Author: roovari

ಹಾಸನ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆಯಾದ ಬೆಂಗಳೂರಿನ ರಂಗಕಹಳೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಇದರ ಮಾರ್ಗದರ್ಶನದಲ್ಲಿ ‘22ನೇ ಕುವೆಂಪು ನಾಟಕೋತ್ಸವ 2023’ ಕುವೆಂಪು ಜನ್ಮದಿನೋತ್ಸವ, ವಿಚಾರ ಸಂಕಿರಣ, ಸಾಧಕರಿಗೆ ಗೌರವಾರ್ಪಣೆ, ಚಲನಚಿತ್ರ ಪ್ರದರ್ಶನ, ಕುವೆಂಪು ಗೀತಗಾಯನಗಳು ದಿನಾಂಕ 28-12-2023ರಿಂದ 31-12-2023ರವರೆಗೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ದಿನಾಂಕ 28-12-2023ರಂದು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜನಪದ ವಿದ್ವಾಂಸರಾದ ಡಾ. ಹಂಪನಹಳ್ಳಿ ತಿಮ್ಮೇಗೌಡ ಇವರು ವಹಿಸಲಿದ್ದು, ಹಾಸನ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸತ್ಯಭಾಮ ಸಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ರಂಗಕಹಳೆ ತಂಡದವರಿಂದ ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ಮತ್ತು ಓಹಿಲೇಶ ಎಲ್. ನಿರ್ದೇಶನದಲ್ಲಿ ಗೌರಿಶಂಕರ ಸಾಂಸ್ಕೃತಿಕ ಕ್ರೀಡಾದತ್ತಿ ತಂಡದಿಂದ ‘ಮೋಡಣ್ಣನ ತಮ್ಮ’ ನಾಟಕ ಪ್ರದರ್ಶನ, ದಿನಾಂಕ 29-12-2023ರಂದು ಟಿ.ಎಂ. ಬಾಲಕೃಷ್ಣ ನಿರ್ದೇಶನದ ಬೆಂಗಳೂರಿನ ಬಿ.ಎಂ.ಟಿ.ಸಿ. ಸಾಂಸ್ಕೃತಿಕ ಕಲಾ ಕುಠೀರ ಅಭಿನಯಿಸುವ ‘ಯಮನ…

Read More

ಮಡಿಕೇರಿ : ಕೊಡವ ಸಾಂಪ್ರದಾಯಿಕ ವಾಲಗಕ್ಕೆ ಅದರದೇ ಆದ ಹಿನ್ನಲೆ ಹಾಗೂ ಗೌರವ ಸ್ಥಾನಮಾನಗಳಿವೆ. ಕೊಡವ ವಾಲಗದ ನಾದಕ್ಕೆ ಕೈ ಕಾಲು ಆಡಿಸದವರೇ ಇಲ್ಲ. ತೊಟ್ಟಿಲ ಮಗುವಿನಿಂದ ಹಿಡಿದು ಹಾಸಿಗೆಯಲ್ಲಿ ಮಲಗಿರುವ ವಯೋವೃದ್ಧರು ಕೂಡ ಕೊಡವ ವಾಲಗದ ಸದ್ದಿಗೆ ಕಾಲು ಕೈ ಆಡಿಸುತ್ತಾರೆ, ಕುಣಿಯಲು ಪ್ರಯತ್ನಿಸುತ್ತಾರೆ. ಹಬ್ಬಹರಿದಿನಗಳಲ್ಲಿ, ಮದುವೆ ಸೇರಿದಂತೆ ಇತರ ಸಮಾರಂಭಗಳಲ್ಲಿ ಕೊಡವ ಸಾಂಪ್ರದಾಯಿಕ ವಾಲಗ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ವಿಭಿನ್ನವಾದ ಸಂಗೀತ ಪರಿಕರದ ವಾದ್ಯಕ್ಕೆ ಹಬ್ಬದ ಮೆರುಗು ನೀಡಿದವರು ವಿರಾಜಪೇಟೆಯ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಎಂದರೆ ತಪ್ಪಲ್ಲ. ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಕೊಡವ ವಾಲಗತ್ತಾಟ್ ನಮ್ಮೆ ಜನರನ್ನು ತನ್ನತ್ತ ಸೆಳೆಯುತ್ತಿದೆ ಎನ್ನುವುದು ಗಮನಾರ್ಹ ಸಂಗತಿ. ಖ್ಯಾತ ಸಾಹಿತಿ ದಿವಂಗತ ಮುಲ್ಲೇಂಗಡ ಬೇಬಿ ಚೋಂದಮ್ಮನವರ ಸ್ಮರಣಾರ್ಥ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಸಿದ ಎರಡನೇ ವರ್ಷದ ‘ಕೊಡವ ವಾಲಗತ್ತಾಟ್ ನಮ್ಮೆ-2023’ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪುಟ್ಟ…

Read More

ಕಡಬ : ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾಭವನದಲ್ಲಿ ಕಡ್ಯ ಕೊಣಾಜೆ ಭಜನೋತ್ಸವ ಕಾರ್ಯಕ್ರಮವು ದಿನಾಂಕ 10-12-2023ರಂದು ಜರಗಿತು. ಸಾಧಕರ ಅಭಿನಂದನಾ ಸಮಿತಿಯ ನೇತೃತ್ವದಲ್ಲಿ ಭಜನಾ ಸಾಧಕ ಪ್ರಶಸ್ತಿ ಪುರಸ್ಕೃತ ಕಡ್ಯ ವಾಸುದೇವ ಭಟ್ ಹಾಗೂ ಇತರ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿದ್ವಾನ್ ಪಂಜ ಭಾಸ್ಕರ ಭಟ್ ಮಾತನಾಡುತ್ತಾ “ಸಾಧಕರನ್ನು ಗೌರವಿಸುವುದರಿಂದ ನಮ್ಮ ಗೌರವ ಹೆಚ್ಚುತ್ತದೆ. ಸಾಧಕರು ನಡೆದು ಬಂದ ದಾರಿ ಇತರರಿಗೆ ಪ್ರೇರಣೆಯಾಗಲಿದೆ. ಕಡ್ಯ ವಾಸುದೇವ ಭಟ್ ಅವರು ದಾಸ ಸಾಹಿತ್ಯ ಪ್ರಸರಣ ಕಾರ್ಯದೊಂದಿಗೆ ಧರ್ಮ ಜಾಗೃತಿ ಮತ್ತು ರಾಷ್ಟ್ರ ಜಾಗೃತಿಯನ್ನು ಮಾಡಿದವರು. ದೇವ ಸೇವೆ ನಡೆದರೆ ಅಲ್ಲಿ ದೇಶ ಸುರಕ್ಷಿತವಾಗಿರುತ್ತದೆ. ಹಾಗಾದಾಗ ದೇಶವಾಸಿಗಳೂ ಸುರಕ್ಷಿತವಾಗಿರಲು ಸಾಧ್ಯ” ಎಂದು ಹೇಳಿದರು. ಮಂಗಳೂರು ವಿಭಾಗ ಕುಟುಂಬ ಪ್ರಭೋದನ್ ಪ್ರಮುಖ್ ಅಚ್ಯುತ ನಾಯಕ್‌ ಮಾತನಾಡಿ, “ಭಜನೆ ಇರುವಲ್ಲಿ ವಿಭಜನೆ ಇಲ್ಲ. ಭಜನೆಯ ಮೂಲಕ ವಾಸುದೇವ ಭಟ್ ಇಡೀ ಗ್ರಾಮವನ್ನು ಒಂದಾಗಿಸಿದ್ದಾರೆ. ಸಭಾಂಗಣದಲ್ಲಿ ಇಂದು ಸೇರಿರುವ ಜನಸ್ತೋಮವೇ ಅದಕ್ಕೆ ಸಾಕ್ಷಿಯಾಗಿದೆ.…

Read More

ಮಂಗಳೂರು : ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 20-12-2023ರಂದು ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ನಾಡು-ನುಡಿ-ವೈಭವದ ರತ್ನೋತ್ಸವವು ವೈಭವಪೂರ್ಣವಾಗಿ ನಡೆಯಿತು. ಸಮಾರಂಭದ ಸರ್ವಾಧ್ಯಕ್ಷ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡರು ಸರ್ವಾಧ್ಯಕ್ಷರಾಗಿ ಸಾಹಿತ್ಯದ ಒಳಗು ಹೊರಗುಗಳ ವಿವರವಾದ ವಿಶ್ಲೇಷಣೆ ಮಾಡಿದರು. ಪ್ರಧಾನ ಉಪನ್ಯಾಸ ಮಾಲಿಕೆಯಲ್ಲಿ ಡಾ. ಧನಂಜಯ ಕುಂಬಳೆಯವರ ಅಧ್ಯಕ್ಷತೆಯಲ್ಲಿ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ಶ್ರೀ ಮುನಿರಾಜ ರೆಂಜಾಳರು ಕ್ರಮವಾಗಿ ದಾಸ ಸಾಹಿತ್ಯ ಹಾಗೂ ಇಂದಿನ ಸಾಹಿತ್ಯಗಳ ಕುರಿತಾಗಿ ಸೋದಾಹರಣ ಸಹಿತ ಮಾತನಾಡಿದರು. ನಂತರ ನಡೆದ ಕವಿ ಕಾವ್ಯ ಚಿತ್ರ ಗಾಯನದಲ್ಲಿ ಊರಿನ ಪ್ರಸಿದ್ಧ ಕವಿಗಳಾದ ಕರುಣಾಕರ ಬಳ್ಕೂರು, ಸಂಶೀರ್ ಬುಡೋಳಿ, ಜೋಯ್ಸ್ ಪಿಂಟೋ, ಚಂದ್ರಹಾಸ್ ಕೋಟೆಕಾರ್, ಶಾಂತಪ್ಪ ಬಾಬು, ನಾರಾಯಣ ಕುಂಬ್ರ ಮತ್ತು ವಸಂತಿ ನಿಡ್ಕೆಯವರು ಸ್ವರಚಿತ ಗೇಯ ಕವನಗಳನ್ನು ವಾಚನ ಮಾಡಿ, ಅದೇ ಕವನವನ್ನು ಗಾಯಕ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಗಾಯಕಿ ಸೌಮ್ಯಾ ಕಟೀಲ್ ಸಂಗೀತ ಸಹಿತವಾಗಿ ಹಾಡಿದರು.…

Read More

ಕಾಸರಗೋಡು : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ (ರಿ) ಇದರ 79ನೇ ವಾರ್ಷಿಕೋತ್ಸವದಲ್ಲಿ ಕೀರಿಕ್ಕಾಡು ಸಂಸ್ಮರಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈವಿಧ್ಯ, ಭಜನೆ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟವು ದಿನಾಂಕ 23-12-2023 ಶನಿವಾರ ದೇಲಂಪಾಡಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಬನಾರಿ ಇಲ್ಲಿ ನಡೆಯಲಿದೆ. ಪೂರ್ವಾಹ್ನ ಗಂಟೆ 9:30ರಿಂದ ಮಧ್ವಾಧೀಶ ವಿಠಲದಾಸ ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಮಾರ್ಗದರ್ಶನದಲ್ಲಿ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಬನಾರಿ ಮತ್ತು ಶ್ರೀ ವಾಗ್ದೇವಿ ಭಜನಾ ಮಂಡಳಿ ಕಾವು ಇವರಿ೦ದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11:15ಕ್ಕೆ ಸಂಘದ ಮಹಿಳಾ ಕಲಾವಿದರಿಂದ ‘ಸಮರ ಸನ್ನಾಹ’ ಯಕ್ಷಗಾನ ತಾಳಮದ್ದಳೆ, ಅಪರಾಹ್ನ ಗಂಟೆ 12:15ರಿಂದ ದೇಲಂಪಾಡಿ ಶಾಲಾ ಮಕ್ಕಳಿಂದ ‘ನೃತ್ಯ ವೈವಿಧ್ಯ’, ಅಪರಾಹ್ನ ಗಂಟೆ 12: 45ರಿಂದ ‘ಚಿಣ್ಣರ ಚಿಲಿಪಿಲಿ’ ಐನಾರಿ ಅಂಗನವಾಡಿಯ ಪುಟಾಣಿಗಳಿಂದ, 2 ಗಂಟೆಗೆ ಹಿರಿಯ ಕವಯತ್ರಿ ಶ್ರೀಮತಿ ಸತ್ಯವತಿ ಎಸ್. ಕೊಳಚೆಪ್ಪು ಇವರಿಂದ ಕೀರಿಕ್ಕಾಡು ಸಂಸ್ಮರಣೆ ಮತ್ತು ಖ್ಯಾತ ಹಿರಿಯ…

Read More

ಉಡುಪಿ : ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಮತ್ತು ಕರಾವಳಿ ನೃತ್ಯ ಕಲಾವಿದರ ನೃತ್ಯ ಸಮ್ಮೇಳನ ಸಮಿತಿ ಆಯೋಜಿಸುವ ಕರಾವಳಿ ಭರತನಾಟ್ಯ ಕಲಾವಿದರ ನೃತ್ಯ ಸಮ್ಮೇಳನ ‘ನೃತ್ಯೋತ್ಕರ್ಷ 2023’ ಭರತನಾಟ್ಯ ಪ್ರದರ್ಶನ-ವಿಚಾರ ಸಂಕಿರಣ-ಪರಿಪ್ರಶ್ನೆ ಚಿಂತನ ಮಂಥನ ಕಾರ್ಯಕ್ರಮವು ದಿನಾಂಕ 24-12-2023 ಮತ್ತು 25-12-2023ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ದಿನಾಂಕ 24-12-2023ರಂದು ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಮತ್ತು ಅತಿಥಿಗಳನ್ನು ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾವಿದರು ವೈಭವೋಪೇತ ಮೆರವಣಿಗೆಯೊಂದಿಗೆ ಸಭಾಂಗಣಕ್ಕೆ ಕರೆದುಕೊಂಡು ಬರುವುದು. ನಂತರ ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟಿನ ನಿರ್ದೇಶಕರಾದ ನಾಟ್ಯಾಚಾರ್ಯ ಪ್ರೊ. ಕೆ. ರಾಮಮೂರ್ತಿ ರಾವ್ ಇವರ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆಯನ್ನು ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬಿ. ವಿಜಯ ಬಲ್ಲಾಳ್ ಇವರು ಮಾಡಲಿದ್ದಾರೆ. ಗಂಟೆ 11.35ಕ್ಕೆ ವಿದ್ವಾನ್ ಸುಧೀರ್ ರಾವ್ ಕೊಡವೂರು – ವಿದುಷಿ ಮಾನಸಿ ಸುಧೀರ್ ನೃತ್ಯ ನಿಕೇತನ ಕೊಡವೂರು…

Read More

ಬೆಂಗಳೂರು : ಅಂಕಿತ ಪುಸ್ತಕ ಮತ್ತು ಬುಕ್ ಬ್ರಹ್ಮ ಇವರ ಸಹಯೋಗದಲ್ಲಿ ದಿನಾಂಕ 23-12-2023ರಂದು ಬೆಳಿಗ್ಗೆ ಗಂಟೆ 11ಕ್ಕೆ ಮೂರು ಕಾದಂಬರಿಗಳ ಬಿಡುಗಡೆ ಕಾರ್ಯಕ್ರಮ ಆನ್ಲೈನ್ ನಲ್ಲಿ ನಡೆಯಲಿದೆ. ಶ್ರೀ ಕೃಷ್ಣಮೂರ್ತಿ ಹನೂರು ಅವರ ‘ಕನ್ನಮರಿ’, ಶ್ರೀ ಡಿ.ಎನ್. ಶ್ರೀನಾಥ್ ಅವರ ಅನುವಾದಿತ ‘ಒಂದು ಮಸಾಜ್ ಪಾರ್ಲರ್ ಕಥೆ’ ಮತ್ತು ಶ್ರೀಮತಿ ಪಾರ್ವತಿ ಜಿ. ಐತಾಳ್ ಅವರ ಅನುವಾದಿತ ‘ಬೌದಿ’ ಕಾದಂಬರಿಗಳನ್ನು ಭಾಷಾಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಎಸ್.ಎನ್. ಶ್ರೀಧರ್ ಇವರು ಲೋಕಾರ್ಪಣೆ ಮಾಡಲಿದ್ದು, ಪ್ರಸಿದ್ಧ ಚಲನಚಿತ್ರ ನಿರ್ದೇಶಕರಾದ ಶ್ರೀ ಪಿ. ಶೇಷಾದ್ರಿ ಮತ್ತು ಪ್ರಸಿದ್ಧ ಅನುವಾದಕರಾದ ಡಾ. ಗೀತಾ ಶೆಣೈ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಉಡುಪಿ : ಜಿಲ್ಲಾ ಪಂಚಾಯತಿ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಲಯನ್ಸ್ ಕ್ಲಬ್ ಮಣಿಪಾಲ ಇವರ ಸಹಯೋಗದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರ ಮುಂದಾಳತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ ಅಭಿಯಾನ ಕಾರ್ಯಕ್ರಮವು ದಿನಾಂಕ 16-12-2023ರಂದು ಆದಿಉಡುಪಿ ಕನ್ನಡ ಹಾಗೂ ಇಂಗ್ಲೀಷ್ ಮೀಡಿಯಂ ಶಾಲೆಯ ವಠಾರದಲ್ಲಿ ಚಾಲನೆಗೊಂಡಿತು. ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿಯ ಕಾರ್ಯದರ್ಶಿ ಹಾಗೂ ಲಯನ್ಸ್ ಕ್ಲಬ್ ಮಣಿಪಾಲ ಇದರ ಅಧ್ಯಕ್ಷರಾದ ಡಾ.ಅರ್ಚನ ಭಕ್ತ ಮತ್ತು ಐ.ಎಮ್.ಎ. ಇದರ ಮಹಿಳಾ ವಿಭಾಗದ ಅಧ್ಯಕ್ಷರಾದ ಡಾ. ಇಂದಿರಾ ಶಾನುಭಾಗ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾನಸಿಕ ಖಿನ್ನತೆ, ಆತ್ಮಹತ್ಯೆ ತಡೆ, ಹೆಣ್ಣು ಮಕ್ಕಳ ಆರೋಗ್ಯ ಮತ್ತು ಭ್ರೂಣಹತ್ಯೆ ತಡೆ, ಕ್ಷಯರೋಗದ ಜಾಗೃತಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲಕಾರ್ಮಿಕ ತಡೆ ಇವುಗಳ ಕುರಿತಾದ ಮಾಹಿತಿ…

Read More

ಮಂಗಳೂರು : ವಿಶ್ವಕರ್ಮ ಕಲಾ ಪರಿಷತ್, ಮಂಗಳೂರು ಇದರ ಆಶ್ರಯದಲ್ಲಿ ಟೆಂಪಲ್ ಸ್ಕ್ವಾಯರ್ ನಲ್ಲಿರುವ ಪ್ರೇಮ ಪ್ಲಾಝದ 2ನೇ ಮಹಡಿಯಲ್ಲಿರುವ ವಿಶ್ವಂ ಸ್ಕೂಲ್ ಅಫ್ ಆರ್ಟ್ ಇದರ ಕಚೇರಿಯ ಉದ್ಘಾಟನೆಯನ್ನು ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಇವರು ಸೃಷ್ಟಿಕರ್ತ ಭಗವಾನ್ ಶ್ರೀ ವಿಶ್ವಕರ್ಮ ದೇವರ ಕಲಾಕೃತಿಯನ್ನು ಅನಾವರಣ ಮಾಡುವ ಮೂಲಕ ದಿನಾಂಕ 17-12-2023ರಂದು ನೆರವೇರಿಸಿದರು. “ವಿಶ್ವಕರ್ಮ ಕಲಾ ಪರಿಷತ್ತಿನ ‘ವಿಶ್ವಂ ಸ್ಕೂಲ್ ಅಫ್ ಆರ್ಟ್’ನ ಮೂಲಕ ಮಹತ್ತರ ಕೊಡುಗೆಯನ್ನು ಕಲಾವಿದರಿಗೆ ಕೊಡುವ ಪ್ರಯತ್ನ ಮಾಡುತಿದ್ದಾರೆ. ಪುರಾತನ ಪ್ರಾಚೀನ ದೇಶ ಭಾರತ. ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪುನರ್ ನಿರ್ಮಾಣ ಸಂದರ್ಭದಲ್ಲಿ ಗತ ಕಾಲದ ಹಿಂದೆ ಮಂದಿರ ಇರುವ ಬಗ್ಗೆ ಸಾಕ್ಷ್ಯ ವಿಶ್ವಕರ್ಮರ ಅತ್ಯದ್ಭುತವಾದ ಕೈಚಳಕದಿಂದ ಕೆತ್ತನೆ ಕಾರ್ಯ ತಜ್ಞರ ಪರಿಶೀಲನೆ ಸಂದರ್ಭದಲ್ಲಿ ಲಭ್ಯವಾಗಿದ್ದು, ವಿಶ್ವಕರ್ಮರ ಕೊಡುಗೆ ಅಪಾರವಾದುದು ಎಂದು ನಮಗೆ ಕಾಣುತ್ತಿದೆ. ವಿಶ್ವಂ ಸ್ಕೂಲ್ ಅಫ್ ಆರ್ಟ್ ನ ಸದುಪಯೋಗ ವಿದ್ಯಾರ್ಥಿಗಳು ಪಡಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತಾಳ್ಮೆ ಮುಖ್ಯ. ಕಲಿಕೆಯಲ್ಲಿ ನಿರಂತರ…

Read More

ಗಂಗೊಳ್ಳಿ : ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ‘ಕೊಗ್ಗ ದೇವಣ್ಣ ಕಾಮತ್‌’ ಅವರ ಹೆಸರಿನಲ್ಲಿ ನೀಡುವ 2023-24ರ ಸಾಲಿನ ಪ್ರಶಸ್ತಿಗೆ ಯಕ್ಷಗಾನ ಕ್ಷೇತ್ರದ ಹಿರಿಯ ಮದ್ದಳೆ ಕಲಾವಿದ ಏಳ್ ಜಿತ್ ಸದಾನಂದ ಪ್ರಭು ಅವರನ್ನು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಿದೆ. ದಿನಾಂಕ 28-01-2024ರಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 9ನೇ ವಾರ್ಷಿಕೋತ್ಸವದಲ್ಲಿ ಗಣ್ಯರಿಂದ ಈ ಪ್ರಶಸ್ತಿ ಪ್ರದಾನವಾಗಲಿದೆ. ತೆಕ್ಕಟ್ಟೆ ರಾಮಚಂದ್ರ ಪ್ರಭು ಸರಸ್ವತಿ ದಂಪತಿಯ ಪುತ್ರರಾಗಿ 1935ರಲ್ಲಿ ಜನಿಸಿದ ಇವರು ಏಳ್ ಜಿತ್‌ನಲ್ಲಿ 5ನೇ ತರಗತಿಯವರೆಗೆ ಹಾಗೂ ಬೈಂದೂರು ಹೈಸ್ಕೂಲಿನಲ್ಲಿ 8ನೇ ತರಗತಿಯವರೆಗೆ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿದರು. ಬಾಲ್ಯದಿಂದಲೇ ಯಕ್ಷಗಾನದ ಒಲವು ಹೊಂದಿದ್ದ ಅವರು ತಮ್ಮ ದೊಡ್ಡಪ್ಪನವರಾದ ದಾಸಪ್ಪ ಪ್ರಭುಗಳಲ್ಲಿ ಮದ್ದಳೆಯ ಪ್ರಾಥಮಿಕ ಅಭ್ಯಾಸ ಪಡೆದರು. ನಂತರ ಗುರು ವೀರಭದ್ರ ನಾಯ್ಕರ ಯಜಮಾನಿಕೆಯ ಪ್ರಸಿದ್ಧ ಮೃದಂಗ ವಾದಕ ಬೇಳಂಜೆ ತಿಮ್ಮಪ್ಪ ನಾಯ್ಕರ ಒಡನಾಟ ಮಾಡಿ ಮದ್ದಲೆ ಹಾಗೂ ಚಂಡೆ ಎರಡನ್ನೂ ಕಲಿತುಕೊಂಡರು. ಈ ನಡುವೆ ಇವರು…

Read More