Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಆಕೃತಿ ಕನ್ನಡ ಪ್ರಕಾಶನ, ಬೆಂಗಳೂರು ಇದರ ವತಿಯಿಂದ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹೂಲಿ ಶೇಖರ್ 70 ಪ್ರಯುಕ್ತ ‘ಹೂಲಿ ರಂಗ ಶಿಖರ’ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 18 ಆಗಸ್ಟ್ 2024ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ದೊಡ್ಡಕಲ್ಲ ಸಂದ್ರದ ಶಂಕರ ಫೌಂಡೇಷನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಖ್ಯಾತ ರಂಗ ನಿರ್ದೇಶಕರು ಮತ್ತು ಲೇಖಕರಾದ ಡಾ. ವಿಜಯಮ್ಮ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ರಂಗ ಭೂಮಿ ಮತ್ತು ಚಲನಚಿತ್ರ ನಿರ್ದೇಶಕರಾದ ಶ್ರೀ. ಟಿ.ಎಸ್. ನಾಗಾಭರಣ ಇವರು ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಲಿರುವರು. ಖ್ಯಾತ ರಂಗ ಸಂಘಟಕರಾದ ಶ್ರೀ ಜಿ. ಶ್ರೀನಿವಾಸ (ಕಪ್ಪಣ್ಣ) ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಬೆಂಗಳೂರಿನ ಖ್ಯಾತ ಲೇಖಕರಾದ ಡಾ. ಗಿರಿಜಾ ಶಾಸ್ತ್ರಿ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರದೀಪ್ ಆರ್. ಇವರಿಂದ ರಂಗಗೀತೆ ಗಾಯನ ನಡೆಯಲಿದೆ.
ಬೆಂಗಳೂರು : ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟ ಕರ್ನಾಟಕ ಇದರ ವತಿಯಿಂದ ಬೆಂಗಳೂರು ಕೇಂದ್ರ ವಲಯದ ಉದ್ಘಾಟನೆಯು ದಿನಾಂಕ 10 ಆಗಸ್ಟ್ 2024ರಂದು ರಾಜಾಜಿನಗರ ಶ್ರೀ ರಾಮ ಮಂದಿರದಲ್ಲಿ ನಡೆಯಿತು. ಶ್ರೀ ರಾಮ ಮಂದಿರದ ಅಧ್ಯಕ್ಷರಾದ ಶ್ರೀ ಕೆ.ಎಸ್. ಶ್ರೀಧರ, ಒಕ್ಕೂಟದ ಗೌರವಾಧ್ಯಕ್ಷರಾದ ಕರ್ನಾಟಕ ಕಲಾಶ್ರೀ ವಿದ್ವಾನ್ ಕೆ.ಎಸ್. ಮೋಹನ ಕುಮಾರ ಮತ್ತು ವಲಯದ ಸಂಚಾಲಕಿ ವಿದುಷಿ ಐಶ್ವರ್ಯ ರಮೇಶ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಗೀತ ನೃತ್ಯ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಕೋರಿದರು. ವಿದ್ವಾನ್ ಶ್ರೀ ಡಾ. ಎಂ.ವಿ. ಶ್ರೀನಿವಾಸ ಮೂರ್ತಿಯವರ ಗಾಯನ ಅತ್ಯಂತ ಸೊಗಸಾಗಿ ಮೂಡಿ ಬಂದಿತು. ಪಿಟೀಲಿನಲ್ಲಿ ಮಾಸ್ಟರ್ ಶ್ರೀ ಹರಿ ಸಂಜೀವ್, ಮೃದಂಗ ವಿದ್ವಾನ್ ಶ್ರೀ ಬೆಟ್ಟ ವೆಂಕಟೇಶ್ ಮತ್ತು ಖಂಜೀರದಲ್ಲಿ ವಿದ್ವಾನ್ ಸುಬ್ರಹ್ಮಣ್ಯ ಮೋಹಿತೆಯವರು ಅತ್ಯುತ್ತಮವಾಗಿ ಸಹಕರಿಸಿದರು.
ಅಸ್ಸಾಂ : ಕರಾವಳಿಯ ನೃತ್ಯ ಕಲಾವಿದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರು ಅಸ್ಸಾಂನ ಲಬ್ಡಿಂಗ್ ಸಿಟಿಯ ಬಿಧಾಣಪಲ್ಲಿ ಸ್ವರಾಜ್ ಮಂಚ್ ಇಲ್ಲಿ ದಿನಾಂಕ 12 ಆಗಸ್ಟ್ 2024ರಿಂದ 14 ಆಗಸ್ಟ್ 2024ರವೆರೆಗೆ ನೃತ್ಯ ಪ್ರದರ್ಶನ ಮತ್ತು ಮೂರು ದಿನಗಳ ಭರತನಾಟ್ಯ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ. ಮಾನಶಾ ಡ್ಯಾನ್ಸ್ ಅಕಾಡೆಮಿಯ ನೃತ್ಯಗುರು ಶ್ರೀ ಶಿವದಾಸ್ ರಿಯಾಂಶ್ ಇವರು ಈ ಕಾರ್ಯಾಗಾರ ಮತ್ತು ನೃತ್ಯ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಮಂಜುನಾಥ್ ಇವರ ಜೊತೆಗೆ ಕೋಲ್ಕತ್ತಾದ ನೃತ್ಯ ಕಲಾವಿದ ಶ್ರೀ ಎನ್. ದೇಬಾಶಿಷ್ ನಾಶ್ಕರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಬೆಂಗಳೂರು : ಸಪ್ತಕ ಬೆಂಗಳೂರು ಅರ್ಪಿಸುವ ‘ಸ್ವರ ಸಂಧ್ಯಾ’ ಕಾರ್ಯಕ್ರಮವನ್ನು ದಿನಾಂಕ 15-08-2024ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಬಸವನಗುಡಿ ಶ್ರೀ ಬಿ.ಪಿ. ವಾಡಿಯಾ ರೋಡ್ ಇಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುಣೆಯ ಡಾ. ಶಾಂತನು ಗೋಖಲೆ ಸಂತೂರ್ ಹಾಗೂ ಯು.ಎಸ್.ಎ.ಯ ಶ್ರೀ ರಿತ್ವಿಕ್ ಇವರ ತಬಲಾ ವಾದನ ಮತ್ತು ಶ್ರೀ ಸಮೀರ ವಿ. ಕುಲಕರ್ಣಿ ಇವರ ಗಾಯನಕ್ಕೆ ಶ್ರೀ ಯೋಗೀಶ ಬಟ್ಟ ತಬಲಾದಲ್ಲಿ ಶ್ರೀ ಸಮೀರ ಹವಾಲ್ದಾರ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರವು ಸ್ವಾತಂತ್ರೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉಡುಪಿ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ದಿನಾಂಕ 08 ಆಗಸ್ಟ್ 2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಇವರು ಮಾತನಾಡಿ “ದೇಶ ಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್ ನಲ್ಲಿ ಆಯೋಜಿಸಲಾದ ದೇಶ ಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ” ಎಂದು ಹೇಳಿದರು. ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (ಎಮ್.ಐ.ಸಿ.) ಸಂಸ್ಥೆಯ ನಿರ್ದೆಶಕರಾದ ಡಾ. ಪದ್ಮಾರಾಣಿಯವರು…
ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ (ರಿ.) ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಸ್ತುತ ಪಡಿಸುವ ವಿಶೇಷ ಕಾರ್ಯಕ್ರಮ ‘ಉದಯರಾಗ – 54’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 15-08-2024 ಭಾನುವಾರ ಪೂರ್ವಾಹ್ನ ಗಂಟೆ 6-00ಕ್ಕೆ ನಡೆಯಲಿದೆ. ಶೃಂಗೇರಿಯ ಸೀತಾಪ್ರಜ್ಞಾ ಡಿ.ಎಸ್. ಇವರ ಹಾಡುಗಾರಿಕೆಗೆ ಮಂಗಳೂರಿನ ಧನಶ್ರೀ ಶಬರಾಯ ವಯಲಿನ್, ಪುತ್ತೂರಿನ ಅಚಿಂತ್ಯಕೃಷ್ಣ ಮೃದಂಗ ಹಾಗೂ ಇನ್ನಂಜೆ ಕಾರ್ತಿಕ್ ಭಟ್ ಖಂಜೀರದಲ್ಲಿ ಸಾಥ್ ನೀಡಲಿದ್ದಾರೆ. ಭಾರತೀಯ ಭೂ ಸೇನೆಯ ನಿವೃತ್ತ ಯೋಧರಾದ ಶ್ರೀ ಸಚ್ಚಿದಾನಂದ ಕೆ. ಹೊಸಬೆಟ್ಟು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಮೂಡುಬಿದಿರೆ : ಕನ್ನಡ ಭವನದಲ್ಲಿ ‘ಕುರಲ್ ಕಲಾವಿದೆರ್ ಬೆದ್ರ’ ಅಭಿನಯದ ಪ್ರಸಾದ್ ಆಳ್ವ ಸಾರಥ್ಯದ ‘ಯೇರ್’ ತುಳು ನಾಟಕದ ಪ್ರಥಮ ಪ್ರದರ್ಶನದ ಉದ್ಘಾಟನಾ ಸಮಾರಂಭವು ದಿನಾಂಕ 04 ಆಗಸ್ಟ್ 2024ರಂದು ನಡೆಯಿತು. ಈ ಸಮಾರಂಭವನ್ನು ಉದ್ಘಾಟಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ ಆಳ್ವ ಇವರು ಮಾತನಾಡಿ “ತುಳು ನಾಟಕ, ಸಿನಿಮಾ, ಯಕ್ಷಗಾನ ಸೇರಿದಂತೆ ಜಿಲ್ಲೆಯ ವೈವಿಧ್ಯ ಕಲಾ ಪ್ರಕಾರಗಳಿಂದ ತುಳು ಭಾಷೆಯ ಮೇಲಿನ ಗೌರವ ಹೆಚ್ಚಿದೆ. 1933ರಲ್ಲಿ ಪ್ರದರ್ಶನಗೊಂಡ ‘ಮದ್ಮೆ’ ತುಳು ನಾಟಕದಿಂದ ಆರಂಭಗೊಂಡು ಇತ್ತೀಚಿನವರೆಗೆ ಸಾಕಷ್ಟು ತುಳು ನಾಟಕಗಳು ಜಿಲ್ಲೆಯಲ್ಲಿ ಪ್ರದರ್ಶನಗೊಂಡಿವೆ. ದೊಡ್ಡಣ್ಣ ಶೆಟ್ಟಿ, ಸಂಜೀವ ದಂಡಕೇರಿಯಂತಹ ಪ್ರಬುದ್ಧ ಕಲಾವಿದರ ಪ್ರಯತ್ನದಿಂದ ತುಳು ನಾಟಕಗಳು ಮೇಲ್ದರ್ಜೆಗೇರಿದವು. ವಿಜಯ ಕುಮಾರ್ ಕೊಡಿಯಾಲ್ ಬೈಲು, ದೇವದಾಸ್ ಕಾಪಿಕಾಡು ಇನ್ನಿತರ ಕಲಾವಿದರು, ವಿವಿಧ ನಾಟಕ ತಂಡಗಳು ತುಳು ನಾಟಕಗಳಿಗೆ ಹೊಸ ರೂಪ ಕೊಟ್ಟು ಬೆಳೆಸಿರುವುದು ತುಳು ನಾಡಿಗೆ ಹೆಮ್ಮೆ” ಎಂದು ಹೇಳಿದರು. ಉದ್ಯಮಿ ಶ್ರೀಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಚೌಟರ…
ಬೆಂಗಳೂರು : ಲಯನ್ಸ್ ಇಂಟರ್ನ್ಯಾಷನಲ್, ಕನ್ನಡ ಮತ್ತು ಸಂಸ್ಕೃತಿ ತಂಡ ಜಿಲ್ಲೆ 317F ಮತ್ತು ರಂಗಚಂದಿರ ಟ್ರಸ್ಟ್ ಸಹಯೋಗದಲ್ಲಿ “ಕಾರ್ಮಿಕ, ರಂಗ ನಿರ್ದೇಶಕ ಮೈಕೋ ಶಿವಣ್ಣ ನೆನಪು” ನಿಮಿತ್ತ ರಂಗಸಂಗೀತ, ರಂಗಗೌರವ, ಪುಸ್ತಕ ಬಿಡುಗಡೆ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮಗಳನ್ನು ಬೆಂಗಳೂರಿನ ಎನ್.ಆರ್.ಕಾಲೋನಿಯ ಡಾ. ಸಿ.ಅಶ್ವತ್ಥ್ ಕಲಾಭವನದಲ್ಲಿ ದಿನಾಂಕ 15 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ರಂಗಭೂಮಿ ಕಲಾವಿದರಾದ ಶ್ರೀ ಚಂದ್ರಶೇಖರ್ ಎಸ್.ಎಸ್. ಹಾಗೂ ಸಮನ್ವಯ ಸೋಮಶೇಖರ್ ಇವರುಗಳಿಗೆ ರಂಗಗೌರವ ಸಲ್ಲಿಸಲಾಗುತ್ತದೆ. ಡಾ. ಬೇಲೂರು ರಘುನಂದನ್ ಇವರ ನಿರ್ದೇಶನದ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರ ಜೀವನಾಧಾರಿತ ನಾಟಕ “ಸಾಲುಮರಗಳ ತಾಯಿ ತಿಮ್ಮಕ್ಕ” ಪ್ರದರ್ಶನಗೊಳ್ಳಲಿದೆ. ಅಂಕುರ ಮಂಜುನಾಥ್ ಅವರಿಂದ ರಂಗಸಂಗೀತ ಇರುತ್ತದೆ. ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಎನ್.ಆರ್. ಹೆಗಡೆ ವಹಿಸಲಿದ್ದು, ಲಯನ್ ಸಿ.ಎಂ. ನಾರಾಯಣ ಸ್ವಾಮಿ, ಶ್ರೀ ಮಾಲತೇಶ್ ಎನ್. ಕೊಡ್ಲಿಯಾರ್, ರಂಗಚಂದಿರ ಗೌರವಾಧ್ಯಕ್ಷ ಆರ್.ಕೆ. ಹೆಗಡೆ, ಅಧ್ಯಕ್ಷೆ ಡಾ. ಪದ್ಮ, ಆರ್. ನರೇಂದ್ರ ಬಾಬು, ಬೈಯ್ಯಪ್ಪನಹಳ್ಳಿ ನಾಗರಾಜು ಹಾಗೂ…
ಮಂಗಳೂರು : ಕೊಂಕಣಿ ಭಾಷೆಗೆ 20 ಆಗಸ್ಟ್ 1992ರಂದು ಸಾಂವಿಧಾನಿಕ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆಯು 20 ಆಗಸ್ಟ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ಕೊಂಕಣಿ ಭಾಷಾ ಮಂಡಳ(ರಿ.) ಇವರ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕೊಂಕಣಿ ಸಂಘ ಸಂಸ್ಥೆಗಳು ಭಾಗವಹಿಸಲಿದೆ. ಅಂದು ಬೆಳಿಗ್ಗೆ ಕೊಂಕಣಿ ದ್ವಜಾರೋಹಣದ ಮೂಲಕ ಕಾರ್ಯಕ್ರಮ ಚಾಲನೆಗೊಂಡು ಬಳಿಕ ಹೈಸ್ಕೂಲ್ ವಿಭಾಗ ಹಾಗೂ ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೊಂಕಣಿ ಸಾಂಸ್ಕೃತಿಕ ವೈಭವದ ವಿವಿಧ ಸ್ರ್ಧೆಗಳು ನಡೆಯಲಿವೆ. ಅಪರಾಹ್ನ ಘಂಟೆ 4.30ರಿಂದ ಕೊಂಕಣಿ ಮಾನ್ಯತಾ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ಎಸ್. ತಂಗಡಗಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ವೈಭವದ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಣೆ ನಡೆಯಲಿದ್ದು, ಬಳಿಕ ವಿವಿಧ ಕೊಂಕಣಿ ಜಾನಪದ ಕಲಾತಂಡಗಳಿಂದ ಸಾಂಸ್ಕೃತಿಕ ವಿನೋದಾವಳಿ ನಡೆಯಲಿದೆ.
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯಿಂದ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರಿಗೆ ನೀಡುವ ಜೀವಮಾನ ಸಾಧನೆ ಗೌರವ ಪ್ರಶಸ್ತಿಗೆ ನಟಿ ಉಮಾಶ್ರೀ, ನಾಟಕಕಾರರಾದ ಎಚ್. ಎಸ್. ಶಿವಪ್ರಕಾಶ್ ಮತ್ತು ಕೋಟಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. 08 ಆಗಸ್ಟ್ 2024ರ ಗುರುವಾರ ಮೂರು ವರ್ಷಗಳ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾದವರ ಹೆಸರು ಘೋಷಿಸಿದ ಅಕಾಡೆಮಿ ಅಧ್ಯಕ್ಷ ಕೆ. ವಿ. ನಾಗರಾಜಮೂರ್ತಿ, “ರಂಗಭೂಮಿ ಕ್ಷೇತ್ರದ ಸಾಧಕರಿಗೆ ಪ್ರತಿ ವರ್ಷ ಅಕಾಡೆಮಿಯಿಂದ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ಎರಡು ಸಾಲುಗಳಲ್ಲಿ ಪ್ರಶಸ್ತಿ ನೀಡಿರಲಿಲ್ಲ. ಸದ್ಯ, 2022-23, 2023-24 ಮತ್ತು 2024-25ನೇ ಸಾಲಿಗೆ ಮೂವರಿಗೆ ಜೀವಮಾನ ಸಾಧನೆಗಾಗಿ ಗೌರವ ಪ್ರಶಸ್ತಿ, ತಲಾ 25ರಂತೆ ಒಟ್ಟು 75 ವಾರ್ಷಿಕ ಪ್ರಶಸ್ತಿ ಮತ್ತು 15 ದತ್ತಿನಿಧಿ ಪ್ರಶಸ್ತಿಗೆ ರಂಗ ಸಾಧಕರನ್ನು ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ವೃತ್ತಿ ರಂಗಭೂಮಿಯ 30ಕ್ಕೂ ಹೆಚ್ಚು ಕಲಾವಿದರಿಗೆ ವಾರ್ಷಿಕ ಮತ್ತು ದತ್ತಿ ಪ್ರಶಸ್ತಿ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರು ಅನ್ವಯವಾಗುವಂತೆ ಸಾಧಕರನ್ನು…