Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ನಾಡಿನ ಹಿರಿಯ ಶಿಕ್ಷಣ ತಜ್ಞ, ಲೇಖಕ, ಜನಪದ ವಿದ್ವಾಂಸ, ಅಂಕಣಕಾರರಾದ ಡಾ. ತೇಜಸ್ವಿ ಕಟ್ಟೀಮನಿ ಅವರು ಆಯ್ಕೆಯಾಗಿದ್ದಾರೆ. ನಾಲ್ವಡಿಯವರು ನಾಡಿನ ಅಭ್ಯುದಯದ ಕನಸು ಕಂಡವರು. ಅವರ ಆಶಯದಂತೆ ನಾಡಿನಲ್ಲಿ ಕೈಗಾರಿಕಾ ಕ್ಷೇತ್ರ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿಯನ್ನುನೀಡುತ್ತಾ ಬಂದಿದೆ. ಪ್ರಸ್ತುತ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಯನ್ನು ನೀಡಬೇಕು ಎನ್ನುವ ಮೂಲ ಆಶಯ ಈ ದತ್ತಿ ಪ್ರಶಸ್ತಿಯದ್ದಾಗಿದೆ. ಪ್ರಶಸ್ತಿಯು ರೂ.51,000 ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ. ಇದುವರೆಗೂ ನಾಡಿನ 13 ಜನ ಗಣ್ಯರಿಗೆ ಪರಿಷತ್ತಿನ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದ್ದು…
ಬೆಳ್ತಂಗಡಿ : ಧರ್ಮಸ್ಥಳ ಸಮೀಪದ ನಿಡ್ಲೆಯ ಕರುಂಬಿತ್ತಿಲ್ ಮನೆಯಲ್ಲಿ ಅಂತಾರಾಷ್ಟ್ರೀಯ ‘ಕರುಂಬಿತ್ತಿಲ್ ಶಿಬಿರ 2023’ ದಿನಾಂಕ 24-05-2023ರಿಂದ 28-05-2023ರವರೆಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಎಡನೀರು ಮಠದ ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು “ಗ್ರಾಮೀಣ ಪ್ರದೇಶದ ಮನೆಯಂಗಳದಲ್ಲಿ ಪ್ರತೀ ವರ್ಷ ನಡೆಯುವ ಸಂಗೀತ ಶಿಬಿರ ಸಂಗೀತ ಕಲೆಯ ಯುವ ಅಭ್ಯಾಸಿಗಳಿಗೆ ಅಪೂರ್ವ ನಿಧಿ. ಸಂಗೀತ ಯುವ ಮನಸ್ಸುಗಳನ್ನು ಅರಳಿಸುವ ಅದ್ಬುತ ಕಲೆ. ಮಾನಸಿಕ ಶಾಂತಿ, ನೆಮ್ಮದಿ ವಿಕಾಸಕ್ಕೆ ಸಂಗೀತ ಚೈತನ್ಯದಾಯಕ” ಎಂದು ನುಡಿದರು. ಕಾರ್ಯಕ್ರಮದ ಸಂಯೋಜಕ ವಿದ್ವಾನ್ ವಿಠಲ ರಾಮಮೂರ್ತಿ, ಕೃಷ್ಣವೇಣಿ ಅಮ್ಮ, ಧರ್ಮಸ್ಥಳದ ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು. ದಿನಾಂಕ 24-05-2023 ಮೊದಲ ದಿನದ ಸಂಪನ್ಮೂಲ ಸಂಗೀತಗಾರರಾಗಿ ಚೆನ್ನೈಯ ವಿದ್ವಾನ್ ಡಾ. ರಾಜಕುಮಾರ್ ಭಾರತಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತಾದ ‘ಮಂಜುನಾದ’ ಕೃತಿ ಪ್ರಸ್ತುತ ಪಡಿಸಿದರು. ಆ ದಿನದ ವಿಶೇಷ ಕಾರ್ಯಕ್ರಮವಾಗಿ ವಿದ್ವಾನ್ ಕೆ.ಎಸ್. ವಿಷ್ಣುದೇವ್, ವಿದ್ವಾನ್ ಬಿ. ಅನಂತಕೃಷ್ಣನ್, ವಿದ್ವಾನ್ ಹರಿಹರನ್ ಸುಂದರ ರಾಮನ್ ಮತ್ತು ವಿದ್ವಾನ್ ಶ್ರೀ…
ಯಕ್ಷಗಾನವು ನಮ್ಮ ಹೆಮ್ಮೆಯ ಸಂಕೇತ ಎನಿಸಿಕೊಂಡ ಕಲೆ. ಹಿಂದಿನ ತಲೆಮಾರಿನ, ಈಗಿನ ಹಿರಿಯ ಕಲಾವಿದರು, ಕಲಾಪೋಷಕರು, ಕಲಾಭಿಮಾನಿಗಳೆಲ್ಲಾ ತ್ಯಾಗ ಪರಿಶ್ರಮಗಳಿಂದ ಈ ಸರ್ವಾಂಗ ಸುಂದರವಾದ ಕಲಾಪ್ರಕಾರವನ್ನು ಬೆಳೆಸಿದ್ದಾರೆ, ಉಳಿಸಿದ್ದಾರೆ. ಇಂತಹ ಶ್ರೀಮಂತ ಕಲೆಯಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸುತ್ತಿರುವ ಕಲಾವಿದ ಪ್ರವೀಣ್ ಮೊಗವೀರ. 03.03.1993ರಂದು ಆರ್ ಮಂಜುನಾಥ್ ಮತ್ತು ಗಿರಿಜಾ ದಂಪತಿಗಳ ಮಗನಾಗಿ ಜನನ. ಬಿಕಾಂ ಇವರ ವಿದ್ಯಾಭ್ಯಾಸ. ವೃತ್ತಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಸಹಕಾರ ಸಂಘ ನಿ. ಕುಂದಾಪುರದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸವನ್ನು ಮಾಡುತ್ತಿದ್ದಾರೆ. ಅಜ್ಜನಾದ ಬೇಲ್ತುರೂ ರಮೇಶ್ ಇವರು ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆ. ನವೀನ್ ಕೋಟ ಇವರ ಯಕ್ಷಗಾನದ ಗುರುಗಳು. ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ:- ನಾವು ಎಷ್ಟು ಕಲಿತರು ಯಕ್ಷಗಾನ ರಂಗದಲ್ಲಿ ಕಲಿಯಲು ಬಹಳಷ್ಟಿದೆ. ಅದಕ್ಕೆ ವೇಷಕ್ಕೆ ಮೊದಲು ಹಿರಿಯರಲ್ಲಿ ಕೇಳಿ ಹೋಗುವುದು ಒಳ್ಳೆಯದು ಎಂದು ಪ್ರವೀಣ್ ಅವರ ಅಭಿಪ್ರಾಯ. ಪೌರಾಣಿಕ ಪ್ರಸಂಗಗಳಾದ ಕಂಸ ವಧೆ, ದೇವಿ ಮಹಾತ್ಮೆ, ವಧು ವೈಶಾಲಿನಿ…
ಮಂಗಳೂರು : ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರಿನ ಮಂಜುನಾಥ್ ಎಜುಕೇಶನ್ ಟ್ರಸ್ಟಿನ ಸಹಯೋಗದಲ್ಲಿ ಅವರ ಹುಟ್ಟೂರಾದ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ಕಯ್ಯಾರು ಗ್ರಾಮದ ಶ್ರೀ ರಾಮಕೃಷ್ಣ ಕಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08-06-2023ರಂದು ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ ಹಿರೇಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಸಿ. ಸೋಮಶೇಖರ್, ಸಾಹಿತಿಗಳು ಮತ್ತು ಚಿಂತಕರಾದ ಪ್ರೊ. ಕೆ.ಇ. ರಾಧಾಕೃಷ್ಣ ಮತ್ತಿತರರು ಭಾಗವಹಿಸಿದ್ದರು.
ಬೆಂಗಳೂರು : ಬೆಂಗಳೂರಿನ ನೃತ್ಯ ಸಂಸ್ಥೆಯಾಗಿರುವ ಸಂಸ್ಕೃತಿ ಡ್ಯಾನ್ಸ್ ಅಕಾಡೆಮಿಯು ವಿದ್ಯಾರಣ್ಯಪುರದ ತನ್ನ ಸಂಸ್ಥೆಯ ಸಭಾಂಗಣದಲ್ಲಿ ದಿನಾಂಕ 10-06-2023 ಮತ್ತು 11-06-2023ರಂದು ತಮ್ಮ ನೃತ್ಯ ವಿದ್ಯಾರ್ಥಿಗಳಿಗಾಗಿ ಯುವ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರ ‘ತಾಳ ಕಾರ್ಯಗಾರ’ವನ್ನು ಹಮ್ಮಿಕೊಂಡಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಗುರು ಶ್ರೀಮತಿ ಶೃತಿ ನಾಯಕ್ ಅವರು ತಿಳಿಸಿದ್ದಾರೆ.
ಮಂಗಳೂರು : ನೆಹರು ಯುವ ಕೇಂದ್ರದ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಒಳಗೊಂಡ ‘’ಜಿಲ್ಲಾ ಯುವ ಉತ್ಸವ’ ಜೂ.10ರಂದು ಬೆಳಿಗ್ಗೆ 10.30ಕ್ಕೆ ನಗರದ ಪುರಭವನದ ಮಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲು ಜಿಲ್ಲಾ ಯುವ ಉತ್ಸವವನ್ನು ಉದ್ಘಾಟಿಸುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ನೆಹರು ಯುವ ಕೇಂದ್ರ ಕ್ಷೇತ್ರೀಯ ನಿರ್ದೇಶಕ ಎಂ.ಎನ್. ನಟರಾಜ್ ಭಾಗವಹಿಸುವರು. ಯುವ ಉತ್ಸವದ ಸ್ಪರ್ಧೆಗಳು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆಯಲಿವೆ. ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ, ಭಾಷಣ ಸ್ಪರ್ಧೆಗಳು ನಡೆಯಲಿದ್ದು ಈಗಾಗಲೇ 200ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಹಾಗೂ ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ಕಂದಾಯ ಭವನ, ಮಂಗಳೂರು (0824-2422264 ಅಥವಾ 9611134944) ಇಲ್ಲಿ ಸಂಪರ್ಕಿಸಬಹುದು. ಸ್ಪರ್ಧೆಯ ದಿನದಂದು ಬೆಳಿಗ್ಗೆ 9 ಗಂಟೆಯವರೆಗೆ ಸಳದಲ್ಲಿಯೇ ನೋಂದಣಿಗೂ ಅವಕಾಶವಿದೆ. 2023ರ ಏಪ್ರಿಲ್ 1ಕ್ಕೆ 15-29 ವರ್ಷ ವಯಸ್ಸಿನವರಾಗಿದ್ದು, ದ.ಕ. ಜಿಲ್ಲೆಯವರು ಮಾತ್ರ…
ಭಾರತವು ಹಲವಾರು ರೀತಿಯ ಕಲೆ, ಸಂಸ್ಕೃತಿ, ಸಾಹಿತ್ಯ, ವಾಸ್ತುಶಿಲ್ಪಗಳನ್ನು ಒಳಗೊಂಡಿದೆ. ಈ ಕಲೆ-ಸಾಹಿತ್ಯ ಮಾನವನೊಂದಿಗೆ ಹಾಸುಹೊಕ್ಕಾಗಿ ಬೆಳೆದು ಬಂದಿದೆ. ಹಲವು ಜನರು ಇದರ ಮಹತ್ವವನ್ನು ಅರಿತುಕೊಳ್ಳದಿದ್ದರೂ ಅವುಗಳ ಬಗ್ಗೆ ವಿಶೇಷವಾದ ಒಲವನ್ನು ಮೂಡಿಸಿಕೊಳ್ಳಲು ಕಾತುರದಿಂದ ಇರುತ್ತಾರೆ. ಎಲ್ಲರಲ್ಲಿಯೂ ಈ ಕಲೆ ಸಾಹಿತ್ಯಗಳು ಹುಚ್ಚೆಬ್ಬಲು ಸಾಧ್ಯವಿಲ್ಲ. ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಅಡಗಿರುತ್ತದೆ. ಅವಕಾಶ ಬಂದಾಗ ಅದನ್ನು ವ್ಯಕ್ತಪಡಿಸುವುದು ಕೂಡ ಒಂದು ಕಲೆಯಾಗಿರುತ್ತದೆ. ನಮ್ಮ ಜೀವನವೇ ಒಂದು ಸುಂದರವಾದ ಕಲೆ. ಆ ಕಲೆಯೇ ಸಾಹಿತ್ಯದ ಬೇರು. ಅದು ಅನೇಕ ಸಾಹಿತ್ಯದಿಂದ ಕೂಡಿರುತ್ತದೆ. ಸುಜ್ಞಾನಿಗಳ ಮನದಲ್ಲಿ ಬರಹಗಾರ ಅಥವಾ ಕವಿ ಸೃಷ್ಟಿಯಾದಲ್ಲಿ ಒಂದು ಸುಂದರ ಸಾಹಿತ್ಯ ಲೋಕ ಸೃಷ್ಟಿಯಾಗಬಲ್ಲದು. ಮಾತುಗಳಿಂದ, ರಚನೆಯ ಕಲೆಯಿಂದ ಅದ್ಭುತವಾದ ಸಾಹಿತ್ಯ ಲೋಕ ಗಮನಕ್ಕೆ ಬರಬಹುದು. ರವಿ ಕಾಣದ್ದನ್ನು ಕವಿ ಕಂಡ ಎಂಬ ಮಾತಿನಂತೆ ಕವಿಯಾದವನಿಗೆ ನಿರ್ಜೀವ ವಸ್ತುವಿಗೆ ಜೀವ ತುಂಬಿ ವರ್ಣಿಸುವ ಕಲೆ ಇರುತ್ತದೆ. ಒಂದು ಸಾಹಿತ್ಯ ರಚನೆಯಾಗಬೇಕಾದರೆ ಮನದ ಭಾವನೆಗಳಿಗೆ ಬರಹದ ರೂಪಕೊಟ್ಟು ಒಂದು ಸುಂದರ…
ಮಂಗಳೂರು : ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ಸುರ್ ಓ ಸಾಜ್’ ಸಂಗೀತ ಕಾರ್ಯಕ್ರಮವು ಜೂನ್ 11ರಂದು ಸಂಜೆ 6 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ. ದೇಶದ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವ ಹಿರಿಯ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದು, ಸಂಗೀತಾಸಕ್ತರಿಗೆ ಮುಕ್ತ ಪ್ರವೇಶಾವಕಾಶವಿದೆ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ತಿಳಿಸಿದ್ದಾರೆ. ಕಾರ್ಯಕ್ರಮದ ಪೂರ್ವಾರ್ಧದಲ್ಲಿ ಹೊಸದಿಲ್ಲಿಯ ಡಾ. ಬಿಪುಲ್ ಕುಮಾರ್ ರಾಯ್ ಅವರಿಂದ ಸಂತೂರ್ ವಾದನ ನಡೆಯಲಿದ್ದು, ತಬ್ಲಾ ವಾದಕ ಬೆಂಗಳೂರಿನ ಪಂಡಿತ್ ರಾಜೇಂದ್ರ ನಾಕೋಡ್ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದ ಉತ್ತರಾರ್ಧದಲ್ಲಿ ಧಾರವಾಡದ ಡಾ. ವಿಜಯ್ ಕುಮಾರ್ ಪಾಟೀಲ್ ಮತ್ತು ಬೆಂಗಳೂರಿನ ಕೌಶಿಕ್ ಐತಾಳ್ ಅವರ ಜುಗಲ್ ಬಂದಿ ಕಾರ್ಯಕ್ರಮ ನಡೆಯಲಿದೆ. ಇವರಿಗೆ ಬೆಂಗಳೂರಿನ ಪಂಡಿತ್ ವ್ಯಾಸಮೂರ್ತಿ ಕಟ್ಟಿ ಹಾರ್ಮೋನಿಯಂನಲ್ಲಿ ಹಾಗೂ ಕೇಶವ ಜೋಶಿ ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ. ಡಾ. ಬಿಪುಲ್ ಕುಮಾರ್ ರಾಯ್ ಡಾ. ಬಿಪುಲ್ ಕುಮಾರ್ ಭಾರತದ…
ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ – ಸಾಹಿತ್ಯಿಕ ಸಂಘಟನೆ ‘ರಂಗಸ್ಪಂದನ ಮಂಗಳೂರು’ ಆಶ್ರಯದಲ್ಲಿ ‘ಸಾಂಸ್ಕೃತಿಕ ರಂಗ ದಿಬ್ಬಣ’ ಸರಣಿ ಕಾರ್ಯಕ್ರಮಗಳು ಜೂನ್ 12, 17, 18ರಂದು ನಡೆಯಲಿದೆ. ‘ಸಾಂಸ್ಕೃತಿಕ ರಂಗ ದಿಬ್ಬಣ’ ಎಂಬ ಸರಣಿ ಕಾರ್ಯಕ್ರಮದಲ್ಲಿ ದಿಬ್ಬಣ 1 ಪೌರಾಣಿಕ ತುಳುನಾಟಕ ಜೂನ್ 12ರಂದು ಸಂಜೆ 6 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಂಗ ಜ್ಯೋತಿ ಬೆಳಗಿ ಹಿರಿಯ ರಂಗ ನಿರ್ದೇಶಕ ಶ್ರೀ ಕಾಸರಗೋಡು ಚಿನ್ನಾ ಉದ್ಘಾಟಿಸಲಿದ್ದಾರೆ. ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್. ಹಾಗೂ ನಮ್ಮ ಟಿವಿ ವಾಹಿನಿ ಆಡಳಿತ ನಿರ್ದೇಶಕರಾದ ಡಾ. ಶಿವಚರಣ್ ಶೆಟ್ಟಿಯವರು ಶುಭಾಶಂಸನೆಗೈಯಲಿದ್ದಾರೆ. ಬಳಿಕ ವಿಜಯ ಕುಮಾರ್ ಕೊಡಿಯಾಲಬೈಲ್ ಅವರ “ಶಿವದೂತೆ ಗುಳಿಗೆ” ಎನ್ನುವ ತುಳು ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ. ದಿಬ್ಬಣ 2 ಯಕ್ಷವೈಭವ ಕಾರ್ಯಕ್ರಮ ಜೂನ್ 17ರಂದು ಸಂಜೆ 5.30ಕ್ಕೆ ಕಾವೂರು ಪದವಿನ ಶ್ರೀ ಗುರುವೈದ್ಯನಾಥ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯಲಿದ್ದು, ಶ್ರೀ ಗುರುವೈದ್ಯನಾಥ…
ಬೆಂಗಳೂರು: ರಂಗಚಕ್ರ ತಂಡವು ಅಭಿನಯ ಕಾರ್ಯಾಗಾರದ ಮೂಲಕ ಹೊಸ ಪ್ರತಿಭೆಗಳನ್ನು ರಂಗಭೂಮಿಗೆ ಪರಿಚಯಿಸುತ್ತ ಹಲವಾರು ನಾಟಕಗಳನ್ನು ಪ್ರಸ್ತುತಪಡಿಸಿದೆ. ಇವರ ಈ ಬಾರಿಯ ಅಭಿನಯ ಕಾರ್ಯಾಗಾರವು ರಂಗಕರ್ಮಿ ಮಧು ಮಳವಳ್ಳಿಯವರ ನಿರ್ದೇಶನದಲ್ಲಿ ಜೂನ್ 16 ರಿಂದ ಜುಲೈ 31ರ ವರೆಗೆ ನಡೆಯಲಿದೆ. ಈ ಕಾರ್ಯಾಗಾರವನ್ನು ಹಿರಿಯ ರಂಗತಜ್ಞ ಡಾ. ಬಿ. ವಿ. ರಾಜಾರಾಮ್ ಇವರು ಉದ್ಘಾಟನೆ ಮಾಡಲಿದ್ದಾರೆ. 18ವರ್ಷ ಮೇಲ್ಪಟ್ಟವರಿಗೆ ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದ್ದು, ನಾಡಿನ ಹೆಸರಾಂತ ರಂಗಕರ್ಮಿಗಳಾದ ಡಾ. ರಾಜರಾಮ್, ಸುರೇಶ್ ಆನಗಳ್ಳಿ, ಬಿ. ಸುರೇಶ, ಪ್ರಸನ್ನಕುಮಾರ್ ಕೆರಗೂಡು, ಲವಕುಮಾರ್, ಗುಂಡಣ್ಣ ಚಿಕ್ಕಮಗಳೂರು ಮತ್ತು ಉಮಾಶ್ರೀ ಮಧು ಮಳವಳ್ಳಿ ಮಾರ್ಗದರ್ಶನ ನೀಡಲಿದ್ದಾರೆ. ಈ ಕಾರ್ಯಾಗಾರವು ಸಂಜೆ 6 ರಿಂದ 9ರ ವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಾಸ್ತಿ ರಂಗ ತಾಲೀಮು ಕೊಠಡಿಯಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿ, ನೋಂದಣಿ ಹಾಗೂ ಪ್ರವೇಶಾತಿಗಾಗಿ ಮಹೇಶ್ ಕುಮಾರ್ 8971600558 ಇವರನ್ನು ಸಂಪರ್ಕಿಸಬಹುದು. ಮಧು ಮಳವಳ್ಳಿ ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಗಸನಪುರದವರಾದ ಇವರು…