Subscribe to Updates
Get the latest creative news from FooBar about art, design and business.
Author: roovari
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಸಂಸ್ಕೃತಿ ಸಂಭ್ರಮದಲ್ಲಿ ಯಕ್ಷವರ್ಷ 2025 ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಸಂಜೆ 6 -00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಮೂಲ್ಕಿ ರಾಮಕೃಷ್ಣಯ್ಯ ರಚಿತ ‘ಸುಧನ್ವಾರ್ಜುನ’ ಪ್ರಸಂಗದ ಯಕ್ಷಗಾನದಲ್ಲಿ ಸರ್ವಶ್ರೀಗಳಾದ ಉದಯ ಹೊಸಾಳ, ಚಂದ್ರಯ್ಯ ಆಚಾರ್, ರಾಕೇಶ್ ಮಲ್ಯ, ವಿಶ್ವನಾಥ ಹೆನ್ನಾಬೈಲ್, ಮಾಧವ ನಾಗೂರು, ಸುನೀಲ್ ಹೊಲಾಡ್ ವಂಡ್ಸೆ, ಆದಿತ್ಯ ಹೆಗಡೆ, ಪೇತ್ರಿ ರಾಘವೇಂದ್ರ, ವರುಣ ಹೆಗಡೆ ಇವರುಗಳು ಭಾಗವಹಿಸಲಿದ್ದಾರೆ.
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ದುಬೈಯ ಲೇಖಕ ಬಿ.ಕೆ. ಗಣೇಶ್ ರೈ ಇವರ ಲೇಖನ ಸಂಕಲನ ಕೃತಿ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 04 ಮಾರ್ಚ್ 2025ರಂದು ಬೆಳಗ್ಗೆ 11-00 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಅಬುಧಾಬಿ ಕರ್ನಾಟಕ ಸಂಘ ಯು.ಎ.ಇ. ಇದರ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಯು.ಎ.ಇ. ಬಂಟ್ಸ್ ದುಬಾಯಿ ಇದರ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಇವರು ಕೃತಿ ಬಿಡುಗಡೆ ಮಾಡಲಿದ್ದು, ಲೇಖಕಿ ಡಾ. ಅರುಣಾ ನಾಗರಾಜ್ ಇವರು ಕೃತಿ ಪರಿಚಯ ಮಾಡಲಿದ್ದಾರೆ.
ಕಾಸರಗೋಡು : ಶ್ರೀಮತ್ ಎಡನೀರು ಮಠಾದೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳಿಂದ ಲಾಂಚನ ಬಿಡುಗಡೆಗೊಳಿಸಿ, ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಇವರಿಂದ ವಿದ್ಯುಕ್ತವಾಗಿ ಕನ್ನಡ ಧ್ವಜ ನೀಡಿ ಉದ್ಘಾಟನೆಗೊಂಡ ಕಾಸರಗೋಡು ಕನ್ನಡ ಭವನ ರೂವಾರಿಯಾದ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಸ್ಥಾಪಿಸಿದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡಿನಲ್ಲಿ ಸಾಹಿತಿ, ಪತ್ರಕರ್ತ ಶ್ರೀ ವಿರಾಜ್ ಅಡೂರ್ ಅಧ್ಯಕ್ಷರಾಗಿ ಸಮಿತಿ ವಿಸ್ತರಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯ ಪ್ರವೃತ್ತವಾಗಿದೆ. ಕರ್ನಾಟಕ ರಾಜ್ಯದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಿ ಕನ್ನಡ ಪರ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಇದೀಗ ಕೊಡಗು ಜಿಲ್ಲೆಯಲ್ಲಿ ಕನ್ನಡ ಚು. ಸಾ. ಪ. ಘಟಕವನ್ನು ಸ್ಥಾಪಿಸಿದೆ. ಕನ್ನಡ ಭವನದ ಕೊಡಗು ಜಿಲ್ಲಾ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರು ಸೋಮವಾರಪೇಟೆಯ ರುಬೀನಾ ಎಂ.ಎ. ಇವರ ನಾಮನಿರ್ದೇಶನ ಮಾಡಿದರು. ಕೊಡಗು ಕನ್ನಡ ಭವನ ಪ್ರದಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾದ…
ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಆಯೋಜಿಸಿದ್ದ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮವು ದಿನಾಂಕ 27 ಫೆಬ್ರವರಿ 2025ರಂದು ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ಬೃಂದಾವನ ಬಡಾವಣೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ‘ಜಾನಪದ’ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ “ಜಾನಪದ ಗೀತೆಗಳನ್ನು ರಚಿಸಿದವರು ಯಾರೆಂದು ಎಲ್ಲೂ ಉಲ್ಲೇಖವಾಗಿರುವುದಿಲ್ಲ. ವಿಶ್ವದಲ್ಲೇ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಜಾನಪದವನ್ನು ಈಗಲೂ ಗ್ರಾಮೀಣ ಭಾಗಗಳಲ್ಲಿ ಕೇಳಬಹುದು. ಇದನ್ನು ಮನುಷ್ಯ ಜೀವನದ ಎಲ್ಲಾ ಘಟ್ಟಗಳಲ್ಲೂ ಬಳಸುತ್ತಾರೆ. ಸುಖ, ದುಃಖಗಳ ಸಂದರ್ಭಗಳ ಅನುಸಾರ ಸ್ಥಳದಲ್ಲೇ ಗೀತೆಗಳನ್ನು ರಚಿಸಿ ಹಾಡುವ ಅದ್ಬುತ ಜ್ಞಾನ ಹೊಂದಿರುವ ಜನರನ್ನು ಕಾಣಬಹುದು. ಜಾನಪದ ಗೀತೆಗಳನ್ನು ಹೆಚ್ಚಾಗಿ ಗ್ರಾಮೀಣ ಜನರು ಬಳಸಿ, ತಾನು ಮಾಡುವ ಕೆಲಸಗಳಲ್ಲಿ ತನ್ಮಯತೆ ಮತ್ತು ಶಕ್ತಿ ಪಡೆಯುತ್ತಾರೆ ಅಂತಹ ಶ್ರೇಷ್ಠ ಶಕ್ತಿಯಿದೆ.…
ಬೆಂಗಳೂರು : ಅಂಕಿತ ಪುಸ್ತಕ ಮತ್ತು ಬುಕ್ ಬ್ರಹ್ಮ ಇವುಗಳ ಸಹಯೋಗದಲ್ಲಿ ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ದಿನಾಂಕ 02 ಮಾರ್ಚ್ 2025ರಂದು ಬೆಳಗ್ಗೆ 10-30 ಗಂಟೆಗೆ ಬೆಂಗಳೂರಿನ ನರಸಿಂಹರಾಜು ಕಾಲೋನಿಯು 3ನೇ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಲೇಖಕ ಶ್ರೀ ಎಚ್. ದುಂಡಿರಾಜ್ ಇವರ ‘ಹದಿನಾಲ್ಕು ಕಿರು ಹಾಸ್ಯ ನಾಟಕಗಳು’, ಶ್ರೀ ರಘುನಾಥ ಚ.ಹ. ಇವರ ‘ಇಳಿಸಲಾಗದ ಶಿಲುಬೆ’ ಮತ್ತು ‘ಇಲ್ಲಿಂದ ಮುಂದೆಲ್ಲ ಕಥೆ’ ಹಾಗೂ ಶ್ರೀಮತಿ ಪಾರ್ವತಿ ಜಿ. ಐತಾಳ್ ಇವರ ‘ಅಂತರಂಗದ ಸ್ವಗತ’ ಎಂಬ ಕೃತಿಗಳು ಈ ಸಮಾರಂಭದಲ್ಲಿ ಲೋಕಾರ್ಪಣೆಗೊಳ್ಳಲಿವೆ. ಪ್ರಸಿದ್ಧ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಇವರು ಕೃತಿ ಬಿಡುಗಡೆ ಮಾಡಲಿದ್ದು, ಪ್ರಸಿದ್ಧ ಲೇಖಕರಾದ ಎಚ್.ಎಸ್. ಸತ್ಯ ನಾರಾಯಣ ಮತ್ತು ಪ್ರಸಿದ್ಧ ಬರಹಗಾರರಾದ ಡಾ. ರವಿಕುಮಾರ್ ನೀಹ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಸ್ತ್ರವಿನ್ಯಾಸದ ಮೆರುಗು, ಕುಣಿತದ ಶ್ರೀಮಂತಿಕೆ, ಮಾತುಗಾರಿಕೆಯ ಅಬ್ಬರದಲ್ಲಿ ಪ್ರೇಕ್ಷಕರನ್ನು ರಂಜಿಸುವ ಕಲೆಯ ಮತ್ತೊಂದು ಹೆಸರೇ ಯಕ್ಷಗಾನ. ಕಳೆದ 21 ವರ್ಷಗಳಿಂದ ಯಕ್ಷಗಾನವನ್ನೇ ವೃತ್ತಿಯಾಗಿಸಿಕೊಂಡು ತಮ್ಮದೇ ವಿಶೇಷ ಶೈಲಿಯ ಮೂಲಕ ಜನಪ್ರಿಯತೆ ಗಳಿಸಿದ ಕಲಾವಿದ ರಾಜೇಶ್ ಭಂಡಾರಿ ಗುಣವಂತೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆಯ ಮಂಜುನಾಥ ಭಂಡಾರಿ ಹಾಗೂ ರಾಧಾ ಭಂಡಾರಿ ಇವರ ಮಗನಾಗಿ 28.02.1985ರಲ್ಲಿ ಜನನ. ವಿನಂತಿ ರಾಜೇಶ್ ಇವರ ಪತ್ನಿ. ಧಾತ್ರಿ ಹಾಗೂ ದಿಯಾ ಇವರ ಇಬ್ಬರು ಮಕ್ಕಳು. ಹೆರಂಜಾಲು ವೆಂಕಟರಮಣ ಗಾಣಿಗರು ಹಾಗೂ ಕೃಷ್ಣ ಭಂಡಾರಿ ಗುಣವಂತೆ ಇವರ ಯಕ್ಷಗಾನ ಗುರುಗಳು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಕಾರಣ ತಂದೆಯವರು. ಸಣ್ಣವನಿರುವಾಗ ಒಂದು ವೃಷಸೇನನ ಪಾತ್ರ ಮಾಡಿದ್ದೆ. ಅಲ್ಲಿ ಕೆರೆಮನೆ ಮಹಾಬಲ ಹೆಗಡೆಯವರು ನನ್ನ ತಂದೆಯ ಬಳಿ ಬಂದು, “ನಿಮ್ಮ ಜಾತಿಯಲ್ಲಿ ಎಲ್ಲಾ ಹಿಮ್ಮೇಳಕ್ಕೆ ಹೆಚ್ಚು ಬರೋದು. ಇವನಿಗೆ ಭವಿಷ್ಯ ಇದೆ, ಮುಮ್ಮೇಳ ಕಲಿಸಿ” ಎಂದರು. ಆ ಮೇಲೆ ಆ ಕಡೆ ಹೆಚ್ಚಿನ ಗಮನ ಹರಿಸುವ ಹಾಗೇ ಆಯಿತು.…
ಸುರತ್ಕಲ್ : ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಸುರತ್ಕಲ್ ಇದರ ವಾರ್ಷಿಕೋತ್ಸವವು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ದಿನಾಂಕ 23 ಫೆಬ್ರವರಿ 2025ನೇ ರವಿವಾರದಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವೇ. ಮೂ. ಸೀತಾರಾಮ ಆಚಾರ್ಯ ಪಚ್ಚನಾಡಿ ಹಾಗೂ ಸ್ವಾತಿ ಆಚಾರ್ಯ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿಮರ್ಶಕರಾದ ಸರ್ಪಂಗಳ ಈಶ್ವರ ಭಟ್ ಮಾತನಾಡಿ “ಶ್ರೀ ದುರ್ಗಾಂಬ ಯಕ್ಷಗಾನ ಮಂಡಳಿಯು ಹಲವಾರು ವರ್ಷಗಳಿಂದ ಯಕ್ಷಗಾನ ಕಲೆಗೆ ಪ್ರೋತ್ಸಾಹವನ್ನು ನೀಡುತ್ತಾ ಉತ್ತಮ ಸೇವಾ ಕಾರ್ಯವನ್ನು ನಡೆಸುತ್ತಿದೆ” ಎಂದು ಶ್ಲಾಘಿಸಿದರು. ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಮೊಕ್ತಸರ ಶ್ರೀ ವಿದ್ಯೆಂದ್ರತೀರ್ಥ ಶ್ರೀಪಾದರು ಆಶೀರ್ವಚನವನ್ನು ನೀಡಿ, ಮಂಡಳಿಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ, ಇನ್ನಷ್ಟು ಕಲಾಸೇವೆಯನ್ನು ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದರು. ಇದೇ ಸಂದರ್ಭದಲ್ಲಿ ವಿನಾಯಕ ಯಕ್ಷಗಾನ ಮಂಡಳಿಯ ಸ್ಥಾಪಕ ಸದಸ್ಯ ನಾಗೇಶ ಕಾರಂತ್ ಅವರನ್ನು ಸಮ್ಮಾನಿಸಲಾಯಿತು.…
ಬೆಂಗಳೂರು : ‘ರಂಗ ಚಕ್ರ’ ಬೆಂಗಳೂರು ಆಯೋಜಿಸುವ ಮೂರು ದಿನಗಳ ರಂಗ ನಟನಾ ಕಾರ್ಯಾಗಾರವು ದಿನಾಂಕ 14 ಫೆಬ್ರವರಿ 2025ರಿಂದ 16 ಫೆಬ್ರವರಿ 2025ರವರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ರಂಗ ತಾಲೀಮು ಕೊಠಡಿಯಲ್ಲಿ ನಡೆಯಲಿದೆ. ರಂಗಚಕ್ರ ತಂಡವು ಸುಮಾರು 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಇದುವರೆಗೆ 100ಕ್ಕೂ ಹೆಚ್ಚು ರಂಗತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಿ, ನೀನಾಸಂ ಹಾಗೂ ರಂಗಾಯಣದಂತಹ ಪ್ರತಿಷ್ಠಿತ ರಂಗ ಸಂಸ್ಥೆಗಳಿಂದ ನುರಿತ ನಿರ್ದೇಶಕರನ್ನು ಕರೆಸಿ. ಹೊಸ ನಾಟಕದ ಪ್ರಯೋಗಗಳನ್ನು ಪ್ರದರ್ಶಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಉಚಿತ ಅಭಿನಯ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಈ ರಂಗ ಕಾರ್ಯಾಗಾರವನ್ನು ಹಿರಿಯ ನಿರ್ದೇಶಕ ಹಾಗೂ ನಟರಾದ ಟಿ. ಎಸ್. ನಾಗಭರಣ ಉದ್ಘಾಟಲಿಸಿದ್ದಾರೆ.
ವಿರಾಜಪೇಟೆ : ಖ್ಯಾತ ಸಾಹಿತಿ ದಿ. ಕೆ. ಎ. ತಂಗವೇಲು ಮತ್ತು ದಿ. ಗೌರಮ್ಮ ಅವರ ಜ್ಞಾಪಕಾರ್ಥವಾಗಿ ಲೇಖಕಿ ಕೆ. ಟಿ. ವಾತ್ಸಲ್ಯ ವಿರಚಿತ “ಮೂರನೇ ಮಹಾಯುದ್ಧ ಮತ್ತು ಶಾಂತಿ” ಪುಸ್ತಕದ ಲೋಕಾರ್ಪಣಾ ಸಮಾರಂಭವು ದಿನಾಂಕ 27 ಫೆಬ್ರವರಿ 2025ರಂದು ವಿರಾಜಪೇಟೆಯಲ್ಲಿ ನಡೆಯಿತು . ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ಬಳಗ ವಿರಾಜಪೇಟೆ ಹಾಗೂ ಶ್ರೀಜಿತ್ ಸಂಸ್ಥೆ ಕೊಡಗು ಸಹಯೋಗದಲ್ಲಿ ವಿರಾಜಪೇಟೆಯ ಪುರಭವನ(ಟೌನ್ಹಾಲ್)ದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಕೃತಿ ಲೋಕಾರ್ಪಣೆ ಗೊಳಿಸಿದರು. ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ವೇದಿಕೆಯ ಅಧ್ಯಕ್ಷರಾದ ಎಂ .ಪಿ. ಪುಷ್ಪಲತ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ಅಧ್ಯಕ್ಷರಾದ ಮುಲ್ಲೇoಗಡ ಮಧುಶ್ ಪೂವಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಲತೀಶ್, ಸಾಹಿತಿ ಅಪರ್ಣ ಹುಲಿತಾಳ, ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್…
ಮಂಗಳೂರು : ಪ್ರಕಾಶ್ ರಾಜ್ ಫೌಂಡೇಷನ್ ವತಿಯಿಂದ ‘ನಿರ್ದಿಗಂತ ಉತ್ಸವ 2025’ ಕಾರ್ಯಕ್ರಮವು ದಿನಾಂಕ 28 ಫೆಬ್ರವರಿ 2025ರಂದು ಮಂಗಳೂರಿನ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ಬಹುಬಾಷಾ ನಟ ಪ್ರಕಾಶ್ ರಾಜ್ ಮಾತಾನಾಡಿ ಕರಾವಳಿ ಭಾಗದ ಸೌಹಾರ್ದತೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಕರಾವಳಿ ಜನರ ಕೆಲಸ ಕಾರ್ಯಗಳಿಂದ ಅವರಲ್ಲಿರುವ ಸೌಹಾರ್ದತೆಯನ್ನು ಕಾಣಬಹುದು ಹಾಗೂ ನಾಲ್ಕು ದಿನದ ಕಾರ್ಯಕ್ರಮಕ್ಕೆ ವಿನ್ಯಾಸ ಮಾಡಿದಂತಹ ಮೇಘ ಶೆಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಬಳಿಕ ರೆವರೆಂಡ್ ಫಾದರ್ ಡಾ. ಪ್ರವೀಣ್ ಮಾರ್ಟಿಸ್ ಇವರು ಮಾತನಾಡಿ, ಹೂವಿಗೂ ನನಗೂ ಅವಿನಾಭಾವ ಸಂಬಂಧವಿದೆ. ಬಾಲ್ಯದಲ್ಲಿ ಹೂವು ಹೆಣೆಯುವ ಕೆಲಸ ಮಾತ್ರ ಗೊತ್ತಿತ್ತು. ಇವತ್ತು ಈ ಕಾರ್ಯಕ್ರಮದಲ್ಲಿ ಹೂವಿನ ವಿನ್ಯಾಸವು ನನ್ನ ಬಾಲ್ಯವನ್ನು ನೆನಪಿಸಿತು. ನಿರ್ದಿಗಂತ ತಂಡವು ನಮ್ಮ ಕಾಲೇಜಿಗೆ ಬಂದಿರುವುದು ಬಹಳ ಸಂತಸ ತಂದಿದ್ದು, ಮಲ್ಲಿಗೆ ಹೂವು ಹೇಗೆ ಒಂದನ್ನೊಂದು ಹೆಣೆದುಕೊಂಡಿದೆಯೋ ಅದೇ ರೀತಿ ನಮ್ಮ ಬಂಧ ಬೆಸೆದಿರಲಿ” ಎಂದು ತಿಳಿಸಿದರು.