Subscribe to Updates
Get the latest creative news from FooBar about art, design and business.
Author: roovari
ಮೈಸೂರು : ಧ್ವನಿ ಫೌಂಡೇಷನ್ ಆಯೋಜಿಸುವ ಡಾ. ಶ್ವೇತಾ ಮಡಪ್ಪಾಡಿ ನೇತೃತ್ವದಲ್ಲಿ ‘ಹಕ್ಕಿಹಾಡು’ ಮಕ್ಕಳ ಬೇಸಿಗೆ ಕಲರವ 2025 ಇದರ ಸಮಾರೋಪ ಸಮಾರಂಭವನ್ನು ದಿನಾಂಕ 27 ಏಪ್ರಿಲ್ 2025ರಂದು ಸಂಜೆ 5-30 ಗಂಟೆಗೆ ಮೈಸೂರಿನ ದಟ್ಟಗಳ್ಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದಿಗ್ವಿಜಯ ಹೆಗ್ಗೋಡು ಇವರ ನಿರ್ದೇಶನದಲ್ಲಿ ‘ಹಕ್ಕಿ ಹಾಡು’ ಮಕ್ಕಳ ನಾಟಕ ಪ್ರದರ್ಶನಗೊಳ್ಳಲಿದೆ. ಮಾನ್ಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ನಟಿ ಶ್ರೀಮತಿ ಭವ್ಯ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ವೆಂಕಟೇಶ್ ಇವರುಗಳು ಭಾಗವಹಿಸಲಿರುವರು.
ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ 2023ನೇ ಸಾಲಿನ ‘ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕಿ ಇಂದಿರಾ ಹೆಗ್ಗಡೆಯವರು ಆಯ್ಕೆಯಾಗಿದ್ದಾರೆ. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಹೆಗ್ಗಡೆಯವರನ್ನು ದಿನಾಂಕ 24 ಏಪ್ರಿಲ್ 2025ರಂದು ಸನ್ಮಾನಿಸಿ ಗೌರವಿಸಲಾಯಿತು. “ಹಿರಿಯ ಸಂಶೋಧಕ ಎಂ.ಎಂ. ಕಲ್ಬುರ್ಗಿ ಹೆಸರಿನ ಪ್ರಶಸ್ತಿ ತಮಗೆ ಬಂದಿರುವುದು ತುಳುನಾಡಿನ ಸಂಸ್ಕೃತಿ ಅಧ್ಯಯನಕ್ಕೆ ಸಂದ ಗೌರವವಾಗಿದೆ. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಗಳ ಕುರಿತು ಸಂಶೋಧನೆಗೆ ಸಾಕಷ್ಟು ಅವಕಾಶಗಳಿದ್ದು ಯುವಜನತೆ ಆಸಕ್ತಿ ತೋರಿಸಬೇಕು” ಎಂದು ಹೇಳಿದರು. ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ ಇಂದಿರಾ ಹೆಗ್ಗಡೆಯವರನ್ನು ಅಭಿನಂದಿಸಿದರು. ಕೋಶಾಧಿಕಾರಿ ಜ್ಯೋತಿ ಚೇಲೈರು ವಂದಿಸಿದರು. ಸದ್ರಿ ಪ್ರಶಸ್ತಿಯು ರೂ.75,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.
ಪ್ರಸಿದ್ಧರಾದ ಭಾರತೀಯ ವೀಣಾ ವಾದಕರಾದ ಕರ್ನಾಟಕ ಸಂಗೀತ ಪರಂಪರೆಯಲ್ಲಿ ಪ್ರಾತಃಸ್ಮರಣೀಯ ಮಹತ್ವಪೂರ್ಣ ಹೆಸರು ವೀಣಾ ವೆಂಕಟಗಿರಿಯಪ್ಪನವರದು. 26 ಏಪ್ರಿಲ್ 1887ರಲ್ಲಿ ಹೆಗ್ಗಡದೇವನ ಕೋಟೆ ಎಂಬಲ್ಲಿ ವೈದಿಕ ಮನೆತನದಲ್ಲಿ ಇವರ ಜನನವಾಯಿತು. ವೆಂಕಟರಾಮಯ್ಯ ಮತ್ತು ನರಸಮ್ಮ ದಂಪತಿಯ ಸುಪುತ್ರ. ಮಗುವಿಗೆ 11 ತಿಂಗಳಾಗುತ್ತಲೇ ಪತಿಯನ್ನು ಕಳೆದುಕೊಂಡ ನರಸಮ್ಮ ಮಗುವಿನೊಂದಿಗೆ ಮೈಸೂರಿಗೆ ಬಂದು ತಂದೆ ದೊಡ್ಡ ಸುಬ್ಬರಾಯರೊಂದಿಗೆ ಇರಲಾರಂಭಿಸಿದರು. ಹೀಗೆ ಮೈಸೂರಿಗೆ ಬಂದು ಆಶ್ರಯ ಪಡೆದಿದ್ದು ಒಂದು ರೀತಿಯಲ್ಲಿ ಗೆಲುವಿಗೆ ದಾರಿಯಾಯಿತು. ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ ಪ್ರಸಿದ್ಧ ಸಂಗೀತ ಸಾಧಕರ ಮಾತ್ರವಲ್ಲದೆ ಅವರ ವೀಣಾ ವಾದನದ ವೈಖರಿಯನ್ನು ವೀಕ್ಷಿಸುವ ಅವಕಾಶ ಇವರಿಗೆ ದೊರೆಯಿತು. ಅಜ್ಜ ದೊಡ್ಡ ಸುಬ್ಬರಾಯರು ಪ್ರಸಿದ್ಧ ವೀಣಾವಾದಕರು. ವೀಣೆ ನುಡಿಸುವವರು ವೀಣೆಯನ್ನು ಅಡ್ಡಲಾಗಿ ಹಿಡಿದು ನುಡಿಸಿದರೆ, ದೊಡ್ಡ ಸುಬ್ಬರಾಯರು ಅದನ್ನು ಲಂಬವಾಗಿ ಹಿಡಿದು ನುಡಿಸುತ್ತಿದ್ದರು. ವೀಣಾ ವಾದನದಲ್ಲಿ ಅದ್ಭುತ ಸಾಧನೆ ಮಾಡಿದವರಿಗೆ ಮಾತ್ರ ಇದು ಸಾಧ್ಯವಾಗುವಂತದ್ದು. ತಾಯಿ ನರಸಮ್ಮನವರ ಏಕೈಕ ಸಹೋದರ ಚಿಕ್ಕ ಸುಬ್ಬರಾಯರಿಗೆ ಸಂತಾನವಿಲ್ಲದ ಕಾರಣ ವೆಂಕಟಗಿರಿಯಪ್ಪನನ್ನೇ ತನ್ನ…
ಪೆರ್ಲ: ಕನ್ನಡ ಸಾಹಿತ್ಯ ಪರಿಷತ್ ಇದರ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ, ಸವಿ ಹೃದಯದ ಕವಿ ಮಿತ್ರರು ಇವರ ಸಹಕಾರದೊಂದಿಗೆ ಆಯೋಜಿಸುವ ಕವಿತಾ ಕೌತುಕ ಸರಣಿ – 3 ‘ಕವಿ ಕಾವ್ಯ ಸಂವಾದ’ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರ ಅಪರಾಹ್ನ ಘಂಟೆ 2.20ರಿಂದ ಪೆರ್ಲದ ವ್ಯಾಪಾರಿ ಭವನದಲ್ಲಿ ನಡೆಯಲಿದೆ. ನಿವೃತ್ತ ಶಿಕ್ಷಕರಾದ ಉಮೇಶ ಕೆ. ಪೆರ್ಲ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳು ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷರಾದ ಡಾ. ರಮಾನಂದ ಬನಾರಿ ಉದ್ಘಾಟಿಸಲಿರುವರು. ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಲೇಖಕ ಬಿ. ಎಸ್. ಕಾಟುಕುಕ್ಕೆ, ಪೆರ್ಲ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕಾಟುಕುಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಕ. ಸಾ. ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸವಿ ಹೃದಯದ ಕವಿ ಮಿತ್ರರು…
ಕೊಣಾಜೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಹಿರಿಯ ತುಳು ಸಾಹಿತಿ, ನಿವೃತ್ತ ಉಪನ್ಯಾಸಕ ಕೆ. ಟಿ. ಆಳ್ವ ಇವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರಂದು ಸಂಜೆ ಘಂಟೆ 4.00ಕ್ಕೆ ಮುಡಿಪು ಪಜೀರು ಗ್ರಾಮದ ರಾಮ್ ಬಾಗ್ನಲ್ಲಿ ನಡೆಯಲಿದೆ. ಸುದೀರ್ಘ ಕಾಲ ಸರಕಾರಿ ಪ. ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕುದುರೆಪ್ಪಾಡಿ ತಿಮ್ಮಣ್ಣ ಆಳ್ವ (ಕೆ. ಟಿ. ಆಳ್ವ) ‘ತುಳುನಾಡ ತುಡರ್’, ‘ತುಳು ಭಾಷೆದ ತಿರ್ಲ್ ‘ ಎಂಬ ಕೃತಿಯನ್ನು ಹೊರ ತಂದಿದ್ದಾರೆ. ತುಳು ಸಂಸ್ಕೃತಿ, ಭಾಷೆ, ಜನಪದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಅನೇಕ ಲೇಖನಗಳ ಪ್ರಕಟಿಸಿದ್ದಾರೆ. ಮಡಿಪು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಬಳಗದ ಸಹಯೋಗದಲ್ಲಿ ನಡೆಯುವ ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಪಜೀರ್ ಗ್ರಾ.ಪಂ. ಅಧ್ಯಕ್ಷ ರಫೀಕ್ ಪಜೀರ್ ಅತಿಥಿಯಾಗಿರುವರು. ಪತ್ರಕರ್ತ ಶಶಿಧರ ಪೊಯ್ಯತ್ತಬೈಲ್…
ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅವರ ಸ್ಥಾಪಕ ಸಂಚಾಲಕತ್ವದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಚುಟುಕು ರಚನಾ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದೆ. ಅವನಿ ಎಂ. ಬೆಳ್ಳೂರು, ಪೂಜ ಸಿ. ಹೆಚ್. ದೇಲಂಪಾಡಿ, ಕಾವ್ಯ ರಾವ್ ಕಾಸರಗೋಡು, ಗಾಯತ್ರಿ ಹೆಚ್. ಪಳ್ಳತ್ತಡ್ಕ ಹಾಗೂ ವೈಶಾಲಿನಿ ಟಿ. ಇವರು ‘ಕಾಸರಗೋಡು ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ-2025’ ಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ 34 ಮಂದಿ ಕವಿಗಳು ಭಾಗವಹಿಸಿದ್ದರು. 27 ಏಪ್ರಿಲ್ 2025ರಂದು ಅಪರಾಹ್ನ ಘಂಟೆ 2.00ರಿಂದ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ನಡೆಯುವ ಬೇಕಲ ರಾಮ ನಾಯಕ ಅವರ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿರಾಜ್ ಅಡೂರು…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಹಿರಿಯ ನಾಗರಿಕ ವೇದಿಕೆ ಕಚೇರಿಯಲ್ಲಿ ಗ್ರಂಥಾಲಯದ ಅನುಷ್ಠಾನವು ದಿನಾಂಕ 22 ಏಪ್ರಿಲ್ 2025ರ ಮಂಗಳವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಪಿ. ನಾಗರಾಜರಾವ್ “ಪುಸ್ತಕ ನಮ್ಮ ಅತ್ಯುತ್ತಮ ಮಿತ್ರ. ಪುಸ್ತಕಗಳನ್ನು ಓದುವುದರಿಂದ ನಮ್ಮ ಸಮಯವನ್ನು ಕ್ರಿಯಾಶೀಲವಾಗಿ ಕಳೆಯಬಹುದಾಗಿದೆ. ಅಲ್ಲದೆ , ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು. ಈ ನಿಟ್ಟಿನಲ್ಲಿ ಕ. ಸಾ. ಪ. ಉಡುಪಿ ತಾಲೂಕಿನ ಕಾಯ೯ ಅಭಿನಂದನೀಯ” ಎಂದರು. ಕ. ಸಾ. ಪ. ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್.ಪಿ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ಕ. ಸಾ. ಪ. ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾದ೯ನ್ ಕೊಡವೂರು, ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕವಾ೯ಲು , ಹಿರಿಯ ನಾಗರಿಕ ವೇದಿಕೆಯ ಗೌರವಾಧ್ಯಕ್ಷರಾದ ಕೆ. ಸದಾನಂದ ಹೆಗ್ಡೆ, ಉಪಾಧ್ಯಕ್ಷರಾದ ಕೆ. ಮುರಳೀಧರ, ಕಾರ್ಯದರ್ಶಿ ನಂದಕುಮಾರ್,…
ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕ ಮತ್ತು ಕೊಡಗು ಕನ್ನಡ ಭವನ, ಕನ್ನಡ ಚು. ಸಾ. ಪ ಕೊಡಗು ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ ಕಾಸರಗೋಡು ಇದರ ಸಹಭಾಗಿತ್ವದಲ್ಲಿ ಅಗ್ರಗಣ್ಯ ಸಾಹಿತಿ, ಐತಿಹ್ಯಗಳ ಅಧ್ಯಾಪಕ, ಸಂಶೋಧಕ ದಿ. ಬೇಕಲ ರಾಮ ನಾಯಕ ಇವರ ಸ್ಮರಣಾಂಜಲಿ, ಬದುಕು ಬರಹದ ಬಗ್ಗೆ ಮೆಲುಕು, ಜಾನಪದ ಗಾಯನ, ಕವಿಗೋಷ್ಠಿ, ಕೃತಿ ಬಿಡುಗಡೆ, “ಚುಟುಕು ಕಾವ್ಯ ಪ್ರಶಸ್ತಿ” ಪ್ರದಾನ ಸಮಾರಂಭವು ದಿನಾಂಕ 27 ಏಪ್ರಿಲ್ 2025ರಂದು ಕಾಸರಗೋಡು ನುಲ್ಲಿಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ಬಯಲು ರಂಗ ಮಂಟಪದಲ್ಲಿ ನಡೆಯಲಿದೆ. ಕನ್ನಡ ಚು.ಸಾ. ಪ. ಕಾಸರಗೋಡು ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾದ ಶ್ರೀ ವಿರಾಜ್ ಆಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕನ್ನಡ ಚು. ಸಾ. ಪ. ಕಾಸರಗೋಡು ಜಿಲ್ಲಾ ಘಟಕದ ನಿರ್ದೇಶಕರಾದ ಡಾ. ಕೆ. ಎನ್. ವೆಂಕಟ್ರಮಣ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆ “ಗದಾಯುದ್ಧ” ದಿನಾಂಕ 23 ಏಪ್ರಿಲ್ 2025ರಂದು ಬನ್ನೂರು ಭಾರತೀ ನಗರದ ಶ್ರೀ ವಿದ್ಯಾಗಣಪತಿ ದೇವಳದ ಆಶ್ರಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಯನ್. ಯನ್. ಭಟ್ ಬಟ್ಯಮೂಲೆ, ಪರೀಕ್ಷಿತ್ ಹಂದ್ರಟ್ಟ, ಶರಣ್ಯ ನೆತ್ತರಕೆರೆ, ಅಮೋಘ ಕೃಷ್ಣ, ಆದಿತ್ಯ ಕೃಷ್ಣ ದ್ವಾರಕ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ ( ಕೌರವ ), ವಿ. ಕೆ. ಶರ್ಮ ಅಳಿಕೆ ( ಶ್ರೀ ಕೃಷ್ಣ ), ಗುಡ್ಡಪ್ಪ ಬಲ್ಯ ( ಭೀಮ ), ಭಾಸ್ಕರ್ ಬಾರ್ಯ ( ಅರ್ಜುನ ), ಮಾಂಬಾಡಿ ವೇಣುಗೋಪಾಲ ಭಟ್ ( ಬಲರಾಮ ), ಹರಿಣಾಕ್ಷಿ ಜೆ. ಶೆಟ್ಟ ( ಧರ್ಮರಾಯ), ಅಚ್ಯುತ ಪಾಂಗಣ್ಣಾಯ ( ಶಬರ), ಸಹಕರಿಸಿದರು. ಪುಳು ಈಶ್ವರ ಭಟ್ ಸ್ವಾಗತಿಸಿ ಸುಬ್ರಹ್ಮಣ್ಯ ಭಟ್ ವಂದಿಸಿದರು. ಕಮ್ಮಾಜೆ ಕೇಶವ ಭಟ್ ಪ್ರಾಯೋಜಿಸಿದ್ದರು.
ಮಂಗಳೂರು: ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣ ಸಮಿತಿ, ಗುರು ಶಿಷ್ಯ ಒಕ್ಕೂಟ ಮತ್ತು ಚ. ರಾ. ಪ್ರಕಾಶನ ಇವರ ಆಶ್ರಯದಲ್ಲಿ ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ, ತಾಳಮದ್ದಳೆ ಮತ್ತು ಕೃತಿ ಬಿಡುಗಡೆ ಸಮಾರಂಭವು 20 ಏಪ್ರಿಲ್ 2025ರ ಭಾನುವಾರದಂದು ಸೋಮೇಶ್ವರ ಉಚ್ಚಿಲದ ಬೋವಿ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸ್ಮಾರಕ ಕಟ್ಟಡ ಸಭಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿ ಉದ್ಘಾಟಿಸಿದ ಹಿರಿಯ ವೈದ್ಯ ಮತ್ತು ಸಾಹಿತಿ ಡಾ. ರಮಾನಂದ ಬನಾರಿ ಮಾತನಾಡಿ “ಚರಾ ಎಂಬ ಅಭಿಧಾನದಲ್ಲಿ ಬರೆಯುತ್ತಿದ್ದ ರಾಮಚಂದ್ರ ಉಚ್ಚಿಲರ ಲೇಖನಗಳು ವಿಡಂಬನಾತ್ಮಕವಾಗಿದ್ದು ಓದುಗರನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದವು. ಅವರು ಮುಂಬೈ ಬಿಟ್ಟು ಊರಲ್ಲಿ ನೆಲೆಸಿದ 25 ವರ್ಷಗಳಲ್ಲಿ ತಾವಿಬ್ಬರೂ ಅತ್ಯಂತ ಆಪ್ತರಾಗಿದ್ದೆವು. ಮುಂಬೈಯ ಮರ್ಕೆಂಟೈಲ್ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ನಿಷ್ಠರಾಗಿದ್ದು ಪತ್ರಿಕಾ ಅಂಕಣಕಾರರಾಗಿ, ರಾತ್ರಿ ಶಾಲೆಯ ಅಧ್ಯಾಪಕರಾಗಿ ಅಪಾರ ಶಿಷ್ಯ ಸಂಪತ್ತನ್ನು ಹೊಂದಿದ್ದ ಉಚ್ಚಿಲರು ತಮ್ಮ ಜ್ಞಾನ ಶಕ್ತಿ, ಸ್ಮರಣ ಶಕ್ತಿ ಮತ್ತು ಇಚ್ಛಾಶಕ್ತಿಗೆ…