Subscribe to Updates
Get the latest creative news from FooBar about art, design and business.
Author: roovari
ಕೋಟ : ಹಂದೆ ವಿಷ್ಣುಮೂರ್ತಿ ವಿನಾಯಕ ದೇವಸ್ಥಾನ ಹಂದಟ್ಟು –ಕೋಟ ಇಲ್ಲಿ ವರ್ಷಂಪ್ರತಿ ಅಕ್ಷಯ ತೃತೀಯಾದಂದು ನಡೆಯುವ ರಥೋತ್ಸವದ ಮುನ್ನಾ ದಿನದ ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ದಿನಾಂಕ 09-05-2024ರಂದು ಸಂಪನ್ನಗೊಂಡಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಅಮರ ಹಂದೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ಧಾರ್ಮಿಕ ಉಪನ್ಯಾಸ ನೀಡಿದರು. ಯಕ್ಷಗಾನ ಕಲಾ ಸಂಘಟಕ ಹಾಗೂ ಚಿಂತಕರಾದ ಜನಾರ್ದನ ಹಂದೆ, ಹಂದೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಹಂದೆ, ಕಟ್ಟೆ ಗೆಳೆಯರು ಹಂದಟ್ಟು ಕೋಟ ಇದರ ಸುರೇಶ ಪೂಜಾರಿ, ಉದಯ ಹಂದೆ ಬೆಂಗಳೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೃಷ್ಣಮೂರ್ತಿ ಉರಾಳ, ಜಯರಾಮ ಶೆಟ್ಟಿ, ಯಕ್ಷಗಾನ ನೇಪಥ್ಯ ಕಲಾವಿದರಾದ ರಾಜು ಪೂಜಾರಿ, ಸಮಾಜ ಸೇವಾ ನಿರತೆ ಭಾರತಿ ವಿ. ಮಯ್ಯ,…
ಮಂಗಳೂರು : ವಳಚ್ಚಿಲ್ ಶ್ರೀನಿವಾಸ ಶಿಕ್ಷಣ ಸಮೂಹ ಸಂಕೀರ್ಣದ ವೈಕುಂಠ ಶ್ರೀನಿವಾಸ ದೇವಾಲಯದಲ್ಲಿ “ದೇವಾಲಯದಲ್ಲಿ ಸ್ವರಾಲಯ” ಎನ್ನುವ ದೈವಿಕ ಸಾರದ ಸಂಗೀತ ಕಾರ್ಯಕ್ರಮವು ದಿನಾಂಕ 04-05-2024 ರಂದು ನಡೆಯಿತು. ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬೇರೂರಿರುವ ‘ಸಂಗೀತ ಮತ್ತು ಆಧ್ಯಾತ್ಮಿಕತೆ’ ಪರಿಕಲ್ಪನೆಯು ದೇವಾಲಯದ ದೈವತ್ವ ಹಾಗೂ ಶಾಸ್ತ್ರೀಯ ಸಂಗೀತದ ಸಮ್ಮಿಲನದಿಂದ ಭಕ್ತಿ ಆರಾಧನೆಯನ್ನು ಇಮ್ಮಡಿಗೊಳಿಸುತ್ತದೆ. ಭಕ್ತಿ ಸ್ವರಸಂಗೀತ ಸಂಗಮದ ಮೂಲಕ ಭಕ್ತ ಸಮೂಹದಲ್ಲಿ ದೈವಿಕ ಸಾರ ಬಿತ್ತುವ ಸಲುವಾಗಿ ಕಲಾ ಆರಾಧಕ ವೇದಿಕೆಯಾಗಿ ಕಾರ್ಯ ನಿರ್ವಹಿಸುವ ಈ “ದೇವಾಲಯದಲ್ಲಿ ಸ್ವರಾಲಯ” ಎಂಬ ವಿನೂತನ ಕಾರ್ಯಕ್ರಮವನ್ನು ಶ್ರೀನಿವಾಸ ಫಾರ್ಮಸಿ ಕಾಲೇಜು ತಮ್ಮ ವಳಚ್ಚಿಲಿನ ವೈಕುಂಠ ಶ್ರೀನಿವಾಸ ದೇಗುಲದ ಪ್ರಾಂಗಣದಲ್ಲಿ ಸ್ವರಾಲಯ ಸಾಧನ ಫೌಂಡೇಶನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮೀ ಆರ್. ರಾವ್ ಸಂಗೀತ ವಾದಕರ ತಂಡಕ್ಕೆ ಶುಭ ಹಾರೈಸಿದರು. ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಸದಸ್ಯರಾದ…
ತೆಕ್ಕಟ್ಟೆ: ‘ಶ್ವೇತಸಂಜೆ-26’, ಯಶಸ್ವೀ ಕಲಾವೃಂದ ರಿ. ಕೊಮೆ-ತೆಕ್ಕಟ್ಟೆ, ಧಮನಿ ಟ್ರಸ್ಟ್ ತೆಕ್ಕಟ್ಟೆ ಹಾಗೂ ದಿಮ್ಸಾಲ್ ಫಿಲ್ಮ್ಸ್ ಆಯೋಜಿಸಿಕೊಂಡಿರುವ ‘ರಜಾರಂಗು-24’ ಶಿಬಿರದ ಮುಕ್ತಾಯದಲ್ಲಿ ನಡೆದ “ತ್ರಿವಳಿ ನಾಟಕೋತ್ಸವ”ದ ಸಮಾರೋಪ ಸಮಾರಂಭವು ದಿನಾಂಕ 08-05-2024 ರಂದು ತೆಕ್ಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ರಂಗ ನಿರ್ದೇಶಕರಾದ ಶ್ರೀಷ ತೆಕ್ಕಟ್ಟೆ ಹಾಗೂ ಅಶೋಕ್ ಮೈಸೂರು ಇವರನ್ನು ಅಭಿವಂದಿಸಿ ಮಾತನಾಡಿ “ಮಕ್ಕಳ ಮನಸ್ಸುಗಳು ಕಾಲಿ ಪುಟದ ಹಾಗೆ. ನಿರ್ಮಲ ಮನಸ್ಸುಗಳಲ್ಲಿ ಸಫಲತೆಯ ಬೀಜ ಬಿತ್ತಬೇಕು. ಅದು ಮೊಳಕೆ ಒಡೆದು ಭವಿಷ್ಯದಲ್ಲಿ ಹೆಮ್ಮರವಾಗಿ ಸಮಾಜವನ್ನು ಬೆಳಗಬೇಕಾದರೆ ಇಂತಹ ಶಿಬಿರದಿಂದ ಸಾಧ್ಯ. ರಜಾರಂಗು ಶಿಬಿರ ಹಲವು ವರ್ಷಗಳಿಂದ ಪರಿಸರದ ಮಧ್ಯದಲ್ಲಿ ನೆರವೇರಿಸಿಕೊಂಡು ಬಂದಿದೆ. ನೀನಾಸಂ, ಸಾಣೆಹಳ್ಳಿ, ರಂಗಾಯಣದಲ್ಲಿನ ನುರಿತ ರಂಗ ನಿರ್ದೇಶಕರಿಂದ ಈ ಶಿಬಿರ ಸಂಪನ್ನಗೊಂಡಿರುವುದು ಸಣ್ಣ ವಿಷಯವಲ್ಲ. ಇಂತಹ ದೊಡ್ಡ ಮಟ್ಟದ ಶಿಬಿರವನ್ನು ಏರ್ಪಡಿಸಿಕೊಂಡು ಸುಧೀರ್ಘ ಕಾಲ ನಡೆಸುವ ಸಂಸ್ಥೆಯನ್ನು ಶ್ಲಾಘಿಸಲೇ ಬೇಕು. ಸಮಾಜಕ್ಕೆ ದೊಡ್ಡ ಕೊಡುಗೆಯಾದ ಯಶಸ್ವೀ…
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ 2024ರ ವಿನೂತನ ಕಾರ್ಯಕ್ರಮ ಸರಣಿಯಲ್ಲಿ ಕುಂದಾಪುರದ ಶ್ರೀ ವೇಣುಗೋಪಾಲ ಭಜನಾ ಮಂಡಳಿಯವರಿಂದ ‘ಭಜನ್ ಸಂಧ್ಯಾ’ ಕಾರ್ಯಕ್ರಮವು ದಿನಾಂಕ 19-05-2024ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.
ಸುಳ್ಯ : ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇತ್ತೀಚೆಗೆ ನಿಧನರಾದ ಜಾನಪದ ವಿದ್ವಾಂಸ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 10-05-2024ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ನಿವೃತ್ತ ವೈದ್ಯಾಧಿಕಾರಿ ಡಾ. ಎಸ್. ರಂಗಯ್ಯ, ಕಸಾಪ ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಭ್ರಪ್ಪಾಡಿ, ನಿವೃತ್ತ ಪ್ರಾಂಶುಪಾಲೆ ಡಾ. ರೇವತಿ ನಂದನ್ ಇವರು ಪಾಲ್ತಾಡಿಯವರು ತುಳು ಮತ್ತು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಅವರ ಸಾಹಿತ್ಯ ಸಾಧನೆಗೆ ದೊಡ್ಡ ಪ್ರಶಸ್ತಿ ಸಿಗಬೇಕಿತ್ತು ಎಂದು ಹೇಳಿದರು. ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ನಿರ್ದೇಶಕರುಗಳಾದ ಯೋಗಿಶ್ ಹೊಸೊಳಿಕೆ, ರಮೇಶ್ ನೀರಬಿದಿರೆ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.…
ಉಡುಪಿ : ರಾಗ ಧನ ಉಡುಪಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನ ಮಾಲಿಕೆ’ -24 ಸಂಗೀತ ಕಾರ್ಯಕ್ರಮವು ದಿನಾಂಕ 21-05-2024 ಮತ್ತು 22-05-2204ರಂದು ಮಣಿಪಾಲ ಅಲೆವೂರು ರಸ್ತೆ, ಮಣಿಪಾಲ ಡಾಟ್ ನೆಟ್ ಇಲ್ಲಿ ನಡೆಯಲಿದೆ. ದಿನಾಂಕ 21-05-2024 ಮತ್ತು 22-05-2204ರಂದು ಗುರುಗುಹಾಮೃತ ಸಂಸ್ಥೆಯ ವತಿಯಿಂದ ಮುತ್ತುಸ್ವಾಮಿ ದೀಕ್ಷಿತರ ಅಪರೂಪದ ಕೀರ್ತನೆಗಳ ‘ಸಂಗೀತ ಕಾರ್ಯಾಗಾರ’ವನ್ನು ಸಂಪನ್ಮೂಲ ವ್ಯಕ್ತಿಯಾಗಿ ಚೆನ್ನೈಯ ಶ್ರೀ ಜಿ. ರವಿಕಿರಣ್ ಇವರು ನಡೆಸಿಕೊಡಲಿದ್ದಾರೆ. ದಿನಾಂಕ 21-05-2024ರಂದು ಅಪರಾಹ್ನ ಗಂಟೆ 2-30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಸಂಗೀತ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ದಿನಾಂಕ 22-05-2204ರಂದು ಅಪರಾಹ್ನ ಗಂಟೆ 2-00ರಿಂದ ಶಿಬಿರಾರ್ಥಿಗಳಿಂದ ಅಭ್ಯಾಸಕ್ರಮ, ಗಂಟೆ 2-55ರಿಂದ ಕರ್ನಾಟಕ ಸಂಗೀತ ಕಛೇರಿಯಲ್ಲಿ ಉಡುಪಿಯ ಪ್ರಣತಿ ಎಸ್. ಭಟ್ ಮತ್ತು ಧೃತಿ ಎಸ್. ಭಟ್ ಇವರಿಂದ ದ್ವಂದ್ವ ಹಾಡುಗಾರಿಕೆ ನಡೆಯಲಿದೆ. ತನ್ಮಯೀ ಉಪ್ಪಂಗಳ ವಯೊಲಿನ್ ಮತ್ತು ನಾರಾಯಣ ಬಳ್ಳಕ್ಕೂರಾಯ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಬಸವ ಜಯಂತಿ’ ಕಾರ್ಯಕ್ರಮವು ದಿನಾಂಕ 10-05-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿಯವರು ಮಾತನಾಡಿ “ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ ಕಲ್ಯಾಣ ಕ್ರಾಂತಿಯ ಮೂಲಕ ಸಮಾನತೆಯ ಆಶಯವನ್ನು ಎತ್ತಿ ಹಿಡಿದ ಬಸವಣ್ಣನವರ ಕೊಡುಗೆ ಅಪಾರ. ಬಸವಣ್ಣನವರು ಸಾಹಿತ್ಯದಲ್ಲಿ ಸರಳತೆಯನ್ನು ತಂದು ಜನ ಸಾಮಾನ್ಯರನ್ನು ತಲುಪಿದವರು. ಗಹನ ವೇದಾಂತವನ್ನು ಸರಳವಾಗಿ ಜನರ ಬಳಿಗೆ ತಂದವರು. ಅನುಭವ ಮಂಟಪದ ಪರಿಕಲ್ಪನೆಯ ಮೂಲಕ ಸಮಾಜದ ಎಲ್ಲರನ್ನೂ ಒಂದುಗೂಡಿಸಿದವರು. ಅವರ ತಾತ್ವಿಕ ಮೌಲ್ಯಗಳನ್ನು ಭಾರತದ ಸಂವಿಧಾನ ಕೂಡ ಅಳವಡಿಸಿಕೊಂಡಿದೆ ಈ ಘೋಷಣೆಯ ಮೂಲಕ ಬಸವಣ್ಣನವರ ಚಿಂತನಗಳು ಎಲ್ಲೆಡೆ ಪಸರಿಸಲು ಅನುಕೂಲವಾಗುವುದು” ಎಂದು ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್. ಶ್ರೀಧರ ಮೂರ್ತಿಯವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಬಸವಣ್ಣನವರ ಜೀವನ ಸಾಧನೆಯನ್ನು ಪ್ರಸಾರ ಮಾಡುವಲ್ಲಿ ಬಹಳ ಹಿಂದಿನಿಂದಲೂ ಶ್ರಮಿಸುತ್ತಾ ಬಂದಿದೆ.…
ವ್ಯಕ್ತಿ, ಕುಟುಂಬ ಮತ್ತು ಸಮುದಾಯಗಳ ಕತೆಯನ್ನು ಏಕಕಾಲಕ್ಕೆ ಹೇಳುತ್ತಾ ತನ್ನೆಲ್ಲ ಸಂಕೀರ್ಣತೆಯೊಂದಿಗೆ ಬಿಚ್ಚಿಕೊಳ್ಳುವ ‘ದೇವ’ ಕಾದಂಬರಿಯು ಶ್ರೀಮತಿ ಎ.ಪಿ. ಮಾಲತಿಯವರ ಅನನ್ಯ ರಚನೆಗಳಲ್ಲೊಂದು. ಕಥಾನಾಯಕನಾದ ದೇವನ ಚಿಂತೆ, ಚಿಂತನೆ ಮತ್ತು ಚಟುವಟಿಕೆಗಳು ಕಾದಂಬರಿಯ ಹೆಚ್ಚಿನ ಭಾಗವನ್ನು ಆವರಿಸಿಕೊಂಡಿದ್ದು ಅವನ ಸುತ್ತ ಜರಗುವ ವಿದ್ಯಮಾನಗಳು ಕೃತಿಯ ವಿನ್ಯಾಸವನ್ನು ರೂಪಿಸಿವೆ. ದೇವನ ಆದರ್ಶ, ಕನಸು, ಶೋಧ ಮತ್ತು ಪ್ರಗತಿಪರ ಚಟುವಟಿಕೆಗಳನ್ನು ದಾಖಲಿಸುತ್ತಾ ಅವನ ವ್ಯಕ್ತಿತ್ವದೊಳಗಿನ ವ್ಯಂಗ್ಯ ವೈರುಧ್ಯ ಮತ್ತು ನೈತಿಕ ಸಂಘರ್ಷಗಳನ್ನು ವಿವರಿಸುವ ಲೇಖಕಿಯ ಕಥನ ಕೌಶಲ ಗಮನ ಸೆಳೆಯುತ್ತದೆ. ದೇವನ ಸಾಕು ತಂದೆ ಈಶ್ವರಯ್ಯನವರು ತಮ್ಮ ಬದುಕಿನ ಕೊನೆಯ ದಿನಗಳಂದು ಅವನ ಜನ್ಮರಹಸ್ಯವನ್ನು ತಿಳಿಸಿದ ಬಳಿಕ ಕಾದಂಬರಿಯು ಹೊಸ ತಿರುವನ್ನು ಪಡೆದುಕೊಳ್ಳುತ್ತದೆ. ತಾನು ಈಶ್ವರಯ್ಯ-ನಾಗಮ್ಮ ದಂಪತಿಗಳ ಮಗನಲ್ಲವೆಂದೂ, ದಲಿತ ಹೆಂಗಸಿನಿಂದ ಉಪೇಕ್ಷಿತನಾದ ತನ್ನನ್ನು ಅವರು ಸ್ವಂತ ಮಗನಂತೆ ಬೆಳೆಸುತ್ತಾ ಬಂದಿದ್ದರು ಎಂಬುದನ್ನು ತಿಳಿದು ಆಘಾತಗೊಂಡ ದೇವನು ತನ್ನ ಬದುಕಿನ ಸತ್ಯವನ್ನು ದಿಟ್ಟತನದಿಂದ ಸ್ವೀಕರಿಸಿದರೂ ಅದನ್ನು ಅರಗಿಸಿಕೊಳ್ಳಲು ವಿಫಲನಾಗುತ್ತಾನೆ. ಬೆಳೆಯುವ ಅಥವಾ ಬೆಳೆಸುವ ಕ್ರಮದಲ್ಲಿ…
ಉಡುಪಿ : ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಉಡುಪಿ ಮತ್ತು ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯೂಕೇಶನಲ್ ಟ್ರಸ್ಟ್ (ರಿ) ಉಡುಪಿ ಇವುಗಳ ಸಹಯೋಗದಲ್ಲಿ ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಇದರ ರಜತಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ‘ಗ್ರಂಥ ಲೋಕಾರ್ಪಣ ಸಮಾರಂಭ’ವು ದಿನಾಂಕ 12-05-2024ರಂದು ಉಡುಪಿಯ ಕುಂಜಿಬೆಟ್ಟು ಇಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿಯ ಆರ್.ವಿ.ಎಸ್. ಸಂಘದ ಅಧ್ಯಕ್ಷರಾದ ಶ್ರೀ ವೇಕಟೇಶ ಆಚಾರ್ಯ ಇವರು ವಹಿಸಲಿದ್ದು, ಉಡುಪಿಯ ಅಲೆವೂರು ಪ್ರಭಾಕರ ಆಚಾರ್ಯ ಸ್ಮಾರಕ ಶಿಕ್ಷಣ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಶ್ರೀ ವಿಶ್ವನಾಥ ರಾವ್ ಇವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಹಚಿಂತನದ ಪ್ರಕಾಶಕರಾದ ಶ್ರೀ ಎಸ್. ವಿ. ಆಚಾರ್ಯ ಇವರು ಕೃತಿ ಲೋಕಾರ್ಪಣ ಮಾಡಲಿದ್ದು, ಅಧ್ಯಾಪಕರಾದ ಶ್ರೀ ರಮೇಶ್ ವಿ. ಆಚಾರ್ಯ ಮತ್ತು ವಿಶ್ವಕರ್ಮ ಎಜ್ಯೂಕೇಶನಲ್ ಟ್ರಸ್ಟಿನ ಅಧ್ಯಕ್ಷರಾದ ಇಂ.ಬಿ.ಎ. ಆಚಾರ್ಯ ಇವರುಗಳು ಕೃತಿ ಪರಿಚಯ ಮಾಡಲಿದ್ದಾರೆ.
ಉಡುಪಿ : ಚಲನಚಿತ್ರ ನಟ, ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನಾ ಅವರ ಸಾರಥ್ಯದಲ್ಲಿ ‘ಘರ್ ಘರ್ ಕೊಂಕಣಿ’ ಕಾರ್ಯಕ್ರಮವು ಈಗಾಗಲೇ ಗಡಿನಾಡು ಕೇರಳ ಹಾಗೂ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯಶಸ್ವಿಗೊಂಡಿದ್ದು, ದಿನಾಂಕ 12-05-2024ರಂದು ಉಡುಪಿಯ ಆಸುಪಾಸಿನಲ್ಲಿ ನಡೆಯಲಿದೆ. ಬೆಳಗ್ಗೆ 10-00 ಗಂಟೆಗೆ 152ನೇ ಕಾರ್ಯಕ್ರಮವು ಉಡುಪಿಯ ಅಂಬಲ್ಪಾಡಿ, ಕಿದಿಯೂರ್ ರಸ್ತೆ, 4ನೇ ಅಡ್ಡ ರಸ್ತೆ, ‘ದರ್ಶನ್’ ಇಲ್ಲಿ ಶ್ರೀಮತಿ ದೀಪಾ ಮತ್ತು ಎಂ. ದಿನೇಶ್ ಭಂಡಾರಿ ಇವರ ಆತಿಥ್ಯದಲ್ಲಿ, 11-30 ಗಂಟೆಗೆ 153ನೇ ಕಾರ್ಯಕ್ರಮವು ಉಡುಪಿಯ ಬನ್ನಂಜೆ, ಬಿ.ಬಿ. ಗರಡಿ ರೋಡ್, ‘ಗಣೇಶ್ ಪ್ರಸಾದ್’ ಇಲ್ಲಿ ಶ್ರೀಮತಿ ಕಲ್ಪನಾ ಎಸ್. ಶೇಟ್ ಮತ್ತು ಶ್ರೀ ಸುಬ್ರಹ್ಮಣ್ಯ ಶೇಟ್ ಇವರ ಆತಿಥ್ಯದಲ್ಲಿ, 02-30 ಗಂಟೆಗೆ 154ನೇ ಕಾರ್ಯಕ್ರಮವು ಉಡುಪಿಯ ಸಿಟಿ ಹಾಸ್ಪಿಟಲ್ ಲಾಗ್ಗಿ, ಕಾಡಬೆಟ್ಟು, ‘ವೈಕುಂಠ ಭವನ್’ ಇಲ್ಲಿ ಶ್ರೀಮತಿ ಪ್ರಿಯಾ ಎಸ್. ಕಾಮತ್ ಇವರ ಆತಿಥ್ಯದಲ್ಲಿ ಹಾಗೂ 04-15…