Author: roovari

ಉಡುಪಿ : ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ನಕ್ಷತ್ರ ನಕ್ಕ ರಾತ್ರಿ’ ಎಂಬ ಕವನ ಸಂಕಲನ ಹಾಗೂ ‘ಇರವಿನ ಅರಿವು’ ಎಂಬ ವಿಮರ್ಶಾ ಸಂಕಲನ ಪುಸ್ತಕಗಳನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರು ಉಡುಪಿಯ ಅಜ್ಜರಕಾಡಿನ ಪಾರ್ಕ್ ಬಳಿ ಇರುವ ಐತಿಹಾಸಿಕ ಸ್ಥಳ ರೇಡಿಯೋ ಟವರ್ ಬಳಿಯಲಿ ದಿನಾಂಕ 25-01-2024ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧ ಜಾದೂ ಕಲಾವಿದರಾದ ಪ್ರೊ. ಶಂಕರ್, ಲೇಖಕಿ ಪೂರ್ಣಿಮಾ ಜನಾರ್ದನ್, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕರಾದ ನಾಗರಾಜ್ ಹೆಬ್ಬಾರ್, ಸ್ಮಿತಾ ಕಾಯ್ಕಿಣಿ, ನಿರೂಪಕ ಅವಿನಾಶ್ ಕಾಮತ್, ಕಲಾವಿದೆ ಪದ್ಮಾಸಿನಿ ಉದ್ಯಾವರ, ರಾಘವೇಂದ್ರ ಪ್ರಭು ಕರ್ವಾಲು ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು : ಸ್ವರ ಲಯ ಸಾಧನ ಫೌಂಡೇಶನ್, ಕಲಾ ಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಆಶ್ರಯದಲ್ಲಿ ಆಯೋಜಿಸಿರುವ ‘ಸ್ವರ ಸಂಕ್ರಾಂತಿ ಉತ್ಸವ-24’ ಇದರ ಅಂಗವಾಗಿ ಸಂಗೀತ ಕಛೇರಿಯು ದಿನಾಂಕ 15-01-2024ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ನಿಡಸೊಸಿ ಶ್ರೀ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನದ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಅವರು, “ಸ್ವರ ಸಂಕ್ರಾಂತಿ ಉತ್ತಮ ಪರಿಕಲ್ಪನೆ ಅದ್ಭುತವಾಗಿ ಮೂಡಿಬಂದಿದೆ. ಈ ಮೂಲಕ ಸಂಸ್ಕೃತಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಂಗೀತದ ಮೂಲಕ ಮಕ್ಕಳನ್ನು ಭವಿಷ್ಯಕ್ಕೆ ಅಣಿಯಾಗಿಸುತ್ತಿರುವ ಕಾರ್ಯ ಶ್ಲಾಘನೀಯ” ಎಂದರು. ಈ ಸಮಾರಂಭದಲ್ಲಿ ‘ಸ್ವರ ರತ್ನ ಪ್ರಶಸ್ತಿ’ ಸ್ವೀಕರಿಸಿದ ವಿದ್ವಾನ್ ವಿಟ್ಠಲ ರಾಮಮೂರ್ತಿ ಮಾತನಾಡುತ್ತಾ “ಸಂಗೀತ ಎಲ್ಲಾ ಮನಸ್ಸುಗಳಿಗೆ ಮುದ ನೀಡುತ್ತದೆ. ಸಂಗೀತಕ್ಕೆ ಮಕ್ಕಳನ್ನು ಸೆಳೆಯುವಂತೆ ಮಾಡಬೇಕು. ಸಂಗೀತ ಅಭ್ಯಾಸ ಮಾಡುವುದರಲ್ಲಿ ತೃಪ್ತಿ ಇದೆ. ಇಂದಿನ ಪೀಳಿಗೆ ಸಂಗೀತ ಕಲಿಯುವತ್ತ ಹೆಚ್ಚು ಆಕರ್ಷಿತರಾಗಬೇಕು. ಸಂಗೀತ ಪಯಣ ಆನಂದಿಸುವುದರ ಜತೆಗೆ ಹೊಸತನದೊಂದಿಗೆ…

Read More

ಮಡಿಕೇರಿ : ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 81ನೇ ಪುಸ್ತಕ ಹಾಗೂ ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಬರೆದಿರುವ 6ನೇ ಪುಸ್ತಕ ‘ಪೂ ಬಳ್ಳಿ’ ಕೃತಿಯ ಬಿಡುಗಡೆ ಕಾರ್ಯಕ್ರಮವು ದಿನಾಂಕ 19-01-2024ರಂದು ನಡೆಯಿತು. ಕೃತಿ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾತನಾಡುತ್ತಾ, “ಜ್ಞಾನ ಸಂಪಾದನೆ ಮತ್ತು ಸಂಸ್ಕೃತಿಯ ಉಳಿವಿಗೆ ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ವಿಶಿಷ್ಟವಾಗಿರುವ ಕೊಡವ ಭಾಷೆಯ ಮೇಲಿನ ಅಭಿಮಾನದಿಂದ ಅನೇಕರು ಕೊಡವ ಪುಸ್ತಕವನ್ನು ಹೊರತರುತ್ತಿದ್ದಾರೆ. ಆ ಮೂಲಕ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪ್ರಯತ್ನಿಸುತ್ತಿದ್ದಾರೆ. ನಮ್ಮ ಪೂರ್ವಜರು ನೀಡಿರುವ ಸಂದೇಶವನ್ನು ಲೇಖಕಿ ತಮ್ಮ ‘ಪೂ ಬಳ್ಳಿ’ ಪುಸ್ತಕದಲ್ಲಿ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಇದು ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮತ್ತು ಪ್ರೇರಣೆ ನೀಡುವಂತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ಸಾಹಿತಿ ಉಳ್ಳಿಯಡ ಡಾಟಿ ಪೂವಯ್ಯ ಮಾತನಾಡಿ, “ಸಾಹಿತ್ಯಕ್ಕೆ ಎಂದಿಗೂ ಸಾವಿಲ್ಲ. ಯಾವುದೇ ಲಾಭವನ್ನು ನಿರೀಕ್ಷೆ ಮಾಡದೆ, ಸ್ವಾರ್ಥ ಮನೋಭಾವನೆಯನ್ನು…

Read More

ಸುರತ್ಕಲ್ : ಬೆಂಗಳೂರಿನ ವೀರಲೋಕ ಪ್ರಕಾಶನ, ಸುರತ್ಕಲ್ಲಿನ ಗೋವಿಂದದಾಸ ಕಾಲೇಜು ಮತ್ತು ಉಡುಪಿ ಲೇಖಕಿಯರ ಮತ್ತು ವಾಚಕಿಯರ ಸಂಘ ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ‘ದೇಸಿ ಕಥಾ ಕಮ್ಮಟ’ವು ದಿನಾಂಕ 03-02-2024 ಮತ್ತು 04-02-2024ರಂದು ಗೋವಿಂದದಾಸ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಯುವ ಕಥೆಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಮ್ಮಟವನ್ನು ಆಯೋಜಿಸಲಾಗಿದೆ. ಭಾಗವಹಿಸುವವರಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಕಮ್ಮಟದಲ್ಲಿ ಭಾಗವಹಿಸಲು ಮೊದಲು ನೋಂದಾಯಿಸಿದ 40 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಆಸಕ್ತರು ಲೇಖಕಿಯರು ಮತ್ತು ವಾಚಕರ ಸಂಘ, ಉಡುಪಿ ಮತ್ತು ಗೋವಿಂದ ದಾಸ ಕಾಲೇಜಿನ ಕನ್ನಡ ವಿಭಾಗದ ಡಾ. ಸಂತೋಷ್ ಆಳ್ವ ಅವರನ್ನು ಸಂಪರ್ಕಿಸಬಹುದಾಗಿದೆ. ಕಮ್ಮಟದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗುವುದು.

Read More

ಬೆಂಗಳೂರು : ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ತ್ಯಾಗರಾಜ ನಗರದಲ್ಲಿರುವ ಯಕ್ಷದೇಗುಲಕ್ಕೆ ಯಕ್ಷಗಾನದ ಮೂಲ ಸತ್ವ ತಿಳಿದುಕೊಳ್ಳಲು ಅಮೇರಿಕದ ಡಾ. ಮಾರ್ಷಲ್ ಗಂಜ್ ಮತ್ತು ತಂಡದವರು ದಿನಾಂಕ 23-01-2024ರಂದು ಆಗಮಿಸಿದರು. ಕಳೆದ 45 ವರ್ಷದಿಂದ ಯಕ್ಷಗಾನ ಪ್ರದರ್ಶನ, ಕಮ್ಮಟ, ತರಬೇತಿ, ಕಾರ್ಯಗಾರ, ವಿಚಾರ ಸಂಕಿರಣ, ಪುಸ್ತಕ ಬಿಡುಗಡೆ ಹೀಗೆ ಗುಣಾತ್ಮಕ ಪ್ರದರ್ಶನ ನೀಡುತ್ತಾ ಬಂದಿರುವ ಈ ಸಂಸ್ಥೆಯಲ್ಲಿ ಪ್ರಿಯಾಂಕ ಕೆ. ಮೋಹನ ನಿರ್ದೇಶನದಲ್ಲಿ ಸಂಪ್ರದಾಯ ಕೊಡಂಗಿ ನೃತ್ಯ, ಬಾಲಗೋಪಾಲ, ಪೀಠಿಕಾ ಸ್ತ್ರೀವೇಷ, ಕೃಷ್ಣನ ಒಡ್ಡೋಲಗ, ರಾಜವೇಷದ ಒಡ್ಡೋಲಗ, ಯುದ್ಧ ನೃತ್ಯ, ಅಭಿನಯ, ಮಾತುಗಾರಿಕೆ ಬಗ್ಗೆ ಎರಡು ಗಂಟೆಗಳ ಕಾಲ ಪ್ರಾತ್ಯಕ್ಷಿಕೆ ಮತ್ತು ಕಂಸವಧೆ ಪ್ರಸಂಗದ ಒಂದು ಭಾಗವನ್ನು ಪ್ರದರ್ಶಿಸಲಾಯಿತು. ಕನ್ನಡದಲ್ಲಿ ಮಾಡಿದ ಈ ಪ್ರಾತ್ಯಕ್ಷಿಕೆಯ ಎಲ್ಲಾ ಭಾಗವನ್ನು ಆಂಗ್ಲ ಭಾಷಾ ಸಂವಹನದೊಂದಿಗೆ ಪ್ರದರ್ಶಿಸಲಾಯಿತು. ಸಮಾಜ ಶಾಸ್ತ್ರದಲ್ಲಿ ಪಿ.ಎಚ್.ಡಿ. ಪಡೆದ ಮಾರ್ಷಲ್ ಗಂಜ್ ಅವರ ತಂಡದಲ್ಲಿ ಆಮೇರಿಕದ ಹಾರ್ವರ್ಡ್ ವಿಶ್ವವಿದ್ಯಾನಿಲಯದ ಕೆನಡಿ ಸ್ಕೂಲ್ ಗವರ್ನಮೆಂಟ್‌ನಲ್ಲಿ ನಾಯಕತ್ವ, ಸಂಘಟನೆ ಮತ್ತು ನಾಗರಿಕ ಸಮಾಜದಲ್ಲಿ ಹಿರಿಯ…

Read More

ಮೂಡಬಿದ್ರೆ : ಮೂಡುಬಿದ್ರೆ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ‘ನ್ಯಾನೋ ಕಥಾ ಕಮ್ಮಟ’ವು ದಿನಾಂಕ 04-02-2024ರಂದು ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆಯಲಿದೆ. ಭಾಗವಹಿಸಲು ಆಸಕ್ತರಿರುವ ಸಾಹಿತ್ಯಾಸಕ್ತರಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಿ 12 ಗಂಟೆಗೆ ಮುಕ್ತಾಯವಾಗಲಿದೆ. ಆಸಕ್ತ ಸ್ಪರ್ಧಾಳುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ವಿನಂತಿ. ಈ ಕೆಳಗಿನ ಮೊಬೈಲ್ ಸಂಖ್ಯೆಗೆ ತಮ್ಮ ಹೆಸರನ್ನು ಮತ್ತು ಪರಿಚಯವನ್ನು ಕಳುಹಿಸಿಕೊಡಬಹುದು ಮೊ.9731317635.

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 29-01-2024ರ ಸೋಮವಾರ ಸಂಜೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಮಂಗಳೂರಿನ ಮಾನಸ ಕುಲಾಲ್ ನೃತ್ಯ ಪ್ರದರ್ಶನ ನೀಡಲಿದ್ದು, ಈ ಕಾರ್ಯಕ್ರಮವು ಸಂಜೆ ಗಂಟೆ 6.25 ರಿಂದ ನಡೆಯಲಿದೆ. ಕೆ. ಧರ್ಣಪ್ಪ ಸಾಲಿಯಾನ್ ಹಾಗೂ ಜಯಲಕ್ಷ್ಮಿ ಡಿ. ಸಾಲಿಯಾನ್ ದಂಪತಿಗಳ ಸುಪುತ್ರಿಯಾಗಿರುವ ಮಾನಸ ಕುಲಾಲ್ ತನ್ನ ನೃತ್ಯ ಅಭ್ಯಾಸವನ್ನು ಹದಿನೈದು ವರ್ಷಗಳಿಂದ ಮಂಗಳೂರಿನ ಭರತಾoಜಲಿ (ರಿ) ಕೊಟ್ಟಾರ, ನೃತ್ಯ ಸಂಸ್ಥೆಯ ಗುರು ಶ್ರೀಮತಿ ಪ್ರತಿಮಾ ಶ್ರೀಧರ್ ಹಾಗೂ ಗುರು ಶ್ರೀ ಶ್ರೀಧರ ಹೊಳ್ಳ ಇವರಲ್ಲಿ ಪಡೆಯುತ್ತಿದ್ದಾರೆ. ಭರತನಾಟ್ಯದಲ್ಲಿ ವಿದ್ವತ್ ಪೂರ್ಣಗೊಳಿಸಿರುವ ಇವರು ಕರ್ನಾಟಕ ನೃತ್ಯ ಸಂಗೀತ ಅಕಾಡೆಮಿಯ ವತಿಯಿಂದ ಶಿಷ್ಯ ವೇತನವನ್ನು ಪಡೆದಿರುತ್ತಾರೆ. ಹಲವಾರು ಏಕ ವ್ಯಕ್ತಿ ನೃತ್ಯ ಪ್ರದರ್ಶನಗಳನ್ನು ನೀಡಿರುವ ಇವರು ತನ್ನ ಗುರುಗಳೊಂದಿಗೆ 200 ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಸಕ್ರಿಯ…

Read More

ಕಾರ್ಕಳ: ಕಾರ್ಕಳ ಹಿರ್ಗಾನದ ಕುಂದೇಶ್ವರ ಕ್ಷೇತ್ರ ವಾರ್ಷಿಕ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’ಯನ್ನು ದಿನಾಂಕ 22-01-2024ರ ಸೋಮವಾರದಂದು ಪ್ರದಾನ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ “ಧಾರ್ಮಿಕ ಕಾರ್ಯಕ್ರಮಗಳ ಜೊತೆಯಲ್ಲಿ ನಾಟಕ ಮತ್ತು ಯಕ್ಷಗಾನದ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಕುಂದೇಶ್ವರದಿಂದ ಕಲೆಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತಿದೆ.” ಎಂದರು. ಯಕ್ಷಗಾನ ಕಲಾವಿದ ರಕ್ಷಿತ್‌ ಪಡ್ರೆಗೆ ಪ್ರಶಸ್ತಿಯನ್ನು ಪ್ರದಾನಮಾಡಿ ಮಾತನಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ “ ನಿರಂತರವಾಗಿ ಶ್ರೇಷ್ಠ ಕಲಾವಿದರನ್ನು ಗುರುತಿಸಿ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’ಯನ್ನು ಪ್ರದಾನ ಮಾಡುತ್ತಾ ಬಂದಿರುವ ಕುಂದೇಶ್ವರ ಕ್ಷೇತ್ರದ ಆಡಳಿತ ಮಂಡಳಿ ಈ ಬಾರಿ ಯಕ್ಷಗಾನದಲ್ಲಿ ವಿಶೇಷ ಸಾಧನೆ ಮಾಡಿದ ರಕ್ಷಿತ್‌ ಪಡ್ರೆಗೆ ಪ್ರಶಸ್ತಿ ನೀಡುವ ಮೂಲಕ ಯುವ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದೆ.“ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕದ್ರಿ ನವನೀತ ಶೆಟ್ಟಿ ಮಾತನಾಡಿ…

Read More

ಬದಿಯಡ್ಕ: ಪಂಜಿಕಲ್ಲು ಶಾಲೆಯ ವಿದ್ಯಾರಂಗದ ಆಶ್ರಯದಲ್ಲಿ ‘ಅರಳುವ ಮೊಗ್ಗುಗಳು’ ಮಕ್ಕಳ ಚಟುವಟಿಕೆಯ ಕಾರ್ಯಕ್ರಮವು ದಿನಾಂಕ 25-01-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಪಂಜಿಕಲ್ಲಿನ ಎಸ್. ವಿ. ಎ. ಯು. ಪಿ. ಶಾಲೆಯ ಸಂಸ್ಕ್ರತ ಶಿಕ್ಷಕಿ ಪಿ. ವಿಜಯಲಕ್ಷ್ಮಿ ಮಾತನಾಡಿ “ಕಲಾವಿದರಿಗೆ ಹಾಗೂ ಸಾಹಿತಿಗಳಿಗೆ ಪರಿಸರವೂ ಪಠ್ಯ. ಪರಿಸರದಲ್ಲಿನ ವಿಶೇಷಗಳೇ ಕವಿಯ ಕಲ್ಪನೆಗೆ ಜೀವ ತುಂಬುತ್ತವೆ. ಇದು ಸಾಹಿತ್ಯದ ಶಕ್ತಿ.” ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ವಿದ್ಯಾರಂಗದ ಸಂಚಾಲಕಿ ಹಾಗೂ ಶಿಕ್ಷಕಿಯಾದ ಕೆ. ನಳಿನಾಕ್ಷಿ ಮಾತನಾಡಿ “ನಿರಂತರ ಅಧ್ಯಯನದಿಂದ ಮಾತ್ರ ಸಾಹಿತ್ಯ ರಚನಾ ಶಕ್ತಿ ಕರಗತವಾಗುತ್ತದೆ. ಎಳವೆಯಲ್ಲಿ ಓದುವಿಕೆ ಸಹಿತ ಇತರ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕನ್ನಡ ಸಾಹಿತಿ ವಿರಾಜ್ ಅಡೂರು ಮಾತನಾಡಿ “ಕಲಾವಿದರಿಗೆ ಹಾಗೂ ಸಾಹಿತಿಗಳಿಗೆ ಮಾನಸಿಕ ದೃಢತೆ ಹೆಚ್ಚು. ಸಮಸ್ಯೆಯನ್ನು ಧೈರ್ಯದಿಂದ ಎದುರಿಸಿ ಪರಿಹಾರ ಕಂಡುಕೊಳ್ಳುವ ಜಾಣ್ಮೆ ಅವರಿಗೆ ಇದೆ. ಶೈಕ್ಷಣಿಕ ಬದುಕಿನಲ್ಲಿ ವಿದ್ಯಾರ್ಥಿಗಳು ವಿಚಾರಗಳ ಕ್ರೋಢೀಕರಣ ಮಾಡಬೇಕು.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ…

Read More

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ದಿನಾಂಕ 20-01-2024ರಂದು ಯುವಗಾಯಕಿ ಸೂರ್ಯಗಾಯತ್ರಿ ಹಾಗೂ ತಂಡದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ‘ದಶಾಂಬಿಕೋತ್ಸವ’ ಪ್ರಯುಕ್ತ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಸಹಸ್ರಾರು ಜನ ಸಂಗೀತಾಸಕ್ತರು ಭಾಗಿಯಾಗಿ ರಸಾನುಭೂತಿಯನ್ನು ಆಸ್ವಾದಿಸಿದರು. ಪುತ್ತೂರಿಗೆ ಮೊಟ್ಟಮೊದಲ ಬಾರಿಗೆ ಆಗಮಿಸಿದ್ದ ಸೂರ್ಯಗಾಯತ್ರಿ ಅಂಬಿಕಾ ಸಂಸ್ಥೆಯಲ್ಲಿ ತನ್ನ ಹಾಡನ್ನು ಆರಂಭಿಸುವಾಗ ತನ್ನ ತಾಯಿ ರಚಿಸಿದ ಗಣಪತಿ ಸ್ತುತಿ ‘ಅಂಬಿಕಾ ಹೃದಯಾನಂದ ಮಾತೃಭಿ ಪರಿಪೂಜಿತಂ’ ಹಾಡಿನೊಂದಿಗೆ ಆರಂಭಿಸಿ ನೆರೆದವರ ಮನಸೂರೆಗೈದರು. ಸೂರ್ಯಗಾಯತ್ರಿಗೆ ಎಳೆಯ ವಯಸ್ಸಿನಲ್ಲಿಯೇ ಸಾಕಷ್ಟು ಖ್ಯಾತಿ ತಂದುಕೊಟ್ಟಿದ್ದ ಹನುಮಾನ್ ಚಾಲೀಸಾ ಹಾಡನ್ನು ಹಾಡಿ ಇಡಿಯ ಸಭೆ ತನ್ನೊಂದಿಗೆ ಹಾಡುವಂತೆ ಪ್ರೇರೇಪಿಸಿದರು. ‘ಜಯ ಹನುಮಾನ್ ಜ್ಞಾನಗುಣ ಸಾಗರ’ ಸಾಲುಗಳು ಸೂರ್ಯಗಾಯತ್ರಿ ಕಂಠದಿಂದ ಹೊರಹೊಮ್ಮುತ್ತಿದ್ದಂತೆ ಇಡಿಯ ಸಭೆ ಕರತಾಡನದ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು. ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ…

Read More