Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಸ್ವಸ್ತಿಕ ನ್ಯಾಶನಲ್ ಸ್ಕೂಲ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್, ಅನಿರ್ವೇದ ಮಾನಸಿಕ ಆರೋಗ್ಯ ಸಂಪನ್ಮೂಲ ಕೇಂದ್ರ ಮತ್ತು ರೋಟರಿ ಮಂಗಳೂರು ಡೌನ್ಟೌನ್ ಸಹಯೋಗದಲ್ಲಿ ದಿನಾಂಕ : 13-07-2023, ಗುರುವಾರ ಕೊಡಿಯಾಲಬೈಲಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಆಯೋಜಿಸಲಾದ ಮಾನಸಿಕ ಸ್ವಾಸ್ಥ್ಯ ಸಮುದಾಯದ ಕಡೆಗೆ ಸರಣಿ-7ರಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಮಾತಾ ಬಿ. ಮಂಜಮ್ಮ ಜೋಗತಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು “ಲಿಂಗತ್ವ ಅಲ್ಪಸಂಖ್ಯಾತರು ಜನರ ಅನುನುಕಂಪದ ಬದಲಾಗಿ, ಸಮಾಜದಲ್ಲಿ ಎಲ್ಲರೊಡನೆ ಒಂದಾಗಿ ಬಾಳುವ ನಿಟ್ಟಿನಲ್ಲಿ ಏನಾದರೊಂದು ಉದ್ಯೋಗವನ್ನು ನಿರೀಕ್ಷಿಸುತ್ತಾರೆ. ಸರ್ಕಾರವೇ ಉದ್ಯೋಗ ಕೊಡಬೇಕು ಎಂದೇನಿಲ್ಲ. ಈ ಭಾಗದಲ್ಲಿ ಸಾಕಷ್ಟು ಉದ್ದಿಮೆಗಳು ಸಂಘ ಸಂಸ್ಥೆಗಳು ಇದ್ದು, ಉದ್ಯೋಗಾವಕಾಶಕ್ಕೆ ಕೊರತೆ ಇಲ್ಲ. ಆ ನಿಟ್ಟಿನಲ್ಲಿ ಒಳ್ಳೆಯ ಮನಸ್ಸುಗಳು ಹೆಚ್ಚಾಗಲಿ. ಹೆಣ್ಣಿನ ಮನಸ್ಸು, ಗಂಡಿನ ದೇಹ ಹೊಂದಿರುವ ನಾವು ಹೆಣ್ಮಕ್ಕಳಿಗಿಂತಲೂ ದುಪ್ಪಟ್ಟು ಕೆಲಸ ಮಾಡಬಲ್ಲೆವು. ನಮ್ಮಲ್ಲಿರುವ ಸಾಕಷ್ಟು ಮಂದಿ ವಿದ್ಯಾವಂತರು, ಅವಿದ್ಯಾವಂತರ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಬಹುದು. ಯಾವುದೇ ಕೆಲಸವಾದರೂ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸ್ಯಾಂಡ್ಸ್ ಪಿಟ್ ಬೆಂಗ್ರೆ ಇಲ್ಲಿನ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯು ದಿನಾಂಕ 15-07-2023 ರಂದು ನಡೆಯಿತು . ಈ ಕಾರ್ಯಕ್ರಮದಲ್ಲಿ ನಿರ್ಣಾಯಕರಾಗಿ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ ಮಂಜುನಾಥ ಎಸ್. ರೇವಣ್ಕರ್ ಇವರು “ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ.ಕ. ಜಿಲ್ಲಾ ಕಸಾಪ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ.” ಎಂದು ಹೇಳಿದರು. ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಯಿತು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ (ಪ್ರಥಮ), ಗಂಗಮ್ಮ (ದ್ವಿತೀಯ) ಗೌತಮ್ (ತೃತೀಯ),…
ಕಿನ್ನಿಗೋಳಿ : ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ನಲ್ಲಿ ಈ ಶೈಕ್ಷಣಿಕ ವರ್ಷದ ಉಚಿತ ನೃತ್ಯ ತರಗತಿ ಕಾರ್ಯಕ್ರಮದ ಉದ್ಘಾಟನೆಯು 10-07-2023 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಿನ್ನಿಗೋಳಿಯ ಶಿವಪ್ರಣಾಮ್ ನೃತ್ಯ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಅನ್ನಪೂರ್ಣ ರಿತೇಶ್ “ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತಃ ರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತಃ ರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು, ಶಿಕ್ಷಣ ಮತ್ತು ನೃತ್ಯಕಲೆಯಿಂದ ಇದು ಸಾಧ್ಯವಾಗಲಿದೆ. ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು” ಎಂದು ಶುಭ ಹಾರೈಸಿದರು. ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, “ನೃತ್ಯಕಲೆ ನಮ್ಮ ಹೃದಯದ ಭಾಷೆ. ಈ ಕಲೆಯಲ್ಲಿ ಎಲ್ಲಾ ಶಿಕ್ಷಣವೂ ಇದೆ. ಹಾಗಾಗಿ ಶಿಕ್ಷಣದಲ್ಲಿ ನೃತ್ಯಕಲೆ ಇರಲೇಬೇಕು. ಇದರಿಂದ ಹೃದಯವಂತ ಮತ್ತು ಸುಸಂಸ್ಕೃತ ವ್ಯಕ್ತಿಗಳ ಪೀಳಿಗೆಯ ನಿರ್ಮಾಣ ಸಾಧ್ಯವಾಗುತ್ತದೆ.” ಎಂದು…
ಮಡಿಕೇರಿ: ದಿನಾಂಕ 14-07-2023 ರಂದು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರನ್ನು ಆಯ್ಕೆಗೊಳಿಸಲಾಗಿದೆ. ಗೌರವ ಕಾರ್ಯದರ್ಶಿಗಳಾಗಿ ಪುದಿಯನೆರವನ ರಿಶೀತ್ ಮಾದಯ್ಯ ಮತ್ತು ಶ್ರೀಮತಿ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಕೋಶಾಧಿಕಾರಿಯಾಗಿ ಸಿದ್ದರಾಜು ಬೆಳ್ಳಯ್ಯರವರನ್ನು ನೇಮಕಗೊಳಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ತಳೂರು ದಿನೇಶ್ ಕರುಂಬಯ್ಯರವರನ್ನು ಆಯ್ಕೆಗೊಳಿಸಲಾಗಿದ್ದು ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಎಚ್.ಟಿ. ಅನಿಲ್, ಮಹಿಳಾ ಪ್ರತಿನಿಧಿಗಳಾಗಿ ಶ್ರೀಮತಿ ಶೋಭಾ ಸುಬ್ಬಯ್ಯ, ಶ್ರೀಮತಿ ಗೌರಮ್ಮ ಮಾದಮಯ್ಯ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಬಿ.ಎಲ್. ಸಂದೇಶ್ ಮತ್ತು ಶ್ರೀಮತಿ ಎಚ್.ಪಿ. ಜಯಮ್ಮ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ ಬಿ.ಎಸ್. ರಂಗಪ್ಪ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಎಂ.ಎಂ. ಅಬ್ದುಲ್ಲಾ, ನಿಕಟ ಪೂರ್ವ ಅಧ್ಯಕ್ಷರಾಗಿ ಶ್ರೀ ಅಂಬೇಕಲ್ ನವೀನ್ ಕಾರ್ಯನಿರ್ವಹಿಸಲಿದ್ದಾರೆ. ಪದನಿಮಿತ್ತ ಪ್ರತಿನಿಧಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಡಿಕೇರಿ. ಶಿಕ್ಷಣಾಧಿಕಾರಿಗಳು ಮಡಿಕೇರಿ ತಾಲೂಕು ಕ್ಷೇತ್ರ, ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರು, ಶ್ರೀ ರಾಜರಾಜೇಶ್ವರಿ…
ವೃತ್ತಿಯಲ್ಲಿ ಡಾಕ್ಟರ್, ಪ್ರವೃತ್ತಿಯಲ್ಲಿ ಯಕ್ಷಗಾನ ಕಲಾವಿದೆಯಾಗಿ ಮಿಂಚುತ್ತಿರುವವರು ಡಾ.ಪ್ರಕೃತಿ ಮಂಚಾಲೆ. 16.07.1986 ರಂದು ಡಾ.ಎಂ.ಎಸ್.ವಿಘ್ನೇಶ್ ಹಾಗೂ ಪದ್ಮಾವತಿ ಇವರ ಮಗಳಾಗಿ ಜನನ. ಆಯುರ್ವೇದದಲ್ಲಿ MD, MS ಆಪ್ತಸಲಹೆ ಮತ್ತು ಮನೋ ಚಿಕಿತ್ಸೆ ವಿದ್ಯಾಭ್ಯಾಸ ಪೂರೈಸಿ ಪ್ರಸ್ತುತ PhD ಮಾಡುತ್ತಿದ್ದು ಜೊತೆಗೆ ಶಿವಮೊಗ್ಗದ ಮೈಸೂರು ಆಯುರ್ವೇದ ಚಿಕಿತ್ಸಾಲಯದಲ್ಲಿ ವೈದ್ಯರಾಗಿ ಹಾಗೆ TMAES ಆಯುರ್ವೇದ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕಿ ಆಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಮಂಚಾಲೆಯವರು ತಂದೆ, ತಾಯಿ ಹಾಗೂ ಗುರುಗಳು ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆ ಹಾಗೂ ಐನಬೈಲು ಪರಮೇಶ್ವರ ಹೆಗಡೆ ಇವರ ಯಕ್ಷಗಾನದ ಗುರುಗಳು. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ:- ಮೊದಲು ಕತೆಯನ್ನು ಚೆನ್ನಾಗಿ ತಿಳಿದುಕೊಂಡು ಅದಕ್ಕೆ ಬೇಕಾಗಿ ಪಾತ್ರ ಯಾವ ರೀತಿ ಹೋಗಬೇಕು ಎಂದು ಅರಿಯಲು ಪ್ರಯತ್ನಿಸುತ್ತೇನೆ. ನಂತರ ಪದ್ಯ ಹೇಗೆ ಸಾಗುತ್ತದೆ ಎಂದು ನೋಡಿ ಅದಕ್ಕೆ ಬೇಕಾದ ಭಾವದ ಸಿದ್ಧತೆ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಸುಧನ್ವಾರ್ಜುನ, ಗದಾಯುದ್ಧ, ಭಸ್ಮಾಸುರ ಮೋಹಿನಿ, ದಕ್ಷಯಜ್ಞ, ಕಂಸ ವಧೆ…
ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಕಾರ್ಕಳದ ‘ಕುಂದಾಪ್ರದವರ್’ ಬಳಗದ ಸಹಯೋಗದಲ್ಲಿ ದಿನಾಂಕ : 17-07-2023ರಂದು ಪ್ರಕಾಶ್ ಹೊಟೇಲ್ನ ಉತ್ಸವ ಸಭಾಂಗಣದಲ್ಲಿ ಸಂಜೆ 4.30ಕ್ಕೆ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಜರಗಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಓಂ ಗಣೇಶ್ ಉಪ್ಪುಂದ ಇವರು ‘ಭಾಷಿ ಅಲ್ಲ ಬದ್ಕ್’ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿರುವರು. ‘ರಂಗ ಸಂಸ್ಕೃತಿ’ ಕಾರ್ಕಳದ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಪೈ, ವಾಲ್ತೂರು ಜನಪದ ಕಲಾವಿದರಾದ ಶ್ರೀ ನಾಗರಾಜ್ ಪಾಣಾರ, ಅಮಾಸೆಬೈಲು ರಂಗಭೂಮಿ ಕಲಾವಿದೆಯಾದ ಶ್ರೀಮತಿ ಪ್ರತಿಮಾ ನಾಯಕ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ…
ಪುತ್ತೂರು : ವಿವೇಕಾನ೦ದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಸೆ ಘಟಕ ಇದರ ಸಹಯೋಗದಲ್ಲಿ ಡಾ. ಶ್ರೀಧರ ಎಚ್.ಜಿ. ರಚನೆಯ ‘ನಾಥ ಪಂಥ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ : 13-07-2023ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. ಈ ಕೃತಿಯನ್ನು ಲೋಕಾರ್ಪಣೆ ಮಾಡಿದ ಮೈಸೂರು ಮಹಾರಾಣಿ ಕಲಾ ಕಾಲೇಜಿನ ಪ್ರಾಚಾರ್ಯ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ.ಬಿ.ಎ.ವಸಂತ ಕುಮಾರ್ ಮಾತನಾಡುತ್ತಾ “ನಾಥ ಪಂಥ ಕೃತಿ ವ್ಯಷ್ಟಿಯ ಮೂಲಕ ಹೊರ ಬಂದಿರುವ ಸಮಷ್ಟಿ. ಆತ್ಮಹತ್ಯೆಯೇ ಮುಂದಿನ ದಾರಿ, ಬೇರೆ ಯಾವುದೇ ದಾರಿ ಇಲ್ಲ ಎನ್ನುವ ವ್ಯಕ್ತಿಯ ಮನಸ್ಸನ್ನು ಆತ್ಮ ಮತ್ತು ವಿಕಾಸದೆಡೆಗೆ ಕೊಂಡೊಯ್ಯಲು ನಾಥ ಪಂಥ ಸಹಾಯವಾಗುತ್ತದೆ. ಜೀವನದ ಪ್ರತಿ ಹಂತದಲ್ಲೂ ಈ ಕೃತಿಯ ಪಾತ್ರ ಮಹತ್ವವಾದದ್ದು, ಅಂತೆಯೇ ಪಂಥಗಳ ಕುರಿತು ಅಧ್ಯಯನ ಮಾಡುವವರಿಗೆ ಈ ಪುಸ್ತಕ ಮಾದರಿಯಾಗಲಿದೆ. ಬದುಕಿನಲ್ಲಿ…
ಉಡುಪಿ: ಹಿರಿಯ ಜಾನಪದ ವಿದ್ವಾಂಸರಾದ ಡಾ. ಹರಿಕೃಷ್ಣ ಭರಣ್ಯ ಇವರು 2022ನೇ ಸಾಲಿನ ಮತ್ತು ಡಾ. ಎನ್. ಆರ್. ನಾಯಕ್ 2023ನೇ ಸಾಲಿನ ‘ಕೇಶವ ಭಟ್ಟ ಪ್ರಶಸ್ತಿ’ಗೆ ಆಯ್ಕೆಯಾಗಿರುವುದಾಗಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿರುತ್ತಾರೆ. ಡಾ. ಎನ್. ಆರ್. ನಾಯಕ್ ಡಾ. ಎನ್. ಆರ್. ನಾಯಕ್ ಇವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿಯವರು. ಇವರು ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ 1964ರಿಂದ 1984ರ ವರೆಗೆ ಪ್ರಾಧ್ಯಾಪಕರಾಗಿ 1984ರಿಂದ 1993ರ ವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಪಿ.ಎಚ್.ಡಿ ಮಾರ್ಗದರ್ಶಕರೂ ಆಗಿದ್ದರು. ಅಲ್ಲದೆ ಕರ್ನಾಟಕ ಜಾನಪದ ವಿ.ವಿಯ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಹಲವಾರು ಸಂಘಸಂಸ್ಥೆಗಳ ಅಧ್ಯಕ್ಷರಾಗಿ, ವಿವಿಧ ಗೋಷ್ಠಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅನುಭವ ಹೊಂದಿದ್ದಾರೆ. ಕುಮಟಾದಲ್ಲಿ ನಡೆದ ಉ.ಕ ಜಿಲ್ಲೆಯ ಪ್ರಥಮ ಜಾನಪದ ಸಮ್ಮೇಳನ, ಗೋಕರ್ಣದಲ್ಲಿ ನಡೆದ 7ನೆಯ ಕನ್ನಡ ಸಾಹಿತ್ಯ ಸಮ್ಮೇಳನ, ಶಿರಸಿಯಲ್ಲಿ ನಡೆದ…
ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ 09-07-2023ರ ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಿತು. ಎಂಪವರ್ಡ್ ಮೈಂಡ್ಸ್ ಎಡು ಸೊಲ್ಯೂಷನ್ಸ್ ಎಲ್. ಎಲ್. ಪಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಲತಾ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಬೆಂಗಳೂರಿನ ಕವಿ ಮತ್ತು ಚಿಂತಕರಾದ ಶ್ರೀ ಯೂಸಫ್ ಹೆಚ್. ಬಿ ಇವರು ರಾಜ್ಯಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಮತ್ತು ಡಾ. ಜ್ಯೋತಿ ಶ್ರೀನಿವಾಸ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು. ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕರಾದ ಅಮಿರ್ ಬನ್ನೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಮೂವತ್ತು ಕವಿಗಳು ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವನವಾಚನ ಮಾಡಿದರು. ಶ್ರೀ ಮೊಹಮ್ಮದ್ ಹುಮಾಯೂನ್. ಎನ್ ಅಧ್ಯಕ್ಷತೆ ವಹಿಸಿದ್ದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಶ್ರೀ ಮೈಬೂಬಸಾಹೇಬ.ವೈ. ಜೆ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಡಾ.ಎಂ.ಎಂ ಭಾಷ ನಂದಿ, ಚಂದ್ರಶೇಖರ್ ಸಿ.ಎನ್,…
ಅಂಕೋಲಾ ಶಹರದಿಂದ ತುಸು ದೂರದಲ್ಲಿರುವ ‘ವಂದಿಗೆಯೆಂಬ ಪುಟ್ಟ ಗ್ರಾಮವು ಅಂಕೋಲಾದ ಸುತ್ತಲಿನ ಹತ್ತೂರುಗಳಲ್ಲಿ ಸುಪರಿಚಿತಗೊಳ್ಳುವಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮೆರೆದ ನಾಯಕದಯರಾದ ವಿ.ಜೆ ಹಾಗೂ ವಿಠೋಬ ನಾಯಕರವರಿಂದ ಎನ್ನುವಲ್ಲಿ ಕೊಂಚವೂ ಉತೇಕ್ಷೆಯಿಲ್ಲ. ವಿಠೋಬ ನಾಯಕರವರು ಎಂಬತ್ತೆಂಟು ಸಂವತ್ಸರಗಳ ತುಂಬು ಬದುಕನ್ನು ಕಂಡವರು. ಅವರದು ನಾಡವರ ಕಟ್ಟುಮಸ್ತಾದ ಗಟ್ಟುಮುಟ್ಟಿನ ಮೈಕಟ್ಟು, ಉದ್ದನೆಯ ಆಳು, ನೀಳವಾದ ತೋಳು, ಹವಳದಂತೆ ಹೊಳೆಯುವ ಕವಳ ತುಂಬಿದ ತುಟಿಯ ನಗು, ಅಗಲವಾದ ಹಣೆ, ಆಕರ್ಷಕ ಕಂಗಳು, ವಿಸ್ತಾರವಾಗಿರುವ ಎದೆ, ಸುಮ್ಮನೆ ಮಾತನಾಡಿದರೂ ‘ಝಲ್’ ಎನ್ನಿಸುವ ಸಿರಿಕಂಠ ಮತ್ತು ರಾಜಗಾಂಭೀರ್ಯದ ನಡೆ… ಹೀಗೆ ಕಣ್ಣಿಗೆ ಕಟ್ಟುವ ಅವರು ರಂಗದಲ್ಲಿ ಹಾಗೂ ರಂಗದಾಚೆಯೂ ರಂಗಾಗಿಯೇ ಇದ್ದ ಯಕ್ಷಗಾನದ ಅಭಿಜಾತ ಕಲಾವಿದ. ನಾವೆಲ್ಲ ಪ್ರವರ್ಧಮಾನಕ್ಕೆ ಬರುವ ಹೊತ್ತಿನಲ್ಲಿ ವಿಠೋಬಣ್ಣ ರಂಗದಿಂದ ದೂರ ಸುರಿದು ಸಾಕಷ್ಟು ಸಮಯವೇ ಸಂದಿತ್ತು. ಅವರೊಂದಿಗೆ ಒಡನಾಡಿದ ಅವರ ಕಿರಿಯ ಸಮಕಾಲೀನ ಸಹ ಕಲಾವಿದರು ವೇಷ ಮಾಡಿಕೊಳ್ಳುವಾಗಲೆಲ್ಲ “ಇದು ವಂದಿಗೆಯ ವಿಠೋಬ ನಾಯಕರವರು ಮಾಡುತ್ತಿದ್ದ ವೇಷ, ವಿಠೋಬ ನಾಯಕರವರ ನಡೆ ಹಾಗಿತ್ತು.…