Subscribe to Updates
Get the latest creative news from FooBar about art, design and business.
Author: roovari
ಮೇಲುಕೋಟೆ : ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಮತ್ತು ಡಾ. ಪು.ತಿ.ನ. ಟ್ರಸ್ಟ್ (ರಿ.) ಮೇಲುಕೋಟೆ ಇವರ ಸಹಯೋಗದೊಂದಿಗೆ 9ನೇ ವರ್ಷದ ಬೇಸಿಗೆ ಶಿಬಿರ ‘ದೊಡ್ಡಮರದ ನೆರಲಿನಲಿ ಕಲೆ ಮತ್ತು ಸಾಂಸ್ಕೃತಿಕ ಶಿಬಿರ -2025’ವನ್ನು ದಿನಾಂಕ 29 ಏಪ್ರಿಲ್ 2025ರಿಂದ 18 ಮೇ 2025ರವೆರೆಗೆ ಪ್ರತಿದಿನ ಬೆಳಗ್ಗೆ 10-00ರಿಂದ ಸಂಜೆ 4-00 ಗಂಟೆ ತನಕ ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ರಂಗಾಸಕ್ತರು ಮತ್ತು ಮೇಲುಕೋಟೆ ಗ್ರಾಮಸ್ಥರ ಸಹಕಾರದಲ್ಲಿ ಹಮ್ಮಿಕೊಂಡಿರುವ ಈ ಶಿಬಿರದ ನಿರ್ದೇಶಕರು ಗಿರೀಶ್ ಮೇಲುಕೋಟೆ ಹಾಗೂ ಶಿಬಿರದ ಸಂಚಾಲಕರಾಗಿ ವೆಂಕಟೇಶ್ ಎನ್. ಮತ್ತು ಮನೋಜ್ ಎಂ. ಇವರು ಸಹಕರಿಸಲಿದ್ದಾರೆ.
ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇಲ್ಲಿಗೆ ಸೇರಲು 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮೇ 2025 ಆಸಕ್ತರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9900907702/ 9901190392/9945245144.
ಮಂಗಳೂರು : ಮಂಗಳೂರಿನ ಮಾಂಡ್ ಸೊಭಾಣ್ ಸಂಸ್ಥೆ ಆಯೋಜಿಸಿದ ದಶದಿನಗಳ ‘ಕಾಜಳ್’ (ಕಣ್ಣ ಕಾಡಿಗೆ) ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 25 ಏಪ್ರಿಲ್ 2025 ರಂದು ನಡೆಯಿತು. ಶಿಬಿರವನ್ನು ಓರ್ವ ಶಿಬಿರಾರ್ಥಿಯ ಕಣ್ಣಿಗೆ ಕಾಡಿಗೆ ಹಚ್ಚುವ ಮುಖಾಂತರ ಉದ್ಘಾಟಿಸಿದ ಕುಲಶೇಖರ ಚರ್ಚಿನ ಉಪಾಧ್ಯಕ್ಷೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಸಿಲ್ವಿಯಾ ರೂತ್ ಕ್ಯಾಸ್ತೆಲಿನೊ ಮಾತನಾಡಿ “ಮಕ್ಕಳ ಪ್ರತಿಭೆಗಳನ್ನು ಬೆಳಕಿಗೆ ತರಲು ಮಾಂಡ್ ಸೊಭಾಣ್ ಸಂಸ್ಥೆ ನಿರಂತರ ಪ್ರಯತ್ನ ಮಾಡುತ್ತಿದೆ. ಅವರ ಪ್ರಯತ್ನಗಳ ಫಲವಾಗಿ ಕೊಂಕಣಿ ಸಂಸ್ಕೃತಿ ಕ್ಷೇತ್ರದಲ್ಲಿ ಹಲವಾರು ಯುವ ಪ್ರತಿಭೆಗಳು ಬೆಳಕಿಗೆ ಬಂದಿವೆ. ನೀವೂ ಶ್ರಮಪಟ್ಟರೆ ಯಶಸ್ಸು ಸಾಧ್ಯ’’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ತಯಾರಿಸಿದ ಪ್ರಾಥಮಿಕ ಹಂತದ ಪಠ್ಯ ಪುಸ್ತಕ `ಆಮಿ ಕೊಂಕ್ಣಿ ಶಿಕುಂಯಾ’ ಅನ್ನು ಲೋಕಾರ್ಪಣೆಗೊಳಿಸಿದರು. ಗೌರವ ಅತಿಥಿ ಎರಿಕ್ ಡಿ’ಸೋಜ ಪಠ್ಯ ಪುಸ್ತಕ ಸಮಿತಿ ಸದಸ್ಯರಿಗೆ ಗೌರವ ಪ್ರತಿ ನೀಡಿದರು. ಶಿಬಿರದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೆಂಗಳೂರಿನ…
ಬೆಂಗಳೂರು : ದಾಕಹವಿಸ ಆಯೋಜನೆ ಮಾಡಿರುವ ವಿಶ್ವ ದೃಶ್ಯ ಕಲಾ ದಿನಾಚರಣೆ ಅತ್ಯಂತ ಯಶಸ್ವಿಯಾಗಿ ವಿಜೃಂಭಣೆಯಿಂದ ದಿನಾಂಕ 15 ಏಪ್ರಿಲ್ 2025 ಮಂಗಳವಾರದಂದು ನಡೆಯಿತು. ರವೀಂದ್ರ ಕಲಾಕ್ಷೇತ್ರದ ಪಡಸಾಲೆ ಆರ್ಟ್ ಗ್ಯಾಲರಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ಯಾನ್ವಾಸ್ ಮೇಲೆ ರೇಖಾಚಿತ್ರದ ಮೂಲಕ ನಿರಂತರ ಚಲನೆಯನ್ನು ಸೂಚಿಸುವ ಮತ್ಸ್ಯಕನ್ಯೆಯನ್ನು ಬಿಡಿಸಿ ಅದಕ್ಕೆ ಪೂರಕವಾಗಿ ವಿವಿಧ ರೂಪಕಗಳನ್ನು ರಚಿಸಿ ಆ ಚಿತ್ರದ ಧ್ವನಿಯನ್ನು ಹೆಚ್ಚಿಸಿದ ಶ್ರೀ ಚಂದ್ರನಾಥ ಆಚಾರ್ಯರವರು ಕಲಾತ್ಮಕವಾಗಿ ವರ್ಲ್ಡ್ ಆರ್ಟ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನೂರಕ್ಕೂ ಹೆಚ್ಚು ಕಲಾವಿದರು ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಅಮೇರಿಕಾದ ಪ್ರತಿಷ್ಠಿತ ಕಲಾ ಪುರಸ್ಕಾರ ಸ್ಯಾಮ್ ಗಿಲ್ಲಿಯಮ್ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಶೀಲಾ ಗೌಡ ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇವರು ಮಾತನಾಡಿ “ನಾವೆಲ್ಲ ಸೇರಿ ಈ ರೀತಿಯಾಗಿ ವಿಶ್ವ ಕಲಾ ದಿನವನ್ನು ಆಚರಿಸಿದಾಗ ಮಾತ್ರ ಅದರ ಬಗ್ಗೆ ಅರಿವು ಮತ್ತು ಕಲೆಯ ಬಗ್ಗೆ, ಕಲಾವಿದರ ಬಗ್ಗೆ ಗೌರವ ಮೂಡುವುದು” ಎಂದು ಅಭಿಪ್ರಾಯಪಟ್ಟರು.…
ಮಂಗಳೂರು : ಸಪ್ತಕ ಬೆಂಗಳೂರಿನ ನೇತೃತ್ವದಲ್ಲಿ ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ಹಾಗೂ ರಾಮಕೃಷ್ಣ ಮಠ ಮಂಗಳೂರು ಇವರ ಸಹಯೋಗ ಹಾಗೂ ಮಂಗಳೂರಿನ ಹತ್ತಾರು ಹಿಂದೂಸ್ಥಾನಿ ಸಂಗೀತ ಸಂಸ್ಥೆಗಳ ಸಹಕಾರದಲ್ಲಿ ದಿನಾಂಕ 13 ಏಪ್ರಿಲ್ 2025ರಂದು ಮಂಗಳೂರಿನ ರಾಮಕೃಷ್ಣ ಮಠದ ಸಭಾಭವನದಲ್ಲಿ ದೇಶ ವಿದೇಶಗಳಲ್ಲಿ ತಮ್ಮ ವಿಶಿಷ್ಟ, ವಿಶೇಷ ತಬಲಾ ವಾದನದಿಂದ ಪ್ರಖ್ಯಾತರಾದ ತಮ್ಮ ಉದಾತ್ತ ನಡೆನುಡಿಯಿಂದ ಅಜಾತ ಶತ್ರುವಾಗಿಯೂ ಅಪಾರ ಅಭಿಮಾನಿಗಳನ್ನು ಪಡೆದಿರುವ ಮಂಗಳೂರಿನವರೇ ಆದ ಪಂಡಿತ ಓಂಕಾರ ಗುಲ್ವಾಡಿ ಇವರನ್ನ ಪ್ರೀತಿ, ವಿಶ್ವಾಸ, ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ಪ್ರತಿಭಾವಂತ ಯುವ ಕಲಾವಿದರಾದ ಅಂಕುಶ ನಾಯಕ ಇವರ ಸಿತಾರ್ ಹಾಗೂ ಕಾರ್ತಿಕ ಭಟ್ಟ ಇವರ ಕೊಳಲು ವಾದನ ಜುಗಲ್ಬಂದಿಗೆ ಹೇಮಂತ ಜೋಶಿಯವರ ತಬಲಾ ವಾದನ ಹಾಲು ಜೇನಿನಂತೆ ಸೇರಿ ಶೋತೃಗಳ ಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ನಂತರ ಧಾರವಾಡದ ಪಂಡಿತ ವೆಂಕಟೇಶಕುಮಾರ ಇವರ ಅಧ್ಯಕ್ಷತೆಯಲ್ಲಿ ಓಂಕಾರ ಗುಲ್ವಾಡಿ ಇವರನ್ನು ಹುಟ್ಟೂರಿನ ಸಮಸ್ತ ಕಲಾಭಿಮಾನಿಗಳ ಪರವಾಗಿ ಒಂದು ಅಭೂತಪೂರ್ವವಾದ ಸನ್ಮಾನ ಕಾರ್ಯಕ್ರಮ…
ಬೆಂಗಳೂರು : ಸ್ಟೇಜ್ ಬೆಂಗಳೂರು ಇವರ ವತಿಯಿಂದ ಮಕ್ಕಳ ಕಾರ್ಯಕ್ರಮ ಹಾಡು, ನೃತ್ಯ ಮತ್ತು ನಾಟಕ ಪ್ರದರ್ಶನವನ್ನು ದಿನಾಂಕ 27 ಏಪ್ರಿಲ್ 2025ರಂದು ಸಂಜೆ 4-30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಲೀಲಾ ಮಣ್ಣಾಲ ಇವರು ರಚಿರುವ ಮಹೇಶ ಕುಮಾರ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಪುಣ್ಯಕೋಟಿ ಎಂಬ ಗೋವು’ ಎಂಬ ನಾಟಕ ಮಕ್ಕಳಿಂದ ಪ್ರಸ್ತುತಗೊಳ್ಳಲಿದೆ.
ಸಿದ್ಧಾಪುರ : ಗೌತಮ ಹೆಗಡೆ ಮುಗದೂರು ಇವರ ಸಂಯೋಜನೆಯಲ್ಲಿ ದಿಗ್ಗಜ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಶನೀಶ್ವರ ಮಹಾತ್ಮೆ’ ಅದ್ದೂರಿ ಪೌರಾಣಿಕ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 28 ಏಪ್ರಿಲ್ 2025ರಂದು ಸಂಜೆ 6-00 ಗಂಟೆಗೆ ಸಿದ್ಧಾಪುರದ ಸಿದ್ಧಿ ವಿನಾಯಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ ಭಾಗವತರು – ಶ್ರೀ ರಾಮಕೃಷ್ಣ ಹೆಗಡೆ ಹಿಲ್ಲೂರು, ಮದ್ದಳೆ – ಶ್ರೀ ಪರಮೇಶ್ವರ ಭಂಡಾರಿ ಕರ್ಕಿ, ಚಂಡೆ – ಶ್ರೀ ಗಣೇಶ್ ಗಾಂವ್ಕರ್ ಹಳುವಳ್ಳಿ ಮತ್ತು ಕುಮಾರ ಶ್ರೀವತ್ಸ ಗುಡ್ಡೆದಿಂಬ ಹಾಗೂ ಮುಮ್ಮೇಳದಲ್ಲಿ ಶ್ರೀ ಕೃಷ್ಣಯಾಜಿ ಬಳ್ಕೂರು, ಶ್ರೀ ಅಶೋಕ ಭಟ್ ಸಿದ್ದಾಪುರ, ಶ್ರೀ ಸಂಜಯ ಬೆಳೆಯೂರು, ಶ್ರೀ ಚಂದ್ರಹಾಸ ಗೌಡ ಹೊಸಪಟ್ಟಣ, ಶ್ರೀ ಮಹಾಭಲೇಶ್ವರ ಗೌಡ, ಶ್ರೀ ನಾಗೇಶ ಕುಳಿಮನೆ, ಶ್ರೀ ನಾಗೇಂದ್ರ ಮೂರೂರು, ಶ್ರೀ ಶ್ರೀಧರ ಅಣಲಗಾರ ಮತ್ತು ಸ್ತ್ರೀ ಪಾತ್ರದಲ್ಲಿ ಶ್ರೀ ಶಂಕರ ಹೆಗಡೆ ನಿಲ್ಕೋಡು, ಶ್ರೀ ಶಿವಕುಮಾರ ಶಿರಳಗಿ, ಶ್ರೀ ದೀಪಕ ಭಟ ಕುಂಕೀ ಸಹಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ಮಹಾಭಲೇಶ್ವರ…
ಮಂಗಳೂರು : ರಾಗತರಂಗ ಮಂಗಳೂರು ಇದರ ವತಿಯಿಂದ ‘ವಸಂತಗಾನ ಝೇಂಕಾರ-2025’ ಮಕ್ಕಳ ಸಂಗೀತ, ನೃತ್ಯ ಮತ್ತು ಕಿರು ನಾಟಕ ಕಾರ್ಯಕ್ರಮವು ಮಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ದಿನಾಂಕ 20 ಏಪ್ರಿಲ್ 2025ರಂದು ನಡೆಯಿತು. ಜೀವವಿಮಾ ನಿಗಮದ ನಿವೃತ್ತ ಹಿರಿಯ ವಿಭಾಗಾಧಿಕಾರಿ ಕೆ. ರಮೇಶ್ ರಾವ್ ಇವರು ಮಾಸ್ಟರ್ ಸಾಯಿ ಅನೂಪ್ ಜತೆಗೂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಗತರಂಗದ ಪೂರ್ವಾಧ್ಯಕ್ಷ ಅನಂತಕೃಷ್ಣ ಉಡುಪ, ವಾಮನ್ ಬಿ. ಮೈಂದನ್, ಅಧ್ಯಕ್ಷ ಕೆ.ಎನ್. ಶಶಿಧರ್, ಉಪಾಧ್ಯಕ್ಷರಾದ ಚಂದ್ರಶೇಖರ ದೈತೋಟ, ಕೃಷ್ಣ ಶೆಟ್ಟಿ ತಾರೆಮಾರ್, ಕಾರ್ಯದರ್ಶಿ ಪಿ.ಸಿ. ರಾವ್, ಜತೆ ಕಾರ್ಯದರ್ಶಿ ಜಯಪ್ರಕಾಶ ಶೆಟ್ಟಿ, ಕೋಶಾಧಿಕಾರಿ ಸೌಮ್ಯಾ ಪಿ. ರಾವ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಕ್ಕಳಿಂದ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, ಜಾನಪದ ನೃತ್ಯ, ಭಾವ ಗಾಯನ, ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ, ವೃಂದಗಾನ, ನೃತ್ಯ ರೂಪಕ ಪುಣ್ಯಕೋಟಿ, ಹಿಂದೂಸ್ಥಾನಿ ವಾದ್ಯ ಸಂಗೀತ, ಭರತನಾಟ್ಯ, ಪ್ಯೂಶನ್ ಮ್ಯೂಸಿಕ್, ಕಿರು ನಾಟಕ ಪ್ರದರ್ಶನಗೊಂಡಿತು. ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ, ಕೇವಲ…
ಮೂಡುಬಿದಿರೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು’ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ “ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು. ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000ಕ್ಕೂ ಹೆಚ್ಚಿನ ತುಳು ಪುಸ್ತಕಗಳು ತುಳು ಸಾಹಿತ್ಯ ಅಕಾಡೆಮಿಯಲ್ಲಿ ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ.…
ಉಡುಪಿ : ರಾಗ ಧನ ಉಡುಪಿ (ರಿ.) ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಕಲಾವಿಹಾರಿ, ಕಲಾಭಿಜ್ಞ, ಕಲಾತಿಲಕ ಶ್ರೀ ಎ. ಈಶ್ವರಯ್ಯ ಸಂಸ್ಮರಣಾ ಕಾರ್ಯಕ್ರಮ, ‘ಕಲಾ ಪ್ರವೀಣ ಪ್ರಶಸ್ತಿ ಪ್ರದಾನ’, ರಾಗರತ್ನಮಾಲಿಕೆ -36 ಗೃಹಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮವು ಪರ್ಕಳದ ‘ಸರಿಗಮ ಭಾರತಿ’ ಸಭಾಂಗಣದಲ್ಲಿ ದಿನಾಂಕ 19 ಏಪ್ರಿಲ್ 2025ರಂದು ನಡೆಯಿತು. ಕಲಾವಿಹಾರಿ ಎ. ಈಶ್ವರಯ್ಯನವರು 2018ರಲ್ಲಿ ಪ್ರಾಯೋಜಿಸಿ ಸ್ಥಾಪಿಸಿದ ‘ಕಲಾಪ್ರವೀಣ ಪ್ರಶಸ್ತಿ’ಯನ್ನು ಈ ಬಾರಿ ಬೆಂಗಳೂರಿನ ಹೆಸರಾಂತ ಲೇಖಕಿ ಹಾಗೂ ವಿಮರ್ಶಕಿ ಶ್ರೀಮತಿ ವೈ.ಕೆ. ಸಂಧ್ಯಾ ಇವರಿಗೆ ಅವರ ಅನುಪಸ್ಥಿತಿಯಲ್ಲಿ ನೀಡಲಾಯಿತು. ಹಿರಿಯ ಪತ್ರಕರ್ತ ಶ್ರೀ ನಿತ್ಯಾನಂದ ಪಡ್ರೆ ಅಭಿನಂದನಾ ಭಾಷಣ ನೆರವೇರಿಸಿದರು. ಶ್ರೀಕೃಷ್ಣಯ್ಯ ಅನಂತಪುರ ಪ್ರಶಸ್ತಿಯ ಬಗ್ಗೆ ಪ್ರಸ್ತಾವಿಸಿದರು. ಡಾ. ಶ್ರೀಕಿರಣ್ ಹೆಬ್ಬಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಘವೇಂದ್ರ ಆಚಾರ್ಯ ಸ್ವಾಗತಿಸಿ, ಉಮಾಶಂಕರಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಪೂರ್ವಭಾವಿಯಾಗಿ ರಾಗರತ್ನಮಾಲಿಕೆ -36ನ್ನು ವಿದುಷಿ ಶ್ರೀಮತಿ ಬಾಂಬೆ ಲಕ್ಷ್ಮೀ ರಾಜಗೋಪಾಲನ್ ಇವರು ನಡೆಸಿಕೊಟ್ಟರು.…