Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಯಕ್ಷಗಾನ ಕಲಾವಿದ, ಯಕ್ಷಗುರು ವರ್ಕಾಡಿ ಶ್ರೀ ರವಿ ಅಲೆವೂರಾಯರ ಷಷ್ಠ್ಯಬ್ದಿ ಪ್ರಯುಕ್ತ ‘ಅಭಿನಂದನಾ ಕಾರ್ಯಕ್ರಮ’ವು ದಿನಾಂಕ 11-02-2024ರಂದು ಬೆಳಿಗ್ಗೆ 9 ಗಂಟೆಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಪೊರ್ಕೋಡಿಯ ಶ್ರೀ ಸೋಮನಾಥೇಶ್ವರ ಯಕ್ಷನಿಧಿ ತಂಡದಿಂದ ಯಕ್ಷಗಾನ ಬಯಲಾಟ ‘ಶ್ರೀ ಮಾತೇ ಭದ್ರಕಾಳಿ’, 11ರಿಂದ ಕೊಮೆ ತೆಕ್ಕಟ್ಟೆಯ ಯಶಸ್ವಿ ಕಲಾವೃಂದ ಮಕ್ಕಳ ಮೇಳದಿಂದ ‘ಕೃಷ್ಣಾರ್ಜುನ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 12ರಿಂದ ಕದ್ರಿಯ ಯಕ್ಷ ಮಂಜುಳಾ ಮಹಿಳಾ ಯಕ್ಷಗಾನ ತಾಳಮದ್ದಳೆ ಬಳಗದಿಂದ ‘ಮೋಕ್ಷ ಸಂಗ್ರಾಮ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 1ರಿಂದ ರಥಬೀದಿಯ ನವಭಾರತ ಯಕ್ಷಗಾನ ಅಕಾಡೆಮಿಯಿಂದ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ 2.30ರಿಂದ ಅತಿಥಿ ಕಲಾವಿದರು ಹಾಗೂ ಸರಯೂ ಯಕ್ಷವೃಂದ ಕಲಾವಿದರ ಕೂಡುವಿಕೆಯಿಂದ ರವಿ ಅಲೆವೂರಾಯ ವರ್ಕಾಡಿ ವಿರಚಿತ ‘ಇಳಾರಜತ’ ಯಕ್ಷಗಾನ ಬಯಲಾಟ ನಡೆಯಲಿರುವುದು. ಸಂಜೆ 5.30ರಿಂದ ಅಲೆವೂರಾಯಾಭಿನಂದನಮ್ 60 ಸಭಾ ಕಾರ್ಯಕ್ರಮ ನಡೆಯಲಿದ್ದು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಗಳವರು…
ಮಂಗಳೂರು : ನಾಟ್ಯಾರಾಧನಾ ಕಲಾ ಕೇಂದ್ರ (ರಿ) ಉರ್ವ, ಮಂಗಳೂರು ಇದರ ಸುರತ್ಕಲ್ ಗೋವಿಂದದಾಸ ಕಾಲೇಜು ಶಾಖೆ, ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿ ಪ್ರಸ್ತುತಪಡಿಸುವ ‘ನಾಟ್ಯಾರಾಧನಾ ತ್ರಿಂಶೋತ್ಸವ – 1994-2024’ ಸರಣಿ ನೃತ್ಯ ಕಾರ್ಯಕ್ರಮಗಳು ದಿನಾಂಕ 10-02-2024ರ ಶನಿವಾರ ಸಂಜೆ ಘಂಟೆ 5.00ರಿಂದ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕಲಾ ಮಂದಿರದಲ್ಲಿ ನಡೆಯಲಿದೆ. ಲಲಿತ ಕಲಾ ಸಂಘ, ಗೋವಿಂದದಾಸ ಕಾಲೇಜು, ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಲಿರುವ ಈ ಸರಣಿ ನೃತ್ಯ ಕಾರ್ಯಕ್ರಮದಲ್ಲಿ ನೃತ್ಯಾಮೃತ-1 ‘ಭರತನಾಟ್ಯ ರಸಗ್ರಹಣ’ ಈ ಅವಧಿಯಲ್ಲಿ ಭರತನಾಟ್ಯ ಕಲೆಯ ಅರ್ಥೈಸುವಿಕೆ ಮತ್ತು ಪ್ರೇಕ್ಷಕ ದೃಷ್ಟಿಯೆಂಬ ವಿಷಯದ ಬಗ್ಗೆ ನೃತ್ಯ ಪ್ರಾತ್ಯಕ್ಷಿಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ಕಲಾವಿದರಾಗಿ ಪುತ್ತೂರಿನ ಶ್ರೀ ಮೂಕಾಂಬಿಕ ಕಲ್ಬರಲ್ ಅಕಾಡೆಮಿ ರಿ. ಇದರ ನಿರ್ದೇಶಕರಾದ ವಿದ್ವಾನ್ ದೀಪಕ್ ಕುಮಾರ್ ಪುತ್ತೂರು, ಮಂಗಳೂರಿನ ಗಾನ ನೃತ್ಯ ಅಕಾಡೆಮಿ ಇದರ ನಿರ್ದೇಶಕರಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರ…
ಅಂದು ಮೈಸೂರು ಅರಮನೆಯಲ್ಲಿ ಮಹಾರಾಜಪುರ ವಿಶ್ವನಾಥ ಅಯ್ಯರ್ ಕಛೇರಿ. ಇದಕ್ಕೆ ಚೌಡಯ್ಯ ಅವರದ್ದು ಪಿಟೀಲು ಮತ್ತು ತಂಜಾವೂರು ವೈದ್ಯನಾಥ ಅಯ್ಯರ್ ಮೃದಂಗ ಸಾಥ್ ಇತ್ತು. ಈ ದಿಗ್ಗಜರೊಂದಿಗೆ ವೇದಿಕೆ ಏರಿದ ಹತ್ತರ ಹುಡುಗ ತನ್ನ ಪುಟಾಣಿ ಕೈಗಳಿಂದಲೇ ಮೃದಂಗ ನುಡಿಸಾಣಿಕೆ ಮೂಲಕ ಮೋಡಿ ಮಾಡಿದ. ಮಹಾರಾಜರು ಖುಷಿಯಾಗಿ ಒಂದು ಸಾವಿರ ರೂ. ಬಹುಮಾನ ನೀಡಿದರು. ಇದೇ ಹುಡುಗ ತಾನು ಓದುತ್ತಿದ್ದ ತಿರುವನಂತಪುರದ ಶಾಲೆಯಲ್ಲಿಯೂ ಚಿಥಿರಾ ತಿರುನಾಳ್ ಮಹಾರಾಜರೆದುರು ಮೃದಂಗ ನುಡಿಸಿ ರಾಜರಿಂದ ಚಿನ್ನದ ಪದಕ ಪಡೆದಿದ್ದ. ನುಡಿಸಾಣಿಕೆಯಿಂದಲೇ ಬೆರಗುಗೊಳಿಸುತ್ತಿದ್ದ ಆ ಹುಡುಗನ ಹೆಸರು ತನು ಕೃಷ್ಣ ಮೂರ್ತಿ (ಟಿ.ಕೆ. ಮೂರ್ತಿ). ಅವರೀಗ ಶತಾಯುಷಿ. ಕಳೆದ 90 ವರ್ಷದಿಂದ ನಿರಂತರವಾಗಿ ದೇಶ-ದೇಶದಾಚೆಗೂ ನುಡಿಸಿ ಜನಮಾನಸದಲ್ಲಿ ನೆಲೆಸಿರುವ ಈ ನಾದಸಂತರಿಗೆ ಬೆಂಗಳೂರಿನಲ್ಲಿ ಶಿಷ್ಯವೃಂದದಿಂದ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಚೆನ್ನೈ ನಿವಾಸಿಯಾಗಿರುವ ಟಿ.ಕೆ. ಮೂರ್ತಿಯವರ ಹುಟ್ಟೂರು ತಿರುವನಂತಪುರ. ಅವರ ಕುಟುಂಬದವರೂ ರಾಜರ ಆಸ್ಥಾನಗಳಲ್ಲಿ ಕಲಾವಿದರಾಗಿದ್ದವರು. ಮಗನಿಗೆ ಮೂರು ತುಂಬಿದಾಗಲೇ ಅಮ್ಮ ಅನ್ನಪೂರ್ಣಿ ಮೂರು ರೂಪಾಯಿಗೆ…
ಉಡುಪಿ : ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ 66ನೇ ವಾರ್ಷಿಕೋತ್ಸವವು ಕಂಬ್ಳಕಟ್ಟದ ಶ್ರೀ ಜನಾರ್ದನ ಮಂಟಪದಲ್ಲಿ ದಿನಾಂಕ 03-02-2024ರಂದು ನಡೆಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಜಯಕರ ಶೆಟ್ಟಿ ಅವರಿಗೆ ‘ನಿಡಂಬೂರು ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಉಡುಪಿ ಶಾಸಕ ಶ್ರೀ ಯಶ್ ಪಾಲ್ ಎ. ಸುವರ್ಣ ಪ್ರಶಸ್ತಿ ಪ್ರದಾನಿಸಿ, “ಕರಾವಳಿ ಕರ್ನಾಟಕದ ಅಪೂರ್ವ ಕಲೆ ಯಕ್ಷಗಾನ ಉಳಿಸಿ ಬೆಳೆಸುವಲ್ಲಿ ಅಂಬಲಪಾಡಿ ಸಂಘದ ಕೊಡುಗೆ ಬಹಳ ಮಹತ್ವದ್ದು” ಎಂದರು. ನಿಡಂಬೂರು ಬೀಡು ಅಣ್ಣಾಜಿ ಬಲ್ಲಾಳ ಸ್ಮರಣಾರ್ಥ ಶ್ರೀ ರಾಜರಾಜೇಶ್ವರೀ ದೇವರ ಅನುಗ್ರಹದೊಂದಿಗೆ ಡಾ. ವಿಜಯ ಬಲ್ಲಾಳ ಪ್ರಾಯೋಜಕತ್ವದ ಬೆಳ್ಳಿಯ ಫಲಕ ಹಾಗೂ ತಲಾ 10 ಸಾವಿರ ರೂ. ನಗದು ಸಹಿತ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಬೆಂಗಳೂರಿನ ಶ್ರೀ ಕರ್ನಾಟಕ ಕಲಾದರ್ಶಿನಿ ತಂಡಕ್ಕೆ ನೀಡಲಾಯಿತು. ಕಲಾದರ್ಶಿನಿ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಸಾಸ್ತಾನ ಪ್ರಶಸ್ತಿ ಸ್ವೀಕರಿಸಿದರು. ತಲಾ 8 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡ ‘ಕಿದಿಯೂರು ಜನಾರ್ದನ…
ಧಾರವಾಡ : ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು ನೀಡುವ 2023ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಶ್ರೀಮತಿ ಕಾವ್ಯ ಕಡಮೆಯವರ ‘ತೊಟ್ಟು ಕ್ರಾಂತಿ’ ಕಥಾಸಂಕಲನದ ಹಸ್ತಪ್ರತಿಯು ಆಯ್ಕೆಯಾಗಿದೆ. ಖ್ಯಾತ ಲೇಖಕರಾದ ಡಾ. ನಾ. ದಾಮೋದರ ಶೆಟ್ಟಿ ಮತ್ತು ಡಾ. ಶ್ರೀಧರ ಬಳಗಾರ ಅವರು ತೀರ್ಪುಗಾರರಾಗಿದ್ದ ಇಬ್ಬರ ಸಮಿತಿಯು ಈ ಕಥಾಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸ್ಪರ್ಧೆಗೆ ಬಂದಿದ್ದ ನಲವತ್ತಕ್ಕೂ ಹೆಚ್ಚಿನ ಹಸ್ತಪ್ರತಿಗಳ ಪೈಕಿ ಶ್ರೀ ಲಿಂಗರಾಜ ಸೊಟ್ಟಪ್ಪವರ ಇವರ ‘ಕೆಂಪು ನದಿ’, ಶ್ರೀಮತಿ ಮಧುರಾ ಕರ್ಣಂ ಅವರ ‘ಬೌದ್ಧಾವತಾರ’ ಮತ್ತು ಶ್ರೀಮತಿ ಅಕ್ಷತಾ ರಾಜ್ ಪೆರ್ಲ ಅವರ ‘ನಿನ್ನಿಕಲ್ಲು’ ಕಥಾಸಂಕಲನದ ಹಸ್ತಪ್ರತಿಗಳು ಕೊನೆಯ ಸುತ್ತನ್ನು ಪ್ರವೇಶಿಸಿದ್ದವು. ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ, ಮಹಾಪೋಷಕರಾದ ಡಾ. ಪ್ರಭಾಕರ್ ಎಚ್. ಸಿ, ಸಂಚಾಲಕರಾದ ಶ್ರೀ ವಿಕಾಸ ಹೊಸಮನಿ ಮತ್ತು ವೇದಿಕೆಯ ಸದಸ್ಯರು ಕಥಾ ಪ್ರಶಸ್ತಿ ಸ್ಪರ್ಧೆಯಲ್ಲಿ ವಿಜೇತರಾದ, ಅಂತಿಮ ಸುತ್ತು ಪ್ರವೇಶಿಸಿದ ಮತ್ತು ಭಾಗವಹಿಸಿದ ಕಥೆಗಾರರಿಗೆ…
ಕುಂದಾಪುರ : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 9ನೇ ವಾರ್ಷಿಕೋತ್ಸವ ಹಾಗೂ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024’ ಪ್ರದಾನ ಸಮಾರಂಭವು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ದಿನಾಂಕ 28-01-2024ರಂದು ಜರಗಿತು. ಮಲ್ಟಿಟೆಕ್ ಅಟೋ ಪಾರ್ಟ್ಸ್ ದೊಡ್ಡಬಳ್ಳಾಪುರದ ಆಡಳಿತ ಪಾಲುದಾರ ನಾಗಭೂಷಣ ರಮೇಶ್ ಐತಾಳ್ ಉಪ್ಪಿನಕುದ್ರು ಅವರು ಅಕಾಡೆಮಿ ಕಟ್ಟಡದ ಆವರಣದಲ್ಲಿ ಸೋಲಾರ್ ದಾರಿದೀಪ ಹಾಗೂ ಏಣಿಯನ್ನು ಕೊಡುಗೆಯಾಗಿ ನೀಡಿ ಉದ್ಘಾಟಿಸಿದರು. ಮಾಹೆ ಮಣಿಪಾಲದ ಮಾಜಿ ಡೆಪ್ಯುಟಿ ರಿಜಿಸ್ಟ್ರಾರ್ ಟಿ. ರಂಗ ಪೈ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಯಕ್ಷಗಾನ ಚೆಂಡೆ ಕಲಾವಿದ ಯಳ್ಜಿತ್ ಸದಾನಂದ ಪ್ರಭು ಇವರಿಗೆ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ 2024’ನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಸ್ಮಾರಕ ಆಸ್ಪತ್ರೆ ಉಡುಪಿಯ ವೈದ್ಯಕೀಯ ಸಲಹೆಗಾರರಾದ ಡಾ. ಬಿ.ವಿ. ಬಾಳಿಗಾ, ಮನೋರೋಗ ತಜ್ಞ ಡಾ. ಪಿ.ವಿ. ಭಂಡಾರಿ, ಲೆಕ್ಕ ಪರಿಶೋಧಕ ಶಿವಾನಂದ ಪೈ ಮಂಗಳೂರು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಮದ್ದಲೆ…
ಮಂಗಳೂರು : ಸ್ವರಾನಂದ ಪ್ರತಿಷ್ಠಾನದ ‘ಹಿಂದೂಸ್ಥಾನಿ ಸಂಗೀತ ಬೈಠಕ್’ ಮಂಗಳೂರಿನ ಕಾರ್ ಸ್ಟ್ರೀಟ್ ಇಲ್ಲಿರುವ ಬಿ.ಇ.ಎಂ. ಹೈಸ್ಕೂಲಿನಲ್ಲಿ ದಿನಾಂಕ 27-01-2024ರಂದು ನಡೆಯಿತು. ಮಂಗಳೂರಿನ ಯುವಗಾಯಕ ಕೀರ್ತನ್ ನಾಯ್ಗ ಬಿಹಾಗ್ ಹಂಸಧ್ವನಿ ರಾಗಗಳ ಮೂಲಕ ಸಂಗೀತ ರಸಿಕರ ಪ್ರಶಂಸೆಗೆ ಪಾತ್ರರಾದರು. ಮಂಗಳೂರಿನ ಅಮಿತ್ ಕುಮಾರ್ ಬೇಂಗ್ರೆ ಅವರ ಶಿಷ್ಯರು. ಅವರಿಗೆ ಹಾರ್ಮೋನಿಯಂನಲ್ಲಿ ಪುತ್ತೂರಿನ ಕಿಶನ್ ಪ್ರಭು ಹಾಗೂ ತಬಲಾದಲ್ಲಿ ಬಾಯಾರಿನ ಆಶಯ್ ಕಲಾವಂತ್ಕರ್ ಸಾಥ್ ನೀಡಿದರು. ತಂಬೂರದಲ್ಲಿ ಸುಶಾನ್ ಸಾಲಿಯಾನ್ ಸಹಕರಿಸಿದರು. ಬಳಿಕ ಪುಣೆಯ ಪಂಡಿತ್ ವಿಜಯ ಕೋಪಾರ್ಕರ್ ಶಿಷ್ಯರಾದ ಮಂದಾರ್ ಗಾದ್ಗಿಲ್ ಅವರ ಗಾಯನ ಕಾರ್ಯಕ್ರಮ ನಡೆಯಿತು. ರಾಗ್ ಶ್ರೀ, ದುರ್ಗಾ, ಮಾಲ್ ಕಂಸ್, ಚಂದ್ರ ಕಂಸ್ ಹಾಗೂ ಭೈರವಿಗಳ ಬಂಧಿಶ್ಗಳನ್ನು ಸುಶ್ರಾವ್ಯವಾಗಿ ಹಾಡಿದರು. ದೀಪಕ್ ನಾಯಕ್ ಹರಿಕಂಡಿಗೆ ಹಾಗೂ ಶಶಿಕಿರಣ್ ಮಣಿಪಾಲ್ ತಬಲಾ ಹಾಗೂ ಹಾರ್ಮೋನಿಯಂನಲ್ಲಿ ಸಹಕರಿಸಿದರು. ತಂಬೂರದಲ್ಲಿ ನರಸಿಂಹ್ ಪೈ ಸಾಥ್ ನೀಡಿದರು.
ಉಳ್ಳಾಲ : ‘ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನವು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ದಿನಾಂಕ 01-02-2024ರಂದು ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮಾತನಾಡುತ್ತಾ “ಪ್ರಸಕ್ತ ದಿನಗಳಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ-ಲೇಖಕಿಯರು ಸಾಹಿತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿಗಳಾದ ಬೊಳುವಾರು ಮುಹಮ್ಮದ್ ಕುಂಞಿ, ಫಕೀರ್ ಮುಹಮ್ಮದ್ ಕಟ್ಪಾಡಿ ಕನ್ನಡ ಸಾರಸ್ವತ ಲೋಕದಲ್ಲಿ ನಿರೀಕ್ಷೆಗೂ ಮೀರಿ ಸಾಧಿಸಿದ್ದಾರೆ. ಆದರೆ ಆ ಮಟ್ಟಕ್ಕೆ ಇತರ ಬ್ಯಾರಿ ಲೇಖಕ-ಲೇಖಕಿಯರು ಇನ್ನೂ ಯಾಕೆ ಬೆಳೆದಿಲ್ಲ. ಬಶೀರ್ ಅಹ್ಮದ್ ಕಿನ್ಯಾ ಸಾತ್ವಿಕ ಕವಿ. ಸಂವೇದನಾಶೀಲ ಬರಹಗಾರ. ಆದರೆ ಪ್ರೋತ್ಸಾಹದ ಕೊರತೆಯಿಂದ ಅವರ ಸಹಿತ ಹಲವಾರು ಬ್ಯಾರಿ ಬರಹಗಾರರು ಹಿಂದೆ ಬಿದ್ದಿದ್ದಾರೆ. ಅಂತಹವರನ್ನು ಪ್ರೋತ್ಸಾಹಿಸುವ ಜವಾಬ್ದಾರಿ ನಮ್ಮದಾಗಿದೆ” ಎಂದು…
ಮೂಡುಬಿದಿರೆ: ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ. 2019ರಿಂದ 2023ರ ಅವಧಿಯಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿಗಳನ್ನು ಪ್ರಕಾಶಕರು ಅಥವಾ ಲೇಖಕರು ಕಳುಹಿಸಬಹುದು. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂಪಾಯಿ10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಆಸಕ್ತರು ಗ್ರಂಥಗಳ ಮೂರು ಪ್ರತಿಗಳನ್ನು 07-03-2024ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227 ಈ ವಿಳಾಸಕ್ಕೆ ಕಳುಹಿಸಬಹುದು.
ಸುಬ್ರಹ್ಮಣ್ಯ : ಉಡುಪಿ ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ಸಹಯೋಗದಲ್ಲಿ ನಮ ತುಳುವೆರ್ ಸಂಘಟನೆಯ ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ಸುವರ್ಣ ಕರ್ನಾಟಕ ರಂಗ ಅಭಿಯಾನ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮವು ಸುಬ್ರಹ್ಮಣ್ಯದ ಶ್ರೀ ವನದುರ್ಗಾದೇವಿ ಸಭಾಭವನದಲ್ಲಿ ದಿನಾಂಕ 27-01-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಸುಬ್ರಹ್ಮಣ್ಯ ಮಠದ ದಿವಾನ ಸುದರ್ಶನ ಜೋಯಿಸ ಮಾತನಾಡಿ “ನಾಟಕಗಳು ನಮ್ಮ ಕಲೆಯನ್ನು ಯುವ ಪೀಳಿಗೆಗೆ ತಿಳಿಸುವ ಮಾಧ್ಯಮವಾಗಿದೆ. ಆಧುನಿಕ ಜನತೆ ನಮ್ಮ ಕಲಾ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುವುದು ಅತ್ಯವಶ್ಯಕ. ಭಾರತೀಯ ಕಲಾ ಪ್ರಕಾರಗಳು ಮನಸ್ಸಿಗೆ ಮುದ ನೀಡುವ ಶ್ರೇಷ್ಠ ಕಾರ್ಯವನ್ನು ಮಾಡುತ್ತದೆ. ಅಲ್ಲದೆ, ಬದುಕಿನಲ್ಲಿ ಶಾಂತಿ ನೆಮ್ಮದಿ ಪ್ರಗತಿಯಾಗಲು ನಮ್ಮ ಕಲೆಗಳ ಪಾತ್ರ ಅನನ್ಯವಾಗಿದೆ. ಸುಂದರ ಮನಸ್ಸುಗಳ ನಿರ್ಮಾಣದಲ್ಲಿ ನಾಟಕದ ಪಾತ್ರ ಅಮೋಘ. ನಾಟಕಗಳು ನಮ್ಮ ಪಾರಂಪರಿಕ ಕಲೆಗಳನ್ನು ಎತ್ತಿ ಹಿಡಿಯುತ್ತದೆ” ಎಂದು ಹೇಳಿದರು. ಕಲಾವಿದ ಕೆ. ಯಜ್ಞೇಶ್ ಆಚಾರ್, ನಿವೃತ್ತ ಮುಖ್ಯ ಗುರು ಶ್ರೀಕೃಷ್ಣ…