಕ 09-05-2024 ರಂದು ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಪಶ್ಚಿಮ್ ಟ್ರಸ್ಟ್ ಇದರ ನಿರ್ದೇಶಕರಾದ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು. ರಿಕ್ಷಾ ಡೈರಿ ‘ದಿರ್ವೆಂ’ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕಥಾಸಂಕಲನ ಹಾಗೂ ʻಥಕಾನಾತ್ಲೋ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್ಲೋ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ…
ಸುಳ್ಯ : ಹಿರಿಯ ಸಾಹಿತಿ, ವಿದ್ವಾಂಸ, ಸಂಶೋಧಕ, ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ ಸುಳ್ಯ ತಾಲೂಕು ಜಾನಪದ ಕೂಡುಕಟ್ಟು ವತಿಯಿಂದ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ದಿನಾಂಕ 09-05-2024ರಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ “ತುಳು ಭಾಷೆ ಮತ್ತು ತುಳು ಸಂಸ್ಕೃತಿಯ ಉಳಿವಿಗಾಗಿ ನಿರಂತರ ಕೆಲಸ ಮಾಡಿದ ಪಾಲ್ತಾಡಿ ರಾಮಕೃಷ್ಣ ಆಚಾರ್ ತುಳುವಿಗೆ ಒಂದು ಗೌರವದ ಸ್ಥಾನಮಾನ ದೊರಕಿಸಿಕೊಟ್ಟವರು. ಅಧ್ಯಯನದ ಮೂಲಕ ತನ್ನ ಜ್ಞಾನ ಶಕ್ತಿಯನ್ನು ವೃದ್ಧಿಸಿಕೊಂಡು ಅದನ್ನು ಸಾಹಿತ್ಯ ಲೋಕಕ್ಕೆ ವಿಸ್ತರಿಸಿ ಹಲವರಿಗೆ ಮಾರ್ಗ ದರ್ಶಕರಾಗಿ ಬೆಳೆಸಿದ ಕೀರ್ತಿ ಅವರದು.” ಎಂದು ಹೇಳಿದ್ದಾರೆ. ಜಾನಪದ ಸಂಶೋಧಕ ಡಾ. ಸುಂದರ್ ಕೇನಾಜೆ ಮಾತನಾಡಿ “ಅಕಾಡೆಮಿಗಳು ಹೇಗೆ ಕೆಲಸ ಮಾಡಬೇಕು ಎಂಬುದನ್ನು ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟವರು ಪಾಲ್ತಾಡಿಯವರು. ಜಾನಪದ ಉತ್ಸವಗಳನ್ನು ಸಂಘಟಿಸಿ ತಳ ಸಮುದಾಯದ ಜನರಿಗೆ ಅವಕಾಶವನ್ನು ಮಾಡಿ ಕೊಟ್ಟಿದ್ದರು. ಆ ಮೂಲಕ ಸಮಾಜವನ್ನು ಬೌದ್ಧಿಕವಾಗಿ ಹಾಗೂ ಸಾಂಸ್ಕೃತಿಕವಾಗಿ…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 13-05-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದುಷಿ ಶ್ರೇಯಾ ಬಾಲಾಜಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಶ್ರೇಯಾ ಬಾಲಾಜಿ ಇವರು ಭರತನಾಟ್ಯ ಅಭ್ಯಾಸವನ್ನು ತಮ್ಮ ಆರನೇ ವಯಸ್ಸಿನಲ್ಲಿ ವಿದುಷಿ ಕೆ. ಬೃಂದಾ ಮತ್ತು ವಿದುಷಿ ಅನನ್ಯ ಎಂ. ಇವರಿಂದ ಪ್ರಾರಂಭಿಸಿರುತ್ತಾರೆ. ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಇವರು ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿಯೂ ಕಾರ್ಯಕ್ರಮ ನೀಡಿರುತ್ತಾರೆ. ಪ್ರಸ್ತುತ ‘ಬೃಂದಾವನ ಕಲಾನಿಕೇತನ’ ಎಂಬ ನೃತ್ಯ ಶಾಲೆಯನ್ನು ನಡೆಸುತ್ತಿದ್ದಾರೆ. ‘ಡಾ. ರಾಜ್ ಕುಮಾರ್ ರಾಜ್ಯೋತ್ಸವ ಪ್ರಶಸ್ತಿ’, ‘ಚೈತ್ರಶ್ರೀ ಪ್ರಶಸ್ತಿ’, ‘ರಾಜೀವ್ ಗಾಂಧಿ ಪ್ರತಿಭಾ ಪುರಸ್ಕಾರ’, ಕಲಾ ಸ್ಪೂರ್ತಿ ಪ್ರಶಸ್ತಿ’, ‘ನಾಟ್ಯ ಮಯೂರಿ ಪ್ರಶಸ್ತಿ’, ‘ಅಂತರರಾಷ್ಟ್ರೀಯ…