Subscribe to Updates
Get the latest creative news from FooBar about art, design and business.
Author: roovari
ಬೆಳ್ತಂಗಡಿ : ಪ್ರೊ. ಮಧೂರು ಮೋಹನ ಕಲ್ಲೂರಾಯ ಮತ್ತು ಬಳಗದವರಿಂದ ಶ್ರೀ ಕ್ಷೇತ್ರ ಪುತ್ರಬೈಲಿನ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿಪೂಜೋತ್ಸವದ ಪ್ರಯುಕ್ತ ‘ಕದಂಬ ಕೌಶಿಕೆ’ ಎಂಬ ಯಕ್ಷಗಾನ ತಾಳಮದ್ದಳೆಯು ದಿನಾಂಕ 25-02-2024ರಂದು ನಡೆಯಿತು. ಮೇಳದಲ್ಲಿ ಭಾಗವತರಾಗಿ ಕುಮಾರಿ ಶ್ರೀ ವಿದ್ಯಾ ಐತಾಳ್, ಶ್ರೀ ಜನಾರ್ದನ ತೋಳ್ಪಾಡಿತ್ತಾಯ, ಶ್ರೀ ಮುರಳೀಧರ ಆಚಾರ್ಯ ಪಾಲ್ಗೊಂಡಿದ್ದರು. ಮುಮ್ಮೇಳದಲ್ಲಿ ಮಧೂರು ಮೋಹನ ಕಲ್ಲೂರಾಯ, ಮಧೂರು ಸುಂದರ ಕೃಷ್ಣ, ಉದಯಶಂಕರ ಭಟ್, ಶ್ರೀ ರಾಮಕೃಷ್ಣ ನಿನ್ನಿಕಲ್ಲು, ದಿನೇಶ್ ಭಟ್ ಬಳಂಜ, ಶ್ರೀಮತಿ ಕೆ.ಆರ್. ಸುವರ್ಣ ಕುಮಾರಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಶ್ರೀ ಮೋಹನದಾಸರು ಕಲಾವಿದರನ್ನು ಗೌರವಿಸಿದರು.
ಮಂಗಳೂರು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ಸ್ ಕಾರ್ಪೋರೇಶನ್ ಸಹಯೋಗದಲ್ಲಿ ದಿನಾಂಕ 01-03-2024ರಿಂದ 03-03-2024ರವೆರೆಗೆ ಪಣಂಬೂರು ಬೀಚ್ ನಲ್ಲಿ ‘ಜಾನಪದ ಕಡಲೋತ್ಸವ’ವನ್ನು ಆಯೋಜಿಸಲಾಗಿದೆ. ದಿನಾಂಕ 01-03-2024ರಂದು ಸಂಜೆ 6.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ‘ಜಾನಪದ ಕಡಲೋತ್ಸವ ಪ್ರಶಸ್ತಿ’ ಪ್ರದಾನ ಮತ್ತು ಹದಿಮೂರು ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 7.30ರಿಂದ ಡಾ. ರಮೇಶ್ಚಂದ್ರ ಹಾಗೂ ಕಲಾವತಿ ದಯಾನಂದ ಬಳಗದಿಂದ ‘ಜಾನಪದ ರಸ ಸಂಜೆ’ ಕಾರ್ಯಕ್ರಮ ಜರಗಲಿದೆ. ದಿನಾಂಕ 02-03-2024ರಂದು ಸಂಜೆ 5.30ರಿಂದ ವಿಚಾರ ಸಂಕಿರಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ. ಶಾಸಕ ಅಶೋಕ್ ಕುಮಾರ್ ರೈ ಮತ್ತು ಕ.ಜಾ.ಪ. ಬೆಂಗಳೂರು ಆಡಳಿತಾಧಿಕಾರಿ…
ಕಾಸರಗೋಡು : ಕಾಸರಗೋಡಿನ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸಂಘ ‘ರಂಗ ಚಿನ್ನಾರಿ’ ಇದರ ಮಹಿಳಾ ಘಟಕ ‘ನಾರಿ ಚಿನ್ನಾರಿ’ಯು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ‘ಗೃಹ ಸಲ್ಲಾಪ’, ಸಾಧಕಿಯರ ಜೊತೆ ಮಾತುಕತೆಯ ವಿನೂತನ ಕಾರ್ಯಕ್ರಮವು ದಿನಾಂಕ 26-02-2024ರ ಸೋಮವಾರ ಸಂಜೆ ಘಂಟೆ 4.00 ರಿಂದ ಕಾಸರಗೋಡಿನ ಕೂಡ್ಲು ರಾಮದಾಸ ನಗರದ ‘ಭುವನ ವಿಜಯ’ದಲ್ಲಿ ನಡೆಯಿತು. ಈ ಸರಣಿ ಕಾರ್ಯಕ್ರಮದ ಪ್ರಥಮ ಕಾರ್ಯಕ್ರಮವನ್ನು ಲೇಖಕಿ ಹಾಗೂ ಗಾಯಕಿಯಾದ ಕೃಪಾ ಕೆ. ಜಿ. ಶಾನುಭೋಗ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಧೂರು ಗ್ರಾಮ ಪಂಚಾಯತಿನ ಮಾಜಿ ಉಪಾಧ್ಯಕ್ಷೆ ಸುಜ್ಞಾನಿ ಶಾನುಭೋಗ್ ಮಾತನಾಡಿ “ರಂಗ ಚಿನ್ನಾರಿಯ ಮಹಿಳಾ ಘಟಕ ನಾರಿ ಚಿನ್ನಾರಿಯು ಕಳೆದ 12 ತಿಂಗಳಲ್ಲಿ ನಿರಂತರವಾಗಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಮಹಿಳೆಯರಲ್ಲಿ ಸೂಕ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿ ಕೊಟ್ಟಿದೆ. ಇದೀಗ ‘ಗೃಹ ಸಲ್ಲಾಪ’ದ ಮುಖಾಂತರ ಸಾಧಕಿಯರ ಮನೆ ಮನ ಮುಟ್ಟುವ ಕೆಲಸ ಮಾಡುತ್ತಿರುವುದು ಸಂತಸ ನೀಡಿದೆ.”…
ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಮಾಸಿಕ ಕಾರ್ಯಕ್ರಮ ಹಾಗೂ ಕಥಾಗೋಷ್ಠಿ ದಿನಾಂಕ 25-02-2024 ರಂದು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ನಡೆಯಿತು. ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಗಂಗಾಧರ ಪಣಿಯೂರು ಕಥಾರಚನೆ ಮತ್ತು ಕಥಾ ಪ್ರಕಾರಗಳ ಕುರಿತು ಮಾಹಿತಿ ನೀಡಿದರು ಮತ್ತು ಕಥೆಗಳನ್ನು ವಿಮರ್ಶಿಸಿ ಕಥಾ ಕೌಶಲದ ಬಗ್ಗೆ ಅರಿವು ಮೂಡಿಸಿದರು. ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಸದಸ್ಯರಾದ ಶ್ಯಾಮಲಾ ಗೋಪಿನಾಥ್, ಸಾವಿತ್ರಿ ಮನೋಹರ್, ಅನುಪಮಾ ಚಿಪ್ಲುಂಕರ್, ಶೈಲಜಾ ಹೆಗ್ಡೆ, ಡಾ. ಸುಮತಿ ಪಿ., ವಸುಧಾ ಶೆಣೈ, ಮಾಲತಿ ಜಿ. ಪೈ, ಶ್ರೀ ಮುದ್ರಾಡಿ, ಪ್ರಜ್ಞಾವಾಣಿ ಗೋರೆ ಹಾಗೂ ರೇಖಾ ವಸಂತ್ ಕಥಾ ಗೋಷ್ಠಿಯಲ್ಲಿ ಭಾಗವಹಿಸಿದ್ದರು. ಗೀತಾ ಆರ್ ಮರಾಠ ಪ್ರಾರ್ಥಿಸಿ, ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಅಧ್ಯಕ್ಷ ಮಿತ್ರಪ್ರಭಾ ಹೆಗ್ಡೆ ಸ್ವಾಗತಿಸಿ, ಬಿ. ವಿ. ಸುಲೋಚನಾ ಕಾರ್ಯಕ್ರಮ ನಿರೂಪಿಸಿ, ಶಕುಂತಲಾ ಜಿ. ಅಡಿಗ ವಂದಿಸಿದರು.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ದಿನಾಂಕ 19-02-2024 ರಂದು ನಿಧನರಾದ ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಅವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 24-02-2024ರ ಶನಿವಾರದಂದು ಮಂಗಳೂರಿನ ಎಸ್. ಡಿ. ಎಂ. ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ವಾಂಸ ಡಾ. ಪ್ರಭಾಕರ ಜೋಷಿ “ಸಾಮಾನ್ಯರ ಜೀವನದ ಜೀವಂತ ಪಾತ್ರಗಳು ಕೆ. ಟಿ. ಗಟ್ಟಿ ಅವರ ಸಾಹಿತ್ಯದಲ್ಲಿ ಎದ್ದು ಕಾಣುವ ರೀತಿಯಲ್ಲಿ ಇರುತ್ತಿದ್ದವು. ಅವರ ಎಲ್ಲಾ ಸಾಹಿತ್ಯದ ಸಮಗ್ರ ಅಧ್ಯಯನ ವಿದ್ಯಾರ್ಥಿಗಳಿಗೆ ಕಲಿಕೆಯ ಪಾಠವಾಗಬೇಕು.” ಎಂದು ನುಡಿದರು. ಪ್ರಾಧ್ಯಾಪಕ ಡಾ. ಶ್ರುತಕೀರ್ತಿರಾಜ್ ಮಾತನಾಡಿ “ಸಾಹಿತಿ ಕೆ. ಟಿ. ಗಟ್ಟಿ ಅವರು ದಿನದ ನಿತ್ಯ ಕರ್ಮ ಬಿಟ್ಟರೆ ಇಪ್ಪತ್ನಾಲು ಗಂಟೆಗಳ ಸಮಯ ಬರವಣಿಗೆಗೆ ಮೀಸಲಿಟ್ಟಿದ್ದರು. ಸಮಯ ಮಿಕ್ಕಿದರೆ ಕೃಷಿಯಲ್ಲಿ ತೊಡಗುತ್ತಿದ್ದರು. ಆದುದರಿಂದ ಅವರ ಬರಹಗಳು ನೈಜತೆಯ ಆಗರವಾಗಿದ್ದುವು.” ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯದ ಬೆಳವಣಿಗೆಗೆ ಮತ್ತು ಅಧ್ಯಯನಕ್ಕೆ…
ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಂಗಹಬ್ಬದ 2ನೇ ದಿನದ ಕಾರ್ಯಕ್ರಮವು ದಿನಾಂಕ 26-02-2024ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ. ಕೊಡವೂರು ಮಾತನಾಡಿ “ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ. ಯಾವುದೇ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಾಗ ಬದುಕು ಸಂಭ್ರಮದಿಂದ ಕೂಡಿರುತ್ತದೆ. ವೃತ್ತಿ, ಪ್ರವೃತ್ತಿ ಬೇರೆ ಬೇರೆಯಾಗಿರುತ್ತದೆ. ವೃತ್ತಿಗೆ ಹೆಚ್ಚು ಗಮನಕೊಡಬೇಕಾಗುತ್ತದೆ. ಆಗ ಪ್ರವೃತ್ತಿ ಹಿಂದಕ್ಕೆ ಸರಿಯುತ್ತದೆ. ಮಕ್ಕಳಲ್ಲಿ ಉತ್ತಮ ಅಭಿರುಚಿ ಬೆಳೆಸಲು ಪ್ರವೃತ್ತಿ ಅಗತ್ಯ. ಕಾಲ ಬದಲಾಗಿದೆ, ಮಕ್ಕಳು ಬದಲಾಗಿದ್ದಾರೆ. ಹಿಂದಿನಂತೆ ಇಲ್ಲ ಎಂಬ ಮಾತುಗಳಿವೆ. ಆದರೆ, ಬದಲಾಗಿದ್ದು, ಕಾಲ ಅಥವಾ ಮಕ್ಕಳು ಅಲ್ಲ. ಬದಲಾಗಿದ್ದು, ಹೆತ್ತವರ ಮನಸ್ಸು. ಇರುವ ಒಂದು ಅಥವಾ ಎರಡು ಮಕ್ಕಳೇ ಸಂಗೀತ, ಕರಾಟ, ಕ್ರೀಡೆ, ಕಲಿಕೆ ಎಲ್ಲದರಲ್ಲಿಯೂ ಮೊದಲ ಸ್ಥಾನದಲ್ಲಿರಬೇಕು ಎಂದು ಹೆತ್ತವರು ಬಯಸುತ್ತಿರುವುದೇ ಮಕ್ಕಳು ಹಿಂದಿನ ಕಾಲದಲ್ಲಿ ಇರುವಂತೆ ಈಗ…
ಮಂಗಳೂರು : ತುಳು ಪರಿಷತ್ ವತಿಯಿಂದ ಇತ್ತೀಚೆಗೆ ನಿಧನ ಹೊಂದಿದ ಖ್ಯಾತ ಕಾದಂಬರಿಕಾರ, ಭಾಷಾ ತಜ್ಞ ಕೆ.ಟಿ.ಗಟ್ಟಿಯವರಿಗೆ ದಿನಾಂಕ 24-02-2024ರಂದು ಮ್ಯಾಪ್ಸ್ ಕಾಲೇಜಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಶಿವರಾಮ ಶೆಟ್ಟಿ ಮಾತನಾಡಿ “ಕೆ.ಟಿ.ಗಟ್ಟಿ ಅವರ ಕಾದಂಬರಿಗಳ ಪಾತ್ರಗಳಲ್ಲಿ ಓದುಗರು ತಮ್ಮ ಬಿಂಬವನ್ನೇ ಕಾಣುತ್ತಿದ್ದರು. ಒಂದು ಕಾಲ ಘಟ್ಟದಲ್ಲಿ ಶಿವರಾಮ ಕಾರಂತ ಹಾಗೂ ಎಸ್.ಎಲ್. ಭೈರಪ್ಪ ಅವರಿಗಿಂತಲೂ ದೊಡ್ಡ ಓದುಗ ವರ್ಗವನ್ನು ಹೊಂದಿದ್ದ ಕಾದಂಬರಿಕಾರ ಕೆ.ಟಿ. ಗಟ್ಟಿ ಆಗಿದ್ದರು. ತಮ್ಮ ಕಾದಂಬರಿಗಳಲ್ಲಿ ಬಡತನ, ನೋವು, ಸಂಕಟ ಹಾಗೂ ಬದುಕಿನ ಸಂಬಂಧಗಳ ಚಿತ್ರಣದೊಂದಿಗೆ ಅವರು ಕಟ್ಟಿಕೊಟ್ಟ ಭಾವ ಪ್ರಪಂಚ ಜನರನ್ನು ಆಕರ್ಷಸಿತ್ತು” ಎಂದು ಅಭಿಪ್ರಾಯಪಟ್ಟರು. ಮೂಲ್ಕಿ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಮಾತನಾಡಿ, “ಗಟ್ಟಿ ಅವರ ಬದುಕು ಬಾಲ್ಯದ ಕಹಿ ಘಟನೆಗಳು, ಜಾತಿಯ ಕಾರಣಕ್ಕೆ ಎದುರಿಸಿದ ಅವಮಾನಗಳಿಂದ ಮಾಗಿತ್ತು. ಹಾಗಾಗಿಯೇ ಅವರ ಬರಹಗಳಲ್ಲಿ ಬಡ ಮಧ್ಯಮ ವರ್ಗದ ಜನರ ಬವಣೆ, ಹೆಣ್ಣಿನ ಶೋಷಣೆಗಳನ್ನು…
ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ಆಯೋಜಿಸಿದ್ದ 222ನೇ ತಿಂಗಳ ‘ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ’ವು ದಿನಾಂಕ 25-02-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಜಿಲ್ಲಾ ಕಚೇರಿ ಸಹಾಯಕ ಪ್ರಬಂಧಕ ಎಚ್.ಎ. ನಾಗರಾಜ್ ಇವರು ಮಾತನಾಡಿ “ಸಾಹಿತ್ಯದ ಒಲವು ಕಡಿಮೆಯಾಗುತ್ತಿರುವ ಈ ಹೊತ್ತಿನಲ್ಲಿ ಸೃಜನಶೀಲತೆಯ ವೃದ್ಧಿಗೆ ಸಾಹಿತ್ಯ ಹುಣ್ಣಿಮೆ ಪ್ರೇರಣಾದಾಯಕ. ಸಾಹಿತ್ಯ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ. ಹೊಸತನದ ಪ್ರಬುದ್ಧತೆಗೆ ಸಾಹಿತ್ಯ ಸಾಕಾರವಾಗಿದ್ದು, ಮುಂದಿನ ದಿನಗಳಲ್ಲಿ ಕರ್ಣಾಟಕ ಬ್ಯಾಂಕ್ ವತಿಯಿಂದ ಸಾಹಿತ್ಯ ಹುಣ್ಣಿಮೆ ನಡೆಸಲು ಅನುವು ಮಾಡಿಕೊಡಬೇಕು” ಎಂದು ಕೋರಿದರು. “2004ರಲ್ಲಿ ಪ್ರಾರಂಭವಾದ ಸಾಹಿತ್ಯ ಹುಣ್ಣಿಮೆಯನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಸಾಹಿತ್ಯ ಹಾಗೂ ಸಾಂಸ್ಕೃತಿಕ ಮನಸ್ಸುಗಳನ್ನು ಕಟ್ಟುವಲ್ಲಿ ಸಾಹಿತ್ಯ ಹುಣ್ಣಿಮೆಯನ್ನು ಪ್ರೇರಕ ವೇದಿಕೆಯಾಗಿ ರೂಪಿಸುತ್ತಾ ಬಂದಿದ್ದೇವೆ” ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಂಜುನಾಥ ಹೇಳಿದರು. ಕಾರ್ಯಕ್ರಮದಲ್ಲಿ ಹಾಸ್ಯ…
ಕಾಸರಗೋಡು : ಕನ್ನಡ ಭವನ ಗ್ರಂಥಾಲಯ, ಕನ್ನಡ ಭವನ ಪ್ರಕಾಶನದ ಸಾರಥ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಹಾಗೂ ಪ್ರದೀಪ್ ಕುಮಾರ್ ಕಲ್ಕೂರ ಸಹಕಾರದಲ್ಲಿ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಭಾಂಗಣದಲ್ಲಿ ದಿನಾಂಕ 22-02-2024ರಂದು ಶ್ರೀಮಾನ್ ಪಂಜೆ ಮಂಗೇಶರಾಯರ 150ನೇ ಜನ್ಮದಿನ ಸಂಭ್ರಮದ ಕಾರ್ಯಕ್ರಮಗಳು ನಡೆಯಿತು. ನಿವೃತ್ತ ಪ್ರಾಧ್ಯಾಪಕ ಡಾ. ಪಿ. ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಕ.ಸಾ.ಪ. ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಎಂ.ಪಿ. ಶ್ರೀನಾಥ್, ಡಾ. ಜಯಪ್ರಕಾಶ್ ನಾರಾಯಣ್, ಡಾ. ಕೆ. ಕಮಲಾಕ್ಷ, ಡಾ. ಯು. ಮಹೇಶ್ವರಿ, ಪ್ರೊ. ಪಿ.ಎನ್. ಮೂಡಿತ್ತಾಯ, ಪ್ರೊ. ಎ. ಶ್ರೀನಾಥ್, ಕವಿ ವಿ.ಬಿ. ಕುಳಮರ್ವ, ನ್ಯಾಯವಾದಿ ಥೋಮಸ್ ಡಿ’ಸೋಜಾ, ಕಥಾಬಿಂದು ಪ್ರಕಾಶನದ ರೂವಾರಿ ಸಾಹಿತಿ ಪಿ.ವಿ. ಪ್ರದೀಪ್ ಕುಮಾರ್, ಡಾ. ಪಿ. ಕೃಷ್ಣ ಭಟ್,…
ಉಡುಪಿ : ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಇದರ ಬಯಲು ರಂಗಮಂದಿರಲ್ಲಿ ಸುಮನಸಾ ಕೊಡವೂರು ಉಡುಪಿ ಇವರು ಆಯೋಜಿಸಿದ್ದ ವಾರಗಳ ಕಾಲ ನಡೆಯಲಿರುವ ಥಿಯೇಟರ್ ಫೆಸ್ಟಿವಲ್ನ 12ನೇ ರಂಗಹಬ್ಬವು ದಿನಾಂಕ 25-02-2024ರಂದು ಪ್ರಾರಂಭವಾಯಿತು. ಈ ರಂಗಹಬ್ಬವನ್ನು ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ದನ್ (ಜನ್ನಿ) ಇವರು ಉದ್ಘಾಟಿಸಿ ಮಾತನಾಡುತ್ತಾ “ರಂಗದಲ್ಲಿ ಪ್ರದರ್ಶಿಸುವ ನಾಟಕಗಳ ಸಂದೇಶ ಸಂಬಂಧಗಳನ್ನು ಬೆಸೆಯುವಂತೆ ಇರಬೇಕು. ರಂಗಭೂಮಿಯು ಸತ್ಯವನ್ನು ಪ್ರತಿಪಾದಿಸುವ ರಂಗಾವರಣವಾಗಿದೆ” ಎಂದು ಹೇಳಿದರು. ರಂಗ ಸಾಧಕಿ ಗೀತಾ ಸುರತ್ಕಲ್ ಸನ್ಮಾನ ಸ್ವೀಕರಿಸಿ ಮಾತನಾಡಿ, “ರಂಗಭೂಮಿಗೆ ಕಲಾವಿದರಿಗಿಂತ ಪ್ರೇಕ್ಷಕರೇ ಪ್ರಮುಖರಾಗಿದ್ದಾರೆ. ಎಷ್ಟೇ ಖ್ಯಾತ ಕಲಾವಿದರಿದ್ದರೂ ಅವರ ಅಭಿನಯ ನೋಡಲು ಪ್ರೇಕ್ಷರಿಲ್ಲದಿದ್ದರೆ ರಂಗಭೂಮಿ ನಡೆಯದು. ರಂಗಭೂಮಿಯತ್ತ ಪ್ರೇಕ್ಷಕರನ್ನು ಆಕರ್ಷಿಸುವ ಕಾರ್ಯ ಮಾಡುತ್ತಿರುವ ಉಡುಪಿಯ ಸುಮನಸಾ ಸಂಸ್ಥೆಯ ಕಾರ್ಯ ಶ್ಲಾಘನೀಯ” ಎಂದರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಸಾಧು ಸಾಲ್ಯಾನ್, ನವೀನ್ ಅಮೀನ್ ಶಂಕರಪುರ, ಕೊಡಂಕೂರಿನ ಶಿರಡಿ ಸಾಯಿಬಾಬಾ ಮಂದಿರದ…