Author: roovari

ಮಂಗಳೂರು : ಚೇಳ್ಯಾರು ಇಲ್ಲಿರುವ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಇದರ ವತಿಯಿಂದ ‘ನಾಟ್ಯಾಂಜಲಿ ನೃತ್ಯ ರಂಜನಿ ಯುಗ್ಮ ಕುಸುಮಾಂಜಲಿ’ ಕಾರ್ಯಕ್ರಮವನ್ನು ದಿನಾಂಕ 4 ಆಗಸ್ಟ್ 2024 ಮತ್ತು 11 ಆಗಸ್ಟ್ 2024ರಂದು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿ ಎಡನೀರು ಮಠ ಇವರ ಅನುಗ್ರಹದೊಂದಿಗೆ ನೀಡುವ ಈ ಕಾರ್ಯಕ್ರಮವನ್ನು ಗುರು ಉಳ್ಳಾಲ ಶ್ರೀ ಮೋಹನ್ ಕುಮಾರರಿಗೆ 90 ವರ್ಷ ತುಂಬಿದ ಪ್ರಯುಕ್ತ ನಾಟ್ಯ ಮೋಹನ ನವತ್ಯುತ್ಸವ ಆಚರಣೆ ಸಂಭ್ರಮದಲ್ಲಿ ಗುರುಗಳಿಗೆ ಅರ್ಪಣೆ ಮಾಡಲಾಗಿದೆ. ದಿನಾಂಕ 4 ಆಗಸ್ಟ್ 2024ರಂದು ಸಂಜೆ 4-44ಕ್ಕೆ ‘ನಾಟ್ಯಾಂಜಲಿ ನೃತ್ಯ ರಂಜನಿ’ ಹಾಗೂ ‘ನಾಟ್ಯಾಂಜಲಿ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತ ಗುರು ಉಳ್ಳಾಲ ಶ್ರೀ ಮೋಹನ್ ಕುಮಾರ್ ಇವರು ದೇವತಾ ಜ್ಯೋತಿ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಲಾಶ್ರೀ ಡಾ. ಶ್ರೀಧರ್ ಇವರಿಗೆ ‘ನಾಟ್ಯಾಂಜಲಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಕರ್ನಾಟಕ ಕಲಾಶ್ರೀ ಗುರು ಪ್ರವೀಣ್…

Read More

ಬೆಂಗಳೂರು : ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2025ನೇ ಸಾಲಿನ ‘ಟೊಟೊ ಪುರಸ್ಕಾರ’ಕ್ಕಾಗಿ ‘ಟೊಟೊ ಫಂಡ್ಸ್ ದಿ ಆರ್ಟ್ಸ್’ ಸಂಸ್ಥೆಯು ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ಇಪ್ಪತ್ತೊಂದನೇ ವರ್ಷಕ್ಕೆ ಕಾಲಿಡುತ್ತಿರುವ ‘ಟೊಟೊ ಪುರಸ್ಕಾರ’ವು ರೂಪಾಯಿ ಅರವತ್ತು ಸಾವಿರ ನಗದನ್ನು ಒಳಗೊಂಡಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು ಹಾಗೂ 18 ರಿಂದ 29 ವರ್ಷದೊಳಗಿನ ವಯಸ್ಸಿನವರಾಗಿರಬೇಕು. ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಪುರಸ್ಕಾರವನ್ನು ಸ್ಥಾಪಿಸಲಾಗಿದೆ. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಪ್ರವೇಶಗಳನ್ನು ಕಳುಹಿಸಲು 15 ಸೆಪ್ಟೆಂಬರ್ 2024  ಕೊನೇ ದಿನವಾಗಿದ್ದು, ಪ್ರವೇಶ ಪತ್ರವನ್ನು https:// totofundsthearts.org/  ಡೌನ್ ಲೋಡ್ ಮಾಡಿಕೊಳ್ಳಬಹುದು. ಬರಹ ಮತ್ತು ಪ್ರವೇಶ ಪತ್ರವನ್ನು totokannada@ gmail.comಗೆ ಕಳುಹಿಸಬೇಕು.

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ನೃತ್ಯ ಕಾರ್ಯಕ್ರಮ ನೃತ್ಯಾಂತರಂಗದ 115ನೇ ಸರಣಿಯಲ್ಲಿ ಸಂಸ್ಥೆಯ ಕಲಾವಿದೆ ಕು. ಪ್ರಣಮ್ಯ ಪಾಲೆಚ್ಚಾರು ಇವರ ಪ್ರಥಮ ಏಕವ್ಯಕ್ತಿ ಭರತನಾಟ್ಯ ಕಾರ್ಯಕ್ರಮ ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ 21 ಜುಲೈ 2024ರಂದು ನಡೆಯಿತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿ.ಜಿ.ಭಟ್ ಇವರು ಅಭ್ಯಾಗತರಾಗಿ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಕುಮಾರಿ ನಿಶಿ, ಪ್ರೀತಿ ಪ್ರಭು, ಲಾಸ್ಯ ಹಾಗೂ ಆಪ್ತ ಚಂದ್ರಮತಿ ಮುಳಿಯ ಪ್ರಾರ್ಥನೆಗೈದು, ಕುಮಾರಿ ಆದ್ಯ ಮತ್ತು ಮನಿಹ ಕಲಾವಿದರ ಮತ್ತು ಅಭ್ಯಾಗತರ ಪರಿಚಯ ಮಾಡಿದರು. ಕುಮಾರಿ ಆದ್ಯ ಭಟ್ ಪಂಚಾಂಗ ವಾಚನ, ವಿದ್ವಾನ್ ಗಿರೀಶ್ ಕುಮಾರ್ ಶಂಖನಾದಗೈಯುವುದರೊಂದಿಗೆ ಕಾರ್ಯಕ್ರಮದ ನಿರೂಪಣೆ ಮಾಡಿದವರು ಕುಮಾರಿ ವಿಭಾಶ್ರೀ. ವಿದುಷಿ ಅಕ್ಷತ ಕೆ. ‘ವೀರ ರಸ’ದ ಬಗ್ಗೆ ಪ್ರಾತ್ಯಕ್ಷಿಕೆ ನೀಡುವುದರೊಂದಿಗೆ ಗುರು ದೀಪಕ್ ಕುಮಾರ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕುಮಾರಿ ಪ್ರಣಮ್ಯ ಪಾಲೆಚ್ಚಾರು ಇವರ ಭರತನಾಟ್ಯ ಕಾರ್ಯಕ್ರಮದಲ್ಲಿ…

Read More

ಉಡುಪಿ : ಮಣಿಪಾಲದ ಸರಳೇಬೆಟ್ಟು ಇಲ್ಲಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಇವರ ನೇತೃತ್ವದಲ್ಲಿ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಏರ್ಪಡಿಸಲಾದ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ರಂಗಸಂಸ್ಕೃತಿ ಶಿಬಿರವು ದಿನಾಂಕ 28 ಜುಲೈ 2024ರಂದು ನಡೆಯಿತು. ಈ ಶಿಬಿರವನ್ನು ಉದ್ಘಾಟಿಸಿದ ಮಾಧವ ಕೃಪಾ ಸ್ಕೂಲ್‌ನ ಉಪ ಪ್ರಾಂಶುಪಾಲರಾದ ಜ್ಯೋತಿ ಸಂತೋಷ್ ಇವರು ಮಾತನಾಡಿ “ಮಕ್ಕಳು ರಂಗಭೂಮಿಯ ಕಲಾವೇದಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿ ಕಷ್ಟ ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕ ಕಾಸರಗೋಡು ಚಿನ್ನಾರವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಮಹೇಶ್ ಠಾಕೂರ್ ಮಾತನಾಡಿ, “ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳ ತರಗತಿಗಳನ್ನು ಉಚಿತವಾಗಿ ಏರ್ಪಡಿಸುತ್ತಿದ್ದೇವೆ. ಇದೀಗ ಈ ಸಾಲಿಗೆ ರಂಗಸಂಸ್ಕೃತಿ ಕೂಡ ಸೇರಿಸಿದ್ದೇವೆ. ಮುಂದಿನ ದಿನಗಳಲ್ಲಿ ಉಡುಪಿ ಪರಿಸರದ ಶಾಲಾ ಕಾಲೇಜುಗಳಲ್ಲಿ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್…

Read More

ಸಾಲಿಗ್ರಾಮ : ನಾದಾಮೃತ (ರಿ.) ಕೋಟ ಇವರು ಅರ್ಪಿಸುವ ಹಾಗೂ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ (ರಿ.) ಐರೋಡಿ ಇವರ ಸಹಕಾರದೊಂದಿಗೆ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ವು ದಿನಾಂಕ 1 ಆಗಸ್ಟ್ 2024ರಿಂದ 7 ಆಗಸ್ಟ್ 2024ರವರೆಗೆ ಪ್ರತಿ ದಿನ ಸಂಜೆ 5-00 ಗಂಟೆಯಿಂದ ಸಾಲಿಗ್ರಾಮದ ಸದಾನಂದ ರಂಗಮಂಟಪದಲ್ಲಿ ನಡೆಯಲಿದೆ. ದಿನಾಂಕ 1 ಆಗಸ್ಟ್ 2024ರಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ಇದರ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಸೀತಾರಾಮ ಕಾರಂತ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ‘ಭೃಗು ಶಾಪ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ದಿನಾಂಕ 2 ಆಗಸ್ಟ್ 2024ರಂದು ‘ತ್ರಿಶಂಕು ಚರಿತ್ರೆ’, ದಿನಾಂಕ 3 ಆಗಸ್ಟ್ 2024ರಂದು ‘ಕಚ ದೇವಯಾನಿ’, ದಿನಾಂಕ 4 ಆಗಸ್ಟ್ 2024ರಂದು ‘ಸುದರ್ಶನ ವಿಜಯ’, ದಿನಾಂಕ 5 ಆಗಸ್ಟ್ 2024ರಂದು ‘ಸೀತಾ ವಿಯೋಗ’, ದಿನಾಂಕ 6 ಆಗಸ್ಟ್ 2024ರಂದು ‘ವಾಮನ ಚರಿತ್ರೆ’ ಮತ್ತು…

Read More

ಬಂಟ್ವಾಳ: ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್  ಬಂಟ್ವಾಳ ಘಟಕ ಇದರ ಆಶ್ರಯದಲ್ಲಿ ಏರ್ಯ ಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ ಕಾರ್ಯಕ್ರಮವು 28 ಜುಲೈ2024ರ ಭಾನುವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ “ಸಾಹಿತಿ ದಿವಂಗತ ಏರ್ಯ ಲಕ್ಷ್ಮೀನಾರಾಯಣ ಆಳ್ವರು ಎಂದಿಗೂ ತಮ್ಮ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ ಅಂಟಿಸಿ ಕೊಂಡವರಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದುಕೊಂಡರೂ ಕಳಂಕ ರಹಿತವಾಗಿ ಬದುಕಿರುವುದು ಅವರ ಯೋಗ್ಯತೆಗೆ ಸಂದ ಗೌರವ. ಇಂತಹ ಸಾಹಿತ್ಯಿಕ ವಾತವರಣವನ್ನು ಕಲ್ಪಿಸಿಕೊಟ್ಟಾಗ ಯುವ ಸಮುದಾಯ ಉತ್ತಮ ದಾರಿಯಲ್ಲಿ ಸಾಗಲು ಸಾಧ್ಯವಿದೆ.” ಎಂದರು.  ಏರ್ಯ ಬೀಡುವಿನ ಆನಂದಿ ಎಲ್. ಆಳ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಏರ್ಯ ಬೀಡುವಿನ ಬಾಲಕೃಷ್ಣ ಹೆಗ್ಡೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಏರ್ಯ ಬೀಡುವಿನ ರಾಜರಾಂ ರೈ, ಬಂಟ್ವಾಳ ತಾಲೂಕು ಕ. ಸಾ. ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್…

Read More

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ವಿಭಾಗ ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮವು 28 ಜುಲೈ2024ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ. ಕ. ಜಿಲ್ಲಾ ಘಟಕದ ಚೇರ್ಮನ್ ಆದ ಸಿ. ಎ. ಶಾಂತಾರಾಮ ಶೆಟ್ಟಿ ಮಾತನಾಡಿ “ಸಾಹಿತ್ಯ ಮತ್ತು ಕನ್ನಡ ಭಾಷೆಯಿಂದ ಇಂದು ನಮ್ಮ ಮಕ್ಕಳು ವಿಮುಖರಾಗುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸಿದರೆ ಮಾತ್ರ ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿ ಉಳಿಯಲು ಸಾಧ್ಯ.” ಎಂದು ಅಭಿಪ್ರಾಯಪಟ್ಟರು. ಅ. ಭಾ. ಸಾ. ಪ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ಡಾ. ಮಾಧವ ಎಂ. ಕೆ., ಸುರೇಶ ಪರ್ಕಳ ಇವರು ಸಾಹಿತ್ಯ ಹಾಗೂ ಸಂಘಟನೆಯ ಕುರಿತು ಉಪನ್ಯಾಸ ನೀಡಿದರು. ಅ. ಭಾ. ಸಾ. ಪ. ರಾಜ್ಯ ಕಾರ್ಯದರ್ಶಿ ಶೈಲೇಶ್ ಕುಲಾಲ್, ವಿಭಾಗ ಸಂಯೋಜಕ ಸುಂದರ ಶೆಟ್ಟಿ, ಉಡುಪಿ…

Read More

ಪೆರ್ಲ : ಸಾಹಿತ್ಯಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇದರ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಸಹಕಾರದೊಂದಿಗೆ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ರಂಗ ಸಂಸ್ಕೃತಿ’ ಕಾರ್ಯಾಗಾರವನ್ನು ದಿನಾಂಕ 2 ಆಗಸ್ಟ್ 2024ರಂದು ಬೆಳಗ್ಗೆ 9-30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪೆರ್ಲದ ನಾಲಂದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶಂಕರ ಖಂಡಿಗೆ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ಕಿರುಕೈಗಾರಿಕಾ ಸಂಘ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಜಾರಾಮ್ ಪೆರ್ಲ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಂಗಚಿನ್ನಾರಿ ನಿರ್ದೇಶಕರಾದ ಶ್ರೀ ಕೆ. ಸತೀಶ್ಚಂದ್ರ ಭಂಡಾರಿ ಕೋಳಾರಿ ಇವರ ಗೌರವ ಉಪಸ್ಥಿತಿಯಲ್ಲಿ ಖ್ಯಾತ ವೈದ್ಯರಾದ ಡಾ. ಶ್ರೀಪತಿ ಕಜಂಪಾಡಿ ಇವರು ಸಮಾರೋಪ ಮಾತುಗಳನ್ನಾಡಲಿದ್ದಾರೆ.

Read More

ಕಾಸರಗೋಡು : ಗಡಿನಾಡು ಕಾಸರಗೋಡಿನ ಸಿರಿಬಾಗಿಲಿನಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವ ‘ಸಿರಿಬಾಗಿಲು ಯಕ್ಷವೈಭವ’ವು ದಿನಾಂಕ 20 ಜುಲೈ 2024ರಂದು ಸಂಪನ್ನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಮತ್ತು ಉಪ್ಪಳ ಕೊಂಡೆಯೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಯಶಸ್ವಿಯಾಗಿ ನಡೆಯಿತು. “ಸಿರಿಬಾಗಿಲಿನಲ್ಲಿ ನಡೆದ ‘ಸಿರಿಬಾಗಿಲು ಯಕ್ಷವೈಭವ’ ಯಕ್ಷಲೋಕವೇ ಅಚ್ಚರಿಗೊಳ್ಳುವಂತೆ 25 ತಂಡಗಳು ಭಾಗವಹಿಸಿದ್ದು, ಕಾಸರಗೋಡಿನ ಚರಿತ್ರೆಯಲ್ಲಿ ಪ್ರಥಮ. ಈ ಹಿಂದೆ ಹಲವು ಕಡೆಗಳಲ್ಲಿ ಸೀಮಿತ ತಂಡಗಳ ಯಕ್ಷಗಾನ ಸ್ಪರ್ಧೆ ನಡೆದಿರುತ್ತದೆ. ಆದರೆ ಇದು ಸ್ಪರ್ಧೆಯಲ್ಲ. ಅಲ್ಲದೆ ಹವ್ಯಾಸಿ ವಲಯದ ಕಲಾವಿದರು, ಯಕ್ಷಗಾನ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿದ ಪ್ರತಿಷ್ಠಾನದ ಯೋಜನೆ, ನಿಜವಾಗಿ ಮೆಚ್ಚುವಂಥದ್ದು, ಈ ಪ್ರತಿಷ್ಠಾನ ಇನ್ನೂ ಮುಂದೆ ಇಂತಹ ಚಟುವಟಿಕೆ ನಡೆಸಿ ಯಕ್ಷಗಾನ ಬೆಳೆದು ಲೋಕ ಪ್ರಸಿದ್ಧಿ ಪಡೆದು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ” ಎಂದು ಎಡನೀರು…

Read More

ಕೊಪ್ಪಳ :ಶಕ್ತಿ ಶಾರದೆಯ ಮೇಳ ಭಾಗ್ಯನಗರ ಸಂಸ್ಥೆಯು ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ, ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ.) ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಿದ ಡಾ. ಸತ್ಯಾನಂದ ಪಾತ್ರೋಟ ಇವರ ಆತ್ಮಕಥನ ‘ಜಾಲಿ ಮರದಲ್ಲೊಂದು ಜಾಜಿ ಮಲ್ಲಿಗೆ’ ಕೃತಿಯ ಲೋಕಾರ್ಪಣಾ ಸಮಾರಂಭವು 28 ಜುಲೈ 2024ರಂದು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಡಿ. ಎಂ. ಬಡಿಗೇರ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕವಿಗಳಾದ ಶ್ರೀಮತಿ ಮಾಲಾ ಬಡಿಗೇರ ಕೃತಿ ಲೋಕಾರ್ಪಣೆ ಗೊಳಿಸಿದರು. ಹುಬ್ಬಳ್ಳಿ ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವೈ. ಎಂ. ಭಜಂತ್ರಿ ಕೃತಿ ಕುರಿತು ಮಾತನಾಡಿದರು. ಕವಿ ನುಡಿಯನ್ನು ಡಾ. ಸತ್ಯಾನಂದ ಪಾತ್ರೋಟ ನಡೆಸಿಕೊಟ್ಟರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿಗಳಾದ ಎ. ಎಂ. ಮದರಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಡಾ. ಪಾತ್ರೋಟ್ ಅವರಿಗೆ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ವಿಶೇಷ ಪ್ರೀತಿ-ವಿಶ್ವಾಸದಿಂದ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಅಂಚೆ…

Read More