Author: roovari

ಬಂಟ್ವಾಳ: ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್  ಬಂಟ್ವಾಳ ಘಟಕ ಇದರ ಆಶ್ರಯದಲ್ಲಿ ಏರ್ಯ ಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ ಕಾರ್ಯಕ್ರಮವು 28 ಜುಲೈ2024ರ ಭಾನುವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ “ಸಾಹಿತಿ ದಿವಂಗತ ಏರ್ಯ ಲಕ್ಷ್ಮೀನಾರಾಯಣ ಆಳ್ವರು ಎಂದಿಗೂ ತಮ್ಮ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ ಅಂಟಿಸಿ ಕೊಂಡವರಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದುಕೊಂಡರೂ ಕಳಂಕ ರಹಿತವಾಗಿ ಬದುಕಿರುವುದು ಅವರ ಯೋಗ್ಯತೆಗೆ ಸಂದ ಗೌರವ. ಇಂತಹ ಸಾಹಿತ್ಯಿಕ ವಾತವರಣವನ್ನು ಕಲ್ಪಿಸಿಕೊಟ್ಟಾಗ ಯುವ ಸಮುದಾಯ ಉತ್ತಮ ದಾರಿಯಲ್ಲಿ ಸಾಗಲು ಸಾಧ್ಯವಿದೆ.” ಎಂದರು.  ಏರ್ಯ ಬೀಡುವಿನ ಆನಂದಿ ಎಲ್. ಆಳ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಏರ್ಯ ಬೀಡುವಿನ ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಏರ್ಯ ಬೀಡುವಿನ ರಾಜರಾಂ ರೈ, ಬಂಟ್ವಾಳ ತಾಲೂಕು ಕ. ಸಾ. ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್…

Read More

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ವಿಭಾಗ ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮವು 28 ಜುಲೈ2024ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ. ಕ. ಜಿಲ್ಲಾ ಘಟಕದ ಚೇರ್ಮನ್ ಆದ ಸಿ. ಎ. ಶಾಂತಾರಾಮ ಶೆಟ್ಟಿ ಮಾತನಾಡಿ “ಸಾಹಿತ್ಯ ಮತ್ತು ಕನ್ನಡ ಭಾಷೆಯಿಂದ ಇಂದು ನಮ್ಮ ಮಕ್ಕಳು ವಿಮುಖರಾಗುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸಿದರೆ ಮಾತ್ರ ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿ ಉಳಿಯಲು ಸಾಧ್ಯ.” ಎಂದು ಅಭಿಪ್ರಾಯಪಟ್ಟರು. ಅ. ಭಾ. ಸಾ. ಪ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ಡಾ. ಮಾಧವ ಎಂ. ಕೆ., ಸುರೇಶ ಪರ್ಕಳ ಇವರು ಸಾಹಿತ್ಯ ಹಾಗೂ ಸಂಘಟನೆಯ ಕುರಿತು ಉಪನ್ಯಾಸ ನೀಡಿದರು. ಅ. ಭಾ. ಸಾ. ಪ. ರಾಜ್ಯ ಕಾರ್ಯದರ್ಶಿ ಶೈಲೇಶ್ ಕುಲಾಲ್, ವಿಭಾಗ ಸಂಯೋಜಕ ಸುಂದರ ಶೆಟ್ಟಿ, ಉಡುಪಿ…

Read More

ಪೆರ್ಲ : ಸಾಹಿತ್ಯಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇದರ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಸಹಕಾರದೊಂದಿಗೆ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ರಂಗ ಸಂಸ್ಕೃತಿ’ ಕಾರ್ಯಾಗಾರವನ್ನು ದಿನಾಂಕ 2 ಆಗಸ್ಟ್ 2024ರಂದು ಬೆಳಗ್ಗೆ 9-30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪೆರ್ಲದ ನಾಲಂದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶಂಕರ ಖಂಡಿಗೆ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ಕಿರುಕೈಗಾರಿಕಾ ಸಂಘ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಜಾರಾಮ್ ಪೆರ್ಲ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಂಗಚಿನ್ನಾರಿ ನಿರ್ದೇಶಕರಾದ ಶ್ರೀ ಕೆ. ಸತೀಶ್ಚಂದ್ರ ಭಂಡಾರಿ ಕೋಳಾರಿ ಇವರ ಗೌರವ ಉಪಸ್ಥಿತಿಯಲ್ಲಿ ಖ್ಯಾತ ವೈದ್ಯರಾದ ಡಾ. ಶ್ರೀಪತಿ ಕಜಂಪಾಡಿ ಇವರು ಸಮಾರೋಪ ಮಾತುಗಳನ್ನಾಡಲಿದ್ದಾರೆ.

Read More

ಕಾಸರಗೋಡು : ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವ ‘ಸಿರಿಬಾಗಿಲು ಯಕ್ಷವೈಭವ’ವು ದಿನಾಂಕ 20 ಜುಲೈ 2024ರಂದು ಸಂಪನ್ನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮತ್ತು ಉಪ್ಪಳ ಕೊಂಡೆಯೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಯಶಸ್ವಿಯಾಗಿ ನಡೆಯಿತು. “ಸಿರಿಬಾಗಿಲಿನಲ್ಲಿ ನಡೆದ ‘ಸಿರಿಬಾಗಿಲು ಯಕ್ಷವೈಭವ’ ಯಕ್ಷಲೋಕವೇ ಅಚ್ಚರಿಗೊಳ್ಳುವಂತೆ 25 ತಂಡಗಳು ಭಾಗವಹಿಸಿದ್ದು, ಕಾಸರಗೋಡಿನ ಚರಿತ್ರೆಯಲ್ಲಿ ಪ್ರಥಮ. ಈ ಹಿಂದೆ ಹಲವು ಕಡೆಗಳಲ್ಲಿ ಸೀಮಿತ ತಂಡಗಳ ಯಕ್ಷಗಾನ ಸ್ಪರ್ಧೆ ನಡೆದಿರುತ್ತದೆ. ಆದರೆ ಇದು ಸ್ಪರ್ಧೆಯಲ್ಲ. ಅಲ್ಲದೆ ಹವ್ಯಾಸಿ ವಲಯದ ಕಲಾವಿದರು, ಯಕ್ಷಗಾನ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿದ ಪ್ರತಿಷ್ಠಾನದ ಯೋಜನೆ, ನಿಜವಾಗಿ ಮೆಚ್ಚುವಂಥದ್ದು, ಈ ಪ್ರತಿಷ್ಠಾನ ಇನ್ನೂ ಮುಂದೆ ಇಂತಹ ಚಟುವಟಿಕೆ ನಡೆಸಿ ಯಕ್ಷಗಾನ ಬೆಳೆದು ಲೋಕ ಪ್ರಸಿದ್ಧಿ ಪಡೆದು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ” ಎಂದು ಎಡನೀರು…

Read More

ಕೊಪ್ಪಳ :ಶಕ್ತಿ ಶಾರದೆಯ ಮೇಳ ಭಾಗ್ಯನಗರ ಸಂಸ್ಥೆಯು ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ, ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ.) ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಿದ ಡಾ. ಸತ್ಯಾನಂದ ಪಾತ್ರೋಟ ಇವರ ಆತ್ಮಕಥನ ‘ಜಾಲಿ ಮರದಲ್ಲೊಂದು ಜಾಜಿ ಮಲ್ಲಿಗೆ’ ಕೃತಿಯ ಲೋಕಾರ್ಪಣಾ ಸಮಾರಂಭವು 28 ಜುಲೈ 2024ರಂದು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಡಿ. ಎಂ. ಬಡಿಗೇರ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕವಿಗಳಾದ ಶ್ರೀಮತಿ ಮಾಲಾ ಬಡಿಗೇರ ಕೃತಿ ಲೋಕಾರ್ಪಣೆ ಗೊಳಿಸಿದರು. ಹುಬ್ಬಳ್ಳಿ ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವೈ. ಎಂ. ಭಜಂತ್ರಿ ಕೃತಿ ಕುರಿತು ಮಾತನಾಡಿದರು. ಕವಿ ನುಡಿಯನ್ನು ಡಾ. ಸತ್ಯಾನಂದ ಪಾತ್ರೋಟ ನಡೆಸಿಕೊಟ್ಟರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿಗಳಾದ ಎ. ಎಂ. ಮದರಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಡಾ. ಪಾತ್ರೋಟ್ ಅವರಿಗೆ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ವಿಶೇಷ ಪ್ರೀತಿ-ವಿಶ್ವಾಸದಿಂದ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಅಂಚೆ…

Read More

ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಮತ್ತು ಕ.ಸಾ.ಪ. ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ಮುಂಗಾರು ಕವಿಗೋಷ್ಠಿ 2024 ‘ವರ್ಷ ವೈಭವ’ವನ್ನು ದಿನಾಂಕ 3 ಆಗಸ್ಟ್ 2024ರಂದು ಅಪರಾಹ್ನ 2-00 ಗಂಟೆಗೆ ಸುಳ್ಯ ಅಂಬೆಟಡ್ಕದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕ.ಸಾ.ಪ. ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಇವರ ಅಧ್ಯಕ್ಷತೆಯಲ್ಲಿ ಸಾಹಿತಿಗಳಾದ ಶ್ರೀ ಕುಮಾರಸ್ವಾಮಿ ತೆಕ್ಕುಂಜ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸುಳ್ಯದ ಎನ್.ಎಂ.ಸಿ. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಸಂಜೀವ ಕುದ್ಪಾಜೆ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆ ಇದರ ‘ಸಿನ್ಸ್ 1999 ಶ್ವೇತಯಾನ-47’ ಕಾರ್ಯಕ್ರಮದ ಅಂಗವಾಗಿ ಗುರುಪರಂಪರಾ ಸಂಗೀತ ಸಭಾ ಕುಂದಾಪುರ ಇದರ 8ನೇ ವರ್ಷದ ‘ಗುರುಪೂರ್ಣಿಮಾ ಸಂಗೀತೋಪಾಸನಾ’ ಕಾರ್ಯಕ್ರಮ 28 ಜುಲೈ2024 ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗುರು ದಂಪತಿಗಳಾದ ಸತೀಶ್ ಭಟ್ ಮಾಳಕೊಪ್ಪ ಹಾಗೂ ಪ್ರತಿಮಾ ಭಟ್ ಇವರನ್ನು ಗೌರವಿಸಿದ ಯಕ್ಷಗಾನದ ಪ್ರಸಿದ್ಧ ಕಲಾವಿದರಾದ ಕೊಂಡದಕುಳಿ ರಾಮಚಂದ್ರ ಹೆಗಡೆ ಮಾತನ್ನಾಡಿ “ನಮ್ಮ ದೇಶದ ಮಣ್ಣಿನ ವಿಶಿಷ್ಟ ಪರಂಪರೆ ಎಂದರೆ ಗುರುವನ್ನು ಗೌರವಿಸುವ ಶಿಷ್ಟ ಪರಂಪರೆ. ಗುರುವಿನಿಂದ ಉಪಕೃತರಾದಾಗ ಅವರಿಗೆ ಕೃತಜ್ಞತಾ ಪೂರ್ವಕವಾಗಿ ಗೌರವವನ್ನು ಸಲ್ಲಿಸಲೇ ಬೇಕು. ಇದು ಸನಾತನ ಸಂಸ್ಕೃತಿ. ಭೂಮಿ ಪೂಜೆಯೋ, ದೇವರ ಪೂಜೆಯೋ, ಗುರುಪೂಜೆಯೋ, ಗೋಪೂಜೆಯೋ, ಆಯುಧ ಪೂಜೆಯೋ ಹೀಗೆ ಹಲವಾರು ವಿಧದ ಪೂಜೆ ಯಾಕೆಂದರೆ ಅದು ಕೃತಜ್ಞತಾ ಆಂತರಂಗಿಕ ಭಾವ. ಪ್ರಪಂಚದಲ್ಲಿ ಮೊದಲು ಹುಟ್ಟಿದ್ದೇ ಓಂಕಾರನಾದ. ಪ್ರಪಂಚದ ಸರ್ವವೂ ನಾದಕ್ಕೆ ಸೋಲುತ್ತದೆ. ಮಾತೃ ಸ್ಥಾನದಲ್ಲಿ ಸಂಗೀತ ನಿಲ್ಲುತ್ತದೆ. ಸಂಗೀತವೇ ಪ್ರಪಂಚದಲ್ಲಿ ಮೊದಲು ಹುಟ್ಟಿದ್ದು. ಸಂಗೀತ,…

Read More

ಚೊಕ್ಕಾಡಿ : ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ ಮತ್ತು ಜೇಸಿಐ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನ ಸಮಾರಂಭ ಮತ್ತು ‘ಅಕ್ಷರ ತೇರಿನ ಸಾರಥಿ’ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 04 ಆಗಸ್ಟ್ 2024ರಂದು ಅಪರಾಹ್ನ 2-30 ಗಂಟೆಗೆ ಚೊಕ್ಕಾಡಿ ಶ್ರೀ ರಾಮ ದೇವಾಲಯದ ‘ದೇಸೀ ಭವನ’ದಲ್ಲಿ ಹಮ್ಮಿಕೊಳ್ಳಲಾಗಿದೆ. ಅಭಿನಂದನ ಸಮಿತಿಯ ಅಧ್ಯಕ್ಷರಾದ ಶ್ರೀ ಆನೆಕಾರ ಗಣಪಯ್ಯ ಇವರ ಅಧ್ಯಕ್ಷತೆಯಲ್ಲಿ ಖ್ಯಾತ ಸಾಹಿತಿಗಳಾದ ಶ್ರೀ ಸುಬ್ರಾಯ ಚೊಕ್ಕಾಡಿಯವರು ಅಭಿನಂದನ ಗ್ರಂಥ ಬಿಡುಗಡೆ ಮಾಡಲಿರುವರು. ಲೇಖಕರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರು ಅಭಿನಂದನಾ ಭಾಷಣ ಮಾಡಲಿದ್ದು, ಕ.ಸಾ.ಪ. ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಮತ್ತು ಜೇಸಿಐ ಬೆಳ್ಳಾರೆ ಇದರ ಅಧ್ಯಕ್ಷರಾದ ಶ್ರೀ ಜಗದೀಶ್ ರೈ ಪೆರುವಾಜೆ ಇವರು ಉಪಸ್ಥಿತರಿರುವರು.

Read More

ಮೈಸೂರು : ಕುವೆಂಪುನಗರದ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ‘ಧ್ವನಿ ಫೌಂಡೇಶನ್’ ಆಯೋಜಿಸಿದ್ದ ಸರೋದ್ ವಾದಕ ದಿ. ರಾಜೀವ ತಾರಾನಾಥ ಹಾಗೂ ರಂಗಕರ್ಮಿ ದಿ. ನ. ರತ್ನ ಗೌರವ ಸ್ಮರಣೆ ಕಾರ್ಯಕ್ರಮವನ್ನು ದಿನಾಂಕ 24 ಜುಲೈ 2024ರಂದು ಗಾಯಕಿ ಎಚ್.ಆರ್. ಲೀಲಾವತಿ ಉದ್ಘಾಟಿಸಿದರು. ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ “ಪಂಡಿತ್ ರಾಜೀವ್ ತಾರಾನಾಥ, ನ.ರತ್ನ ನಾಡಿನ ಪ್ರತಿಭಾವಂತರು, ಕನ್ನಡ ಬೌದ್ಧಿಕ ಲೋಕಕ್ಕೆ ಇಬ್ಬರು ಮಹನೀಯರ ಕೊಡುಗೆ ಅನನ್ಯ. ಕನ್ನಡ ಇತಿಹಾಸದಲ್ಲಿ ಉಳಿಯುವ ಶಾಶ್ವತ ಮೌಲ್ಯಗಳಾಗಿದ್ದಾರೆ. ವಾಚಿಕಾಭಿನಯದಲ್ಲಿ ಮೈಸೂರಿನ ಕಲಾವಿದರನ್ನು ಮೀರಿಸಲು ಕರ್ನಾಟಕದ ಇತರೆಡೆಯ ಕಲಾವಿದರಿಗೆ ಆಗುವುದಿಲ್ಲ. ಅದು ನ. ರತ್ನ ಅವರು ಮೈಸೂರು ಭಾಗದವರಿಗೆ ನೀಡಿದ ಬಳುವಳಿ. ಬೆಂಗಳೂರಿನ ನಾಟಕಗಳು ಕ್ರಿಯಾ ಪ್ರಧಾನವಾಗಿದ್ದರೆ, ಮೈಸೂರು ರಂಗತಂಡಗಳು ಆಡುವ ನಾಟಕಗಳು ವಾಚಿಕ ಪ್ರಧಾನವಾಗಿವೆ. ವಾಚಿಕ ಪ್ರಧಾನ ನಾಟಕವನ್ನು ಕನ್ನಡಕ್ಕೆ ಕೊಟ್ಟವರು ನ. ರತ್ನ ಅವರ ‘ಸಮತೆಂತೋ’ (ಸರಸ್ವತಿಪುರಂ ಮಧ್ಯದ ತೆಂಗಿನ ತೋಪು) ರಂಗತಂಡವಾಗಿದೆ.…

Read More

ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ 135ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ‘ಸಿರಿಗನ್ನಡಂ ಗೆಲ್ಗೆ ರಾ. ಹ. ದೇಶಪಾಂಡೆ’ ಪ್ರಶಸ್ತಿ ಎಂದೇ ಪ್ರಸಿದ್ಧವಾಗಿರುವ ‘ಸಿರಿಗನ್ನಡಂ ಗೆಲ್ಗೆ ರಾಮಚಂದ್ರ ಹಣಮಂತ ರಾವ ದೇಶಪಾಂಡೆ ಪ್ರಶಸ್ತಿ’ ಪ್ರದಾನ ಸಮಾರಂಭವು 27 ಜುಲೈ2024ರಂದು ಧಾರವಾಡದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯಿತು. ಪ್ರಸಕ್ತ ಸಾಲಿನ ಪ್ರಶಸ್ತಿ ಸ್ವೀಕರಿಸಿದ ಡಾ. ನಾ. ಮೊಗಸಾಲೆ ಮಾತನಾಡಿ “ಕರ್ನಾಟಕ ವಿದ್ಯಾವರ್ಧಕ ಸಂಘ ರಾಜ್ಯದ ಎಲ್ಲಾ ಸಂಸ್ಥೆಗಳಿಗೆ ತವರು ಮನೆ. ಸಂಘ ಸ್ಥಾಪನೆ ಮಾಡಿದ ರಾ. ಹ. ದೇಶಪಾಂಡೆಯವರ ಕಾರ್ಯ ಮಾದರಿಯಾಗಿದೆ. ಡಾ. ಪಾಟೀಲ ಪುಟ್ಟಪ್ಪ ಹಾಗೂ ಹಾ. ಮಾ. ನಾಯಕ ಮಾತನಾಡಿದರೆ ಸರಕಾರ ಎಚ್ಚೆತ್ತುಕೊಳ್ಳುತ್ತಿತ್ತು. ಕನ್ನಡ ಶಾಲೆಗಳನ್ನು ಉಳಿಸುವ ಕೆಲಸವನ್ನು ಸರಕಾರಗಳು ಮಾಡಬೇಕು. ಕಾಸರಗೋಡಿನ ಜನತೆಯ ಬಗ್ಗೆ ಪಾಟೀಲ ಪುಟ್ಟಪ್ಪನವರಿಗೆ ವಿಶೇಷ ಕಾಳಜಿ ಇತ್ತು. ಕರಾವಳಿ ಭಾಗದಲ್ಲಿ ಕನ್ನಡ ರಕ್ಷಣೆ ಮಾಡುವ ಕೆಲಸವನ್ನು ನನ್ನ ಉಸಿರು ಇರುವ ತನಕ ಮಾಡುತ್ತೇನೆ. ಕನ್ನಡ ನಾಡು- ನುಡಿ ರಕ್ಷಣೆಗೆ…

Read More