Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ವಿಜಯ ಕರ್ನಾಟಕ ದಿನಪತ್ರಿಕೆ ಹಾಗೂ ಸಂಗೀತ ಭಾರತಿ ಪ್ರತಿಷ್ಠಾನದ ವತಿಯಿಂದ 21 ಜುಲೈ 2024ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮುಂಬಯಿಯ ಪಂಚಮ್ ನಿಶಾದ್ನ ಅಭೂತಪೂರ್ವ ಪರಿಕಲ್ಪನೆಯ ‘ಬೋಲಾವ ವಿಠಲ’ ವಿನೂತನ ಕಾರ್ಯಕ್ರಮಕ್ಕೆ ಭರ್ಜರಿ ಸ್ಪಂದನೆ ಕರಾವಳಿಯಲ್ಲಿ ದೊರೆಯಿತು. ‘ಜಯ್ ಜಯ್ ರಾಮಕೃಷ್ಣ ಹರೀ…’ ಎನ್ನುವ ಹಾಡಿನ ಮೂಲಕ ಅನಾವರಣಗೊಂಡ ಈ ಕಾರ್ಯಕ್ರಮ ಭಕ್ತಿಯ ಅಲೆಗೆ ಮುನ್ನುಡಿಯಾಗಿ ಸೇರಿದ ಶೋತೃಗಳು ಭಕ್ತಿಯ ಅಲೆಯಲ್ಲಿ ಮಿಂದೆದ್ದರು. ಮಂಗಳೂರಿನಲ್ಲಿ ನಡೆದ ಆರನೇ ಆವೃತ್ತಿಯ ‘ಬೋಲಾವ ವಿಠಲ’ ಸಂಗೀತ ಕಾರ್ಯಕ್ರಮವನ್ನು ಮುಂಬಯಿಯ ಪಂಚಮ್ ನಿಶಾದ್ನ ಎಂ.ಡಿ. ಶಶಿ ವ್ಯಾಸ್ ಉದ್ಘಾಟಿಸಿದರು. ಹಿಂದೂಸ್ಥಾನಿ ಸಂಗೀತದ ಶ್ರೇಷ್ಠ ಕಲಾವಿದರಾದ ಸಂಗೀತ ಕಟ್ಟಿ ಕುಲಕರ್ಣಿ, ಜೀ ಮರಾಠಿ ಸರಿಗಮಪ ಸಂಗೀತ ಸ್ಪರ್ಧೆಯ ಫೈನಲಿಸ್ಟ್ ಮುಗ್ಧ ವೈಶಂಪಾಯನ ಹಾಗೂ ಪ್ರಥಮೇಶ ಲಘಾಟೆ ಅವರ ಮೂರು ಗಂಟೆಗಳ ಅಭಂಗ ರೂಪದ ಹಾಡುಗಾರಿಕೆ ಶೋತೃ ವರ್ಗದ ಮನಸೂರೆಗೊಂಡಿತು. ತಬ್ಲಾದಲ್ಲಿ ಪ್ರಸಾದ್ ಪಾದ್ಯೆ, ಪಕ್ವಾಜ್ ನಲ್ಲಿ ಸುಖದ್ ಮುಂಡೆ, ರಿದಂನಲ್ಲಿ ಸೂರ್ಯಕಾಂತ್ ಸುರ್ವೆ,…
ನಿರ್ಜಾಲು : ಕಣಿಪುರ ಮಿತ್ರ ಬಳಗ ಮತ್ತು ಕುಂಬ್ಳೆ ಶ್ರೀಧರ ರಾವ್ ಅಭಿಮಾನಿಗಳು ಇವರಿಂದ ದಿ. ಕುಂಬಳೆ ಶ್ರೀಧರ ರಾವ್ ಇವರಿಗೆ ನುಡಿನಮನ ಮತ್ತು ತಾಳಮದ್ದಳೆ ಕಾರ್ಯಕ್ರಮವು 28 ಜುಲೈ 2024ರಂದು ನಿರ್ಜಾಲು ಶ್ರೀ ಕುಮಾರ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ನಿರ್ಜಾಲು ಮಹಾಜನ ವಿದ್ಯಾಸಂಸ್ಥೆಯ ಪ್ರಬಂಧಕರಾದ ಶ್ರೀ ಜಯದೇವ ಖಂಡಿಗೆ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತರು, ಕಲಾವಿದರು ಮತ್ತು ಅಂಕಣಗಾರರಾದ ಶ್ರೀ ನಾ. ಕಾರಂತ ಪೆರಾಜೆ ಇವರು ಸಂಸ್ಮರಣೆ ಹಾಗೂ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರು ನಲ್ನುಡಿ ಮಾತುಗಳನ್ನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಇದೇ ಸಂದರ್ಭದಲ್ಲಿ ತೆಂಕುತಿಟ್ಟು ತವರಿನ ಪ್ರಸಿದ್ಧ ಕಲಾವಿದರಿಂದ ‘ಶ್ರೀರಾಮ ಪರಂಧಾಮ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಮಂಗಳೂರು : ಪ್ರೊ. ಅಮೃತ ಸೋಮೇಶ್ವರರ ನೆನಪಿನ ‘ತುಳು ನಾಟಕ ರಚನಾ ಕಾರ್ಯಾಗಾರ’ದ ಮೊದಲ ಹಂತವು 19 ಜುಲೈ 2024ರಿಂದ 21 ಜುಲೈ 2024ರವರೆಗೆ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ್ ನಲ್ಲಿ ನಡೆಯಿತು. ಈ ಕಾರ್ಯಾಗಾರವನ್ನು ಮಂಗಳೂರಿನ ಹವ್ಯಾಸಿ ನಾಟಕ ತಂಡ ಜರ್ನಿ ಥೇಟರ್ ಗ್ರೂಪ್ (ರಿ.) ಆಯೋಜಿಸಿತ್ತು. ಕಾರ್ಯಾಗಾರದ ಉದ್ಘಾಟನೆಯ ಸಂದರ್ಭ ಕಲಾಂಗಣ್ ನ ಎರಿಕ್ ಒಸಾರಿಯೋ, ಅಮೃತರ ಒಡನಾಡಿ ಸದಾಶಿವ ಉಚ್ಚಿಲ್, ಚೇತನ್ ಸೋಮೇಶ್ವರ ಮತ್ತು ರಾಜೇಶ್ವರಿ, ಜೀವನ್ ಸೋಮೇಶ್ವರ ಮತ್ತು ಸತ್ಯಾ ಜೀವನ್, ರೋಹನ್ ಉಚ್ಚಿಲ್ ಉಪಸ್ಥಿತರಿದ್ದರು. ಶಿಬಿರದ ಮಾರ್ಗದರ್ಶಕರಾಗಿ ನಾಟಕಕಾರ, ನಟ, ನಿರ್ದೇಶಕ ಮೈಸೂರಿನ ಎಸ್. ರಾಮನಾಥ್ ಮತ್ತು ಶಿಬಿರ ನಿರ್ದೇಶಕರಾಗಿ ನಟ, ಮಂಗಳೂರಿನ ವಿದ್ದು ಉಚ್ಚಿಲ್ ಕಾರ್ಯನಿರ್ವಹಿಸಿದರು. ಉಡುಪಿ, ಕಾಸರಗೋಡು, ಪುತ್ತೂರು, ಉಪ್ಪಿನಂಗಡಿ, ಪೂಂಜಾಲಕಟ್ಟೆ, ಬೆಳ್ತಂಗಡಿ, ಬಂಟ್ವಾಳ, ವಾಮಂಜೂರು, ಮಂಗಳೂರು ಮೊದಲಾದ ಪ್ರದೇಶಗಳಿಂದ ಅಭ್ಯರ್ಥಿಗಳು (ಮಹಿಳೆಯರೂ ಮತ್ತು ಪುರುಷರೂ) ಭಾಗವಹಿಸಿದ್ದರು. ಈ ಕಾರ್ಯಾಗಾರವು ಸಂಪೂರ್ಣವಾಗಿ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ವಸತಿ, ಊಟೋಪಚಾರದ ವ್ಯವಸ್ಥೆಯನ್ನು ಒದಗಿಸಲಾಗಿತ್ತು. ನಾಟಕ ಬರವಣಿಗೆಯನ್ನು…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಬಲಮುರಿ ವಿದ್ಯಾಗಣಪತಿ ದೇವರ ಸನ್ನಿಧಿಯಲ್ಲಿ ದಿನಾಂಕ 23-07-2024ರಂದು ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ತಿಂಗಳ ತಾಳಮದ್ದಳೆ ‘ವೀರಮಣಿ ಕಾಳಗ’ ನಡೆಯಿತು. ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರಂಕಿ, ಚೆಂಡೆ ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ ಭಾಗವಹಿಸಿದರು. ಮುಮ್ಮೇಳದಲ್ಲಿ ವೀರಮಣಿಯಾಗಿ ಪಕಳಕುಂಜ ಶ್ಯಾಮ ಭಟ್, ಹನುಮಂತನಾಗಿ ಗುಂಡ್ಯಡ್ಕ ಈಶ್ವರ ಭಟ್, ಈಶ್ವರನಾಗಿ ಗುಡ್ಡಪ್ಪ ಬಲ್ಯ, ಶತ್ರುಘ್ನನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಹಾಗೂ ಶ್ರೀರಾಮನಾಗಿ ಮಾಂಬಾಡಿ ವೇಣುಗೋಪಾಲ ಭಟ್ ಸಂದರ್ಭೋಚಿತವಾಗಿ ಪಾತ್ರಗಳನ್ನು ಪೋಷಿಸಿದರು. ಜೋಡುಕಟ್ಟೆ ಕೃಷ್ಣ ಭಟ್ಟರು ಕಾರ್ಯಕ್ರಮವನ್ನು ಪ್ರಾಯೋಜಿಸಿದರು. ಚಂದ್ರಶೇಖರ ಭಟ್ ಸ್ವಾಗತಿಸಿ, ವೇಣುಗೋಪಾಲ ಭಟ್ ವಂದಿಸಿದರು.
ಉಡುಪಿ : ರಂಗಭೂಮಿ ಉಡುಪಿ ಹಾಗೂ ಉಡುಪಿಯ ರಂಗತಂಡಗಳ ಸಹಭಾಗಿತ್ವದಲ್ಲಿ ರಂಗ ದಿಗ್ಗಜ ದಿ. ಸದಾನಂದ ಸುವರ್ಣರಿಗೆ ನಮನ ಮತ್ತು ಆಷಾಢದಲ್ಲೊಂದು ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ದಿನಾಂಕ 25-07-2024ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸದಾನಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನಟೇಶ್ ಉಲ್ಲಾಳ್ ಇವರು ರಂಗಭೂಮಿ ಸಂಸ್ಥೆಯಿಂದ ‘ಕಲಾತಪಸ್ವಿ’ ಬಿರುದಿನೊಂದಿಗೆ ‘ರಂಗಭೂಮಿ ಪ್ರಶಸ್ತಿ’ ಪುರಸ್ಕೃತ ರಂಗ ದಿಗ್ಗಜ ದಿ. ಸದಾನಂದ ಸುವರ್ಣರಿಗೆ ನುಡಿನಮನ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯಲಿರುವ ಆಷಾಢದಲ್ಲೊಂದು ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಶ್ರೀ ಪ್ರಸನ್ನ ಇವರು ‘ಸಮಕಾಲೀನ ರಂಗನಟನೆಯಲ್ಲಿ ಭಾರತೀಯ ಪರಂಪರೆ ಎಂಬುದುದೊಂದು ಇದೆಯೇ ?’ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಡಾ. ಕೆ.ಎಂ. ರಾಘವ ನಂಬಿಯಾರ್ ಇವರು ಅಧ್ಯಕ್ಷತೆ ವಹಿಸಲಿದ್ದು, ಉಪನ್ಯಾಸಕಿ ಹಾಗೂ ಸಾಹಿತಿ ಶ್ರೀಮತಿ ಸುಧಾ ಅಡುಕಳ ಇವರು ಅತಿಥಿಯಾಗಿ ಭಾಗವಹಿಸಲಿರುವರು.
ತೆಕ್ಕಟ್ಟೆ: ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಕಾರದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ‘ಗುರುವಂದನಾ ಕಾರ್ಯಕ್ರಮ’ವು ತೆಕ್ಕಟ್ಟೆ ಹಯಗ್ರೀವದಲ್ಲಿ 22 ಜುಲೈ 2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಕೃಷ್ಣಯ್ಯ ಆಚಾರ್ ಬಿದ್ಕಲ್ ಕಟ್ಟೆ, ಲಂಬೋದರ ಹೆಗಡೆ ನಿಟ್ಟೂರು, ಶ್ರೀಮತಿ ಶಾರದಾ ಹೊಳ್ಳ, ಗಿರೀಶ್ ಆಚಾರ್ ವಕ್ವಾಡಿ, ಅಮೃತಾ ಉಪಾಧ್ಯ, ವಿ. ಸುಂದರಂ, ಸುಧೀರ್ ತಲ್ಲೂರು ಈ ಎಲ್ಲಾ ಗುರುವನ್ನು ಶಿಷ್ಯರನ್ನೊಡಗೂಡಿಕೊಂಡು ಅಭಿನಂದಿಸಿದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ “ಮನುಷ್ಯರಾಗಿ ಹುಟ್ಟಿದ್ದೇವೆ. ನಮ್ಮ ಜೀವನ ಸುಗಮವಾಗಿ ನಡೆಯಬೇಕಾದರೆ ಮಾನಸಿಕವಾದ ನೆಮ್ಮದಿಗಾಗಿ ಯಾವುದಾದರೂ ಒಂದು ಕಲೆ ಬೇಕೇ ಬೇಕು. ಆದರೆ ಈಗಿನ ಸಮಾಜದಲ್ಲಿ ಕಲೆಯಿಂದಲೇ ಬದುಕುತ್ತೇವೆ ಎಂದು ಹೊರಡಬೇಡಿ. ಅದು ಪ್ರಸ್ತುತ ಕಾಲಘಟ್ಟದಲ್ಲಿ ಕಷ್ಟ. ನಮಗೆ ಗುರು ಒಬ್ಬನೇ ಅಲ್ಲ. ವೇದಿಕೆಯನ್ನು ಹಂಚಿಕೊಡುವವನೂ ಗುರುವೇ. ವೇದಿಕೆಯ ಬಗೆಗೂ ಹೆದರಿಕೆ ಬೇಕು. ಹೆದರಿಕೆ ಇದ್ದರೆ ಮಾತ್ರ ಬೆಳೆಯುವುದಕ್ಕೆ ಸಾಧ್ಯ. ಗುರುವಿನಿಂದಲೇ ವೇದಿಕೆ ಪಡೆಯುತ್ತೀರಿ, ಗುರುವಿನಿಂದಲೇ ಕಲಿಯುತ್ತೀರಿ,…
ಮಂಗಳೂರು: ಮಂಗಳೂರಿನ ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ ಇದರ ‘ತ್ರಿಂಶೋತ್ಸವ’ದ ಅಂಗವಾಗಿ ನಡೆಯುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -7’ ಇದರ ಅಂಗವಾಗಿ ‘ನೃತ್ಯ ಸಂಯೋಜನಾ ತಂತ್ರಗಾರಿಕೆ’ ಮತ್ತು ‘ಭರತನಾಟ್ಯ ಪ್ರಸ್ತುತಿಯಲ್ಲಿ ಪ್ರಸ್ತುತ’ ಎಂಬ ವಿಷಯದ ಕುರಿತು ಸಂವಾದಾತ್ಮಕ ಪ್ರಾತ್ಯಕ್ಷಿಕೆಯಿಂದ ಕೂಡಿದ ವಿಚಾರ ಸಂಕಿರಣ ‘ಜ್ಞಾನಸುಧಾ’ ದಿನಾಂಕ 21-07-2024 ರಂದು ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಮಾತನಾಡಿ “ನಾಟ್ಯಾರಾಧನಾ ಕಲಾ ಕೇಂದ್ರದ ‘ತ್ರಿಂಶೋತ್ಸವ’ದ ಸಂದರ್ಭದಲ್ಲಿ ಭರತನಾಟ್ಯ ಸಂಬಂಧಿತ ಹಲವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದೆ. ಈ ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ನಡೆದಿರುವುದು ಸಂತಸ ತಂದಿದೆ.” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ರವಿಶಂಕರ್ ರಾವ್ ಮಾತನಾಡಿ “ಭಾರತನಾಟ್ಯ ಕಲಾವಿದರು ಭರತನಾಟ್ಯದ ಇತಿಹಾಸ ತಿಳಿದಿರಬೇಕು. ಇದು ಕಲಾವಿದರ ಬೌದ್ಧಿಕ ಬೆಳವಣಿಗೆಗೆ ಸಹಕಾರಿ.” ಎಂದುರು. ಬೆಂಗಳೂರಿನ ಪ್ರಸಿದ್ಧ ಭರತನಾಟ್ಯ…
ಬ್ರಹ್ಮಾವರ : ಅಜಪುರ ಯಕ್ಷಗಾನ ಸಂಘದ ವತಿಯಿಂದ ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 20-07-2024ರ ಶನಿವಾರದಂದು ಬ್ರಹ್ಮಾವರದ ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಳದ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕರ್ಣಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಕಲೆ ಇಂದು ಬದಲಾವಣೆಯ ಕಾಲಘಟ್ಟದಲ್ಲಿದೆ. ಆಧುನಿಕತೆ ಹಾಗೂ ಹೊಸ ಪ್ರಸಂಗಗಳ ಪ್ರದರ್ಶನ ಯಕ್ಷಗಾನ ಕಲೆಯ ಪರಂಪರೆಗೆ ಧಕ್ಕೆ ತರಬಾರದು. ಆ ನಿಟ್ಟಿನಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಹೊಸ ಕಲಾವಿದರಿಗೆ ಮಾದರಿಯಾಗಬೇಕು. ಹಿಂದಿನ ಹಿರಿಯ ಯಕ್ಷಗಾನ ಕಲಾವಿದರಲ್ಲಿ ಅನೇಕರು ಅನಕ್ಷರಸ್ಥರಾಗಿದ್ದರೂ ತಮ್ಮ ಪಾಂಡಿತ್ಯ, ನಿರರ್ಗಳ ಮಾತುಗಳಿಂದ ಮಹಾನ್ ಕಲಾವಿದರುಗಳಾಗಿ ರಾಷ್ಟ್ರ ಪ್ರಶಸ್ತಿಗೂ ಭಾಜನರಾಗಿರುವುದನ್ನು ಕಂಡಿದ್ದೇವೆ. ಈಗಿನಂತೆ ಆಧುನಿಕತೆಯ ಸೋಂಕಿಲ್ಲದ ಆ ಕಾಲದಲ್ಲಿ ಯಕ್ಷಗಾನ ಕಲಾವಿದರು ಕಲೆಯ ಉಳಿವು ಬೆಳವಣಿಗೆಗೆ ಕಾರಣರಾದರು ಎಂಬುದನ್ನು ಇಂದಿನ ಯುವ ಕಲಾವಿದರು ಚಿಂತನೆ ನಡೆಸಬೇಕು. ಕಲೆಯ ಮೇಲಿನ ಪ್ರೀತಿ ಹಾಗೂ ಅದರ ಮೂಲಕವೇ ಬದುಕನ್ನು…
ಹುಬ್ಬಳ್ಳಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲೆಯ ಅಧ್ಯಕ್ಷರಾಗಿ ಸಾಹಿತಿ ಹಾಗೂ ಪತ್ರಕರ್ತ ವಿರಾಜ್ ಅಡೂರು ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಕರ್ನಾಟಕ ರಾಜ್ಯ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ. ವಿರಾಜ್ ಅಡೂರು ಅವರು ಕಾಸರಗೋಡು ಜಿಲ್ಲೆಯ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಕ್ರಿಯಾಶೀಲರಾಗಿದ್ದಾರೆ. ಇವರು ಬರೆದ ಚುಟುಕುಟುಕು, ಬಾನುಲಿಯಿತು, ನಗಿಸುವ ಚಿತ್ರಗಳು, ಗಾದೆ ಗಮ್ಮತ್ತು (ನಾಲ್ಕು ಭಾಗಗಳಲ್ಲಿ), ಉಪನಯನ ಮೊದಲಾದ ಕೃತಿಗಳು ಪ್ರಕಟಗೊಂಡಿವೆ. ಇವರಿಗೆ ಕೇರಳ ರಾಜ್ಯ ಮಟ್ಟದ ಮಾಧ್ವ ಬ್ರಾಹ್ಮಣ ‘ಅತ್ಯುತ್ತಮ ಚಿತ್ರ ಕಲಾವಿದ’ ಪ್ರಶಸ್ತಿ, ಕಾಸರಗೋಡಿನ ಕನ್ನಡ ಭವನದ ‘ಕನ್ನಡ ಪಯಸ್ವಿನಿ’ ಪ್ರಶಸ್ತಿ, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದಿಂದ ‘ಗಡಿನಾಡ ಚೈತನ್ಯ’ ಪ್ರಶಸ್ತಿ, ಕೋಟೆಗದ್ದೆ ಸೀತಾರಾಮ ಅಡಿಗ ಸ್ಮಾರಕ ‘ಪಾಶುಪತ ಸಾಹಿತ್ಯ ಪ್ರಶಸ್ತಿ’ ಸಹಿತ ಅನೇಕ ಪ್ರಶಸ್ತಿಗಳು ದೊರೆತಿವೆ. ಕೃಷಿ, ಶಿಕ್ಷಣ, ಸಾಹಿತ್ಯ, ವ್ಯಂಗ್ಯಚಿತ್ರ ರಚನೆ, ಮಕ್ಕಳ ಶಿಬಿರ ಸಂಯೋಜನೆ, ಮಕ್ಕಳ ಶಿಬಿರ ಸಂಪನ್ಮೂಲ ವ್ಯಕ್ತಿಯಾಗಿ ಕ್ರಿಯಾಶೀಲರಾಗಿದ್ದಾರೆ. ಇವರು ರಚಿಸಿದ…
ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆ, ಕರಾವಳಿ ಮಿತ್ರ ಮಂಡಳಿ ಮತ್ತು ದೃಶ್ಯ ಕಲಾ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ದಿನಾಂಕ 25-07-2024ರ ಗುರುವಾರ ಸಂಜೆ ಗಂಟೆ 6-30ಕ್ಕೆ ವಿದ್ಯಾನಗರ ರಸ್ತೆಯ ದೃಶ್ಯ ಕಲಾ ಮಹಾವಿದ್ಯಾಲಯದ ಆವರಣದ ಒಳಾಂಗಣದಲ್ಲಿ ಉಡುಪಿ ಜಿಲ್ಲೆಯ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ವೃತ್ತಿನಿರತ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಕೀರ್ತಿಶೇಷ ಹಲಸನಹಳ್ಳಿ ನರಸಿಂಹಶಾಸ್ತ್ರಿ ವಿರಚಿತ ‘ಚಂದ್ರಹಾಸ ಚರಿತ್ರೆ’ ಪೌರಾಣಿಕೆ ಕಥಾನಕದ ಯಕ್ಷಗಾನ ಉಚಿತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ, ಐತಿಹಾಸಿಕ ಪರಂಪರೆಯ ಅಪ್ಪಟ ಜನಪದ ಕಲೆಯಾದ ಯಕ್ಷಗಾನವನ್ನು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ವೈಭವೀಕರಿಸುವ ಸದುದ್ದೇಶದಿಂದ ಹಮ್ಮಿಕೊಳ್ಳಲಾದ ಈ ವೈಶಿಷ್ಟ ಪೂರ್ಣ ಯಕ್ಷಗಾನ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ ವಿನಂತಿಸಿದ್ದಾರೆ.