Author: roovari

ಬಿ.ಸಿ.ರೋಡ್ : ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025 ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರಂದು ಬಿ.ಸಿ.ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ “ಉಪನಿಷತ್ತ್, ಭಗವದ್ಗೀತೆ ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ. ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ” ಎಂದು ಹೇಳಿದರು. ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ…

Read More

valedicotryಮಂಗಳೂರು : ಆನೆಗುಂದಿ ಗುರುಸೇವಾ ಪರಿಷತ್ ಮಹಾ ಮಂಡಲ ಮಂಗಳೂರು ಇದರ ವತಿಯಿಂದ ಮಕ್ಕಳಿಗಾಗಿ ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಒಂದು ವಾರದ ‘ಜ್ಞಾನ ವಿಕಾಸ ಸಂಸ್ಕಾರ ಶಿಬಿರ’ದ ಸಮಾರೋಪ ಸಮಾರಂಭವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡು ಆಶೀರ್ವಚನವಿತ್ತ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು ಇಲ್ಲಿನ ಪೀಠಾಧಿಪತಿಗಳಾಗಿರುವ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿಗಳು “ಮಕ್ಕಳ ಬೌದ್ಧಿಕ ಪರಿವರ್ತನೆಯೇ ಸಂಸ್ಕಾರ. ಆದರೆ ಪರಿವರ್ತನೆಯಲ್ಲಿ ಎರಡು ಮುಖಗಳಿವೆ. ಒಂದು ಮುಖ ಸಂಸ್ಕಾರವಾದರೆ ಇನ್ನೊಂದು ಮುಖ ವಿಕಾರ. ಮಕ್ಕಳು ವಿಕಾರಗೊಳ್ಳದಂತೆ ಎಚ್ಚರವಹಿಸಬೇಕಾದುದು ಹೆತ್ತವರ ಜವಾಬ್ದಾರಿ. ಆದ್ದರಿಂದ ಮಕ್ಕಳ ಜೀವನದ ಲಕ್ಷ್ಯ ಸುಸ್ಥಿರವಾಗಿರುವಂತೆ ಮಾರ್ಗದರ್ಶನ ನೀಡುವಲ್ಲಿ ಪೋಷಕರು ಹಾಗೂ ಶಿಕ್ಷಕರ ಕರ್ತವ್ಯವೂ ಬಹು ಮುಖ್ಯವಾಗಿರುತ್ತದೆ ಎಂದು ನುಡಿದರು. ವೇದಿಕೆಯಲ್ಲಿ ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ, ವಿಶ್ವಕರ್ಮ ಕಲಾ ಪರಿಷತ್ತಿನ ಅಧ್ಯಕ್ಷ ಡಾ. ಎಸ್.ಪಿ. ಗುರುದಾಸ್,…

Read More

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು ಮೂರು ವರ್ಷಗಳ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರ ನೇತೃತ್ವದ ಕಾರ್ಯಕಾರಿ ಸಮಿತಿಯು 2022, 2023 ಹಾಗೂ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ‘ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಕ್ರಮವಾಗಿ ಮೈಸೂರಿನ ಪ್ರೊ. ಪಿ.ವಿ. ನಂಜರಾಜ ಅರಸ್, ಮಂಗಳೂರಿನ ಡಾ. ಇಂದಿರಾ ಹೆಗ್ಗಡೆ ಹಾಗೂ ವಿಜಯನಗರದ ಹೊಸಪೇಟೆಯ ಕೆ. ರವೀಂದ್ರನಾಥ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ರೂ. ಎಪ್ಪತ್ತೈದು ಸಾವಿರ ನಗದು ಒಳಗೊಂಡಿದೆ. ‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’ಗೆ ಗದಗದ ಲಡಾಯಿ ಪ್ರಕಾಶನ, ಮೈಸೂರಿನ ಅಭಿರುಚಿ ಪ್ರಕಾಶನ ಹಾಗೂ ಕಲಬುರಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ಆಯ್ಕೆಯಾಗಿದೆ. ಈ ಪ್ರಶಸ್ತಿಯು ತಲಾ ರೂ. ಒಂದು ಲಕ್ಷ ನಗದು ಹೊಂದಿದೆ. ‘ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಮಂಡ್ಯದ ಪ್ರೊ. ಬಿ. ಜಯಪ್ರಕಾಶ ಗೌಡ, ಬಳ್ಳಾರಿಯ ಹಗರಿ ಬೊಮ್ಮನಹಳ್ಳಿಯ ಮೇಟಿಕೊಟ್ರಪ್ಪ, ಮೈಸೂರಿನ ರಂಗನಾಥ…

Read More

ದೇಲಂಪಾಡಿ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ನಾಗರಾಜ ಪಂಜತ್ತಡ್ಕ ಕಾವು ಹಾಗೂ ಮನೆಯವರ ವತಿಯಿಂದ ವಿಶೇಷ ಯಕ್ಷಗಾನ ತಾಳ ಮದ್ದಳೆ ದಿನಾಂಕ 26 ಏಪ್ರಿಲ್ 2025ರ ಶನಿವಾರದಂದು ನಡೆಯಿತು. ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಕಲಾಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಅರ್ಥಧಾರಿ ಡಾ. ರಮಾನಂದ ಬನಾರಿ ಅವರ ಮಾರ್ಗದರ್ಶನದಲ್ಲಿ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಅವರ ಸಂಯೋಜನೆಯೊಂದಿಗೆ ಮುನ್ನಡೆದ ಯಕ್ಷಗಾನ ತಾಳಮದ್ದಳೆ ʼಪಾರ್ಥ ಸಾರಥ್ಯʼ ಅತ್ಯಂತ ಮನೋಹರವಾಗಿ ಮೂಡಿಬಂತು. ಭಾಗವತಿಕೆಯಲ್ಲಿ ಮೋಹನ ಮೆಣಸಿನಕಾನ, ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದಕರಾಗಿ ಶ್ರೀಧರ ಆಚಾರ್ಯ ಈಶ್ವರ ಮಂಗಲ , ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಸಹಕರಿಸಿದರು. ಅರ್ಥಗಾರಿಕೆಯಲ್ಲಿ ರಾಮಣ್ಣ ಮಾಸ್ತರ್‌ ದೇಲಂಪಾಡಿ, ಐತಪ್ಪ ಗೌಡ ಮುದಿಯಾರು , ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ಶಾಂತಕುಮಾರಿ ದೇಲಂಪಾಡಿ, ಶ್ರೀನಿಧಿ…

Read More

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆಮಾಡಲು ಜಾನಪದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾ‌ರ್ ತಿಳಿಸಿದ್ದಾರೆ. ಆಸಕ್ತ ಲೇಖಕರು, ಪ್ರಕಾಶಕರು ಅಥವಾ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಗೆ ದಿನಾಂಕ 05 ಮೇ 2025ರೊಳಗಾಗಿ ತಲುಪುವಂತೆ ಖುದ್ದಾಗಿ ಕೊರಿಯ‌ರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

Read More

ಮಡಿಕೇರಿ : ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ ಮತ್ತು ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ದಿನಾಂಕ 03 ಮೇ 2025ರಂದು ಬೆಳಗ್ಗೆ 10-00 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ನ ಸತ್ಕಾರ್ ಭವನದಲ್ಲಿ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಈ ಸಮಾರಂಭದ ಆಶಯ ನುಡಿಗಳನ್ನಾಡುವರು. ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟಿನ ಸಂಸ್ಥಾಪಕರಾದ ಶ್ರೀದೇವಿ ಚಂದ್ರಶೇಖರ್ ರಾವ್ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಂಬೈಯ ಸಾಹಿತಿ ಗೋಪಾಲ್ ತ್ರಾಸಿ ಇವರ ‘ನುಡಿ ತೇರು’ ಹಾಗೂ ದಿ. ಚಂದ್ರಶೇಖರ್ ರಾವ್ ಇವರ ‘ಹರಟೆಗಳು’ ಎನ್ನುವ ಎರಡು ಕೃತಿಗಳನ್ನು ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡುವರು. ಲೋಕಾರ್ಪಣೆಗೊಳ್ಳಲಿರುವ ಶ್ರೀ…

Read More

ಹುಬ್ಬಳ್ಳಿ : ರಂಗಭೂಮಿಯ ಹಿರಿಯ ಕಲಾವಿದೆ ತೆರೇಸಮ್ಮ ಡಿ’ಸೋಜಾ ಅನಾರೋಗ್ಯದಿಂದ ದಿನಾಂಕ 27 ಏಪ್ರಿಲ್ 2025ರ ಭಾನುವಾರ ಸಂಜೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ರಂಗಭೂಮಿಯ ಖ್ಯಾತ ಕಲಾವಿದೆ ಹೆಲನ್ ಅವರ ತಾಯಿ. ಅಲ್ಲದೆ ತೆರೇಸಮ್ಮ ಅವರ ಪುತ್ರರಾದ ಬಾಬು ಮೈಸೂರು ಹಾಗೂ ಫ್ರಾನ್ಸಿಸ್ ಮೈಸೂರು ರಂಗಭೂಮಿ ಕಲಾವಿದರು. ಇನ್ನೊಬ್ಬ ಪುತ್ರಿ ಗೀತಾ ಖಾಸಗಿ ಉದ್ಯೋಗಿಯಾಗಿದ್ದಾರೆ. ತೆರೇಸಮ್ಮ ಅವರು ಗುಬ್ಬಿ ವೀರಣ್ಣ, ಎಚ್. ಕೆ. ಯೋಗಾನರಸಿಂಹ, ಸುಳ್ಳದ ದೇಸಾಯಿ ಅವರ ಕಂಪನಿಗಳಲ್ಲಿ ಕಲಾವಿದೆಯಾಗಿದ್ದರು. ‘ಹರಕೆ’, ‘ಕರಿಮಾಯಿ’, ‘ನೆಂಟರು ಗಂಟು ಕಳ್ಳರು’, ‘ಮಾಗಿಯ ಕನಸು’, ‘ಹುಲಿ ಹೆಜ್ಜೆ’, ‘ಪಡುವಾರಳ್ಳಿ ಪಾಂಡವರು’, ‘ಅಮೃತ ಘಳಿಗೆ’, ‘ಸಂಗ್ಯಾಬಾಳ್ಯಾ’, ‘ಸಿಂಧೂರ ಲಕ್ಷ್ಮಣ’, ‘ಪತಿತ ಪಾವನಿ’ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರು. ಇವರು ಹುಟ್ಟಿದ್ದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೊಮ್ಮನಹಳ್ಳಿ ಎಂಬ ಪುಟ್ಟ ಗ್ರಾಮದಲ್ಲಿ. 1971ರಲ್ಲಿ ಹುಬ್ಬಳ್ಳಿಯಲ್ಲಿ ನೆಲೆಸಿದರು. ಉತ್ತರ ಕರ್ನಾಟಕದಲ್ಲಿ ಮಹಿಳಾ ನಾಟಕ ತಂಡವನ್ನು ಕಟ್ಟಿದ ಪ್ರಥಮ ಕಲಾವಿದೆ ಇವರು ಕರ್ನಾಟಕ…

Read More

ಸಾಣೇಹಳ್ಳಿ : ಶ್ರೀ ಶಿವಕುಮಾರ ಕಲಾಸಂಘ (ರಿ.) ಮತ್ತು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಇದರ ವತಿಯಿಂದ ‘ಮಕ್ಕಳ ಹಬ್ಬ ಸಮಾರೋಪ’ ಸಮಾರಂಭವನ್ನು ದಿನಾಂಕ 29 ಏಪ್ರಿಲ್ 2025ರಂದು ಬೆಳಗ್ಗೆ 8-30 ಗಂಟೆಗೆ ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೊದಲ ಅವಧಿ ಬೆಳಗ್ಗೆ 8-30 ಗಂಟೆಗೆ ವಚನ ಗೀತೆ, ಯೋಗ ನೃತ್ಯ, ವಚನ ನೃತ್ಯ, ಎರಡನೇ ಅವಧಿ ಬೆಳಗ್ಗೆ 10-30 ಗಂಟೆಗೆ ಕೋಟಗಾನಳ್ಳಿ ರಾಮಯ್ಯ ರಚನೆಯ ರುಚಿತ್ ಕುಮಾರ್ ಬಿ.ಸಿ. ಇವರ ನಿರ್ದೇಶನದಲ್ಲಿ ಭೂಮಿ ತಂಡದವರಿಂದ ‘ರತ್ನಪಕ್ಷಿ’, ಕೃಷ್ಣಮೂರ್ತಿ ಎನ್. ತಾಳಿಕಟ್ಟೆ ಇವರ ರಚನೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಅಗ್ನಿ ತಂಡದವರಿಂದ ‘ಕಳ್ಳರ ಸಂತೆ’, ಮೂರನೇ ಅವಧಿ ಸಂಜೆ 4-30 ಗಂಟೆಗೆ ಶ್ರೀಪಾದ ಭಟ್ ಕನ್ನಡ ರೂಪಾಂತರಗೊಳಿಸಿರುವ ಜಗದೀಶ್ ನೆಗಳೂರು ವಿನ್ಯಾಸ ಮತ್ತು ನಿರ್ದೇಶನದಲ್ಲಿ ಆಕಾಶ ತಂಡದವರಿಂದ ‘ರಿಂಗಿನಾಟ’ ಹಾಗೂ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ರಚಿಸಿರುವ ಚಂದ್ರಮ್ಮ ಆರ್. ಇವರ ನಿರ್ದೇಶನದಲ್ಲಿ ಗಾಳಿ ತಂಡದವರಿಂದ ‘ಕೋಳೂರು ಕೊಡಗೂಸು’ ನಾಟಕಗಳು ಪ್ರದರ್ಶನಗೊಳ್ಳಲಿದೆ.…

Read More

ಪೆರ್ಲ : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಮತ್ತು ಸವಿ ಹೃದಯದ ಕವಿ ಮಿತ್ರರು ಪೆರ್ಲ ಇವರ ಸಹಕಾರದೊಂದಿಗೆ ಪೆರ್ಲದ ವ್ಯಾಪಾರಿ ಭವನದಲ್ಲಿ ದಿನಾಂಕ 26 ಏಪ್ರಿಲ್ 2025ರಂದು ‘ಕವಿತಾ ಕೌತುಕ ಸರಣಿ 3 – ಕವಿ ಕಾವ್ಯ ಸಂವಾದ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಾಹಿತಿಯೂ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರೂ ಆಗಿರುವ ಡಾ. ರಮಾನಂದ ಬನಾರಿ ಇವರು ಮಾತನಾಡುತ್ತಾ “ಕಾವ್ಯವು ಜನಜೀವನದ ಪ್ರತಿಬಿಂಬವೂ ಗತಿಬಿಂಬವೂ ಆಗಿದೆ. ಯೋಧ, ವ್ಯಾಧ ನ್ಯಾಯಗಳ ಸಮ್ಮಿಲನವೇ ಕವಿತೆ. ಜೀವಗಳು ಹುಟ್ಟುವ ಹಾಗೆ, ಪ್ರಕೃತಿ-ಪುರುಷ ಸಂಯೋಗದಂತೆ, ಪಾಂಡಿತ್ಯ ಮತ್ತು ಪ್ರತಿಭಾ ಸಂಪನ್ನತೆಯಿಂದ ಕಾವ್ಯವು ಸಮೃದ್ಧವಾಗುತ್ತದೆ. ಕವಿತೆ ಕನವರಿಕೆಗಳ ಅಕ್ಷರ ತೋರಣಗಳಾಗಿ ಸಮಾಜವನ್ನು ವರ್ತಮಾನದೊಡನೆ ಮುನ್ನಡೆಸುತ್ತದೆ” ಎಂದು ಹೇಳಿದರು. ನಿವೃತ್ತ ಶಿಕ್ಷಕ ಉಮೇಶ ಕೆ. ಪೆರ್ಲ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಪೆರ್ಲ ವ್ಯಾಪಾರಿ…

Read More

ಬೆಂಗಳೂರು : ಕಲಾವಿಲಾಸಿ ತಂಡದ ಕಲಾವಿದರು ಪ್ರಸ್ತುತ ಪಡಿಸುವ ಪಿ. ಲಂಕೇಶ್ ಅವರ ‘ಕ್ರಾಂತಿ ಬಂತು # ಕ್ರಾಂತಿ’ ಎಂಬ ನಾಟಕ ಪ್ರದರ್ಶನವನ್ನು ದಿನಾಂಕ 29 ಏಪ್ರಿಲ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗ ಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಯುವ ನಿರ್ದೇಶಕ ಅಭಿಷೇಕ ಚಕ್ರಣ್ಣವರ ನಿರ್ದೇಶಿಸುತ್ತಿರುವ ನಾಟಕವನ್ನು ಹಿರಿಯ ರಂಗಕರ್ಮಿ ಮಹಾದೇವ ಹಡಪದ ಇವರು ವಿನ್ಯಾಸ ಮಾಡಿದ್ದಾರೆ. ನಾಟಕದ ಅವಧಿ 100 ನಿಮಿಷಗಳು. ಹೆಚ್ಚಿನ ಮಾಹಿತಿಗೆ 9739398819 ಸಂಖ್ಯೆಗೆ ಕರೆ ಅಥವಾ ವಾಟ್ಸಪ್‌ ಮಾಡಬಹುದು. ‘ಕ್ರಾಂತಿ ಬಂತು # ಕ್ರಾಂತಿ’ ನಾಟಕವನ್ನು ಸಾಹಿತಿ ಪಿ. ಲಂಕೇಶ್‌ ಅವರ ‘ಕ್ರಾಂತಿ ಬಂತು ಕ್ರಾಂತಿ’ ನಾಟಕದ ಪಠ್ಯವನ್ನು ಪ್ರಸ್ತುತಕ್ಕೆ ಅಳವಡಿಸಿಕೊಂಡು ಕಟ್ಟಲಾಗಿದೆ. ಈ ನಾಟಕವು ಮೊದಲ ಬಾರಿಗೆ ಪ್ರಕಟವಾಗಿದ್ದು 1971ರಲ್ಲಿ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳಲ್ಲಿ ಅಂದಿಗೂ – ಇಂದಿಗೂ ಸಾಕಷ್ಟು ಬದಲಾವಣೆಗಳು ಕಂಡುಬಂದರೂ, ಆ ಬದಲಾದ ಪರಿಸ್ಥಿತಿಗಳು ತಮ್ಮ ಮೂಲ ಸ್ವರೂಪವನ್ನು ಹಾಗೆಯೇ ಉಳಿಸಿಕೊಂಡಿರುವುದು ನೋವಿನ ಸಂಗತಿ. ಸಮಾಜವಾದ, ಸಮತಾವಾದ, ಕ್ರಾಂತಿಯಂತಹ ವಿಚಾರಗಳ…

Read More