Subscribe to Updates
Get the latest creative news from FooBar about art, design and business.
Author: roovari
ಕೊಣಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಮಂಜನಾಡಿ ಇವರ ಆಶಯದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 16 ಸೆಪ್ಟೆಂಬರ್ 2024 ರಂದು ಮಂಜನಾಡಿಯ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಂ ಹರೇಕಳ ಮಾತನಾಡಿ “ಯಕ್ಷಗಾನವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಇದರಿಂದ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಾಗುವುದು ಮಾತ್ರವಲ್ಲದೆ, ಮನರಂಜನೆಯೊಂದಿಗೆ ಸಂಸ್ಕಾರವನ್ನು ನೀಡುವ ಶ್ರೀಮಂತ ಕಲೆಯಾಗಿದೆ. ಈ ಕಲೆಯನ್ನು ವಿದ್ಯಾರ್ಥಿಗಳು ಎಳವೆಯಲ್ಲಿಯೇ ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯ.” ಎಂದು ಅಭಿಪ್ರಾಯ ಪಟ್ಟರು. ನಾಟ್ಯ ತರಗತಿಯನ್ನು ಉದ್ಘಾಟಿಸಿದ ಕ್ಷೇತ್ರದ ಅರ್ಚಕರಾದ ರಾಘವೇಂದ್ರ ರಾವ್ ಮಂಜನಾಡಿ ಮಾತನಾಡಿ “ಕರಾವಳಿಯ ಗಂಡು ಕಲೆಯಾದ ಯಕ್ಷಗಾನದ ನಾಟ್ಯ ತರಬೇತಿಯನ್ನು ಹಮ್ಮಿಕೊಳ್ಳಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರು ಸಹಕರಿಸುತ್ತಿರುವುದು ಶ್ಲಾಘನೀಯ, ಇದನ್ನು ಈ ಪರಿಸರದ…
ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 17ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಜ್ಯೋತಿಷಿ ಗಾಯಕ ಶ್ರೀ ಉದಯಕುಮಾರ್ ಮಾತನಾಡಿ “ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು” ಎಂದು ಅಭಿಪ್ರಾಯಪಟ್ಟರು. ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮ.ನ.ಪಾ. ಮಾಜಿ ಮಹಾ ಪೌರರಾದ ದಿವಾಕರ್ ಪಾಂಡೇಶ್ವರ್, ಮ.ನ.ಪಾ. ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ. ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್,…
ಮಂಗಳೂರು : ಹಿಂದೂ ವಿದ್ಯಾದಾಯಿನೀ ಸಂಘ (ರಿ) ಸುರತ್ಕಲ್ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು ಸುರತ್ಕಲ್ನ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘವು ದಿನಾಂಕ 20 ಸೆಪ್ಟೆಂಬರ್ 2024ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೋಟರಾಕ್ಟ್ ಸಮಿತಿ ಅಧ್ಯಕ್ಷೆ ರೋ. ಯಶೋಮತಿ ಮಾತನಾಡಿ “ದೇಶದ ಭವಿಷ್ಯದ ನಾಯಕರು ರೂಪುಗೊಳ್ಳುವುದರಲ್ಲಿ ವಿದ್ಯಾ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಕೆಗಳಲ್ಲಿ ಶ್ರದ್ಧೆ ಉತ್ಸಾಹಗಳಿಂದ ಭಾಗವಹಿಸುವ ಮೂಲಕ ತಮ್ಮೊಳಗಿನ ಸುಪ್ತ ಪ್ರತಿಭೆಗಳನ್ನು ಅನಾವರಣಗಳಿಸಬೇಕು. ಕಲಾ ಲೋಕದಲ್ಲಿ ಮಿನುಗುತ್ತಿರುವ ಅನೇಕ ಪ್ರತಿಭೆಗಳಿಗೆ ಕಾಲೇಜಿನ ವೇದಿಕೆ ಅವರ ಕಲಾ ಪ್ರಯಾಣಕ್ಕೆ ಮೊದಲ ವೇದಿಕೆಯಾಗಿದ್ದು ಗೋವಿಂದ ದಾಸ ಕಾಲೇಜಿನ ಲಲಿತಕಲಾ ಸಂಘವು ಅನೇಕ ಪ್ರತಿಭಾವಂತ ಕಲಾವಿದರನ್ನು ಕಲಾರಂಗಕ್ಕೆ ನೀಡುತ್ತಿರುವುದು ಶ್ಲಾಘನೀಯ” ಎಂದು ನುಡಿದರು. “ಯುವ ಜೀವನದ ಪ್ರತಿಯೊಂದು ಹೆಜ್ಚೆಯು ಮುಂದಿನ ಬದುಕಿಗೆ ಮಹತ್ವದ್ದಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಎಲ್ಲಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ” ಎಂದು ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.…
ಮಂಗಳೂರು : ಗಾಂಧಿ ವಿಚಾರ ವೇದಿಕೆ ನೇತೃತ್ವದಲ್ಲಿ ಆರ್. ಜಿ. ಫೌಂಡೇಶನ್ ಮತ್ತು ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಇವರ ಸಹಯೋಗದಲ್ಲಿ ದಿನಾಂಕ 22 ಸೆಪ್ಟೆಂಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆ ಇವರ ಆತ್ಮಕಥೆ ‘ಚಿಮಣಿ ಬೆಳಕಿನಿಂದ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪುಸ್ತಕ ಬಿಡುಗಡೆಯನ್ನು ಮಾಡಲಿರುವರು. ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ ಜಿ. ಭಿಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಲೇಖಕಿ ಶ್ರೀಮತಿ ಭುವನೇಶ್ವರಿ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಚಿಂತಕ ಅರವಿಂದ ಚೊಕ್ಕಾಡಿಯವರು ಪುಸ್ತಕ ಪರಿಚಯವನ್ನು ಮಾಡಲಿದ್ದಾರೆ. ಸಭಾ ಕಾರ್ಯಕ್ರಮಕ್ಕಿಂತ ಮೊದಲು ಭಾನುಮತಿ ಹೆಗಡೆ, ಸಹನಾ ಭಟ್, ಹುಸೇನ್ ಕಾಟಿಪಳ್ಳ ಇವರಿಂದ ಎಂ.ಜಿ. ಹೆಗಡೆಯವರು ರಚಿಸಿದ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಬ್ಯಾರಿ…
ಮಂಗಳೂರು : ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಭಾವಗೀತೆಗಳ ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ನಡೆಯಿತು. ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಎಂ. ಇವರು ಸ್ಪರ್ಧೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಇವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ದೇವಿ ಪ್ರಸಾದ್ ಹಾಗೂ ಲಲಿತಕಲಾ ಸಂಘದ ಹಾಗೂ ಸ್ಪರ್ಧೆಗಳ ಸಂಯೋಜಕ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು. ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು. ಜಯಲಕ್ಷ್ಮೀ ಹಾಗೂ…
ಗೋಣಿಕೊಪ್ಪಲು : ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕ.ಸಾ.ಪ. ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ದಿನಾಂಕ 11 ಅಕ್ಟೋಬರ್ 2024ರಂದು ಬೆಳಗ್ಗೆ 10-00 ಗಂಟೆಗೆ ಗೋಣಿಕೊಪ್ಪಲು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿಯ ಅಧ್ಯಕ್ಷರಾಗಿರುವ ಕೋಳೆರ ದಯಾ ಚಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ, ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ದಿನಾಂಕ 28 ಸೆಪ್ಟೆಂಬರ್ 2024ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು. ಈ ಬಾರಿ ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ…
ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು, ಕನ್ನಡ ಸಂಘ ವಿಶ್ವ ವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಆಶ್ರಯದಲ್ಲಿ ಚಂದ್ರಹಾಸ ಕಣಂತೂರು ಇವರ ತುಳುನಾಡಿನ ದೈವಾರಾಧನೆಯ ಕತೆಗಳ ‘ಪಡಿಯಕ್ಕಿ’ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 28 ಸೆಪ್ಟೆಂಬರ್ 2024ರಂದು ಅಪರಾಹ್ನ 3-30 ಗಂಟೆಗೆ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕವಿಗಳು ಮತ್ತು ನಿವೃತ್ತ ಉಪನ್ಯಾಸಕರಾದ ಶ್ರೀ ಕೆ.ಟಿ. ಆಳ್ವ ಇವರ ಅಧ್ಯಕ್ಷತೆಯಲ್ಲಿ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಚಾಲಕರಾದ ಪ್ರೊ. ತುಕಾರಾಮ ಪೂಜಾರಿ ಇವರು ಕೃತಿ ಬಿಡುಗಡೆ ಮಾಡಲಿರುವರು. ಉಪನ್ಯಾಸಕರಾದ ಡಾ. ಅರುಣ್ ಉಳ್ಳಾಲ ಇವರು ಕೃತಿ ಸಮೀಕ್ಷೆ ನಡೆಸಲಿದ್ದಾರೆ.
ಕಾಸರಗೋಡು : ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರಿಯ ನಾಟ್ಯ ಗುರುಗಳಾದ ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ಯಕ್ಷಗಾನ ಶಿಕ್ಷಕರಿಗೆ ಯಕ್ಷ ಶಿಕ್ಷಣವನ್ನು ಸಿರಿ ಬಾಗಿಲು ಪ್ರತಿಷ್ಠಾನದಲ್ಲಿ ದಿನಾಂಕ 20 ಸೆಪ್ಟೆಂಬರ್ 2024ರಂದು ಆರಂಭಿಸಲಾಯಿತು. ಕಾರ್ಯಕ್ರಮಕ್ಕೆ ಅಮೇರಿಕಾದಿಂದ ಆಗಮಿಸಿದ ಕಲಾಪೋಷಕರಾದ ಶ್ರೀ ದಿನೇಶ ಶ್ರೀನಿವಾಸರಾವ್ ಮತ್ತು ಪಣಂಬೂರು ವೆಂಕಟರಾಯ ಐತಾಳರ ಪುತ್ರಿ ಶ್ರೀಮತಿ ಮನೋರಮಾ ದಿನೇಶ ಶ್ರೀನಿವಾಸರಾವ್ ಹಾಗೂ ಕರ್ನಾಟಕ ಬ್ಯಾಂಕಿನ ಡಿ.ಜಿ.ಎಂ. ಶ್ರೀ ವಸಂತ ಹೇರ್ಳೆ ಇವರುಗಳು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಶ್ರೀಮತಿ ಮನೋರಮಾ ದಿನೇಶ ಶ್ರೀನಿವಾಸರಾವ್ ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ “ಯಕ್ಷಗಾನ ಕ್ಷೇತ್ರಕ್ಕೆ ಬೃಹತ್ ಕೊಡುಗೆ ನೀಡಿದ ಪ್ರತಿಷ್ಠಾನ ಮತ್ತು ಪ್ರತಿಷ್ಠಾನದಲ್ಲಿರುವ ಪಣಂಬೂರು ವೆಂಕಟ್ರಾಯ ಐತಾಳರ ಹೆಸರಿನ ತೆಂಕುತಿಟ್ಟು ಯಕ್ಷಗಾನ ಮ್ಯೂಸಿಯಂ ಯಕ್ಷಗಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಿದೆ. ಸಾಂಸ್ಕೃತಿಗೆ ಭವನಕ್ಕೆ ಅಧ್ಯಯನಕ್ಕೆ ಬರುವವರಿಗೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ” ಎಂದು ತಿಳಿಸಿದರು. ಸಾಂಸ್ಕೃತಿಕ ವಲಯಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್…
ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 60ನೇ ವರ್ಷದಲ್ಲಿ, ಇದೇ ನವಂಬರ್ ತಿಂಗಳ 3ನೇ ವಾರದಲ್ಲಿ ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ. ಮಲ್ಪೆ ಮಧ್ವರಾಜ್ ಸ್ಮಾರಕ ರಾಜ್ಯ ಮಟ್ಟದ 45ನೇ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸಲಿದೆ. ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಠ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ.35,000/-, ರೂ.25.000/-, ರೂ.15.000/-ದ ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ,…
ಉಡುಪಿ : ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದಿಂದ ಅಭಿನವ ಪಾರ್ತಿಸುಬ್ಬ ಸೀತಾನದಿ ಗಣಪಯ್ಯ ಶೆಟ್ಟಿ ಅವರ 37ನೇ ವರ್ಷದ ಸಂಸ್ಮರಣೆ ಸಂದರ್ಭದಲ್ಲಿ ನೀಡುವ ಪ್ರಶಸ್ತಿಗೆ ರಾಜ್ಯಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಶ್ರೀ ಕೆ. ಗೋವಿಂದ ಭಟ್ ಸೂರಿಕುಮೇರು ಅವರು ಆಯ್ಕೆಯಾಗಿದ್ದಾರೆ ಎಂಬುದಾಗಿ ಪ್ರತಿಷ್ಠಾನದ ಅಧ್ಯಕ್ಷರಾದ ಪಳ್ಳಿ ಕಿಶನ್ ಹೆಗ್ಡೆ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 07 ಅಕ್ಟೋಬರ್ 2024ರ ಸೋಮವಾರ ಸಂಜೆ ಘಂಟೆ 4.30ಕ್ಕೆ ಉಡುಪಿಯ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೆ. ಗೋವಿಂದ ಭಟ್ ಅವರು ಉನ್ನತ ಶೈಲಿಯ ನಾಟ್ಯ, ಶ್ರುತಿಬದ್ಧ ಮಾತಿನ ಪ್ರಭುದ್ಧತೆಯಿಂದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾಗಿ ಸಕೀರ್ತಿ ಗಳಿಸಿದವರು. ಶ್ರೀಯುತರು ಶ್ರೀ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಪ್ರದಾನ ಕಲಾವಿದರಾಗಿ ಮೆರೆದವರು. ಸುಮಾರು 84 ವರ್ಷ ಪ್ರಾಯದ ಈ ಹಿರಿಯರು ಸುಮಾರು 60ವರ್ಷ ಧರ್ಮಸ್ಥಳ ಒಂದೇ ಮೇಳದಲ್ಲಿ ತಿರುಗಾಟ ನೆಡೆಸಿ ದಾಖಲೆ ನಿರ್ಮಿಸಿದವರು. ಪ್ರಸಿದ್ಧ ಕಲಾವಿದರಾದ ಕುರಿಯ ವಿಠಲ್…