Author: roovari

ಮಂಗಲ್ಪಾಡಿ : ಕರ್ನಾಟಕ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕ ಮತ್ತು ಕಲಾಕುಂಚ ಕೇರಳ ಗಡಿನಾಡ ಘಟಕದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 28-01-2024ರಂದು ‘ಮಹಾಕವಿ ನಮನ’ ಸಮಾರಂಭವು ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದಲ್ಲಿ ನಡೆಯಿತು. “ಕುಮಾರವ್ಯಾಸನೆಂದರೆ ಜನಸಾಮಾನ್ಯರಿಗೂ ಮಹಾಕಾವ್ಯವನ್ನು ಸುಲಭವಾಗಿ ಮನದಟ್ಟು ಮಾಡಿಕೊಟ್ಟ ಮಹಾಕವಿ” ಎಂದು ಕರ್ನಾಟಕ ಕಾಲೇಜು ಇಲಾಖೆಯ ನಿವೃತ್ತ ನಿರ್ದೇಶಕ ಶ್ರೀ ಗಿರಿಧರ ಮಾಣಿಹಿತ್ತಿಲು ಅವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ನುಡಿದರು. ಹಿರಿಯ ಸಾಹಿತಿ ಶಿಕ್ಷಣತಜ್ಞ ವಿ.ಬಿ.ಕುಳಮರ್ವ ಅವರು ಕವಿಪುಂಗವನಿಗೆ ನುಡಿಕುಸುಮಗಳನ್ನರ್ಪಿಸಿ ನಮಿಸಿ ಮಾತನಾಡುತ್ತಾ “ಜನಸಾಮಾನ್ಯರಿಗೆ ಪ್ರವೇಶಿಸಲು ಅಸಾಧ್ಯವಾದ ಸಂಸ್ಕೃತ ಭಾಷೆಯ ವ್ಯಾಸ ಮಹಾಕವಿಯ ಮಹಾಭಾರತವೆಂಬ ಗಹನ ಗಹ್ವರವಾದ ಗೊಂಡಾರಣ್ಯ ಸಮಾನವಾದ ಮಹಾಕಾವ್ಯವನ್ನು ನಗುವ ನಂದನವನವನ್ನಾಗಿಸಿ ಸುಲಭವಾಗಿ ಪ್ರವೇಶಿಸಲು ಅನುವು ಮಾಡಿಕೊಟ್ಟ ಕುಮಾರವ್ಯಾಸ ನಿಜವಾಗಿಯೂ ಮಹಾಕವಿ ರತ್ನ. ಆತ ಅಪ್ಪಟ ಭಕ್ತಕವಿ. ಕೃಷ್ಣಪರಮಾತ್ಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಒಳಗೊಂಡಿರುವ ಆತನ ಮಹಾಕಾವ್ಯವೇ ಕರ್ಣಾಟ ಭಾರತ ಕಥಾಮಂಜರಿ ಅಥವಾ ಗದುಗು ಭಾರತ. ಕನ್ನಡ ಸಾಹಿತ್ಯದಲ್ಲಿ ಭಾಮಿನಿ ಷಟ್ಪದಿಯಲ್ಲಿ…

Read More

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಬೆಂಗಳೂರಿನ ಬಾಲ ಪ್ರತಿಭೆ ಕುಮಾರಿ ನಿಹಾರಿಕ ಹೆಚ್.ಎನ್. ಇವರನ್ನು ‘ಕರ್ನಾಟಕ ಸುವರ್ಣ ಸಿರಿ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ನವೀನ್ ಹೆಚ್.ಎಂ. ಮತ್ತು ಶ್ರೀಮತಿ ದೀಪಾ ಕೆ.ಹೆಚ್. ಇವರ ಸುಪುತ್ರಿಯಾಗಿರುವ ನಿಹಾರಿಕ ಹೆಚ್.ಎನ್. ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಚಿತ್ರಕಲೆ, ಭರತನಾಟ್ಯ, ಸಂಗೀತ, ಕೀಬೋರ್ಡ್ ಮುಂತಾದ ಲಲಿತ ಕಲೆಗಳ ಎಲ್ಲಾ ಪ್ರಕಾರಗಳಲ್ಲಿ ಸಾಧನೆ ಮಾಡುತ್ತಿರುವುದನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಸೇರಿದಂತೆ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕಾಸರಗೋಡು : ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ 27ನೇ ವಾರ್ಷಿಕೋತ್ಸವವು ದಿನಾಂಕ 21-01-2024ರಂದು ಕಾಸರಗೋಡಿನ ಬೀರಂತಬೈಲಿನಲ್ಲಿರುವ ಲಲಿತ ಕಲಾಸದನದಲ್ಲಿ ಜರಗಿತು. ಈ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು “ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯುವಲ್ಲಿ ಇಲ್ಲಿನ ವಿವಿಧ ಕಲಾಪ್ರಾಕಾರಗಳು ಕಾರಣವಾಗಿವೆ. ಈ ನಿಟ್ಟಿನಲ್ಲಿ ಸಂಗೀತ ಕಲಾಸೇವೆಯ ಮೂಲಕ ದೇಶಕ್ಕೆ ಅನನ್ಯ ಕೊಡುಗೆಯನ್ನು ನೀಡಿದ ಈ ಸಂಸ್ಥೆಯು ಇನ್ನಷ್ಟು ಬೆಳಗಲಿ” ಎಂದು ನುಡಿದರು. ಹಿರಿಯ ಸಂಗೀತ ಗುರುಗಳಾದ ಕಲ್ಮಾಡಿ ಸದಾಶಿವ ಆಚಾರ್ಯ ಮಾತನಾಡುತ್ತಾ “ತಾನು ಕಲಿತ ವಿದ್ಯೆಯನ್ನು ತನ್ನ ಶಿಷ್ಯರಿಗೆ ನೀಡುವ ಮೂಲಕ ಗುರು ಋಣವನ್ನು ಉಷಾ ಈಶ್ವರ ಭಟ್ ಅವರು ತೀರಿಸುತ್ತಿದ್ದಾರೆ. ಶಿಷ್ಯಂದಿರಿಗೆ ವಿದ್ಯೆಯನ್ನು ನೀಡುವಲ್ಲಿಯೂ ಆನಂದವಿದೆ. ಗುರುಗಳನ್ನು ಮೀರಿಸುವ ಶಿಷ್ಯಂದಿರು ರೂಪುಗೊಂಡಾಗ ಲಭಿಸುವ ಸಂತೋಷ ಬೇರೆಲ್ಲೂ ಸಿಗದು. ಅಂತಹ ಶಿಷ್ಯಂದಿರನ್ನು ಇವರು ಹೊಂದಿದ್ದಾರೆ” ಎಂದರು. ಹಿರಿಯ ನ್ಯಾಯವಾದಿ ಎಂ. ನಾರಾಯಣ ಭಟ್ ಮಾತನಾಡಿ “27 ವರ್ಷಗಳಿಂದ ಕಾಸರಗೋಡಿನಲ್ಲಿ ಕಲಾಸೇವೆಯನ್ನು ನೀಡುತ್ತಾ…

Read More

ಮಹಾರಾಷ್ಟ್ರ : ಅಖಿಲ ಭಾರತ ತುಳು ಒಕ್ಕೂಟ ವತಿಯಿಂದ ದೀರ್ಘಕಾಲದಿಂದ ಉದ್ಯಮದೊಂದಿಗೆ ತುಳುಭಾಷೆ ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ತುಳುನಾಡ ಸಂಘ ಸ್ಥಾಪಿಸಿ ತುಳು ಸಾಂಸ್ಕೃತಿಕ ಭವನದ ರೂವಾರಿಯಲ್ಲಿ ಒಬ್ಬರಾದ ಶ್ರೀನಿವಾಸ ಮಂಕುಡೆ ಅವರಿಗೆ ‘ಪೆರ್ಮೆದ ತುಳುವೆ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಹಾರಾಷ್ಟ್ರದ ಮೀರಜ್‌ನಲ್ಲಿ ದಿನಾಂಕ 22-01-2024ರಂದು ನಡೆಯಿತು. ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅವರು ಈ ಸಂದರ್ಭದಲ್ಲಿ ಮಾತನಾಡಿ “ಬಹಳ ವರ್ಷಗಳಿಂದ ಹೊರರಾಜ್ಯದಲ್ಲಿ ತುಳು ಭಾಷೆಗಾಗಿ ಶ್ಲಾಘನೀಯ ಕೆಲಸ ಮಾಡಿ, ತುಳುವರ ಅಭಿಮಾನ, ಪ್ರೀತಿಗೆ ಪಾತ್ರರಾದ ಮಂಕುಡೆಯವರಿಗೆ ಈ ಗೌರವ ಸಲ್ಲಲೇಬೇಕಿತ್ತು” ಎಂದರು. ಪ್ರಧಾನ ಕಾರ್ಯದರ್ಶಿ ಮೂಲ್ಕಿ ಕರುಣಾಕರ ಶೆಟ್ಟಿ ಮಾತನಾಡಿ, “ಶ್ರೀನಿವಾಸ ಮಂಕುಡೆ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಮಹಾರಾಷ್ಟ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೇಷ್ಠ ಕನ್ನಡಿಗ, ಕರ್ನಾಟಕ ದೇವಾಡಿಗ ಸಂಘದಿಂದ ಸಂಘಟನೆಗೊಬ್ಬ ಸರದಾರ ಹಾಗೂ ಮುಂಬೈ, ಸಂಘಟನೆಯಿಂದ ವರ್ಷದ ವ್ಯಕ್ತಿ ಮತ್ತಿತರ ಗೌರವ ಪ್ರಶಸ್ತಿ ಪಡೆದಿದ್ದಾರೆ” ಎಂದರು. ಸಮ್ಮಾನ ಸ್ವೀಕರಿಸಿದ ಮಂಕುಡೆ ಅವರು “ಪ್ರಾಮಾಣಿಕ ಸೇವೆಯನ್ನು…

Read More

ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಬನ್ನೂರು ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ 12 ಕಾರ್ಯಕ್ರಮವು ದ.ಕ.ಜಿ.ಹಿ.ಪ್ರಾ. ಶಾಲೆ ಚಿಕ್ಕಮುಡ್ನೂರಲ್ಲಿ ದಿನಾಂಕ 27-01-2024ರಂದು ನಡೆಯಿತು. ಸಭಾ ಕಾರ್ಯಕ್ರಮವನ್ನು ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸ್ಮಿತಾ ಎನ್. ಉದ್ಘಾಟಿಸಿ “ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚು ಇರುವುದರಿಂದ ಇಂದು ಪ್ರತಿಭಾ ಕಾರಂಜಿಯಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ದೊರೆಯುತ್ತಿದೆ. ಅಲ್ಲದೇ ಸಾಹಿತ್ಯ ಪರಿಷತ್ತಿನ ಈ ಗ್ರಾಮ ಸಾಹಿತ್ಯ ಸಂಭ್ರಮ ಅದಕ್ಕೆ ಪೂರಕವಾಗಿದೆ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬನ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಜಯ ಎ. ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ನಳಿನಿ ಕೆ. ಸಂದರ್ಭೋಚಿತವಾಗಿ ಮಾತನಾಡಿದರು. ಸರ್ವಾಧ್ಯಕ್ಷತೆ ವಹಿಸಿದ ಮಾ.…

Read More

ಕಾಸರಗೋಡು : ಹಿರಿಯ ಸಾಹಿತಿ, ಸಂಘಟಕ ಪ್ರೊ. ಪಿ.ಎನ್. ಮೂಡಿತ್ತಾಯ ಮತ್ತು ಶಕುಂತಲಾ ದಂಪತಿಯನ್ನು ಬೆಂಗಳೂರಿನ ಶಂಪಾ ಪ್ರತಿಷ್ಠಾನದ ವತಿಯಿಂದ ಬಾಯಿಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಸಭಾಂಗಣದಲ್ಲಿ ದಿನಾಂಕ 26-01-2024ರಂದು ಸನ್ಮಾನಿಸಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ವಸಂತ ಕುಮಾರ್ ಪೆರ್ಲ ಅಭಿನಂದನ ಭಾಷಣವನ್ನು ಮಾಡಿದರು. ಹಿರಿಯ ರಂಗಕರ್ಮಿ ಕಾಸರಗೋಡು ಚಿನ್ನಾ ಶುಭ ಹಾರೈಸಿದರು. ಶಂಪಾ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಎಸ್.ಎಲ್. ಮಂಜುನಾಥ್ ಪ್ರಮಾಣ ಪತ್ರವನ್ನು ವಾಚಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ಶಂಪಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಪ್ರಮೀಳ ಮಾಧವ ಸ್ವಾಗತಿಸಿ, ಡಾ. ರಾಧಾಕೃಷ್ಣ ಬೆಳ್ಳೂರು ವಂದಿಸಿದರು. ಇದೇ ಸಂದರ್ಭದಲ್ಲಿ ಗುರುಗಳಾದ ಪ್ರೊ. ಪಿ.ಎನ್. ಮೂಡಿತ್ತಾಯಾರ ಬಗ್ಗೆ ಡಾ. ಪ್ರಮೀಳ ಮಾಧವ ಬರೆದ ‘ಸದ್ದಿಲ್ಲದ ಸಾಧಕ’ ಎಂಬ ಪುಸ್ತಕವನ್ನು ನಿವೃತ್ತ…

Read More

ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಹಿರಿಯ ಮಾರ್ಗದರ್ಶಕರು, ಯುವ ಕಾರ್ಯಕರ್ತರು, ಕನ್ನಡ ಪರ ಸಂಘಟಕರು, ಪತ್ರಕರ್ತರ ಸ್ನೇಹ ಸೇತುವೆಯಾಗಿ ‘ಕನ್ನಡ ಮೈತ್ರಿ ಸಂಗಮ’ ಕಾರ್ಯಕ್ರಮವು ಕಾಸರಗೋಡಿನ ಉಡುಪಿ ಗಾರ್ಡನ್ ಸಭಾಂಗಣ ‘ಮಥುರಾ’ದಲ್ಲಿ ದಿನಾಂಕ 30-01-2024ರಂದು ನಡೆಯಿತು. ಕೇಂದ್ರ ಸಾಹಿತ್ಯ ಪರಿಷತ್ತಿನ ಸಲಹಾ ಸಮಿತಿ ಸದಸ್ಯ ಡಾ. ಮುರಲೀ ಮೋಹನ ಚೂಂತಾರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಎನ್. ಮೋಹನದಾಸ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಕ.ಸಾ.ಪ. ಗಡಿನಾಡ ಘಟಕದ ಪೂರ್ವಾಧ್ಯಕ್ಷ ನ್ಯಾಯವಾದಿ ಐ.ವಿ. ಭಟ್, ಭಾರತ ಸರಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಜಿ. ಕುಂದಣಗಾರ ಗಡಿನಾಡ ಪ್ರಶಸ್ತಿ ಪುರಸ್ಕೃತ ಡಾ. ರಮಾನಂದ ಬನಾರಿ ಅವರನ್ನುಅಭಿನಂದಿಸಲಾಯಿತು. ಪತ್ರಕರ್ತ ಎಂ.ನಾ. ಚಂಬಲ್ತಿಮಾರ್, ಉಪನ್ಯಾಸಕ ರತ್ನಾಕರ ಮಲ್ಲಮೂಲೆ, ಅಧ್ಯಾಪಕ…

Read More

ಮಂಗಳೂರು : ಶ್ರೀ ನಾಟ್ಯಂಜಲಿ ಕಲಾ ಅಕಾಡೆಮಿ ಸುರತ್ಕಲ್ ಸಂಸ್ಥೆಯ ‘ನೃತ್ಯೋತ್ಸವ 2023-24’ ಕಾರ್ಯಕ್ರಮವು ಖಂಡಿಗೆ ಚೇಳ್ಳಾರು ನಾಟ್ಯಾಂಜಲಿ ಕಲಾ ಮಂದಿರದಲ್ಲಿ ದಿನಾಂಕ 28-01-2024ರಂದು ಜರಗಿತು. ಹಿರಿಯ ನೃತ್ಯ ಗುರು ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೋಹನಕುಮಾ‌ರ್ ಚಾಲನೆ ನೀಡಿದರು. ಉದ್ಯಮಿ ಕೆ. ಶ್ರೀಪತಿ ಭಟ್, ಖ್ಯಾತ ಉದ್ಯಮಿಗಳಾದ ಕೆ. ಪಾಂಡುರಂಗ ಪ್ರಭು, ಸಂಗೀತ ನೃತ್ಯ ನಿರ್ದೇಶಕರಾದ ವಿದುಷಿ ರಾಧಿಕಾ ಎಸ್. ಕಾರಂತ್ ಬೆಂಗಳೂರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದುಬೈಯ ಖ್ಯಾತ ಉದ್ಯಮಿಗಳಾದ ಪುತ್ತಿಗೆ ವಾಸುದೇವ ಭಟ್ ಮತ್ತು ವಾಣಿ ವಾಸುದೇವ ಭಟ್ ಇವರನ್ನು ಸಮ್ಮಾನಿಸಲಾಯಿತು. 2023ರಲ್ಲಿ ಭರತನಾಟ್ಯ ಪರೀಕ್ಷೆಗಳ ಜೂನಿಯರ್, ಸೀನಿಯರ್ ಹಾಗೂ ವಿದ್ವತ್ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ಅಕ್ಷತಾ ಶೆಟ್ಟಿ ಹಾಗೂ ರಾಜಶ್ರೀ ಶ್ರೀಕಾಂತ್ ನಿರೂಪಿಸಿದರು. ಸಂಸ್ಥೆಯ ನಿರ್ದೇಶಕರಾದ ಕರ್ನಾಟಕ ಕಲಾ ವಿದ್ವಾನ್ ಕೆ. ಚಂದ್ರಶೇಖರ ನಾವಡ ಸ್ವಾಗತಿಸಿ, ವಂದಿಸಿದರು. ಬಳಿಕ ಸಂಸ್ಥೆಯ ಕಿರಿಯ ಹಾಗೂ ಹಿರಿಯ ಕಲಾವಿದರಿಂದ ‘ಭರತನಾಟ್ಯ’ ಕಾರ್ಯಕ್ರಮ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಜಿಲ್ಲೆಯ ಹಿರಿಯ ಸಾಹಿತಿಗಳು ಪತ್ರಕರ್ತರು ಶಕ್ತಿ ದಿನ ಪತ್ರಿಕೆಯ ಸಂಸ್ಥಾಪಕರು ಆಗಿದ್ದ ಬಿ.ಎಸ್. ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅವರ ಪುತ್ರ ಬಿ.ಜಿ. ಅನಂತಶಯನ ಈ ದತ್ತಿ ಸ್ಥಾಪಿಸಿದ್ದು, ಕೊಡಗು ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಕಥೆಯನ್ನು ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ರಚಿಸತಕ್ಕದ್ದು. ತೀರ್ಪುಗಾರರ ಮೂಲಕ ಪ್ರಥಮ, ದ್ವಿತೀಯ ಮತ್ತು ತೃತೀಯ ಬರಹಗಳನ್ನು ಆರಿಸಿ ಬಹುಮಾನ ನೀಡಲಾಗುವುದು. ಕಥೆ ಬರೆದು ಸಲ್ಲಿಸಲು ದಿನಾಂಕ 15-02-2024 ಕೊನೆಯ ದಿನವಾಗಿದ್ದು ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ನ್ನಡ ಸಾಹಿತ್ಯ ಪರಿಷತ್, ಬಾಳೆಲೆ ಹೋಬಳಿ ಘಟಕ, ಅಂಚೆ ಪೆಟ್ಟಿಗೆ ಸಂಖ್ಯೆ 63, ಬಾಳೆಲೆ, ಪೊನ್ನಂಪೇಟೆ ತಾಲೂಕು, ಕೊಡಗು ಜಿಲ್ಲೆ 571219. ಸಂಪರ್ಕಿಸಲು ದೂರವಾಣಿ ಸಂಖ್ಯೆ:…

Read More

ಉರ್ವಸ್ಟೋರ್ : ಅವಿನಾಶ್ ಫೋಕ್ ಡಾನ್ಸ್ ಮಂಗಳೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಉರ್ವಸ್ಟೋರ್‌ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ವಿವಿಧ ವಿನೋದಾವಳಿ ಸ್ಪರ್ಧೆ ಕರ್ಣಾಟಕದ ಜಾನಪದ ಕಲೆ, ಸಾಂಸ್ಕೃತಿಕ ಜೀವನಾಧಾರಿತ ‘ಕರುನಾಡ ವೈಭವ 2024’ ದಿನಾಂಕ 26-01-2024ರಂದು ನಡೆಯಿತು. ಈ ಕಾರ್ಯಕಾಮವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿ ಮಾತನಾಡಿ “ಕರುನಾಡ ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕ ಚಟುವಟಿಕೆಗಳು ದೇಶದಲ್ಲೇ ಅದ್ವಿತೀಯ ಸ್ವರೂಪದ್ದಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಪ್ರಕಾರದ ಕಲಾ ಚಟುವಟಿಕೆಗಳು ಪ್ರಚಲಿತದಲ್ಲಿವೆ. ಯಕ್ಷಗಾನ ಸಹಿತ ಕರಾವಳಿ ಭಾಗದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಿತ್ಯ ನಿರಂತರವಾಗಿ ಸಮಾಜದ ಹಾಸುಹೊಕ್ಕಾಗಿದೆ. ಇದನ್ನು ಮುಂದಿನ ಪೀಳಿಗೆಗೆ ಕಾಪಿಡುವ ಮಹತ್ವದ ಕಾರ್ಯ ನಡೆಯಬೇಕು” ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿದರು. ‘ಅವಿನಾಶ್ ಫೋಕ್ ಡಾನ್ಸ್’ ಮಂಗಳೂರು ಇದರ ಅಧ್ಯಕ್ಷ ಅವಿನಾಶ್‌ ಪ್ರಸ್ತಾವಿಸಿದರು. ಮುಖ್ಯ ಅತಿಥಿಗಾಳಾಗಿ ಹಿರಿಯ ರಂಗಭೂಮಿ ನಟ ಹಾಗೂ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲಬೈಲು, ಸುಧಾಕರ…

Read More