Author: roovari

ಕೋಟ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಾರಥ್ಯದಲ್ಲಿ ನಡೆಯುವ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ ಅನುಸಂಧಾನ-2023 ಇದರ ಅಧ್ಯಕ್ಷರಾಗಿ ಸಾಹಿತಿ-ಸಂಶೋಧಕ ಶ್ರೀ ಬಾಬುಶಿವ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟದ ವಿವೇಕ ವಿದ್ಯಾಲಯದ ಆವರಣದಲ್ಲಿ ದಿನಾಂಕ 05-12-2023 ಮತ್ತು 06-12-2023ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೊಟೇಲ್ ಉದ್ಯಮಿ ಶ್ರೀ ಬಾಬುಶಿವ ಪೂಜಾರಿ ಅವರು ವೇದ, ಆಧುನಿಕ ಸಾಹಿತ್ಯ, ಬೌದ್ಧ, ಜೈನ, ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಗ್ರಂಥಗಳನ್ನು ಆಳವಾಗಿ ಅಭ್ಯಸಿಸಿದ್ದಾರೆ. ನಾರಾಯಣ ಗುರುಗಳ ಆದರ್ಶ, ನಾರಾಯಣ ಗುರು ವಿಜಯ ದರ್ಶನ, ಅನುಸಂಧಾನ, ಹಗ್ಗಿನ ಹನಿ ಮುಂತಾದವು ಇವರ ಕೃತಿಗಳು. ಶ್ರೀಕೃಷ್ಣ ದೇವರಾಯ, ಕೋಟಿ ಚೆನ್ನಯ್ಯ, ತುಳು ಸಂಸ್ಕೃತಿ, ಕಾಂತಬಾರೆ ಬೂದಬಾರೆ, ಸಿರಿ, ನಾಗಾರಾಧನೆ, ಭೂತಾರಾಧನೆ ಮತ್ತು ತುಳುನಾಡಿನ ಗರಡಿಗಳ ಬಗ್ಗೆ ಸಂಶೋಧನಾತ್ಮಕ ಫ್ರೌಡ ಲೇಖನಗಳನ್ನು ಪ್ರಕಟಿಸಿದ್ದಾರೆ. ‘ನಾರಾಯಣ ಗುರು ವಿಜಯ ದರ್ಶನ’ವು ಆಧ್ಯಾತ್ಮ ಮತ್ತು ಸಾಮಾಜಿಕ ನೆಲೆಯಲ್ಲಿ ನೆಲದ ಸಂಕಟ ಮತ್ತು ಆಶೋತ್ತರಗಳನ್ನು ತೆರೆದಿಟ್ಟ…

Read More

ಮಂಗಳೂರು : ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಮಂಡಳಿಯವರಿಂದ ಮಾಸಿಕ ಹುಣ್ಣಿಮೆಯ ಪ್ರಯುಕ್ತ ‘ಭೃಗು ಶಾಪ’ ಎಂಬ ಯಕ್ಷಗಾನ ತಾಳ ಮದ್ದಳೆಯು ದಿನಾಂಕ 27-11-2023 ಸೋಮವಾರದಂದು ನಡೆಯಿತು. ಹಿಮ್ಮೇಳದಲ್ಲಿ ಸರಪಾಡಿ ಹರಿಪ್ರಸಾದ್ ಕಾರಂತ, ಜಯ ದೇವಾಡಿಗ, ಬಾಯಾರು ಎಸ್.ಎನ್. ಭಟ್, ಜಯರಾಮ್ ಆಚಾರ್ಯ ಚೇಳಾರು, ಸುರೇಶ್ ಕಾಮತ್, ರಾಘವೇಂದ್ರ ಭಟ್ ಮತ್ತು ಹರೀಶ್ ಹೆಬ್ಬಾರ್ ಹಾಗೂ ಮುಮ್ಮೇಳದಲ್ಲಿ ಭೃಗು – ವಾಸುದೇವ ಆಚಾರ್, ದೇವೇಂದ್ರ -ಚಂದ್ರಶೇಖರ್ ಕೊಡಿಪ್ಪಾಡಿ, ವಿಷ್ಣು – ಗುರುತೇಜ ಶೆಟ್ಟಿ ಒಡಿಯೂರು, ತಮಾಸುರ – ಮನೋಹರ ಕುಂದರ್ ಮತ್ತು ಖ್ಯಾತಿ – ರಾಧಾಕೃಷ್ಣ ಭಟ್ ಸಹಕರಿಸಿದರು.

Read More

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ ಕಾರ್ಕಳ ತಾಲೂಕು ಘಟಕದ ವತಿಯಿಂದ ಹತ್ತೊಂಬತ್ತನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಸಹಯೋಗದಲ್ಲಿ ಹಿರಿಯ ಸಾಹಿತಿ ಶ್ರೀ ಸೂಡ ಸದಾನಂದ ಶೆಣೈ ಸರ್ವಾಧ್ಯಕ್ಷತೆಯಲ್ಲಿ ದಿನಾಂಕ 03-12-2023ರಂದು ಗಣಿತನಗರ ಕಾರ್ಕಳ ಜ್ಞಾನಸುಧಾ ಸಭಾಂಗಣದಲ್ಲಿ ಜರಗಲಿದೆ. ದಿನಾಂಕ 03-12-2023ರಂದು ಬೆಳಗ್ಗೆ 8 ಗಂಟೆಗೆ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರಿಂದ ಪರಿಷತ್ತಿನ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ಕುಕ್ಕುಂದೂರು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಕೆ., ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ದಿನೇಶ್ ಎಂ. ಕೊಡವೂರು, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿರುವರು. ಬೆಳಿಗ್ಗೆ 8:30ಕ್ಕೆ ಸಮ್ಮೇಳನಾಧ್ಯಕ್ಷರ ಸ್ವಾಗತ ಹಾಗೂ ಭುವನೇಶ್ವರಿ ದೇವಿಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ…

Read More

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಾಸುಹೊಕ್ಕಾಗಿರುವ, ಕರ್ನಾಟಕಕ್ಕೆ ವಿಶಿಷ್ಟವಾಗಿರುವ ಕಲೆ ಯಕ್ಷಗಾನ. ಯಕ್ಷಗಾನದ ಬಗ್ಗೆ ನಿಮಗೆಲ್ಲ ತಿಳಿದೇ ಇರುತ್ತದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಬಹು ಪ್ರಸಿದ್ದ ಕಲೆ ಅದು. ಯಕ್ಷಗಾನದಿಂದ ಪ್ರೇರಿತವಾದ ಆದರೆ ಯಕ್ಷಗಾನಕ್ಕಿಂತ ಭಿನ್ನವಾಗಿ ಬೆಳೆದ ಪ್ರಾಕಾರ ಯಕ್ಷಗಾನ ತಾಳಮದ್ದಲೆ. ಯಕ್ಷಗಾನದ ಅಂಗವಾದ, ಯಕ್ಷಗಾನ ತಾಳಮದ್ದಲೆ ಅದರ ಜೊತೆ ಜೊತೆಗೇ ಬೆಳೆದು ಬಂದಿದೆ. ಕೆಲ ಸಂಶೋಧಕರು, ತಾಳಮದ್ದಲೆ ಎಂಬ ಕಲಾಪ್ರಕಾರ ಯಕ್ಷಗಾನಕ್ಕಿಂತಲೂ ಮೊದಲೇ ಇದ್ದಿರಬಹುದು ಎಂದು ಅಭಿಪ್ರಾಯ ಪಡುತ್ತಾರೆ. ತಾವು ಪಾತ್ರವಾಗುವುದರ ಜತೆಗೆ ನೋಡುಗರನ್ನು ಪಾತ್ರದ ಪರಿಸರದೊಳಕ್ಕೆ ಎಳೆದೊಯ್ಯುವ ಅನೂಹ್ಯ ಸಾಧ್ಯತೆ ಇರುವ ಈ ತಾಳಮದ್ದಲೆ ನಿಜಕ್ಕೂ ಅದ್ಭುತ ಕಲೆ. ಯಾವುದೇ ವೇಷಭೂಷಣಗಳಿಲ್ಲದೇ, ಬರಿಯ ಮಾತೇ ಪ್ರಧಾನವಾಗಿರುವ ಕಲೆ ತಾಳಮದ್ದಲೆ. ಮಾತಿನ ಮಂಥನ, ಜಿಜ್ಞಾಸೆ, ಚರ್ಚೆ, ವಾದಗಳೇ ಕೂಟವೊಂದರ ಬಂಡವಾಳ. ತಾಳಮದ್ದಲೆಯ ಅರ್ಥಧಾರಿಗಳು ಸದಾ ಅಧ್ಯಯನ ನಿರತರು. ಒಂದು ಪ್ರಸಂಗದ ಯಾವುದೋ ಒಂದು ಸನ್ನಿವೇಶವನ್ನು ಎದುರಿಸುವಾಗ ಅದೆಷ್ಟು ಪುರಾಣಗಳ, ಇತಿಹಾಸದ ಘಟನೆಗಳನ್ನು ಉಲ್ಲೇಖಿಸುತ್ತಾರೆಂದರೆ, ಕೇಳುಗ…

Read More

ಉಡುಪಿ : ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷಗಾನ ಕಲಾ ರಂಗ (ರಿ.) ಉಡುಪಿ ಇವರ ಸಹಯೋಗದಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟಿನಿಂದ ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಡೆಯುವ ಯಕ್ಷಗಾನ ತರಬೇತಿಗಳ ಪ್ರದರ್ಶನ, ‘ಕಿಶೋರ ಯಕ್ಷಗಾನ ಸಂಭ್ರಮ – 2023’ವು ದಿನಾಂಕ 29-11-2023ರಿಂದ 05-01-2023ರವರೆಗೆ ನಡೆಯಲಿದೆ. ದಿನಾಂಕ 29-11-2023ರಂದು ಸಂಜೆ 6.30ಕ್ಕೆ ಬ್ರಹ್ಮಾವರದ ಬಂಟರ ಭವನದ ಮುಂಭಾಗದ ವೇದಿಕೆಯಲ್ಲಿ ಉದ್ಘಾಟನೆ ನಡೆಯಲಿದೆ. ಪ್ರತಿದಿನ 1.30 ಗಂಟೆ ಅವಧಿಯ ಎರಡು ಪ್ರಸಂಗ ಪ್ರದರ್ಶನಗೊಳ್ಳಲಿದೆ. ಬ್ರಹ್ಮಾವರ ಬಂಟರ ಭವನದ ಬಳಿ, ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ, ಶಿರ್ವದ ಮಹಿಳಾ ಸೌಧ, ಪಡುಕೆರೆ ಮಣೂರು ಸರಕಾರಿ ಸಂಯುಕ್ತ ಪ್ರೌಢ ಶಾಲಾ ವಠಾರ ಮತ್ತು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ವಠಾರ ಸೇರಿದಂತೆ ಒಟ್ಟು 6 ವೇದಿಕೆಗಳಲ್ಲಿ 70 ಪ್ರದರ್ಶನಗಳು ನಡೆಯಲಿದೆ. ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವ್ಯಾಪ್ತಿಯಲ್ಲಿ ಪ್ರೌಢಶಾಲಾ…

Read More

ಮುಡಿಪು : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅದ್ಯಯನ ಪೀಠ, ಕನಕದಾಸ‌ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಕನಕ ಜಯಂತಿಯ ಪ್ರಯುಕ್ತ ‘ಕನಕ ತತ್ವಚಿಂತನ’ ಪ್ರಚಾರೋಪನ್ಯಾಸ ಮಾಲಿಕೆ ಮತ್ತು ‘ರಾಮಧಾನ್ಯ ಚರಿತೆ : ಅರ್ಥಾನುಸಂಧಾನ’ ಗಮಕ ವ್ಯಾಖ್ಯಾನ ಬಾನುಲಿ ಸರಣಿ ಕಾರ್ಯಕ್ರಮವು ದಿನಾಂಕ 28-11-2023ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ “ಕನಕದಾಸರ ಸಾಹಿತ್ಯ ರಚನೆಗಳು ಅತ್ಯದ್ಭುತವಾದುದು. ಅವರು ಸಾಹಿತಿ, ಕವಿ ಮಾತ್ರವಲ್ಲ ಭಕ್ತಿ ಚಳುವಳಿಯ ಮೂಲಕ ಸಮಾಜದ ಅಸಮಾನತೆಯನ್ನು ದೂರಗೊಳಿಸಿ ಸಮಾನತೆಯ ಸಮಾಜ ನಿರ್ಮಾಣದ ಕನಸು ಕಂಡವರು. ಅಧ್ಯಾತ್ಮದ ಮೂಲಕ ಸಮಾನತೆಯ ಆಶಯವನ್ನು ಬಿತ್ತಿದವರು. ಅವರ ಸಾಹಿತ್ಯ ರಚನೆಗಳು, ಸಂದೇಶಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ಸಮಾಜದಲ್ಲಿ ಎಲ್ಲರನ್ನೂ ಒಗ್ಗೂಡಿಸಿ, ಭಿನ್ನತೆಯನ್ನು ದೂರಗೊಳಿಸಿ ಸಮಾನತೆಯ ಸಮಾಜ ಕಟ್ಟುವುದು ಅವರ ಕನಸಾಗಿತ್ತು. ಅವರ‌ ಸಂದೇಶ ಮತ್ತು ಜೀವನವನ್ನು ವಿದ್ಯಾರ್ಥಿಗಳಿಗೆ, ಸಮಾಜಕ್ಕೆ ತಲುಪಿಸುವ ಕಾರ್ಯ ಪೀಠದಿಂದ‌ ಆಗುತ್ತಿರುವುದು ಶ್ಲಾಘನೀಯ” ಎಂದರು. ಉಪ್ಪಿನಂಗಡಿ ಕಾಲೇಜು ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಅವರು…

Read More

ಕಾಸರಗೋಡು : ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಮದ್ದಳೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯಕ್ಷಗಾನದ ಹಿಮ್ಮೇಳದಲ್ಲಿ ಅವರ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿನಾಂಕ 23-12-2023ರಂದು ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಕೀರಿಕ್ಕಾಡು ಸಂಸ್ಮರಣೆಯೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಕಲೋತ್ಸವದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪದ್ಯಾಣ ಶಂಕರನಾರಾಯಣ ಭಟ್ ಇವರು ರಾಮಕ್ಷಷ್ಣ ಭಟ್ ಮತ್ತು ಪಾರ್ವತಿ ಅಮ್ಮ ದಂಪತಿಗಳ ಸುಪುತ್ರ. ಯಕ್ಷಗಾನ ಗುರುಗಳಾದ ಬಾಲಪಾಠ ಅಣ್ಣ ತಿರುಮಲೇಶ್ವರ ಭಟ್ಟ ಮತ್ತು ಚಿಪ್ಪಾರು ಕೃಷ್ಣಯ್ಯ ಬಲ್ಲಾಳ್ ಇವರಲ್ಲಿ ಯಕ್ಷಗಾನದ ಹಿಮ್ಮೇಳ ಅಭ್ಯಸಿಸಿದರು. 1973ರಿಂದ ಕುಂಡಾವು ಮೇಳ, ಕರ್ನಾಟಕ ಮೇಳ, ಸುರತ್ಕಲ್ಲು ಮೇಳ, ಸುಂಕದಕಟ್ಟೆ ಮೇಳ, ಕಟೀಲು ಮೇಳ, ಕದ್ರಿ ಮೇಳ, ಕುಂಟಾರು ಮೇಳ, ಎಡನೀರು ಮೇಳ, ಹೊಸನಗರ ಮೇಳಗಳಲ್ಲಿ ಸುಮಾರು 50 ವರ್ಷದ ಅನುಭವ ಹೊಂದಿದ್ದಾರೆ. ಶ್ರೀಯುತರಿಗೆ ಕರ್ನಾಟಕ ಎಕಾಡಮಿ ಪ್ರಶಸ್ತಿ,…

Read More

ಮಂಗಳೂರು : ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಪುತ್ತೂರಿನ ಕರ್ನಾಟಕ ಯಕ್ಷ ಭಾರತಿ (ರಿ.) ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಹನ್ನೊಂದನೇ ವರ್ಷದ ನುಡಿ ಹಬ್ಬದ ಪ್ರಯುಕ್ತ ದಿನಾಂಕ 24-11-2023ರಂದು ಏರ್ಪಡಿಸಿದ್ದ ವಿದ್ವಾನ್ ಕೆ. ಕಾಂತ ರೈ ಮೂಡಬಿದ್ರೆ ಅವರ ಸ್ಮರಣಾರ್ಥ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಮರಣ ಜ್ಯೋತಿ ಬೆಳಗಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ “ಜೀವನದ ಜಂಜಾಟದ ನಡುವೆ ನಮಗೆ ನೆಮ್ಮದಿ ನೀಡುವ ಶಕ್ತಿ ಇರುವುದು ಕಲೆಗೆ ಮಾತ್ರ. ಯಕ್ಷಗಾನ, ನಾಟಕ, ನೃತ್ಯ – ಸಂಗೀತಗಳ ಮೂಲಕ ಮನಸ್ಸು – ಬುದ್ಧಿಗಳು ಜಾಗೃತಗೊಳ್ಳುತ್ತವೆ. ಅದಕ್ಕೆ ಕಾರಣರಾದ ಕಲಾವಿದರನ್ನು ನಾವು ಮರೆಯಬಾರದು. ಕಲೆಗಾಗಿ ಬದುಕಿದವರು ಸದಾ ಸ್ಮರಣೀಯರು. ಯಕ್ಷಾಂಗಣವು…

Read More

ಮುಂಬಯಿ : ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಮತ್ತು ವ್ಯಾಸರಾಯ ಬಲ್ಲಾಳ ಪ್ರತಿಷ್ಠಾನ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ವ್ಯಾಸರಾಯ ಬಲ್ಲಾಳ ಶತಮಾನೋತ್ಸವ ಸಂಭ್ರಮ ಮತ್ತು ವ್ಯಾಸರಾಯ ಬಲ್ಲಾಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 01-12-2023 ಶುಕ್ರವಾರದಂದು ಮುಂಬಯಿಯ ಸಾಂತಾಕ್ರೂಜ್ ಪೂರ್ವದ ಕಲಿನಾ ಕ್ಯಾಂಪಸ್ಸಿನಲ್ಲಿರುವ ಮುಂಬಯಿ ವಿಶ್ವವಿದ್ಯಾಲಯದ ಜೆ.ಪಿ. ನಾಯಕ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮೊದಲ ಉಪನ್ಯಾಸ ಮೈಸೂರಿನ ಹಿರಿಯ ಸಾಹಿತಿ ಡಾ.ಕೃಷ್ಣಮೂರ್ತಿ ಹನೂರು ಇವರಿಂದ ‘ಕತೆಗಾರರಾಗಿ ವ್ಯಾಸರಾಯ ಬಲ್ಲಾಳ’ ಮತ್ತು ಖ್ಯಾತ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್‌ ಎರಡನೇ ಉಪನ್ಯಾಸ ‘ಕಾದಂಬರಿಕಾರರಾಗಿ ಬಲ್ಲಾಳರು’ ಎಂಬ ವಿಷಯದಲ್ಲಿ ನಡೆಯಲಿದೆ. ಬಳಿಕ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ‘ನಾನು ಕಂಡಂತೆ ಬಲ್ಲಾಳರು’ ಎಂಬ ವಿಷಯದಲ್ಲಿ ವ್ಯಾಸರಾಯ ಬಲ್ಲಾಳರ ಮಕ್ಕಳಾದ ಪೂರ್ಣಿಮಾ ಹೆಬ್ಬಾರ್ ಮತ್ತು ಅಂಜಲಿ ಅರುಣ್, ಇವರ ಜೊತೆಗೆ ಮುಂಬಯಿಯ ಖ್ಯಾತ ಕಾದಂಬರಿಕಾರರಾದ  ಮಿತ್ರಾ ವೆಂಕಟ್ರಾಜ್ ಭಾಗವಹಿಸಲಿದ್ದಾರೆ. ಮೂರನೇ ಉಪನ್ಯಾಸ ಮುಂಬಯಿಯ ಕರ್ನಾಟಕ ಸಂಘದ ಅಧ್ಯಕ್ಷರಾದ ಡಾ. ಭರತ್ ಕುಮಾರ್ ಪೊಲಿಪು ಇವರು ‘ಬಲ್ಲಾಳರ ಕನ್ನಡ…

Read More

ಬೆಂಗಳೂರು : ಅನ್ ಬಾಕ್ಸಿಂಗ್ ಬೆಂಗಳೂರು ಮತ್ತು ಜಂಗಮ ಕಲೆಕ್ಟಿವ್ ಜೊತೆಯಾಗಿ ಅರ್ಪಿಸುವ ‘ನಾಟಕಗಳ ಹಬ್ಬ’ ದಿನಾಂಕ 04-12-2023ರಿಂದ 11-11-2023 ರ ವರೆಗೆ ಬೆಂಗಳೂರಿನ ವಿವಿಧೆಡೆ ನಾಟಕ ಪ್ರದರ್ಶನ ನಡೆಯಲಿದೆ. ದಿನಾಂಕ 04-12-2023ರಂದು ಸಂಜೆ 7.30ಕ್ಕೆ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಮಂಗಳೂರಿನ ‘ಅಸ್ತಿತ್ವ’ ಪ್ರಸ್ತುತ ಪಡಿಸುವ ಅರುಣ್ ಲಾಲ್ ಕೇರಳ ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದ ನಾಟಕ ‘ಜುಗಾರಿ’ ಪ್ರದರ್ಶನಗೊಳ್ಳಲಿದೆ. ದಿನಾಂಕ 06-12-2023ರಂದು ಸಂಜೆ 7.30ಕ್ಕೆ ಜೆ.ಸಿ.ರೋಡಿನ ನಯನ ಸಭಾಂಗಣದಲ್ಲಿ ಧಾರವಾಡದ ‘ಆಟ-ಮಾಟ’ ಪ್ರಸ್ತುತ ಪಡಿಸುವ ಮಹಾದೇವ ಹಡಪದ ಪರಿಕಲ್ಪನೆ ಮತ್ತು ನಿರ್ದೇಶನದ ‘ನಾ ರಾಜಗುರು’ ನಾಟಕದಲ್ಲಿ ವಿಶ್ವರಾಜ್ ನಿಜಗುಣ ರಾಜಗುರು ಅಭಿನಯಿಸಲಿದ್ದಾರೆ. ದಿನಾಂಕ 07-12-2023ರಂದು ಸಂಜೆ 7.30ಕ್ಕೆ ಹನುಮಂತ ನಗರದ ಕೆ.ಹೆಚ್ ಕಲಾ ಸೌಧದಲ್ಲಿ ಮೈಸೂರಿನ ‘ನಟನ’ ಪ್ರಸ್ತುತ ಪಡಿಸುವ ‘ಕಣಿವೆಯ ಹಾಡು’ ಪ್ರದರ್ಶನಗೊಳ್ಳಲಿದ್ದು, ಡಾ. ಶ್ರೀಪಾದ್ ಭಟ್ ವಿನ್ಯಾಸ ಮತ್ತು ನಿರ್ದೇಶನದ ಈ ನಾಟಕಕ್ಕೆ ಸಂಗೀತ ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಇವರದ್ದು. ದಿನಾಂಕ 10-12-2023ರಂದು ಬೆಳಿಗ್ಗೆ…

Read More