Author: roovari

ಬದಿಯಡ್ಕ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಬಳ್ಳಂಬೆಟ್ಟು ಶ್ರೀ ಪರಿವಾರ ಸಹಿತ ಶಾಸ್ತಾರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭ ದಿನಾಂಕ 14-01-2024ನೇ ರವಿವಾರ ಶ್ರೀ ದೇವಳದಲ್ಲಿ ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವೀರಮಣಿ ಕಾಳಗ’ ಎಂಬ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ತಲ್ಪನಾಜೆ ವೆಂಕಟರಮಣ ಭಟ್ ಹಾಗೂ ಚೆಂಡೆ ಮದ್ದಳೆಗಳಲ್ಲಿ ಪುಂಡಿಕಾಯಿ ರಾಜೇಂದ್ರ ಪ್ರಸಾದ್ ಮತ್ತು ಲಕ್ಷ್ಮೀಶ ಬೇಂದ್ರೋಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಜೆ.ಸಿ. ಅಡಿಗ (ಹನೂಮಂತ), ಶುಭಾ ಗಣೇಶ್ (ಶತ್ರುಘ್ನ), ಕಿಶೋರಿ ದುಗ್ಗಪ್ಪ ನಡುಗಲ್ಲು (ಈಶ್ವರ), ಹರಿಣಾಕ್ಷಿ ಜೆ. ಶೆಟ್ಟಿ (ವೀರಮಣಿ) ಮತ್ತು ಶಾರದಾ ಅರಸ್ (ಶ್ರೀ ರಾಮ) ಸಹಕರಿಸಿದರು. ಉದ್ಯಮಿ ಬದಿಯಡ್ಕ ಗಿರಿಧರ್ ಪೈ ಪ್ರಾಯೋಜಿಸಿ, ಕುಂಬ್ಳೆ ಶ್ರೀಧರ್ ರಾವ್ ಸಂಯೋಜಸಿದ ಕಾರ್ಯಕ್ರಮಕ್ಕೆ ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ದೇವಳದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸಹಕರಿಸಿದರು.

Read More

ಪುತ್ತೂರು : ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವು ದಿನಾಂಕ 13-01-2024ರಂದು ನಡೆಯಿತು. “ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಮಲಯಾಳಂ, ಕನ್ನಡ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರ, ಎಳ್ಳಷ್ಟು ಕೋಪವಿಲ್ಲದ, ಸಾಧು ಧರ್ಮವನ್ನು ಅಳವಡಿಸಿಕೊಂಡ ಮಹಾನ್ ಚೇತನ ಅಮೃತ ಸೋಮೇಶ್ವರ ಅವರು” ಎಂದು ಹಿರಿಯ ಸಾಹಿತಿಗಳಾದ ಪ್ರೊ. ವಿ.ಬಿ. ಅರ್ತಿಕಜೆ ಅವರು ಅಮೃತ ಸೋಮೇಶ್ವರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸುತ್ತಾ ಶ್ರದ್ಧಾಂಜಲಿ ಅರ್ಪಿಸಿದರು. ಹಿರಿಯ ಸಾಹಿತಿಗಳಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಜಯಾನಂದ ಪೆರಾಜೆ, ನಲ್ಕ ಗೋಪಾಲಕೃಷ್ಣ ಆಚಾರ್, ಭಾಸ್ಕರ್ ಬಾರ್ಯ, ಹರಿನಾರಾಯಣ ಮಾಡವು, ಡಾ.ಹೆಚ್.ಜಿ. ಶ್ರೀಧರ್, ಅಬೂಬಕ್ಕರ್ ಆರ್ಲಪದವು, ಪುತ್ತೂರು ಉಮೇಶ್ ನಾಯಕ್ ಮುಂತಾದವರು ಅಮೃತ…

Read More

ಬೆಂಗಳೂರು : ಡಿ.ಬಿ. ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಅವರ ‘ವಿಷಾದ ಗಾಥೆ’ ಗಾಥೆ (ಕವಿತೆ)ಗಳ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 28-01-2024ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಮಲ್ಲತ್ತ ಹಳ್ಳಿ ಕಲಾಗ್ರಾಮದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಚಿಂತಕರು ಹಾಗೂ ಪತ್ರಕರ್ತೆ ಡಾ. ವಿಜಯಾ ಇವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಚಿಂತಕರು ಹಾಗೂ ಬರಹಗಾರರಾದ ಪ್ರೊ. ಬರಗೂರು ರಾಮಚಂದ್ರಪ್ಪ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಟಿ.ಎಸ್. ವಿವೇಕಾನಂದ, ಉಮೇಶ ಸಾಲಿಯಾನ್, ನಿರ್ಮಲಾ ನಾದನ್, ಕಗ್ಗೆರೆ ಮಂಜುನಾಥ ಇವರಿಂದ ಕವಿತಾ ವಾಚನ ಮತ್ತು ಭಾಗವತ ಶ್ರೀ ಎ.ಆರ್. ಪುಟ್ಟಸ್ವಾಮಿ ಅರಳಗುಪ್ಪೆ ಮತ್ತು ಸಂಗಡಿಗರಿಂದ ಮೂಡಲಪಾಯ ಯಕ್ಷಗಾನದ ಭಾಗವಂತಿಕೆ ನಡೆಯಲಿದೆ. ಯಾಜಿ ಪ್ರಕಾಶನ, ಮಹಾಮನೆ ಬಳಗ ತಮ್ಮೆಲರಿಗೂ ನಲ್ಮೆಯ ಸ್ವಾಗತ ಕೋರಿದ್ದಾರೆ.

Read More

ಬಲ್ಲಡಿಚಂಡ ಕಸ್ತೂರಿ ಸೋಮಯ್ಯನವರು ಹೈಸೊಡ್ಲೂರು ಗ್ರಾಮದ ಬಲ್ಯಮೀದರಿರ ಅಪ್ಪಯ್ಯ ಮತ್ತು ಚೋಂದಮ್ಮ ದಂಪತಿಯ ಪುತ್ರಿ. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಹುದಿಕೇರಿಯಲ್ಲಿ ಮುಗಿಸಿದ್ದಾರೆ. ಬಳಿಕ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ.ಯವರೆಗೆ ಮುಂದುವರಿಸಿದ್ದಾರೆ. ಮುಂದೆ ಕಾವೇರಿ ಕಾಲೇಜು ಗೋಣಿಕೊಪ್ಪಲಿನಲ್ಲಿ ಬಿ.ಎ. ಪದವಿ ಪಡೆದ ನಂತರ ಡಿ.ಎಡ್., ಬಿ.ಎಡ್. ತರಬೇತಿಗಳನ್ನು ಸರ್ವೋದಯ ಮಹಾ ವಿದ್ಯಾಲಯ ವಿರಾಜಪೇಟೆಯಲ್ಲಿ ಸಂಪೂರ್ಣಗೊಳಿಸಿದ್ದಾರೆ. ಆಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮ್ಯಾನೇಜೆಂಟ್ ಚೆನ್ನೈಯಲ್ಲಿ ಡಿ.ಇಡಿವರೆಗೆ ವಿದ್ಯಾಬ್ಯಾಸ ಮಾಡಿದ್ದಾರೆ. ವೃತ್ತಿಯಿಂದ ಪ್ರಸ್ತುತ ಸಂತ ಅಂತೋಣಿ ಶಾಲೆ ಪೊನ್ನಂಪೇಟೆಯಲ್ಲಿ ಕಳೆದ 27ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೂರ್ವದಲ್ಲಿ ಶ್ರೀಮಂಗಲ ಪ್ರೌಢಶಾಲೆ ಮತ್ತು ಸರ್ವದೈವತಾ ಶಾಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಓದು, ಗಾಯನ, ಹಾಡು ರಚನೆ ಹಾಗೂ ಲೇಖನ ಪ್ರಬಂಧ ರಚನೆಯನ್ನು ಹವ್ಯಾಸವನ್ನಾಗಿ ಮಾಡಿಕೊಂಡಿದ್ದಾರೆ. ದಿನಾಂಕ 23-07-2023ರಂದು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆದ “ಕೊಡವ ತಕ್ಕ್ ಎಳ್ತ್‌ಕಾರಡ ಕೂಟ”ದ ಇಪ್ಪತೈದನೆಯ ವರ್ಷಾಚರಣೆಯ (ಬೊಳ್ಳಿನಮ್ಮೆ) ಸಮಾರಂಭದಲ್ಲಿ ಇವರ ‘ನಂಗ ಕೊಡವ’, ‘ಕೊಡವಾಮೆಲ್ ಪೊಂಗ’, ‘ಕಸ್ತೂರಿರ ಕವನ’…

Read More

ಮಂಗಳೂರು : ಬೋಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ಜರಗಿದ ಮಠದ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ರಾಷ್ಟ್ರೀಯ ಯುವದಿನದ ಅಂಗವಾಗಿ ಅಮೃತ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಆಯೋಜಿಸಲಾದ ‘ಯುವ ಸಾಹಿತ್ಯ ಸಮ್ಮೇಳನ’ವು ದಿನಾಂಕ 13-01-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರಿನ ಮಾತಾ ಅಮೃತನಂದಮಯಿ ಮಠದ ಸ್ವಾಮಿನಿ ಮಂಗಲಾಮೃತ ಪ್ರಾಣ ಅವರು ಮಾತನಾಡುತ್ತಾ “ಸಾಹಿತ್ಯದ ಓದು ಮತ್ತು ರಚನೆಯಿಂದ ವ್ಯಕ್ತಿತ್ವದ ಬೆಳವಣಿಗೆ ಆಗುತ್ತದೆ. ಇದು ಶಿಕ್ಷಣಕ್ಕೆ ಪೂರಕವಾದ ಒಂದು ಚಟುವಟಿಕೆಯಾಗಿದ್ದು ಯುವಜನರು ತಮ್ಮ ಆಂತರ್ಯದ ಅಭಿವ್ಯಕ್ತಿಗಾಗಿ ಸಾಹಿತ್ಯವನ್ನು ಅವಲಂಬಿಸುವುದು ಸೂಕ್ತ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು “ಸಾಹಿತ್ಯದ ಬೆಳವಣಿಗೆಗೆ ನಾವು ಯುವಜನರ ಕಡೆಗೆ ಹೆಚ್ಚಾಗಿ ಗಮನ ಹರಿಸಿದ್ದೇವೆ. ಯುವಜನರಿಗೆ ಅನ್ವಯವಾಗುವ ಕಾರ್ಯಕ್ರಮಗಳ ಮೂಲಕ ಅವರನ್ನು ತಲಪುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕವಿ ಸಾಹಿತಿ ಹಾಗೂ ಅಮೃತ ಸಂಸ್ಕೃತಿ ಮತ್ತು…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು ದಿನಾಂಕ 07-01-2024ನೇ ರವಿವಾರದಂದು ಮಂಗಳೂರಿನ ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಜಾನಪದ ವಿದ್ವಾಂಸ ಡಾ. ಚಿನ್ನಪ್ಪ ಗೌಡ “ಡಾ. ಅಮೃತ ಸೋಮೇಶ್ವರರ ಗ್ರಂಥಗಳಲ್ಲಿರುವ ಮಾಹಿತಿ ಸಾರ್ವಕಾಲಿಕವಾಗಿದ್ದು, ಅವುಗಳು ಕರಾವಳಿಯ ಸಾಂಸ್ಕೃತಿಕ ಸಾಕ್ಷಿ ಪ್ರಜ್ಞೆಯಾಗಿ ಉಳಿಯಲಿವೆ. ಅಮೃತರು ವ್ಯಕ್ತಿತ್ವ, ವಿನಯ ಮತ್ತು ವಿದ್ವತ್ತಿನ ಅಪೂರ್ವ ಸಂಗಮ. ಕರಾವಳಿಯಲ್ಲಿ ಲಲಿತ ಕಲಾ ಮಹಾವಿದ್ಯಾಲಯ ಸ್ಥಾಪಿಸುವುದು ಅವರ ಕನಸಾಗಿತ್ತು. ಅಂತಹ ಮಹಾವಿದ್ಯಾಲಯವನ್ನು ಸ್ಥಾಪಿಸಿದರೆ ಕರಾವಳಿ ಭಾಗದ ಸಂಸ್ಕೃತಿ ಉಳಿಸಲು ದೊಡ್ಡ ಕೊಡುಗೆ ನೀಡಿದಂತಾಗುತ್ತದೆ.” ಎಂದು ಹೇಳಿದರು. ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಮಾತನಾಡಿ “ಡಾ. ಅಮೃತ ಸೋಮೇಶ್ವರ ಅವರು ಬರೆಯದ ವಿಷಯವೇ ಇಲ್ಲ. ವಿಷಯದಲ್ಲಿ ಖಚಿತವಾಗಿದ್ದರು. ತಮ್ಮ ನಿಲುವನ್ನು ಬಿಟ್ಟು ಕೊಡುತ್ತಿರಲಿಲ್ಲ. ಪುರಾಣಕ್ಕೆ ಹೊಸ ಅರ್ಥ ಹಾಗೂ ಹೊಸರೂಪ ನೀಡಿದ…

Read More

ಬೆಂಗಳೂರು : ಕಥಾಬಿಂದು ಪ್ರಕಾಶನದ ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕಥಾಬಿಂದು ಕನ್ನಡ ಸಾಹಿತ್ಯ ಸಮ್ಮೇಳನ’ವು ದಿನಾಂಕ 21-01-2024ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ಕನ್ನಡ ತಿಲಕ ರಾಜ್ಯ ಪ್ರಶಸ್ತಿ’ ಪ್ರದಾನ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ‘ಕಥಾಬಿಂದು ಸಾಹಿತ್ಯ ಮಾಲೆ -2’ 40 ಕೃತಿಗಳು ಅನಾವರಣಗೊಳ್ಳಲಿವೆ. ಈ ಸಾಹಿತ್ಯ ಸಮ್ಮೇಳನವನ್ನು ಶಿವಮೊಗ್ಗದ ಹಿರಿಯ ಸಾಹಿತಿ ಶ್ರೀಮತಿ ಗಾಯತ್ರಿ ಸುರೇಂದ್ರ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಆನಂದ ನಿಲಯ ಪ್ರಕಾಶನದ ಶ್ರೀ ಆನಂದ್ ಕೊರಟಿಯವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಾಮನ್ ರಾವ್ ಬೇಕಲ್ ಇವರ ಅಧ್ಯಕ್ಷತೆಯಲ್ಲಿ ‘ಕನ್ನಡ ತಿಲಕ ರಾಜ್ಯ ಪ್ರಶಸ್ತಿ’ ಪ್ರದಾನ ಮತ್ತು ಶ್ರೀಮತಿ ಭವ್ಯ ಸುಧಾಕರ ಜಗಮನೆ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿರುವುದು. ಹಿರಿಯ ಸಾಹಿತಿ ಕೆ.ವಿ. ಲಕ್ಷ್ಮಣ ಮೂರ್ತಿ ಇವರ ಉಪಸ್ಥಿತಿಯಲ್ಲಿ ಶ್ರೀಮತಿ ವಿನೋದಿನಿ ಆನಂದ್ ಇವರ ಅಧ್ಯಕ್ಷತೆಯಲ್ಲಿ ‘ಕಥಾಬಿಂದು ಸಾಹಿತ್ಯ ಮಾಲೆ -2’…

Read More

ಬೆಂಗಳೂರು : ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಆಶ್ರಯ ಮತ್ತು ಶುಭಾಶೀರ್ವಾದದೊಂದಿಗೆ ಬೆಂಗಳೂರಿನ ಶ್ರೀ ರಾಮ ಲಲಿತ ಕಲಾ ಮಂದಿರ (ರಿ.) ಇವರ ಆಶ್ರಯದಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಅರ್ಪಿಸುವ 25ನೇ ‘ಮಂಜುನಾದ’ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳನ್ನಾಧರಿಸಿದ ಸಂಗೀತ ಕಚೇರಿಯು ಶ್ರೀ ರಾಮ ಲಲಿತ ಕಲಾ ಮಂದಿರದ ಸಭಾಂಗಣದಲ್ಲಿ ದಿನಾಂಕ 21-01-2024ರಂದು ಸಂಜೆ ಗಂಟೆ 5.30ಕ್ಕೆ ನಡೆಯಲಿದೆ. ‘ಮಂಜುನಾದ’ ಸಂಗೀತ ಕಛೇರಿಯಲ್ಲಿ ಬೆಂಗಳೂರಿನ ಅದಿತಿ ಪ್ರಹ್ಲಾದ್, ಸ್ಮೃತಿ ಭಾಸ್ಕರ್ ಮತ್ತು ಅನಘಾ ಯೋಗಾನಂದ ಇವರ ಹಾಡುಗಾರಿಕೆಗೆ ಬೆಂಗಳೂರಿನ ಕಾರ್ತಿಕೇಯ ರಾಮಚಂದ್ರ ವಯಲಿನ್, ರಕ್ಷಿತ್ ಶರ್ಮ ಮೃದಂಗ ಮತ್ತು ಶಮಿತ್ ಎಸ್. ಗೌಡ ಘಟಂನಲ್ಲಿ ಸಾಥ್ ನೀಡಲಿದ್ದಾರೆ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷರಾದ ಡಾ. ಎಮ್.ಆರ್.ವಿ. ಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Read More

ಉಳ್ಳಾಲ : ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಳ್ಳಾಲ ಇದರ ವತಿಯಿಂದ ಸಾಹಿತಿ ಪ್ರೊ. ಅಮೃತ ಸೋಮೇಶ್ವರರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 09-01-2024ರ ಮಂಗಳವಾರದಂದು ತೊಕ್ಕೊಟ್ಟು ಒಳಪೇಟೆಯಲ್ಲಿರುವ ಅಬ್ಬಕ್ಕ ಉತ್ಸವ ಸಮಿತಿಯ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಮಾತನಾಡಿ “ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು, ಸಮಿತಿಗೆ ಮಾರ್ಗದರ್ಶಕರಾಗಿದ್ದರು.” ಎಂದು ಹೇಳಿದರು. ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್ ಮಾತನಾಡಿ “ಅಮೃತ ಸೋಮೇಶ್ವರರು ಅಪೂರ್ವ ಮೇಧಾವಿ, ಕಳೆದ 26 ವರ್ಷಗಳಿಂದ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಗೌರವ ಸಲಹೆಗಾರರಾಗಿದ್ದು, ಪ್ರತಿವರ್ಷ ಅಬ್ಬಕ್ಕ ಪ್ರಶಸ್ತಿ, ಪುರಸ್ಕಾರದ ಆಯ್ಕೆ ಅವರಿಂದಲೇ ನಡೆಯುತ್ತಿತ್ತು. ಅವರ ಆಯ್ಕೆಯೇ ಅಂತಿಮವಾಗುತ್ತಿತ್ತು. ಅಲ್ಲದೆ ಅಬ್ಬಕ್ಕ ಸಂಕಥನ, ಉಳ್ಳಾಲದ ಇತಿ-ಅದಿ ಪುಸ್ತಕದ ಪ್ರಧಾನ ಸಂಪಾದಕರಾಗಿದ್ದರು. ಅಬ್ಬಕ್ಕ ನಾಟಕ ಕೂಡಾ ಅವರಿಂದಲೇ ರಚನೆಯಾಗಿತ್ತು. ಅವರ ನಿಧನ ಸಾಹಿತ್ಯ ಲೋಕಕ್ಕೆ,…

Read More

ಮಂಗಳೂರು : ಸಂಗೀತ ಪರಿಷತ್ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾರತೀಯ ವಿದ್ಯಾಭವನ ಸಹಯೋಗದೊಂದಿಗೆ ವಿದ್ವಾನ್ ಶ್ರೀನಿವಾಸ ಉಡುಪ ಸ್ಮರಣಾರ್ಥ ಪಿಟೀಲು ವಾದನ ಕಛೇರಿಯು ದಿನಾಂಕ 31-12-2023ರಂದು ಮಂಗಳೂರಿನ ಶಾರದಾ ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಬೆಂಗಳೂರಿನ ಹೊಸಹಳ್ಳಿ ರಘುರಾಮ, ಮತ್ತೂರು ವಿಶ್ವಜಿತ್ ಹಾಗೂ ಕಾರ್ತಿಕೇಯ ಅವರ ಪಿಟೀಲು ವಾದನಕ್ಕೆ ಮೃದಂಗದಲ್ಲಿ ಆನೂರು ವಿನೋದ್ ಶ್ಯಾಮ್ ಬೆಂಗಳೂರು ಹಾಗೂ ಖಂಜೀರದಲ್ಲಿ ಸುಮುಖ ಕಾರಂತ ಮಂಗಳೂರು ಪಕ್ಕವಾದ್ಯದಲ್ಲಿ ಸಾಥ್ ನೀಡಿದರು. ಇದಕ್ಕೂ ಮೊದಲು ಸುನಾದ ಎಸ್.ಪಿ. ಅವರ ಹಾಡುಗಾರಿಕೆ ಕಛೇರಿ ನಡೆಯಿತು. ಇವರಿಗೆ ಪಿಟೀಲಿನಲ್ಲಿ ಸುಪ್ರೀತ ಪಿ.ಎಸ್. ಹಾಗೂ ಮೃದಂಗದಲ್ಲಿ ಸುಮುಖ ಕಾರಂತ ಸಹಕರಿಸಿದರು. ಇದೇ ಸಂದರ್ಭದಲ್ಲಿ ಸಂಗೀತ ಲೋಕದ ದಿಗ್ಗಜ, ಸಂಗೀತ ಕಲಾನಿಧಿ ಚೆನ್ನೈನ ಓ.ಎಸ್. ತ್ಯಾಗರಾಜನ್ ಅವರನ್ನು ಸ್ಮರಿಸಲಾಯಿತು. ವೈದ್ಯ ಡಾ. ಸಿ.ವಿ. ರಘುವೀರ್, ನ್ಯಾಯವಾದಿ ಅನಂತಕೃಷ್ಣ ಉಡುಪ ಅವರನ್ನು ಗೌರವಿಸಲಾಯಿತು. ಸಂಗೀತ ಪರಿಷತ್ತಿನ ಜತೆ ಕಾರ್ಯದರ್ಶಿ ಅಶ್ವಿನಿ ಸ್ವಾಗತಿಸಿ ಕಲಾವಿದರನ್ನು ಪರಿಚಯಿಸಿದರು. ಖಜಾಂಚಿ ಸುಬ್ರಹ್ಮಣ್ಯ ಉಡುಪ…

Read More