Subscribe to Updates
Get the latest creative news from FooBar about art, design and business.
Author: roovari
ಮೂಡುಬಿದಿರೆ : ಮೂಡುಬಿದಿರೆಯ ‘ಯಕ್ಷಸಂಗಮ’ ರಜತ ಸಂಭ್ರಮವನ್ನು ಆಚರಿಸುತ್ತಿದ್ದು ಇದರ ಅಂಗವಾಗಿ 25 ನೇ ವರ್ಷದ ಯಕ್ಷಗಾನ ಮತ್ತು ತಾಳಮದ್ದಳೆ ಕೂಟ ಹಾಗೂ ಸಂಮಾನ ಸಮಾರಂಭವು 10 ಆಗಸ್ಟ್ 2024ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಮೂಡುಬಿದಿರೆಯ ಜೈನಮಠದ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಒರಿಸ್ಸಾದ ಟಾಟಾ ರಿಫ್ರಾಕ್ಟರೀಸ್ ಲಿಮಿಟೆಡ್ ಇದರ ನಿವೃತ್ತ ಮ್ಯಾನೇಜಿಂಗ್ ಡೈರೆಕ್ಟರ್ ಸಿ. ದೇವದಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಸಂಜೆ ಘಂಟೆ 4.30ರಿಂದ ‘ಯಕ್ಷನಿಧಿ’ ಮೂಡುಬಿದಿರೆ ಮಕ್ಕಳ ಮೇಳದಿಂದ ‘ದಕ್ಷಾದ್ವರ’ ಹಾಗೂ ರಾತ್ರಿ ಘಂಟೆ 8.15 ರಿಂದ ‘ಗಿರಿಜಾ ಕಲ್ಯಾಣ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ ಘಂಟೆ 6.45 ರಿಂದ ಕರ್ನಾಟಕ ರಾಘ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಾಸ್ಯಗಾರ ಸೀತಾರಾಮ ಕುಮಾರ್ ಕಟೀಲು ಇವರಿಗೆ ಸಂಮಾನ ನಡೆಯಲಿದೆ. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್,…
ಬೆಂಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ರಿ.), ಬೆಂಗಳೂರ ನಗರ ಜಿಲ್ಲೆ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಭಕ್ತಿ ಮತ್ತು ಪರಿಸರ ಕವಿಗೋಷ್ಠಿಯನ್ನು ದಿನಾಂಕ 11 ಆಗಸ್ಟ್ 2024ರಂದು ಸಂಜೆ 4-00 ಗಂಟೆಗೆ ಭೂಮಿಕಾ ಸೇವಾ ಫೌಂಡೇಷನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕೆ.ಜೆ.ವಿ.ಎಸ್. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಲಕ್ಷ್ಮೀ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉದ್ಯಮಿಗಳಾದ ಶ್ರೀ ಶಶಿಕಾಂತ್ ರಾವ್ ಇವರು ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷರಾದ ಶ್ರೀ ನಾ. ಶ್ರೀಧರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಸಾಹಿತಿ ಡಾ. ನಂದಿನಿ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.
ಕಾಸರಗೋಡು : ಸಮಾಜ ಸಂಪದ ಅನಂಗೂರ್ ಬಾಲಕೃಷ್ಣ ಮಾಸ್ಟರ್ ಸಂಸ್ಮರಣಾ ಸಭೆಯು ಬಾಲಕೃಷ್ಣ ಮಾಸ್ಟರ್ ಇವರ ಸ್ವಗೃಹ ರಮಾ ನಿಲಯದಲ್ಲಿ ದಿನಾಂಕ 08 ಆಗಸ್ಟ್ 2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಅಧ್ಯಕ್ಷರಾಧ ಕಮಲಾಕ್ಷ ಕಲ್ಲುಗದ್ದೆಯವರು ಅಧ್ಯಕ್ಷೀಯ ಭಾಷಣದಲ್ಲಿ ಸಭೆಯನ್ನುದ್ದೇಶಿಸಿ “ಸಮಾಜ ಸೇವೆಗೆ ತನ್ನ ಜೀವನವನ್ನು ತೇದವರನ್ನು ಸಮಾಜ ಗೌರವಿಸುತ್ತದೆ. ಗೌರವಿಸಬೇಕು. ಅಂತಹ ಗೌರವಾನ್ವಿತರು ಅವರ ಜೀವಿತ ಅವಧಿಯ ನಂತರ ಸಂಸ್ಮರಣಾ ಯೋಗ್ಯರಾಗುತ್ತಾರೆ” ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘ ಗೌರವ ಅಧ್ಯಕ್ಷರಾಧ ನಿರಂಜನ ಕೊರಕ್ಕೊಡು, ಜಿಲ್ಲಾ ಸಂಘ ಪ್ರದಾನ ಕಾರ್ಯದರ್ಶಿ ಸತೀಶ್ ಕುಮಾರ್ ದೋಣಿಬಾಗಿಲು ಉಪಸ್ಥಿತರಿದ್ದರು, ಗೌರವ ಕಾರ್ಯದರ್ಶಿ ಬಿ.ಪಿ. ವೆಂಕಟ್ರಮಣ ಸಂಸ್ಮರಣಾ ಬಾಷಣ ಮಾಡಿದರು. ಸಾಮಾಜಿಕ ಮುಂದಾಳು ಜಗದೀಶ್ ಕೂಡ್ಲು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಬಾಲಕೃಷ್ಣ ಮಾಸ್ಟರ್ ಇವರ ಸುಪುತ್ರ ಸತೀಶ್ ಚಂದ್ರ ಕೆ.ಪಿ. ವಂದಿಸಿದರು.
ಕುಮಟಾ : ಯಕ್ಷಗಾನ ಸಂಶೋಧನಾ ಕೇಂದ್ರ (ರಿ.) ಮಣಕಿ ಹಾಗೂ ಸತ್ವಾಧಾರ ಫೌಂಡೇಶನ್ (ರಿ.) ಸಂಕೊಳ್ಳಿ ಸಹಯೋಗದಲ್ಲಿ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 11 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಕುಮಟಾದ ದೀವಗಿ ಶ್ರೀ ರಾಮಾನಂದ ಸ್ವಾಮೀಜಿ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಅಮೃತ ಸೋಮೇಶ್ವರ ವಿರಚಿತ ‘ತ್ರಿಪುರ ಮಥನ’ ಎಂಬ ಯಕ್ಷಗಾನ ಪ್ರದರ್ಶನದ ಹಿಮ್ಮೇಳದಲ್ಲಿ ಭಾಗವತರು ಶ್ರೀ ಶಂಕರ ಭಟ್ಟ ಬ್ರಹ್ಮೂರು ಮತ್ತು ಶ್ರೀ ಸರ್ವೇಶ್ವರ ಹೆಗಡೆ ಮೂರೂರು, ಮದ್ದಲೆಯಲ್ಲಿ ಶ್ರೀ ನಾಗರಾಜ ಭಂಡಾರಿ ಹಿರೇಬೈಲು ಮತ್ತು ಚಂಡೆಯಲ್ಲಿ ಶ್ರೀ ಗಜಾನನ ಹೆಗಡೆ ಸಾಂತೂರು ಹಾಗೂ ಮುಮ್ಮೇಳದಲ್ಲಿ ಡಾ. ಜಿ.ಎಲ್ ಹೆಗಡೆ ಕುಮಟಾ, ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ, ಶ್ರೀ ಈಶ್ವರ ನಾಯ್ಕ ಮಂಕಿ, ಶ್ರೀ ಅಶೋಕ ಭಟ್ಟ ಸಿದ್ಧಾಪುರ, ಶ್ರೀ ಗುರುಪ್ರಸಾದ್ ಭಟ್ಟ ಮಾಡಗೇರಿ, ಶ್ರೀ ನಾಗೇಶ ಕುಳಿಮನೆ, ಶ್ರೀ ಸುಬ್ರಹ್ಮಣ್ಯ ಮೂರೂರು, ಶ್ರೀ ರಮಾಕಾಂತ ಮೂರೂರು ಹಾಗೂ ಸಹ ಕಲಾವಿದರು ಸಹಕರಿಸಲಿರುವರು.
ಬಂಟ್ವಾಳ : ಯಕ್ಷಗಾನದ ಹಾಸ್ಯ ಕಲಾವಿದ, ಚೆನ್ನೈತ್ತೋಡಿ ಗ್ರಾಮದ ಅಂದ್ರಳಿಕೆ ಅಂತರಗುತ್ತು ನಿವಾಸಿ ಮುನಿರಾಜ ಚೌಟ ಅವರ ಪುತ್ರ ವಿಶಾಲ್ ಜೈನ್ (ವಿ.ಕೆ.ಜೈನ್) ವಾಮದಪದವು ಅವರು ಅಲ್ಪ ಕಾಲದ ಅಸೌಖ್ಯದಿಂದ 04 ಆಗಸ್ಟ್ 2024 ರ ಭಾನುವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 47ವರ್ಷ ವಯಸ್ಸಾಗಿತ್ತು. ವೃತ್ತಿಯಲ್ಲಿ ಚಾಲಕರಾಗಿದ್ದ ವಿಶಾಲ್ ಯಕ್ಷಗಾನದ ಹವ್ಯಾಸಿ ಕಲಾವಿದರಾಗಿದ್ದರು. ಬಳಿಕ ಯಕ್ಷಗಾನ ಮೇಳದಲ್ಲಿ ವೃತ್ತಿಪರ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಬೆಂಕಿನಾಥೇಶ್ವರ ಮೇಳ, ಸಸಿಹಿತ್ತು ಮೇಳ, ಸುಂಕದಕಟ್ಟೆ ಮೇಳಗಳಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಬಪ್ಪನಾಡು ಮೇಳದ ಕಲಾವಿದರಾಗಿದ್ದರು. ಯಕ್ಷಗಾನದ ಜತೆ ರಂಗಭೂಮಿಯಲ್ಲೂ ತನನ್ನು ತೊಡಗಿಸಿಕೊಂಡಿದ್ದ ಇವರು ‘ಮುಕ್ಕಾಲ್ ಮೂಜಿ ಘಳಿಗೆ’ ‘ಒರಿಯೊರಿ ಒಂಜೊಂಜಿ ತರ’ ಮುತ್ತು ‘ಕಂಬುಲದ ಕೋರಿ ಮೊದಲಾದ ನಾಟಕಗಳಲ್ಲಿ ಹಾಸ್ಯ ಪಾತ್ರ ಮಾಡಿದ್ದರು. ‘ಒರಿಯರ್ದ್ ಒರಿ ಅಸಲ್’ ಸಿನಿಮಾದಲ್ಲಿ ದೈವದ ಪಾತ್ರಿಯ ಪಾತ್ರ ನಿರ್ವಹಿಸಿದ್ದ ಇವರು ‘ಪೂರಾ ಪೊಕ್ಕಡೆ’ ಕಿರು ಚಿತ್ರದಲ್ಲಿ ನಟಿಸಿದ್ದರು. ಶ್ರೀಯುತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರನನ್ನು…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್) ಮತ್ತು ಆರ್ಟ್ ಕೆನರಾ ಟ್ರಸ್ಟ್ ಇದರ ವತಿಯಿಂದ ಬೈಠಕ್ @ ಕೊಡಿಯಾಲ್ಗುತ್ತು ಕರ್ನಾಟಕ ಸಂಗೀತ ಪರಂಪರೆಯ ಸರಣಿ 6ಯ ಕಾರ್ಯಕ್ರಮವನ್ನು ದಿನಾಂಕ 10 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಬಲ್ಲಾಳ್ ಭಾಗ್, ಜಿ.ಜಿ. ರೋಡ್, ಕೊಡಿಯಾಲ್ ಗುತ್ತು (ಪಶ್ಚಿಮ), ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಕೊಳಲು ವಾದಕ ಶ್ರೀ ಕಿರಣ್ ಚಂದ್ರಶೇಖರ್ ಹೆಗಡೆ ಇವರ ಕೊಳಲು ವಾದನಕ್ಕೆ ಭಾರವಿ ದೇರಾಜೆ ಇವರು ತಬಲಾ ಸಾಥ್ ನೀಡಲಿದ್ದಾರೆ.
ಮಂಗಳೂರು : ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 15ನೇ ಆವೃತ್ತಿಯ 2024ರ ಪ್ರತಿಷ್ಠಿತ ‘ಕಲ್ಲಚ್ಚು ಪ್ರಶಸ್ತಿ’ಗೆ ಆಯ್ಕೆಯಾಗಿದ್ದು ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಗಣ್ಯ ಆತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದೆಂದು ಪ್ರಕಾಶನದ ಮುಖ್ಯಸ್ಥ ಸಾಹಿತಿ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ. ಪ್ರಸ್ತುತ ಡಾ. ನಾಗೇಶ್ ಪ್ರಭು ‘ದಿ ಹಿಂದೂ’ ಪತ್ರಿಕೆಯ ಬೆಂಗಳೂರು ಕಛೇರಿಯಲ್ಲಿ ಹಿರಿಯ ಉಪ ಸಂಪಾದಕರಾಗಿದ್ದು ಈವರೆಗೆ ‘ರಿಫ್ಲೆಕ್ಟಿವ್ ಶಾಡೋಸ್: ಪೊಲಿಟಿಕಲ್ ಎಕಾನಮಿ ಆಫ್ ವರ್ಲ್ಡ್ ಬ್ಯಾಂಕ್ ಲೆಂಡಿಂಗ್ ಟು ಇಂಡಿಯಾ’, ‘ಮಧ್ಯಮ ವರ್ಗ, ಮಾಧ್ಯಮ ಮತ್ತು ಮೋದಿ: ದಿ ಮೇಕಿಂಗ್ ಆಫ್ ಎ ನ್ಯೂ ಎಲೆಕ್ಟೋರಲ್ ಪಾಲಿಟಿಕ್ಸ್’ ಮತ್ತು ‘ಧರ್ಮಸ್ಥಳ : ಅಭಿವೃದ್ಧಿಯ ಮಂತ್ರ’ ಎಂಬ ಮೂರು ಪ್ರಮುಖ ಇಂಗ್ಲೀಷ್ ಪುಸ್ತಕಗಳನ್ನು ಬರೆದು ಪ್ರಕಟಿಸಿರುವರು. ಮೂಲತಃ ಮಂಗಳೂರು ಬಳಿಯ ಒಡ್ಡೂರಿನವರಾದ ಡಾ. ಪ್ರಭು, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಿಂದ…
ಕಾಸರಗೋಡು : ಯಕ್ಷಗಾನ ಕಲಾವಿದ ಕೀರಿಕ್ಕಾಡು ಮಾಸ್ತರ್ ಇವರ ಶಿಷ್ಯರೂ ಆಗಿದ್ದ ದೇಲಂಪಾಡಿ ಮಹಾಲಿಂಗ ಪಾಟಾಳಿಯವರ 18ನೇ ವರ್ಷದ ಸಂಸ್ಮರಣೆಯು ದಿನಾಂಕ 10 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ದೇಲಂಪಾಡಿ ಮಹಾಲಿಂಗ ಪಾಟಾಳಿ ಮತ್ತು ಸೀತಮ್ಮನವರ ಸ್ಮರಣಾರ್ಥವಾಗಿ ಕೊಡಮಾಡುವ ದೇಲಂಪಾಡಿ ಮಹಾಲಿಂಗ ಪಾಟಾಳಿ – ಸೀತಮ್ಮ ಸ್ಮೃತಿ ಪುರಸ್ಕಾರವನ್ನು ನಾಡಿನ ಹಿರಿಯ ವೈದ್ಯರೂ, ಕಲಾವಿದರೂ, ಸಾಹಿತಿಗಳೂ ಆಗಿರುವ ಡಾ. ರಮಾನಂದ ಬನಾರಿಯವರಿಗೆ ಪ್ರದಾನ ಮಾಡಲಾಗುವುದು. ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ಆರಂಭವಾಗುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾವಿದ, ನಿವೃತ್ತ ಮುಖ್ಯೋಪಾಧ್ಯಾಯ ದೇಲಂಪಾಡಿ ರಾಮಣ್ಣ ಮಾಸ್ತರ್ ವಹಿಸುವರು. ಲೇಖಕರು, ಕಲಾವಿದರು ಮತ್ತು ಉಪನ್ಯಾಸಕರಾಗಿರುವ ನಾರಾಯಣ ತೋರಣಗಂಡಿ ಸಂಸ್ಮರಣಾ ಭಾಷಣ ಮಾಡುವರು. ಸಭಾ ಕಾರ್ಯಕ್ರಮದ ನಂತರ ಸಂಘದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ‘ಸೀತಾಪಹಾರ – ಜಟಾಯು ಮೋಕ್ಷ’ ಎಂಬ ಯಕ್ಷಗಾನ…
ಬೆಂಗಳೂರು : ಹಿರಿಯ ಕಥೆಗಾರ ಡಾ. ರಾಜಶೇಖರ ನೀರಮನ್ವಿಯವರು ದಿನಾಂಕ 08 ಆಗಸ್ಟ್ 2024ರಂದು ನಿಧನರಾದರು ಅವರಿಗೆ 83ನೆಯ ವಯಸ್ಸಾಗಿತ್ತು. ನೀರಮಾನ್ವಿಯರು ಬರೆದಿದ್ದು ಕಡಿಮೆಯಾದರೂ ಅದರ ಗುಣಮಟ್ಟ ಬಹಳ ಹೆಚ್ಚಿನದು. ಅವರ ‘ಹಂಗಿನರಮನೆಯೊಳಗೆ’ ಮತ್ತು ‘ಕರ್ಪೂರದ ಕಾಯಕದಲ್ಲಿ’ ಸಂಕಲನದ ಕಥಾ ಸಂಕಲನದ ಕಥೆಗಳನ್ನು ಕನ್ನಡಿಗರು ಸದಾ ಸ್ಮರಿಸುತ್ತಾರೆ. ರಾಯಚೂರು ಜಿಲ್ಲೆಯ ನೀರಮಾನ್ವಿಯಲ್ಲಿ ಜನಿಸಿದ ರಾಜಶೇಖರ ನೀರಮಾನ್ವಿಯವರು ಮೂಲತ: ಭೂವಿಜ್ಞಾನದ ವಿದ್ಯಾರ್ಥಿ. ಈ ಕ್ಷೇತ್ರದಲ್ಲಿ ಕೂಡ ಅವರ ಸಾದನೆ ಮಹತ್ವದ್ದು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಭೂ ವಿಜ್ಞಾನದಲ್ಲಿ ಸ್ನಾತಕೊತ್ತರ ಪದವಿಯನ್ನು ಹಾಗೂ ‘ಆರ್ಥಿಕ ಭೂವಿಜ್ಞಾನ’ ವಿಷಯದಲ್ಲಿ ಡಾಕ್ಟರೇಟ್ ಪಡೆದಿದ್ದ ಇವರು ನೀರಮಾನ್ವಿ ಮತ್ತು ಬಳ್ಳಾರಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ‘ಪ್ರತೀಕ’ ಎಂಬ ಸಾಹಿತ್ಯ ಪತ್ರಿಕೆಯನ್ನೂ ಕೂಡ ಹೊರ ತಂದಿದ್ದು, ಉತ್ತರ ಕರ್ನಾಟಕದ ಅದರಲ್ಲಿಯೂ ಮುಖ್ಯವಾಗಿ ರಾಯಚೂರು ಜಿಲ್ಲೆಯ ಬರಹಗಾರರನ್ನು ಪ್ರೋತ್ಸಾಹಿಸಿದ್ದರು.
ಸುರತ್ಕಲ್ : ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಶುಭಾಶೀರ್ವಾದದೊಂದಿಗೆ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಇದರ ವತಿಯಿಂದ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಸಂಸ್ಥೆಯ ಸಹಕಾರದೊಂದಿಗೆ ಶ್ರೀ ವಿಶ್ವೇಶತೀರ್ಥ ಸಭಾಂಗಣದ ಉದ್ಘಾಟನಾ ಸಮಾರಂಭ ಮತ್ತು ‘ಮಂಜುನಾದ’ ಯೋಜನೆಗೆ ಎರಡು ವರ್ಷಗಳಾಗುತ್ತಿರುವ ಸಂಭ್ರಮದ ಪ್ರಯುಕ್ತ ‘ಸಂಗೀತ ಕಛೇರಿ’ಯು ದಿನಾಂಕ 14-08-2024ರಂದು ಸಂಜೆ ಗಂಟೆ 5-00ಕ್ಕೆ ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ನಡೆಯಲಿದೆ. ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಬಿ. ಸೀತಾರಾಮ ತೋಳ್ಪಡಿತ್ತಾಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳ ರಚನೆ, ರಾಗ ಸಂಯೋಜನೆ ಹಾಗೂ ಸಂಗೀತ ಕಚೇರಿಯಲ್ಲಿ ಕಾರ್ಕಳದ ಆತ್ರೇಯೀ ಕೃಷ್ಣ ಇವರ ಹಾಡುಗಾರಿಕೆಗೆ ಕಾರ್ಕಳದ ಮಹಾತೀ ಕೆ. ವಯಲಿನ್, ಮೈಸೂರಿನ ನಂದನ್ ಕಶ್ಯಪ್ ಮೃದಂಗ ಮತ್ತು ಇನ್ನಂಜೆ…