Subscribe to Updates
Get the latest creative news from FooBar about art, design and business.
Author: roovari
ಸದಾ ಪ್ರಯೋಗಶೀಲತೆಗೆ ಹಾತೊರೆಯುತ್ತಿದ್ದ, ಕ್ರಿಯಾಶೀಲತೆಯನ್ನೇ ಬದುಕಾಗಿಸಿಕೊಂಡಿದ್ದ ರಂಗಸಾಧಕ, ರಂಗ ನೇಪಥ್ಯದಲ್ಲೇ ಹೆಚ್ಚೆಚ್ಚು ತೊಡಗಿಕೊಂಡಿದ್ದ ಸದಾನಂದ ಸುವರ್ಣರು ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಅವರಿಗೆ ರಂಗಕರ್ಮಿ ಶಶಿಕಾಂತ ಯಡಹಳ್ಳಿಯವರು ಬರೆದ ರಂಗನಮನ ಇಲ್ಲಿದೆ. ಕನ್ನಡ ಸಾಂಸ್ಕೃತಿಕ ಲೋಕದ ಕಲಾವಿದೆ ಅಪರ್ಣಾರವರ ಅಕಾಲಿಕ ಅಗಲಿಕೆಯನ್ನೇ ಇನ್ನೂ ಅರಗಿಸಿಕೊಳ್ಳಲು ಆಗಿರಲಿಲ್ಲ, ಅಷ್ಟರಲ್ಲಿ ಹಿರಿಯ ರಂಗಕರ್ಮಿ ಸುವರ್ಣರವರೂ ಅಪರ್ಣಾರವರ ಹಿಂದೆಯೇ ನಿರ್ಗಮಿಸಿದ್ದು (16-07-2024) ಕರಾವಳಿ ಕರ್ನಾಟಕದ ರಂಗಭೂಮಿಗೆ ಆದ ನಷ್ಟವಾಗಿದೆ. ಇಳಿವಯಸ್ಸಿನಲ್ಲಿಯೂ ಕ್ರಿಯಾಶೀಲವಾಗಿದ್ದ ಪ್ರತಿಭಾನ್ವಿತ ರಂಗನಿರ್ದೇಶಕರ ಸಾವನ್ನೂ ಸಹ ಅರಗಿಸಿಕೊಳ್ಳುವುದು ಕಷ್ಟವಾಗಿದೆ. ವಯೋಸಹಜ ಅನಾರೋಗ್ಯದಿಂದಾಗಿ 93ನೇ ವಯಸ್ಸಿನಲ್ಲಿ ಕಾಲವಶರಾದ ಅವರಿನ್ನೂ ಇರಬೇಕಾಗಿತ್ತು. ಹೊಸ ತಲೆಮಾರಿನ ರಂಗಾಸಕ್ತ ಯುವಕರಿಗೆ ಅವರ ಮಾರ್ಗದರ್ಶನ ಬೇಕಾಗಿತ್ತು. ನಟ, ನಿರ್ದೇಶಕ, ರಂಗತಜ್ಞ, ಲೇಖಕ, ಪ್ರಕಾಶಕ, ಸಂಘಟಕ, ನಾಟಕಕಾರ, ಕಥೆಗಾರ, ಕಾದಂಬರಿಕಾರ, ಸಿನೆಮಾ ನಿರ್ದೇಶಕ ಹಾಗೂ ನಿರ್ಮಾಪಕರಾದ ಸದಾನಂದ ಸುವರ್ಣರವರ ಹೆಸರು ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹುದಾಗಿದೆ. ಸದಾನಂದ ಸುವರ್ಣರ ಹೆಸರು ಕರ್ನಾಟಕದಾದ್ಯಂತ ಗೊತ್ತಿರದೇ ಇದ್ದರೂ ಅವರ ರಂಗಕಾರ್ಯ ಕರ್ನಾಟಕವನ್ನು ದಾಟಿ ಬಾಂಬೆಗೆ…
ಸಾಣೇಹಳ್ಳಿ : ಶ್ರೀ ಗುರುಪಾದೇಶ್ವರ ಪ್ರೌಢಶಾಲೆ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಉಭಯ ಶಾಲಾ ಮಕ್ಕಳಿಗೆ ಭರತನಾಟ್ಯ ತರಗತಿಯು ದಿನಾಂಕ 19-07-2024ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಪಂಡಿತಾರಾಧ್ಯ ಶ್ರೀಗಳು ಮಾತನಾಡಿ “ಭರತನಾಟ್ಯ ತರಬೇತಿಯನ್ನು ಪಡೆದ ಮಕ್ಕಳು ನಾಳೆ ತಮ್ಮ ಕಾಲ ಮೇಲೆ ತಾವೇ ನಿಂತುಕೊಂಡು ಜೀವನ ಮಾಡಬಹುದು. ನೃತ್ಯ, ಸಂಗೀತ ಚೆನ್ನಾಗಿ ಕಲಿತರೆ ಮುಂದೆ ಅದು ನಿಮ್ಮ ಜೀವನಕ್ಕೆ ಸಹಕಾರಿಯಾಗಿ ಸ್ವತಂತ್ರ್ಯವಾಗಿ ಉದ್ಯೋಗವನ್ನು ಪ್ರಾರಂಭ ಮಾಡಬಹುದು. ನಾವು ಸಹ ಸಿರಿಗೆರೆಯಲ್ಲಿದ್ದಾಗ ಅಲ್ಲಿಯ ವಿದ್ಯಾರ್ಥಿಗಳಿಗೆ ಭರತನಾಟ್ಯ ಹಾಗೂ ಸಂಗೀತ ಕಲಿಸಲು ತುಂಬ ಪ್ರಯತ್ನ ತುಂಬ ಮಾಡಿದ್ವಿ. ಭರತನಾಟ್ಯ ತರಗತಿಗಳನ್ನು ಪ್ರಾರಂಭ ಮಾಡಬೇಕೆಂದು ಉತ್ಸಾಹ ಬಹಳ ದಿನಗಳಿಂದಲೂ ಇತ್ತು. ಅದು ಇವತ್ತು ನೆರವೇರಿದೆ. ಎಲ್ಲಾ ಮಕ್ಕಳು ಆಸಕ್ತಿಯಿಂದ ಭರತನಾಟ್ಯವನ್ನು ಕಲಿಯಬೇಕು” ಎಂದು ಹೇಳಿದರು. ಭರತ್ಯನಾಟ್ಯ ಶಿಕ್ಷಕ ನಾಗರಾಜ್ ಭರತನಾಟ್ಯದ ಬಗ್ಗೆ ವಿವರಣೆ ಹಾಗೂ ಭರತನಾಟ್ಯದ ಪ್ರಕಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿ ನಿರೂಪಿಸಿದರು.…
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ವು ದಿನಾಂಕ 25-07-2024ರಂದು ಸಂಜೆ 6.30ಕ್ಕೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ ಮೂರ್ತಿ ಇವರು ವಹಿಸಲಿದ್ದು, ಪ್ರಸಿದ್ಧ ಕವಿಗಳು ಹಾಗೂ ಸಾಹಿತಿಯಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನ ಪ್ರವರ ಥಿಯೇಟರ್ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕದ ನಿರ್ವಹಣೆ ಅಜಯ್ ಕುಮಾರ್ ಮಾಡಿದ್ದು, ಸಂಗೀತ ಅಕ್ಷಯ್ ಭೊಂಸ್ಲೆ ಮತ್ತು ಬೆಳಕಿನ ವಿನ್ಯಾಸ ಮಂಜು ನಾರಾಯಣ್ ನೀಡಿದ್ದು, ಹನು ರಾಮಸಂಜೀವ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಮಹಾಕವಿ ಕುವೆಂಪು ಇವರ ಜೀವನದ ಹಲವು ಮಹತ್ವದ ಅಧ್ಯಾಯಗಳನ್ನು ಒಳಗೊಂಡಿದೆ. ಒಂದರ್ಥದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗಿನ ಕುವೆಂಪುರವರ ಕಥೆ, ಹಾಗೆಯೇ ಇದು…
ಮಂಗಳೂರು : ಮಂಗಳೂರಿನ ಕೊಡಿಯಾಲಬೈಲಿನ ಭಗವತಿ ನಗರದದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಪ್ರಯುಕ್ತ ‘ಪ್ರತಿಬಿಂಬಗಳು’ ಎಂಬ ಶೀರ್ಷಿಕೆಯಡಿ 2023-24ನೇ ಸಾಲಿನ ವಾರ್ಷಿಕ ಕಲಾಪ್ರದರ್ಶನವು ದಿನಾಂಕ 19-07-2024ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಚಿತ್ರಕಲೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ಇದರ ನಿರ್ದೇಶಕರಾದ ವಿಕ್ರಮ್ ಕೆಮ್ಮೆ, ‘ಆರ್ಕಿಡ್ ಆರ್ಟ್ ಗ್ಯಾಲರಿ’ ಇದರ ನಿರ್ದೇಶಕರಾದ ವಿಲಿಯಂ ಪಾಯಸ್, ಶ್ರೀ ಮಹಾಲಸಾ ಶಿಕ್ಷಣ ಸಮಿತಿ ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಬಿ. ಕೆ., ನಿರ್ದೇಶಕರಾದ ಬಾಬುರಾವ್ ಅತಿಥಿಗಳಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ರಚಿಸಿದ 400ಕ್ಕೂ ಹೆಚ್ಚು ವಿವಿಧ ಪ್ರಕಾರದ ಕಲಾಕೃತಿಗಳು ಪ್ರದರ್ಶನದಲ್ಲಿದ್ದು, ರೇಖಾಚಿತ್ರ, ಸ್ಥಿರಚಿತ್ರಣ, 2ಡಿ ವಿನ್ಯಾಸ, ನಿಸರ್ಗಚಿತ್ರ, ಸೃಜನಶೀಲ ವರ್ಣಚಿತ್ರಗಳು, ಮಂಡಲ ಚಿತ್ರಗಳು, ಜಾಹೀರಾತು ಕಲೆ, ಸಾಂದರ್ಭಿಕ ಚಿತ್ರಗಳು ಹಾಗೂ ಡಿಜಿಟಲ್ ಕಲಾಕೃತಿಗಳು ಪ್ರದರ್ಶನದಲ್ಲಿವೆ. ಈ…
ಕಾಂತಾವರ : ಶ್ರೀ ಯಕ್ಷದೇಗುಲ ಕಾಂತಾವರ ಇದರ ಇಪ್ಪತ್ತರಡನೇ ವರ್ಷದ ‘ಯಕ್ಷೋಲ್ಲಾಸ -2024’ ನಿರಂತರ ಹನ್ನೆರಡು ತಾಸಿನ ಆಟ, ಕೂಟ, ಬಯಲಾಟ ಕಾರ್ಯಕ್ರಮವು ದಿನಾಂಕ 21-07-2024ರಂದು ಬೆಳಿಗ್ಗೆ 10-00ರಿಂದ ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದೆ. ಕಾಂತಾವರ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀ ರಾಜೇಶ್ ಕೋಟ್ಯಾನ್ ಇವರ ಉಪಸ್ಥಿತಿಯಲ್ಲಿ ಬಾರಾಡಿಬೀಡು ಶ್ರೀಮತಿ ಸುಮತಿ ಆರ್. ಬಲ್ಲಾಳ್ ಇವರು ‘ಯಕ್ಷೋಲ್ಲಾಸ’ ಉದ್ಘಾಟನೆ ಮಾಡಿ ಶುಭಾಶಂಸನೆಗೈಯಲಿದ್ದಾರೆ. ನಂತರ ಪ್ರಸಿದ್ಧ ಕಲಾವಿದರಿಂದ ‘ವಿಶ್ವಾಮಿತ್ರ ಮೇನಕೆ’ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ. ಮಧ್ಯಾಹ್ನ 2-00 ಗಂಟೆಗೆ ಕಾಂತಾವರ ಕ್ಷೇತ್ರದ ಧರ್ಮದರ್ಶಿ ಡಾ. ಜೀವಂಧರ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ವಿ. ಸುನಿಲ್ ಕುಮಾರ್ ಇವರ ಗೌರವ ಉಪಸ್ಥಿತಿಯಲ್ಲಿ ಯಕ್ಷಗಾನ ಕ್ಷೇತ್ರದ ಬಹು ಸಾಧನೆಯ ಕಲಾವಿರಾದ ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಇವರಿಗೆ ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ ಸಂಸ್ಮರಣಾ ಪ್ರಶಸ್ತಿ ಹಾಗೂ ಸುರತ್ಕಲ್ ಮೇಳದ ನಿವೃತ್ತ…
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ನೃತ್ಯ ಕಾರ್ಯಕ್ರಮ ನೃತ್ಯಾಂತರಂಗದ 114ನೇ ಸರಣಿಯಲ್ಲಿ ಬೆಂಗಳೂರಿನ ಆಚಾರ್ಯ ಇಂದಿರಾ ಕಡಂಬಿಯವರ ಶಿಷ್ಯೆ ಕುಮಾರಿ ಅಪೇಕ್ಷಾ ಕಾಮತ್ ಇವರಿಂದ ಬಹಳ ಅಚ್ಚುಕಟ್ಟಾದ ಭರತನಾಟ್ಯ ಕಾರ್ಯಕ್ರಮ ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ದಿನಾಂಕ 13-07-2024ರಂದು ನಡೆಯಿತು. ಪುತ್ತೂರಿನ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷರಾದ ಶ್ರೀ ದಾಮೋದರ ಪಾಟಾಳಿಯವರು ಅಭ್ಯಾಗತರಾಗಿ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ಸಂಗೀತ ವಿದ್ಯಾರ್ಥಿಗಳಾದ ಅಭಿನವ್, ಹೃಷಿಕೇಶ, ಅಭಿವ್ ರಾಜ್, ಆದಿತ್ಯ ಕೃಷ್ಣ, ಪ್ರಚೇತ್ ಪ್ರಾರ್ಥನೆಗೈದರು. ಕುಮಾರಿ ಸೃಷ್ಟಿ ಮತ್ತು ಜನ್ಯ ಕಲಾವಿದರ ಪರಿಚಯ ಮಾಡಿದರು. ಕುಮಾರಿ ರಿತಿಕಾ ಪಂಚಾಂಗ ವಾಚನಗೈದರು. ಅಭಿನವ್ ರಾಜ್ ಶಂಖನಾದಗೈದರು. ಕುಮಾರಿ ಪ್ರಣಮ್ಯ ಕಾರ್ಯಕ್ರಮದ ನಿರೂಪಣೆ ಮಾಡಿದರು. ಗುರು ದೀಪಕ್ ಕುಮಾರ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಅಂದಿನ ವಿಷಯ ‘ರೌದ್ರ ರಸ’ ಇದರ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಕುಮಾರಿ ಅಪೇಕ್ಷಾ ಕಾಮತ್ ಇವರ ಭರತನಾಟ್ಯ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ರಾಜಾಶ್ರಯದಿಂದ ಹಿಡಿದು ಇಂದಿನ ಪ್ರಜಾಪ್ರಭುತ್ವದವರೆಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡುತ್ತಾ ಬಂದಿರುವುದು ಈ ಸಂಸ್ಥೆಯ ಹೆಗ್ಗಳಿಕೆ. ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡದ ಸಾಂಸ್ಕೃತಿಕ ಇತಿಹಾಸವೇ ಆಗಿದೆ. ಮಂಡ್ಯದಲ್ಲಿ ದಿನಾಂಕ 20-12-2024 ರಿಂದ 22-12-2024ರಂದು ಆಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯ ಮಾಧ್ಯಮ ಸಮನ್ವಾಯಾಧಿಕಾರಿಗಳ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮುದ್ರಣ ಅಥವಾ ದೃಶ್ಯ ಮಾಧ್ಯಮದಲ್ಲಿ ಅನುಭವ ಹೊಂದಿದ್ದು ಮಾಧ್ಯಮ ಸಂವಹನದ ಅಗತ್ಯಗಳನ್ನು ಅರಿತಿರಬೇಕು. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾರ್ವಜನಿಕರ ನಡುವೆ ಸಂವಹನ ಸೇತುವೆಯಾಗುವ ಸಾಮರ್ಥ್ಯವನ್ನು ಹೊಂದಿದ್ದು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪವನ್ನು ಅರಿತಿರಬೇಕು. ಈ ಉದ್ಯೋಗವು ತಾತ್ಕಾಲಿಕದ್ದಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಸ್ವರೂಪ ಮತ್ತು ಕನ್ನಡ ನಾಡು-ನುಡಿ ಬಗೆಗಿನ ತಿಳುವಳಿಕೆ ಅಪೇಕ್ಷಣೀಯ. ಇದು ಕನ್ನಡದ…
ಬೆಂಗಳೂರು : ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ (ರಿ) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕನ್ನಡ ಸಹೃದಯಿ ಪ್ರತಿಷ್ಠಾನ ಹಾಗೂ ಕುಮಾರವ್ಯಾಸ ಮಂಟಪ ಇದರ ಸಹಕಾರದೊಂದಿಗೆ ಆಯೋಜಿಸುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳಾದ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಸ್ಮಾರಕ ಉತ್ತಮ ‘ಗಮಕ ಶಿಕ್ಷಕ ಪ್ರಶಸ್ತಿ’ ಹಾಗೂ ದಿ. ಕೆ. ವಿ. ರವೀಂದ್ರನಾಥ ಟಾಗೋರ್ ‘ಯುವ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 21-07-2024 ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಕುಮಾರವ್ಯಾಸ ಮಂಟಪದಲ್ಲಿ ನಡೆಯಲಿದೆ. ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಡಾ. ಕೆ. ಪಿ. ಪುತ್ತೂರಾಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮೈಸೂರಿನ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜಾಪುರದ ಶ್ರೀ ಕಲ್ಯಾಣ ರಾವ್ ದೇಶಪಾಂಡೆ ಇವರಿಗೆ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಬೇಲೂರಿನ ಶ್ರೀಮತಿ ನವರತ್ನಾ ಎಸ್. ವಟಿ ಇವರಿಗೆ ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್. ಆರ್.…
ಸುರತ್ಕಲ್ : ಭಜನಾ ತಜ್ಞ, ಚಕ್ರತಾಳ ಕಲಾವಿದೆ ಪಣಂಬೂರು ಸುರೇಶ್ ಕಾಮತ್ ಅವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 20-07-2024ರಂದು ಸಂಜೆ 5-00 ಗಂಟೆಗೆ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ಜರಗಲಿದೆ. ಈ ಸಂದರ್ಭದಲ್ಲಿ ಪೌರಾಣಿಕ ಯಕ್ಷಗಾನ ಬಯಲಾಟ ಆಯೋಜಿಸಲಾಗಿದೆ ಎಂದು ನಾಗರಿಕ ಸನ್ಮಾನ ಸಮಿತಿ ತಿಳಿಸಿದೆ.
ಚಾಮರಾಜನಗರ : ರಂಗಮಂಡಲ ಬೆಂಗಳೂರು ಮತ್ತು ರಂಗವಾಹಿನಿ ಚಾಮರಾಜನಗರ ಆಯೋಜಿಸಿರುವ ಪ್ರತಿ ಜಿಲ್ಲೆ ಹಾಗೂ ಹೊರನಾಡ ಕನ್ನಡ ಪ್ರದೇಶಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ತಿಂಗಳ 3ನೇ ಭಾನುವಾರ ಆಯೋಜಿಸುವ ಕವಿಗೋಷ್ಠಿ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 21-07-2024ರಂದು ಚಾಮರಾಜನಗರದ ಡಾ. ರಾಜಕುಮಾರ ರಂಗಮಂದಿರದಲ್ಲಿ ನಡೆಯಲಿದೆ. ಚಾಮರಾಜನಗರದಲ್ಲಿ ಉದ್ಘಾಟನೆಗೊಳ್ಳಲಿರುವ ಜಿಲ್ಲಾ ಪ್ರಥಮ ಕವಿಗೋಷ್ಠಿಯ ಆರಂಭವು ದಿನಾಂಕ 20-07-2024ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ಪಡಸಾಲೆಯಲ್ಲಿ ನಡೆಯಲಿದೆ. ನಾಡೋಜ ಬರಗೂರು ರಾಮಚಂದ್ರಪ್ಪ ಸಾರ್ ಅವರು ಕಾವ್ಯ ದೀವಟಿಗೆಯನ್ನು ಬೆಳಗುವುದರ ಮೂಲಕ ಯಾನ ಆರಂಭವಾಗಲಿದೆ. ಡಾ. ಧರಣಿದೇವಿ ಮಾಲಗತ್ತಿ ಮೇಡಂ ಅವರು ಆ ದೀವಟಿಗೆಯನ್ನು ಕವಿಗೋಷ್ಠಿಯ ಸರ್ವಾಧ್ಯಕ್ಷರಾದ ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಉದ್ಘಾಟಕರಾದ ಎಲ್.ಎನ್. ಮುಕುಂದರಾಜ್ ಅವರಿಗೆ ಹಸ್ತಾಂತರಿಸಲಿದ್ದಾರೆ. ನಂತರ ಯಾನ ಪ್ರಾರಂಭವಾಗಲಿದ್ದು, ಇದೇ ಸಂದರ್ಭದಲ್ಲಿ ನಾಡಿನ ಹೆಸರಾಂತ ಗಾಯಕರು ನಾಡಗೀತೆಯನ್ನು ಹಾಡಿ.. ಹಾಗೂ ನಾಡಿನ ಖ್ಯಾತ ಕವಿಗಳು ಕವಿತೆಗಳನ್ನು ವಾಚನ ಮಾಡಿ ಯಾನಕ್ಕೆ ಶುಭ ಕೋರಲಿದ್ದಾರೆ. ದಿನಾಂಕ 21-07-2024…