Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಇತಿಹಾಸ ವಿಭಾಗ ಹಾಗೂ ಐ.ಕ್ಯೂ.ಎ.ಸಿ., ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘ ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸಹಯೋಗದೊಂದಿಗೆ ‘ಅಬ್ಬಕ್ಕ @5೦೦ ರಾಷ್ಟ್ರೀಯ ವಿಚಾರ ಸಂಕಿರಣ’ವು ದಿನಾಂಕ 16 ಫೆಬ್ರವರಿ 2026ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಜರಗಿತು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಚಿವೆ ಶೋಭಾ ಕರಂದ್ಲಾಜೆ “ನಾವು ಅಗತ್ಯವಾಗಿ ತಿಳಿಯಬೇಕಿದ್ದ ಹಾಗೂ ಯುವ ಜನಾಂಗ ಅರಿಯಬೇಕಾದ ಚರಿತ್ರೆಯನ್ನು ಮರೆಯಾಗಿಸಿದ್ದು ವಿಪರ್ಯಾಸ. ಪ್ರಥಮ ಸ್ವಾತಂತ್ರ್ಯತ ಸಂಗ್ರಾಮಕ್ಕೂ ಮೊದಲೇ ಪರಕೀಯರ ವಿರುದ್ಧ ಕೆಚ್ಚೆದೆಯ ಹೋರಾಟ ಪ್ರಾರಂಭಿಸಿದವಳು ಅಬ್ಬಕ್ಕ. ತಾನು ಒಬ್ಬನೇ ನಿಂತು ಬ್ರಿಟೀಷರಿಗೆ ಸವಾಲೆಸೆದ ಕಿತ್ತೂರು ಚೆನ್ನಮ್ಮನಂಥವರ ಉದಾಹರಣೆಯನ್ನು ನಾವು ಗಮನಿಸಬಹುದು. ನಮ್ಮ ಬದುಕಿಗೆ ಪ್ರೇರಣೆಯಾಗಬಲ್ಲ ನಮ್ಮ ಚರಿತ್ರೆಯನ್ನು ನಾವು ಅಗತ್ಯವಾಗಿ ತಿಳಿಯಬೇಕು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ಪುತ್ತೂರು ವಿವೇಕಾನಂದ…
ಬೈಲಹೊಂಗಲ : ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದಂಗವಾಗಿ ದಿನಾಂಕ 22 ಫೆಬ್ರವರಿ 2026ರಂದು ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇಸರಗಿ ಗ್ರಾಮದ ಪತ್ರಕರ್ತ, ಸಾಹಿತಿ, ಸಂಘಟಕ ಸಿ.ವೈ. ಮೆಣಸಿನಕಾಯಿ ಇವರಿಗೆ ‘ಕವಿ ಕಾವ್ಯ ವಿಭೂಷಣ ಪ್ರಶಸ್ತಿ 2026’ ನೀಡಿ ಗೌರವಿಸಲಾಗುತ್ತದೆ. ಸಿ.ವೈ. ಮೆಣಸಿನಕಾಯಿ ಇವರು ಈಗಾಗಲೇ ಹಲವು ಲೇಖನ, ಕವನ ಬರೆದು ಪ್ರಕಟಿಸಿದ್ದಾರೆ. ಇವರು 13 ಪುಸ್ತಕಗಳನ್ನು ಬರೆದಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲ, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳೆ, ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ಗಣ್ಯರ ಸಮ್ಮುಖದಲ್ಲಿ ಇವರಿಗೆ ‘ಕವಿ ಕಾವ್ಯ ವಿಭೂಷಣ ಪಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ.…
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘವು 2024ನೇ ಸಾಲಿನ ‘ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ’ ಬಹುಮಾನಕ್ಕೆ ಐವರು ಲೇಖಕಿಯರ ಕೃತಿಗಳನ್ನು ಆಯ್ಕೆ ಮಾಡಿದೆ. ಶಿವಮೊಗ್ಗದ ಸವಿತಾ ನಾಗಭೂಷಣ ಇವರ ‘ದಿನದ ಪ್ರಾರ್ಥನೆ’ ಕಥಾ ಸಂಕಲನ, ಉಡುಪಿಯ ಕಾತ್ಯಾಯಿನಿ ಕುಂಜುಬೆಟ್ಟು ಇವರ ‘ತಂಬೂರಿ’ ಕವನ ಸಂಕಲನ, ಬೆಂಗಳೂರಿನ ರೇಣುಕಾ ಕೋಡಗುಂಟಿ ಇವರ ‘ಚಿಗುರೊಡೆದ ಬೇರು’ ಕಥಾ ಸಂಕಲನ, ಮೈಸೂರಿನ ಗೀತಾ ಸೀತಾರಾಮ ಇವರ ‘ಮಾಳ್ವ ಸಾಮ್ರಾಜ್ಯದ ರಾಜಯೋಗಿನಿ ಅಹಲ್ಯಾಬಾಯಿ ಹೋಳ್ಕರ್’ ಕಾದಂಬರಿ ಮತ್ತು ಶಿವಮೊಗ್ಗದ ಕೆ.ಎಸ್. ಪವಿತ್ರಾ ಇವರ ‘ಧೀತನನ’ ಅಂಕಣ ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿಯು ತಲಾ ರೂ.15,000/- ನಗದು ಒಳಗೊಂಡಿದೆ. ಮಾರ್ಚ್ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರಹಲಗತ್ತಿ ತಿಳಿಸಿದ್ದಾರೆ.
ಕಾಸರಗೋಡು : ತುಲುವೆರೆ ಜಾಲ್ ಕಣ್ವತೀರ್ಥ ಇದರ ಆಶ್ರಯದಲ್ಲಿ ತುಳುನಾಡ ಮಕ್ಕಳ ಸಾಂಸ್ಕೃತಿಕ ಮತ್ತು ಸಾಹಿತ್ಯ ಸೇವಾ ಕೂಟ ಹಾಗೂ ಶ್ರೀ ಮಾತಾ ಕಲಾ ಮಂದಿರ ವೈಶಾಲಿ ಕುಂಜತ್ತೂರು ತೂಮಿನಾಡು ಇವರ ಸಹಯೋಗದಲ್ಲಿ ‘ಮಕ್ಕಳ ಬಹುಭಾಷಾ ಕವಿಗೋಷ್ಠಿ’ ಮತ್ತು ‘ಕವಿತೆ ಹುಟ್ಟುವ ಗುಟ್ಟು’ ಕಾರ್ಯಾಗಾರವನ್ನು ದಿನಾಂಕ 22 ಫೆಬ್ರವರಿ 2026ರಂದು ಬೆಳಿಗ್ಗೆ 9-30 ಗಂಟೆಗೆ ವೈಶಾಲಿ ತೂಮಿನಾಡು ಶ್ರೀ ಮಾತಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ. 16 ವರ್ಷದ ಒಳಗಿನ ಮಕ್ಕಳಿಂದ ‘ಬಹುಭಾಷಾ ಕವಿಗೋಷ್ಠಿ’ ನಡೆಯಲಿದ್ದು, ಜಿಲ್ಲಾ ಮಟ್ಟದ ಪ್ರತಿಭೆ ಕುಮಾರಿ ರಶ್ಮಿತಾ ಕುಲಾಲ್ ಇವರು ಅಧ್ಯಕ್ಷತೆ ವಹಿಸಲಿರುವರು. ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತಡ್ಕ ಇವರು ಕಾರ್ಯಾಗಾರ ನಡೆಸಿಕೊಡಲಿದ್ದು, ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಿಕಾ ಶುಭಾಶಂಸನೆಗೈಯ್ಯಲಿದ್ದಾರೆ. ಇದೇ ಸಂದರ್ಭದಲ್ಲಿ ಅಂಗನವಾಡಿ ಜೋಕ್ಲೆನ ಪದ ಪಂತೊ ಇದರ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು.
ಉಡುಪಿಯ ಪ್ರತಿಷ್ಠಿತ ರಾಗ ಧನ ಸಂಸ್ಥೆಯ ಆಶ್ರಯದಲ್ಲಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದ 38ನೆಯ ಶ್ರೀ ಪುರಂದರದಾಸರು ಮತ್ತು ಸಂಗೀತ ತ್ರಿಮೂರ್ತಿ ಉತ್ಸವದ ಎರಡನೇ ದಿನದಂದು ಪಿಳ್ಳಾರಿ ಗೀತೆಗಳು ಹಾಗೂ ತ್ಯಾಗರಾಜರ ಘನ ಪಂಚರತ್ನ ಗೋಷ್ಠಿಗಾಯನ ಉಡುಪಿಯ ಸಂಗೀತ ಗುರುಗಳು ಹಾಗೂ ಶಿಷ್ಯಂದಿರೊಡಗೂಡಿ ಸಮರ್ಪಕವಾಗಿ ನಡೆಸಿಕೊಟ್ಟರು. ಆ ಬಳಿಕ ಪ್ರಜ್ಞಾ ಅಡಿಗ ಇವರಿಂದ ಸಂಗೀತ ಕಛೇರಿ ನಡೆಯಿತು. ಕಾನಡ ಅಟತಾಳ ವರ್ಣ ಮುಂದೆ ‘ನಿನ್ನಚೆಪ್ಪ ಕಾರಣಮೇಮಿಮಾನಸ’ ರಾಗ ಮಂದಾರಿಯಲ್ಲಿ, ‘ಭಜರೇ ಮಾನಸ’ ಆಭೇರಿ ರಾಗದಲ್ಲಿ ನಾಟ ಕುರುಂಜಿ ರಾಗದಲ್ಲಿ ‘ಪಾರ್ವತಿ ಕುಮಾರ ಭಾವಯೇ’ ಮಿಶ್ರ ಛಾಪು ತಾಳದಲ್ಲಿ ‘ರಾಕಾಶಶಿವದನಾ’ ಟಕ್ಕ ರಾಗದಲ್ಲಿ ತುಂಬಾ ಸುಂದರವಾಗಿ ಮೂಡಿ ಬಂತು. ಎಲ್ಲ ಪ್ರಸ್ತುತಿಗಳೂ ಮನೋಹರವಾದ ಆಲಾಪನೆ ಸುಂದರವಾದ ಸ್ವರಕಲ್ಪನೆಯಿಂದ ಮೂಡಿಬಂತು. ಮುಂದೆ ನೆರೆದಿದ್ದ ಸಂಗೀತ ಶೋತೃಗಳು ನಿರೀಕ್ಷಿಸುತ್ತಿದ್ದ ‘ರಾಗ-ತಾನ-ಪಲ್ಲವಿ’ ಪ್ರಸ್ತುತಿ ಪ್ರಾರಂಭದ ದುರ್ಗಾ ರಾಗದಲ್ಲಿ ಅತ್ಯಂತ ಮೋಹಕವಾಗಿ, ಸರಸ್ವತಿ ರಾಗದಲ್ಲಿ ದೇವಿಯ ಕೋಮಲತೆ, ಗಾಂಭೀರ್ಯವನ್ನು ಹಾಗೂ ಲಲಿತ ರಾಗದಲ್ಲಿ ಲಾಲಿತ್ಯವನ್ನೂ ಅತ್ಯಂತ…
ಕಲ್ಮಾಡಿ : ಕಲ್ಮಾಡಿ ಶ್ರೀ ಭಗವತಿ ಮಾರಿಕಾಂಬ ಸನ್ನಿಧಿಯ ಸಹಕಾರದೊಂದಿಗೆ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಪೆರ್ಡೂರು ಹಾಗೂ ಮತ್ಸ್ಯರಾಜ್ ಗ್ರೂಪ್ ಮಲ್ಪೆ ಇವರ ಸಹಯೋಗದಲ್ಲಿ ಶ್ರೀಮನ್ಮಹಾ ಶಿವರಾತ್ರಿ ಪ್ರಯುಕ್ತ ದಿನಾಂಕ 15 ಫೆಬ್ರವರಿ 2026ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಹಮ್ಮಿಕೊಂಡಿದ್ದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳ ಖ್ಯಾತ ತಂಡಗಳಿಂದ ‘ಶಿವಗಾನಾಮೃತ’ ಭಜನಾ ಯಜ್ಞ ಭಕ್ತ-ಗಾನ-ಲಹರಿ ಸೇವೆ ಕಾರ್ಯಕ್ರಮ ಭಕ್ತ ಜನರನ್ನು ಮಂತ್ರಮುಗ್ಧಗೊಳಿಸಿತು. ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದ ಕೊಡವೂರು ನಗರ ಸಭೆ ಸದಸ್ಯ ವಿಜಯ್ ಕೊಡವೂರು “ನಾವುಗಳು ಆರಾಧಿಸುವ ದೇವರುಗಳ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮಾನವತ್ವದಿಂದ ದೈವತ್ವದ ಕಡೆಗೆ ಹೊರಳುವ ಮನಸ್ಥಿತಿಯನ್ನ ಬೆಳೆಸಿಕೊಳ್ಳಬೇಕು. ಶಿಷ್ಟ ರಕ್ಷಣೆ ದುಷ್ಟ ಶಿಕ್ಷಣೆಯ ಹಾಗೆ ಸಮಾಜದಲ್ಲಿ ಸಜ್ಜನರನ್ನು ರಕ್ಷಿಸುತ್ತ ಸಮಾಜಘಾತುಕರನ್ನು ಮಾನವೀಯತೆಯೆಡೆಗೆ ಒಲವು ಬೆಳೆಸಿಕೊಳ್ಳುವಂತೆ ಮಾಡುವ ಕಾರ್ಯ ನಡೆಯಬೇಕಿದೆ” ಎಂದು ನುಡಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಸತೀಶ್ ಕೋಟ್ಯಾನ್ ಅವರು ಮಾತನಾಡಿ “ಕೇವಲ ನಮ್ಮ ಆತ್ಮತೃಪ್ತಿಗಾಗಿ ಮಾತ್ರವಲ್ಲ ಆತ್ಮೋದ್ಧಾರಕ್ಕಾಗಿ, ದೇವರ…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಂಗಳೂರಿನ ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಸಮಿತಿ ಸಹಯೋಗದಲ್ಲಿ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 13 ಫೆಬ್ರವರಿ 2026ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ “ಸಾಹಿತಿ, ಕವಿ, ಬೌದ್ಧಿಕರು ಪರಸ್ಪರ ಪ್ರೀತಿಸುವ, ಗೌರವಿಸುವ ಪರಂಪರೆಯನ್ನು ನಾವು ಕಳೆದುಕೊಳ್ಳುತ್ತಿದ್ದು, ಕವಿಗೆ ಕವಿ ಮುನಿವ ಬದಲು ಮಣಿದ ಸಂಸ್ಕೃತಿ ನಮಗೆ ಮುಖ್ಯ. ಮೌಲ್ಯಗಳು, ಕೌಟುಂಬಿಕ ಸಂಬಂಧಗಳು ಉಳಿಯಬೇಕು, ಬೆಳೆಯಬೇಕು. ಆನಂದ, ಚಿಂತನೆಯ ಮಾರ್ಗೋಪಾಯ ಕಾವ್ಯ, ಸಾಹಿತ್ಯದಲ್ಲಿದೆ. ಕಾವ್ಯಕ್ಕೆ ಸಾವಿಲ್ಲ ಪ್ರೀತಿ ಸಂಸ್ಕೃತಿಯಿಂದ ನಾಡು ಕಟ್ಟಲು ಸಾಧ್ಯ. ಆಧುನಿಕತೆಯ ಸೌಕರ್ಯ ಅನುಭವಿಸಿ ಬೇಸತ್ತು ವಿಮುಕ್ತಿ ಹೊಂದಲು ಕಲೆ, ಸಾಹಿತ್ಯದಿಂದ ಮಾತ್ರ ಸಾಧ್ಯ” ಎಂದರು. ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಸ್ವೀಕರಿಸಿದ ಕವಿ ಸುಬ್ರಾಯ…
ಮಂಗಳೂರು : ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರ ಮತ್ತು ಕನ್ನಡ ವಿಭಾಗದಿಂದ ತುಮಕೂರು ವಿ.ವಿ. ಪ್ರಾಧ್ಯಾಪಕರಾಗಿರುವ ಡಾ. ನಿತ್ಯಾನಂದ ಬಿ. ಶೆಟ್ಟಿ ಇವರು ಬರೆದ ಯಕ್ಷಗಾನ ಮತ್ತು ಕರಾವಳಿಯ ಸಾಮಾಜಿಕ ಇತಿಹಾಸವನ್ನು ಮರು ನಿರೂಪಿಸಿದ ‘ಅಳವು ಅರಿಯದ ಭಾಷೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 13 ಫೆಬ್ರವರಿ 2026ರಂದು ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು. ಹಿಂದೂಸ್ತಾನಿ ಗಾಯಕ ಕೀರ್ತನ್ ನಾಯಕ್ ಇವರು ಜೇಡರ ದಾಸಿಮಯ್ಯರ ವಚನದ ಸಾಲನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸಿದ್ಧ ಭಾಗವತ ಪಟ್ಲ ಸತೀಶ ಶೆಟ್ಟಿ ಜೇನಿನ ಪೆಟ್ಟಿಗೆಯಿಂದ ನೂತನ ಕೃತಿಯನ್ನು ಹೊರತೆಗೆಯುವ ಮೂಲಕ ಅನಾವರಣಗೊಳಿಸಿ ಮಾತನಾಡಿ “ಯಕ್ಷಗಾನ ಕಲೆ ಪ್ರಪಂಚದ ಶ್ರೀಮಂತ ಕಲೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಲೆಯ ಕುರಿತಾದ ಈ ಕೃತಿ ರಚನೆ ಅಭಿನಂದನಾರ್ಹ. ನೃತ್ಯ, ಅಭಿನಯ, ಸಂಗೀತ ಸೇರಿದಂತೆ ಎಲ್ಲಾ ರೀತಿಯ ಕಲಾ ಪ್ರಕಾರಗಳನ್ನು ಒಳಗೊಂಡ ಯಕ್ಷಗಾನ ಶುದ್ಧವಾದ ಕನ್ನಡವನ್ನು ಇಂದಿಗೂ ಉಳಿಸಿ, ಬೆಳೆಸುತ್ತಿದೆ. ಯಕ್ಷಗಾನ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ಕೂಟ ದಿನಾಂಕ 14 ಫೆಬ್ರವರಿ 2026ರ ಶನಿವಾರ ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥಿಸುಬ್ಬ ವಿರಚಿತ ‘ಭರತ ಆಗಮನ’ ಪ್ರಸಂಗದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಸಮರ್ಥ ವಿಷ್ಣು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀರಾಮ (ಗುಂಡ್ಯಡ್ಕ ಈಶ್ವರ ಭಟ್), ಭರತ (ಶುಭ ಅಡಿಗ), ವಶಿಷ್ಠ (ಹರಿಣಾಕ್ಷಿ ಜೆ. ಶೆಟ್ಟಿ), ಲಕ್ಷ್ಮಣ (ಪ್ರೇಮಲತಾ ಟಿ. ರಾವ್) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ಭಾಸ್ಕರ್ ಬಾರ್ಯ ವಂದಿಸಿದರು. ಶ್ರೀ ಹರ್ಷ ಪುಣಚ ಪ್ರಾಯೋಜಿಸಿದ್ದರು. ಕಿಶೋರಿ ದುಗ್ಗಪ್ಪ ನಡುಗಲ್ಲು ಹಾಗೂ ಭಾರತೀ ರೈ ಅರಿಯಡ್ಕ ಸಹಕರಿಸಿದರು.
ಹಲವು ಮಜಲುಗಳನ್ನು ಕಂಡ ಮಕ್ಕಳ ಕಾವ್ಯವು ಜೀವಂತಿಕೆಯಿಂದ ಕೂಡಿದ್ದು ವೈವಿಧ್ಯಮಯವಾಗಿ ಮುಂದುವರಿಯುತ್ತಿದೆ. ‘ಬೆಳ್ಳಕ್ಕಿ ಸಾಲು’ (2011) ಎಂಬ ಸಂಕಲನದ ಮೂಲಕ ಮಾಲತಿ ಪಟ್ಟಣಶೆಟ್ಟಿಯವರು ಈ ಪರಂಪರೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಕ್ಕಳ ಕುತೂಹಲವನ್ನು ತಣಿಸುವ, ಅರಿವಿನ ಪರಿಧಿಯನ್ನು ವಿಸ್ತರಿಸುವ, ಮೌಲ್ಯ ಆದರ್ಶಗಳನ್ನು ನಿರೂಪಿಸುವ, ಸಚ್ಚಾರಿತ್ರ್ಯವನ್ನು ನಿರ್ಮಿಸುವ ಕವಿತೆಗಳನ್ನು ಎಳೆಯರಿಗೆ ಖುಷಿಯಾಗುವಂತೆ ಒದಗಿಸಬೇಕಾದದ್ದು ಮಕ್ಕಳ ಕವನಗಳ ಕರ್ತವ್ಯ. ಕನ್ನಡದ ಭವಿಷ್ಯದ ಬಗ್ಗೆ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲಿ ಎಳೆಯ ಮಕ್ಕಳು ಕೂಡ ಸಾಹಿತ್ಯದ ಒಲವನ್ನು ಪ್ರೋತ್ಸಾಹಿಸಲು ಯತ್ನಿಸಿರುವುದು ಸಂತಸದ ವಿಷಯ. ನಾಡಿನ ಜನಜೀವನದ ಅಂಗವಾಗಿ ಮೂಡಿದ 27 ಕವನಗಳು ಮೊದಲ ಓದಿಗೇ ಸುಲಭವಾಗಿ ತೆರೆದುಕೊಳ್ಳುತ್ತವೆ. ಕೈಕೈ ಹಿಡಿದು ನಡೆದಾಡುವ ಪುಟ್ಟ ಮಕ್ಕಳಂತಿರುವ ಪ್ರಾಸಗಳು ತಾವಾಗಿಯೇ ಬೆಳೆದು ಮೈಗೂಡಿದ್ದು ಅಲ್ಲಲ್ಲಿ ಒಪ್ಪುವ ನುಡಿಗಳು ಛಂದೋಬದ್ಧವಾಗಿ ಮೈವೆತ್ತು ಮಿಂಚುತ್ತವೆ. ವಿವರಿಸಿದ ವಿಚಾರಗಳು ಪ್ರಗತಿಪರವಾಗಿದ್ದು ನೀತಿಬೋಧಕವಾಗಿವೆ. ಭಾಷೆ ಸರಳವಾಗಿದ್ದು ವಾಚನೀಯವಾಗಿದೆ. ಇದರಲ್ಲಿ ಅಜ್ಜ ಅಜ್ಜಿಯ ಪ್ರೀತಿಯಿದೆ. ದೇಶಭಕ್ತಿ, ನೀತಿಬೋಧೆ, ಐಕ್ಯಗಾನಗಳಿವೆ. ಪ್ರಾಣಿ ಪಕ್ಷಿಗಳ ಸಖ್ಯವಿದೆ. ‘ಬೆಳ್ಳಕ್ಕಿ ಸಾಲು’,…