Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು : ರಂಗಚಿನ್ನಾರಿ (ರಿ) ಇದರ ಸಂಗೀತ ಘಟಕ ಸ್ವರಚಿನ್ನಾರಿಯು ತನ್ನ ಎರಡನೇ ಸರಣಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 28-11-2023ನೇ ಮಂಗಳವಾರ ಸಂಜೆ 5 ಗಂಟೆಗೆ ಕರಂದಕ್ಕಾಡ್ ಪದ್ಮಗಿರಿ ಕಲಾ ಕುಟೀರದಲ್ಲಿ ‘ಕನಕ ಸ್ಮರಣೆ’ ಕನಕದಾಸರ ಗೀತೆಗಳ ಸಂಗೀತ ರಸಸಂಜೆ ಏರ್ಪಡಿಸಿತು. ಕಾರ್ಯಕ್ರಮವನ್ನು ಖ್ಯಾತ ವಯಲಿನಿಸ್ಟ್ ಶ್ರೀ ಪ್ರಭಾಕರ ಕುಂಜಾರು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ತಮ್ಮ ಹೃದಯಂತರಾಳದ ಶುಭ ಹಾರೈಕೆಗಳನ್ನು ನುಡಿದರು. ಮುಖ್ಯ ಅತಿಥಿಯಾಗಿ ದಾಸಸಾಹಿತ್ಯ ಪ್ರತಿಪಾದಕ ಮಧ್ವಾಧೀಶ ವಿಠ್ಠಲದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ಅವರು ಕನಕದಾಸರ ಹುಟ್ಟು, ಇತಿಹಾಸ, ಮತ್ತು ಅವರು ಬರೆದ ಸಾಹಿತ್ಯಗಳ ಹಿಂದೆ ಇದ್ದ ಅವರ ಜೀವನದ ಅನುಭವಗಳು ಮತ್ತು ಅದರ ಮೇಲಿನ ಭಕ್ತಿಯ ಬಗ್ಗೆ ಮಾತನಾಡಿದರು. ಸ್ವತಃ ಭಗವಂತನೇ ಪದಗಳಲ್ಲಿ ಕುಳಿತು ಬರೆಸಿದ ಸಾಹಿತ್ಯ ದಾಸಸಾಹಿತ್ಯ ಎಂದೂ ಅವರು ಹೇಳಿದರು. ಮತ್ತೊಬ್ಬ ಅತಿಥಿಯಾಗಿ ಹರಿದಾಸ ಸಂಕೀರ್ತನಾಕಾರ ದಯಾನಂದ ಹೊಸದುರ್ಗ ಉಪಸ್ಥಿತರಿದ್ದು, ನಿತ್ಯ ಜೀವನದಲ್ಲಿ ದಾಸರಪದಗಳ ಮೌಲ್ಯಗಳ ಮಹತ್ವ ಮತ್ತು ಅಂತಹ ದಾಸಶ್ರೇಷ್ಠರನ್ನು ಭಜಿಸುವುದು ಉತ್ತಮ…
ಕುಂದಾಪುರ: ಒಂದು ಬಣ್ಣಬಣ್ಣದ ವೇದಿಕೆಯ ಮೇಲೆ ತೆರೆದುಕೊಳ್ಳುವ ಪೌರಾಣಿಕ ಕಥನ, ಇನ್ನೊಂದು ಬದುಕಿನ ವಾಸ್ತವ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದ ಯಕ್ಷಗಾನದ ಕಲಾವಿದರಿಗೆ ಇದೇ ಬದುಕು. ತುಳುನಾಡಿನಲ್ಲಿ ‘ಪತ್ತನಾಜೆ’ (ಹಬ್ಬಗಳ ಋತುವಿನ ಕೊನೆಯದಿನ) ಬಂತೆಂದರೆ ಯಕ್ಷಗಾನ ಪ್ರದರ್ಶನಗಳಿಗೆ ತೆರೆಬೀಳುತ್ತದೆ. ಮುಂದೆ ಪ್ರದರ್ಶನಗಳು ಆರಂಭವಾಗುವುದು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ತಿಂಗಳಲ್ಲಿ. ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ತಿಂಗಳಲ್ಲಿ ಯಕ್ಷಗಾನ ಪ್ರದರ್ಶನ ಆರಂಭವಾದಾಗ ನನಗೆ ಪ್ರಥಮವಾಗಿ ನೆನಪು ಆಗುವುದು ಕುಂದಾಪುರದಲ್ಲಿ ನಡೆಯುವ ಗಜೇಂದ್ರ ಆಚಾರ್ ಕೋಣಿ ಸಂಘಟನೆಯಲ್ಲಿ ನಡೆಯುವ “ಯಕ್ಷ ರಾತ್ರಿ”. ಯಕ್ಷಗಾನ ಸಂಘಟನೆ ಅಂದ ಕೂಡಲೆ ಹಲವಾರು ಜನ ಮೊದಲ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಾರೆ. ಹಾಗೆ ಮೊದಲ ಸಾಲಿನಲ್ಲಿ ಗುರುತಿಸಬಹುದಾದ ಹೆಸರು “ಗಜೇಂದ್ರ ಆಚಾರ್ ಕೋಣಿ”. ಪ್ರತಿ ವರ್ಷ ಕುಂದಾಪುರದಲ್ಲಿ ಪೆರ್ಡೂರು ಮೇಳಕ್ಕೆ ಮೊದಲ ಅವಕಾಶ ಕಲ್ಪಿಸಿಕೊಟ್ಟು ಮೇಳದ ಹೊಸ ಪ್ರಸಂಗದ ಪ್ರದರ್ಶನ ಹಾಗೂ ತಿರುಗಾಟಕ್ಕೆ ಒಂದು ವೇದಿಕೆ ನಿರ್ಮಿಸಿಕೊಡುವ ಸಂಘಟಕ. ಯಕ್ಷಗಾನದ ಜೊತೆಗೆ ಸಾಧಕರನ್ನು ಗುರುತಿಸಿ ಗೌರವಿಸುವುದು,…
ಮಂಗಳೂರಿನ ಕುಡುಂಬೂರು ರವಿ ಹೊಳ್ಳ ಮತ್ತು ಪಾವನ.ಆರ್.ಹೊಳ್ಳ ಅವರ ಮುದ್ದಿನ ಮಗಳಾಗಿ 10.02.2007 ರಂದು ಅಭಿನವಿ ಹೊಳ್ಳ ಅವರ ಜನನ. ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಕಾಮರ್ಸ್ ಶಿಕ್ಷಣವನ್ನು ಓದುತ್ತಿದ್ದರೆ. ಬಾಲ್ಯದಲ್ಲಿ ಮನೆಯ ಹಿಂದೆ ಯಕ್ಷಗಾನ ನಡೆಯುತಿತ್ತು, ಹೀಗೆ ನಡೆದ ಯಕ್ಷಗಾನದ ಸಿಡಿ ಇವರಿಗೆ ಸಿಕ್ಕಿತು ಶಾಲೆಯಿಂದ ದಿನ ಮನೆಗೆ ಬಂದು ಯಕ್ಷಗಾನದ ಸಿಡಿಯನ್ನು ಹಾಕಿ ಯಕ್ಷಗಾನ ವೇಷಧಾರಿಗಳು ಕುಣಿಯುವ ಹಾಗೆ ಕುಣಿಯುತಿದ್ದೆ ಹಾಗೇ ಯಕ್ಷಗಾನದ ಮೇಲೆ ಒಲವು ಮಾಡಿತು ಆಗ ತಂದೆ ಹಾಗೂ ತಾಯಿ ಹತ್ತಿರ ಹೇಳಿದೆ ಆಗ ಯಕ್ಷ ಗುರು ರಾಕೇಶ್ ರೈ ಅಡ್ಕ ಅವರ ಬಳಿ ಮಾತನಾಡಿ ಯಕ್ಷಗಾನ ಕಲಿಯಲು ಪ್ರಾರಂಭಿಸಿದೆ. ಚಂದ್ರಶೇಖರ್ ಧರ್ಮಸ್ಥಳ ಹಾಗೂ ಪ್ರಶಾಂತ್ ಶೆಟ್ಟಿ ನೆಲ್ಯಾಡಿ ಅವರ ಪಾತ್ರ ಹಾಗೂ ವೇಷ ತುಂಬಾ ಇಷ್ಟ ಅವರ ಪಾತ್ರ ಹಾಗೂ ವೇಷಗಳು ನಾನು ಯಕ್ಷಗಾನ ಕಲಿಯಲು ಸ್ಪೂರ್ತಿ ಹಾಗೂ ಪ್ರೇರಣೆ. ಕುಮಾರ ವಿಜಯ, ದೇವಿ ಮಹಾತ್ಮೆ, ಶ್ರೀನಿವಾಸ ಕಲ್ಯಾಣ, ಗಿರಿಜಾ…
ಉಡುಪಿ : ತುಳು ಕೂಟ (ರಿ.) ಉಡುಪಿ ಇವರು ಕಾಲೇಜು ವಿದ್ಯಾರ್ಥಿಗಳಿಗೆ ಮೀಸಲಾಗಿರುವ “ತುಳು ಮಿನದನ” ಕಾರ್ಯಕ್ರಮವು ದಿನಾಂಕ 25-11-2023 ರಂದು ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು “ತುಳುನಾಡ ಭೂಮಿ ತುಡರ್” ಪರಿಕಲ್ಪನೆಯಲ್ಲಿ ನಾಡಿನ ಖ್ಯಾತ ವಿದ್ವಾಂಸರಾದ ಡಾ.ವೈ .ಎನ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ “ಯುವಜನತೆಗೆ ಸರಿಯಾದ ಮಾರ್ಗದರ್ಶನ ನೀಡಿದ್ದಲ್ಲಿ ಅವರು ನಾಡಿನ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ. ಬಹು ಭಾಷೆ ಮತ್ತು ಮಾಧ್ಯಮಗಳ ಬಳಕೆ ಯುಕ್ತವಾದದ್ದು. ಆದರೆ ಮಾತೃಭಾಷೆಯನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ತುಳು ಭಾಷೆಯ ಸಿರಿವಂತ ಸಂಸ್ಕೃತಿಯನ್ನು ಭಾಷಾ ಸಮಗ್ರತೆಯನ್ನು ಕಿರಿಯರಿಗೆ ಪರಿಚಯ ಮಾಡಿಸುವ ಪ್ರಯತ್ನ ತುಳುಕೂಟದಿಂದ ನಡೆಯುತ್ತಿರುವುದು ಬಹು ಶ್ಲಾಘ್ಯ ಕಾರ್ಯ.” ಎಂದು ಅಭಿಪ್ರಾಯಪಟ್ಟರು. ತುಳು ಲಿಪಿಯಲ್ಲಿ ಬರೆದು ತುಳು ಸಂಸ್ಕೃತಿಯ ರೀತಿಯಲ್ಲಿ ಸ್ವಾಗತ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ 2023-24ನೇ ಸಾಲಿನ ಪಾಕ್ಷಿಕ ತಾಳಮದ್ದಳೆಯ ಪ್ರಥಮ ಕೂಟವು ಪಾರ್ತಿಸುಬ್ಬ ವಿರಚಿತ ‘ಪುತ್ರಕಾಮೇಷ್ಟಿ’ ಎಂಬ ಆಖ್ಯಾನದೊಂದಿಗೆ ದಿನಾಂಕ 11-11-2023ರಂದು ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಮಾ.ಪರೀಕ್ಷತ್ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ದಶರಥ), ದುಗ್ಗಪ್ಪ ನಡುಗಲ್ಲು (ವಸಿಷ್ಠ ಹಾಗೂ ಋಷ್ಯಶೃಂಗ), ಗುಡ್ಡಪ್ಪ ಬಲ್ಯ (ಸುಮಂತ್ರ ಹಾಗೂ ಯಜ್ಞೇಶ್ವರ), ಕಿಶೋರಿ ದುಗ್ಗಪ್ಪ ನಡುಗಲ್ಲು (ದೇವೇಂದ್ರ ಮತ್ತು ಶ್ರೀ ರಾಮ), ಹರಿಣಾಕ್ಷಿ ಜೆ. ಶೆಟ್ಟಿ (ಮಹಾವಿಷ್ಣು ಮತ್ತು ಲಕ್ಷ್ಮಣ) ಮತ್ತು ಭಾರತಿ ರೈ (ಬ್ರಹ್ಮ) ಸಹಕರಿಸಿದರು. ಸಂಘದ ನಿರ್ದೇಶಕ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.
ಕೋಟ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಾರಥ್ಯದಲ್ಲಿ ನಡೆಯುವ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ ಅನುಸಂಧಾನ-2023 ಇದರ ಅಧ್ಯಕ್ಷರಾಗಿ ಸಾಹಿತಿ-ಸಂಶೋಧಕ ಶ್ರೀ ಬಾಬುಶಿವ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟದ ವಿವೇಕ ವಿದ್ಯಾಲಯದ ಆವರಣದಲ್ಲಿ ದಿನಾಂಕ 05-12-2023 ಮತ್ತು 06-12-2023ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೊಟೇಲ್ ಉದ್ಯಮಿ ಶ್ರೀ ಬಾಬುಶಿವ ಪೂಜಾರಿ ಅವರು ವೇದ, ಆಧುನಿಕ ಸಾಹಿತ್ಯ, ಬೌದ್ಧ, ಜೈನ, ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಗ್ರಂಥಗಳನ್ನು ಆಳವಾಗಿ ಅಭ್ಯಸಿಸಿದ್ದಾರೆ. ನಾರಾಯಣ ಗುರುಗಳ ಆದರ್ಶ, ನಾರಾಯಣ ಗುರು ವಿಜಯ ದರ್ಶನ, ಅನುಸಂಧಾನ, ಹಗ್ಗಿನ ಹನಿ ಮುಂತಾದವು ಇವರ ಕೃತಿಗಳು. ಶ್ರೀಕೃಷ್ಣ ದೇವರಾಯ, ಕೋಟಿ ಚೆನ್ನಯ್ಯ, ತುಳು ಸಂಸ್ಕೃತಿ, ಕಾಂತಬಾರೆ ಬೂದಬಾರೆ, ಸಿರಿ, ನಾಗಾರಾಧನೆ, ಭೂತಾರಾಧನೆ ಮತ್ತು ತುಳುನಾಡಿನ ಗರಡಿಗಳ ಬಗ್ಗೆ ಸಂಶೋಧನಾತ್ಮಕ ಫ್ರೌಡ ಲೇಖನಗಳನ್ನು ಪ್ರಕಟಿಸಿದ್ದಾರೆ. ‘ನಾರಾಯಣ ಗುರು ವಿಜಯ ದರ್ಶನ’ವು ಆಧ್ಯಾತ್ಮ ಮತ್ತು ಸಾಮಾಜಿಕ ನೆಲೆಯಲ್ಲಿ ನೆಲದ ಸಂಕಟ ಮತ್ತು ಆಶೋತ್ತರಗಳನ್ನು ತೆರೆದಿಟ್ಟ…
ಮಂಗಳೂರು : ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಮಂಡಳಿಯವರಿಂದ ಮಾಸಿಕ ಹುಣ್ಣಿಮೆಯ ಪ್ರಯುಕ್ತ ‘ಭೃಗು ಶಾಪ’ ಎಂಬ ಯಕ್ಷಗಾನ ತಾಳ ಮದ್ದಳೆಯು ದಿನಾಂಕ 27-11-2023 ಸೋಮವಾರದಂದು ನಡೆಯಿತು. ಹಿಮ್ಮೇಳದಲ್ಲಿ ಸರಪಾಡಿ ಹರಿಪ್ರಸಾದ್ ಕಾರಂತ, ಜಯ ದೇವಾಡಿಗ, ಬಾಯಾರು ಎಸ್.ಎನ್. ಭಟ್, ಜಯರಾಮ್ ಆಚಾರ್ಯ ಚೇಳಾರು, ಸುರೇಶ್ ಕಾಮತ್, ರಾಘವೇಂದ್ರ ಭಟ್ ಮತ್ತು ಹರೀಶ್ ಹೆಬ್ಬಾರ್ ಹಾಗೂ ಮುಮ್ಮೇಳದಲ್ಲಿ ಭೃಗು – ವಾಸುದೇವ ಆಚಾರ್, ದೇವೇಂದ್ರ -ಚಂದ್ರಶೇಖರ್ ಕೊಡಿಪ್ಪಾಡಿ, ವಿಷ್ಣು – ಗುರುತೇಜ ಶೆಟ್ಟಿ ಒಡಿಯೂರು, ತಮಾಸುರ – ಮನೋಹರ ಕುಂದರ್ ಮತ್ತು ಖ್ಯಾತಿ – ರಾಧಾಕೃಷ್ಣ ಭಟ್ ಸಹಕರಿಸಿದರು.
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕದ ವತಿಯಿಂದ ಹತ್ತೊಂಬತ್ತನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಸಹಯೋಗದಲ್ಲಿ ಹಿರಿಯ ಸಾಹಿತಿ ಶ್ರೀ ಸೂಡ ಸದಾನಂದ ಶೆಣೈ ಸರ್ವಾಧ್ಯಕ್ಷತೆಯಲ್ಲಿ ದಿನಾಂಕ 03-12-2023ರಂದು ಗಣಿತನಗರ ಕಾರ್ಕಳ ಜ್ಞಾನಸುಧಾ ಸಭಾಂಗಣದಲ್ಲಿ ಜರಗಲಿದೆ. ದಿನಾಂಕ 03-12-2023ರಂದು ಬೆಳಗ್ಗೆ 8 ಗಂಟೆಗೆ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರಿಂದ ಪರಿಷತ್ತಿನ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ಕುಕ್ಕುಂದೂರು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಕೆ., ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ದಿನೇಶ್ ಎಂ. ಕೊಡವೂರು, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿರುವರು. ಬೆಳಿಗ್ಗೆ 8:30ಕ್ಕೆ ಸಮ್ಮೇಳನಾಧ್ಯಕ್ಷರ ಸ್ವಾಗತ ಹಾಗೂ ಭುವನೇಶ್ವರಿ ದೇವಿಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಾಸುಹೊಕ್ಕಾಗಿರುವ, ಕರ್ನಾಟಕಕ್ಕೆ ವಿಶಿಷ್ಟವಾಗಿರುವ ಕಲೆ ಯಕ್ಷಗಾನ. ಯಕ್ಷಗಾನದ ಬಗ್ಗೆ ನಿಮಗೆಲ್ಲ ತಿಳಿದೇ ಇರುತ್ತದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಬಹು ಪ್ರಸಿದ್ದ ಕಲೆ ಅದು. ಯಕ್ಷಗಾನದಿಂದ ಪ್ರೇರಿತವಾದ ಆದರೆ ಯಕ್ಷಗಾನಕ್ಕಿಂತ ಭಿನ್ನವಾಗಿ ಬೆಳೆದ ಪ್ರಾಕಾರ ಯಕ್ಷಗಾನ ತಾಳಮದ್ದಲೆ. ಯಕ್ಷಗಾನದ ಅಂಗವಾದ, ಯಕ್ಷಗಾನ ತಾಳಮದ್ದಲೆ ಅದರ ಜೊತೆ ಜೊತೆಗೇ ಬೆಳೆದು ಬಂದಿದೆ. ಕೆಲ ಸಂಶೋಧಕರು, ತಾಳಮದ್ದಲೆ ಎಂಬ ಕಲಾಪ್ರಕಾರ ಯಕ್ಷಗಾನಕ್ಕಿಂತಲೂ ಮೊದಲೇ ಇದ್ದಿರಬಹುದು ಎಂದು ಅಭಿಪ್ರಾಯ ಪಡುತ್ತಾರೆ. ತಾವು ಪಾತ್ರವಾಗುವುದರ ಜತೆಗೆ ನೋಡುಗರನ್ನು ಪಾತ್ರದ ಪರಿಸರದೊಳಕ್ಕೆ ಎಳೆದೊಯ್ಯುವ ಅನೂಹ್ಯ ಸಾಧ್ಯತೆ ಇರುವ ಈ ತಾಳಮದ್ದಲೆ ನಿಜಕ್ಕೂ ಅದ್ಭುತ ಕಲೆ. ಯಾವುದೇ ವೇಷಭೂಷಣಗಳಿಲ್ಲದೇ, ಬರಿಯ ಮಾತೇ ಪ್ರಧಾನವಾಗಿರುವ ಕಲೆ ತಾಳಮದ್ದಲೆ. ಮಾತಿನ ಮಂಥನ, ಜಿಜ್ಞಾಸೆ, ಚರ್ಚೆ, ವಾದಗಳೇ ಕೂಟವೊಂದರ ಬಂಡವಾಳ. ತಾಳಮದ್ದಲೆಯ ಅರ್ಥಧಾರಿಗಳು ಸದಾ ಅಧ್ಯಯನ ನಿರತರು. ಒಂದು ಪ್ರಸಂಗದ ಯಾವುದೋ ಒಂದು ಸನ್ನಿವೇಶವನ್ನು ಎದುರಿಸುವಾಗ ಅದೆಷ್ಟು ಪುರಾಣಗಳ, ಇತಿಹಾಸದ ಘಟನೆಗಳನ್ನು ಉಲ್ಲೇಖಿಸುತ್ತಾರೆಂದರೆ, ಕೇಳುಗ…
ಉಡುಪಿ : ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷಗಾನ ಕಲಾ ರಂಗ (ರಿ.) ಉಡುಪಿ ಇವರ ಸಹಯೋಗದಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟಿನಿಂದ ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಡೆಯುವ ಯಕ್ಷಗಾನ ತರಬೇತಿಗಳ ಪ್ರದರ್ಶನ, ‘ಕಿಶೋರ ಯಕ್ಷಗಾನ ಸಂಭ್ರಮ – 2023’ವು ದಿನಾಂಕ 29-11-2023ರಿಂದ 05-01-2023ರವರೆಗೆ ನಡೆಯಲಿದೆ. ದಿನಾಂಕ 29-11-2023ರಂದು ಸಂಜೆ 6.30ಕ್ಕೆ ಬ್ರಹ್ಮಾವರದ ಬಂಟರ ಭವನದ ಮುಂಭಾಗದ ವೇದಿಕೆಯಲ್ಲಿ ಉದ್ಘಾಟನೆ ನಡೆಯಲಿದೆ. ಪ್ರತಿದಿನ 1.30 ಗಂಟೆ ಅವಧಿಯ ಎರಡು ಪ್ರಸಂಗ ಪ್ರದರ್ಶನಗೊಳ್ಳಲಿದೆ. ಬ್ರಹ್ಮಾವರ ಬಂಟರ ಭವನದ ಬಳಿ, ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ, ಶಿರ್ವದ ಮಹಿಳಾ ಸೌಧ, ಪಡುಕೆರೆ ಮಣೂರು ಸರಕಾರಿ ಸಂಯುಕ್ತ ಪ್ರೌಢ ಶಾಲಾ ವಠಾರ ಮತ್ತು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ವಠಾರ ಸೇರಿದಂತೆ ಒಟ್ಟು 6 ವೇದಿಕೆಗಳಲ್ಲಿ 70 ಪ್ರದರ್ಶನಗಳು ನಡೆಯಲಿದೆ. ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವ್ಯಾಪ್ತಿಯಲ್ಲಿ ಪ್ರೌಢಶಾಲಾ…