Subscribe to Updates
Get the latest creative news from FooBar about art, design and business.
Author: roovari
ಮೈಸೂರು : ಸಮತಾ ಅಧ್ಯಯನ ಕೇಂದ್ರದಿಂದ ವಿಜಯಾ ದಬ್ಬೆ ಸ್ಮರಣಾರ್ಥ ನಡೆಸಿದ ಕಾವ್ಯ ಹಾಗೂ ಪ್ರಬಂಧ ಸ್ಪರ್ಧೆಗಳ ಬಹುಮಾನ ವಿಜೇತರಿಗೆ ದಿನಾಂಕ 20-07-2024ರಂದು ಸರಸ್ವತಿಪುರಂನ ಮಾನಸ ಗಂಗೋತ್ರಿಯ ಯೂತ್ ಹಾಸ್ಟೆಲ್ನಲ್ಲಿ ಆಯೋಜಿಸಿದ್ದ ‘ಕಾವ್ಯ ಮತ್ತು ಪ್ರಬಂಧ ಕಮ್ಮಟ’ವು ಯುವ ಬರಹಗಾರರಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಅನಿಸಿದ್ದನ್ನು ಅನುಭವಿಸಿದ್ದನ್ನು ಸಾಹಿತ್ಯದ ಮೂಲಕ ಹೇಳುವ ಧೈರ್ಯವನ್ನು ಬೆಳೆಸಿಕೊಳ್ಳಲು ಬೇಕಾದ ಶಕ್ತಿಯನ್ನು ತುಂಬಿತು. ಕಾವ್ಯವೆಂದರೆ ಹೀಗೇ ಇರಬೇಕು ಎಂಬ ಚೌಕಟ್ಟಿಲ್ಲ. ಹೊಸದಾಗಿ ಕಟ್ಟುತ್ತಾ ಹೋಗಬೇಕು. ತವಕ-ತಲ್ಲಣ-ಭಾವನೆಗಳನ್ನು ಪರಿಣಾಮಕಾರಿಯಾಗಿ ಕಟ್ಟಿ ಕೊಡಬೇಕು. ಬರೆಯಬೇಕು, ವಿಮರ್ಶೆಯನ್ನು ಓದುಗರು ಹಾಗೂ ಸಮಾಜಕ್ಕೆ ಬಿಟ್ಟು ಬಿಡಬೇಕು ಎಂಬುದು ಯುವ ಕವಿಗಳು ಹಾಗೂ ಕವಯತ್ರಿಯರಿಗೆ ‘ಕಾವ್ಯ ಸಮಯ’ದಲ್ಲಿ ಕವಯತ್ರಿಯರಿಂದ ಬಂದ ಸಲಹೆಗಳಿವು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕವಯತ್ರಿ ಎಚ್.ಆರ್. ಸುಜಾತಾ ಮಾತನಾಡಿ, “ಸಾಹಿತ್ಯದ ಓದು ಎನ್ನುವುದು ನಮ್ಮ ಒಳಗು-ಹೊರಗಿನ ಮತ್ತು ಸಮಾಜದ ಒಳಗೂ ಇರುವ ಹೊಂದಾಣಿಕೆ. ನಮ್ಮ ಬರಹಕ್ಕೂ-ಓದುಗರ ತಿಳಿವಳಿಕೆಗೂ ಸಾಮ್ಯತೆ ಕಂಡುಬಂದಲ್ಲಿ ಒಂದು ಗುರುತು ಉಳಿಯುತ್ತದೆ. ಮರೆಯಲಾಗದ ಕೆಲವು ಚಿತ್ರಣಗಳು ನಮ್ಮ…
ಮೂಡುಬಿದಿರೆ: ಆಮ್ನಾಯ ಯಕ್ಷ ಸಂಸ್ಕೃತಿ ಬಳಗ ಗಾಳಿಮನೆ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಕೃತಿ ಮತ್ತು ಕುಂಬ್ಳೆ ಶ್ರೀಧರ ರಾವ್ ನುಡಿನಮನ ಕಾರ್ಯಕ್ರಮವು ದಿನಾಂಕ 20-07-2024ರ ಶನಿವಾರದಂದು ಮೂಡುಬಿದಿರೆಯ ಸಂಪಿಗೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಶಿ ಮಾತನಾಡಿ “ಯಕ್ಷಗಾನ ಕಲೆ ಹಾಗೂ ಕಲಾವಿದರನ್ನು ಕರಾವಳಿಗೆ ಸೀಮಿತಗೊಳಿಸುವುದು ಸಲ್ಲದು. ಯಕ್ಷಗಾನ ಪ್ರಸಂಗ ಸಾಹಿತ್ಯ, ಆಶು ಮಾತುಗಾರಿಕೆ, ಹಾಡುಗಾರಿಕೆ ಇವೆಲ್ಲವನ್ನೂ ಇಡಿಯ ಕನ್ನಡ ನಾಡಿನ ಸಾಹಿತ್ಯ, ಸಂಗೀತ ರಂಗಗಳ ಸಂದರ್ಭ ಸಮಾನವಾಗಿ ಪರಿಗಣಿಸಬೇಕಾಗಿದೆ.” ಎಂದು ಅಭಿಪ್ರಾಯಪಟ್ಟರು. ಆಮ್ನಾಯ ಯಕ್ಷ ಸಂಸ್ಕೃತಿ ಬಳಗದ ಸಂಸ್ಥಾಪಕ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಮಾತನಾಡಿ “ಕುಂಬ್ಳೆ ಶ್ರೀಧರ ರಾವ್ ಇವರು ಭಾವುಕ, ಸರಳ, ಹೃದ್ಯ ಮಾತುಗಾರಿಕೆಯ ಹಾಗೂ ನಾಟಕೀಯತೆ ಇಲ್ಲದ ಪ್ರಸ್ತುತಿಯ ಕಲಾವಿದ. ಎಲ್ಲರನ್ನೂ ತನ್ನವರೆಂದು ಬಗೆವ ಗುಣದವರಾಗಿದ್ದರು.” ಎಂದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಅವರು…
ಮೈಸೂರು : ಹಂಪಿ ಕನ್ನಡ ವಿ.ವಿ.ಯ ಭಾಷಾಂತರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಲೇಖಕಿ ಡಾ. ಎಂ. ಉಷಾರವರಿಗೆ ಪುಣೆಯ ಸಿಂಬಯಾಸಿಸ್ ಕಾನೂನು ಕಾಲೇಜಿನ ಡೀನ್ ಡಾ. ಶಶಿಕಲಾ ಗುರುಪುರ ಇವರು ದಿನಾಂಕ 21-07-2024ರಂದು 2024ನೇ ಸಾಲಿನ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು. ಶಿವಮೊಗ್ಗದ ‘ಅಹರ್ನಿಶಿ ಪ್ರಕಾಶನ’ ಪ್ರಕಟಿಸಿರುವ ಉಷಾ ಅವರ ‘ಬಾಳ ಬಟ್ಟೆ’ ಕಾದಂಬರಿಯನ್ನು ‘ಸಮತಾ ಅಧ್ಯಯನ ಕೇಂದ್ರ’ವು ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಸರಸ್ವತಿಪುರಂನ ರೋಟರಿ ಮೈಸೂರು ಪಶ್ಚಿಮ ಸಭಾಂಗಣದಲ್ಲಿ ರೂ.25,000/- ನಗದು ಬಹುಮಾನ ಹಾಗೂ ಫಲಕ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಡಾ. ಶಶಿಕಲಾ ಗುರುಪುರ ಇವರು ಮಾತನಾಡಿ “ಸ್ತ್ರೀ ವಾದದ ಒಳನೋಟವನ್ನು ಸರಳವಾಗಿ, ಶಿಸ್ತುಬದ್ಧವಾಗಿ ಅಳವಡಿಸಿಕೊಂಡಿರುವವರ ಸಂಖ್ಯೆ ಕಡಿಮೆ. ಅಂತಹವರ ಸಾಲಿನಲ್ಲಿ ಡಾ. ವಿಜಯಾ ದಬ್ಬೆ ಪ್ರಮುಖರು. ದಬ್ಬೆಯವರು ಜಗತ್ತಿನ ಪ್ರಭಾವಶಾಲಿ ಸ್ತ್ರೀ ವಾದಿಗಳೊಂದಿಗೆ ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ” ಎಂದು ಹೇಳಿದರು. ಈ ಸಮಾರಂಭದಲ್ಲಿ ವಿಜಯಾ ದಬ್ಬೆ ಕುರಿತು ಒಡನಾಡಿಯೂ ಆದ ನಿವೃತ್ತ…
ಕೋಟ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯಕ್ಷಸುಮನಸ ಹವ್ಯಾಸಿ ಕಲಾರಂಗ (ರಿ) ಕೋಟ ಇವರ ಸಹಯೋಗದಲ್ಲಿ ‘ಶ್ವೇತ ಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವು ದಿನಾಂಕ 21-07-2024 ರಂದು ಕೋಟದ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ. ಕುಂದರ್ ಮಾತನಾಡಿ “ಯಕ್ಷಗಾನ ಹವ್ಯಾಸಿ ಕಲಾತಂಡದ ಮೂಲಕ ಹೊಸ ಕಲಾವಿದರ ಸೃಷ್ಟಿ ಸಾಧ್ಯ. ಯಕ್ಷಗಾನ ನಮಗೆ ಜ್ಞಾನ ವೃದ್ಧಿ ಜೊತೆಗೆ ಬದುಕಿಗೆ ಬೆಳಕು ಚೆಲ್ಲುವ ನೀತಿಗಳನ್ನು ಸಾರುತ್ತದೆ. ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಮೂಡಿಸುವ ಕೆಲಸವಾಗಬೇಕಿದೆ.” ಎಂದು ಹೇಳಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಪ್ರಸಾಧನ ಪ್ರಮುಖ ದಿ. ಬಾಲಕೃಷ್ಣ ನಾಯಕ್ ಹಂದಾಡಿ, ಯಕ್ಷಗಾನ ಭಾಗವತರಾದ ದಿ. ಸುಬ್ರಹ್ಮಣ್ಯ ಧಾರೇಶ್ವರ್, ವೈದ್ಯರು ಹಾಗೂ ಗಾಯಕರಾದ ದಿ. ಡಾ. ಸತೀಶ್…
ಬಂಟ್ವಾಳ : ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದಲ್ಲಿ ‘ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ’ವನ್ನು ದಿನಾಂಕ 28-07-2024ರಂದು ಬೆಳಗ್ಗೆ ಗಂಟೆ 9-30ಕ್ಕೆ ಏರ್ಯಬೀಡಿನಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಏರ್ಯ ಬಾಲಕೃಷ್ಣ ಹೆಗ್ಡೆ ಇವರ ಗೌರವ ಉಪಸ್ಥಿತಿಯಲ್ಲಿ ಶ್ರೀಮತಿ ಆನಂದಿ ಎಲ್. ಆಳ್ವ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ ಗಂಟೆ 10-30ರಿಂದ ‘ಏರ್ಯರ ನೆನಪು ಮತ್ತು ಓದುವ ಹವ್ಯಾಸ’ ಇದರ ಬಗ್ಗೆ ಶ್ರೀ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು, ‘ಕಥಾ ರಚನೆ’ ಬಗ್ಗೆ ಶ್ರೀಮತಿ ತುಳಸಿ ಕೈರಂಗಳ ಮತ್ತು ‘ಕವಿತೆ ರಚನೆ’ ಬಗ್ಗೆ ಶ್ರೀ ಜಯರಾಮ ಪಡ್ರೆ ಮಾತನಾಡಲಿರುವರು. ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.
ಬೆಂಗಳೂರು: ಲೇಖಕಿ ಬಾನು ಮುಸ್ತಾಕ್ ಇವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಸೀನಾ ಆ್ಯಂಡ್ ಅದರ್ ಸ್ಟೋರೀಸ್’ ಕೃತಿಯು 2024ನೇ ಸಾಲಿನ ‘ಇಂಗ್ಲಿಷ್ ಪೆನ್’ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಕೃತಿಯನ್ನು ಲೇಖಕಿ ದೀಪಾ ಬಸ್ತಿ ಅನುವಾದಿಸಿದ್ದಾರೆ. ಕನ್ನಡ ಸೇರಿ ಹತ್ತು ಭಾಷೆಗಳಿಂದ ಇಂಗ್ಲಿಷ್ಗೆ ಅನುವಾದಗೊಂಡ 16 ಕೃತಿಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ. ಇದೇ ಮೊದಲ ಬಾರಿಗೆ ಕನ್ನಡದಿಂದ ಇಂಗ್ಲಿಷ್ಗೆ ಅನುವಾದಗೊಂಡ ಕೃತಿಗೆ ಈ ಪ್ರಶಸ್ತಿ ಲಭಿಸಿದೆ ಎಂದು ‘ಇಂಗ್ಲಿಷ್ ಪೆನ್’ ಸಂಘಟನೆ ತಿಳಿಸಿದೆ.
ಸಾಧಿಸಿದರೆ ಏನನ್ನು ಗಳಿಸಬಹುದು ಎಂಬುದಕ್ಕೆ ಸಾಕ್ಷಿ 75ರ ಹರೆಯದ ನೃತ್ಯ ಕಲಾವಿದೆ ಗುರು ಡಾ. ವಸುಂಧರಾ ದೊರೆಸ್ವಾಮಿ ಇವರು. ಯುವ ನೃತ್ಯ ಕಲಾವಿದೆಯರು ನಾಚಿಕೊಳ್ಳುವಂತೆ ತನ್ನ ಅಂಗಸೌಷ್ಟವ, ಅಭಿನಯ, ಅಡವುಗಳ ಪಕ್ವತೆ, ಅಂಗ ಶುದ್ಧತೆ ಇವುಗಳಿಗೆ ಪೂರಕವಾಗಿ ಹೊಸ ಹೊಸ ಆವಿಷ್ಕಾರವನ್ನು ಮಾಡಿ ‘ವಸುಂಧರಾ ಶೈಲಿ’ ಎಂಬುದನ್ನು ಕಲಾ ಪ್ರಪಂಚಕ್ಕೆ ನೀಡಿದ ಗುರು ಡಾ. ವಸುಂಧರಾ ದೊರೆಸ್ವಾಮಿ ನಿಜಕ್ಕೂ ಶ್ಲಾಘನೀಯರು. ಅವರು ಇತ್ತೀಚೆಗೆ ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಮಂಗಳೂರು ಇದರ ನಿರ್ದೇಶಕಿ ಹಾಗೂ ಗುರುಗಳ ಶಿಷ್ಯೆ ವಿದುಷಿ ಭ್ರಮರಿ ಶಿವಪ್ರಕಾಶ ಇವರು ಏರ್ಪಡಿಸಿದ ಆರು ದಿನಗಳ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಫಲಾನುಭವಿಗಳಾದ ತನ್ನ ಪ್ರಶಿಷ್ಯರುಗಳಲ್ಲಿ ಹೊಸತನವನ್ನು ಮೂಡಿಸುವಲ್ಲಿ ಯಶಸ್ವಿಯಾದರು. ಡಾ. ವಸುಂಧರಾ ಅವರು ಮಂಗಳೂರಿನ ಪ್ರಶಿಷ್ಯರೊಂದಿಗೆ ಉಡುಪಿ, ಬೆಂಗಳೂರು ಹಾಗೂ ಕೋಲ್ಕತ್ತಾದ ಶಿಷ್ಯ-ಪ್ರಶಿಷ್ಯರೂ ಈ ಕಾರ್ಯಾಗಾರದಲ್ಲಿ ಭಾಗಿಯಾದರು. ಪ್ರತೀದಿನವೂ ಆರಂಭದಲ್ಲಿ ನೃತ್ಯಕ್ಕೆ ಬೇಕಾದ ಉಪಯುಕ್ತ ಯೋಗಾಭ್ಯಾಸದಿಂದ ಆರಂಭಿಸಿ ನೃತ್ಯಬಂಧಗಳನ್ನು ಹೇಳಿಕೊಡುವಲ್ಲಿ ಡಾ. ವಸುಂಧರಾ ದೊರೆಸ್ವಾಮಿ ಯಶಸ್ವಿಯಾದರು. ಮೊದಲನೆಯ ದಿನ…
ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಸಂಸ್ಥೆಯ ನೇತೃತ್ವದಲ್ಲಿ ‘ಕರ್ನಾಟಕ ಸಂಭ್ರಮ 50ರ ಸವಿನೆನಪು 2023-24’ನೇ ಕಲಾಪೋಷಕರ ಸಹಕಾರದೊಂದಿಗೆ 4ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಸಿರಿಬಾಗಿಲು ಯಕ್ಷವೈಭವ’ದ ಉದ್ಘಾಟನಾ ಸಮಾರಂಭವು ದಿನಾಂಕ 17-07-2024 ರಂದು ನಡೆಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮಾವನ್ನು ದೀಪಬೆಳಗಿಸಿ ಉದ್ಘಾಟಿಸಿದ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮಾತನಾಡಿ “ಸಿರಿಬಾಗಿಲು ಪ್ರತಿಷ್ಠಾನವು ಕಾಸರಗೋಡಿನಲ್ಲಿ ಯಕ್ಷಗಾನ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಉಳಿವಿಗೆ ನೀಡುತ್ತಿರುವ ಕೊಡುಗೆ ಅಪಾರವಾದುದು. ಮೂವತ್ತಕ್ಕೂ ಹೆಚ್ಚು ಹವ್ಯಾಸಿ ತಂಡಗಳಿಗೆ ಯಕ್ಷಗಾನ ಪ್ರದರ್ಶನ ನೀಡಲು ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುತ್ತಿರುವುದು ಅತ್ಯುತ್ತಮ ಕೆಲಸ.” ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ “ಕನ್ನಡದ ಶುದ್ದಭಾಷೆಯನ್ನು ಉಳಿಸುವಲ್ಲಿ ಯಕ್ಷಗಾನದ ಪಾತ್ರ ಮಹತ್ತರವಾದುದು. ನಮ್ಮ ಪುರಾಣ ಕಥೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಯಕ್ಷಗಾನ ನಿರ್ವಹಿಸುತ್ತಿದೆ. ಗಡಿನಾಡು ಕಾಸರಗೋಡಿನಲ್ಲಿ ಮಲೆಯಾಳಿ ಸೆರಗಲ್ಲಿ ಕನ್ನಡವನ್ನು…
ಮಂಗಳೂರು : ವಿಸ್ಡಮ್ ಇನ್ಸ್ಟಿಟ್ಯೂಟ್ಸ್ ನೆಟ್ವರ್ಕ್ ವತಿಯಿಂದ, ಮಂಗಳೂರಿನ ಓಸಿಯಾನ್ ಪೆರ್ಲ್ ಹೋಟೆಲ್ ಸಭಾಂಗಣದಲ್ಲಿ ದಿನಾಂಕ 21-07-2024ರಂದು ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಕಾಸರಗೋಡು ಕನ್ನಡ ಭವನದ ರೂವಾರಿಗಳಾದ ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ದಂಪತಿಗಳ ಅಕ್ಷರ ಲೋಕದ ಸರ್ವತೋಮುಖ ಸಾಧನೆ, ಸೇವೆಗಾಗಿ ‘ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್’ ನೀಡಿ ಗೌರವಿಸಲಾಯಿತು. ವಿಸ್ಡಮ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಫ್ರಾನ್ಸಿಸ್ಕ್ಯಾ ತೇಜ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅಥಿತಿಗಳಾಗಿ ಚಾರ್ಟ್ರರ್ಡ್ ಅಕೌಂಟೆಂನ್ಸ್ ಒಫ್ ಇಂಡಿಯಾ ಮಂಗಳೂರು ಶಾಖೆಯ ಅಧ್ಯಕ್ಷರಾದ ಸಿ.ಎ. ಗೌತಮ್ ಪೈ, ಗಾಂಗ್ಲಿಯಾ ಟೆಕ್ನೊಲಾಜಿಸ್ ಎಂ.ಡಿ. ಹಾಗೂ ಎಂ.ಐ.ಟಿ. ಮಣಿಪಾಲ್ ಅಸೋಸಿಯೇಟೆಡ್ ಪ್ರೊಫೆಸರ್ ಡಾ. ದಶರಥ ರಾಜ್ ಕೆ. ಶೆಟ್ಟಿ ಮತ್ತು ತ್ರಿಷಾ ಸಮೂಹ ಸಂಸ್ಥೆ ಸಂಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಮುಖ್ಯ ಅಥಿತಿಗಳಾಗಿದ್ದರು. ವಿಸ್ಡಮ್ ಸಂಸ್ಥೆಯ ಸಿ.ಎ.ಓ. ಗುರುತೇಜ್ ಹಾಗೂ ಸಿ.ಇ.ಓ. ಅಭಿಲಾಷ್ ಕ್ಷತ್ರಿಯ ಕಾರ್ಯಕ್ರಮ ನಿರೂಪಿಸಿ ನೇತೃತ್ವ ನೀಡಿದರು. ವಿಸ್ಡಮ್ ಸಂಸ್ಥೆಯ ಮಂಗಳೂರು ಉಡುಪಿ, ಮಣಿಪಾಲ, ಹಾಸನ, ಶಿವಮೊಗ್ಗ, ಪುತ್ತೂರು, ಮೂಡುಬಿದಿರೆ,…
ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ (ಮಾಹೆ) ಮತ್ತು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಇದರ ವತಿಯಿಂದ ‘ಬಡಗುತಿಟ್ಟಿನ ಎರಡನೇ ವೇಷ ಮತ್ತು ಪುರುಷ ವೇಷಗಳ ಯುದ್ಧದ ಸನ್ನಿವೇಶಗಳ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ’ವನ್ನು ದಿನಾಂಕ 28-07-2024ರಂದು ಬೆಳಿಗ್ಗೆ ಗಂಟೆ 9-00ರಿಂದ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಐರೋಡಿ ಗೋವಿಂದಪ್ಪ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವನ್ನು ಉಡುಪಿಯ ಯಕ್ಷಗಾನ ಕಲಾರಂಗ ಉಪಾಧ್ಯಕ್ಷರಾದ ಶ್ರೀ ಎಸ್.ವಿ. ಭಟ್ ಇವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಆಯುಕ್ತರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರು ಅಧ್ಯಕ್ಷತೆ ವಹಿಸಲಿದ್ದು, ಯಕ್ಷಗಾನ ಬರಹಗಾರರಾದ ಶ್ರೀ ರಾಘವ ಶೆಟ್ಟಿ ಬೇಳೂರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣದಲ್ಲಿ ಭಾಗವಹಿಸುವ ಕಲಾವಿದರು : ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಚಂದ್ರಕಾಂತ ರಾವ್ ಮೂಡುಬೆಳ್ಳೆ, ಮದ್ದಳೆಯಲ್ಲಿ ಶ್ರೀ ಎನ್.ಜಿ. ಹೆಗಡೆ ಯಲ್ಲಾಪುರ ಮತ್ತು ಚೆಂಡೆಯಲ್ಲಿ ಶ್ರೀ ರಾಕೇಶ್ ಮಲ್ಯ ಹಳ್ಳಾಡಿ.…