Subscribe to Updates
Get the latest creative news from FooBar about art, design and business.
Author: roovari
ಬಂಟ್ವಾಳ : ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್. ಇವರು ರಚಿಸಿದ ‘ಪುಟಾಣಿ ಕಿನ್ನರಿ ಕವಿತಾ’ ಎಂಬ ಮಕ್ಕಳ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರ ಶನಿವಾರ ಬಿ.ಸಿ. ರೋಡಿನಲ್ಲಿರುವ ಕನ್ನಡ ಭವನದಲ್ಲಿ ಅಭಿರುಚಿ ಜೋಡುಮಾರ್ಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಬಂಟ್ವಾಳ ವತಿಯಿಂದ ನಡೆಯಿತು. ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಂತಕ, ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, “ನಮ್ಮೊಳಗಿನ ಮಗುವನ್ನು ಇಂದು ಉಳಿಸಿಕೊಳ್ಳಬೇಕಾಗಿದೆ. ಮಕ್ಕಳ ಸಾಹಿತ್ಯವೆಂದರೆ ನಮ್ಮದೇ ಆದ ಮಾತುಗಳ ಪ್ರತಿಫಲನವಾಗಿದೆ. ಅಪ್ಪ, ನನ್ನನ್ನು ಯಾರಿಗೆ ಕೊಡುತ್ತೀರಿ ಎಂದು ನಚಿಕೇತ ತನ್ನ ಅಪ್ಪನಲ್ಲಿ ಕೇಳುವ ಪ್ರಶ್ನೆ ಅತ್ಯುತ್ತಮ ಮಕ್ಕಳ ಸಾಹಿತ್ಯವೇ ಅಲ್ಲವೇ ಎಂದು ಪ್ರಶ್ನಿಸಿದ ಅವರು, ಪ್ರತಿಯೊಬ್ಬರೊಳಗೂ ಇರುವ ಮಗುವನ್ನು ಜಾಗೃತಗೊಳಿಸಬೇಕು, ನಾವು ಮುಗ್ಧತೆಯನ್ನು ಕಳೆದುಕೊಳ್ಳಬಾರದು. ಸಾಹಿತ್ಯದಲ್ಲಿ ಶ್ರೇಷ್ಠವಾದ ಮಕ್ಕಳ ಸಾಹಿತ್ಯವೆಂದರೆ ನಮ್ಮದೇ ಮಾತು, ನಮ್ಮದೇ ಸ್ವರದ ಅಭಿವ್ಯಕ್ತಿಯಾಗಿದೆ. ನಿಸರ್ಗ ಅವರದ್ದೇ ಆದ ಸ್ವರವನ್ನು ಪ್ರತಿಯೊಬ್ಬರಿಗೂ ಕೊಟ್ಟಿದೆ. ಇಂದು…
ವಿಟ್ಲ : ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ದಿನಾಂಕ 01 ನವೆಂಬರ್ 2025ರ ಶನಿವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಪತ್ನಿ ಹಾಗೂ ಪುತ್ರನನ್ನು ಆಗಲಿದ್ದಾರೆ. ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಅವರು ಪ್ರಸ್ತುತ ಪುತ್ತೂರು ಸಮೀಪ ಮುರದಲ್ಲಿ ವಾಸಿಸುತ್ತಿದ್ದರು. ವಿಟ್ಲ ಶಂಭು ಶರ್ಮರು ಉತ್ತಮ ಅರ್ಥಧಾರಿ, ಪ್ರಸಂಗದ ನಡೆ, ಪದ್ಯಗಳ ಮರ್ಮ ಅರಿತು ಅರ್ಥ ಹೇಳಬಲ್ಲ ಬೆರಳೆಣಿಕೆಯ ಕಲಾವಿದರಲ್ಲಿ ಓರ್ವರಾಗಿದ್ದರು. ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ಪಾತ್ರಗಳಿಗೊಂದು ಪಾತ್ರ ಸೃಷ್ಟಿಸಬಲ್ಲ ಸಮರ್ಥ ಹಿರಿಯ ಅನುಭವೀ ಅರ್ಥಧಾರಿಗಳೂ ಆಗಿದ್ದರು. ವಿಟ್ಲ ಶಂಭು ಶರ್ಮರು ಕುಂಬ್ಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿ ಎಂಬಲ್ಲಿ ಕೃಷ್ಣ ಭಟ್ – ಹೇಮಾವತಿ ದಂಪತಿ ಪುತ್ರರಾಗಿ 13-10-1951ರಂದು ಜನಿಸಿದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದ ಶರ್ಮರು ತಾಳಮದ್ದಳೆ ಅರ್ಥಧಾರಿಗಳಾಗಿ ಮಿಂಚಿದರು. ಶರ್ಮರ ಅರ್ಥಗಾರಿಕೆಯು ಬಲು ಸೊಗಸಾದುದು. ಯಾವುದೇ ಪಾತ್ರವನ್ನು ನಿರ್ವಹಿಸುವಾಗ ಪೀಠಿಕೆಯಲ್ಲಿ ಆ ಪಾತ್ರದ ಗುಣ- ಸ್ವಭಾವವನ್ನು ಪ್ರೇಕ್ಷಕರಿಗೆ ಮನದಟ್ಟು…
ಕೊಡಿಯಾಲಬೈಲು : ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ವತಿಯಿಂದ ವಚನ ಸಂಭ್ರಮ-ವಚನ ಸಾಹಿತ್ಯದ ಬಗ್ಗೆ ರಸಪ್ರಶ್ನೆ ಸ್ಪರ್ಧೆಯ ಸರಣಿ ಕಾರ್ಯಕ್ರಮವು ದಿನಾಂಕ 01 ನವೆಂಬರ್ 2025ರಂದು ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಉದ್ಘಾಟಿಸಿ, “ವಚನಸಾಹಿತ್ಯದ ತತ್ವ ಸಿದ್ಧಾಂತಗಳು ಮಕ್ಕಳಿಗೆ ಮುಟ್ಟಿಸುವುದು ಉತ್ತಮ ಕಾರ್ಯ” ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಕ.ಸಾ.ಪ. ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, “ಶಾಲೆಗಳಿಗೆ ತೆರಳಿ ವಚನ ಸಾಹಿತ್ಯ ಬೇರೆ ಬೇರೆ ಪ್ರಕಾರಗಳ ಸ್ಪರ್ಧೆಯನ್ನು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯ ಜತೆಗೆ ವಚನ ತತ್ವದಲ್ಲಿ ಇರುವ ಉತ್ತಮ ಸಂಸ್ಕಾರದ ಅರಿವು ಮೂಡಿಸುವಲ್ಲಿ ಪ್ರಯೋಜನಕಾರಿ ಆಗುತ್ತದೆ” ಎಂದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ. ಜಯಪ್ಪ ಮಂಗಳೂರು ಉತ್ತರ ವಲಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಚಂದ್ರಿಕಾ ಪ್ರಭಾಕರ್, ಅಖಿಲ ಭಾರತ ವೀರಶೈವ ಮಹಾಸಭಾ ದ.ಕ. ಘಟಕದ ಅಧ್ಯಕ್ಷ ಬಸವರಾಜ ಉಪಸ್ಥಿತರಿದ್ದರು. ಅಕ್ಕಮಹಾದೇವಿ ವೀರಶೈವ…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಇವುಗಳ ವತಿಯಿಂದ ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025’ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ. ಧಾರವಾಡದ ಚನ್ನಪ್ಪ ಅಂಗಡಿ (ಸಮಗ್ರ ಸಾಹಿತ್ಯ), ಉಡುಪಿಯ ಡಾ. ನಿಕೇತನ (ಸಂಶೋಧನೆ ವಿಮರ್ಶೆ), ಬೆಂಗಳೂರಿನ ಮುದಲ್ ವಿಜಯ್ (ಕಾವ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ದಿನಾಂಕ 22 ನವೆಂಬರ್ 2025ರಂದು ನಡೆಯುವ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕ, ನಗದು ರೂ.5,000/-ದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025’ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿಯಾದ ಸಂಧ್ಯಾ ಶೆಣೈ ಉಡುಪಿ ತಿಳಿಸಿರುತ್ತಾರೆ.
ಮಂಗಳೂರು : ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭವು ದಿನಾಂಕ 01 ನವೆಂಬರ್ 2025ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ.ಎ. ನಂದಗೋಪಾಲ್ ಶೆಣೈಯವರು ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಹೇಳುತ್ತಾ ರಾಷ್ಟ್ರೀಯ ಮಟ್ಟದ ವಿಶ್ವ ಕೊಂಕಣಿ ಪುರಸ್ಕಾರ ಕಾರ್ಯಕ್ರಮಕ್ಕೆ ವಿವಿಧ ಸಂಘ ಸಂಸ್ಥೆಗಳಿಂದ ಒಟ್ಟಾಗಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿದ ಕೊಂಕಣಿ ಹೋರಾಟಗಾರ ಶ್ರೀ ಪುಂಡಳೀಕ ಎನ್. ನಾಯಕ್ ಇವರಿಗೆ ‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ’, ಶ್ರೀ ಶಶಿಕಾಂತ ಪೂನಾಜಿ ಇವರ ‘ಗುಠೆಣಿ’ಯೆಂಬ ಕವಿತಾ ಕೃತಿಗೆ ‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ’, ಪ್ರಾಧ್ಯಾಪಕ ಶ್ರೀ ಬಾಲಚಂದ್ರ ಗಾಂವಕಾರ ಇವರ ‘ಪನವತ’ಯೆಂಬ ಸಾಹಿತ್ಯ ಕೃತಿಗೆ ‘ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಕೃತಿ ಪುರಸ್ಕಾರ ಪ್ರಶಸ್ತಿ’…
ಬೆಂಗಳೂರು : ಕ್ರಾನಿಕಲ್ಸ್ ಆಫ್ ಇಂಡಿಯಾ ಪ್ರಸ್ತುತ ಪಡಿಸುವ ಗಣೇಶ್ ಮಂದಾರ್ತಿ ಇವರ ವಿನ್ಯಾಸ, ಸಂಗೀತ ಮತ್ತು ನಿರ್ದೇಶನದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನವನ್ನು ದಿನಾಂಕ 05 ನವೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರು ಜೆ.ಪಿ. ನಗರದ ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 88674 19347, 98453 84528 ಮತ್ತು 9740145042 ಸಂಖ್ಯೆಯನ್ನು ಸಂಪರ್ಕಿಸಿರಿ. ನಾಟಕದ ಬಗ್ಗೆ : ಏಕ ಕಾಲಕ್ಕೆ ಇದೊಂದು ಪೌರಾಣಿಕ ಮತ್ತು ಸಾಮಾಜಿಕ ನಾಟಕ. ಇಲ್ಲಿ ಎರಡು ಕಥಾಹಂದರವಿದೆ. ಒಂದು ಶಿವನ ಪುರಾಣ ಕತೆಗಳದ್ದು ; ಇನ್ನೊಂದು – ಶಿವನ ಪಾತ್ರಧಾರಿಯ, ಊರಿನ ಕತೆ. ಶಿವ ನಮ್ಮ ನಾಡಿನ ಪುರಾತನ ಪ್ರತಿಮೆ, ಆತ ತಳಸಮುದಾಯದವರ ದೇವರು. ಶಿವನಿಗೆ ನಟಶೇಖರನೆಂಬ ಹೆಸರಿದೆ ಹಾಗೂ ಕಾಮನನ್ನೇ ಸುಡುವ ಯೋಗಿ – ಶಿವ ದಾಕ್ಷಾಯಿಣಿಯ ಹೆಣ ಹೊತ್ತು ತಿರುಗುವ ಕಡುಮೋಹಿ ಕೂಡ. ಆತ ಎರಡು extreme (ಭವ-ಪರ)ಗಳಲ್ಲಿ ತೀವ್ರವಾಗಿ ಬದುಕುವವ. ಅವನ ಭವದ ಪರಿಪಾಟಲುಗಳ, ಪ್ರೇಮದ, ಕುಟುಂಬದ ಕತೆಗಳನ್ನಷ್ಟೇ ನಾವಿಲ್ಲಿ ಆರಿಸಿದ್ದೇವೆ.…
ಸಾಲಿಗ್ರಾಮ : ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಹಾಗೂ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿನಾಂಕ 01 ನವೆಂಬರ್ 2025ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಾಹಿತಿ ಶ್ರೀ ಕೆ.ಜಿ. ಸೂರ್ಯನಾರಾಯಣ ಮಯ್ಯ ಇವರು ಕನ್ನಡ ಧ್ವಜನಮನ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು “ಕನ್ನಡ ಮಾಧ್ಯಮದ ಶಾಲೆಯನ್ನು ಉಳಿಸಬೇಕೆಂದು ಕರೆ ನೀಡಿದರು. ನಾವು ಪ್ರತಿಯೊಬ್ಬರೂ ನಮ್ಮನ್ನು ನಾವು ಪ್ರೀತಿಸಬೇಕು. ಆಗ ಮಾತ್ರ ನಾವು ಬೇರೆಯವರನ್ನೂ ಪ್ರೀತಿಸುತ್ತೇವೆ. ನಮ್ಮ ನಾಡು ನಮ್ಮ ಹೆಮ್ಮೆಯ ಭಾಷೆ ಕನ್ನಡ ನಮ್ಮ ರಾಜ್ಯ ನಮ್ಮ ದೇಶ ಹೀಗೆ ಎಲ್ಲರನ್ನೂ ಪ್ರೀತಿಯಿಂದ ಕಾಣಬೇಕು. ಭಾಷಾ ಅಭಿಮಾನಬೇಕು, ದುರಭಿಮಾನ ಒಳ್ಳೆಯದಲ್ಲ. ಮಕ್ಕಳೂ ಸೇರಿದಂತೆ ಎಲ್ಲರೂ ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಕಲಿಯೋಕೆ ನೂರು ಭಾಷೆ ಆಡೋಕೆ ಒಂದೇ ಭಾಷೆ ಕನ್ನಡಾ ಕನ್ನಡಾ ಕನ್ನಡಾ ಎಲ್ಲಿಯವರೆಗೆ ಉಪಭಾಷೆಗಳು ಜೀವಂತವಾಗಿರುತ್ತದೆ. ಅಲ್ಲಿಯವರೆಗೆ ಕನ್ನಡ ಭಾಷೆಗೆ ಅಳಿವಿಲ್ಲ. ಕನ್ನಡ ಭಾಷೆಗೆ ಉಪಭಾಷೆಗಳ ಕೊಡುಗೆ ಅಪಾರ” ಎನ್ನುವ ವಿಚಾರವನ್ನು ವ್ಯಕ್ತಪಡಿಸಿದರು.…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ಡಾ. ಇಂದಿರಾ ಹೆಗ್ಗೆಡೆ ಇವರು ರಚಿಸಿದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 5 ನವೆಂಬರ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ಸಿರಿ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ನಿವೃತ್ತ ಪ್ರಾಂಶುಪಾಲರಾದ ಡಾ. ಆಶಾಲತಾ ಸುವರ್ಣ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಮುಂಬೈ : ಕರ್ನಾಟಕ ಸಂಘ ಶಿವಮೊಗ್ಗ ಕೊಡಮಾಡುವ 2024ರ ಸಾಲಿನ ಎಂ.ಕೆ. ಇಂದಿರಾ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಮುಂಬೈ ವಿಶ್ವವಿದ್ಯಾಲಯದ ಸಂಶೋಧನ ವಿದ್ಯಾರ್ಥಿ ಪ್ರತಿಭಾ ರಾವ್ ಇವರು ಆಯ್ಕೆಯಾಗಿದ್ದಾರೆ. ಪ್ರತಿಭಾ ರಾವ್ ಇವರು ರಚಿಸಿರುವ ಡಾ. ಸುಧಾಮೂರ್ತಿಯವರ ಸಾಹಿತ್ಯ ಸಾಧನೆಯ ಹಿನ್ನೆಲೆಯ ಕೃತಿ ‘ಜೀವನ್ಮುಖಿ’ ಈ ಸಾಲಿನ ಎಂ.ಕೆ. ಇಂದಿರಾ ಪುರಸ್ಕಾರಕ್ಕೆ ಭಾಜನವಾಗಿದೆ. ಇದನ್ನು ಮುಂಬೈ ವಿ.ವಿ. ಕನ್ನಡ ವಿಭಾಗ ಪ್ರಕಟಿಸಿದೆ. ಮೂಲತಃ ಮಂಗಳೂರಿನವರಾದ ಪ್ರತಿಭಾ ರಾವ್ ಇವರು ಮುಂಬೈ ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು ಎಂ.ಬಿ. ಕುಕ್ಯಾನ್ ಚಿನ್ನದ ಪದಕದೊಂದಿಗೆ ಪಡೆದಿರುತ್ತಾರೆ. ನೂರರ ಸಂಭ್ರಮವನ್ನು ಆಚರಿಸುತ್ತಿರುವ ಮುಂಬೈಯ ಪ್ರತಿಷ್ಠಿತ ಸಂಸ್ಥೆಯಾದ ಬಿ.ಎಸ್.ಕೆ.ಬಿ. ಅಸೋಸಿಯೇಷನ್ ಕುರಿತ ಇವರ ಎರಡು ಕೃತಿಗಳಾದ ‘ಶತಮಾನದ ಯಾನ’ ಹಾಗೂ ‘ಸೆಂಟಿನಿಯಲ್ ಒಡಿಸ್ಸಿ’ ಈಗಾಗಲೇ ಪ್ರಕಟಗೊಂಡಿವೆ. ‘ಶೋಧ ಸಿರಿ’ ಶಿಷ್ಯವೇತನ ಪುರಸ್ಕಾರವನ್ನು ಪಡೆದಿರುವ ಇವರು ಪ್ರಸ್ತುತ ಪ್ರೊ. ಜಿ.ಎನ್. ಉಪಾಧ್ಯ ಇವರ ಮಾರ್ಗದರ್ಶನದಲ್ಲಿ ‘ಶಿಲಾಹಾರರು – ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಬಗೆಗೆ ಸಂಶೋಧನೆಯಲ್ಲಿ ನಿರತರಾಗಿದ್ದಾರೆ.…
ತೀರ್ಥಹಳ್ಳಿ : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ ಇದರ 35ನೇ ವಾರ್ಷಿಕೋತ್ಸವದ ಪ್ರಯುಕ್ತ ದಾಸವರೇಣ್ಯ ಪುರಂದರದಾಸರ ‘ಕೀರ್ತನೋತ್ಸವ’ ಕಾರ್ಯಕ್ರಮವನ್ನು ದಿನಾಂಕ 04 ನವೆಂಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ತೀರ್ಥಹಳ್ಳಿ ಆರಗ ಸಹಕಾರ ಸಂಘ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿದ್ವಾನ್ ಫಣೀಂದ್ರ ಇವರ ಹಾಡುಗಾರಿಕೆಗೆ ಮೈಸೂರಿನ ವಿದ್ವಾನ್ ಶ್ರೀಕಾಂತ್ ಪಿಟೀಲು, ಕೋಲಾರದ ವಿದ್ವಾನ್ ಕೆ.ಕೆ. ಭಾನು ಪ್ರಕಾಶ್ ಮೃದಂಗ ಮತ್ತು ಮಾಸ್ಟರ್ ಚಿರಾಗ್ ಮೋರ್ಸಿಂಗ್ ನಲ್ಲಿ ಸಹಕರಿಸಲಿದ್ದಾರೆ. ವಿದ್ವಾನ್ ಹೊಸಹಳ್ಳಿ ಕೆ. ವೆಂಕಟರಾಂ, ವಿದ್ವಾನ್ ಹೊಸಹಳ್ಳಿ ಕೆ. ಸುಬ್ಬರಾವ್ ಮತ್ತು ವಿದ್ವಾನ್ ಹೊಸಹಳ್ಳಿ ವಿ. ರಘುರಾಂ ಇವರ ಪಿಟೀಲು ವಾದನಕ್ಕೆ ಬೆಂಗಳೂರಿನ ವಿದ್ವಾನ್ ಎ.ಎಸ್.ಎನ್. ಸ್ವಾಮಿ ಮೃದಂಗ ಮತ್ತು ವಿದ್ವಾನ್ ಕೆ.ಕೆ. ಭಾನುಪ್ರಕಾಶ್ ಸಾಥ್ ನೀಡಲಿದ್ದಾರೆ. ವಿದ್ವಾನ್ ಶೃಂಗೇರಿ ನಾಗರಾಜ್ ಇವರ ಶಿಷ್ಯ ವೃಂದದ ಹಾಡುಗಾರಿಕೆಗೆ ವಿದ್ವಾನ್ ಮತ್ತೂರು ಮಧುಮುರಳಿ ಪಿಟೀಲು ಮತ್ತು ವಿದ್ವಾನ್ ಕೇಶವ ಭಾರದ್ವಾಜ್ ಮೃದಂಗ ನುಡಿಸಲಿದ್ದಾರೆ. ವಿದ್ವಾನ್ ಹುಮಾಯುನ್ ಹರ್ಲಾಪುರ್, ವಿದ್ವಾನ್ ನವ್ ಶದ್…