Subscribe to Updates
Get the latest creative news from FooBar about art, design and business.
Author: roovari
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆಯ ಶ್ರೀಮತಿ ಭಾಗೀರಥಿ ಭಟ್ಟ ಹಾಗೂ ಕೃಷ್ಣ ಭಟ್ಟ ಇವರ ಮಗನಾಗಿ 5.03.1967 ರಂದು ರವೀಂದ್ರ ಭಟ್ಟ ಅಚವೆ ಅವರ ಜನನ. ದ್ವಿತೀಯ ಪಿಯುಸಿ ಇವರ ವಿದ್ಯಾಭ್ಯಾಸ. ಆರನೇ ತರಗತಿ ಓದುತ್ತಿರುವಾಗ ಮನೆಯಲ್ಲಿ ಯಕ್ಷಗಾನ ಭಾಗವತಿಕೆಯ ತರಬೇತಿ ನಡೆಯುತ್ತಿತ್ತು ಅದನ್ನು ದಿನವೂ ಗಮನಿಸುತ್ತಿದ್ದರು ಆ ಕಾಲದಲ್ಲಿ ಮನರಂಜನೆಯ ಮಾಧ್ಯಮ ‘ಯಕ್ಷಗಾನ’ವೊಂದೇ ಆಗಿತ್ತು ಎಲ್ಲಿ ಯಕ್ಷಗಾನ ನಡೆದರೂ ಹಾರ್ಮೋನಿಯಂ ವಾದನ ನನ್ನದಾಗಿರುತ್ತಿತ್ತು. ನಂತರ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿದ ಮೇಲೆ ಯಕ್ಷಗಾನ ಭಾಗವತಿಕೆ ಕಲಿಯಲು ಮುಂದಾದರು ಅಚವೆಯವರು. ಪ್ರಾಚಾರ್ಯ ಕೆ.ವಿ. ಹೆಗಡೆ ಗೋಳಗೋಡ್ ಇವರ ಯಕ್ಷಗಾನ ಗುರುಗಳು. ಗೋರ್ಪಾಡಿ ವಿಠ್ಠಲ ಪಾಟೀಲ್, ಗೋಪಾಲ ಗಾಣಿಗ ಹೆರಂಜಾಲು ಬಳಿ ಯಕ್ಷಗಾನದ ಭಾಗವತಿಕೆಯ ಬಗ್ಗೆ ಕೇಳಿ ಕಲಿತಿರುತ್ತಾರೆ ರವೀಂದ್ರ ಭಟ್ಟ ಅಚವೆ. ನಾರಣಪ್ಪ ಉಪ್ಪೂರು, ನೆಬ್ಬೂರರು, ಕಾಳಿಂಗ ನಾವಡ, ಕೆ.ಪಿ ಹೆಗಡೆ, ಧಾರೇಶ್ವರರು, ವಿದ್ವಾನ್ ಗಣಪತಿ ಭಟ್ಟರು, ಗೋಪಾಲ ಗಾಣಿಗ, ಪದ್ಯಾಣ ಗಣಪತಿ ಭಟ್ಟರು ನೆಚ್ಚಿನ ಭಾಗವತರು ಪ್ರತಿಯೊಬ್ಬರಲ್ಲೂ…
ಮೈಸೂರು : ರಂಗಬಂಡಿ ಮಳವಳ್ಳಿ (ರಿ.) ಪ್ರಸ್ತುತ ಪಡಿಸುವ ಏಕವ್ಯಕ್ತಿ ರಂಗ ಪ್ರಯೋಗ ‘ಅನುರಕ್ತೆ’ (ದೇವಯಾನಿ ಬದುಕಿನ ದುರಂತ ಕಥನ) ನಾಟಕವು ದಿನಾಂಕ 01-12-2023ರಂದು ಸಂಜೆ 6.30ಕ್ಕೆ ಮೈಸೂರಿನ ಕಲಾಮಂದಿರ ಅವರಣದ ಕಿರು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಶಶಿಕಾಂತ ಯಡಹಳ್ಳಿಯವರ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಧು ಮಳವಳ್ಳಿ ನಿರ್ವಹಿಸಿದ್ದು, ರಂಗದ ಮೇಲೆ ಉಮಾಶ್ರೀ ಮಧು ಮಳವಳ್ಳಿ ಪ್ರಸ್ತುತಪಡಿಸಲಿದ್ದಾರೆ. ಈ ನಾಟಕದ ರಂಗ ವಿನ್ಯಾಸವನ್ನು ಶಶಿಧರ ಅಡಪ ನಿರ್ವಹಿಸಲಿದ್ದು, ಸಂಗೀತ ಜನಾರ್ದನ (ಜನ್ನಿ) ಅವರದ್ದು, ಬೆಳಕಿನ ವಿನ್ಯಾಸವನ್ನು ಅರುಣ್ ಮೂರ್ತಿ ಮತ್ತು ನಾಟಕಕ್ಕೆ ಆದಿತ್ಯ ಭಾರದ್ವಾಜ್ ಸಹಕರಿಸಲಿದ್ದಾರೆ. ನಾಟಕಕ್ಕೆ ಸಹಾಯ ಧನ ರೂಪಾಯಿ 100/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ – 7022940964, 8197130609 ನಾಟಕದ ಕುರಿತು : ಪೌರಾಣಿಕ ಕತೆಗಳು, ಪಾತ್ರಗಳು, ಘಟನೆಗಳು ಸದಾ ನಮ್ಮನ್ನಾವರಿಸುತ್ತವೆ. ಇವು ಸಾರ್ವಕಾಲಿಕವಾಗಿರುವುದೇ ಇದಕ್ಕೆ ಕಾರಣವಿರಬಹುದು! ಅಲ್ಲಿಯ ಪಾತ್ರಗಳ ರಸವತ್ತತೆ, ಮನುಜ ಸಹಜ ಗುಣಗಳು, ಜೀವನದ ಪಾಠಗಳು, ಬದುಕಿನೊಡನೆ ಬೆಸೆದ ಬರಹವಾಗಿರುತ್ತದೆ. ಮನುಷ್ಯನ ಮುಖವಾಡ ಕಳಚಲು…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಅಧ್ಯಾಯವು ದಿನಾಂಕ 19-11-2023ರಿಂದ 25-11-2023ರವರೆಗೆ ‘ವಿಶ್ವ ಪರಂಪರೆಯ ಸಪ್ತಾಹ’ವನ್ನು ನಗರದ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರ (ಕೊಡಿಯಾಲ್ ಗುತ್ತು ಪಶ್ಚಿಮ)ದಲ್ಲಿ ಆಚರಿಸಲಿದೆ. ದಿನಾಂಕ 19-11-2023ರಂದು ಭಾನುವಾರ ಬೆಳಿಗ್ಗೆ ಗಂಟೆ 10-30ಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶ್ರೀ ಬಿ.ಟಿ. ಓಬಲೇಶಪ್ಪ ಅವರಿಂದ ‘ಡೆಮಾಲಿಶನ್ ತೀರ್ಪಿನಿಂದ ಬದುಕುಳಿದ ಉಡುಪಿ ಉಪ ಕಾರಾಗೃಹ’ ಎಂಬ ಪ್ರದರ್ಶನದ ಉದ್ಘಾಟನೆಯೊಂದಿಗೆ ಒಂದು ವಾರದ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಜನಾರ್ದನ ಹಾವಂಜೆಯವರಿಂದ ಪ್ರಾಸ್ತಾವಿಕ ಭಾಷಣ ನಡೆಯಲಿದ್ದು, ಉಡುಪಿ ಉಪ ಕಾರಾಗೃಹದ ಕುರಿತು ಶರ್ವಾಣಿ ಭಟ್ ನಿರೂಪಣೆ ಮಾಡಲಿದ್ದಾರೆ. ಪ್ರದರ್ಶನವು ದಿನಾಂಕ 19-11-2023ರಿಂದ 25-11-2023ರವರೆಗೆ 11-00ರಿಂದ ಮಧ್ಯಾಹ್ನ 1-00ರವರೆಗೆ ಮತ್ತು ಸಂಜೆ 4-00ರಿಂದ 7-00ರವರೆಗೆ ತೆರೆದಿರುತ್ತದೆ. ಪ್ರತಿದಿನ ಸಂಜೆ ಗಂಟೆ 5-30ಕ್ಕೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಿನಾಂಕ 20-11-2023ರಂದು ವಾಸ್ತುಶಿಲ್ಪಿ ನಿರೇನ್ ಜೈನ್ ಅವರಿಂದ ‘ಮಂಗಳೂರಿನ ಬೀದಿ ಮತ್ತು ಸ್ಥಳದ ಹೆಸರುಗಳನ್ನು ಕಾಲಾಂತರವಾಗಿ…
ಮೈಸೂರು : ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧರಿಸಿದ ‘ಕೃಷ್ಣೇಗೌಡರ ಆನೆ’ ನಾಟಕವು ಶ್ರೀ ಮಂಡ್ಯ ರಮೇಶರವರು ನಿರ್ದೇಶಿಸಿದ್ದು, ನಾಟಕದ ರಂಗರೂಪ ಶ್ರೀ ಶಶಿಕಾಂತ ಯಡಹಳ್ಳಿ ಹಾಗೂ ವಿನ್ಯಾಸ ನಟನ ರಂಗಶಾಲೆಯ ಪ್ರಾಂಶುಪಾಲರಾದ ಶ್ರೀ ಮೇಘ ಸಮೀರ ಅವರದ್ದು. ಈಗಾಗಲೇ ಮೈಸೂರು, ನೋಯಿಡಾ, ದೆಹಲಿಯಲ್ಲಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ದಿನಾಂಕ 19-11-2023ರಂದು ಮೈಸೂರಿನ ನಟನಾ ರಂಗಮಂದಿರದಲ್ಲಿ, 21-11-2023ರಂದು ಮೈಸೂರಿನ ರಮಾಗೋವಿಂದ ರಂಗಮಂದಿರದಲ್ಲಿ, ದಿನಾಂಕ 25-11-2023ರಂದು ಹುಬ್ಬಳ್ಳಿಯ ವಿದ್ಯಾನಗರ ಮತ್ತು ದಿನಾಂಕ 07-12-2023ರಂದು ವಿಜಯಪುರದಲ್ಲಿ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಮಂಡ್ಯರಮೇಶ್ ಅವರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕಲಾಮಾಧ್ಯಮದಲ್ಲಿ ಕ್ರಿಯಾಶೀಲವಾಗಿದ್ದು, ರಂಗಭೂಮಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದೆ. ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ ಹಾಗೂ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ನಟನ ಸತತವಾಗಿ ಪ್ರಯತ್ನ ನಡೆಸುತ್ತಾ ಬಂದಿದ್ದು ಶ್ಲಾಘನೀಯ. ಮೈಸೂರಿನಲ್ಲಿ ನೆಲೆಗೊಂಡಿದ್ದರೂ ಭಾರತದಾದ್ಯಂತ ರಂಗಯಾತ್ರೆಗಳನ್ನು ಹಾಗೂ ರಂಗ ತರಬೇತಿ ಶಿಬಿರಗಳನ್ನು ನಡೆಸುವುದರ ಮೂಲಕ ತನ್ನ ವ್ಯಾಪ್ತಿಯನ್ನು ಇದು ವಿಸ್ತರಿಸಿಕೊಂಡಿದೆ. ನಟನ ರಂಗಶಾಲೆಯು ತನ್ನ ಚಟುವಟಿಕೆಯ…
ಎಡನೀರು : ದೇರಾಜೆ ಸೀತಾರಾಮಯ್ಯ ಸಂಸ್ಮರಣ ಸಮಿತಿಯ ನೇತೃತ್ವದಲ್ಲಿ ಸಿದ್ಧಗೊಂಡ ‘ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು’ ಎಂಬ ಸಂಸ್ಮರಣಾ ಗ್ರಂಥ ಮತ್ತು ಮರು ಮುದ್ರಣಗೊಂಡ ದೇರಾಜೆ ಅಭಿನಂಧನಾ ಗ್ರಂಥ ‘ರಸಋಷಿ’ ಯ ಲೋಕಾರ್ಪಣೆಯು ದಿನಾಂಕ 14-10-2023ರ ಮಂಗಳವಾರದಂದು ಶ್ರೀ ಮಠದಲ್ಲಿ ಸಂಪನ್ನಗೊಂಡಿತು. ಕಾಸರಗೋಡಿನ ಎಡನೀರು ಮಠದ ಆಶ್ರಯದಲ್ಲಿ ಮತ್ತು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಟಾನದ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಅನುಗ್ರಹ ಸಂದೇಶ ನೀಡುತ್ತಾ “ದೇರಾಜೆ ಸೀತಾರಾಮಯ್ಯನವರು ಓರ್ವ ಅಪರೂಪದ ಕಲಾವಿದ. ಭಾವನಾತ್ಮಕ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಯಾವುದೇ ಪಾತ್ರಕ್ಕೂ ಅರ್ಥ ಮಾತಾಡುವ ಸಾಮರ್ಥ್ಯ ಹೊಂದಿದ್ದ ಶ್ರೇಷ್ಠ ಸಾಹಿತಿ ಮತ್ತು ಕಲಾವಿದ. 1971ರಲ್ಲಿಯೇ ಸಾರ್ವಜನಿಕವಾಗಿ ಅರ್ಥ ಹೇಳುವುದನ್ನು ನಿಲ್ಲಿಸಿದ್ದರೂ ನಮ್ಮ ಮಠದಲ್ಲಿ ಮಾತ್ರ ಕೊನೆವರೆಗೂ ಅರ್ಥ ಹೇಳಿದ್ದಾರೆ. ದೇರಾಜೆಯವರು ಅರ್ಥ ಹೇಳುತ್ತಾ ಇದ್ದಾಗ, ಅವರಿಗೆ ಗಂಟಲು ಕೆರೆತ ಉಂಟಾಗದಂತೆ, ತನ್ನ ಪೂರ್ವಾಶ್ರಮದಲ್ಲಿ ಅವರಿಗೆ ಉಪ್ಪು ತಂದು ಕೊಡುತ್ತಿದ್ದೆ. ಆ ಉಪ್ಪಿನ ಋಣದ…
ಬೆಂಗಳೂರು : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ (ರಿ.) ಮೈಸೂರು ಇದರ ಸಹಯೋಗದೊಂದಿಗೆ ಬೆಂಗಳೂರಿನ ರಮಣಶ್ರೀ ಪ್ರತಿಷ್ಠಾನದ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ರಮಣಶ್ರೀ ಶರಣ ಪ್ರಶಸ್ತಿ’ ಪ್ರದಾನ ಮತ್ತು ಎಸ್. ಷಡಕ್ಷರಿ ಅವರ ‘ಕ್ಷಣ ಹೊತ್ತು ಆಣಿಮುತ್ತು ಭಾಗ 12-13’ ಪುಸ್ತಕಗಳ ಲೋಕಾರ್ಪಣೆಯು ದಿನಾಂಕ 16-11-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡುತ್ತಾ “ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ಬೇಧ-ಭಾವವಿಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಮಾಜದ ಋಣ ನಮ್ಮ ಮೇಲೆ ಇದೆ. ಬಸವಣ್ಣವನರ ವಚನ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಋಣ ತೀರಿಸಬೇಕು. ಪ್ರಸ್ತುತತೆಯಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ. ಸಂವಿಧಾನವಿದ್ದರೆ ನಾವೆಲ್ಲರೂ ಬಸವಣ್ಣನವರ ವಚನ ತತ್ವಾದರ್ಶಗಳ ಕಡೆಗೆ ಹೋಗುತ್ತೇವೆ” ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, “ದಯವೇ ಧರ್ಮದ ಮೂಲವಯ್ಯ ಎಂಬಂತೆ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಂಘ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಾಡಿನ ಹೆಸರಾಂತ ಶಿಕ್ಷಣ ತಜ್ಞ, ಸಾಹಿತ್ಯ ಪ್ರೇಮಿ, ಸಂಗೀತ, ಲಲಿತ ಕಲೆಗಳ ಪೋಷಕರಾಗಿದ್ದ ಡಾ. ಬಿ. ಯಶೋವರ್ಮರವರ ನೆನಪಿಗಾಗಿ ಅವರ ವ್ಯಕ್ತಿತ್ವ, ಸಾಹಿತ್ಯ-ಸಂಸ್ಕೃತಿ ಪರಿಚಾರಿಕೆ ಕುರಿತಾಗಿ ರಾಜ್ಯ ಮಟ್ಟದ ಕವಿಗೋಷ್ಠಿಯೊಂದನ್ನು ದಿನಾಂಕ 05-12-2023ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಸದ್ರಿ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಕವನವು ಕನ್ನಡ/ತುಳು ಭಾಷೆಯಲ್ಲಿರಬಹುದಾಗಿದ್ದು, ವಾಚಿಸಲು 3 ನಿಮಿಷಗಳ ಕಾಲಾವಕಾಶ ಇದೆ. ಈ ಗೋಷ್ಠಿಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಸಾಹಿತ್ಯಾಭಿಮಾನಿಗಳು ಯಾರು ಬೇಕಾದರೂ ಭಾಗವಹಿಸಬಹುದು. ತಾವು ರಚಿಸಿದ ಸ್ವ-ರಚಿತ ಕವನವನ್ನು ದಿನಾಂಕ 22-11-2023ರ ಮೊದಲು ಡಾ. ಎಂ.ಪಿ. ಶ್ರೀನಾಥ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಎಸ್.ಡಿ.ಎಂ. ಕಾಲೇಜು ಉಜಿರೆ-574 240 ಸಂಪರ್ಕ 9448558583 ಅಥವಾ ಡಾ. ಮಾಧವ ಎಂ.ಕೆ., ಮುಖ್ಯಸ್ಥರು, ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು 9481270577 ಇವರಿಗೆ ಕಳುಹಿಸಿಕೊಡಬಹುದು. ಆಯ್ಕೆಯಾದವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗುವುದು.
ಕಿನ್ನಿಗೋಳಿ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಸಂಸ್ಥೆಯ ಆಶ್ರಯದಲ್ಲಿ ದಿನಾಂಕ 14-11-2023 ಮಂಗಳವಾರದಂದು ಕಿನ್ನಿಗೋಳಿಯ ನೇಕಾರ ಸೌಧ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳನ್ನಾಧರಿಸಿದ 19ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ‘ಮಂಜುನಾದ’ ಹಾಗೂ ಸಂಗೀತ ತರಗತಿಯ ಉದ್ಘಾಟನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ “ಇವತ್ತಿನ ವೇಗದ ದಿನಮಾನದಲ್ಲಿ ಸಂಸ್ಕೃತಿ ಸಂಸ್ಕಾರಗಳನ್ನು ನೃತ್ಯ ಸಂಗೀತದಂತಹ ಕಲೆಗಳ ಮೂಲಕ ಮಕ್ಕಳಿಗೆ ತಿಳಿಯಪಡಿಸುವ ಅಗತ್ಯವಿದೆ. ಇಲ್ಲದಿದ್ದರೆ ಯುವ ಸಮಾಜ ಅಪಾಯಕಾರಿ ಸ್ಥಿತಿಯತ್ತ ಸಾಗುವುದನ್ನು ತಡೆಯಲಾಗದು” ಎಂದು ಹೇಳಿದರು. ಸ್ವರಾಂಜಲಿ ಸಹೋದರಿಯರಾದ ಕಿನ್ನಿಗೋಳಿಯ ಶೋಭಿತಾ ಭಟ್ ಮತ್ತು ಆಶ್ವೀಜಾ ಉಡುಪ ಇವರ ಹಾಡುಗಾರಿಕೆಯ ಸಂಗೀತ ಕಛೇರಿ ಪ್ರೇಕ್ಷಕರನ್ನು ರಂಜಿಸಿತು. ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ ಪುತ್ತೂರು, ಮೃದಂಗದಲ್ಲಿ ಪ್ರಣವ್ ಸುಬ್ರಹ್ಮಣ್ಯ ಬೆಂಗಳೂರು ಮತ್ತು ತಂಬೂರದಲ್ಲಿ ಸುಜಾತ ಎಸ್. ಭಟ್ ಸುರತ್ಕಲ್ ಸಹಕರಿಸಿದರು. ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಸ್ವಾಗತಿಸಿ, ಪ್ರಸ್ತಾವನೆ ಗೈದು ‘ಸಂಗೀತ…
ಮಂಗಳೂರು : ಶಾರದಾ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬದ ಅಂಗವಾಗಿ ಹೈಸ್ಕೂಲ್ ಮಟ್ಟದ ಅಂತರ್ ಜಿಲ್ಲಾ Sharada Acadexpo 2k23ನ್ನು ದಿನಾಂಕ 25-11-2023ರಂದು ಬೆಳಗ್ಗೆ 9ರಿಂದ ಶಾರದಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆ, ರಸಪ್ರಶ್ನೆ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಇಪ್ಪತ್ತಕ್ಕೂ ಹೆಚ್ಚು ಸ್ಪರ್ಧೆಗಳು ನಡೆಯಲಿವೆ. ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಸ್ಪರ್ಧೆಗೂ ಆಕರ್ಷಕ ಬಹುಮಾನ ದೊರೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ವಿವರಗಳಿಗಾಗಿ ಅಂತರ್ಜಾಲ ಕೊಂಡಿ www.sharadapuc.org ಮತ್ತು ಇಮೇಲ್ ಐಡಿ [email protected] ನ್ನು ಸಂಪರ್ಕಿಸಬಹುದು. ಪ್ರವೇಶಾತಿಯನ್ನು ಆನ್ಲೈನ್ ಮೂಲಕ ಅಥವಾ ಇಮೇಲ್ ಗೆ ದಿನಾಂಕ 22-11-2023ರೊಳಗೆ ಸಲ್ಲಿಸಬಹುದು.
ಮಂಗಳೂರು : ರಥಬೀದಿಯಲ್ಲಿರುವ ವಿಶ್ವಕರ್ಮ ಯುವ ವೇದಿಕೆ (ರಿ.) ಇದರ 11ನೇ ವರ್ಷದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ‘ಸಾಂಸ್ಕೃತಿಕ ವೈಭವ’ವು ದಿನಾಂಕ 25-11-2023 ಶನಿವಾರ ಸಂಜೆ 6.30ಕ್ಕೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನಿಯಮಿತ ಇದರ ಅಧ್ಯಕ್ಷರಾದ ಡಾ. ಎಸ್.ಆರ್. ಹರೀಶ್ ಆಚಾರ್ಯ, ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್, ನಿವೃತ್ತ ಸೇನಾಧಿಕಾರಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಇವರುಗಳು ಅತಿಥಿಗಳಾಗಿ ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ಎ.ಜಿ. ಸದಾಶಿವ ಆಚಾರ್ಯ ಮತ್ತು ಶ್ರೀ ದಿವಾಕರ ಆಚಾರ್ಯ ಇವರುಗಳನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ನಡೆಯಲಿರುವ ಸಾಂಸ್ಕೃತಿಕ ವೈಭವದಲ್ಲಿ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಶ್ವೇತಾ ಅರೆಹೊಳೆ ನಿರ್ದೇಶನದಲ್ಲಿ ‘ನೃತ್ಯ ವೈಭವ’ ಪ್ರದರ್ಶನಗೊಳ್ಳಲಿದೆ.