Subscribe to Updates
Get the latest creative news from FooBar about art, design and business.
Author: roovari
ಸಿದ್ದಾಪುರ : ಕೊಡಗು ಜಿಲ್ಲಾ, ವಿರಾಜಪೇಟೆ ತಾಲೂಕು ಮತ್ತು ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚೆನ್ನಯ್ಯನ ಕೋಟೆ ಸರಕಾರಿ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಆಯೋಜಿತ ಸಾಹಿತಿ ದಿ. ಎ.ಎನ್. ರಾಮಕೃಷ್ಣ ಮತ್ತು ದಿ. ಬಿ.ಜಿ. ರಘುನಾಥ್ ನಾಯಕ್ ಜ್ಞಾಪಕಾರ್ಥ ‘ದತ್ತಿನಿಧಿ ಕಾರ್ಯಕ್ರಮ’ವು ಚೆನ್ನಯ್ಯನ ಕೋಟೆ ಸರಕಾರಿ ಪ್ರೌಢ ಶಾಲೆಯಲ್ಲಿ ದಿನಾಂಕ 02-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಕಿ ಕೆ.ಎ. ಕಾವೇರಮ್ಮ ಮಾತನಾಡಿ “ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆಯೊಂದಿಗೆ ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬರೂ ಮುನ್ನಡೆಯಬೇಕು. ಶಾಲೆಗಳಲ್ಲಿ ಇಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬಿತ್ತಿ, ಕನ್ನಡ ಸಾಹಿತ್ಯದತ್ತ ಆಸಕ್ತಿ ಮೂಡಿಸುವ ಪ್ರಯತ್ನ ನಡೆಸುತ್ತಿರುವುದು ಮೆಚ್ಚುಗೆಯ ವಿಚಾರ” ಎಂದು ಹೇಳಿದರು. ಮಾಜಿ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷರಾದ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ.…
ಬಂಟ್ವಾಳ : ನೃತ್ಯ ಗುರು ವಿದುಷಿ ವಿದ್ಯಾ ಮನೋಜ್ ಇವರ ನಿರ್ದೇಶನದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಕಲ್ಲಡ್ಕ ಭರತನಾಟ್ಯ ಸಂಸ್ಥೆಯ ಕಲ್ಲಡ್ಕ ಮತ್ತು ಬಿ.ಸಿ.ರೋಡ್ ಶಾಖೆಗಳ ವಿದ್ಯಾರ್ಥಿಗಳಿಂದ ‘ಕಲಾ ಪರ್ವ 2023’ವು ದಿನಾಂಕ 30-11-2023ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆ್ಯಂಡ್ ಕಲ್ಚರ್, ಪುತ್ತೂರು ಇದರ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ. ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನೃತ್ಯ ಕಲಿಯುವಿಕೆಗೆ ಮಕ್ಕಳಲ್ಲಿ ಶ್ರದ್ಧೆ ಹಾಗೂ ಹೆತ್ತವರ ನಿರಂತರ ಪ್ರೋತ್ಸಾಹ ಎಷ್ಟು ಮುಖ್ಯ ಎಂಬುದನ್ನು ತಿಳಿಸಿ ಹೇಳಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತರಾದ ಹರೀಶ್ ಮಾಂಬಾಡಿ ಇವರು ಪಾಲ್ಗೊಂಡು ಯಾವುದೇ ಕಲೆಯನ್ನಾದರೂ ಕಲಿಯಬೇಕಾದರೇ ಆಸಕ್ತಿ ಎಷ್ಟರ ಮಟ್ಟಿಗೆ ಪ್ರಮುಖವಾಗುತ್ತದೆ ಎಂದು ಹೇಳುತ್ತಾ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳೂ ಮುಖ್ಯವೆಂದು ಹೇಳಿದರು. ಕಲಾ ಶಾಲೆಯ ಗುರುಗಳಾದ ವಿದ್ಯಾ ಮನೋಜ್ ಇವರು ಸ್ವಾಗತಿಸಿದರು. ನೃತ್ಯ ಶಾಲೆಯ ಸುಮಾರು 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೃತ್ಯ ಕಾರ್ಯಕ್ರಮವನ್ನು ನೀಡಿದರು.…
ಬಂಟ್ವಾಳ : ಮಕ್ಕಳ ಕಲಾ ಲೋಕ ಕ.ಸಾ.ಪ. ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದಲ್ಲಿ ಮಿತ್ತಿಮಾರು ಭುಜಂಗ ಶೆಟ್ಟಿ ಸಭಾಂಗಣದ ಪಲಿಮಾರು ಜನಾರ್ದನ ಪೈ ವೇದಿಕೆಯಲ್ಲಿ ದಿನಾಂಕ 06-12-2023ರಂದು ಸಂಪನ್ನಗೊಂಡಿತು. ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್. ರಾವ್ ಮೆರವಣಿಗೆ ಉದ್ಘಾಟಿಸಿದರು. ಎಸ್.ಡಿ.ಎಸ್.ಸಿ. ಅಧ್ಯಕ್ಷ ಹರಿಶ್ಚಂದ್ರ ಎಮ್. ಕನ್ನಡ ಧ್ಜಜಾರೋಹಣವನ್ನು ಮತ್ತು ಕ.ಸಾ.ಪ.ದ ಪಾಣೆಮಂಗಳುರು ಹೋಬಳಿ ಅಧ್ಯಕ್ಷ ಮಹಮ್ಮದ್ ಪಿ. ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಮಾಡಿದರು. ತನ್ವಿ ಮತ್ತು ಬಳಗ ನಾಡಗೀತೆ ಹಾಡಿದ್ದು, ದೈಹಿಕ ಶಿಕ್ಷಕ ಭಾಸ್ಕರ ನಾಯ್ಕ, ಪೀರಾಜ್ ವಾಬಳೆ ಮೆರವಣಿಗೆ ವ್ಯವಸ್ಥೆಗೊಳಿಸಿದ್ದರು. ಚೆಂಡೆ ಸಹಿತ ಕೊಂಬು ವಾದನದೊಂದಿಗೆ ಮಕ್ಕಳು ಪಾಲ್ಗೊಂಡ ಮೆರವಣಿಗೆಯು ನಯನ ಮನೋಹರವಾಗಿತ್ತು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಬಾಯಾರು ಪ್ರಸ್ತಾವನೆ ಗೈದು ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಮತ್ತು ಓದುವ ಹವ್ಯಾಸವನ್ನು ಬೆಳೆಸುವ ದೃಷ್ಠಿಯಿಂದ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಸ್ವಾಗತ ಸಮಿತಿಯವರ ಸಹಕಾರದಿಂದ ಉತ್ತಮ ರೀತಿಯಲ್ಲಿ…
ಮಂಗಳೂರು : ಎಕ್ಕಾರು ಬಂಟರ ಭವನದಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಅವರನ್ನು ಎಕ್ಕಾರು ಬಂಟರ ಸಂಘದ ಆಶ್ರಯದಲ್ಲಿ ದಿನಾಂಕ 26-11-2023ರಂದು ಸನ್ಮಾನಿಸಲಾಯಿತು. ಎಕ್ಕಾರು ಸುಜಾತಾ ಶೆಟ್ಟಿ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಪ್ರಾಯೋಜಕತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಬಯಲು ರಂಗ ಮಂದಿರವನ್ನು ಕನ್ಯಾನ ಸದಾಶಿವ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿ ಉದ್ಘಾಟಿಸಿದರು. ತಲಾ 2 ಬಾರಿ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳಿಂದ ಪುರಸ್ಕೃತರಾಗಿರುವ ಕಳೆದ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾ ಪಕ, ಸಾಹಿತಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಹಾಗೂ ಹಿರಿಯ ಕೃಷಿ ಸಾಧಕ ಮುರಾ ಸದಾಶಿವ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕರಾಟೆ ಕ್ರೀಡೆಯಲ್ಲಿ ರಾಷ್ಟ್ರ ರಾಜ್ಯ ಮಟ್ಟದಲ್ಲಿ 7 ಬಾರಿ ಚಾಂಪಿಯನ್ಷಿಪ್ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಎಕ್ಕಾರಿನ ಪ್ರತಿಭೆ ಸಮೃದ್ಧಿ ಶೆಟ್ಟಿ ಸಹಿತ 9 ಮಂದಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಎಕ್ಕಾರು ಗ್ರಾಮ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ…
ಉಡುಪಿ : ಯಕ್ಷ ಶಿಕ್ಷಣ ಟ್ರಸ್ಟ್ ‘ಕಿಶೋರ ಯಕ್ಷಗಾನ ಸಂಭ್ರಮ – 2023’ನ್ನು ಈ ವರ್ಷ ಉಡುಪಿ, ಕಾಪು, ಕುಂದಾಪುರ ವಿಧಾನಸಭಾ ವ್ಯಾಪ್ತಿಯ 69 ಶಾಲೆಗಳ 70 ಪ್ರದರ್ಶನಗಳನ್ನು ಜಿಲ್ಲೆಯ ಆರು ಕಡೆಗಳಲ್ಲಿ ಆಯೋಜಿಸಿದ್ದು, ಇದರ ಉದ್ಘಾಟನಾ ಸಮಾರಂಭ ದಿನಾಂಕ 29-11-2023 ರಂದು ಬ್ರಹ್ಮಾವರದ ಬಂಟರ ಭವನದ ಮುಂಭಾಗದಲ್ಲಿ ನಡೆಯಿತು. ಉಡುಪಿ ಶಾಸಕಹಾಗೂ ಯಕ್ಷಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಜರಗಿದ ಈ ಕಾರ್ಯಕ್ರಮವನ್ನು ಡಾ. ಜಿ ಶಂಕರ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಇರ್ಮಾಡಿ ಶ್ರೀ ತಿಮ್ಮಪ್ಪ ಹೆಗ್ಡೆ, ಶ್ರೀ ರಘುರಾಮ ಮಧ್ಯಸ್ಥ, ಶ್ರೀ ಬಿ.ಭುಜಂಗ ಶೆಟ್ಟಿ, ಶ್ರೀ ಬಿ.ಎನ್.ಶಂಕರ ಪೂಜಾರಿ, ಶ್ರೀ ಮಾರಾಳಿ ಪ್ರತಾಪ್ ಹೆಗ್ಡೆ, ಶ್ರೀ ಬಿರ್ತಿ ರಾಜೇಶ್ ಶೆಟ್ಟಿ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಧನಂಜಯ ಅಮೀನ್, ಶ್ರೀ ಜ್ಞಾನ ವಸಂತ ಶೆಟ್ಟಿ, ಶ್ರೀ ಎಂ.ಗಂಗಾಧರ ರಾವ್, ಶ್ರೀಮತಿ ಉಮಾ,ಕೇಶವ ಕುಂದರ್, ನಿತ್ಯಾನಂದ ಬಿ.ಆರ್.ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ ಸಂಘಟನಾ…
ಕಾರ್ಕಳ : ಕಾರ್ಕಳದ ಗಣಿತ ನಗರ ಜ್ಞಾನಸುಧಾ ಕಾಲೇಜು ಸಭಾಂಗಣದಲ್ಲಿ 19ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 03-12-2023ರಂದು ನಡೆಯಿತು. ಈ ಸಮ್ಮೇಳನದಲ್ಲಿ ಸಾಂಸ್ಕೃತಿಕ ಸಮ್ಮೇಳನವನ್ನು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ ಸಮ್ಮೇಳನಗಳು ಮಕ್ಕಳಿಗೆ ಪ್ರೇರಣೆ ನೀಡುವ ಕ್ಷೇತ್ರವಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರೇರಣೆ, ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವವನ್ನು ಸಾರುವ ಕೆಲಸವಾಗಿದೆ, ಹೊಸ ಪೀಳಿಗೆಯ ಯುವ ಬರಹಗಾರರಿಗೆ ತಾಲೂಕು ಬರಹಗಾರರ ಸಮ್ಮೇಳನ ನಡೆಸುವ ಕಾರ್ಯವಾಗಲಿ ಮತ್ತು ಕಳೆದ ಬಾರಿ ನಡೆದ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನವನ್ನು ಸರಕಾರವು ಮುಂದುವರೆಸಲಿ” ಎಂದು ಹೇಳಿದರು. ಸಮ್ಮೇಳನ ಅಧ್ಯಕ್ಷ ಸೂಡ ಸದಾನಂದ ಶೆಣೈ ಮಾತನಾಡಿ, “ಭಾಷೆ ಹಾಗೂ ಸಾಹಿತ್ಯಗಳು ನಮ್ಮೆಲ್ಲರನ್ನೂ ಒಂದುಗೂಡಿಸುವ ಸಾಧನಗಳು, ಮುಖ್ಯವಾಗಿ ಇಲ್ಲಿ ತುಳು, ಕೊಂಕಣಿ, ಬ್ಯಾರಿ ಇತ್ಯಾದಿ ಭಾಷೆಗಳನ್ನು ಆಡುವವರ ಆಶ್ರಯದಲ್ಲಿ ಕನ್ನಡ ಸಾಹಿತ್ಯಕ್ಕೆ ಬಹಳ ಪ್ರೋತ್ಸಾಹವಿದೆ. ತುಳುನಾಡಿನಲ್ಲಿ ವಿವಿಧ ಭಾಷಿಗರ ನಡುವಿನ ಸಂಪರ್ಕ ಭಾಷೆಯೇ ಕನ್ನಡ, ಮುಂದಿನ ದಿನಗಳಲ್ಲಿ ಕನ್ನಡದ ಸ್ಥಾನವನ್ನು…
ಧಾರವಾಡ : ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರತಿಷ್ಠಾನ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ದಿನಾಂಕ 02-12-2023ರಂದು ‘ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮೃತಿ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮನೋವೈದ್ಯ ಆನಂದ ಪಾಂಡುರಂಗಿ ಮಾತನಾಡಿ “ಮನೋವಿಜ್ಞಾನದಲ್ಲಿ ಚಿಕಿತ್ಸಾ ವಿಧಾನಗಳ ಜೊತೆಗೆ ಪೂರಕ ಚಿಕಿತ್ಸಾ ವಿಧಾನ ಸಂಗೀತ. ಆತಂಕ ಮೊದಲಾದ ಮನೋಸಮಸ್ಯೆಗಳನ್ನು ಸಂಗೀತ ಚಿಕಿತ್ಸೆಯಿಂದ ಗುಣಪಡಿಸಬಹುದು. ಮಕ್ಕಳಲ್ಲಿ ಏಕಾಗ್ರತೆ ಕೊರತೆ, ಮೊದಲಾದ ಸಮಸ್ಯೆಗಳು ಇದ್ದರೆ ಸಂಗೀತ, ಗಾಯನ ಅಭ್ಯಾಸದಲ್ಲಿ ತೊಡಗಿಸಿದರೆ ಅವುಗಳನ್ನು ಪರಿಹರಿಸಬಹುದು. ಸಂಗೀತವು ಶೈಕ್ಷಣಿಕ, ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿ. ಪೋಷಕರು ಮಕ್ಕಳಲ್ಲಿ ಸಂಗೀತದ ಹವ್ಯಾಸವನ್ನು ರೂಢಿಸಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅದು ಸಹಕಾರಿ. ಸಂಗೀತ ಆಲಾಪನೆ ಉಲ್ಲಾಸ, ನೆಮ್ಮದಿ ನೀಡುತ್ತದೆ” ಎಂದು ಹೇಳಿದರು. ವಯೋಲಿನ್ ವಾದಕರಾದ ಬಿ.ಎಸ್. ಮಠ ಮತ್ತು ಅಕ್ಕಮಹಾದೇವಿ ಹಿರೇಮಠ ದಂಪತಿಗೆ ‘ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮೃತಿ ಪ್ರಶಸ್ತಿ’ ಹಾಗೂ ತಬಲಾ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇವರ ವತಿಯಿಂದ 2023-24ನೇ ಸಾಲಿನ ಪಾಕ್ಷಿಕ ತಾಳಮದ್ದಳೆಯ ಕೂಟವು ಪಾರ್ತಿಸುಬ್ಬ ವಿರಚಿತ ‘ಯಜ್ಞ ಸಂರಕ್ಷಣೆ’ ಎಂಬ ಆಖ್ಯಾನದೊಂದಿಗೆ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ದಿನಾಂಕ 28-11-2023ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಮುರಳೀಧರ ಕಲ್ಲೂರಾಯ, ತಾರಾನಾಥ ಸವಣೂರು ಮತ್ತು ಮಾ.ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ದಶರಥ), ದುಗ್ಗಪ್ಪ ನಡುಗಲ್ಲು (ವಸಿಷ್ಠ ), ಗುಡ್ಡಪ್ಪ ಬಲ್ಯ (ವಿಶ್ವಾಮಿತ್ರ), ಕಿಶೋರಿ ದುಗ್ಗಪ್ಪ ನಡುಗಲ್ಲು ಮತ್ತು ಅಚ್ಯುತ ಪಾಂಗಣ್ಣಾಯ (ಶ್ರೀ ರಾಮ), ಚಂದ್ರಶೇಖರ ಭಟ್ ಬಡೆಕ್ಕಿಲ (ತಾಟಕಿ), ಹರಿಣಾಕ್ಷಿ ಜೆ. ಶೆಟ್ಟಿ (ಮಾರೀಚ) ಮಾತು ಶಾರದಾ ಅರಸ್ (ಸುಬಾಹು) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ “ಶ್ರೀ ಆಂಜನೇಯ-೫೫”ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಮತ್ತು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.…
ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಕನ್ನಡ ಸಂಘ, ಸಂಸ್ಕೃತ ಸಂಘ, ಲಲಿತ ಕಲಾ ಸಂಘ ಮತ್ತು ಐ.ಕ್ಯೂ.ಎ.ಸಿ. ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಕನಕ ದಾಸ ಜಯಂತಿ ದಾಸ ಸಾಹಿತ್ಯ- ಒಳ ನೋಟಗಳು ಎನ್ನುವ ವಿಚಾರ ಸಂಕಿರಣ ದಿನಾಂಕ 30-11-2023ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಪುತ್ತೂರು ಸಮಿತಿಯ ಅಧ್ಯಕ್ಷ ಗಣರಾಜ ಕುಂಬ್ಳೆ ಮಾತನಾಡಿ “ಭಾರತೀಯರು ಎಂದರೆ ಜ್ಞಾನದ ಬೆಳಕನ್ನು ಹೆಚ್ಚು ಆನಂದಿಸುವವರು. ನಮ್ಮ ರಾಷ್ಟ್ರದ ಸುದೀರ್ಘ ಇತಿಹಾಸ ಗಮನಿಸಿದರೆ ನಮಗೆ ಬೇಕಾದ ಬೆಳಕು ನಮ್ಮಲ್ಲಿದೆ. ನಾವು ಇಡೀ ಜಗತ್ತಿಗೆ ಬೆಳಕು ಕೊಡುವಷ್ಟು ಅರಿತವರು ಆದರೆ ಇದನ್ನು ಈಗ ಪ್ರತಿಯೊಬ್ಬರು ಮರೆತಿದ್ದಾರೆ. ಸಾಹಿತ್ಯ ಬೇರೆ ಬೇರೆ ಭಾಷೆಗಳಲ್ಲಿ ಹಂಚಿ ಹೋಗಿರಬಹುದು ಆದರೆ ಅದರ ಮೂಲ ಭಾರತವೆ” ಎಂದು ತಿಳಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಕಾರ್ಯಕ್ರಮವನ್ನು…
ತೀರ್ಥಹಳ್ಳಿ: ತೀರ್ಥಹಳ್ಳಿ 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 29-11-2023ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಹಾಗೂ ಚಿಂತಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ “ಕನ್ನಡದ ಕಂಪನ್ನು ಜಗತ್ತಿಗೆ ಸಾರಿದ ಜಗದ ಕವಿ ಕುವೆಂಪು ಇವರು ಸಾಹಿತ್ಯ ಲೋಕಕ್ಕೆ ಆದರ್ಶವಾಗಿದ್ದಾರೆ. ಪ್ರಾದೇಶಿಕ ಸಂಸ್ಕೃತಿ ಅತಿ ಮುಖ್ಯವಾಗಿದೆ. ಅಂತಹ ಸಂಸ್ಕೃತಿಯನ್ನು ಸಾರಿದ್ದು ತೀರ್ಥಹಳ್ಳಿ ಹಾಗೂ ಕುವೆಂಪು ಎನ್ನುವುದನ್ನು ಮರೆಯಬಾರದು. ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳನ್ನು ವಿಶ್ವದಗಲ ಸಾರಿದ್ದು ಕನ್ನಡ ಸಾಹಿತ್ಯ. ಆನೇಕ ಚಳುವಳಿಗಳು ಹುಟ್ಟಿಕೊಂಡದ್ದು ಕನ್ನಡದ ನೆಲದಲ್ಲಿ. ದೇಶಕ್ಕೆ ಹಾಗೂ ಜಗತ್ತಿಗೆ ಆನೇಕ ಮಾದರಿಗಳನ್ನು ನೋಡ ನೀಡಿದ ಕನ್ನಡ ಜಗತ್ತು ವಿಶಿಷ್ಟ ಹಾಗೂ ವಿಭಿನ್ನ. ಸಮಾಜವಾದಿ ಚಿಂತನೆಗಳನ್ನು ಬಿಂಬಿಸಿದ ನೆಲ ಇದಾಗಿದೆ. ಪ್ರಸ್ತುತವಾಗಿ ಕಂಡುಬರುತ್ತಿರುವುದು ಸಾಂಸ್ಕೃತಿಕ ಮರೆವು ಎನ್ನುವ ಬಿಕ್ಕಟ್ಟು ನಮ್ಮನ್ನೆಲ್ಲ ಕಾಡುತ್ತಿದೆ. ಆಧುನಿಕತೆಯ ನೆಪದಲ್ಲಿ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಅಭಿವೃದ್ಧಿಯ ಶಾಪದಿಂದ ಜೀವ ಸಂಕುಲ ನಾಶದ ಹಂತಕ್ಕೆ ಬರುತ್ತಿದೆ. ನಮ್ಮ ಉಳಿವಿಗೆ ನಾವೇ ಮುಂದಾಗಬೇಕು” ಎಂದರು.…