Subscribe to Updates
Get the latest creative news from FooBar about art, design and business.
Author: roovari
ಮೈಸೂರು: ಕರ್ನಾಟಕ ರಂಗಭೂಮಿಗೆ ಅಪಾರ ಕೊಡುಗೆ ನೀಡಿರುವ ಗುರು ಶ್ರೀ ಕೆ.ವಿ ಸುಬ್ಬಣ್ಣನವರ ನೆನಪಿನಲ್ಲಿ, ತಿಂಗಳಿಡೀ ನಟನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಇದೇ 08-07-2023 ಮತ್ತು 09-07-2023ರಂದು ಸಂಜೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಶಾಂಭವಿ ಸ್ಕೂಲ್ ಆಫ್ ಡ್ಯಾನ್ಸ್ ಬೆಂಗಳೂರು ಸಹಯೋಗದಲ್ಲಿ ‘ಮೂಲಂ 2023’ (ದಿ ರೂಟ್ಸ್) ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ನೃತ್ಯೋತ್ಸವವನ್ನು ಆಯೋಜಿಸಲಾಗಿದೆ. 08-07-2023ರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿನ್ನೆಲೆ ಗಾಯಕಿ, ಸಂಗೀತ ಸಂಯೋಜಕಿ ಮತು ಕವಯಿತ್ರಿ ಶ್ರೀಮತಿ ಹೆಚ್ ಆರ್ ಲೀಲಾವತಿ ಹಾಗೂ ರಂಗಕರ್ಮಿ ಶ್ರೀ ಮಂಡ್ಯ ರಮೇಶ್ ಭಾಗವಹಿಸಲಿರುವರು. ಕಾರ್ಯಕ್ರಮದ ಎರಡೂ ದಿನ ನೃತ್ಯ, ಸಂಗೀತ ಮತ್ತು ರಂಗಭೂಮಿಗಳಲ್ಲಿ ಗುರು-ಶಿಷ್ಯರ ನಡುವಿನ ಅನುಬಂಧ, ಪರಂಪರೆ ಮತ್ತು ತಲೆಮಾರುಗಳ ನಡುವಿನ ವ್ಯತ್ಯಾಸ, ಬೆಳವಣಿಗೆ ಮತ್ತು ಪ್ರಸ್ತುತಿ ಇವುಗಳ ಕುರಿತಾಗಿ ಅವಲೋಕಿಸಲು ವಿಚಾರ ಸಂಕಿರಣದ ಜೊತೆಗೆ ಪ್ರಾತ್ಯಕ್ಷಿಕೆ ನಡೆಯಲಿದೆ. ದಿನಾಂಕ 08-07-2023ರಂದು ಮುಂಬೈನವರಾದ ಶ್ರೀಮತಿ ದಿವ್ಯ ವಾರಿಯರ್, ಶ್ರೀಮತಿ ನಮ್ರತಾ…
ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘ ನೀಡುವ 2023ನೇ ಸಾಲಿನ ಟಿ.ಎಸ್. ಆರ್. ಪ್ರಶಸ್ತಿ ಪುರಸ್ಕೃತರಾದ ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ. ಆಕಾಶವಾಣಿಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್. ರಾವ್ ಅವರು ತಮ್ಮ ಹೆಸರಿನ ದತ್ತಿನಿಧಿಯನ್ನು ಕರ್ನಾಟಕ ಲೇಖಕಿಯರ ಸಂಘದಲ್ಲಿ ಸ್ಥಾಪಿಸಿದ್ದು, ಈ ವರ್ಷದಿಂದ ಇದು ಪ್ರಾರಂಭವಾಗಿದ್ದು ಚೊಚ್ಚಲ ಪ್ರಶಸ್ತಿಗೆ ಆರ್. ಪೂರ್ಣಿಮಾ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಮಾರಂಭವು ದಿನಾಂಕ : 08-07-2023ರಂದು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಜರುಗಲಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ. ಕಮಲಾ ಹಂಪನಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಾಗಮಣಿ ಎಸ್. ರಾವ್ ಕನ್ನಡ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯವಾಗಿ ಕೆಲಸ ಮಾಡಿರುವ ಪತ್ರಕರ್ತೆಯೊಬ್ಬರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಬೇಕು ಮತ್ತು ಅವರು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರಬೇಕು ಎಂಬುದು ಅವರ ಆಶಯವಾಗಿತ್ತು. ಈ ಆಶಯದಂತೆ ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 40 ವರ್ಷಗಳಿಗೂ ಅಧಿಕ ಕಾಲ…
ಮಂಗಳೂರು : ಭರತಾಂಜಲಿ ಕೊಟ್ಟಾರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದಿನಾಂಕ :08-07-2023ರಂದು ನಗರದ ಪುರಭವನದಲ್ಲಿ ಸಂಜೆ 5ಕ್ಕೆ ‘ನೃತ್ಯಾಮೃತಮ್’ ಸಮೂಹ ನೃತ್ಯ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ನಾಟ್ಯಾಚಾರ್ಯ ಗುರು ಉಳ್ಳಾಲ ಮೋಹನ ಕುಮಾರ್ ಇವರು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಗೌರವ ಅತಿಥಿಯಾಗಿ ಕರ್ನಾಟಕ ಸರಕಾರದ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹಾಗೂ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ರಾಜೇಶ್ ಜಿ., ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಧರ್ಮೇಂದ್ರ ಗಣೇಶಪುರ, ನಾಟ್ಯಾಲಯದ ಗುರು ವಿದುಷಿ ಕಮಲಾ ಭಟ್ ಪಾಲ್ಗೊಳಲಿದ್ದಾರೆ. ಹಿಮ್ಮೇಳದಲ್ಲಿ ನೃತ್ಯ ನಿರ್ದೇಶನ ಹಾಗೂ ನಟವಾಂಗದಲ್ಲಿ ಗುರು ವಿದುಷಿ ಪ್ರತಿಮಾ ಶ್ರೀಧರ್, ಹಾಡುಗಾರಿಕೆಯಲ್ಲಿ ವಿದುಷಿ ವಂದನಾ ರಾಣಿ, ಮೃದಂಗಂನಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್, ವಯಲಿನ್ನಲ್ಲಿ ವಿದ್ವಾನ್ ಶ್ರೀಧರ ಆಚಾರ್ಯ ಭಾಗವಹಿಸಲಿರುವರು. ಭರತಾಂಜಲಿಯ ವಿದ್ವಾನ್ ಶ್ರೀಧರ ಹೊಳ್ಳ ಹಾಗೂ ವಿದುಷಿ ಪ್ರತಿಮಾ ಶ್ರೀಧರ್ ಈ…
ಬೆಳ್ತಂಗಡಿ : ನಾಡಿನ ಹಿರಿಯ ಸಾಹಿತಿ, ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನಾ ಸಮಾರಂಭ ದಿನಾಂಕ : 08-07-2023ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ. 1953ರಲ್ಲಿ ಪುತ್ತೂರಿನ ಪೋಳ್ಯದಲ್ಲಿ ಜನಿಸಿದ ರಾಮಕೃಷ್ಣ ಶಾಸ್ತ್ರಿ ಎಳವೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನೆಲೆಸಿದ್ದು, ತನ್ನ 11ನೇ ವಯಸ್ಸಿನಲ್ಲಿ ಬರವಣಿಗೆ ಆರಂಭಿಸಿದ್ದರು. 7ನೇ ತರಗತಿವರೆಗೆ ಮಾತ್ರ ಶಾಲಾ ವಿದ್ಯಾಭ್ಯಾಸ ಮಾಡಿದ್ದರೂ ಶಾಲೆ, ಪದವಿ ತರಗತಿಗೆ ಪಠ್ಯವಾಗುವಷ್ಟು ಸಮಗ್ರ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ತೆಂಕಕಾರಂದೂರು ನಿವಾಸಿ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಈ ಜುಲೈಗೆ 70ನೇ ವರ್ಷದ ಹುಟ್ಟುಹಬ್ಬ. ತನ್ನ ಹನ್ನೊಂದನೇ ವರ್ಷದಿಂದ ಬರವಣಿಗೆ ಕ್ಷೇತ್ರದಲ್ಲಿ ತೊಡಗಿಕೊಂಡ ಇವರು ಈವರೆಗೆ ಬರೆದ 12,000ಕ್ಕಿಂತ ಹೆಚ್ಚು ಲೇಖನಗಳು ರಾಜ್ಯದ ಎಲ್ಲ ಕನ್ನಡ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 105 ಪುಸ್ತಕಗಳು ಪ್ರಕಟಗೊಂಡಿವೆ. ಮಕ್ಕಳ…
ಶಿರ್ವ : ದಿನಾಂಕ 28-06-2023ರಂದು ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಜರುಗಿದ ನಂದಳಿಕೆ ಚಾವಡಿ ಅರಮನೆ ಸರಳ ಎಸ್. ಹೆಗ್ಡೆಯವರು ಬರೆದ ‘ಸತ್ಯಮಾಲೋಕಂದ ಸಿರಿ’ ಎಂಬ ಪುಸ್ತಕವನ್ನು ವಿಜಯಾ ಬ್ಯಾಂಕ್ನ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಲೋಕಾರ್ಪಣೆಗೊಳಿಸಿ, ಮಾತನಾಡುತ್ತಾ “ಸಿರಿಗಳ ಪಾಡ್ದನವು ಕಥೆಯ ರಚನೆಗೆ ಸಹಕಾರಿಯಾಗಿದೆ. ನಂದಳಿಕೆ ಸಿರಿ ಜಾತ್ರೆಗೆ ಪ್ರಸಿದ್ಧವಾಗಿರುವ ಸ್ಥಳ. ಇಲ್ಲಿಯ ಸಿರಿಗಳ ಕಥೆಗಳನ್ನು ಪುಸ್ತಕ ರೂಪದಲ್ಲಿ ಬರೆದಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಜನಾಂಗಕ್ಕೆ ಸ್ಥಳದ ಮಹತ್ವ ಹಾಗೂ ಇತಿಹಾಸ ಗುರುತಿಸಲು ಇದರಿಂದ ಸಾಧ್ಯವಾಗುತ್ತದೆ” ಎಂದು ಹೇಳಿದರು. ಮುಖ್ಯ ಆತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್, ಎಸ್.ಆರ್. ಮಾತನಾಡಿ, “ಸತ್ಯಮಾಲೋಕಂದ ಸಿರಿ ಪುಸ್ತಕದಲ್ಲಿ ಶ್ರೀಮಂತ ತುಳುನಾಡ ಸಂಸ್ಕೃತಿಯನ್ನು ತೆರೆದಿಡಲಾಗಿದೆ. ಕುಂದಾಪುರದಿಂದ ಹಿಡಿದು ಉಜಿರೆಯವರೆಗಿನ ಶ್ರೀಮಂತ ತುಳುನಾಡು ಸಿರಿಗಳ ಆರಾಧನೆಯ ಕಥೆಗಳು ಯುವ ಜನಾಂಗಕ್ಕೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗಿದೆ. ಇಡೀ ತುಳುನಾಡಿನಲ್ಲಿ ಸುಮಾರು 75 ಕಡೆಗಳಲ್ಲಿ ಸಿರಿ ಆರಾಧನೆ…
ಕಾಸರಗೋಡು : ದಿನಾಂಕ : 25-06-2023ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಸಿರಿಬಾಗಿಲಿನಲ್ಲಿ ಯಕ್ಷಗಾನ ಭಾಗವತಿಕೆಯ ಅಭ್ಯಾಸಿಗಳಿಗಾಗಿ ಒಂದು ದಿನದ ವಿಶೇಷ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿತ್ತು. ಈ ಅಧ್ಯಯನ ಶಿಬಿರವನ್ನು ತೆಂಕುತಿಟ್ಟು ಹಿಮ್ಮೇಳದ ಗುರು, ಖ್ಯಾತ ಕಲಾವಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ “ಸಿರಿಬಾಗಿಲು ಪ್ರತಿಷ್ಠಾನವು ಯಕ್ಷಗಾನ ಕ್ಷೇತ್ರದಲ್ಲಿ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ. ಪ್ರತಿಷ್ಠಾನದ ಧ್ಯೇಯೋದ್ದೇಶಗಳು ಕಲೆಯ ವಿಸ್ತರಣೆ ಹಾಗೂ ಪೋಷಣೆಯ ದೃಷ್ಟಿಯಿಂದ ತುಂಬಾ ಪೂರಕವಾಗಿವೆ. ಇಂತಹ ಕಾರ್ಯದಲ್ಲಿ ಪ್ರತಿಷ್ಠಾನವು ಐತಿಹಾಸಿಕ ಸಾಧನೆಗೈಯುತ್ತಿದೆ” ಎಂದು ಹೇಳಿದರು. ಈ ಶಿಬಿರದ ಆಶಯ ಮತ್ತು ಉದ್ದೇಶಗಳ ಕುರಿತು ಅರ್ಥಧಾರಿ ಹಾಗೂ ಲೇಖಕ ರಾಧಾಕೃಷ್ಣ ಕಲ್ಚಾರ್ ವಿವರಿಸಿದರು. ಶಿಬಿರಾರ್ಥಿಗಳಿಗಾಗಿ ಕಂಠಸ್ವರವನ್ನು ಸಶಕ್ತಗೊಳಿಸುವ ಹಾಗೂ ವೃದ್ಧಿಸಿಕೊಳ್ಳುವ ವಿಧಾನದ ಬಗ್ಗೆ ಖ್ಯಾತ ಯೋಗ ಶಿಕ್ಷಕ ಪುಂಡರಿಕಾಕ್ಷ ಕಂಠಸ್ವರದ ರಕ್ಷಣೆಗಾಗಿ ಯೋಗ, ಪ್ರಾಣಾಯಾಮಗಳ ಅಭ್ಯಾಸವನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ಬಳಿಕ ಚೌಕಿ ಹಾಗೂ ರಂಗದಲ್ಲಿ ಭಾಗವತನ ಕರ್ತವ್ಯಗಳ ಕುರಿತು ಖ್ಯಾತ ಕಲಾವಿದ ಸುಬ್ರಾಯ ಹೊಳ್ಳ…
ಯಕ್ಷಗಾನವು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ರತ್ನವಾಗಿ ಉಳಿದಿದೆ, ಸಾಂಪ್ರದಾಯಿಕವಾಗಿ ಈ ಪ್ರದರ್ಶನ ಕಲಾ ಪ್ರಕಾರವನ್ನು ಪುರುಷ ಕಲಾವಿದರು ಮಾತ್ರ ಅಭ್ಯಾಸ ಮಾಡುತ್ತಾರೆ ಎಂದು ತಿಳಿದಿದೆ. ಆದಾಗ್ಯೂ, ಇದು ಇನ್ನು ಮುಂದೆ ಒಂದೇ ಆಗಿಲ್ಲ. ಹೆಚ್ಚಿನ ಸಂಖ್ಯೆಯ ಮಹಿಳಾ ಕಲಾವಿದರು ಅದರಲ್ಲಿ ತಮ್ಮ ಅಸ್ತಿತ್ವವನ್ನು ಸ್ಥಾಪಿಸುತ್ತಿದ್ದಾರೆ ಮತ್ತು ಅವರು ಪ್ರಾಮುಖ್ಯತೆಯನ್ನು ಕಂಡುಕೊಳ್ಳುತ್ತಿದ್ದಾರೆ ಹೀಗೆ ಯಕ್ಷಗಾನ ರಂಗದಲ್ಲಿ ತಮ್ಮದೇಯಾದ ಛಾಪು ಹಾಗೂ ಪ್ರಸಿದ್ಧಿಯನ್ನು ಪಡೆದ ಕಲಾವಿದೆ ಶ್ರೀಮತಿ ಮಯೂರಿ ಉಪಾಧ್ಯಾಯ. 05.07.1965 ರಂದು ರಘುರಾಮ ಭಟ್ ಕೆರೆ ಹಾಗೂ ಲಲಿತಾ ಭಟ್ ಕೆರೆ ಇವರ ಮಗಳಾಗಿ ಮಯೂರಿ ಉಪಾಧ್ಯಾಯರವರ ಜನನ. ಟಿ.ಸಿ.ಹೆಚ್ ಹಾಗೂ ಎಮ್.ಎ. ಸಂಸ್ಕೃತ ಇವರ ವಿದ್ಯಾಭ್ಯಾಸ. ಯಕ್ಷಗಾನವನ್ನು ಕಲಿತ ಸಂಸ್ಥೆ ಕರ್ನಾಟಕ ಕಲಾದರ್ಶಿನಿ, ಯಕ್ಷಗಾನವನ್ನು ಕಲಿಸಿದ ಗುರುಗಳು ಹಾಗೂ ಶೃತಿಯಲ್ಲಿ ಮಾತಾಡುವುದು ಹೇಗೆ ಎಂಬ ಕಲ್ಪನೆ ಮಾಡಿಕೊಟ್ಟವರು ಶ್ರೀ ಶ್ರೀಧರ ಕಾಂಚನ ಗೋಪಾಡಿ ಹಾಗೂ ಶ್ರೀ ಶಂಕರ್ ಬಾಳ್ಕುದ್ರು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆ :- ಅಜ್ಜ ನಾರಾಯಣ ಭಟ್ ಕೆರೆ…
ಸುರತ್ಕಲ್ : ವಿನಮ್ರ ಇಡ್ಕಿದು ಹಾಡಿದ ‘ಮೋಕೆ ಜೋಕೆ’ ಎಂಬ ತುಳು ಭಾವಗೀತೆಯ ಆಡಿಯೋ ವಿಡಿಯೋ ನಗರದ ವುಡ್ ಲ್ಯಾಂಡ್ ಹೋಟೆಲಿನಲ್ಲಿ ದಿನಾಂಕ : 29-06-2023 ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಯಕ್ಷಗಾನ ಅರ್ಥಧಾರಿಗಳು ಹಾಗೂ ಪ್ರವಚನಕಾರರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯರಾದ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ ಹಾಡನ್ನು ಬಿಡುಗಡೆಗೊಳಿಸಿದರು. ಅವರು ಮಾತನಾಡುತ್ತಾ, “ಹಸಿ ಗೋಡೆಗೆ ಕಲ್ಲು ಹೊಡೆದರೆ ಹೇಗೆ ಗಟ್ಟಿಯಾಗಿ ನಿಲ್ಲುತ್ತದೋ ಹಾಗೆಯೇ ಎಳೆಯ ಪ್ರಾಯದಲ್ಲಿಯೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಅವರು ಚೆನ್ನಾಗಿ ಬೆಳೆಯುತ್ತಾರೆ. ಕಲಿಕೆಯ ಜೊತೆ ಜೊತೆಗೆ ಮಕ್ಕಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡರೆ ಅವರ ವ್ಯಕ್ತಿತ್ವ ಚೆನ್ನಾಗಿ ರೂಪುಗೊಳ್ಳುತ್ತದೆ. ಬಾಲ ಪ್ರತಿಭೆ ವಿನಮ್ರ ಇಡ್ಕಿದು ಮುಂದೆ ಉತ್ತಮ ಗಾಯಕನಾಗಬಲ್ಲ ಎಂಬುದನ್ನು ಅವನ ಧ್ವನಿ ಮತ್ತು ಹಾಡು ತಿಳಿಸುತ್ತದೆ” ಎಂದು ನುಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ…
ಮಂಗಳೂರು: ಕದ್ರಿ, ಮಲ್ಲಿಕಟ್ಟೆಯ ಶ್ರೀಕೃಷ್ಣ ಕಲ್ಯಾಣ ಮಂದಿರದಲ್ಲಿ ದಿನಾಂಕ 29-06-2023ರಂದು ಜರಗಿದ ಹರಿಕಥಾ ಪರಿಷತ್ತಿನ ಸದಸ್ಯರ ಸಮಾವೇಶ ಹಾಗೂ ಸಂವಾದ ಗೋಷ್ಠಿಯು ನಡೆಯಿತು. ಸಂಪನ್ಮೂಲ ಮಹನೀಯರಾಗಿ ಭಾಗವಹಿಸಿದ ಬಹುಶ್ರುತ ವಿದ್ವಾಂಸ ಮತ್ತು ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ “ಆಧುನಿಕ ಯುಗದಲ್ಲಿ ಸಂಪ್ರದಾಯ ಮತ್ತು ಪರಂಪರೆಗಳ ನಡುವೆ ಸಾಂಸ್ಕೃತಿಕ ಕಲಾರಂಗಕ್ಕಿರುವ ಸವಾಲುಗಳನ್ನು ಎದುರಿಸಲು ತರ್ಕಬದ್ಧ ವಿಮರ್ಶೆ, ವಸ್ತು ವಿಶ್ಲೇಷಣೆ ಹಾಗೂ ಸಂವಾದ ಗೋಷ್ಠಿಗಳು ಸಹಕಾರಿ. ಜಿಲ್ಲೆಯ ಹರಿಕಥಾ ರಂಗದಲ್ಲಿ ಹಿಂದೆ ಭದ್ರಗಿರಿ ಸೋದರರು, ಸಾಮಗರು ಹಾಗೂ ಶೇಣಿ ಅವರಿಂದ ಅನೇಕ ಬದಲಾವಣೆಗಳು ಸಾಧ್ಯವಾಯಿತು. ಪ್ರಸಕ್ತ ವಾತಾವರಣದಲ್ಲೂ ಹರಿದಾಸರುಗಳು ತಮ್ಮ ಪ್ರತಿಭೆ ಪರಿಶ್ರಮದಿಂದ ಪುರಾಣ ಕಥೆಗಳ ಜೊತೆಗೆ ಹರಿಕಥೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಪುರಾಣೇತರ ಕಥಾವಸ್ತುಗಳನ್ನೂ ಮೌಲ್ಯಗಳ ಪ್ರಸಾರಕ್ಕೆ ಬಳಸಿಕೊಳ್ಳಬಹುದು” ಎಂದರು. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಗೋಷ್ಠಿಯನ್ನು ಉದ್ಘಾಟಿಸಿ ಶುಭ ಕೋರಿದರು. ಅಧ್ಯಕ್ಷತೆ ವಹಿಸಿದ್ದ ಹರಿಕಥಾ ಪರಿಷತ್ತಿನ ಅಧ್ಯಕ್ಷ ನ್ಯಾಯವಾದಿ ಕೆ.ಮಹಾಬಲ ಶೆಟ್ಟಿ ಕೂಡ್ಲು ಅವರು ಪರಿಷತ್ತಿನ ಮನೆ ಮನೆ…
ಬೆಂಗಳೂರು : ಗಾಯಕ ಜಗದೀಶ್ ಶಿವಪುರ ಅವರು ಸಂಗೀತ ಕ್ಷೇತ್ರದಲ್ಲಿ ಐದು ದಶಕಗಳನ್ನು ಪೂರೈಸಿದ ಹೊಸ್ತಿಲಲ್ಲಿ ಮಂಗಳೂರಿನ ‘ಮಧುರತರಂಗ’ವು ದಿನಾಂಕ : 01-07-2023ರಂದು ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸ್ವರಕಂಠೀರವ’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಂಗೀತದಲ್ಲಿ ಒಲವು, ಸ್ಪೂರ್ತಿ ಮತ್ತು ಆತುರ ಈ ಬಗ್ಗೆ ವಿಚಾರ ಮಂಡನೆ ಮಾಡಿದ ಪ್ರಸಿದ್ಧ ಗಾಯಕಿ ಶ್ರೀಮತಿ ಸುಮಾ ಎಲ್.ಎನ್. ಶಾಸ್ತ್ರಿ ಮಾತನಾಡುತ್ತಾ “ಸಂಗೀತ ದೊಡ್ಡ ಸಾಗರದಂತೆ, ಅಲ್ಲಿ ಕಲಿತಷ್ಟು ಹೊಸ ವಿಷಯಗಳು ಸಿಗುತ್ತವೆ. ಸಂಗೀತದಲ್ಲಿ ಎಲ್ಲರಿಗೂ ಆಸಕ್ತಿ ಇರುತ್ತದೆ. ಆದರೆ ಕಲೆ ಕೆಲವರಿಗೆ ಮಾತ್ರ ಒಲಿಯುತ್ತದೆ. ಸಿನೇಮಾ ಗೀತೆಗಳನ್ನು ಹಾಡುವುದು ಸುಲಭವಲ್ಲ. ನಿಗದಿತ ಅವಧಿಯಲ್ಲಿ ಶೃತಿ ಮತ್ತು ತಾಳ ನಿಖರವಾಗಿ ಇರುವಂತೆ ಹಾಡಬೇಕಾಗುತ್ತದೆ. ಹಾಡುಗಾರಿಕೆಯ ಕಲೆ ಮಕ್ಕಳಲ್ಲಿ ಇದ್ದರೆ ಅದನ್ನು ಹೆತ್ತವರು ಗುರುತಿಸಿ ಪ್ರೋತ್ಸಾಹಿಸಬೇಕು. ಎಂಜಿನಿಯರಿಂಗ್, ವೈದ್ಯಕೀಯ ಸೇರಿ ವಿವಿಧ ವೃತ್ತಿ ಶಿಕ್ಷಣದ ಜತೆಗೆ ಕಲೆಗೂ ಆದ್ಯತೆ ನೀಡಬೇಕು” ಎಂದು ಹೇಳಿದರು. ಉಡುಪಿ ನಗರಸಭಾ ಸದಸ್ಯೆ ಶ್ರೀಮತಿ ಮಾನಸ ಚಿದಾನಂದ ಪೈ ಅವರು ಮಾತನಾಡಿ “ಜಗದೀಶ್ ಅವರು…