Author: roovari

ಶಿವಮೊಗ್ಗ : ವಸುಧಾ ಕರಣಿಕ್ ಹಾಗೂ ವೈಶಾಲಿ ಭಟ್ ಇವರ ಜನ್ಮದಿನೋತ್ಸವ ಅಂಗವಾಗಿ ನಾದನೃತ್ಯ ಸ್ಕೂಲ್ ಆಫ್ ಡ್ಯಾನ್ಸ್ ಎಂಡ್ ಕಲ್ಬರಲ್ ಟ್ರಸ್ಟ್ ಮಂಗಳೂರು ಇದರ ನಿರ್ದೇಶಕಿಯಾದ ಖ್ಯಾತ ಭರತನಾಟ್ಯ ಕಲಾವಿದೆ ಡಾ. ವಿದುಷಿ ಭ್ರಮರಿ ಶಿವಪ್ರಕಾಶ್ ಇವರ ನಿರ್ದೇಶನದಲ್ಲಿ ‘ಕುಮಾರವ್ಯಾಸ ನೃತ್ಯ ಭಾರತ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 02 ಮಾರ್ಚ್ 2025ರ ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆಯಲಿದೆ. ಕರ್ನಾಟಕ ಸಂಘ ಶಿವಮೊಗ್ಗದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಬಳ್ಳಾರಿ ಇದರ ವಿಶೇಷಾಧಿಕಾರಿಗಳಾದ ಶ್ರೀ ಮಂಜುನಾಥ್ ಪಿ.ಎಸ್ ಹಾಗೂ ಸಾಹಿತ್ಯ, ಸಂಗೀತ ಮತ್ತು ಕಲಾ ಸಂಘಟಕರಾದ ಬೆಂಗಳೂರಿನ ಶ್ರೀ ವಿಶ್ವೇಶ್ವರ ಗಾಯತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಲಾವಿದೆ ಡಾ. ವಿದುಷಿ ಭ್ರಮರಿ ಶಿವಪ್ರಕಾಶ್ ಇವರನ್ನು ಸನ್ಮಾನಿಸಲಾಗುವುದು. ‘ಕುಮಾರವ್ಯಾಸ ನೃತ್ಯ ಭಾರತ’- ವೀರನಾರಾಯಣ ಸ್ವಾಮಿಯ ಸನ್ನಿಧಿಯಲ್ಲಿ ಗದುಗಿನ ನಾರಣಪ್ಪನಿಂದ ರಚಿತವಾದ ‘ಕರ್ಣಾಟ ಭಾರತ ಕಥಾಮಂಜರಿ’ಯಿಂದ ಆಯ್ದ…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ವತಿಯಿಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮನೋತ್ಸವದ ಸವಿ ನೆನಪಿನಲ್ಲಿ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ‘ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ 2025’ಯನ್ನು ಆಯೋಜಿಸಲಾಗಿದೆ. ‘ಡಾ. ಕೆ. ಶಿವರಾಮ ಕಾರಂತರ ‘ಚೋಮನ ದುಡಿ’ ಕಾದಂಬರಿಯಲ್ಲಿ ಸಾಮಾಜಿಕ ಮೌಲ್ಯ’ ಎಂಬ ವಿಷಯದ ಬಗ್ಗೆ ರಚಿಸಿದ ಪ್ರಬಂಧಕ್ಕೆ ಪ್ರಥಮ : 3000/-, ದ್ವಿತೀಯ : 2000/-, ತೃತೀಯ : 1000/- ಬಹುಮಾನಗಳು ನೀಡಲಾಗುವುದು. ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ : 1. ಪ್ರತಿ ಕಾಲೇಜಿನಿಂದ ಆಸಕ್ತ ಗರಿಷ್ಟ 5 ಜನ ವಿದ್ಯಾರ್ಥಿಗಳು ಭಾಗವಹಿಸಬಹುದು. 2. ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ತಮ್ಮ ಸ್ವ ಹಸ್ತಾಕ್ಷರದಲ್ಲಿ ಬರೆದ ಪ್ರಬಂಧವನ್ನು ಕಳುಹಿಸಬೇಕು. 3. ಪ್ರಬಂಧವು ಗರಿಷ್ಟ 6 ಪುಟಗಳನ್ನು ಮೀರಬಾರದು. (ಒಂದು ಬದಿ ಎ-4 ಅಳತೆ) 4. ಪ್ರಬಂಧವನ್ನು ತಮ್ಮ ವಿಳಾಸ ಮತ್ತು ಸಂಪರ್ಕ ಸಂಖ್ಯೆಯ (ವಾಟ್ಸಾಪ್ ಸಂಖ್ಯೆ) ಜೊತೆಗೆ ದಿನಾಂಕ 30 ಮಾರ್ಚ್…

Read More

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 28 ಫೆಬ್ರವರಿ 2025ರಂದು ಮಡಿಕೇರಿಯ ಗೌಡ ಕೊಡಗು ಗೌಡ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಬರಹಗಾರರಿಗೆ ಪ್ರೋತ್ಸಾಹ ಬಹುಮಾನ ಪ್ರಶಸ್ತಿಯನ್ನು ವಿತರಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ “ಇಂತಹ ಕಾರ್ಯಕ್ರಮಗಳು ಸಮುದಾಯದ ಬರಹಗಾರರನ್ನು ಪ್ರೋತ್ಸಾಹಿಸುವುದರೊಂದಿಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಲಿದೆ. ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಪೂರಕ ಆಗಿರುವುದರೊಂದಿಗೆ ಅರೆಭಾಷೆ ಜನಾಂಗದ ಇತಿಹಾಸ ಹಾಗೂ ಸಮಗ್ರ ಚಟುವಟಿಕೆಗಳನ್ನು ಜಗತ್ತಿಗೆ ತಿಳಿಸುವಂತೆ ಕಾರ್ಯಪ್ರವೃತ್ತರಾಗಲಿ. ಅರೆಭಾಷೆ ಸಮುದಾಯಕ್ಕೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲು ನಾನು ಸದಾ ಸಿದ್ದ. ಐನ್ ಮನೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಮನೆಯ ಇತಿಹಾಸವನ್ನು ಜಗತ್ತಿಗೆ ಹೇಳುವ ದಿಶೆಯಲ್ಲಿ…

Read More

ಬೆಂಗಳೂರು : ಯಕ್ಷವಾಹಿನಿ ಇದರ ವತಿಯಿಂದ ‘ಯಕ್ಷ ಸಾಹಿತ್ಯ ಸಾಂಗತ್ಯ -25’ ನಾಡಿನ ಖ್ಯಾತ ಕವಿಗಳು, ಚಿಂತಕರು, ವಿದ್ವಾಂಸರಿಂದ ಯಕ್ಷ ಪ್ರಸಂಗಗಳ ಸಾಹಿತ್ಯ ಅವಲೋಕನದ ಸರಣಿ ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಜೂಮ್ ಮೀಟಿಂಗ್ ನಲ್ಲಿ ಆಯೋಜಿಸಲಾಗಿದೆ. ಹಂಪಿ ವಿಶ್ವವಿದ್ಯಾನಿಲಯದ ಖ್ಯಾತ ವಿಮರ್ಶಕರು ಹಾಗೂ ಪ್ರಾಧ್ಯಪಕರಾದ ಡಾ. ವೆಂಕಟಗಿರಿ ದಳವಾಯಿ ಇವರಿಂದ ಶ್ರೀ ಹೊಸ್ತೋಟ ಮಂಜುನಾಥ ಭಾಗವತರು ರಚಿಸಿದ ‘ರಾಮ ನಿರ್ಯಾಣ’ ಯಕ್ಷ ಪ್ರಸಂಗದ ಸಾಹಿತ್ಯಾವಲೋಕನ ನಡೆಯಲಿದ್ದು, ಹಿರಿಯ ಸಂಶೋಧಕರು ಡಾ. ಜಿ.ಎಸ್. ಭಟ್ ಸಾಗರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಖ್ಯಾತ ಯಕ್ಷಗಾನ ವಿದ್ವಾಂಸರು ಡಾ. ಆನಂದರಾಮ ಉಪಾಧ್ಯ ಇವರಿಂದ ಸಮನ್ವಯ, ಶ್ರೀ ಶ್ರೀಧರ ಡಿ.ಎಸ್., ಪ್ರೊ. ಎಮ್. ಎಲ್. ಸಾಮಗ, ಶ್ರೀ ಗಿಂಡಿಮನೆ ಮೃತ್ಯುಂಜಯ, ಶ್ರೀ ನಟರಾಜ ಉಪಾಧ್ಯ, ಶ್ರೀ ಅನಂತ ಪದ್ಮನಾಭ ಫಾಟಕ್, ಶ್ರೀ ಇಟಗಿ ಮಹಾಜಲೇಶ್ವರ ಭಟ್, ವೇ ಅಜಿತ್ ಕಾರಂತ್, ಶ್ರೀ ಲನಾ ಭಟ್ ಹಾಗೂ ಶ್ರೀ ಸುಹಾಸ್…

Read More

ಮಂಗಳೂರು : ಶ್ರೀ ದುರ್ಗಾ ಪರಮೇಶ್ವರಿ ಸೇವಾ ಸಮಿತಿ ರಥಬೀದಿ ಮಂಗಳೂರು ಇವರ ವತಿಯಿಂದ ಕಲಾ ಸಂಗಮ ಕಲಾವಿದರು ಅಭಿನಯಿಸುವ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ ಪ್ರದರ್ಶನವನ್ನು ದಿನಾಂಕ 10 ಮಾರ್ಚ್ 2025ರಂದು ಮಂಗಳೂರಿನ ರಥಬೀದಿಯಲ್ಲಿ ಪ್ರದರ್ಶನಗೊಳ್ಳಲಿದೆ. ಈ ನಾಟಕಕ್ಕೆ ಶಶಿರಾಜ್ ಕಾವೂರು ಇವರ ಕಥೆ ಸಂಭಾಷಣೆ, ಎ.ಕೆ. ವಿಜಯ್ (ಕೋಕಿಲ) ಇವರ ಸಂಗೀತ ಹಾಗೂ ವಿಜಯ್ ಕುಮಾರ್ ಕೊಡಿಯಾಲ್ ಬೈಲು ನಿರ್ದೇಶನ ಮಾಡಿರುತ್ತಾರೆ.

Read More

ಕುಂದಾಪುರ : ಶ್ರೀ ಕನ್ನಿಕಾ ಪರಮೇಶ್ವರಿ ಯಕ್ಷಗಾನ ಕಲಾ ಸಂಘ (ರಿ.) ಕಂಡ್ಲೂರು ಇದರ ಸುವರ್ಣ ಸಂಭ್ರಮದ ಪ್ರಯುಕ್ತ 50ನೇ ‘ಯಕ್ಷ ಕಲೋತ್ಸವ’ವನ್ನು ದಿನಾಂಕ 05 ಮಾರ್ಚ್ 2025ರಿಂದ 10 ಮಾರ್ಚ್ 2025ರವರೆಗೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಎದುರುಗಡೆ ಆಯೋಜಿಸಲಾಗಿದೆ. ದಿನಾಂಕ 05 ಮಾರ್ಚ್ 2025ರಂದು ರಾತ್ರಿ 8-00 ಗಂಟೆಗೆ ಪಡುಕೆರೆ ಮಣೂರು ಗೀತಾನಂದ ಫೌಂಡೇಷನ್ ಇದರ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ಆಡಳಿತ ಮೊಕ್ತೇಸರರಾದ ಸಚ್ಚಿದಾನಂದ ಜಾತ್ರ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಂಘದ ಬಾಲಕ ಬಾಲಕಿಯರಿಂದ ಶ್ರೀಧರ ಹೆಬ್ಬಾರ್ ಇವರ ನಿರ್ದೇಶನದಲ್ಲಿ ‘ಶಶಿಪ್ರಭಾ ಪರಿಣಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 06 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಶ್ರೀ ಸಾಲಿಗ್ರಾಮ ಮೇಳದ ಪಿ. ಕಿಶನ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಕಲಾನಿಕೇತನ ಬಸ್ರೂರು ಇದರ ವಿದುಷಿ ವೈದೇಹಿ ಸುಭಾಷಿತ್ ಇವರ ಶಿಷ್ಯೆಯರಿಂದ…

Read More

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈೂಲದ ಸಂಜೀವ ಶೆಟ್ಟಿ ಹಾಗೂ ಶೋಭಾ ಶೆಟ್ಟಿ ಇವರ ಮಗನಾಗಿ 01.03.1998ರಂದು ನಿಖಿಲ್ ಶೆಟ್ಟಿ ಕೈೂಲ ಅವರ ಜನನ. 1 – 7ರವರೆಗೆ ಸರಕಾರಿ ಪ್ರಾಥಮಿಕ ಶಾಲೆ ಕೈೂಲ, 8 – 10ರವರೆಗೆ  ಸರಕಾರಿ ಪ್ರೌಢ ಶಾಲೆ ಕೈೂಲ, ಪಿಯುಸಿ ಯನ್ನು ಸರಕಾರಿ ಪದವಿಪೂರ್ವ ಕಾಲೇಜು ಸಿದ್ಧಕಟ್ಟೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಯಲ್ಲಿ ಬಿ.ಎ ಪದವಿ ಪಡೆದಿರುತ್ತಾರೆ. ಪ್ರೇಮ್ ರಾಜ್ ಕೈೂಲ ಇವರ ಯಕ್ಷಗಾನ ಗುರುಗಳು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆ: ಮೊದಲಾಗಿ ಗುರುಗಳು ನನಗೆ ಪ್ರೇರಣೆ. ಕಾಲೇಜು ದಿನಗಳಲ್ಲಿ ಅವರ ಜೊತೆ ಯಕ್ಷಗಾನ ನೋಡಲು ಕಟೀಲು ಮೇಳಕ್ಕೆ ಹೋಗುತ್ತಿದ್ದೆ ಅಲ್ಲಿಂದ ನನಗೆ ಯಕ್ಷಗಾನದಲ್ಲಿ ಆಸಕ್ತಿ ಹೆಚ್ಚಾಯಿತು. ಮೇಳದಲ್ಲಿ ತಿರುಗಾಟ ಮಾಡಿ ಗುರುಗಳಂತೆ ನನಗೂ ವೇಷಧಾರಿ ಆಗಬೇಕು ಎನ್ನುವ ಹಂಬಲ ಹೆಚ್ಚಾಯಿತು ಹಾಗಾಗಿ ಕಟೀಲು 2ನೇ ಮೇಳಕ್ಕೆ ಸೇರಿದೆ ಅಲ್ಲಿ ಪ್ರಸಾದ ಬಲಿಪ ಭಾಗವತರು ಹಾಗೆ ಮುರಾರಿ ಕಡಂಬಳಿತ್ತಾಯ, ದಿನೇಶ್…

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಕೊಂಕ್ಣಿ ಥಾವ್ನ್ ಕನ್ನಡಾಕ್ ಭಾಷಾಂತರ್ ಕಾಮಾಸಾಳ್’ ಎಂಬ ಒಂದು ದಿನದ ಭಾಷಾಂತರ ಕಾರ್ಯಾಗಾರವನ್ನು ದಿನಾಂಕ 26 ಫೆಬ್ರವರಿ 2025ರಂದು ಶಕ್ತಿನಗರದ ಕಲಾಂಗಣ್ ನಲ್ಲಿ ಹಮ್ಮಿಕೊಂಡಿತ್ತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೊಫೆಸರ್ ಸ್ಟೀವನ್ ಕ್ವಾಡ್ರಸ್, ಡಾ. ಆಲ್ವಿನ್ ಡೆಸಾ, ಡಾ. ವಿನ್ಸೆಂಟ್ ಆಳ್ವ ಇವರುಗಳು ಭಾಷಾಂತರದ ಬಗ್ಗೆ ಮಾಹಿತಿ ನೀಡಿದರು. ಇತರ ಭಾಷೆಗಳ ಸಾಹಿತ್ಯವು ಕೊಂಕಣಿಗೆ ಧಾರಾಳವಾಗಿ ಅನುವಾದ ಆಗಿದೆಯಾದರೂ, ಕೊಂಕಣಿಯಿಂದ ಇತರ ಭಾಷೆಗಳಿಗೆ ಅನುವಾದವಾಗಿರುದು ಬಹಳ ವಿರಳ. ಕೊಂಕಣಿ ಸಾಹಿತ್ಯ ಅಕಾಡೆಮಿಯು ಇದನ್ನು ಮನಗಂಡು ಮೊದಲ ಹೆಜ್ಜೆಯಾಗಿ ಕನ್ನಡ ಭಾಷೆಗೆ ಕೊಂಕಣಿ ಭಾಷೆಯ ಸಾಹಿತ್ಯವನ್ನು ಭಾಷಾಂತರಿಸುವ ಕೆಲಸವನ್ನು ಈಗಾಗಲೇ ಕೈಗೆತ್ತಿಕೊಂಡಿದೆ. ಇದರ ಅಂಗವಾಗಿ ಭಾಷಾಂತರಗಾರರಿಗಾಗಿ ಈ ಕಾರ್ಯಾಗಾರ ಹಮ್ಮಿಕೊಂಡಿದ್ದು, ಭಾಷಾಂತರಗಾರರು ಬಹಳ ಹುಮ್ಮಸ್ಸಿನಿಂದ ಇದರಲ್ಲಿ ಪಾಲ್ಗೊಂಡು ವಿಚಾರ ವಿನಿಮಯ ಮಾಡಿಕೊಂಡರು.

Read More

ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಸಂಸ್ಕೃತಿ ಸಂಭ್ರಮದಲ್ಲಿ ಯಕ್ಷವರ್ಷ 2025 ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಸಂಜೆ 6 -00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂಲ್ಕಿ ರಾಮಕೃಷ್ಣಯ್ಯ ರಚಿತ ‘ಸುಧನ್ವಾರ್ಜುನ’ ಪ್ರಸಂಗದ ಯಕ್ಷಗಾನದಲ್ಲಿ ಸರ್ವಶ್ರೀಗಳಾದ ಉದಯ ಹೊಸಾಳ, ಚಂದ್ರಯ್ಯ ಆಚಾರ್, ರಾಕೇಶ್ ಮಲ್ಯ, ವಿಶ್ವನಾಥ ಹೆನ್ನಾಬೈಲ್, ಮಾಧವ ನಾಗೂರು, ಸುನೀಲ್ ಹೊಲಾಡ್ ವಂಡ್ಸೆ, ಆದಿತ್ಯ ಹೆಗಡೆ, ಪೇತ್ರಿ ರಾಘವೇಂದ್ರ, ವರುಣ ಹೆಗಡೆ ಇವರುಗಳು ಭಾಗವಹಿಸಲಿದ್ದಾರೆ.

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ದುಬೈಯ ಲೇಖಕ ಬಿ.ಕೆ. ಗಣೇಶ್ ರೈ ಇವರ ಲೇಖನ ಸಂಕಲನ ಕೃತಿ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 04 ಮಾರ್ಚ್ 2025ರಂದು ಬೆಳಗ್ಗೆ 11-00 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಅಬುಧಾಬಿ ಕರ್ನಾಟಕ ಸಂಘ ಯು.ಎ.ಇ. ಇದರ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಯು.ಎ.ಇ. ಬಂಟ್ಸ್ ದುಬಾಯಿ ಇದರ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಇವರು ಕೃತಿ ಬಿಡುಗಡೆ ಮಾಡಲಿದ್ದು, ಲೇಖಕಿ ಡಾ. ಅರುಣಾ ನಾಗರಾಜ್ ಇವರು ಕೃತಿ ಪರಿಚಯ ಮಾಡಲಿದ್ದಾರೆ.

Read More