Author: roovari

ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಡೆಸುವ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ತರಬೇತಿ ತರಗತಿಯು ಫೌಂಡೇಶನ್‌ನ ಸರಪಾಡಿ ಘಟಕದ ಸಹಕಾರದಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ದಿನಾಂಕ 13-07-2024ರಂದು ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಗಂಡು ಕಲೆಯೆಂದು ಬಿಂಬಿತವಾದ ಯಕ್ಷಗಾನದ ಕಲಿಕೆ ಎನ್ನುವುದು ಸ್ವ-ಪ್ರಯತ್ನದಿಂದ, ಪರಿಶ್ರಮದಿಂದ ಬರುತ್ತದೆ. ವಿದ್ಯಾರ್ಥಿಗಳು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಇವರು ಅಧ್ಯಕ್ಷತೆ ವಹಿಸಿದ್ದರು. ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಶಾಲಾ ಮುಖ್ಯ ಶಿಕ್ಷಕ ಆದಂ, ಪ್ರಮುಖರಾದ ಕುಸುಮಾಕರ ಶೆಟ್ಟಿ, ಯಾಕೂಬ್, ಜಗದೀಶ್, ಇಸ್ಮಾಯಿಲ್, ಸುನೀತಾ, ಯಕ್ಷಗಾನ ತರಗತಿಯ ನೋಡಲ್ ಶಿಕ್ಷಕ ಅಖಿಲ್ ಶೆಟ್ಟಿ, ಶಿಕ್ಷಕಿಯರಾದ…

Read More

ಅಡೂರು : ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಅಡೂರು ಬಾಲಕೃಷ್ಣ ತಂತ್ರಿಗಳ ಸ್ಮರಣಾರ್ಥವಾಗಿ ಕಾಸರಗೋಡು ಜಿಲ್ಲೆಯ ಕನ್ನಡ ವಿಭಾಗದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯೋತ್ಸವ ಕನ್ನಡ ಕವನ ಸ್ಪರ್ಧೆ-2024ನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಾವು ರಚಿಸಿದ, ಎಲ್ಲೂ ಪ್ರಕಟವಾಗದ, ಉತ್ತಮವೆನಿಸುವ ಒಂದು ಕವನವನ್ನು ಸ್ಪಷ್ಟವಾಗಿ ಬರೆದು ಕಳುಹಿಸಬೇಕು. ಕವನದ ಜತೆಗೆ ಶಾಲೆಯ ಮುಖ್ಯಸ್ಥರ ದೃಢೀಕರಣ ಪತ್ರವನ್ನು ಇರಿಸಬೇಕು. ಪ್ರತ್ಯೇಕ ಹಾಳೆಯಲ್ಲಿ ವಿದ್ಯಾರ್ಥಿಯ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ತರಗತಿ, ಶಾಲೆಯ ಹೆಸರು ಬರೆದು ತಾವೇ ಬರೆದಿರುವ ಕವನವೆಂದು ಸ್ವಯಂ ದೃಢೀಕರಿಸಬೇಕು. ಯಾವುದೇ ಅನುವಾದಿತ ಕವನಗಳಿಗೆ ಆಸ್ಪದವಿಲ್ಲ. ಕೃತಿಚೌರ್ಯಕ್ಕೆ ಅವಕಾಶವಿಲ್ಲ. ಕವನಕ್ಕೆ ವಿಷಯ ನಿರ್ಬಂಧವಿಲ್ಲ. ಸಂಘಟಕರ ತೀರ್ಮಾನವೇ ಅಂತಿಮ. ಆಸಕ್ತರು ದಿನಾಂಕ 15-08-2024ರ ಮೊದಲು ತಲುಪುವಂತೆ ಅಂಚೆಯ ಮೂಲಕ ಕವನಗಳನ್ನು ಪ್ರಶಾಂತ ರಾಜ ವಿ. ತಂತ್ರಿ, ಅಡೂರು ಬಾಲಕೃಷ್ಣ ತಂತ್ರಿ ಸ್ಮಾರಕ ಕವನ ಸ್ಪರ್ಧೆ-24, ಅಡೂರು ಗ್ರಾಮ, ಉರುಡೂರು ಅಂಚೆ, ಕಾಸರಗೋಡು -671543 ವಿಳಾಸಕ್ಕೆ ಕಳುಹಿಸಲು ತಿಳಿಸಿದೆ.

Read More

ಸುಳ್ಯ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಸಭಾ ಭವನದಲ್ಲಿ ಕೀರಿಕ್ಕಾಡು ಮಾಸ್ಟರ್ ವಿಷ್ಣು ಭಟ್ ವಿರಚಿತ ‘ಶಿವ ಪಂಚಾಕ್ಷರಿ ಮಹಿಮೆ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆಯೊಂದಿಗೆ ಪ್ರಭಾಕರ ಆಚಾರ್ಯ ಹಿರಿಯಾಣ ಅವರಿಂದ ಸೇವಾ ರೂಪವಾಗಿ ಆಯೋಜಿಸಲ್ಪಟ್ಟ ಈ ಕಲಾ ಕಾರ್ಯಕ್ರಮವು ಡಾ. ರಮಾನಂದ ಬನಾರಿ ಮಂಜೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಭಾಗವತ ವಿಶ್ವ ವಿನೋದ ಬನಾರಿ ಅವರ ಸಂಯೋಜನೆಯಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ, ವಿಕೇಶ್ ರೈ ಶೇಣಿ, ಸಂಜೀವ ರಾವ್ ಮಯ್ಯಾಳ ಭಾಗವಹಿಸಿದ್ದು, ವಿಷ್ಣು ಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣ ಪ್ರಸಾದ್ ಬೆಳ್ಳಿಪ್ಪಾಡಿ ಚೆಂಡೆ ಮದ್ದಳೆಯಲ್ಲಿ ಸಹಕರಿಸಿದರು. ಅರ್ಥಧಾರಿಗಳಾಗಿ ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಐತ್ತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಎಂ. ರಮಾನಂದ ರೈ ದೇಲಂಪಾಡಿ, ಭಾಸ್ಕರ ಮಾಸ್ತರ್ ದೇಲಂಪಾಡಿ, ರಾಮ ನಾಯ್ಕ ದೇಲಂಪಾಡಿ,…

Read More

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ದಿನಾಂಕ 17-07-2024 ಬುಧವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ವನಮಹೋತ್ಸವ ಹಾಗೂ ‘ಸೋನೆ ಮಳೆ-ಹಸಿರು ಇಳೆ’ ಪರಿಸರ ಕವಿಗೋಷ್ಠಿ ನಡೆಯಿತು. ಈ ಕಾರ್ಯಕ್ರಮವನ್ನು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಉದ್ಘಾಟಿಸಿ “ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು” ಎಂದು ಹೇಳಿದರು. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ “ಮಂಗಳೂರಿನ ಜನತೆಗೆ ಸ್ವಚ್ಛ ಹಾಗೂ ಹಸುರಿನಿಂದ ಕೂಡಿದ ಪರಿಸರ ಲಭಿಸಲು ಮಂಗಳೂರು ಮಹಾ ನಗರ ಪಾಲಿಕೆ ವಿಶೇಷ ಆದ್ಯತೆ ನೀಡಿದೆ. ಜನತೆಯ ಸಹಕಾರದಿಂದ ಹಸಿರು ಮಂಗಳೂರು…

Read More

ಕುಂದಾಪುರ : ಅರೆಹೊಳೆ ಪ್ರತಿಷ್ಠಾನವು ನಂದಗೋಕುಲ ರೆಪರ್ಟರಿಯನ್ನು ಆರಂಭಿಸುತ್ತಿದ್ದು, ಇದರ ಮೊದಲ ನಾಟಕ ಪ್ರದರ್ಶನ ಮತ್ತು ರಂಗಸವಾರಿಯ ಆರಂಭೋತ್ಸವವನ್ನು ಅರೆಹೊಳೆಯ ಡಾ. ಹಂದಟ್ಟು ಹರೀಶ್ ಹಂದೆ ರಂಗಮಂದಿರದಲ್ಲಿ ದಿನಾಂಕ 20-07-2024ರ ಶನಿವಾರದಂದು ಆಯೋಜಿಸಲಾಗಿದೆ. ಅಂದಿನ ಸಮಾರಂಭದಲ್ಲಿ ಬೈಂದೂರಿನ ಸುರಭಿ (ರಿ) ಇದರ ಅಧ್ಯಕ್ಷರಾದ ನಾಗರಾಜ ಯಡ್ತರೆ, ತೆಕ್ಕಟ್ಟೆಯ ಯಶಸ್ವಿ ಕಲಾವೃಂದದ ಕಾರ್ಯದರ್ಶಿ ವೆಂಕಟೇಶ್ ವೈದ್ಯ, ಮರವಂತೆಯ ಲೆಕ್ಕ ಪರಿಶೋಧಕ ಜತೀಂದ್ರ ಮರವಂತೆ, ಬೆಂಗಳೂರಿನ ರಂಗಪಯಣದ ಮುಖ್ಯಸ್ಥ ರಾಜ್ ಗುರು ಹೊಸಕೋಟೆ ಹಾಗೂ ರಂಗನಿರ್ದೇಶಕ ಅಮಿತ್ ಜೆ. ರೆಡ್ಡಿ ಭಾಗವಹಿಸಲಿದ್ದಾರೆ. ರೆಪರ್ಟರಿಯ ಮೊದಲ ನಿರ್ಮಾಣದ ತಿರುಗಾಟದ ನಾಟಕ ಅಮಿತ್ ಜೆ. ರೆಡ್ಡಿಯವರ ನಿರ್ದೇಶನದಲ್ಲಿ ಶೂದ್ರಕ ಕವಿಯ ‘ಮೃಚ್ಛಕಟಿಕ’ ಆಧಾರಿತ ‘ಅಡುಗೆ ಮನೆಯ ಆಟದ ಬಂಡಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ರೆಪರ್ಟರಿ ಮತ್ತು ರಂಗಶಿಕ್ಷಣ ಕೇಂದ್ರದ ನಿರ್ದೇಶಕಿ ಶ್ವೇತಾ ಅರೆಹೊಳೆ ತಿಳಿಸಿದ್ದಾರೆ.

Read More

ಸುರತ್ಕಲ್ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ಮತ್ತು ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ 9ನೇ ದಕ್ಷಿಣ ಕನ್ನಡ ಜಿಲ್ಲಾ ಗಮಕ ಸಮ್ಮೇಳನದ ಸಮಾರೋಪ ಸಮಾರಂಭವು ದಿನಾಂಕ 13-07-2024ರಂದು ಸುರತ್ಕಲ್ ಇಲ್ಲಿನ  ಗೋವಿಂದ ದಾಸ ಕಾಲೇಜಿನ ಆವರಣದಲ್ಲಿ ನಡೆಯಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್‌ ಇದರ ಮಾಜಿ ಅಧ್ಯಕ್ಷ ಹಾಗೂ ಧರ್ಮದರ್ಶಿಯಾದ ಹರಿಕೃಷ್ಣ ಪುನರೂರು ಮಾತನಾಡಿ “ಗಮಕ ಕಲೆಯ ಮೂಲಕ  ಭಾರತೀಯ ಪುರಾಣ ಪರಂಪರೆಯನ್ನು ತಿಳಿದುಕೊಂಡು ಅದರಲ್ಲಿರುವ ಉನ್ನತ ಅಂಶಗಳನ್ನು ಮತ್ತು ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಿದೆ. ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಗಮಕ ಕಲೆಯನ್ನು ಸರ್ವರೂ ಪ್ರೋತ್ಸಾಹಿಸಿ ಮುಂದಿನ ಜನಾಂಗಕ್ಕೆ ಧಾರೆಯೆರೆಯಬೇಕು.” ಎಂದು ನುಡಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ “ಗಮಕಿಗಳು ತಮ್ಮ ಗಮಕ ವಾಚನಗಳ ಮೂಲಕ ಆಧ್ಯಾತ್ಮ ಚಿಂತನೆಯತ್ತ…

Read More

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣದಲ್ಲಿ ಕಲಾಕುಲ್ ನಾಟಕ ರೆಪರ್ಟರಿಯ ಡಿಪ್ಲೊಮಾ ಪದವಿ ಪ್ರದಾನ ಸಮಾರಂಭವು ದಿನಾಂಕ 14-07-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನಮಾಡಿ ಮಾತನಾಡಿದ ಕೊಂಕಣಿ ರಂಗಕರ್ಮಿ ಜಾಸ್ಮಿನ್ ವಾಸ್ “ಕೊಂಕಣಿ ನಾಟಕ ರಂಗದಲ್ಲಿ ದೊರೆತ ಅವಕಾಶವನ್ನು ಉಪಯೋಗಿಸಿ ಮತ್ತು ಶಿಸ್ತಿನಿಂದ ಅಭ್ಯಾಸ ಮಾಡಿ ನೀವು ರಂಗಭೂಮಿಯ ಪದವಿ ಪಡೆದಿದ್ದೀರಿ. ನಿಮಗೆ ದೊರೆತ ತರಬೇತಿಯನ್ನು ಇತರರಿಗೂ ನೀಡಿ. ಕಲಾವಿದರಿಗೆ ಕೊಂಬು ಬರಬಾರದು. ಇದರಿಂದ ವ್ಯಕ್ತಿ ಮತ್ತು ಕಲೆಯ ಬೆಳವಣಿಗೆ ಕುಂಠಿತವಾಗುತ್ತದೆ. ನಿಮ್ಮಿಂದ ಕೊಂಕಣಿ ಕಲಾಲೋಕಕ್ಕೆ ಒಳಿತಾಗಲಿ.’’ ಎಂದು ಶುಭ ಹಾರೈಸಿದರು. ಡಾರ್ವಿನ್ ಆಲ್ವಾರಿಸ್‌ ವಾಮಂಜೂರು, ಜೊಯ್ಸನ್‌ ಡಿಸೋಜ ತಲಪಾಡಿ, ವಾರ್ಷಿತಾ ಫ್ಲೊರಾ ಕುಲಶೇಖರ, ವೆನಿಶಾ ಸಲ್ಡಾನ್ಹಾ ಗುರುಪುರ ಹಾಗೂ ವಿನ್ಸನ್‌ ಮತಾಯಸ್‌ ಕಿರೆಂ ಇವರು ವರ್ಷದ ರಂಗ ತರಬೇತಿ ಮುಗಿಸಿ ಡಿಪ್ಲೊಮಾ ಸ್ವೀಕರಿಸಿದರು. ಹಾಗೂ ತಮ್ಮ ಕಲಿಕಾ ಅನುಭವಗಳನ್ನು ಹಂಚಿಕೊಂಡರು. ವೆನಿಶಾ ಸಲ್ಡಾನ್ಹಾ ವಾರ್ಷಿಕ ವರದಿಯನ್ನು ಮಂಡಿಸಿದರು. ಕಲಾಕುಲ್‌ ಆಡಳಿತಾಧಿಕಾರಿ ಅರುಣ್‌ ರಾಜ್‌ ರೊಡ್ರಿಗಸ್ ಕಲಾಕುಲ್ ಆರಂಭ ಹಾಗೂ…

Read More

ಕಿನ್ನಿಗೋಳಿ : ಯುಗಪುರುಷ ಕಿನ್ನಿಗೋಳಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ದ. ಕ. ಜಿಲ್ಲಾ ತಾಲೂಕು ಘಟಕ ಮೂಡುಬಿದಿರೆ ಸಹಯೋಗದಲ್ಲಿ ‘ವಾಯ್ಸ್ ಆಫ್ ಆರಾಧನ’ ಇದರ ಪ್ರತಿಭೆಗಳಿಂದ ಜಾನಪದ, ಸಾಂಸ್ಕೃತಿಕ ವೈಭವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ 14-07-2024 ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುಗಪುರುಷ ಕಿನ್ನಿಗೋಳಿ ಇದರ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ “ತುಳುನಾಡಿನ ಸಂಸ್ಕೃತಿ, ಆಚರಣೆಗಳು, ಆಚಾರ ವಿಚಾರಗಳು, ಸಂಪ್ರದಾಯಗಳು ಮರೆಯುವ ಹಂತದಲ್ಲಿದ್ದು ಅದನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ ಕಾರ್ಯಕ್ರಮ ಆಯೋಜನೆ ಮಾಡಿ ಉತ್ತಮ ಕೆಲಸ ಕಾರ್ಯ ಮಾಡುತ್ತಿದೆ.” ಎಂದು ಹೇಳಿದರು. ಮೂಡುಬಿದಿರೆ ತಾಲೂಕು ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ. ಕ. ಜಿಲ್ಲಾ ಕನ್ನಡ ಜಾನಪದ ಪರಿಷತ್‌ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಮಾಜಿ ಕ. ಸಾ. ಪ. ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು, ರಾಜೇಶ್,…

Read More

ಮಂಗಳೂರು : ಮಂಗಳೂರಿನ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ನವೀಕೃತ ಸಾಹಿತ್ಯ ಸದನದ ಉದ್ಘಾಟನಾ ಸಮಾರಂಭವು ದಿನಾಂಕ 13-07-2024ರಂದು ಮಂಗಳೂರಿನ ಉರ್ವಸ್ಟೋರ್ ಇಲ್ಲಿ ನಡೆಯಿತು. ಕ. ಲೇ. ವಾ.  ಸಂಘ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಜ್ಯೋತಿ ಚೇಳಾಯ್ರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್  ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಡಿ. ವೇದವ್ಯಾಸ ಕಾಮತ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ಮಮತಾ ಗಟ್ಟಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಶ್ರೀನಾಥ ಎಂ.ಪಿ, ಸುರತ್ಕಲ್ಲಿನ ಎಂ. ಆರ್. ಪಿ. ಎಲ್. ಇದರ ಅಧಿಕಾರಿಯಾದ ಮೀನಾಕ್ಷಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ  ಶ್ರೀ…

Read More

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ವಿಟ್ಲ ಘಟಕದ ಸಹಭಾಗಿತ್ವದಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಉಚಿತ ಯಕ್ಷಗಾನ ತರಗತಿಯು ದಿನಾಂಕ 11/07/2024ರಂದು ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ಉದ್ಘಾಟನೆಗೊಂಡಿತು. ಯಕ್ಷಗಾನ ಶಿಕ್ಷಕರಾದ ಶ್ರೀ ಗಣೇಶ ಕುಂದಲಕೋಡಿ ದೀಪ ಬೆಳಗಿಸುವುದರ ಮೂಲಕ ಯಕ್ಷಗಾನ ತರಗತಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ವೆಂಕಟ ರಾಘವೇಂದ್ರ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀ ಪೂವಪ್ಪ‌ ಶೆಟ್ಟಿ ಅಳಿಕೆ, ಶ್ರೀ ಉಳ್ಳಾಲ್ತಿ ಸೇವಾ ಟ್ರಸ್ಟ್ (ರಿ.) ಕೇಪು ಇದರ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಪಡಿಬಾಗಿಲು, ವಿಟ್ಲ ಘಟಕದ ಪ್ರಧಾನ ಸಂಚಾಲಕರಾದ ಶ್ರೀ ಅರವಿಂದ ರೈ ಮೂರ್ಜೆಬೆಟ್ಟು, ಸಂಘಟನಾ ಕಾರ್ಯದರ್ಶಿ ಶ್ರೀ ಭಾಸ್ಕರ ಶೆಟ್ಟಿ ವೀರಕಂಭ,…

Read More