Author: roovari

ಕಾಸರಗೋಡು : ಶ್ರೀಸ್ಕಂದ ಯಕ್ಷಗಾನ ಕೇಂದ್ರ ಪಾಯಿಚ್ಚಾಲು ಇಲ್ಲಿನ ಪುಟಾಣಿ ಕಲಾವಿದರಿಂದ ‘ಗಿರಿಜಾಕಲ್ಯಾಣ’ ಯಕ್ಷಗಾನ ಪ್ರದರ್ಶನ ದಿನಾಂಕ 13 ಆಗಸ್ಟ್ 2025ರಂದು ಶ್ರೀ ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯದ ಅಂಗವಾಗಿ ಶ್ರೀ ಎಡನೀರು ಮಠದಲ್ಲಿ ನಡೆಯಿತು. ನಾಟ್ಯಗುರು ರಂಜಿತ್ ಗೋಳಿಯಡ್ಕ ಇವರ ನಿರ್ದೇಶನದಲ್ಲಿ ನಡೆದ ಈ ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ತಲ್ಪನಾಜೆ ವೆಂಕಟ್ರಮಣ ಭಟ್, ಚೆಂಡೆಯಲ್ಲಿ ಪೃಥ್ವಿಚಂದ್ರ ಶರ್ಮ ಪೆರುವಡಿ ಹಾಗೂ ಮದ್ದಳೆಯಲ್ಲಿ ಲವಕುಮಾರ್ ಐಲ, ಚಕ್ರತಾಳದಲ್ಲಿ ಅರ್ಪಿತ್ ಶೆಟ್ಟಿ, ವಸ್ತ್ರಾಲಂಕಾರದಲ್ಲಿ ರಾಕೇಶ್ ಗೋಳಿಯಡ್ಕ ಸಹಕರಿಸಿದರು. ಅರ್ಜುನ್ ಕೂಡ್ಲು, ಆಕಾಶ್ ಕೂಡ್ಲು, ಶ್ರೀವತ್ಸ, ಶ್ರೀಸ್ಕಂದ ಯಕ್ಷಗಾನ ಕೇಂದ್ರದ ಅಧ್ಯಕ್ಷ ಕಿರಣ್ ಪ್ರಸಾದ್ ಕೂಡ್ಲು, ಕೋಶಾಧಿಕಾರಿ ಮುರಳೀಧರ ಶೆಟ್ಟಿ, ಕಾರ್ಯದರ್ಶಿ ಕಿರಣ್ ಪಾಯಿಚ್ಚಾಲು ಸಹಕರಿಸಿದರು. ಶ್ರೀಸ್ಕಂದ ಯಕ್ಷಗಾನ ಕೇಂದ್ರದ ಮಕ್ಕಳಿಗೆ ಗುರುಗಳು ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಪ್ರದರ್ಶನದಲ್ಲಿ ಕೇಂದ್ರದ 15ಮಕ್ಕಳು ಪಾತ್ರ ನಿರ್ವಹಿಸಿದರು.

Read More

ಮಂಗಳೂರು: ‘ಸಸಿ ಪ್ರಕಾಶನ’ದ ವತಿಯಿಂದ ಕನ್ನಡ ವಿಭಾಗ, ರಂಗ ಅಧ್ಯಯನ ಕೇಂದ್ರ ಸಂತ ಆಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಮಂಗಳೂರು ಇದರ ಸಹಯೋಗದೊಂದಿಗೆ ಕಥೆಗಾರ ಮುನವ್ವರ್ ಜೋಗಿಬೆಟ್ಟು ಇವರ ಎರಡನೇ ಕಥಾ ಸಂಕಲನ ‘ಟಚ್ ಮೀ ನಾಟ್’ ಇದರ ಲೋಕಾರ್ಪಣಾ ಸಮಾರಂಭವು ದಿನಾಂಕ 17  ಆಗಸ್ಟ್ 2025ರ ಭಾನುವಾರದಂದು ಸಂತ ಆಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಮಾತನಾಡಿ “ಈ ಜಗತ್ತಿನಲ್ಲಿ ಕಡ್ಡಾಯವಾಗಿ ಓದಲೇಬೇಕು ಎಂಬುದು ಏನೂ ಇಲ್ಲ. ಮನಸ್ಸಿಗೆ ತಟ್ಟುವಂತದ್ದು ಅನ್ನುವುದು ಬಿಡಿ; ಸಾಹಿತ್ಯ ಮನಸ್ಸಿಗೆ ಮುಟ್ಟಿದರೆ ಸಾಕು” ಎಂದು ಹೇಳಿದರು. ಸಾಹಿತಿ ಸುಧಾ ಆಡುಕಳಾ ಮಾತನಾಡಿ “ಮುನವ್ವರ್ ಅವರ ಭಾಷೆ ಅದ್ಭುತವಾಗಿದ್ದು, ಅವರು ಆಯ್ದುಕೊಳ್ಳುವ ಕಥಾವಸ್ತುಗಳು ಅವರನ್ನು ಈ ಕಾಲದ ಗಟ್ಟಿ ಕಥೆಗಾರರ ಸಾಲಿನಲ್ಲಿ ನಿಲ್ಲಿಸುತ್ತವೆ” ಎಂದರು. ಕಥೆಗಾರ ಮುನವ್ವರ್ ಜೋಗಿಬೆಟ್ಟು ಮಾತನಾಡಿ “ಜಗತ್ತಿನಲ್ಲಿರೋದು ಎರಡೇ ಜಾತಿ. ಒಂದು ಉಳ್ಳವರ ಜಾತಿ ಮತ್ತೊಂದು ಉಳ್ಳದೇ ಇರುವವರ ಜಾತಿ. ನನಗೆ ಮನುಷ್ಯನ…

Read More

ಕಾಸರಗೋಡು : ಶ್ರೀ ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯದ ಅಂಗವಾಗಿ ‘ನೃತ್ಯದ್ವಯ’, ‘ನೃತ್ಯಸಿರಿ’ ಹಾಗೂ’ ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ದಿನಾಂಕ 15ಆಗಸ್ಟ್ 2025ರ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಗೌತಮ ಕೃಷ್ಣ ದೇಂತಜೆ ಇವರ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನಕ್ಕೆ ವಯಲಿನ್ ನಲ್ಲಿ ಕುಮಾರಿ ಧನಾಶ್ರೀ ಶಬರಾಯ ಹಾಗೂ ಮೃದಂಗದಲ್ಲಿ ಶ್ರೀ ಆಶ್ಲೇಷ್ ಪಿ. ಎಸ್. ಸಹಕರಿಸಿದರು. ಬಳಿಕ ನಡೆದ ವಿದುಷಿ ಮಂಜುಳ ಸುಬ್ರಹ್ಮಣ್ಯ ಹಾಗೂ ವಿದ್ವಾನ್ ಶ್ರೀ ಮಂಜುನಾಥ್ ಎನ್. ಪುತ್ತೂರು ಇವರ ‘ನೃತ್ಯದ್ವಯ’ ಕಾರ್ಯಕ್ರಮ ಕಲಾರಸಿಕರಿಗೆ ಹೊಸ ಅನುಭೂತಿಯನ್ನು ನೀಡಿತು. ಕಾರ್ಯಕ್ರಮದ ಅಂತ್ಯದಲ್ಲಿ ನಾಟ್ಯರಂಗ ಪುತ್ತೂರು ಇಲ್ಲಿನ ಕಲಾವಿದರಿಂದ ‘ನೃತ್ಯಸಿರಿ’ ಭರತನಾಟ್ಯ ಪ್ರದರ್ಶನ ನಡೆಯಿತು. ಇವರಿಗೆ ಹಾಡುಗಾರಿಕೆಯಲ್ಲಿ ವಿದ್ವಾನ್ ಸ್ವರಾಗ್ ಮಾಹೆ, ನಾಟುವಾಂಗದಲ್ಲಿ ಕೋಲ್ಕತ್ತಾದ ಎನ್. ದೆಬಾಶಿಶ್, ಮೃದಂಗದಲ್ಲಿ ಬೆಂಗಳೂರಿನ ಗೌತಮ್ ಗೋಪಾಲಕೃಷ್ಣ ಹಾಗೂ ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ ಸಹಕರಿಸಿದರು.

Read More

ಬೆಂಗಳೂರು: `ಟೊಟೊ ಪುರಸ್ಕಾರ’ಕ್ಕೆ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯನ್ನು ಟಿ.ಎಫ್.ಎ. (ಟೊಟೊ ಫಂಡ್ಸ್ ದಿ ಆರ್ಟ್ಸ್). ಸ್ಥಾಪಿಸಿದ್ದು, ಪ್ರಶಸ್ತಿಯು ರೂಪಾಯಿ 60 ಸಾವಿರ ನಗದು ಬಹುಮಾನ ಒಳಗೊಂಡಿದೆ. ಬರಹಗಾರರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳುಹಿಸಬಹುದು. ಪ್ರವೇಶಗಳನ್ನು ಕಳುಹಿಸಲು 30 ಸೆಪ್ಟೆಂಬರ್ 2025 ಕೊನೆಯ ದಿನವಾಗಿದ್ದು, ಪ್ರವೇಶ ಪತ್ರವನ್ನು https://totofundsthearts.org/ ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಬರಹ ಮತ್ತು ಪ್ರವೇಶ ಎರಡನ್ನೂ [email protected] ಇಲ್ಲಿಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : ವಿವಿಧ ಪತ್ರಿಕೆಗಳಲ್ಲಿ ಸಂಪಾದಕೀಯ ವಿಭಾಗದಲ್ಲಿ ಸೇವೆ ಸಲ್ಲಿಸಿದ ಸಾಹಿತ್ಯ, ಸಂಸ್ಕೃತಿ ಒಲವಿನ ಹಿರಿಯ ಪತ್ರಕರ್ತ ಕಾರ್ಯಾಡಿ ಮಂಜುನಾಥ ಭಟ್ ಇವರು ಅಸೌಖ್ಯದಿಂದ ದಿನಾಂಕ 17 ಆಗಸ್ಟ್ 2025ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕುಂದಾಪುರ ತಾಲೂಕಿನ ನ ಗುಡ್ಡಟ್ಟು ಸಮೀಪದ ಹೆಸ್ಕತ್ತೂರು ಗ್ರಾಮದ ಹಾರಾಡಿಯ ಎಚ್. ಲಕ್ಷ್ಮೀನಾರಾಯಣ ಭಟ್ ಮತ್ತು ಗಂಗಮ್ಮ ದಂಪತಿಯ ಪುತ್ರನಾದ ಭಟ್ ಇವರು ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಪ.ಪೂ. ಶಿಕ್ಷಣ, ಉಡುಪಿ ಸಂಸ್ಕೃತ ಕಾಲೇಜಿನಲ್ಲಿ ಅಧ್ಯಯನ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿ, ಕುಂಜಿಬೆಟ್ಟು ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ. ಎಡ್. ಪದವಿ ಪಡೆದು ಬೆಂಗಳೂರಿನ ನ್ಯಾಶನಲ್ ಪ್ರೌಢಶಾಲೆಯಲ್ಲಿ ಕೆಲಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಾಲೇಜು ದಿನಗಳಿಂದಲೂ ವಾಸವಿರುತ್ತಿದ್ದ ಪೇಜಾವರ ಮಠವನ್ನು ಕೇಂದ್ರೀಕರಿಸಿಕೊಂಡು ಸಾಹಿತ್ಯ, ಸಂಸ್ಕೃತಿಯ ಕುರಿತಾದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಭಟ್, ಶಿಕ್ಷಕ ವೃತ್ತಿಯನ್ನು ಬಿಟ್ಟು ಪತ್ರಿಕಾರಂಗಕ್ಕೆ ಮಂಗಳೂರಿನ ‘ ನವಭಾರತ’ದ ಮೂಲಕ 1977ರಲ್ಲಿ ಕಾಲಿಟ್ಟರು. ಬಳಿಕ ‘ಮುಂಗಾರು’ ಪತ್ರಿಕೆಯ ಆರಂಭದಿಂದ ಕೊನೆಯವರೆಗೂ…

Read More

ಎಡನೀರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಎಡನೀರು ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ದಿನಾಂಕ 18 ಆಗಸ್ಟ್ 2025ರಂದು ಶ್ರೀಮಠದಲ್ಲಿ ತಾಳಮದ್ದಳೆ ‘ಭಕ್ತ ಮಯೂರಧ್ವಜ’ ಎಂಬ ಆಖ್ಯಾನದೊಂದಿಗೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಫುಲ್ಲಚಂದ್ರ ನೆಲ್ಯಾಡಿ, ಗಿರೀಶ್ ಮುಳಿಯಾಲ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪುಂಡಿಕಾಯಿ ರಾಜೇಂದ್ರ ಪ್ರಸಾದ್, ಲಕ್ಷ್ಮೀಶ ಬೇಂದ್ರೋಡಿ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ಮಯೂರಧ್ವಜ), ಗುಡ್ಡಪ್ಪ ಬಲ್ಯ (ತಾಮ್ರ ಧ್ವಜ), ರಾಜೇಂದ್ರ ಕಲ್ಲೂರಾಯ (ನಕುಲಧ್ವಜ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ಸುಬ್ಬಪ್ಪ ಕೈಕಂಬ (ಅರ್ಜುನ), ಅಚ್ಯುತ ಪಾಂಗಣ್ಣಾಯ (ಕುಮುದ್ವತಿ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಪೂಜ್ಯ ಶ್ರೀಗಳು ಕಲಾವಿದರಿಗೆ ಮಂತ್ರಾಕ್ಷತೆಯನ್ನು ಇತ್ತು ಹರಸಿದರು.

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕಾರ್ಕಳದ ಬಳಿ ನಕ್ರೆಯಲ್ಲಿರುವ ಖ್ಯಾತ ಸಾಹಿತಿ, ಶಿಕ್ಷಕ ಶ್ರೀ ಜೋರ್ಜ್ ಕ್ಯಾಸ್ತೆಲಿನೊರವರ ಮನೆ ‘ನಿಸರ್ಗ’, ಕಲಾಂಜಲಿ ವೇದಿಕೆಯಲ್ಲಿ ತನ್ನ ಅಚ್ಚುಮೆಚ್ಚಿನ ಕಾರ್ಯಕ್ರಮವಾದ ‘ಸಾಹಿತ್ಯ ಸಂಭ್ರಮ- 2 ಮತ್ತು ಕಾವ್ಯಾಂ- ವ್ಹಾಳೊ- 5 ಕಾರ್ಯಕ್ರಮವು ದಿನಾಂಕ 03 ಆಗಸ್ಟ್ 2025ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಸಾಹಿತ್ಯದ ಸಂಭ್ರಮವು ನಮ್ಮ ಬದುಕಿನ ಸಂಭ್ರಮವಾಗಬೇಕು. ಎಲ್ಲೆಲ್ಲಿಯೂ ಕೊಂಕಣಿಯ ಸದ್ದು ಸಡಗರ ಕೇಳಬೇಕು” ಎಂದು ಕರೆಕೊಟ್ಟರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ವಂದನೀಯ ಪ್ರಾನ್ಸಿಸ್ ಲುವಿಸ್ ಡೆಸಾರವರು ಮಾತಾನಾಡಿ, “ಕೊಂಕಣಿ ನಮ್ಮ ಜೀವಂತರಗತ ಭಾಗವಾಗಬೇಕು. ಅದು ಬರೇ ಬಳಸುವ ವಸ್ತುವಾಗಬಾರದು. ನಮ್ಮ ಮಾತೃಭಾಷೆಯಲ್ಲಿ ನಾವು ಯೋಚನೆ ಮಾಡುವುದು ಸಾಧ್ಯ. ಆ ಯೋಚನೆಯನ್ನು ಕಾರ್ಯರೂಪಗೊಳಿಸಲು ನಾವೆಲ್ಲರೂ ಪ್ರವೃತರಾಗಬೇಕು” ಎಂದು ಕರೆಕೊಟ್ಟರು. ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಮತ್ತು ಛಂದೋಶಾಸ್ತ್ರ…

Read More

ಬೆಂಗಳೂರು : ರಂಗಮಂಡಲ ಅಭಿನಯಿಸುವ ಆಶಾ ರಘು ಅವರ ‘ಪೂತನಿ’ ಏಕವ್ಯಕ್ತಿ ಪ್ರದರ್ಶನ ಮೂಡಲಪಾಯ ಯಕ್ಷಗಾನ ‘ಮ್ಯಾಳ’ ಶೈಲಿಯಲ್ಲಿ ದಿನಾಂಕ 22 ಆಗಸ್ಟ್ 2025ರಂದು ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ನಾಟಕ ಪ್ರದರ್ಶನ ರಂಗರ್ಪಣೆ ನಡೆಯಲಿದೆ. ಕರ್ಣಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಮತ್ತು ಜಾನಪದ ವಿದ್ವಾಂಸರಾದ ಡಾ. ಚಂದ್ರು ಕಾಳೇನಹಳ್ಳಿ ಇವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮಂಡ್ಯ ಕರ್ಣಾಟಕ ಸಂಘದ ಅಧ್ಯಕ್ಷರಾದ ಡಾ. ಜಯಪ್ರಕಾಶ ಗೌಡ ಮತ್ತು ಕರ್ಣಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯ ಇವರಿಗೆ ಅಭಿನಂದನೆ ಹಾಗೂ ಮೇರಿ ಪಿಂಟೋ ಇವರಿಗೆ ರಂಗ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಬಯಲಾಟ.. ದೊಡ್ಡಾಟ.. ಅಟ್ಟದಾಟ.. ಮ್ಯಾಳ ಹೀಗೆ ಹಲವು ಹೆಸರುಗಳಿಂದ ಕರೆಯಲ್ಪಡುವ ‘ಮೂಡಲಪಾಯ ಯಕ್ಷಗಾನ’ ಮೂಲ ದ್ರಾವಿಡ ಜನಪದ ರಂಗದಿಂದ ಕವಲೊಡೆದ ವಿಶಿಷ್ಟ ‘ರಂಗ ವೈಭವ’ .. ಪಡವಲಪಾಯ ಯಕ್ಷಗಾನದ ಸೋದರಿಕೆ.. ವಿಭಿನ್ನವಾದ ಶೈಲಿಯನ್ನು ಮೈಗೂಡಿಸಿಕೊಂಡು…

Read More

ಧಾರವಾಡ : ಕವಿ ಬೇಂದ್ರೆಯವರನ್ನು ಇನ್ನೊಬ್ಬ ಕನ್ನಡದ ಕವಿ ಗೋಪಾಲಕೃಷ್ಣ ಅಡಿಗರು’ಶ್ರಾವಣ ಪ್ರತಿಭೆ’ಯ ಕವಿ ಎಂದು ಬಣ್ಣಿಸಿದ್ದಾರೆ. ಬೇಂದ್ರೆಯವರು ತೀರಿಕೊಂಡಾಗ ಬೇಂದ್ರೆ ಕಾವ್ಯ ಕುರಿತು ಕನ್ನಡದ ಮೂವರು ಹಿರಿಯ ಕವಿಗಳು ಚರ್ಚಿಸುವಾಗ ಬೇಂದ್ರೆಯವರ ಕಾವ್ಯ ‘ಶ್ರಾವಣ ಪ್ರತಿಭೆ’ಯಿಂದ ಕೂಡಿದ್ದು ಎಂದು ಜಿ.ಎಸ್. ಶಿವರುದ್ರಪ್ಪನವರು ಹೇಳಿದರು. ಗೋಪಾಲಕೃಷ್ಣ ಅಡಿಗರು ತಮ್ಮ’ಸಾಕ್ಷಿ’ಯಲ್ಲಿ TS Eliot ಹೇಳುವ ‘Auditory imagination’ ಎಂಬ ಪದ ಸಮೂಹವನ್ನು ‘ಶ್ರಾವಣ ಪ್ರತಿಭೆ’ ಎಂದು ಕನ್ನಡಕ್ಕೆ ಅನುವಾದಿಸಿ, ಈ ಪ್ರತಿಭೆಯ ಕವಿ ಯಾರೆಂದರೆ ‘ಬೇಂದ್ರೇ’ ಎಂದು ಸಾರಿದರು. ನಾವು ಶ್ರಾವಣ ನೋಡಿದರೆ, ಬೇಂದ್ರೆ ಶ್ರಾವಣ ಕಂಡು, ಅನುಭವಿಸಿ ಅದಕ್ಕೆ ವಿಶಿಷ್ಟ ರೀತಿಯಲ್ಲಿ ಕಾವ್ಯದ ಸಂಸ್ಕಾರ ನೀಡಿದರು. ಶ್ರಾವಣ ಕುರಿತು ಬೇಂದ್ರೆಯವರು ಬರೆದಷ್ಟು ಜಗತ್ತಿನ ಕಾವ್ಯ ಪ್ರಪಂಚದಲ್ಲಿ ಯಾರು ಬರೆದಿಲ್ಲ. ಅವರ ಶ್ರಾವಣವೆಂದರೆ ಧಾರವಾಡದ ಶ್ರಾವಣ, ಸಾಧನಕೇರಿಯ ಶ್ರಾವಣ. ಈ ಶ್ರಾವಣನನ್ನು ನೆನಪಿಸುವ ಕಾರ್ಯಕ್ರಮ ‘ಶ್ರಾವಣದ ಕವಿ ಬೇಂದ್ರೆ’ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್, ಮಹಿಪತಿ ಸಾಂಸ್ಕೃತಿಕ ಕೇಂದ್ರ,…

Read More

ಮಂಗಳೂರು : ಶರಧಿ ಪ್ರತಿಷ್ಠಾನ (ರಿ.) ಮಂಗಳೂರು ಆಯೋಜಿಸುವ ಪುಟಾಣಿಗಳ ಕೈಯಿಂದ ‘ಮಣ್ಣಿನ ಗಣಪತಿ ಸ್ಪರ್ಧೆ’ಯನ್ನು ದಿನಾಂಕ 27 ಆಗಸ್ಟ್ 2025ರಂದು ಬೆಳಿಗ್ಗೆ 10-00 ಗಂಟೆಯಿಂದ ಮಂಗಳೂರಿನ ಸೌಟ್ಸ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯು 1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಮತ್ತು 8ರಿಂದ 10ನೇ ತರಗತಿ ಮೂರು ವಿಭಾಗದಲ್ಲಿ ನಡೆಯಲಿದ್ದು, ನೋಂದಾವಣೆ 8073214624 ಸಂಖ್ಯೆಯನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿರಿ. ನಿಯಮಗಳು ಮತ್ತು ಮಾರ್ಗಸೂಚಿಗಳು : ಮಣ್ಣಿನಿಂದಲೇ ಗಣಪನ ಆಕೃತಿ ತಯಾರಿಸಬೇಕು (ಸ್ಪರ್ಧಾ ಪ್ರಾಯೋಜಕರೇ ಮಣ್ಣನ್ನು ನೀಡುತ್ತಾರೆ / ಸ್ಪರ್ಧಿಗಳೇ ಮಣ್ಣನ್ನು ತರಲು ಅವಕಾಶವಿದೆ) ನೈಸರ್ಗಿಕ ಬಣ್ಣಗಳು : ರಾಸಾಯನಿಕ ಬಣ್ಣಗಳನ್ನು ಬಳಸುವಂತಿಲ್ಲ. ಬದಲಿಗೆ ನೈಸರ್ಗಿಕ ಬಣ್ಣಗಳನ್ನು ಬಳಸಿ, ಅರಿಶಿನ, ಕುಂಕುಮ, ಮತ್ತು ಇತರ ನೈಸರ್ಗಿಕ ವಸ್ತುಗಳಿಂದ ಮಾಡಿದ ಬಣ್ಣಗಳನ್ನು ಬಳಸಬೇಕು. ಅಲಂಕಾರ : ಮಣ್ಣು, ಅರಿಶಿನ, ಕುಂಕುಮ, ಅಕ್ಕಿ ಹಿಟ್ಟು, ಹೂವುಗಳು, ಎಲೆಗಳು, ಹಣ್ಣುಗಳು ಮುಂತಾದ ನೈಸರ್ಗಿಕ ವಸ್ತುಗಳನ್ನು ಬಳಸಿ ಮೂರ್ತಿಗಳನ್ನು ಅಲಂಕರಿಸಬೇಕು.…

Read More