Author: roovari

ಧಾರವಾಡ : ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ ಧಾರವಾಡ ಇದರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಜಿಲ್ಲಾ ಘಟಕ ಇದರ ಸಹಯೋಗದೊಂದಿಗೆ 2023ನೇ ಸಾಲಿನ ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 28 ಜುಲೈ 2024ರಂದು ಅಪರಾಹ್ನ 4-30 ಗಂಟೆಗೆ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಪಕ್ಕ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ಯನ್ನು ಧಾರವಾಡದ ಪ್ರಸಿದ್ಧ ಸಾಹಿತಿಗಳಾದ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಇವರು ಲೇಖಕಿ ಶ್ರೀಮತಿ ಕಾವ್ಯಾ ಕಡಮೆ ಇವರಿಗೆ ಪ್ರದಾನ ಮಾಡಲಿರುವರು. ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಮಂಗಳೂರು : ಮಂಗಳೂರು ಸಂಸ್ಕಾರ ಭಾರತೀಯು ಕಳೆದ 20 ವರ್ಷಗಳಿಂದ ಗುರುಪೂರ್ಣಿಮೆಯoದು ನಾಡಿನ ಹಲವಾರು ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುತ್ತಾ ಬಂದಿದೆ. ಈ ವರ್ಷ 21 ಜುಲೈ 2024ನೇ ಭಾನುವಾರ ಬೆಳಿಗ್ಗೆ ಹಿರಿಯ ಸಾಧಕರ ನಿವಾಸಕ್ಕೆ ತೆರಳಿ ಗುರುನಮನ ಸಲ್ಲಿಸಲಾಯಿತು. ಕಲಾ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಜ್ಞಾತ ಕಲಾವಿದರು, ಶ್ರೇಷ್ಠ ಕಲಾಗುರುಗಳನ್ನು ಗುರುತಿಸಿ, ಅವರು ಇರುವಲ್ಲಿಗೇ ತೆರಳಿ, ಫಲ, ಹಾರ, ಸ್ಮರಣಿಕೆ ಹಾಗೂ ನಿಟ್ಟೆ ಸಂಸ್ಥೆ ನೀಡಿದ ರೂ.10,000/- ನಗದು ಪುರಸ್ಕಾರದೊಂದಿಗೆ ಸತ್ಕರಿಸಿ ಅಭಿನಂದಿಸಲಾಯಿತು. ಪ್ರತಿಯೊಬ್ಬರ ಗುರುನಮನದಲ್ಲಿ ಕಾರ್ಯಕ್ರಮವನ್ನು ಧ್ಯೇಯ ಗೀತೆಯೊಂದಿಗೆ ಆರಂಭಿಸಲಾಯಿತು. ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಮೈಗೂಡಿಸಿರುವ ಬಿ. ಭೋಜ ಸುವರ್ಣ ಬರ್ಕೆ, ಚಿತ್ರಕಲೆಯಲ್ಲಿ ಅಪೂರ್ವ ಸಾಧನೆಗೈದ ಕೆ. ಚಂದ್ರಯ್ಯ ಆಚಾರ್ಯ ಹಾಗೂ ಯಕ್ಷಗಾನ ಪ್ರಸಾಧನದಲ್ಲಿ ಮಹತ್ತರ ಸಾಧನೆಗೈದಿರುವ ಜಿ. ನಾರಾಯಣ ಹೊಳ್ಳ ಇವರುಗಳಿಗೆ ಶ್ರದ್ಧಾ ಗೌರವ ಪೂರ್ವಕವಾಗಿ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಅನನ್ಯ ಸೇವೆ ಗೈದ ಪಂಡಿತ್ ರಾಮ ರಾವ್ ಮತ್ತು ನಾಟಿ…

Read More

ಉಡುಪಿ : ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ‘ನೃತ್ಯಶಂಕರ’ ಸಾಪ್ತಾಹಿಕ ನೃತ್ಯ ಸರಣಿ 55ರಲ್ಲಿ ದೇವಸ್ಥಾನದ ವಸಂತಮಂಟಪದಲ್ಲಿ 22 ಜುಲೈ 2024ರಂದು ನಡೆಯಿತು. ವಿದುಷಿ ಕು. ವಸುಂಧರಾರವರು ತನ್ನ ನೃತ್ಯಾಭಿನಯನದ ಮೂಲಕ ಪೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾದರು. ನಾಟ್ಯಾಧಿ ದೇವತೆಯಾದ ಶಿವನಿಗೆ ಹೂ, ಮೈ, ಮನಗಳನ್ನು ಅರ್ಪಿಸಿ, ದೇವತೆಗಳಿಗೆ ಗುರುಗಳಿಗೆ ತಂದೆ-ತಾಯಿಯರಿಗೆ ನಮಸ್ಕರಿಸಿ, ಬಂದಂತ ಎಲ್ಲಾ ಕಲಾಭಿಮಾನಿಗಳನ್ನು ಸ್ವಾಗತಿಸುವ ಪುಷ್ಪಾಂಜಲಿ ಮೂಲಕ ನೃತ್ಯ ಪ್ರಾರಂಭಿಸಿದರು. ಪದವರ್ಣ ಪ್ರಸ್ತುತಿಯಲ್ಲಿ ವರ್ಣವನ್ನು ವಿಭಿನ್ನವಾಗಿ ಚಿತ್ರಿಸಲಾಗಿದೆ. ಇಲ್ಲಿ ರುಕ್ಮಿಣಿಯು ತನ್ನ ಬಾಲ್ಯದಿಂದ ಕೃಷ್ಣನ ಕಥೆ, ಮಹಿಮೆಗಳನ್ನು ಕೇಳುತ್ತಾ, ಅಪಾರವಾಗಿ ಆತನನ್ನು ಪ್ರೀತಿಸತೊಡಗಿದಳು. ಆತನನ್ನೇ ತನ್ನ ಕಲ್ಪನೆ ಚಿತ್ರಿಸಿದಂತೆ ಪಟವೊಂದರಲ್ಲಿ ಚಿತ್ರಿಸಿ ಅದರೊಂದಿಗೆ ಮಾತನಾಡುವ ವೇಳೆ ಸಖಿಯು ಸತಾಯಿಸಿದಾಗ, ಅಣ್ಣ ರುಕ್ಮನು ಬಂದು ಆ ಚಿತ್ರಪಟವನ್ನು ಹರಿದು ಆಕೆಯನ್ನು ಕೋಣೆಯಲ್ಲಿರಿಸಿದನು. ಅದೇ ವೇಳೆ ಅಲ್ಲಿಂದಲೇ ಹಾದು ಹೋಗುತ್ತಿದ್ದ ದೇವಾಲಯದ ಅರ್ಚಕರಲ್ಲಿ ಬಾಗಿಲುಗಳ ತೆರೆಯಲು ಹೇಳಿ, ತನ್ನ ಸ್ವಯಂವರದ ಮೊದಲೇ ದೇವಿಯ ದೇವಸ್ಥಾನಕ್ಕೆ ಬಂದು…

Read More

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ದಿನಾಂಕ 25 ಜುಲೈ 2024ರಂದು ಶ್ರೀ ಎಡನೀರು ಮಠದ ಭಾರತೀ ಕಲಾ ಸದನದಲ್ಲಿ ಎರಡು ದಿನಗಳ ಸಂಗೀತೋತ್ಸವ ಆರಂಭವಾಯಿತು. ನಾಡಿನ ಖ್ಯಾತ ಸಂಗೀತ ವಿದ್ವಾಂಸರು ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಜುಲೈ 26 2024ರಂದು ಸಂಜೆ 6-00 ಗಂಟೆಯಿಂದ ವಿದ್ವಾನ್ ಆನೂರು ಅನಂತಕೃಷ್ಣ ಶರ್ಮ ಅವರ ನಿರ್ದೇಶನದಲ್ಲಿ ‘ಲಯಲಾವಣ್ಯ ತಾಳವಿದ್ಯಾ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಸುಮಾರು ಹತ್ತಕ್ಕೂ ಹೆಚ್ಚು ವಿವಿಧ ವಾದ್ಯ ಪರಿಕರಗಳ ಕಲಾವಿದರು ಭಾಗವಹಿಸಲಿದ್ದಾರೆ. ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಮಾನ್ಯ ವಲಯ ಸಮಿತಿಯ ಒಂದು ದಿನದ ಪೂರ್ಣಸೇವೆಯು 27 ಜುಲೈ 2024ರಂದು ನಡೆಯಲಿದೆ. ಬೆಳಗ್ಗೆ 9ಕ್ಕೆ ಶ್ರೀಗಳಿಂದ ದೀಪಪ್ರಜ್ವಲನೆ, ಕಲ್ಲಕಟ್ಟ ಶ್ರೀಕೃಷ್ಣಗಾನ ಭಜನಾ ಸಂಘದಿಂದ ಭಜನೆ, 10 ಗಂಟೆಗೆ ಶ್ರೀ ಸಚ್ಚಿದಾನಂದ ಭಾರತೀ ಶಿಷ್ಯವೃಂದ ಮಾನ್ಯ ಇವರಿಂದ ಭಜನೆ, 11ರಿಂದ ಶ್ರೀ ಶಾಸ್ತಾ ಮಹಿಳಾ ಭಜನಾ…

Read More

ಮೈಸೂರು : ಶ್ರೀ ಲಕ್ಕಮ್ಮದೇವಿ ಕಲಾ ಪೋಷಕ ಸಂಘ (ರಿ.) ಬೆಳಗಾವಿ ಇದರ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇದರ ಸಹಕಾರದಲ್ಲಿ ‘ರಾಷ್ಟ್ರೀಯ ಜಾನಪದ ಲೋಕೋತ್ಸವ 2024’ ಕಾರ್ಯಕ್ರಮವನ್ನು 28 ಜುಲೈ 2024ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇದರ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಡಾ. ಗುರು ಕಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇದರ ಅಧ್ಯಕ್ಷರಾದ ಶ್ರೀ ಮಡ್ಡಿಕೆರೆ ಗೋಪಾಲ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ನ್ಯಾಷನಲ್ ಅಚೀವ್ಮೆಂಟ್ ಗ್ಲೋಬಲ್ ಅವಾರ್ಡ್ ಪ್ರದಾನ ಸಮಾರಂಭ ಹಾಗೂ ವಿಚಾರ ಸಂಕೀರ್ಣ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Read More

ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಉಡುಪಿ ರಂಗ ತಂಡಗಳ ಸಹಭಾಗಿತ್ವದಲ್ಲಿ ದಿನಾಂಕ 25 ಜುಲೈ 2024ರಂದು ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ರಂಗಭೂಮಿಯ ದಿ. ಸದಾನಂದ ಸುವರ್ಣ ಅವರಿಗೆ ನುಡಿ ನಮನ ಕಾರ್ಯಕ್ರಮ ಮತ್ತು ‘ಸಮಕಾಲೀನ ರಂಗನಟನೆಯಲ್ಲಿ ಭಾರತೀಯ ಪರಂಪರೆ ಎಂಬುದುದೊಂದು ಇದೆಯೇ ?’ ಎಂಬ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಹಿರಿಯ ರಂಗಕರ್ಮಿ ಪ್ರಸನ್ನ ಇವರು “ಪ್ರಸ್ತುತ ಯಾವ ರಾಜಕಾರಣಿಗಳು ಕೂಡ ನಾಟಕವನ್ನು ನೋಡುತ್ತಿಲ್ಲ. ಈ ಅದ್ಭುತ ಮನರಂಜನಾತ್ಮಕ ಶೈಕ್ಷಣಿಕ ಕ್ಷೇತ್ರವನ್ನು ಎಲ್ಲರೂ ಕಡೆಗಣಿಸುತ್ತಿದ್ದಾರೆ. ರಾಜಕಾರಣಿಗಳನ್ನು ಮತ್ತು ರಾಜಕೀಯ ಪಕ್ಷಗಳನ್ನು ಮೂರ್ಖರ ರೀತಿಯಲ್ಲಿ ನಂಬಿ ಜಗಳ ಆಡುವ ದುರಂತ ಸ್ಥಿತಿಗೆ ದೇಶ ಬಂದಿದೆ. ರಂಗಭೂಮಿ ಪ್ರಸ್ತುತತೆ ಅವುಗಳಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅರಿವೇ ಇಲ್ಲದ ಸ್ಥಿತಿಯಲ್ಲಿ ವ್ಯವಸ್ಥೆ ಇದೆ. ಕ್ರಿಯೆಯನ್ನು ಕಟ್ಟಿದಾಗ ಮಾತ್ರ ನಟನಲ್ಲಿ ನಿಜವಾದ ಪಾತ್ರ ಭಾವನೆ ಮೂಡುತ್ತದೆ, ಶಕ್ತಿಯನ್ನು ನೀಡುತ್ತದೆ. ಆ ಶಕ್ತಿಯೇ ಭಾವವಾಗಿ ಪರಿವರ್ತನೆಯಾಗುತ್ತದೆ. ಕ್ರಿಯೆಯನ್ನು ಬಳಸಿಕೊಂಡು ಸಂಭಾಷಣೆ…

Read More

ಬೆಂಗಳೂರು : ಜನಪದರು ಸಾಂಸ್ಕೃತಿಕ ವೇದಿಕೆ (ರಿ.) ಇದರ ವತಿಯಿಂದ ನಾಟಕ ಪ್ರದರ್ಶನವನ್ನು ದಿನಾಂಕ 27 ಜುಲೈ 2024 ಮತ್ತು 28 ಜುಲೈ 2024ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ನಿಂಬೆಕಾಯಿಪುರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಜನಪದರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 27 ಜುಲೈ 2024ರಂದು ಡಾ. ಬಾಲಗುರುಮೂರ್ತಿ ರಚಿಸಿರುವ ಎಂ. ಸುರೇಶ್ ಇವರ ನಿರ್ದೇಶನದಲ್ಲಿ ಅಲೆಮಾರಿ ಬುಡಕಟ್ಟನ್ನು ಕುರಿತ ಕನ್ನಡದ ಮೊದಲ ನಾಟಕ ‘ಖಡ್ಗನಾದ’ ಮತ್ತು 28 ಜುಲೈ 2024ರಂದು ಶ್ರೀ ಕೃಷ್ಣ ಆಲನಹಳ್ಳಿಯವರ ಕಾದಂಬರಿ ಆಧಾರಿತ ಕೆ.ಎಸ್.ಡಿ.ಎಲ್. ಚಂದ್ರು ನಿರ್ದೇಶನದಲ್ಲಿ ‘ರೂಪಾಂತರ’ ಅಭಿನಯಿಸುವ ನಾಟಕ ‘ಪರಸಂಗದ ಗೆಂಡೆತಿಮ್ಮ’ ಪ್ರದರ್ಶನಗೊಳ್ಳಲಿದೆ.

Read More

ಸುಳ್ಯ : ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಎಂ.ಜಿ. ಕಾವೇರಮ್ಮ ಇವರ 85ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 23 ಜುಲೈ 2024 ಮಂಗಳವಾರದಂದು ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಕೋಡಿಬೈಲ್ “ಶಾಲೆಗಳಲ್ಲಿ ಸಾಹಿತ್ಯ ಚಟುವಟಿಕೆಗಳು ನಡೆಯುವುದು ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಸಹಾಯವಾಗುತ್ತದೆ. ಮಾತೃ ಭಾಷೆಯಲ್ಲಿ ಭಾವನೆಯನ್ನು ವ್ಯಕ್ತಪಡಿಸಲು ಸಾಧ್ಯವಾಗುವಷ್ಟು ಸುಲಭವಾಗಿ ಇಂಗ್ಲೀಷ್ ಭಾಷೆಯಲ್ಲಿ ಸಾಧ್ಯವಿಲ್ಲ. ಹಾಗಾಗಿ ಹೃದ್ಯವಾದ ಸಾಹಿತ್ಯ ರಚನೆಗೆ ಕನ್ನಡ ಮಾಧ್ಯಮವೇ ಸೂಕ್ತ. ಭಾಷೆಯು ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ ಎಂಬುದಕ್ಕೆ ಸ್ನೇಹ ಶಾಲೆಯು ಪ್ರತ್ಯಕ್ಷ ಸಾಕ್ಷಿ. ಇಲ್ಲಿಯ ಸಮೃದ್ಧ ಪರಿಸರ ಉಲ್ಲಸಿತವಾಗಿದ್ದು, ಚೆತೋಹಾರಿಯಾಗಿದೆ. ಇಲ್ಲಿಯ ಮುಕ್ತ ಪರಿಸರದಲ್ಲಿ ನಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ” ಎಂದು ಹೇಳಿ ಸ್ನೇಹ ಶಾಲಾ ವಿದ್ಯಾರ್ಥಿಗಳ ಸಾಹಿತ್ಯ ಸಾಮರ್ಥ್ಯವನ್ನು ಕೊಂಡಾಡಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸ್ನೇಹ ಸಂಸ್ಥೆಯ ಅಧ್ಯಕ್ಷ…

Read More

ಕುಪ್ಪಳ್ಳಿ : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಹಾಗೂ ರೋಟರಿ ಕ್ಲಬ್ ರಿಚ್ ಮಂಡ್ ಟೌನ್ ಬೆಂಗಳೂರು ಇವುಗಳ ಸಹಯೋಗದಲ್ಲಿ ಗುರು ವಂದನೆ, ಕವನ ಸಂಕಲನ ಲೋಕಾರ್ಪಣೆ, ಕವಿಗೋಷ್ಠಿ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು 28 ಜುಲೈ 2024ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9-30 ಗಂಟೆಗೆ ಡಾ. ವಾಣಿಶ್ರೀ ಕಾಸರಗೋಡು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ನಡೆಸಿಕೊಡಲಿದ್ದು, ಮಾಜಿ ಶಾಸಕರಾದ ಶ್ರೀ ಕುಮಾರ ಬಂಗಾರಪ್ಪ ಇವರು ಡಾ. ಬಿ.ಎಸ್. ಮಂಜುನಾಥ್ ಇವರ ‘ಭಾವಜೀವಿಯ ಅನುಭವ ಲಹರಿ’ ಎಂಬ ಕವನ ಸಂಕಲನ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ 1-30ಕ್ಕೆ ಕವಿಗೋಷ್ಠಿ ಕಾರ್ಯಕ್ರಮ ಮತ್ತು ಗಂಟೆ 2-30ಕ್ಕೆ ಗುರುವಂದನೆ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.

Read More

ಕಾಸರಗೋಡು : ಕುಂಬ್ಳೆ ಸೀಮೆಯ ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಯಕ್ಷಗಾನ ಕಲಾಪೋಷಕರುಗಳ ಸಹಕಾರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಎರಡನೇ ದಿನವಾದ 18 ಜುಲೈ 2024ರಂದು ಏಳು ತಂಡಗಳ ಯಕ್ಷಗಾನ ಪ್ರದರ್ಶನ ನಡೆಯಿತು. ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದರಿಗೆ ಮತ್ತು ಪ್ರೇಕ್ಷಕರಿಗೆ ಹಬ್ಬದ ವಾತಾವರಣ ಸೃಷ್ಟಿಯಾಯಿತು. ವಿಶೇಷವೆಂದರೆ ಯಕ್ಷಗಾನದ ಯಾವುದೇ ಪರಿಚಯವಿಲ್ಲದ ದೂರದ ಮಂಡ್ಯದ ಶ್ರೀ ಸುಲ್ತಾನ್ ಗೌಡ, ಶ್ರೀ ಶಣ್ಮುಖನ್ ಮುಂತಾದ ಪ್ರೇಕ್ಷಕರು ಭಾಗವಹಿಸಿ ಮೆಚ್ಚುಗೆಯ ನುಡಿಯಾಡಿದರು. ಇಂದು ಶುದ್ಧ ಕನ್ನಡ ಉಳಿದಿದ್ದರೆ ಅದು ಯಕ್ಷಗಾನದಲ್ಲಿ ಮಾತ್ರ ಎಂಬ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮೇಳದಲ್ಲಿ ಹಿರಿಯ ಕಲಾವಿದರಾಗಿದ್ದ ಕುಂಬ್ಳೆ ಶ್ರೀಧರ ರಾವ್ ಅವರಿಗೆ ನುಡಿ ನಮನ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಆಷಾಡ ಮಾಸದ ವರ್ಷ ಧಾರೆಯ ಜತೆಗೆ ಮೂರನೇ ದಿನವಾದ 19 ಜುಲೈ 2024ರಂದು ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನ ಸಾಂಸ್ಕೃತಿಕ ಉತ್ಸವ – ಯಕ್ಷ ವೈಭವಕ್ಕೆ ಸಾಕ್ಷಿಯಾಗಿರುವ…

Read More