Subscribe to Updates
Get the latest creative news from FooBar about art, design and business.
Author: roovari
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಫೆಬ್ರವರಿ ತಿಂಗಳ ಕಾರ್ಯಕ್ರಮದಲ್ಲಿ ಯುವ ಪ್ರತಿಭೆ ಕುಮಾರಿ ಪ್ರಣೀತ ಪ್ರಶಾಂತ್ ನಾಯಕ್ ಕೋಟ ಇವರಿಂದ ‘ಭರತನಾಟ್ಯ’ ಪ್ರದರ್ಶನ’ವು ದಿನಾಂಕ 23 ಫೆಬ್ರವರಿ 2025ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.
ಮಡಿಕೇರಿ : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾರಸ್ವತ ಲೋಕದಲ್ಲಿ ಸಾಹಿತ್ಯ ಕೃಷಿಯ ಮೂಲಕ ಶಾಶ್ವತ ಸ್ಥಾನ ಪಡೆದ, ಕೊಡಗಿನ ವಿಶಿಷ್ಟ ಸಂಸ್ಕೃತಿಯನ್ನು ತಮ್ಮ ಹುತ್ತರಿ ಹಾಡಿನ ಮೂಲಕ ಕಟ್ಟಿಕೊಟ್ಟ ಹಿರಿಯ ಚೇತನ ‘ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ’ಯು ದಿನಾಂಕ 20 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಕೊಡಗು ಜಿಲ್ಲೆ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂರ್ತ ಗೌಡ ಇವರು ಸಾಹಿತಿ…
ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಇದರ ಜಿಲ್ಲಾಧ್ಯಕ್ಷರಾಗಿ ಚಾಮೆರ ದಿನೇಶ್ ಬೆಳ್ಯಪ್ಪ ಅವರನ್ನು ಆಯ್ಕೆಮಾಡಿ ರಾಜ್ಯಧ್ಯಕ್ಷ ಸಿ. ಎನ್. ಅಶೋಕ್ ಆದೇಶಿಸಿದ್ದಾರೆ. ದೇಶದ ನಾನಾ ರಾಜ್ಯಗಳಲ್ಲಿ ತನ್ನ ಘಟಕಗಳ ಮೂಲಕ ಕಾರ್ಯಕ್ಷೇತ್ರ ಹೊಂದಿರುವ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ ಒಂದು ರಾಷ್ಟ್ರೀಯ ಸಂಘಟನೆಯಾಗಿದ್ದು, ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವ ಜೊತೆಗೆ, ಅವರಲ್ಲಿ ಸೃಜನಶೀಲ ಬೆಳವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ದುಡಿಯುತ್ತಿರುವ ಸಂಸ್ಥೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಸಾಹಿತ್ಯ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ, ಸರ್ವ ಸದಸ್ಯರ ಸರ್ವಾನುಮತದಿಂದ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಮುಂದೆ ಜಿಲ್ಲೆಯ ಮಕ್ಕಳಲ್ಲಿ ಬೆಳವಣಿಗೆಯಾಗಲು ಶ್ರಮಿಸುವಂತೆ ಆಶಿಸಿದ್ದಾರೆ.
ಕುಂದಾಪುರ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ “ಕರ್ನಾಟಕ ಕಣ್ಮಣಿ” ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಫೆಬ್ರವರಿ 2025ರಂದು ಉಪ್ಪಿನಕುದ್ರು ಗೊಂಬೆಯಾಟ ಯಕ್ಷಗಾನ ಅಕಾಡೆಮಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ 50 ವರ್ಷಗಳಿಂದ ದೇಶ ಹಾಗೂ ವಿದೇಶಗಳಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳ ಅಪ್ಪಟ ಕನ್ನಡ ಭಾಷೆಯ ಯಕ್ಷಗಾನವನ್ನು ವಿಶ್ವವ್ಯಾಪ್ತಿಗಳಲ್ಲಿ ವೈಭವೀಕರಿಸಿದ ಯಕ್ಷಗಾನ ಗೊಂಬೆಯಾಟ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ‘ಕಲಾಕುಂಚ’ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ‘ಕಲಾಕುಂಚ’ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಸಮಿತಿ ಸದಸ್ಯರಾದ ಶ್ರೀಮತಿ ಸನ್ನಿಧಿ ಸಂದೀಪ್ ಶೆಣೈ ದಂಪತಿಗಳು ಮತ್ತು ಕುಮಾರಿ ಮಾನ್ಯ ಶೆಣೈಯವರು ಉಪಸ್ಥಿತರಿದ್ದರು
ಪಂಜ : ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಧ್ಯಾರಶ್ಮಿ ಸಾಹಿತ್ಯ ಸಂಘದ ‘ತಿಂಗಳ ಸಾಹಿತ್ಯ ಸಂವಾದ’ ಕಾರ್ಯಕ್ರಮವು ದಿನಾಂಕ 15 ಫೆಬ್ರವರಿ 2025ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಮಾಲಿಕೆ ಕಾರ್ಯಕ್ರಮದಲ್ಲಿ ಲೇಖಕಿ ಶ್ರೀಮತಿ ಲಲಿತಾಜ ಮಲ್ಲಾರ ಇವರ ಸಾಹಿತ್ಯ ವಿಚಾರ ಮಂಡನೆ ನಡೆಯಿತು. ಸಂದ್ಯಾರಶ್ಮಿ ಸಾಹಿತ್ಯ ಸಂಘದ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀಮತಿ ತಾರಾಮತಿ ಕಗ್ಗೋಡಿ ಇವರು ಲಲಿತಾಜ ಮಲ್ಲಾರ ರವರ ವ್ಯಕ್ತಿತ್ವ ಪರಿಚಯ ಮಾಡಿದರು. ಸಾಹಿತಿಗಳಾದ ಕುಮಾರಸ್ವಾಮಿ ತಕ್ಕುಂಜ ಇತ್ತೀಚೆಗೆ ಬಿಡುಗಡೆಗೊಂಡ ಲಲಿತಾಜ ಮಲ್ಲಾರ ರಚಿಸಿದ “ಕೋಟಿ ತೀರ್ಥ” ಕೃತಿಯ ಪರಿಚಯವನ್ನು ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ.…
ಶಶಿಧರ ಹಾಲಾಡಿ ಇವರು ಕನ್ನಡದ ಪರಿಸರಾಸಕ್ತ ಓದುಗರನ್ನು ಮತ್ತೊಮ್ಮೆ ತಾವು ಹುಟ್ಟಿ ಬೆಳೆದ ಹಾಲಾಡಿ ಎಂಬ ಹಸುರಿನ ಬನಸಿರಿಯ ಸುತ್ತ ಸಂಚರಿಸಲು ತಮ್ಮ ಹೊಸ ಕೃತಿ ‘ಪರಿಸರದ ಒಡನಾಟ’ದ ಮೂಲಕ ಪ್ರೇರೇಪಿಸಿದ್ದಾರೆ. ಚಿಕ್ಕ ಬಾಲಕನಾಗಿದ್ದ ಕಾಲದಲ್ಲಿ ತಾವು ಕಂಡ ಹಾಲಾಡಿಯ ಗಿಡ-ಮರ-ಬಳ್ಳಿ-ಹಣ್ಣು-ಕಾಯಿ-ಹಸಿರೆಲೆ-ಪ್ರಾಣಿ-ಪಕ್ಷಿ-ಸರೀಸೃಪ-ಕ್ರಿಮಿ-ಕೀಟಗಳ ಜತೆಗೆ ಸೌಹಾರ್ದ ಸಂಬಂಧ ಬೆಳೆಸಿಕೊಂಡು ಸಂತೃಪ್ತ ಬದುಕು ಸಾಗಿಸುತ್ತಿದ್ದ ಹಳ್ಳಿಯ ಜನರ ಜೀವನ ಕ್ರಮದ ನೆನಪು ಈಗ ಅವರ ಪಾಲಿಗೊಂದು ಅಕ್ಷಯ ಪಾತ್ರೆ. ನೆನಪುಗಳಲ್ಲಿ ಅಚ್ಚಳಿಯದೆ ಉಳಿದಿರುವ ಅವೆಲ್ಲವೂ ಅವರ ಈ ವರೆಗಿನ ಕಥೆ-ಕಾದಂಬರಿ-ಲೇಖನಗಳಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿರುವುದನ್ನು ನಾವು ನೋಡಿದ್ದೇವೆ. ‘ಪರಿಸರದ ಒಡನಾಟ’ ಶಶಿಧರ ಅವರ ಹದಿನೆಂಟನೇ ಕೃತಿ. ಇದರಲ್ಲಿ 42 ಲೇಖನಗಳಿವೆ. ಇಲ್ಲಿ ಹಳ್ಳಿಯಲ್ಲಿ ಕಳೆದ ಸಮೃದ್ಧ ಬಾಲ್ಯದ ನೆನಪುಗಳ ಮೂಲಕ ಅಡಕೆ ತೋಟ, ಮನೆಯ ಮುಂದಿನ ಬಗ್ಗು ಬಾವಿ, ಅಗೇಡಿ, ಗದ್ದೆ ಬಯಲುಗಳು, ನೀರು ಹರಿಯುವ ತೋಡುಗಳು, ಆ ನೀರನ್ನು ಜನರು ಬಳಸುತ್ತಿದ್ದ ಪರಿ, ಬೀಸುವ ಗಾಳಿ, ಸೋಗೆ ಮಾಡಿನ ಶಾಲೆಗೆ ಹೋಗುವ ದಾರಿಯಲ್ಲಿ…
ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀಸ್ವಾಮೀಜಿಯವರ ನೇತೃತ್ವ ಹಾಗೂ ಅನುಗ್ರಹದೊಂದಿಗೆ ನಡೆಯುವ ಎಡನೀರು ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಾಗೂ ನಾಟ್ಯರಂಗ ಎಡನೀರು ಶಾಖೆಯ ಮಕ್ಕಳ ವಾರ್ಷಿಕೋತ್ಸವ ಸಂಭ್ರಮದ ಪ್ರಯುಕ್ತ ‘ನೃತ್ಯ ಹರ್ಷ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 14 ಫೆಬ್ರವರಿ 2025ರಂದು ನಡೆಯಿತು. ಶಾಸ್ತ್ರೀಯ ಭರತನಾಟ್ಯದ ರಂಗಪ್ರವೇಶ ಮಾಡುವ ಮೂಲಕ ಎಳೆಯ ಮಕ್ಕಳು ವೇದಿಕೆಯನ್ನೇರಿದರು. ಹಿಮ್ಮೇಳದಲ್ಲಿ ನೃತ್ಯನಿರ್ದೇಶನ ಮಾಡಿದ ಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ನಟುವಾಂಗ, ಗಾಯನದಲ್ಲಿ ಪವಿತ್ರ ವಿನಯ್ ಮಯ್ಯ, ಮೃದಂಗ ವಾದಕರಾಗಿ ಕೋವೈ ಕಣ್ಣನ್ ಕಾಂಞಂಗಾಡ್, ಕೊಳಲು ವಾದನದಲ್ಲಿ ಕೃಷ್ಣಗೋಪಾಲ ಪುತ್ತೂರು ಇವರುಗಳು ಸಹಕರಿಸಿದ್ದರು.
ಮೈಸೂರು : ನಟನ ರಂಗಶಾಲೆಯ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ವಾರಾಂತ್ಯ ರಂಗ ಶಾಲೆಯ ಮಕ್ಕಳ ಅಭ್ಯಾಸಿ ಪ್ರಯೋಗದ ಪಯುಕ್ತ ದಿನಾಂಕ 22 ಮತ್ತು 23 ಫೆಬ್ರವರಿ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರ, ನಟನ ರಂಗಶಾಲೆಯಲ್ಲಿ ‘ಮಕ್ಕಳ ಮಹಾಭಾರತ’ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ನಾಟಕವು ಡಾ. ಪಿ.ಕೆ. ರಾಜಶೇಖರರವರ ಜನಪದ ಮಹಾಭಾರತ ಆಧಾರಿತವಾಗಿದ್ದು, ಇದರ ರಚನೆಯನ್ನು ರಂಗಾಯಣ ರಾಮನಾಥ ಇವರು ಮಾಡಿದ್ದು ಹಾಗೂ ಡಿ.ಸಿ. ಸುದರ್ಶನ್ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಪರ್ಕಿಸಿರಿ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಪರಿಷತ್ತಿನ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 17 ಫೆಬ್ರವರಿ 2025ರಂದು ನಡೆಯಿತು. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಆಚರಿಸುವ ಕುರಿತು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ತಾಲೂಕು ಅಧ್ಯಕ್ಷರು ಮತ್ತು ಹೋಬಳಿ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಂಚಿದ್ದು, ಸ್ವಾಗತ ಸಮಿತಿ, ಆಹಾರ ಸಮಿತಿ, ಸನ್ಮಾನ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಪದ್ಮನಾಭ ಸದಸ್ಯರುಗಳಾಗಿ ಮಂಜುನಾಥ ಎ.ವಿ., ಎಸ್.ಎಸ್. ಸಂಪತ್ ಕುಮಾರ್, ಕೆ.ಟಿ. ಬೇಬಿ ಮ್ಯಾಥ್ಯೂ, ಕೋಳೆರ ದಯಾ ಚಂಗಪ್ಪ, ಕೆ.ಎಸ್. ನಾಗೇಶ್, ಕುಲ್ಲಚಂಡ ಪ್ರಮೋದ್ ಗಣಪತಿ, ಉಳುವಂಗಡ ಕಾವೇರಿ ಉದಯ, ವಿ.ಟಿ. ಮಂಜುನಾಥ್ ಇವರಿಗೆ ಜವಾಬ್ದಾರಿ ವಹಿಸಲಾಯಿತು. ವೇದಿಕೆ ಸಮಿತಿ ಅಧ್ಯಕ್ಷರಾಗಿ ಅಂಬೆಕಲ್ ನವೀನ್ ಸದಸ್ಯರುಗಳಾಗಿ ಎಸ್.ಡಿ. ವಿಜೇತ್, ಸುನಿಲ್ ಪತ್ರವೋ, ನಂಗಾರು ಕೀರ್ತಿ ಪ್ರಸಾದ್, ಈರಮಂಡ ಹರಿಣಿ ವಿಜಯ್, ಪಿ.ಎಫ್. ಸಭಾಸ್ಟಿನ್, ಬಿ.ಬಿ.…
ಬೆಂಗಳೂರು : ರಂಗ ಮಂಡಲ ಬೆಂಗಳೂರು, ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಮತ್ತು ಸಾಮಾಜಿಕ ಸಾಂಸ್ಕೃತಿಕ ಸಂಘಟನೆ ರಂಗ ಚಂದಿರ (ರಿ.) ಜಂಟಿಯಾಗಿ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ಎಂಟನೇ ಕವಿಗೋಷ್ಠಿ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಹೀಗೆ ಜನರೆಡೆಗೆ ಕಾವ್ಯ ಕೊಂಡುಹೋಗುವ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನಿಂದ ಸ್ವರ್ಗ ಸದೃಶ ನಾಡು ಕೊಡಗು ಜಿಲ್ಲೆಯ ಕಡೆಗೆ ‘ಕಾವ್ಯ ದೀವಟಿಗೆಯ ಪಯಣ’ ದಿನಾಂಕ 22 ಫೆಬ್ರವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ಗೋಷ್ಠಿಯ ಅಧ್ಯಕ್ಷತೆಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಡಾ. ಸತ್ಯಮಂಗಲ ಮಹಾದೇವ ಇವರು ವಹಿಸಲಿದ್ದು, ಉದ್ಘಾಟಕರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜು ಭಾಗವಹಿಸಲಿದ್ದಾರೆ. ವಿಜಯಲಕ್ಷ್ಮಿ ಸತ್ಯಮೂರ್ತಿ, ನಂರುಶಿ, ಚಿತ್ತಣ್ಣ ಪಿ., ಭಾರತಮ್ಮ ಎ., ಸುಜಾತ ಎನ್.,…