Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ (ರಿ) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕನ್ನಡ ಸಹೃದಯಿ ಪ್ರತಿಷ್ಠಾನ ಹಾಗೂ ಕುಮಾರವ್ಯಾಸ ಮಂಟಪ ಇದರ ಸಹಕಾರದೊಂದಿಗೆ ಆಯೋಜಿಸುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳಾದ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಸ್ಮಾರಕ ಉತ್ತಮ ‘ಗಮಕ ಶಿಕ್ಷಕ ಪ್ರಶಸ್ತಿ’ ಹಾಗೂ ದಿ. ಕೆ. ವಿ. ರವೀಂದ್ರನಾಥ ಟಾಗೋರ್ ‘ಯುವ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 21-07-2024 ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಕುಮಾರವ್ಯಾಸ ಮಂಟಪದಲ್ಲಿ ನಡೆಯಲಿದೆ. ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಡಾ. ಕೆ. ಪಿ. ಪುತ್ತೂರಾಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮೈಸೂರಿನ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜಾಪುರದ ಶ್ರೀ ಕಲ್ಯಾಣ ರಾವ್ ದೇಶಪಾಂಡೆ ಇವರಿಗೆ ‘ಶ್ರೀ ವಾಗ್ದೇವಿ ಪ್ರಶಸ್ತಿ’, ಬೇಲೂರಿನ ಶ್ರೀಮತಿ ನವರತ್ನಾ ಎಸ್. ವಟಿ ಇವರಿಗೆ ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್. ಆರ್.…
ಸುರತ್ಕಲ್ : ಭಜನಾ ತಜ್ಞ, ಚಕ್ರತಾಳ ಕಲಾವಿದೆ ಪಣಂಬೂರು ಸುರೇಶ್ ಕಾಮತ್ ಅವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 20-07-2024ರಂದು ಸಂಜೆ 5-00 ಗಂಟೆಗೆ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ಜರಗಲಿದೆ. ಈ ಸಂದರ್ಭದಲ್ಲಿ ಪೌರಾಣಿಕ ಯಕ್ಷಗಾನ ಬಯಲಾಟ ಆಯೋಜಿಸಲಾಗಿದೆ ಎಂದು ನಾಗರಿಕ ಸನ್ಮಾನ ಸಮಿತಿ ತಿಳಿಸಿದೆ.
ಚಾಮರಾಜನಗರ : ರಂಗಮಂಡಲ ಬೆಂಗಳೂರು ಮತ್ತು ರಂಗವಾಹಿನಿ ಚಾಮರಾಜನಗರ ಆಯೋಜಿಸಿರುವ ಪ್ರತಿ ಜಿಲ್ಲೆ ಹಾಗೂ ಹೊರನಾಡ ಕನ್ನಡ ಪ್ರದೇಶಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ತಿಂಗಳ 3ನೇ ಭಾನುವಾರ ಆಯೋಜಿಸುವ ಕವಿಗೋಷ್ಠಿ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 21-07-2024ರಂದು ಚಾಮರಾಜನಗರದ ಡಾ. ರಾಜಕುಮಾರ ರಂಗಮಂದಿರದಲ್ಲಿ ನಡೆಯಲಿದೆ. ಚಾಮರಾಜನಗರದಲ್ಲಿ ಉದ್ಘಾಟನೆಗೊಳ್ಳಲಿರುವ ಜಿಲ್ಲಾ ಪ್ರಥಮ ಕವಿಗೋಷ್ಠಿಯ ಆರಂಭವು ದಿನಾಂಕ 20-07-2024ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ಪಡಸಾಲೆಯಲ್ಲಿ ನಡೆಯಲಿದೆ. ನಾಡೋಜ ಬರಗೂರು ರಾಮಚಂದ್ರಪ್ಪ ಸಾರ್ ಅವರು ಕಾವ್ಯ ದೀವಟಿಗೆಯನ್ನು ಬೆಳಗುವುದರ ಮೂಲಕ ಯಾನ ಆರಂಭವಾಗಲಿದೆ. ಡಾ. ಧರಣಿದೇವಿ ಮಾಲಗತ್ತಿ ಮೇಡಂ ಅವರು ಆ ದೀವಟಿಗೆಯನ್ನು ಕವಿಗೋಷ್ಠಿಯ ಸರ್ವಾಧ್ಯಕ್ಷರಾದ ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಉದ್ಘಾಟಕರಾದ ಎಲ್.ಎನ್. ಮುಕುಂದರಾಜ್ ಅವರಿಗೆ ಹಸ್ತಾಂತರಿಸಲಿದ್ದಾರೆ. ನಂತರ ಯಾನ ಪ್ರಾರಂಭವಾಗಲಿದ್ದು, ಇದೇ ಸಂದರ್ಭದಲ್ಲಿ ನಾಡಿನ ಹೆಸರಾಂತ ಗಾಯಕರು ನಾಡಗೀತೆಯನ್ನು ಹಾಡಿ.. ಹಾಗೂ ನಾಡಿನ ಖ್ಯಾತ ಕವಿಗಳು ಕವಿತೆಗಳನ್ನು ವಾಚನ ಮಾಡಿ ಯಾನಕ್ಕೆ ಶುಭ ಕೋರಲಿದ್ದಾರೆ. ದಿನಾಂಕ 21-07-2024…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 22-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ವಿದುಷಿ ವಸುಂಧರಾ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ವಸುಂಧರಾ ಇವರು ಕೆ. ಗುರುರಾಜ್ ಭಟ್ ಹಾಗೂ ಶ್ರೀ ಲತಾ ಭಟ್ ದಂಪತಿಗಳ ಸುಪುತ್ರಿ. ಈಕೆ ಪ್ರಸ್ತುತ ಬಿ.ಎಡ್ ಕಲಿಯುತ್ತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಈಕೆ ಕಳೆದ 18 ವರ್ಷಗಳಿಂದ ನೃತ್ಯನಿಕೇತನ ಕೊಡವೂರಿನ ಗುರುಗಳಾದ ವಿದ್ವಾನ್ ಸುಧೀರ್ ರಾವ್ ಕೊಡವೂರು ಮತ್ತು ವಿದುಷಿ ಶ್ರೀಮತಿ ಮಾನಸಿ ಸುಧೀರ್ ಇವರಲ್ಲಿ ನೃತ್ಯಾಭ್ಯಾಸವನ್ನು ನಡೆಸುತ್ತಿದ್ದು, ಇದರಲ್ಲಿ ಜೂನಿಯರ್, ಸೀನಿಯರ್ ಹಾಗೂ ವಿದ್ವತ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾಳೆ. ತನ್ನ ಶಾಲಾ ಹಾಗೂ ಕಾಲೇಜಿನ ದಿನಗಳಲ್ಲಿ ನೃತ್ಯ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ಪಡೆದಿದ್ದು,…
ರಾಮಕುಂಜ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೇತ್ರಾವತಿ ತುಳುಕೂಟ ರಾಮಕುಂಜ ಇವರ ಸಹಭಾಗಿತ್ವದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಆಶ್ರಯದಲ್ಲಿ ಕಡಬ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ತುಳು ಭಾಷೆ-ಸಂಸ್ಕೃತಿ’ ಕಾರ್ಯಾಗಾರವು ದಿನಾಂಕ 13-07-2024ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಇವರು ಮಾತನಾಡಿ, “ತುಳು ಕಲಿಸುವ ಶಾಲೆಗಳ ಸಂಖ್ಯೆ ಹೆಚ್ಚಳ ಆಗಬೇಕು. ಈ ನಿಟ್ಟಿನಲ್ಲಿ ಅನುದಾನಿತ ಹಾಗೂ ಸರಕಾರಿ ಶಾಲೆಗಳಲ್ಲಿ ತುಳು ಅತಿಥಿ ಶಿಕ್ಷಕರ ನೇಮಕ ಮಾಡುವ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ, ಪ್ರೌಢಶಿಕ್ಷಣ ಸಚಿವರು, ಆಯುಕ್ತರ ಭೇಟಿ ಮಾಡಿ ಮನವಿ ಮಾಡಲಾಗಿದ್ದು, ಇದಕ್ಕೆ ಪೂರಕ ಭರವಸೆ ದೊರೆತಿದೆ. ಇದರ ಜೊತೆಗೆ ತುಳು ಭಾಷೆಯನ್ನು 2ನೇ ಅಧಿಕೃತ ಭಾಷೆಯನ್ನಾಗಿಸುವ ನಿಟ್ಟಿನಲ್ಲೂ ಪ್ರಯತ್ನ ನಡೆಯುತ್ತಿದೆ” ಎಂದರು. ಕಳೆದ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ತುಳು ಪಠ್ಯದಲ್ಲಿ 100 ಪೂರ್ಣ ಅಂಕ…
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ 2024ರ ವಿನೂತನ ಕಾರ್ಯಕ್ರಮ ಸರಣಿಯ ಜುಲೈ ತಿಂಗಳ ಕಾರ್ಯಕ್ರಮದಲ್ಲಿ ಮಂಗಳೂರಿನ ಎಸ್.ವಿ.ಟಿ. ರಥಬೀದಿಯ ಶ್ರೀ ವೀರ ವೆಂಕಟೇಶ ಭಜನಾ ಮಂಡಳಿಯವರಿಂದ ‘ಭಕ್ತಿ ಸಂಗೀತ’ವು ದಿನಾಂಕ 21-07-2024ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ – 115’ ಸರಣಿ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ದೀಪಕ್ ಕುಮಾರ್ ಇವರ ಶಿಷ್ಯೆ ಕುಮಾರಿ ಪ್ರಣಮ್ಯ ಇವರ ಭಾರತನಾಟ್ಯ ಕಾರ್ಯಕ್ರಮವು ದಿನಾಂಕ 21-7-2024ರ ಆದಿತ್ಯವಾರದಂದು ಸಂಜೆ ಘಂಟೆ 5.30ರಿಂದ ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ. ಇವರಿಗೆ ನಟುವಾಂಗದಲ್ಲಿ ವಿದ್ವಾನ್ ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಶ್ರೀ ಗಿತೇಶ್ ನೀಲೇಶ್ವರ ಹಾಗೂ ಕೊಳಲಿನಲ್ಲಿ ಶ್ರೀ ರಾಜಗೋಪಾಲನ್ ಕಾಞಂಗಾಡ್ ಸಹಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಪುತ್ತೂರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ಭಾಗವಹಿಸಲಿದ್ದಾರೆ.
ಮಂಗಳೂರು : ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವ ಅಂಗವಾಗಿ ನಡೆಯುವ ‘ನೃತ್ಯಾಮೃತ -6’ ಸರಣಿ ನೃತ್ಯ ಕಾರ್ಯಕ್ರಮದಲ್ಲಿ ನಾಟ್ಯಾರಾಧನ ಕಲಾ ಕೇಂದ್ರದ ಕಿರಿಯ ವಿದ್ಯಾರ್ಥಿಗಳಿಂದ ‘ಮುಕುಲ ಮಂಜರಿ’ ವೈವಿಧ್ಯಮಯ ನೃತ್ಯ ಕಾರ್ಯಕ್ರಮವು ದಿನಾಂಕ 17-07-2024ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಯಮಿ ಶ್ರೀ ಪ್ರಕಾಶ್ ರಾವ್ ಕಲ್ಬಾವಿ ಇವರು ಉದ್ಘಾಟಿಸಿ ಮಾತನಾಡಿ “ದಕ್ಷಿಣ ಕನ್ನಡ ಜಿಲ್ಲೆಗೆ ಹೊರ ದೇಶಗಳಿಂದ ಅನೇಕ ಮಂದಿ ಪ್ರವಾಸಿಗರು ಆಗಮಿಸುತ್ತಿದ್ದು, ಅವರಿಗೆ ಕರಾವಳಿಯ ಕಲಾ ಸಂಸ್ಕೃತಿಯ ಪರಿಚಯವಾಗಬೇಕು. ಈ ನೆಲದ ಶಾಸ್ತ್ರೀಯ ಕಲೆಗಳನ್ನು ಉಳಿಸಿ ಬೆಳೆಸಬೇಕಾದ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಇಂದಿನ ಡಿಜಿಟಲ್ ಕಾಲಘಟ್ಟದಲ್ಲಿಯೂ ಶಾಸ್ತ್ರೀಯ ನೃತ್ಯಗಳಿಗೆ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿದ್ದಾರೆ. ಗುರು ಸುಮಂಗಲ ರತ್ನಾಕರ್ ಇವರು ತಮ್ಮ ಸಂಸ್ಥೆಯ ಮೂಲಕ ಕಲಾ ಚಟುವಟಿಕೆಗಳನ್ನು ಪಸರಿಸುತ್ತಿದ್ದಾರೆ” ಎಂದು ಶ್ಲಾಘಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಶ್ರೀ ಹರಿಕೃಷ್ಣ ಪುನರೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅ.ಭಾ.ಭ್ರಾ.ಮ. ಸಭಾ ಬೆಂಗಳೂರಿನ ರಾಜ್ಯ…
ಬೆಂಗಳೂರು : ರಂಗರಥ ತಂಡದ ಹೊಸ ನಾಟಕ ‘ಧರ್ಮನಟಿ’ ಇದರ ಮೊದಲ ಪ್ರದರ್ಶನವು ದಿನಾಂಕ 21-07-2024ರಂದು ಮಧ್ಯಾಹ್ನ ಗಂಟೆ 3:30 ಹಾಗೂ ಸಂಜೆ ಗಂಟೆ 7-30ಕ್ಕೆ ಬೆಂಗಳೂರಿನ ಜೆ.ಪಿ. ನಗರದ ರಂಗಶಂಕರದಲ್ಲಿ ಪ್ರಸ್ತುತಗೊಳ್ಳಲಿದೆ. ಇದು ಸಂಗೀತಮಯ ಐತಿಹಾಸಿಕ ಕನ್ನಡ ನಾಟಕವಾಗಿದ್ದು, ಆಸಿಫ್ ಕ್ಷತ್ರಿಯ ಮತ್ತು ಶ್ವೇತಾ ಶ್ರೀನಿವಾಸ್ ಇವರು ನಿರ್ದೇಶನ ಮಾಡಿದ್ದು, ಭಿನ್ನಷಡ್ಜ ಸಂಗೀತದಲ್ಲಿ ಸಹಕರಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8050157443 (ಶ್ವೇತಾ ಶ್ರೀನಿವಾಸ್) ಅಥವಾ 9448286776 ಆಸಿಫ್ ಕ್ಷತ್ರಿಯ ಇವರನ್ನು ಸಂಪರ್ಕಿಸಿ. ರಂಗರಥ ಸಂಸ್ಥೆಯ ಬಗ್ಗೆ : ಭಾರತೀಯ ಪ್ರದರ್ಶನ ಕಲಾ ಸಂಸ್ಥೆಯಾದ ‘ರಂಗರಥ’ ಎಂಬುದು ರಂಗಪ್ರೇಕ್ಷಕರ ಮನಸೂರೆಗೊಂಡ ಬೆಂಗಳೂರಿನ ಕೆಲವು ರಂಗತಂಡಗಳಲ್ಲಿ ಒಂದು. ಹಲವು ವರ್ಷಗಳ ರಂಗಾನುಭವದ ಆಧಾರದ ಮೇಲೆ ರಂಗರಥದ ಪಯಣ ಸಾಗಿದೆ. ಅನುಭವೀ ರಂಗಕರ್ಮಿಗಳು, ನಾಟಕಕಾರರು, ಸಾಹಿತಿಗಳು, ಸಂಗೀತ ಸಂಯೋಜಕರು ಒಂದಾಗಿ, ರಂಗಪ್ರಯೋಗಗಳಲ್ಲಿ ಹೊಸ ಆಯಾಮ ಮತ್ತು ಸಾಧ್ಯತೆಗಳನ್ನು ಅಳವಡಿಸಿಕೊಂಡು, ಒಳ್ಳೆ ಅಭಿರುಚಿಯ ನಾಟಕ, ಯಕ್ಷಗಾನ, ನೃತ್ಯನಾಟಕಗಳನ್ನು ತಯಾರಿಸಿ ದೇಶಾದ್ಯಂತ ಪ್ರದರ್ಶಿಸುತ್ತಿದೆ. ವಿವಿಧ ತಂತ್ರಜ್ಞರು ಮತ್ತು ಹಲವು…
ತೆಕ್ಕಟ್ಟೆ: ಯಶಸ್ವಿ ಕಲಾವೃಂದದ ‘ಸಿನ್ಸ್ 1999 ಶ್ವೇತಯಾನ-44’ರ ಕಾರ್ಯಕ್ರಮದ ಅಂಗವಾಗಿ ಧಮನಿ ಟ್ರಸ್ಟ್ ನೇತೃತ್ವದಲ್ಲಿನ 25 ದಿನಗಳ ಮಕ್ಕಳ ನಾಟಕ ಕಾರ್ಯಗಾರದ ಸಮಾರೋಪ ಸಮಾರಂಭವು ದಿನಾಂಕ 17-07-2024 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಸುಧಾ ಆಡುಕಳ ಮಾತನಾಡಿ “ಮಕ್ಕಳ ಕಣ್ಣಿಗೆ ಎಲ್ಲಾ ವಿಧದ ಕಲೆಯನ್ನು ಆಸ್ವಾದಿಸುವಂತಹ ದೃಶ್ಯಗಳನ್ನು ಕಟ್ಟಿಕೊಡದೇ ಹೋದರೆ ಮೊಬೈಲಿನಿಂದ ಹೊರಬರುವುದಕ್ಕೆ ಸಾಧ್ಯ ಆಗುವುದಿಲ್ಲ. ಪರಿಸರವನ್ನು ಆರ್ಟ್ ಮೂಲಕ ಸುಂದರಗೊಳಿಸುವ, ಒಂದಷ್ಟು ಮನಸ್ಸುಗಳನ್ನು ಕಲೆಯ ಮೂಲಕ ಮೃದುಗೊಳಿಸುವ ಹಾಗೂ ಭಾಷೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಕಾರ್ಯಗಳು ಬಹಳ ಮುಖ್ಯವಾಗುತ್ತದೆ. ಮಕ್ಕಳು ಕಲೆಯಿಂದ ಸಮಾಜವನ್ನು ಬೆಳಗಿಸುವ ಕಾರ್ಯ ಆಗಲೇಬೇಕಿದೆ. ಭುವಿಯಲ್ಲಿ ನಾವೆಲ್ಲ ನಾಟಕ ಮಾಡುವಂತಹ ಶಾಪಗ್ರಸ್ತರಾಗಿದ್ದೇವೆ. ಯಾಕೆಂದರೆ ಮಕ್ಕಳನ್ನು ರಂಗ ಕ್ರಿಯೆಯಲ್ಲಿ ತೊಡಗಿಸುವ ಕೆಲಸ ಕ್ಲಿಷ್ಟಕರವಾದದ್ದು. ಶಾಪವು ವರವಾಗಬೇಕಾದರೆ ಸಮುದಾಯದವರು ಇಂತಹ ಕಾರ್ಯದಲ್ಲಿ ನೆರವು ನೀಡುವುದರ ಮೂಲಕ ಕೈಗೂಡಿಸಬೇಕಾಗುತ್ತದೆ. ರಂಗಭೂಮಿಯನ್ನು ಬಲಗೊಳಿಸಲು ಆರ್ಥಿಕ ಭದ್ರತೆ ಬೇಕಾಗುತ್ತದೆ. ಆ ನಿಟ್ಟಿನಲ್ಲಿ ಕಲಾಸಕ್ತರು ಮನಮಾಡಬೇಕು.” ಎಂದರು. ‘ಸಿನ್ಸ್ 1999…