Author: roovari

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 25-03-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಚೈತ್ರಾ ರಾವ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಪ್ರತಿಭಾನ್ವಿತ ಕಲಾವಿದೆ ಚೈತ್ರಾ ರಾವ್ ಅವರು ಬೆಂಗಳೂರಿನ ಆಚಾರ್ಯ ಶ್ರೀಮತಿ ಇಂದಿರಾ ಕಡಂಬಿ ಅವರ ಶಿಷ್ಯೆ. ಚೈತ್ರಾ ಅವರು ತಮ್ಮ ಎಂಟನೆ ವಯಸ್ಸಿನಲ್ಲಿ ಗುರುಗಳಾದ ಯಶಾ ರಾಮಕೃಷ್ಣರವರಿಂದ ನೃತ್ಯ ಪ್ರಾರಂಭಿಸಿ ಮುಂದೆ ಶ್ರೀಮತಿ ಚೇತನಾ ರಾಧಾಕೃಷ್ಣ ಅವರ ಮಾರ್ಗದರ್ಶನದಲ್ಲಿ ನೃತ್ಯದಲ್ಲಿ ತಮ್ಮ ಪ್ರವೃತ್ತಿಯನ್ನು ಮುಂದುವರೆಸಿದರು. ಅವರು ದೇಶಾದ್ಯಂತ ಹಲವಾರು ಭಾಗಗಳಲ್ಲಿ ಅನೇಕ ಏಕವ್ಯಕ್ತಿ ಮತ್ತು ಗುಂಪು ಪ್ರದರ್ಶನಗಳನ್ನು ನೀಡಿದ್ದು, ಶ್ರೀ ಬೆಲ್ರಾಜ್ ಸೋನಿ ಅವರ ಬಳಿ ಕಳರಿಪಯಟ್ಟು ತರಬೇತಿ ಪಡೆಯುತ್ತಿದ್ದಾರೆ. ಬೆಂಗಳೂರಿನ ಆಲಯ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್…

Read More

ಬೆಂಗಳೂರು :  ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ ವತಿಯಿಂದ ‘ಚಿಣ್ಣರ ಡ್ರಾಮಾ ಕ್ಯಾಂಪ್’ ದಿನಾಂಕ 15-04-2024ರಿಂದ 01-05-2024ರವರಗೆ ಬೆಳಿಗ್ಗೆ ಗಂಟೆ 10-00ರಿಂದ 1-00ರವರೆಗೆ ದುಬಾಸಿಪಾಳ್ಯ ರಸ್ತೆಯ 4ನೇ ಅಡ್ಡ ರಸ್ತೆ, ರಾಮಜ್ಯೋತಿ ನಗರ, ನಂ.89, ರಂಗ ಸೌಧ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮಕ್ಕಳ ಬೇಸಿಗೆ ಶಿಬಿರವನ್ನು ಹೆಸರಾಂತ ರಂಗ ನಿರ್ದೇಶಕರಾದ ಮಾಲತೇಶ ಬಡಿಗೇರ ಮತ್ತು ಛಾಯಾ ಭಾರ್ಗವಿ ಇವರುಗಳು ನಡೆಸಿಕೊಡಲಿದ್ದಾರೆ. ಈ ಶಿಬಿರದಲ್ಲಿ ಹಾಡು, ರಂಗಾಟಗಳು, ನೃತ್ಯ, ಡ್ರಾಯಿಂಗ್, ಮುಖವಾಡ ತಯಾರಿಕೆ, ಕ್ರಾಫ್ಟ್ ಹಾಗೂ ಮಕ್ಕಳಿಂದ ನಾಟಕ ಪ್ರದರ್ಶನಗಳನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7259350865, 9611124454 ಮತ್ತು 9880142532

Read More

ಮಣಿಪಾಲ : ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ ನ ಆಶ್ರಯದಲ್ಲಿ “ನೃತ್ಯ ಮತ್ತು ಶಾಂತಿ – ಕಲಾವಿದೆ ಮತ್ತು ಮನೋವೈದ್ಯೆಯ ಒಳನೋಟ” ಎಂಬ ವಿಷಯದ ಕುರಿತು ಉಪನ್ಯಾಸ-ನೃತ್ಯ ಪ್ರದರ್ಶನ ಕಾರ್ಯಕ್ರಮವು ದಿನಾಂಕ 09-03-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಖ್ಯಾತ ಮನೋವೈದ್ಯೆ, ನೃತ್ಯ ಕಲಾವಿದೆ ಹಾಗೂ ಲೇಖಕಿಯಾದ ಡಾ.ಕೆ.ಎಸ್.ಪವಿತ್ರಾ ಮಾತನಾಡಿ “ನೃತ್ಯ ಕಲೆಯಿಂದ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿ ಮನಃಶಾಂತಿಗೆ ಕಾರಣವಾಗಲು ಸಾಧ್ಯವಾಗುತ್ತದೆ. ಆದಾಗ್ಯೂ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕೇವಲ ನೃತ್ಯ ಪ್ರಕಾರದ ಸರಳವಾದ ಮತ್ತು ಯಾಂತ್ರಿಕ ಅನ್ವಯಿಕೆಯನ್ನು ಮಾಡಬಾರದು. ನೃತ್ಯವು ಶಾಂತಿಯ ಮಾಧ್ಯಮವಾಗಬಹುದು, ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಬಹುದು, ಸ್ವಾತಂತ್ರ‍್ಯದ ಅನುಭೂತಿಯನ್ನೂ ಉಂಟುಮಾಡಬಹುದು.” ಎಂದು ತಿಳಿಸಿದರು. ತಾತ್ವಿಕ ಸಾಹಿತ್ಯದ ಚೌಕಟ್ಟನ್ನು ತೆಗೆದುಕೊಂಡು, ಅನ್ನಮಯ, ಆನಂದಮಯ, ಪ್ರಾಣಮಯ, ಮನೋಮಯ ಮತ್ತು ವಿಜ್ಞಾನಮಯ ಕೋಶಗಳ ನಡುವೆ ನೃತ್ಯ ಹೇಗೆ ಆನಂದಕ್ಕೆ ಕಾರಣವಾಗಬಲ್ಲವು ಎಂಬುದನ್ನು ವಿವರಿಸಿದರು. ದ.ರಾ.ಬೇಂದ್ರೆ, ವೈದೇಹಿ, ಕನಕದಾಸರು, ಆದಿಕವಿ ಪಂಪ ಅವರ ಆಯ್ದ ಕಾವ್ಯಕ್ಕೆ…

Read More

ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮವು ದಿನಾಂಕ 20-03-2024ರಂದು ಗೋವಿಂದ ದಾಸ ಕಾಲೇಜಿನ ಗ್ರಂಥಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಂತಿಮ ಬಿ. ಬಿ. ಎ. ವಿದ್ಯಾರ್ಥಿನಿ ಪೂರ್ವಿ ಅಶೋಕ ಕುಮಾರ ಇವರು ಖಾಲಿದ್ ಹುಸೇನಿ ಬರೆದ ‘ದಿ ಕೈಟ್ ರನ್ನರ್’ ಎಂಬ ಪುಸ್ತಕವನ್ನು ಪರಿಚಯಿಸಿ “ಸಾಮಾಜಿಕ ಸ್ಥಿತ್ಯಂತರಗಳ ನಡುವೆ ಮಾನವೀಯ ಸಂಬಂಧಗಳ ಚರ್ಚೆಯನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ.” ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿಯವರು, ಪೂರ್ವಿ ಅಶೋಕ ಕುಮಾರ ಇವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ಪ್ರಾಧ್ಯಾಪಕರುಗಳಾದ ಡಾ. ಆಶಾಲತಾ ಪಿ., ಡಾ. ಸಂತೋಷ ಆಳ್ವ, ಪುನೀತಾ, ಶಿಲ್ಪಾರಾಣಿ, ಪ್ರತಿಕ್ಷಾ, ದಯಾ ಸುವರ್ಣ, ಗ್ರಂಥಪಾಲಕಿ ಡಾ. ಸುಜಾತಾ ಬಿ., ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಂತಿಮ ಬಿ. ಬಿ. ಎ. ವಿದ್ಯಾರ್ಥಿನಿ ರಿಯಾ ಸ್ವಾಗತಿಸಿದರು.

Read More

ಕಾರ್ಕಳ : ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ‘ಕ್ರಿಯೇಟಿವ್‌ ನಿನಾದ ಸಂಚಿಕೆ-6’ ಬಿಡುಗಡೆ ಕಾರ್ಯಕ್ರಮವು ದಿನಾಂಕ 16-03-2024 ರಂದು ನಡೆಯಿತು. ಸಂಚಿಕೆ-6ನ್ನು ಬಿಡುಗಡೆಗೊಳಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ “ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರ ಬೆಳೆಯಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯದ ಅಧ್ಯಯನ ನಡೆಸಬೇಕು. ಹಿರಿಯರ ಜೀವನ ದರ್ಶನವನ್ನು ಅನುಸರಿಸಬೇಕು. ಆಗ ಬದುಕಿನ ಹೊಸತನಗಳು ತೆರೆದುಕೊಳ್ಳುತ್ತವೆ. ಜೀವನವನ್ನು ಧೈರ್ಯದಿಂದ ಎದುರಿಸುವ ದೃಢತೆ ನಮ್ಮಲ್ಲಿ ಉಂಟಾಗುತ್ತದೆ. ಶಿಕ್ಷಣವಂತ ಸಮಾಜವು ದೇಶದ ಉನ್ನತಿಗೆ ಕಾರಣೀಕರ್ತವಾಗುತ್ತದೆ. ಯುವ ಸಮುದಾಯ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು.” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯ ಶ್ರೀ ಎಸ್‌. ಭೋಜೆಗೌಡ ಮಾತನಾಡಿ “ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಿಕ್ಷಣದ ಪಠ್ಯಕ್ರಮ ರಚನೆಯಾಗಿ ಮೌಲ್ಯಗಳನ್ನು ಅಳವಡಿಸುವಂತಾಗಲಿ.” ಎಂದು ಆಶಿಸಿದರು. ಕಾರ್ಯಕ್ರಮಾದಲ್ಲಿ ಕ. ಸಾ. ಪ. ದ ವಿವಿಧ ಪದಾಧಿಕಾರಿಗಳು, ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್.‌…

Read More

ದಿನಾಂಕ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಹಯೋಗದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಸಂಸ್ಮರಣೆ ಹಾಗೂ ‘ಕನಕ ಚಿಂತನ ವಿಸ್ತರಣ-1’ ಉಪನ್ಯಾಸ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 23-03-2024ರ ಬೆಳಿಗ್ಗೆ ಘಂಟೆ 10.೦೦ರಿಂದ ಉಡುಪಿಯ ಎಂ. ಜಿ. ಎಂ. ಕಾಲೇಜಿನ ಆವರಣದಲ್ಲಿರುವ ಧನ್ಯಾಲೋಕ (ಆರ್. ಆರ್. ಸಿ.) ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಪಿ ವಿ. ವಿ. ಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ವಿ. ನಾವಡ ವಹಿಸಲಿದ್ದು, ವಿಶ್ರಾಂತ ಕುಲಪತಿಗಳು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ. ಬಿ. ಎ. ವಿವೇಕ ರೈ ಕೃತಿ ಅನಾವರಣಗೊಳಿಸಲಿರುವರು. ನಂತರ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ. ಪುಂಡಿಕಾಯಿ ಗಣಪತಿ ಭಟ್ ಮೂಡಬಿದಿರೆ ಹಾಗೂ ನಿವೃತ್ತ ಪ್ರಾಚಾರ್ಯರಾದ ಡಾ. ಶಿವಾಜಿ ಜೋಯಿಸ್ ಮೈಸೂರು ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2024’ ದಿನಾಂಕ 26-03-2024ರಂದು ಸಂಜೆ ಗಂಟೆ 4:00ಕ್ಕೆ ಗೀತಾಂಜಲಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ನಾಟಕ ಸಾಹಿತ್ಯ ಕ್ಷೇತ್ರದ ಪ್ರೊ. ಆರ್.ಎಲ್. ಭಟ್, ರಂಗ ನಿರ್ದೇಶಕರಾದ ಕೆ.ವಿ. ರಾಘವೇಂದ್ರ ಐತಾಳ್, ರಂಗ ಸಂಘಟಕರಾದ ಕಜೆ ರಾಮಚಂದ್ರ ಭಟ್, ರಂಗ ನಿರ್ದೇಶಕರಾದ ಎಸ್.ವಿ. ರಮೇಶ್ ಬೇಗಾರ್ ಮತ್ತು ರಂಗ ನಟಿ ಸುಜಾತ ಶೆಟ್ಟಿ ರಂಗ ಸಾಧಕರಿಗೆ ಗೌರವ ಪುರಸ್ಕಾರ ಮಾಡಲಾಗುವುದು. ಡಿಡಿ ನ್ಯಾಷನಲ್ ‘ಭಾರತ್ ಕಾ ಅಮೃತ್ ಕಲಷ್’ ಇದರ ರಿಯಾಲಿಟಿ ಶೋ ಸ್ಪರ್ಧಾಳು ಹೊನ್ನಾವರದ ಕುಮಾರಿ ಅಖಿಲ ಹೆಗಡೆ ಇವರು ರಂಗ ಗೀತೆಯನ್ನು ಪ್ರಸ್ತುತ ಪಡಿಸಲಿದ್ದಾರೆ.

Read More

ಮಂಗಳೂರು : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಮಂಗಳೂರು ಇಲ್ಲಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ಸಹಭಾಗಿತ್ವದಲ್ಲಿ ‘ಗಡಿನಾಡ ಸಾಹಿತ್ಯ ದಿಂಡಿಮ-2024’ ಕಾರ್ಯಕ್ರಮವು ದಿನಾಂಕ 14-03-2024ರಂದು ಸಾನಿಧ್ಯ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಲಕ್ಷ್ಮೀ ವಿ. ಭಟ್ ಮಂಜೇಶ್ವರ ರಚಿತ ‘ಅಷ್ಟ ದ್ರವ್ಯ’ ಹಾಗೂ ‘ಝೇಂಕಾರ’ ಕೃತಿಗಳು ಲೋಕಾರ್ಪಣೆಗೊಂಡವು. ಡಾ. ಧನಂಜಯ ಕುಂಬ್ಳೆ ‘ಅಷ್ಟ ದ್ರವ್ಯ’ ಕೃತಿಯನ್ನು ಲೋಕಾರ್ಪಣೆಗೈದು ಕೃತಿ ಅವಲೋಕನ ಮಾಡುತ್ತಾ, “ಈ ಕೃತಿಯು ಹೊಸ ಬರಹಗಾರರಿಗೆ ಮಾತ್ರವಲ್ಲದೆ ವಿಶ್ವವಿದ್ಯಾಲಯದ ಸಾಹಿತ್ಯಾಭ್ಯಾಸಿಗಳಿಗೆ ಒಂದು ಉತ್ತಮ ಕೈಪಿಡಿಯಾಗಿದೆ. ಈ ಕೃತಿಯೇ ಒಂದು ಪಠ್ಯಪುಸ್ತಕವಿದ್ದಂತೆ” ಎಂದು ನುಡಿದರು. ಗಡಿನಾಡ ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕದ ಅಧ್ಯಕ್ಷರಾದ ಡಾಕ್ಟರ್ ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿಯವರು ‘ಝೇಂಕಾರ’ ಕೃತಿಯನ್ನು ಲೋಕಾರ್ಪಣೆ ಮಾಡಿ, “ಸಾಹಿತ್ಯ ಕ್ಷೇತ್ರಕ್ಕೆ ಇದೊಂದು ಅತ್ಯಮೂಲ್ಯ ಕೊಡುಗೆ” ಎಂದು ಬಣ್ಣಿಸಿದರು. ಡಾ. ಮೀನಾಕ್ಷಿ ರಾಮಚಂದ್ರ ಇವರು ‘ಝೇಂಕಾರ’ ಕೃತಿ ಅವಲೋಕನ ಮಾಡಿ, “ತ್ರಿಪದಿಗಳು ಮಹಿಳೆಯರ ಗಾಯತ್ರಿ ಎಂಬುದು ಮತ್ತೊಮ್ಮೆ ಲಕ್ಷ್ಮೀಯ ಮೂಲಕ ಸಾಬೀತಾಯಿತು.…

Read More

ಕಾಂತಾವರ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕ ಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವಾಗ್ಮಿಗಳಾಗಿರುವ, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಸ್ಥಾಪಿಸಿರುವ ದತ್ತಿನಿಧಿಯ ವತಿಯಿಂದ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಸುರೇಶ್ ರಾವ್ ಅತ್ತೂರು ಮತ್ತು ಕೆ. ಶಾಮರಾಯ ಆಚಾರ್ಯ ಅವರ ದತ್ತಿನಿಧಿಯಿಂದ ನೀಡುವ ಶಿಲ್ಪಕಲಾ ಪ್ರಶಸ್ತಿಗೆ ‘ಶಿಲ್ಪಗುರು’ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಶ್ರೀ ಲೋಹಶಿಲ್ಪಿ ಪ್ರಕಾಶ್ ಆಚಾರ್ಯ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದೆ. ದಿನಾಂಕ 24-03-2024ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈಗಾಗಲೇ ಘೋಷಣೆಯಾಗಿರುವ 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ. ಎ. ಲಕ್ಷ್ಮಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಮೂಲಕ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ.  ಶ್ರೀ ಮುನಿರಾಜ ರೆಂಜಾಳ ಶ್ರೀ…

Read More

ಬೆಂಗಳೂರು : ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ರಂಗಚಂದಿರ ಟ್ರಸ್ಟ್ (ರಿ.) ಆಯೋಜಿಸಿರುವ ‘ವಿಶ್ವ ರಂಗಭೂಮಿ ದಿನಾಚರಣೆ’ಯು ದಿನಾಂಕ 27-03-2024ರಂದು ಸಂಜೆ 6.30ರಿಂದ ಬೆಂಗಳೂರಿನ ಎನ್.ಆರ್. ಕಾಲೋನಿಯ ಸಿ.ಅಶ್ವತ್ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಕರ್ನಾಟಕ ರಾಜ್ಯ ಸಮುದಾಯದ ರಂಗ ಸಂಘಟಕರು ಹಾಗೂ ಉಪಾಧ್ಯಕ್ಷರಾದ ಶ್ರೀ ಗುಂಡಣ್ಣ ಚಿಕ್ಕಮಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ನಾಟಕಕಾರರು ಹಾಗೂ ರಂಗ ನಿರ್ದೇಶಕರಾದ ಡಾ. ಬೇಲೂರು ರಘುನಂದನ್ ಇವರಿಗೆ ಅಭಿನಂದನೆ, ಭರತನಾಟ್ಯ ಕಲಾವಿದೆ ಕುಮಾರಿ ಚಿತ್ರಾ ರಾವ್ ಇವರಿಗೆ ರಂಗ ಗೌರವ ನಡೆಯಲಿದೆ. ರಂಗ ನಿರ್ದೇಶಕರಾದ ಶ್ರೀ ಶಶಿಧರ್ ಭಾರೀಘಾಟ್ ಇವರು ವಿಶ್ವ ರಂಗಭೂಮಿ ಸಂದೇಶ ಪ್ರಸ್ತುತ ಪಡಿಸುವರು. ಬೆಂಗಳೂರಿನ ರಂಗ ವಿಜಯ ತಂಡದವರು ರಂಗ ಗೀತೆ ಹಾಗೂ ಮೈಸೂರಿನ ನಟನ ತಂಡದವರು ಡಾ. ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ ನೀಡಲಿದ್ದಾರೆ.

Read More