Author: roovari

ಸುರತ್ಕಲ್ : ಎಂ.ಆರ್.ಪಿ.ಎಲ್. ಸಂಸ್ಥೆಯವರು ನಡೆಸುತ್ತಿರುವ ಸ್ವಚ್ಛತಾ ಪಕ್ವಾಡದ ಅಂಗವಾಗಿ ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಆ್ಯಂಡ್ ರೇಂಜರ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ಯೂನಿಟ್ ಸಹಯೋಗದಲ್ಲಿ ಕಾಲೇಜಿನ ಆವರಣದಿಂದ ಸುರತ್ಕಲ್ ಪೇಟೆಯವರೆಗೆ ಸ್ವಚ್ಛತಾ ಜಾಗೃತಿ ಜಾಥಾ ದಿನಾಂಕ : 12-07-2023ರಂದು ನಡೆಯಿತು. ಇದರ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ “ಸ್ವಚ್ಛತೆ ನಮ್ಮ ಧ್ಯೇಯ” ಎಂಬ ಶೀರ್ಷಿಕೆಯ ಬೀದಿ ನಾಟಕ ಸ್ವಚ್ಚತೆಯ ಕುರಿತು ಜನರಲ್ಲಿ ಅರಿವು ಮೂಡಿಸಿತು. ಈ ನಾಟಕವನ್ನು ವಿದ್ಯಾರ್ಥಿ ಶ್ರೀ ವಿನೀತ್ ರಾಜ್ ಮಧ್ಯ ರಚಿಸಿ, ಹಿನ್ನೆಲೆ ಸಂಗೀತ ನೀಡಿದರು ಹಾಗೂ ಉಪನ್ಯಾಸಕ, ರಂಗಕರ್ಮಿ ಶ್ರೀ ರಾಕೇಶ್ ಹೊಸಬೆಟ್ಟು ಬೀದಿ ನಾಟಕವನ್ನು ನಿರ್ದೇಶಿಸಿದರು. ಈ ಬೀದಿನಾಟಕದಲ್ಲಿ ಸುಮಾರು 45 ವಿದ್ಯಾರ್ಥಿಗಳು ಅಭಿನಯಿಸಿ ನೆರೆದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ರೋಶನಿ ನಿಲಯ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ಇದರ ರಿಜಿಸ್ಟ್ರಾರ್ ಪ್ರೊ. ವಿನೀತಾ ರೈ ಅವರು ಮುಖ್ಯ ಅತಿಥಿಗಳಾಗಿ…

Read More

ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ಹಾಗೂ ವಾಸವಿ ಸಾಹಿತ್ಯ ಕಲಾ ವೇದಿಕೆ ಪ್ರಸ್ತುತ ಪಡಿಸುವ ‘ಸಾಹಿತಿಗಳೊಂದಿಗೆ ಒಂದು ಸಂಜೆ’ ಆನ್ಲೈನ್ ಕಾರ್ಯಕ್ರಮವು ದಿನಾಂಕ : 16-07-2023 ರವಿವಾರ ಸಂಜೆ 6-30ಕ್ಕೆ ನಡೆಯಲಿದೆ. ಇದು ಈ ಸರಣಿ ಕಾರ್ಯಕ್ರಮದ 100ನೇ ಆವೃತ್ತಿಯಾಗಿದ್ದು, ಪ್ರಖ್ಯಾತ ಸಾಹಿತಿಯಾದ ಶ್ರೀ ಚಂದ್ರಶೇಖರ ನಾವುಡ ಬೈಂದೂರು ಈ ಬಾರಿ ಅತಿಥಿಯಾಗಿ ಭಾಗವಹಿಸಿ ‘ಸೈನ್ಯ ಛಾವಣಿ ಒಳಗಿನ ಬದುಕು’ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಈ ಆನ್ಲೈನ್ ಕಾರ್ಯಕ್ರಮವನ್ನು ಝೂಮ್ ಲಿಂಕ್ https://bit.ly/2UbE22Z, ಮೀಟಿಂಗ್ ಐಡಿ 5940765774 ಮತ್ತು ಪಾಸ್ ಕೋಡ್ imaksb ಮೂಲಕ ಭಾಗವಹಿಸಬಹುದು. ಕನ್ನಡ ವೈದ್ಯ ಬರಹಗಾರರ ಸಮಿತಿಯ ಅಧ್ಯಕ್ಷರಾದ ಡಾ.ಶಿವಾನಂದ ಕುಬಸದ, ಭಾ.ವೈ ಸಂ ಕರ್ನಾಟಕ ಶಾಖೆಯ ರಾಜ್ಯಾಧ್ಯಕ್ಷರಾದ ಡಾ. ಶಿವಕುಮಾರ್ ಲಕ್ಕೊಳ್, ಗೌರವ ಕಾರ್ಯದರ್ಶಿಗಳಾದ ಡಾ. ಕರುಣಾಕರ ಬಿ.ಪಿ. ಹಾಗೂ ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆಯ ಡಾ. ವೀಣಾ ಎನ್. ಎಲ್ಲರಿಗೂ ಈ ಆನ್ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ದಿನಾಂಕ : 13-07-2023ರಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥರ ನೇತೃತ್ವದ ಒಂದು ತಂಡವು ನಾಲ್ವರು ಹಿರಿಯ ಸಾಹಿತಿಗಳ ಮನೆಗೆ ಹೋಗಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಿತು. ಮಂಗಳೂರು ಪರಿಸರದ ಹಿರಿಯ ಸಾಹಿತಿಗಳಾದ ಪ್ರೊ. ಕೆ.ಟಿ. ಗಟ್ಟಿ, ಡಾ. ವಾಮನ ನಂದಾವರ, ಶ್ರೀ ಸದಾನಂದ ಸುವರ್ಣ, ಶ್ರೀ ಕೇಶವ ಕುಡ್ಲ ಇವರುಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿತು. ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಜಿಲ್ಲಾ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕಿರಣಪ್ರಸಾದ್ ರೈ, ಮಂಗಳೂರು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಂಜುನಾಥ್ ರೇವಣ್ಕರ್, ಎಂ.ಪಿ. ಸಾಕೇತ್ ರಾವ್ ಮುಂತಾದವರು ಜಿಲ್ಲಾ ಕಸಾಪ ತಂಡದಲ್ಲಿದ್ದರು. ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ-ಸಹಯೋಗ ಪಡೆಯುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಗೂ ಸಾಹಿತ್ಯ ಪರಿಷತ್ತಿನ ಪದನಿಮಿತ್ತ ಸದಸ್ಯರಾಗಿರುವ ಕರ್ನಾಟಕ…

Read More

ಪಡುಬಿದ್ರಿ: ಯಕ್ಷಶಿಕ್ಷಣ ಟ್ರಸ್ಟ್ ಇವರ ಸಹಯೋಗದಲ್ಲಿ ಯಕ್ಷಗಾನದ ತರಗತಿಯು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ದಿನಾಂಕ : 12-07-2023ರಂದು ಆರಂಭವಾಯಿತು. ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಎಮ್. ಗಂಗಾಧರ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ “ಮಕ್ಕಳಿಗೆ ಪುರಾಣ ಜ್ಞಾನ, ಭಾರತೀಯ ಸಂಸ್ಕೃತಿಯ ತಿಳಿವನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಸಹಕಾರಿಯಾಗಿದೆ” ಎಂದು ಹೇಳಿದರು. ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ.ಜಿ.ಶೆಟ್ಟರು ಶುಭ ಹಾರೈಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀ ಮುರಳಿ ಕಡೇಕಾರ್ ಮಾತನಾಡಿ, “ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಯಕ್ಷಶಿಕ್ಷಣ ಸಹಕಾರಿ ಎಂಬುದನ್ನು ಅರಿತ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಶೇಷ ಆಸಕ್ತಿಯಿಂದಾಗಿ ಈ ಬಾರಿ ಕಾಪು ವಿಧಾನಸಭಾ ವ್ಯಾಪ್ತಿಯ 15 ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಗತಿ ಆರಂಭಿಸಲಾಗಿದೆ” ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಅನುರಾಧಾ ಪಿ.ಎಸ್. ಇವರು ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಅಶೋಕ ಕೆ. ಇವರು ಧನ್ಯವಾದ ಸಮರ್ಪಿಸಿ, ಸಂಸ್ಕೃತ ಭಾಷಾ ಶಿಕ್ಷಕರಾದ ಡಾ. ರಾಘವೇಂದ್ರ…

Read More

ಉಡುಪಿ : ರಾಗ ಧನ ಉಡುಪಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಶ್ರೀಮತಿ ಶಂಕರಿ ಬಿ. ಭಟ್ ಉಪ್ಪಂಗಳ, ಶ್ರೀಮತಿ ಅನಿತಾ ವರದೇಶ್ ಮಣಿಪಾಲ ಹಾಗೂ ಶ್ರೀಮತಿ ಗಾಯತ್ರಿ ಮನೋಹರ್ ಪರ್ಕಳ ಇವರ ಆತಿಥ್ಯ ಮತ್ತು ಸಹ ಪ್ರಾಯೋಜಕತ್ವದಲ್ಲಿ ಪ್ರಸ್ತುತ ಪಡಿಸುವ ಗೃಹ ಸಂಗೀತ ಕಾರ್ಯಕ್ರಮ ‘ರಾಗ ರತ್ನ ಮಾಲಿಕೆ’ -14 ದಿನಾಂಕ 15-07-2023 ಶನಿವಾರ ಸಂಜೆ ಉಡುಪಿ ಜಿಲ್ಲೆಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀಮತಿ ಮಾಧವಿ ಎಸ್. ಭಟ್ ಪೆರ್ಣಂಕಿಲ, ಶ್ರೀಮತಿ ಲಲಿತಾ ಶ್ರೀರಾಮ್ ಮತ್ತು ಶ್ರೀಮತಿ ಸರಸ್ವತಿ ಇವರಿಂದ ಕೀರ್ತನೆಗಳ ಪ್ರಸ್ತುತಿ ನಡೆಯಲಿದೆ. ಇವರಿಗೆ ವಯೊಲಿನ್ ನಲ್ಲಿ ಶ್ರೀಮತಿ ಶರ್ಮಿಳಾ ರಾವ್ ಹಾಗೂ ಮೃದಂಗದಲ್ಲಿ ಶ್ರೀ ಬಾಲಚಂದ್ರ ಭಾಗವತ್ ಸಹಕರಿಸಲಿದ್ದಾರೆ. ಇದರ ಬಳಿಕ ವಿಜಯವಾಡದ ಮಲ್ಲಾಡಿ ಸಹೋದರರಾದ ಮಲ್ಲಾಡಿ ಶ್ರೀರಾಮ್ ಪ್ರಸಾದ್ ಹಾಗೂ ಡಾ. ಮಲ್ಲಾಡಿ ರವಿಕುಮಾರ್ ಇವರುಗಳಿಂದ ದ್ವಂದ್ವ ಹಾಡುಗಾರಿಕೆ ನಡೆಯಲಿದೆ. ಇವರ ಹಾಡುಗಾರಿಕೆಗೆ ವಯೊಲಿನ್…

Read More

ಮಂಗಳೂರು : ಚಕ್ರಪಾಣಿ ನೃತ್ಯ ಕಲಾಕೇಂದ್ರ (ರಿ.) ಅತ್ತಾವರ ಮಂಗಳೂರು ಇದರ ವತಿಯಿಂದ ಗುರುಪೂರ್ಣಿಮೆ ಹಬ್ಬ ಹಾಗೂ ಮಾತಾ ಪಿತರ ಪಾದಪೂಜೆಯು ಚಕ್ರಪಾಣಿ ಕಲಾಮಂಟಪದಲ್ಲಿ ದಿನಾಂಕ : 09-07-2023ರಂದು ಜರುಗಿತು. ಚಕ್ರಪಾಣಿ ದೇಗುಲದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ತಾಯಿ ಮತ್ತು ತಂದೆಯರ ಪಾದಪೂಜೆ ನಡೆಯಿತು. “ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಶಿಕ್ಷಣ ಜೀವನದಲ್ಲಿ ಎಷ್ಟು ಪ್ರಾಮುಖ್ಯತೆ ಪಡೆಯುತ್ತದೆಯೋ ಅಷ್ಟೇ ಮೌಲ್ಯ ಶಿಕ್ಷಣ ಕೂಡ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತದೆ. ಮಕ್ಕಳು ಮನೆಯ ವಾತಾವರಣ, ಶಿಸ್ತು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿರುವುದರಿಂದ ಜೀವನದ ಗುರಿಯನ್ನು ಅತೀ ಸುಲಭದಲ್ಲಿ ತಲುಪಲು ಸಾಧ್ಯ.” ಎಂದು ಶಿಕ್ಷಣ ತಜ್ಞೆ ಮತ್ತು ಆಪ್ತ ಸಮಾಲೋಚಕಿ ಶ್ರೀಮತಿ ಸುಮತಿ ಪೈ ಹೇಳಿದರು. ಈ ಸಂದರ್ಭದಲ್ಲಿ ಶ್ರೀಮತಿ ಮಯೂರಿ ಅತ್ತಾವರ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ಸುರೇಶ್ ಅತ್ತಾವರ್ ಇವರು ಸ್ವಾಗತಿಸಿ, ಶ್ರೀಮತಿ ಮಲ್ಲಿಕಾ ಸುರೇಶ್ ವಂದನಾರ್ಪಣೆಗೈದರು.

Read More

ಮಂಗಳೂರು : ಯಕ್ಷಾರಾಧನಾ ಕಲಾ ಕೇಂದ್ರ (ರಿ.) ಇದರ 14ನೇ ‘ವರ್ಷಾಚರಣೆಯ ಸಂಭ್ರಮ’ ಕಾರ್ಯಕ್ರಮವು ದಿನಾಂಕ : 15-07-2023ನೇ ಶನಿವಾರ ಅಪರಾಹ್ನ 3.30ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಭವನ (ಪುರಭವನ)ದಲ್ಲಿ ನಡೆಯಲಿದೆ. ಮಧ್ಯಂತರದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ ಹಾಗೂ ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಡಿ. ಶೆಟ್ಟಿ, ಮಂಗಳೂರಿನ ಸನಾತನ ಯಕ್ಷಾಲಯದ ನಿರ್ದೇಶಕರಾದ ಶ್ರೀ ರಾಕೇಶ್ ರೈ ಅಡ್ಕ, ಮಂಗಳೂರು ಮಹಾನಗರಪಾಲಿಕೆಯ ಕಾರ್ಪೋರೇಟರ್ ಗಳಾದ ಶ್ರೀ ರಾಧಾಕೃಷ್ಣ ಮತ್ತು ಶ್ರೀ ಜಗದೀಶ್ ಶೆಟ್ಟಿ, ಸುರತ್ಕಲ್ ಮಹಿಳಾ ಯಕ್ಷಕಲಾ ಬಳಗದ ಮುಖ್ಯಸ್ಥೆಯಾದ ಶ್ರೀಮತಿ ಕೆ. ಕಲಾವತಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಮಂಗಳೂರಿನ ಸರಯೂ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಶ್ರೀ ವರ್ಕಾಡಿ ರವಿ ಅಲೆವೂರಾಯರಿಗೆ ‘ಯಕ್ಷ…

Read More

ಮೈಸೂರು: ಕರ್ನಾಟಕ ರಂಗಭೂಮಿಗೆ ಅಪಾರ ಕೊಡುಗೆ ನೀಡಿರುವ ಗುರು ಶ್ರೀ ಕೆ.ವಿ ಸುಬ್ಬಣ್ಣನವರ ನೆನಪಿನಲ್ಲಿ, ತಿಂಗಳಿಡೀ ನಟನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಇದೇ ಜುಲೈ 14 ಮತ್ತು 15ರಂದು ಸಂಜೆ 06.30ಕ್ಕೆ ಸರಿಯಾಗಿ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಕೃಷ್ಣೇಗೌಡರ ಆನೆ’ ನಾಟಕವು ಶ್ರೀ ಮಂಡ್ಯ ರಮೇಶ್‌ ಅವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ನಾಟಕದ ರಂಗರೂಪ ಶ್ರೀ ಶಶಿಕಾಂತ ಯಡಹಳ್ಳಿ ಹಾಗೂ ವಿನ್ಯಾಸ ನಟನ ರಂಗಶಾಲೆಯ ಪ್ರಾಂಶುಪಾಲರಾದ ಶ್ರೀ ಮೇಘ ಸಮೀರ ಅವರದ್ದು. ಮಂಡ್ಯರಮೇಶ್ ಅವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು, ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು ಶ್ಲಾಘನೀಯ. ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು ಹಾಗೂ ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ಇದು…

Read More

ಮಂಗಳೂರು : ಕಟೀಲು ಮೇಳಗಳ ಕಲಾವಿದರಿಂದ ಯಕ್ಷಗಾನ, ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಮಂಡೆಚ್ಚ ಪ್ರಶಸ್ತಿ ಪ್ರದಾನ’ ಹಾಗೂ ‘ಕುಬಣೂರು ಸಂಸ್ಮರಣೆ’ ಕಾರ್ಯಕ್ರಮವು ದಿನಾಂಕ : 15-07-2023ರಂದು ಸಂಜೆ ಗಂಟೆ 4ಕ್ಕೆ ಕಟೀಲು ಸರಸ್ವತೀ ಸದನದಲ್ಲಿ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ವಾಸುದೇವ ಆಸ್ರಣ್ಣ, ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ, ಶ್ರೀ ವೆಂಕಟರಮಣ ಆಸ್ರಣ್ಣ, ಶ್ರೀ ಅನಂತಪದ್ಮನಾಭ ಆಸ್ರಣ್ಣ, ಶ್ರೀ ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀ ಶ್ರೀಹರಿನಾರಾಯಣದಾಸ ಆಸ್ರಣ್ಣ, ಶ್ರೀ ಸನತ್‌ಕುಮಾರ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ಶ್ರೀ ಐಕಳ ಗಣೇಶ ಶೆಟ್ಟಿ ಮುಂಬೈ, ಶ್ರೀ ದೊಡ್ಡಯ್ಯ ಮೂಲ್ಯ ಕಟೀಲು ಹಾಗೂ ಶ್ರೀ ಶ್ರೀಕಾಂತ ಕುಬಣೂರು ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾಗಿದ್ದ ದಾಮೋದರ ಮಂಡೆಚ್ಚ ಇವರ ಹೆಸರಿನಲ್ಲಿ ನೀಡಲಾಗುವ ಈ ವರುಷದ ‘ಮಂಡೆಚ್ಚ ಪ್ರಶಸ್ತಿ’ಯನ್ನು ಮಂಡೆಚ್ಚರ ಒಡನಾಡಿ ಖ್ಯಾತ ಮದ್ಲೆಗಾರ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ನೀಡಿ ಗೌರವಿಸಲಾಗುವುದು. ಇವರು ಸುಂಕದಕಟ್ಟೆ, ಕರ್ನಾಟಕ, ಕದ್ರಿ, ಕಟೀಲು, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ…

Read More

ಮೂಡುಬಿದಿರೆ: ಯಕ್ಷದೇಗುಲ ಕಾಂತಾವರದ 21ನೇ ವಾರ್ಷಿಕ ಆಟ ಕೂಟ ಮತ್ತು ಬಯಲಾಟ ‘ಯಕ್ಷೋಲ್ಲಾಸ’ ಕಾರ್ಯಕ್ರಮವು ದಿನಾಂಕ 23-07-2023 ರಂದು ನಡೆಯಲಿದೆ. ಇದೇ ಸಂದರ್ಭದಲ್ಲಿ ಪುತ್ತೂರು ದಿ. ಶ್ರೀಧರ ಭಂಡಾರಿ ಸಂಸ್ಮರಣ ಪ್ರಶಸ್ತಿಯನ್ನು ಕಟೀಲು ಮೇಳದ ಕಲಾವಿದ ತಾರಾನಾಥ ವರ್ಕಾಡಿ ಅವರಿಗೆ ಹಾಗೂ ಬಾಯಾರು ದಿ. ಪ್ರಕಾಶ್ಚಂದ್ರ ರಾವ್ ಸಂಸ್ಮರಣ ಪ್ರಶಸ್ತಿಯನ್ನು ಹನುಮಗಿರಿ ಮೇಳದ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ ತೀರ್ಮಾನಿಸಿದೆ. ಪ್ರಶಸ್ತಿಯು ನಗದು ಪುರಸ್ಕಾರ ಹಾಗೂ ಸಮ್ಮಾನ ಒಳಗೊಂಡಿದೆ ಎಂದು ಪ್ರಧಾನ ಸಂಚಾಲಕ ಮಹಾವೀರ ಪಾಂಡಿ ತಿಳಿಸಿದ್ದಾರೆ.

Read More