Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರು ಉಡುಪಿ ತಾಲೂಕು ಘಟಕದ ಮೂಲಕ ಸಂಯೋಜಿಸಿರುವ ‘ಜಿಲ್ಲಾ ಮಟ್ಟದ ಗಮಕ ಸಮ್ಮೇಳನ’ವು ದಿನಾಂಕ 23-03-2024ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣ ವೇದಿಕೆಯಲ್ಲಿ ನಡೆಯಲಿದೆ. ಈ ಗಮಕ ಸಮ್ಮೇಳನವನ್ನು ಬೆಳಿಗ್ಗೆ 9-00 ಗಂಟೆಗೆ ಉಡುಪಿ ಗಮಕಿ ಶ್ರೀಮತಿ ಯಾಮಿನಿ ಭಟ್ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಉಡುಪಿ ಪುತ್ತಿಗೆ ಶ್ರೀಕೃಷ್ಣ ಮಠ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದಂಗಳವರು ಉದ್ಘಾಟನೆ ಮಾಡಲಿದ್ದಾರೆ. ಪೂರ್ವಾಹ್ನ 10.30ಕ್ಕೆ ಗಮಕ ವಾಚನ ವ್ಯಾಖ್ಯಾನ ‘ಸಾವಿತ್ರಿ ಚರಿತ್ರೆ’ ಕಾರ್ಕಳ ಹಿರಿಯಂಗಡಿಯ ಎಸ್.ಎನ್.ವಿ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಆಶ್ರಿತಾ ವಾಚನ ಹಾಗೂ ಮಣಿಪಾಲ ಮಾಧವ ಕೃಪಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಂಹಿತಾ ವ್ಯಾಖ್ಯಾನ ನೀಡಲಿದ್ದಾರೆ. ಗಮಕ ವಾಚನ ವ್ಯಾಖ್ಯಾನ ‘ಪದ್ಮವ್ಯೂಹದಲ್ಲಿ ಅಭಿಮನ್ಯು’ ಇನ್ನಂಜೆ ಶ್ರೀ…
ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನದಿಂದ 2023ರ ಸಾಲಿನ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭ | 14 ಮಾರ್ಚ್
ಬೆಂಗಳೂರು : ಬೆಂಗಳೂರಿನ ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ (ರಿ) ಕೊಡಮಾಡುವ 2023ರ ಸಾಲಿನ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 14-03-2024 ರಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಶಿಕ್ಷಣದತ್ತಿ ಸಭಾಂಗಣದಲ್ಲಿ ನಡೆಯಲಿದೆ. ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಬಿ.ಎಂ. ಹನೀಫ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ವಿಮರ್ಶಕರಾದ ಶ್ರೀ ಎಸ್.ಆರ್. ವಿಜಯಶಂಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿಯಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, 2023ರ ‘ಭರತ ಕಲ’ ಕಾದಂಬರಿ ರಚನೆಗಾಗಿ ಡಾ. ಆರ್. ಸುನಂದಮ್ಮ ಇವರಿಗೆ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸ್ಪರ್ಧೆಯ ತೀರ್ಪುಗಾರರರಾದ ಖ್ಯಾತ ಕಾದಂಬರಿಕಾರ ಶ್ರೀ ಕಾ.ತ. ಚಿಕ್ಕಣ ತೀರ್ಪಿನ ಬಗ್ಗೆ ಮಾತನಾದಲಿದ್ದು, ಹಿರಿಯ ಕಾದಂಬರಿಕಾರರಾದ ಶ್ರೀ ದ್ವಾರನಕುಂಟೆ ಪಾತಣ್ಣ ಉಪಸ್ಥಿತರಿರುವರು. ಪ್ರೊ.ಆರ್.ಸುನಂದಮ್ಮ : 22-08-1960 ರಲ್ಲಿ ಕೋಲಾರ ಜಿಲ್ಲೆಯ ವೆಂಕಟಾಪುರ ಗ್ರಾಮದಲ್ಲಿ ರಾಮಯ್ಯ ಹಾಗೂ…
ಕೋಟ : ಸಾಲಿಗ್ರಾಮದ ಗೆಂಡೆಕೆರೆಯಲ್ಲಿ ಪಿ.ವಿ. ಆನಂದ ಸಾಲಿಗ್ರಾಮರವರಿಗೆ ಅವರ 50ನೇ ಯಕ್ಷಗಾನ ಪ್ರಸಂಗವಾದ ‘ಆವರ್ಸೆ ಶ್ರೀ ಶಂಕರ ನಾರಾಯಣ ಮಹಾತ್ಮೆ’ ಪ್ರಸಂಗದ 50ನೆಯ ಪ್ರಯೋಗದ ಸಂದರ್ಭದಲ್ಲಿ ಹುಟ್ಟೂರ ಸನ್ಮಾನವು ದಿನಾಂಕ 03-03-2024ರಂದು ನಡೆಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಮಾತನಾಡಿ “ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿದ ಪಿ.ವಿ. ಆನಂದ ಸಾಲಿಗ್ರಾಮ ಅವರು ಕವಿ, ಸಮೀಕ್ಷಕ, ನಿರೂಪಕ, ಯಕ್ಷಗಾನ ಪ್ರಸಂಗಕರ್ತ, ಕಲಾವಿದ, ರಾಜ್ಯ ಮಟ್ಟದಲ್ಲಿ ಶಿಕ್ಷಕರಿಗೆ ತರಬೇತಿ ನೀಡುವ ಶಿಕ್ಷಕ, ಸಾಹಿತ್ಯ ಪರಿಷತ್ತಿನ ಸಂಘಟಕ, ನಾಟಕಕಾರ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಪ್ರಬುದ್ಧತೆಯನ್ನು ಗಳಿಸಿಕೊಂಡ ಅನನ್ಯ ಪ್ರತಿಭೆ. ಐವತ್ತಮೂರು ಯಕ್ಷಗಾನ ಪ್ರಸಂಗಗಳನ್ನು ಕಿರಿಯ ವಯಸ್ಸಿನಲ್ಲಿ ರಚಿಸಿದ ಸಾಧನೆ ಬೆರಗು ಮೂಡಿಸುವಂತದ್ದು, ಅವರ ಸಾಧನೆ ಸಾಲಿಗ್ರಾಮಕ್ಕೆ ದೊಡ್ಡ ಹೆಮ್ಮೆ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪುರಸಭೆಯ ಮಾಜಿ ಉಪಾಧ್ಯಕ್ಷರಾದ ಶ್ರೀನಿವಾಸ ಐತಾಳ ವಹಿಸಿದ್ದರು. ಆವರ್ಸೆ ಶ್ರೀ ಶಂಕರ ನಾರಾಯಣ ದೇವಳದ ಮೊಕ್ತೇಸರ…
ಬೆಂಗಳೂರು : ರಂಗಮಂಡಲ ಸಿವಗಂಗ ಟ್ರಸ್ಟ್ ವತಿಯಿಂದ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರವನ್ನು ದಿನಾಂಕ 07-04-2024ರಿಂದ 12-05-2024ರವರೆಗೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1-00ರವರೆಗೆ ‘ಸಿವಗಂಗ ರಂಗಮಂದಿರ’ದಲ್ಲಿ ಆಯೋಜಿಸಿದೆ. ಶಿಬಿರದಲ್ಲಿ ನಟನೆ, ನೃತ್ಯ, ಸಂಗೀತ, ಚಿತ್ರಕಲೆ, ಮ್ಯಾಜಿಕ್, ಬೊ೦ಬೆಯಾಟ ಕಥಾಪ್ರಸ್ತುತಿ, ಮೂಕಾಭಿನಯ, ಮಕ್ಕಳ ಕವಿತಾವಾಚನ ಕ್ಲೇ-ಮಾಡೆಲಿಂಗ್, ಒರಿಗಾಮಿ, ಗಾಳಿಪಟ, ಯೋಗ-ಧ್ಯಾನ ನಿರೂಪಣಾ ಕಲಿಕೆ ಹಾಗೂ ಮೂಡಲಪಾಯ ಯಕ್ಷಗಾನ, ನಾಟಕ ಕಲಿಕೆ ಮತ್ತು ಪ್ರದರ್ಶನವಿದೆ. ರಂಗನಿರ್ದೇಶಕರು ಹಾಗೂ ಕಲಾವಿದರುಗಳಾದ ನಿರ್ಮಲ ನಾದನ್, ಪ್ರಶಾಂತ ಸಿದ್ಧಿ, ಅರಳಗುಪ್ಪೆ ಪುಟ್ಟಸ್ವಾಮಿ, ವಿಶ್ವನಾಥ ಗುಂಡೀಗೆರೆ, ಮಧು ಆರ್ಯ, ಜಲಜ ಕುಂದಾಪುರ ಇನ್ನಿತರ ರಂಗಭೂಮಿ, ಸಾಹಿತ್ಯ, ಸಿನಿಮಾ, ಸಾಂಸ್ಕೃತಿಕ ವಲಯದ ಸಾಧಕರು ತರಗತಿಗಳನ್ನು ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448970731, 8197958129 ಇವರನ್ನು ಸಂಪರ್ಕಿಸಿರಿ.
ಹಟ್ಟಿಕುದ್ರು : ದಿಮ್ಸಾಲ್, ಧಮನಿ ಉಭಯ ಸಂಸ್ಥೆಯ ಸಹಯೋಗದೊಂದಿಗೆ ಯಶಸ್ವೀ ಕಲಾವೃಂದದ ‘ಶ್ವೇತಯಾನ’ದ ಐದನೆಯ ಕಾರ್ಯಕ್ರಮದ ಅಂಗವಾಗಿ ‘ಗಾನವೈಭವ’ ಕಾರ್ಯಕ್ರಮವು ದಿನಾಂಕ 05-03-2024ರಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ ನಡೆದ ಏಕದಶೋತ್ತರ ಶತಾಧಿಕ ಸಹಸ್ರ ನಾರೀಕೇಳ ಮಹಾಗಣಪತಿ ಯಾಗದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಯಗಿ ಭಾಗವಹಿಸಿದ ಶ್ರೀಪಾದ ಉಳ್ಳೂರ ಹಟ್ಟಿಕುದ್ರು ಮಾತನಾಡಿ “ಸಂಸ್ಥೆಯ ಪ್ರೌಢಾವಸ್ಥೆಯ ಕಾಲವನ್ನು ಸಂಭ್ರಮಿಸಬೇಕಾದವರು ಕಲಾಸಕ್ತರು. ಕಲಾ ಪ್ರೋತ್ಸಾಹಕರ ನೆರಳಲ್ಲಿ ಬೆಳೆಯಬೇಕಾದ ಸಂಸ್ಥೆ 25 ಸಂವತ್ಸರಗಳನ್ನು ದಾಟಿ ಆಯೋಜಿಸಿಕೊಂಡ ಕಾರ್ಯಕ್ರಮಗಳಿಗೆ ಕಲಾ ಪೋಷಕರು ಕೈಗೆತ್ತಿಕೊಂಡು ನಡೆಸಬೇಕಾದುದು ಜವಾಬ್ದಾರಿ. ಕಲಾಪೋಷಕರು ಯಶಸ್ವಿಯ ಸಾಧನೆಯನ್ನು ಮನಗಂಡು ಯಾನವನ್ನು ಪೂರ್ಣಗೊಳಿಸುತ್ತಾರೆ.” ಎಂದು ಹೇಳಿದರು. ಉಪನ್ಯಾಸಕ ರಾಘವೇಂದ್ರ ತುಂಗ, ದುಂಡಿರಾಜ್, ಲಂಬೋದರ ಹೆಗಡೆ, ವೆಂಕಟೇಶ ವೈದ್ಯ, ಅಕ್ಷಯ್ ಆಚಾರ್, ನಿನಾದ ಪುರಪ್ಪನಮನೆ, ಚಂದ್ರಯ್ಯ ಆಚಾರ್, ಪೂಜಾ ಆಚಾರ್, ಕಿಶನ್ ಕುಂದಾಪುರ ಉಪಸ್ಥಿತರಿದ್ದರು.
ಕಟೀಲು: ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜನಪದ ವಿಚಾರ, ಕಲೆ ಮತ್ತು ಸಂಸ್ಕೃತಿಯ ಮೆಲುಕು ಜನಪದ ನುಡಿತೋರಣ’ ಕಾರ್ಯಕ್ರಮವು ದಿನಾಂಕ 01-03-2024 ರಂದು ಕನ್ನಡ ಸಾಹಿತ್ಯ ಸಂಘದ ವತಿಯಿಂದ ನಡೆಯಿತು. ಕಟೀಲು ದೇವಳದ ಆನುವಂಶಿಕ ಮುಕ್ತೇಸರರಾದ ಸನತ್ ಕುಮಾರ್ ಕೊಡೆತ್ತೂರು ಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು.ಜಾನಪದ ವಿದ್ವಾಂಸರಾದ ಸಾಹಿತಿ ಮುದ್ದು ಮೂಡುಬೆಳ್ಳೆ ಜನಪದ ಮತ್ತು ಜಾನಪದ ನಡುವಿನ ವ್ಯತ್ಯಾಸವನ್ನು ತಿಳಿಸಿ ಜನಪದ ವಿಚಾರ ಕಲೆ ಸಂಸ್ಕೃತಿಯ ಬಗೆಗೆ ಸವಿವರವಾದ ಮಾಹಿತಿ ನೀಡಿದರು. ಬಿಪಿನ್ ಚಂದ್ರ ಶೆಟ್ಟಿ, ಪ್ರವೀಣ್ ಭಂಡಾರಿ, ವಿದ್ಯಾರ್ಥಿ ನಾಯಕ ಕೆ. ದೀಪಕ್, ಎಲ್. ಕೃಷ್ಣರಾಜ್ ಐತಾಳ್, ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಬಿ. ನಿಶಾ, ಕನ್ನಡ ಸಾಹಿತ್ಯ ಸಂಘದ ಪ್ರತಿನಿಧಿಗಳಾದ ತ್ರಿಷಾ ಶೆಟ್ಟಿ, ವಿಶಾಖ ಮತ್ತು ವೈಶಾಖ್ ಉಪಸ್ಥಿತರಿದ್ದರು. ವೈಷ್ಣವಿ, ನಾಗರಾಜ್, ವೈಶಾಖ್ ಸಂವಾದದಲ್ಲಿ ಭಾಗಿಯಾದರು. ವಿದ್ಯಾರ್ಥಿನಿ ಬಿಂದ್ಯಾ ಅವರ ಸ್ವರಚಿತ ಕಥೆಯನ್ನು ಹೇಮಲತಾ ವಾಚಿಸಿದರು. ವಿದ್ಯಾರ್ಥಿಗಳಾದ ಲಕ್ಷ್ಮೀಪತಿ ಮತ್ತು ಮೋಹಿತ್ ಪ್ರಾರ್ಥಿಸಿ, ರಂಜನಾ…
ನವದೆಹಲಿ : ಕೇಂದ್ರ ಸಾಹಿತ್ಯ ನೀಡುವ ಅಕಾಡೆಮಿಯು ಭಾಷಾಂತರ ಪ್ರಶಸ್ತಿಗೆ ಕನ್ನಡ ವಿಭಾಗದಲ್ಲಿ ಲೇಖಕ ಕೆ.ಕೆ. ಗಂಗಾಧರನ್ ಅವರ ‘ಮಲಯಾಳಂ ಕಥೆಗಳು’ ಕೃತಿ ಆಯ್ಕೆಯಾಗಿದೆ. ಮಲಯಾಳಂ ಭಾಷೆಯ ಗಂಗಾಧರನ್ ವಿವಿಧ ಲೇಖಕರ ಸಣ್ಣ ಕತೆಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಈ ಕೃತಿ ರಚಿಸಿದ್ದಾರೆ. ಇದೂ ಸೇರಿದಂತೆ ಅಕಾಡೆಮಿಯು ವಿವಿಧ ಭಾಷೆಗಳ 24 ಕೃತಿಗಳಿಗೆ ‘ಭಾಷಾಂತರ ಪ್ರಶಸ್ತಿ’ಯನ್ನು ದಿನಾಂಕ 11-03-2024ರ ಸೋಮವಾರದಂದು ಪ್ರಕಟಿಸಿದೆ. ಲೇಖಕಿ ಸುಧಾಮೂರ್ತಿ ಅವರ ‘ಮಕ್ಕಳಿಗಾಗಿ ನನ್ನ ನೆಚ್ಚಿನ ಕತೆಗಳು’ ಕೃತಿಯನ್ನು ಲೇಖಕಿ ನಾಗರತ್ನ ಹೆಗಡೆ ಸಂಸ್ಕೃತಕ್ಕೆ ಭಾಷಾಂತರಿಸಿದ್ದು, ‘ರುಚಿರಾಹ್ ಬಾಲಕಥಾ’ ಕೃತಿಗೆ ಸಂಸ್ಕೃತದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಸಾಹಿತಿ ಕೋಟ ಶಿವರಾಮ ಕಾರಂತ ಅವರ ‘ಚೋಮನದುಡಿ’ ಕೃತಿಯನ್ನು ಕಾಶ್ಮೀರಿ ಭಾಷೆಗೆ ಗುಲ್ಜಾರ್ ಅಹ್ಮದ್ ರಥೇರ್ ಅವರು ‘ಚೂಮ್ ಸುಂಡ್ ಡೋಲ್’ ಹೆಸರಿನಲ್ಲಿ ಭಾಷಾಂತರಿಸಿದ್ದು, ಈ ಕೃತಿಗೆ ಕಾಶ್ಮೀರಿ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ಒಟ್ಟು ರೂಪಾಯಿ 50 ಸಾವಿರ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ…
ಕೋಲ್ಕತ್ತಾ : ಕೋಲ್ಕತ್ತಾದ ಭಾರತೀಯ ಭಾಷಾ ಪರಿಷತ್ತಿನ ಯುವ ಪುರಸ್ಕಾರಕ್ಕೆ ಕವಿ ಆರಿಫ್ ರಾಜಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ಸ್ಮರಣಿಕೆ ಹಾಗೂ ರೂಪಾಯಿ 51 ಸಾವಿರ ನಗದು ಬಹುಮಾನ ಒಳಗೊಂಡಿದೆ. ದಿನಾಂಕ 20-04-2024ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷೆ ಕುಸುಮ್ ಖೇಮಾಣಿ ತಿಳಿಸಿದ್ದಾರೆ. ಸೈತಾನನ ಪ್ರವಾದಿ, ಜಂಗಮ ಫಕೀರನ ಜೋಳಿಗೆ, ಬೆಂಕಿಗೆ ತೊಡಿಸಿದ ಬಟ್ಟೆ, ನಕ್ಷತ್ರ ಮೋಹ, ಎದೆ ಹಾಲಿನ ಪಾಳಿ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಇಳಕಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಆರಿಫ್ ಅವರ ಹಲವು ಕವಿತೆಗಳು ಇಂಗ್ಲಿಷ್, ಸ್ಪ್ಯಾನಿಷ್, ಪರ್ಷಿಯನ್, ಗ್ರೀಕ್, ಅಲ್ಬೇನಿಯನ್, ಟರ್ಕಿಷ್ ಸೇರಿ ದೇಶದ ತಮಿಳು, ತೆಲುಗು, ಮಲಯಾಳಂ, ಹಿಂದಿ ಅಲ್ಲದೇ ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಅವರ ಕವಿತೆಗಳು ದಾವಣಗೆರೆ, ಮಂಗಳೂರು, ಶಿವಮೊಗ್ಗ, ಮೈಸೂರು, ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಸೇರಿ ಕರ್ನಾಟಕ ಪಿ. ಯು. ಮಂಡಳಿಯ ಪ್ರಥಮ ಪಿಯುಸಿಗೆ ಪಠ್ಯವಾಗಿವೆ. ಇವರ ಸಾಹಿತ್ಯ ಸಾಧನೆಗೆ ಬೇಂದ್ರೆ ಪುಸ್ತಕ…
ಕೋಟ : ದಿಮ್ಸಾಲ್ ಹಾಗೂ ಧಮನಿ ಉಭಯ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಇದರ ಸರಣಿ ಕಾರ್ಯಕ್ರಮ ‘ಸಿನ್ಸ್ 1999 ಶ್ವೇತಯಾನ’ದ ಅಂಗವಾಗಿ ಚಿಣ್ಣರ ತಾಳಮದ್ದಳೆ ‘ಕೃಷ್ಣಾರ್ಜುನರ ಕಾಳಗ’ವು ದಿನಾಂಕ 09-03-2024 ರಂದು ಕೋಟದ ಕಾವೇರಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಯೋಜಕರಾದ ಕೋಟದ ಕಾವೇರಿ ಕಾಂಪ್ಲೆಕ್ಸ್ ಇದರ ಮಾಲಕರಾದ ಸಂತೋಷ್ ಇವರನ್ನು ಅಭಿನಂದಿಸಿ ಮಾತನಾಡಿದ ಲಂಬೋದರ ಹೆಗಡೆ ನಿಟ್ಟೂರು “ಮಕ್ಕಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಂಸ್ಕೃತಿಯನ್ನು ವೃದ್ಧಿಸುತ್ತವೆ. ಮಹಾಭಾರತ ರಾಮಾಯಣದಲ್ಲಿನ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ಬಾಲ್ಯವು ಪ್ರಮುಖ ಪಾತ್ರವಹಿಸುತ್ತದೆ. ಬಾಲ್ಯದಲ್ಲಿ ಸಾಂಸ್ಕೃತಿಕ ಶಿಕ್ಷಣ ಮೊದಲಾಗಬೇಕು. ಆಗಲೇ ಸಂಸ್ಕೃತಿ ಜೀವನದುದ್ದಕ್ಕೂ ಬೆಳೆಯುತ್ತದೆ ಮತ್ತು ಉಳಿಯುತ್ತದೆ. ಇಂತಹ ಮಕ್ಕಳನ್ನು ಪ್ರಭಾವೀಗೊಳಿಸುವ ಸಂಸ್ಥೆಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರೆ ಮಕ್ಕಳ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ಸಂತೋಷ್ ಅಭಿನಂದನಾರ್ಹರು.” ಎಂದು ಹೇಳಿದರು. ಯಕ್ಷ ಗುರು ಕೃಷ್ಣಮೂರ್ತಿ ಉರಾಳ, ಶ್ವೇತಯಾನದ ಉಪಾಧ್ಯಕ್ಷರಾದ ಗಣಪತಿ ಟಿ. ಶ್ರೀಯಾನ್, ಕೊಮೆ ಶನೇಶ್ವರ ದೇಗುಲದ…
ಉಡುಪಿ : ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸ ದಿವಂಗತ ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಗಮಕ ವ್ಯಾಖ್ಯಾನಕಾರ, ಯಕ್ಷಗಾನ ಪ್ರಸಂಗಕರ್ತ ಹಾಗೂ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರನ್ನು ಡಾ. ನಾ. ದಾಮೋದರ ಶೆಟ್ಟಿ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಹತ್ತುಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾರ್ಚ್ ತಿಂಗಳ ಕೊನೆಯಲ್ಲಿ ನಡೆಯಲಿರುವುದು ಎಂದು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರು ಸ್ಟೇಟ್ಬ್ಯಾಂಕ್ ಆಫ್ ಮೈಸೂರಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸಿಬ್ಬಂದಿ ತರಬೇತಿ ಕಾಲೇಜಿನ ಪ್ರಾಧ್ಯಾಪಕರಾಗಿ ಸ್ವಯಂ ನಿವೃತ್ತಿ ಪಡೆದು ಭಾಷೆ, ವ್ಯಾಕರಣ, ಛಂದಃಶಾಸ್ತ್ರಗಳಲ್ಲಿ ವಿದ್ವತ್ತನ್ನು ಗಳಿಸಿ, ಗಮಕ ವ್ಯಾಖ್ಯಾನಕಾರರಾಗಿ ನಾಡಿನಾದ್ಯಂತ ಪ್ರಸಿದ್ಧರಾಗಿದ್ದಾರೆ. ಮಹಾಕಾವ್ಯಗಳ ಕವಿಯಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ವಾಗ್ಮಿಗಳಾಗಿ ಹೆಸರು…