Author: roovari

ಮಂಗಳೂರು : ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ವಿ.ವಿ. ಮತ್ತು ಕೆನರಾ ಕಾಲೇಜು ಜಂಟಿಯಾಗಿ ಆಯೋಜಿಸಿದ ಅಂತರ ಕಾಲೇಜು ಜಾನಪದ ಬುಡಕಟ್ಟು ಮತ್ತು ಶಾಸ್ತ್ರೀಯ ಏಕವ್ಯಕ್ತಿ ನೃತ್ಯ ಸ್ಪರ್ಧಾವಳಿ ‘ನಾಟ್ಯ ಸಂಭ್ರಮ -2023’ವು ಕೆನರಾ ಕಾಲೇಜಿನಲ್ಲಿ ದಿನಾಂಕ 18-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀದೇವಿ ನೃತ್ಯ ಕೇಂದ್ರದ ನಿರ್ದೇಶಕಿ ಡಾ. ಆರತಿ ಹೆಚ್. ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾಗದೆ ನಮ್ಮ ಸಂಸ್ಕೃತಿಯನ್ನು ಬೆಳೆಸುವ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ವ್ಯಕ್ತಿತ್ವ ವಿಕಸನಕ್ಕೆ ಪೂರಕ. ಅದಕ್ಕೆ ಹೆತ್ತವರ ಪ್ರೋತ್ಸಾಹ ಬಹಳ ಮುಖ್ಯ. ನಮ್ಮ ಶಾಲಾ-ಕಾಲೇಜು ದಿನಗಳಲ್ಲಿ ಇಂತಹ ಚಟುವಟಿಕೆಗಳು ಇರಲಿಲ್ಲ” ಎಂದು ಹೇಳಿದರು. ಯಾವುದೇ ತಂತ್ರಜ್ಞಾನವಿಲ್ಲದ ಆ ದಿನಗಳಲ್ಲಿ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿರುವುದನ್ನು ನೆನಪಿಸಿಕೊಂಡರು. ವಿದ್ಯಾರ್ಥಿ ಕ್ಷೇಮ ಪಾಲನ ನಿರ್ದೇಶನಾಲಯ ಮಂಗಳೂರು ವಿ.ವಿ. ಇದರ ನಿರ್ದೇಶಕರಾದ ಡಾ. ಗಣೇಶ್ ಸಂಜೀವ್ ಮುಖ್ಯ ಅತಿಥಿಯಾಗಿದ್ದು “ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಇಂತಹ ಕಾರ್ಯಕ್ರಮಗಳ ಮೂಲಕ ಅವಕಾಶ ಕಲ್ಪಿಸಿ ಕೊಡಬೇಕಾಗುತ್ತದೆ. ಸ್ಪರ್ಧೆಯಲ್ಲಿ…

Read More

ಮೂಡುಬಿದಿರೆ : ಸಂಗೀತ ಲೋಕದ ದಿಗ್ಗಜರಾದ ವಯೋಲಿನ್ ವಾದಕ ಮೈಸೂರು ಮಂಜುನಾಥ, ಕೊಳಲು ವಾದಕ ಪ್ರವೀಣ್‌ ಗೋಡ್ಖಿಂಡಿ ಹಾಗೂ ಖ್ಯಾತ ಚಲನಚಿತ್ರ ಹಿನ್ನೆಲೆಗಾಯಕ ವಿಜಯ ಪ್ರಕಾಶ್‌ ಇವರಿಗೆ ದಿನಾಂಕ 17-12-2023 ರಂದು ‘ಆಳ್ವಾಸ್ ವಿರಾಸತ್-2023’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲುರಂಗ ಮಂದಿರದ ವಿಶಾಲ ವೈಭವದ ವೇದಿಕೆಯಲ್ಲಿ ಆಸೀನರಾದ ಮೂವರು ಸಾಧಕರಿಗೆ ಅವರದ್ದೇ ರಾಗ ಸಂಯೋಜನೆಯ ವಯೋಲಿನ್, ಬಾನ್ಸುರಿ ಹಾಗೂ ಸಂಗೀತದ (ಜೈ ಹೋ) ಮೂಲಕ ಅಭಿಮಾನದ ಪ್ರೀತಿಯನ್ನು ಧಾರೆ ಎರೆಯಲಾಯಿತು. ಶಾಲು, ಹೂಹಾರ, ಸ್ಮರಣಿಕೆ, ಪ್ರಶಸ್ತಿ ಪತ್ರದ ಜೊತೆಗೆ ಒಂದು ಲಕ್ಷ ರೂಪಾಯಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪನ್ನೀರು, ತಿಲಕ, ಪುಷ್ಪಾರ್ಚನೆ ಹಾಗೂ ಆರತಿ ಮೂಲಕ ಗೌರವಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡವು ‘ಸ್ವರಗಾನದ ಆರತಿ’ ಗಾನಸುಧೆ ಹರಿಸಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿ ವಿನಮ್ರತೆಯಿಂದ ಮಾತನಾಡಿದ ಮೈಸೂರು ಮಂಜುನಾಥ, “ನನ್ನ ಲೋಕದ ಸಮಸ್ತ ಸಂಭ್ರಮ ಮೂಡುಬಿದಿರೆಗೆ ಆಳ್ವರು ತಂದಿದ್ದಾರೆ. ದೇವೇಂದ್ರ…

Read More

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂಟಪದಲ್ಲಿ ದಿನಾಂಕ 16-12-2023ರಂದು ನಡೆಯುತ್ತಿರುವ ಆಳ್ವಾಸ್ ವಿರಾಸತ್‌ನ ಮೂರನೇ ದಿನ ‘ಭಾವ ಲಹರಿ’ ಕಾರ್ಯಕ್ರಮವನ್ನು ಪ್ರಸಿದ್ಧ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಪ್ರಸ್ತುತಪಡಿಸಿದರು. ಶ್ರೇಯಾ ಜತೆಗೆ ಕಿಂಜಲ್ ಚಟರ್ಜಿ ಸಹ ಗಾಯಕರಾಗಿದ್ದರು. ಆಳ್ವಾಸ್ ವಿದ್ಯಾರ್ಥಿಗಳು ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಸಾಹಸ ನೃತ್ಯಗಳ ಮೂಲಕ ಮೆರುಗು ನೀಡಿದರು. ‘ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ. ಎಂಥ ಪ್ರೀತಿ, ಗೌರವದ ಸ್ವಾಗತ, ವೇದಿಕೆ, ಸಂಗೀತವನ್ನು ಆಸ್ವಾದಿಸುವವರ ದಂಡು ದೂರ ದಿಗಂತದವರೆಗೂ ಹಬ್ಬಿದೆಯೇನೋ ಎಂಬ ಭಾವನೆ ಹುಟ್ಟಿಸುವ ಸಭೆ, ತನ್ಮಯರಾಗಿ ಸಂಗೀತದೊಂದಿಗೆ ಮನಸ್ಸನ್ನು ಬೆಸೆದುಕೊಂಡಂತಿರುವ ನಿಮ್ಮನ್ನೆಲ್ಲ ಕಂಡಾಗ ನಾನೊಬ್ಬ ಭಾರತೀಯಳೆನ್ನಲು ಹೆಮ್ಮೆ ಪಡುತ್ತೇನೆ’ ಎಂದು ಉದ್ಗರಿಸಿದ ಶ್ರೇಯಾ ಘೋಷಾಲ್ “ಈ ಊರಲ್ಲಿ ಇಷ್ಟೊಂದು ಅಗಾಧ ಸಂಖ್ಯೆಯಲ್ಲಿ ಸಂಗೀತಾಸಕ್ತರು ಸೇರುತ್ತಾರೆಂದು ನಿರೀಕ್ಷಿಸಿರಲಿಲ್ಲ. ಆಳ್ವಾಸ್ ವಿರಾಸತ್ ಅನ್ನು ಸುಂದರವಾಗಿ ನಿರ್ವಹಿಸಲಾಗಿದೆ” ಎಂದರು. ‘ನಾನು ಹೃದಯಾಂತರಾಳದಿಂದ ಹಾಡುವೆ,…

Read More

ಮೂಡುಬಿದಿರೆ : ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕೃತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ ವೈಭವ’ ಮೊಳಗಿತು. ಹಿಂದಿ, ತಮಿಳು, ತೆಲುಗು, ಮಲಯಾಳಂ, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮರಾಠಿ ಸೇರಿದಂತೆ 19ಕ್ಕೂ ಅಧಿಕ ಭಾಷೆಗಳಲ್ಲಿ 3500 ಹಾಡುಗಳನ್ನು ಹಾಡಿದ ಖ್ಯಾತ ಹಿನ್ನೆಲೆ ಗಾಯಕ ಬಿನ್ನಿ ದಯಾಲ್ ಅವರ ಬಾಲಿವುಡ್, ಪಂಜಾಬ್, ತಮಿಳು ಸೇರಿದಂತೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ ಸ್ವರ ಮಾಧುರ್ಯಕ್ಕೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ತುಂಬಿದ ಪ್ರೇಕ್ಷಕರ ಕರತಾಡನ, ಜಯಕಾರ ಮುಗಿಲು ಮುಟ್ಟಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ಆಳ್ವಾಸ್ ವಿರಾಸತ್ ನ ಎರಡನೇ ದಿನ ದಿನಾಂಕ 15-12-2023ರಂದು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಿದ ಸಭಾಂಗಣದ ಮುಂಭಾಗದ ಭವ್ಯ ವೇದಿಕೆಯಲ್ಲಿ ಬಿನ್ನಿ ಗಾನದ ಬೆಳಕು ಹರಿಯಿತು. ‘ಈ ಹಾಡಲ್ಲಿ ನಾನು ಹೆಚ್ಚು…

Read More

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ‘ಆಳ್ವಾಸ್ ವಿರಾಸತ್’ ದಿನಾಂಕ 14-12-2023ರಂದು ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಅದ್ದೂರಿಯಾಗಿ ಪ್ರಾರಂಭಗೊಂಡಿತು. ಈ ಕಾರ್ಯಕ್ರಮವನ್ನು ರಾಜ್ಯಪಾಲ ಡಾ. ಥಾವರ್ ಚಂದ್ ಗೆಹ್ಲೋಟ್ ಇವರು ಉದ್ಘಾಟಿಸಿ ಮಾತನಾಡುತ್ತಾ “ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ. ವಿರಾಸತ್ ನ ಉದ್ಘಾಟನೆ ಬಹಳ ಖುಷಿ ನೀಡಿದೆ. ಸಂಸ್ಕಾರಯುತ ಶಿಕ್ಷಣ ನೀಡುವುದು ಆಳ್ವಾಸ್ ಗೆ ಶ್ರೇಯ. ಸಾಂಸ್ಕೃತಿಕ ಶಿಕ್ಷಣವು ವ್ಯಕ್ತಿತ್ವ ವಿಕಸನಕ್ಕೆ ಸ್ಫೂರ್ತಿಯಾಗಿದೆ. ಸಂಗೀತ ಹಾಗೂ ಕಲೆ ಎಲ್ಲರಿಗೂ ಖುಷಿ ನೀಡುತ್ತದೆ” ಎಂದು ಅಭಿನಂದಿಸಿದರು. ಆಳ್ವಾಸ್ ಕನ್ನಡ ಮಾಧ್ಯಮ ಶಾಲಾ ಶಿಕ್ಷಣವನ್ನು ಶ್ಲಾಘಿಸಿದ ಅವರು, “ಇದನ್ನು ಸರ್ವಶ್ರೇಷ್ಠ ಶಾಲೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಗತ್ತಿನ ಪ್ರಮುಖ ಐದು ಅಭಿವೃದ್ಧಿಶೀಲ ರಾಷ್ಟ್ರಗಳು ಮಾತೃಭಾಷೆಯಲ್ಲಿ ಶಿಕ್ಷಣ ನೀಡುತ್ತಿವೆ. ಮಾತೃಭಾಷೆ ವೃದ್ಧಿಗೆ ಆಳ್ವಾಸ್ ಇನ್ನಷ್ಟು ಕೊಡುಗೆ ನೀಡಲಿ. ಮೂರೂವರೆ ಸಾವಿರ…

Read More

ಕೋಟ : ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಸಂಸ್ಥೆಯ 2023ರ ಸಾಲಿನ ‘ಕಾಳಿಂಗ ನಾವಡ ಪ್ರಶಸ್ತಿ’ ಪ್ರದಾನ ಸಮಾರಂಭವು ಕೋಟದ ಹಂದಟ್ಟು ಉರಾಳಕೇರಿಯ ವೇದಿಕೆಯಲ್ಲಿ ದಿನಾಂಕ 25-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ವೇದ ಬಹ್ಮಶ್ರೀ ಅನಂತ ಪದ್ಮನಾಭ ಐತಾಳ ಇವರು ಮಾತನಾಡಿ “ಯಕ್ಷಗಾನಕ್ಕೆ ಮೆರುಗು ನೀಡಿ, ಯಕ್ಷಗಾನದ ಪರಿಚಯವೂ ಇಲ್ಲದಂತೆ ಪ್ರದೇಶಗಳಲ್ಲಿಯೂ ಯಕ್ಷಗಾನದ ಮಹತ್ವವನ್ನು ತಮ್ಮ ಗಾಯನದ ಮೂಲಕ ಸಾರಿ ಯಕ್ಷಗಾನದ ಆಸಕ್ತಿಯನ್ನು ಬೆಳೆಸಿದವರು ಕಾಳಿಂಗ ನಾವಡರು. ಕಾಳಿಂಗ ನಾವಡರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಭಾಗವತ, ಪ್ರಸಂಗಕರ್ತ ಶ್ರೀ ಸುರೇಶ್‌ ರಾವ್‌ ಬಾರ್ಕೂರು ಅವರಿಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ” ಎಂದು ಹೇಳಿದರು. ಕಾಳಿಂಗ ನಾವಡರ ಸಹೋದರ ಗಣಪಯ್ಯ ನಾವಡ, ಯಕ್ಷಗಾನ ಕಲಾವಿದರಾದ ಗೋವಿಂದ ಉರಾಳರು, ಗಣಪಯ್ಯ ಉರಾಳ, ಕಲಾಕದಂಬದ ಅಧ್ಯಕ್ಷ ಅಂಬರೀಶ್ ಭಟ್ ಹಾಗೂ ಕಲಾಕದಂಬದ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಳಿಕ ತೆಕ್ಕಟ್ಟೆ ಯಶಸ್ವಿ ಕಲಾಕೇಂದ್ರದ ಕಲಾವಿದರಿಂದ ‘ಗಾನ ವೈಭವ’ ಮತ್ತು…

Read More

‘ನಾಯಿ ನಾನು’ ನರೇಂದ್ರ ಎಸ್. ಗಂಗೊಳ್ಳಿಯವರ ಚೊಚ್ಚಲ ಕಥಾ ಸಂಕಲನ. ಇದರಲ್ಲಿ ಹದಿನೇಳು ಹೃದಯಸ್ಪರ್ಶಿ ಕಥೆಗಳಿವೆ. ಇವು ಜಗತ್ತಿನ ಸಮಸ್ತ ಜೀವಿಗಳಲ್ಲಿ ತಾನೇ ಎಲ್ಲಕ್ಕಿಂತ ಶ್ರೇಷ್ಠನೆಂದು ಬೀಗುವ ಮನುಷ್ಯನ ಹುಳುಕುಗಳನ್ನೂ, ಸ್ವಾರ್ಥ-ವಂಚನೆಗಳನ್ನೂ, ಮೂರ್ಖ ಆಲೋಚನೆಗಳನ್ನೂ ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸುತ್ತವೆ. ಆದ್ದರಿಂದ ವಿಷಾದವೇ ಈ ಕಥೆಗಳ ಸ್ಥಾಯೀಭಾವ. ಹೊರಗಿನಿಂದ ಸಭ್ಯನಾಗಿ ಕಾಣುವ ಒಬ್ಬ ವ್ಯಕ್ತಿಯಲ್ಲೂ ವಿಕೃತ ಕಾಮದ ಬೇರುಗಳು ಆಳಕ್ಕಿಳಿದಿರುತ್ತವೆ ಎಂಬುದಕ್ಕೆ ನಿದರ್ಶನವಾಗಿ ನಿಲ್ಲುವ ‘ಒಳ್ಳೆಯವನು’ ಎಂಬ ಕಥೆ ಇಂದಿನ ಸಮಾಜದಲ್ಲಿ ಪುಟ್ಟ ಹುಡುಗಿಯರ ಮೇಲೂ ಅತ್ಯಾಚಾರ ನಡೆಸುವ ಕ್ರೂರ ಪುರುಷರನ್ನು ಸ್ವವಿಮರ್ಶೆಗೊಳಪಡಿಸುತ್ತದೆ. ದೇವದಾಸಿ ಪದ್ಧತಿಯ ಪುರುಷ ಕ್ರೌರ್ಯವನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ ನಡೆಸ ಹೊರಟ ವ್ಯಕ್ತಿ ಆಂತರ್ಯದಲ್ಲಿ ಇನ್ನೂ ಬದಲಾಗದಿರುವ ಗೋಸುಂಬೆಯಾಗಿರುವುದನ್ನು ‘ಒಂದು ದೇವಿಯ ಕತೆ ‘ ತೆರೆದಿಡುತ್ತದೆ. ‘ಒಂದು ಚಪ್ಪಲಿಯ ಕತೆ ‘ ಆನ್ ಲೈನ್ ಖರೀದಿಯ ಥಳಕು ಬಳಕುಗಳ ಹಿಂದಿನ ಮೋಸದ ಕಥೆಯನ್ನು ಬಿತ್ತರಿಸುತ್ತದೆ. ಮಿತ್ರನಿಂದ ಪ್ರೇರಿತನಾಗಿ ಆನ್ ಲೈನ್ ಮೂಲಕ ದುಬಾರಿ ಹಣ ತೆತ್ತು ಆಕರ್ಷಕ ಚಪ್ಪಲಿ…

Read More

ಮಂಗಳೂರು : ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಭಜನಾ ಸಂಗಮ’ ಕಾರ್ಯಕ್ರಮವು ದಿನಾಂಕ 01-01-2024ರಂದು ಸಂಪನ್ನಗೊಂಡಿತು. ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರು ಭಕ್ತರ ಆಧ್ಯಾತ್ಮಿಕ ಮನೋಭಿಲಾಶೆಗಳನ್ನು ಈಡೇರಿಸಿದ ಕಲ್ಪತರು ದಿನದಂದು, ಕಲ್ಪತರು ಉತ್ಸವದ ಪ್ರಯುಕ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ 4-30ಕ್ಕೆ ಸರಿಯಾಗಿ ದೀನ್‌ರಾಜ್ ಕಳವಾರು ಅವರ ನೇತೃತ್ವದಲ್ಲಿ 400ಕ್ಕೂ ಹೆಚ್ಚಿನ ಮಕ್ಕಳಿಂದ ಮಂಗಳಾದೇವಿ ವೃತ್ತದಿಂದ ರಾಮಕೃಷ್ಣ ಮಠದವರೆಗೆ ಕುಣಿತ ಭಜನೆಯೊಂದಿಗೆ ಭವ್ಯ ಭಜನಾ ಶೋಭಾಯಾತ್ರೆ ನಡೆಯಿತು. ಈ ಶೋಭಾಯಾತ್ರೆಯಲ್ಲಿ 500ಕ್ಕೂ ಮಿಕ್ಕ ಭಕ್ತರು ಹಾಗೂ ವಿವಿಧ ಭಜನಾ ಮಂಡಳಿಗಳ ಸದಸ್ಯರು ಪಾಲ್ಗೊಂಡಿದ್ದರು. ಮಂಗಳಾದೇವಿ ವೃತ್ತದಿಂದ ಆರಂಭಗೊಂಡ ಭಜನಾ ಶೋಭಾಯಾತ್ರೆಯು ಮಂಗಳಾದೇವಿ ರಥಬೀದಿಯ ಮೂಲಕ ಸಾಗಿ ಮಂಗಳಾದೇವಿ ದೇವಸ್ಥಾನದ ಮುಂಭಾಗವಾಗಿ ರಾಮಕೃಷ್ಣ ಮಠವನ್ನು ಪ್ರವೇಶಿಸಿತು. ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂಭಾಗದಲ್ಲಿ ಮಕ್ಕಳು ಕುಣಿತ ಭಜನೆಯ ವಿಶೇಷ ಪ್ರದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಹಾಗೂ ಆಹ್ವಾನಿತ ಅತಿಥಿಗಳು ಮಕ್ಕಳೊಂದಿಗೆ…

Read More

ಕಾಸರಗೋಡು : ಕಾಸರಗೋಡು ನುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯವು ರಾಮಕ್ಷತ್ರಿಯ ಸಮಾಜದ ಸಾಹಿತಿಗಳ ತಲಾ ಒಂದೊಂದು ಕವಿತೆಗಳನ್ನು ಲೇಖಕರ ಭಾವಚಿತ್ರ, ವಿಳಾಸದೊಂದಿಗೆ ಆಯ್ದ 51 ಮಂದಿಯ ಕೃತಿ ರೂಪಕ್ಕಿಲಳಿಸಲು ಮುಂದಾಗಿದೆ. ಇದರ ಜೊತೆಗೆ ‘ರಾಮಕ್ಷತ್ರಿಯ ಕವಿತಾ ಕುಂಚ ಕವನ ಸಂಕಲನ’ಕ್ಕೆ ರಾಮಕ್ಷತ್ರಿಯ ಸಮಾಜದ ಉದಯೋನ್ಮುಖ ಕವಿ ಕವಿಯತ್ರಿಯರು ತಲಾ ಮೂರು ಕವಿತೆ ಅಥವಾ ಚುಟುಕುಗಳನ್ನು ಭಾವಚಿತ್ರ, ಮೊಬೈಲ್ ನಂಬರ್ ಮತ್ತು ವಿಳಾಸದೊಂದಿಗೆ ಈ ಕೆಳಗಿನ ವಾಟ್ಸಪ್ ಸಂಖ್ಯೆಗೆ ಫೆಬ್ರವರಿ ಒಂದರ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ವಾಮನ್ ರಾವ್ ಬೇಕಲ್…..9633073400, ಶ್ರೀಮತಿ ರೇಖಾ ಸುದೇಶ್ ರಾವ್………948197862, ಪ್ರದೀಪ್ ಬೇಕಲ್ 9995232032

Read More

ಬೆಂಗಳೂರು : ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ‘ಖಿದ್ಮಾ ಕಾವ್ಯಾಮೃತ’ ಕಾರ್ಯಕ್ರಮವು ದಿನಾಂಕ 07-01-2024ರ ಭಾನುವಾರದಂದು ಬೆಂಗಳೂರಿನ ಜಯನಗರದ ವಿಜಯ ಕಾಲೇಜಿನ ಹಸಿರು ಭವನದಲ್ಲಿ ನಡೆಯಿತು. ಶ್ರೀ ಯೂಸಫ್ ಹೆಚ್.ಬಿ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ವಿಜಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಿ.ಆರ್. ಸುಧಾ ಉದ್ಘಾಟಿಸಿದರು. ಶ್ರೀಮತಿ ಅಶ್ವಿನಿ ಎಸ್. ಅಂಗಡಿ ಕವಿಗೋಷ್ಠಿಯ ಅಧ್ಯಕ್ಷತೆ ಮತ್ತು ಡಾ. ಬಿ.ಎನ್ ಸುರೇಶ್ ಬಾಬು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಕವಿಗಳು ಸ್ವರಚಿತ ಕವನವನ್ನು ವಾಚಿಸಿದರು. ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತರಷ್ಟು ಸಾಧಕರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ಎಲ್.ಕೆ. ಶ್ರೀವತ್ಸ, ಖಿದ್ಮಾ ಫೌಂಡೇಶನ್ನಿನ ಅಧ್ಯಕ್ಷ ಹಾಶಿಂ ಬನ್ನೂರು, ಶ್ರೀಮತಿ ಕಮಲಾಕ್ಷಿ…

Read More