Author: roovari

ಮಂಗಳೂರು: “ಜನರಲ್ಲಿ ಕಲಾಭಿರುಚಿ ಬೆಳೆಸಬೇಕಿದೆ” – ಚೇತನಾ ದತ್ತಾತ್ರೇಯ ಪ್ರಚಲಿತ ವಿದ್ಯಮಾನದಲ್ಲಿ ಮಾನವೀಯ ಸಂಸ್ಕೃತಿಕ ಮೌಲ್ಯಗಳು ಕುಸಿಯುತ್ತಿರುವ ಈ ಸಂದರ್ಭದಲ್ಲಿ ಜನರಲ್ಲಿ ಅಭಿರುಚಿ ಕಲಾಸಕ್ತಿ ಬೆಳೆಸುವ ಕಾರ್ಯಕ್ರಮಗಳು ಹೆಚ್ಚಾಗಬೇಕಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ)ಬೆಂಗಳೂರು ಇದರ ರಾಜ್ಯ ಸಹ ಸಂಚಾಲಕಿ ಚೇತನ ದತ್ತಾತ್ರೇಯ ಅಭಿಪ್ರಾಯ ಪಟ್ಟರು ಅವರು ಇತ್ತೀಚೆಗೆ ಭರತಾಂಜಲಿ ಕೊಟ್ಟಾರ ಮಂಗಳೂರು ಇವರು ವಿಪ್ರವೇದಿಕೆ (ರಿ)ಕೊಟ್ಟಾರ ಇವರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬೆನಕ ಸಭಾಭವನ ಕೋಡಿಕಲ್ ಇಲ್ಲಿ ಹಮ್ಮಿಕೊಂಡಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಕಾಸರಗೋಡು ಇವರ ಬೊಂಬೆಯಾಟ ಪ್ರದರ್ಶನವನ್ನು ಉದ್ಘಾಟಿಸಿದರು. ಮನುಷ್ಯ ಇಂದು ಒತ್ತಡದ ನಡುವೆ ಬದುಕುವಂತಾಗಿದೆ ಬದುಕಿನ ಜಂಜಾಟದಲ್ಲಿ ಸಂಬಂಧ ಮೌಲ್ಯಗಳು ದೂರವಾಗುತ್ತಿವೆ. ಕಳಚುತ್ತಿರುವ ಸಂಬಂಧಗಳ ಕೊಂಡಿಯನ್ನು ಭಾರತೀಯ ಪುರಾತನ ಲಲಿತ ಕಲೆಗಳಿಂದ ಬೆಳೆಸಲು ಸಾಧ್ಯವಿದೆ. ಯಕ್ಷಗಾನ ಬೊಂಬೆ ಆಟವು ಇಂದು ಅಳಿವಿನ ಅಂಚಿನಲ್ಲಿದೆ ಇಂತಹ ಸಾಧಕ ಕಲೆಯನ್ನು ಪ್ರೋತ್ಸಾಹಿಸಬೇಕಾದ್ದು ಪ್ರತಿಯೊಬ್ಬರ ಕರ್ತವ್ಯ ಎಂದರು. ತನ್ನ…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರದಂದು ಎಂಜಿಎಂ ಕಾಲೇಜಿನಲ್ಲಿ ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶ್ರೀ ಕೆ .ಜಯಪ್ರಕಾಶ್ ರಾವ್ ಉಪನ್ಯಾಸ ನೀಡುತ್ತಾ “ವ್ಯಕ್ತಿಯಲ್ಲಿರುವ ಶಕ್ತಿಯನ್ನು ಗುರುತಿಸುವ ಕೆಲಸ ಮಾಡಬೇಕೆಂದು ಅಬ್ದುಲ್ ಕಲಾಂ ಯಾವಾಗಲೂ ಹೇಳುತ್ತಿದ್ದರು. ಅವರೊಂದಿಗಿನ ಏಳು ವರ್ಷದ ಒಡನಾಟಗಳನ್ನು ನೆನಪಿಸಿಕೊಳ್ಳುತ್ತಾ ರಾಕೆಟ್ ತಂತ್ರಜ್ಞಾನದ ಮೇರು ವ್ಯಕ್ತಿ ಕಲಾಂ, ಅತ್ಯಂತ ಸರಳ ವ್ಯಕ್ತಿತ್ವದ ಅವರು ಹೊಸ ತಂತ್ರಜ್ಞಾನಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಸರಳ ಜೀವನವನ್ನು ನಡೆಸುತ್ತಾ ನಮಗೆಲ್ಲರಿಗೂ ಮಾದರಿಯಾಗಿದ್ದರು” ಎಂದರು. ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯನ್ನಾಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ದಾನಿಗಳಾದ ಭವಾನಿ ವಿ. ಶೆಟ್ಟಿ,…

Read More

ಉಡುಪಿ : ರಾಗ ಧನ ಉಡುಪಿ (ರಿ.) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ರಾಗರತ್ನಮಾಲಿಕೆ -12’ನೆಯ ಗೃಹ ಸಂಗೀತ ಕಛೇರಿ ಉಡುಪಿಯ ಶ್ರೀ ಕೆ. ದಿನೇಶ್ ಅಮ್ಮಣ್ಣಾಯ ಇವರ ಆತಿಥ್ಯ ಹಾಗೂ ಸಹ ಪ್ರಯೋಜಕತ್ವದಲ್ಲಿ ದಿನಾಂಕ 12-05-2023ರಂದು ಸಂಜೆ 4-30ಕ್ಕೆ ಅವರ ಸ್ವಗೃಹ ‘ಉಷಾ ನಿಲಯ’ದಲ್ಲಿ ನಡೆಯಲಿದೆ. ಮೈಸೂರಿನ ಶ್ರೀ ಎ. ಚಂದನ ಕುಮಾರ್ ಕೊಳಲು ವಾದನದಲ್ಲಿ, ಮತ್ತೂರು ಶ್ರೀನಿಧಿ ವಯೊಲಿನ್ ನಲ್ಲಿ, ಮೃದಂಗದಲ್ಲಿ ಶ್ರೀ ಅನಿರುದ್ಧ್ ಎಸ್. ಭಟ್ ಹಾಗೂ ಶ್ರೀ ಸುನಾದ ಆನೂರು ಖಂಜೀರದಲ್ಲಿ ಈ ಕಛೇರಿಯನ್ನು ನಡೆಸಿಕೊಡಲಿರುವರು. ಶ್ರೀಮತಿ ಮತ್ತು ಶ್ರೀ ದಿನೇಶ್ ಅಮ್ಮಣ್ಣಾಯ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.

Read More

08.05.2001ರಂದು ಉಡುಪಿಯ ಕುಂಜಾರುಗಿರಿಯ ವಿಷ್ಣುಮೂರ್ತಿ ಆಚಾರ್ಯ ಹಾಗೂ ಸ್ನೇಹ ಆಚಾರ್ಯ ಇವರ ಮಗಳಾಗಿ ಜನನ. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜ್ ನಲ್ಲಿ BA ಇನ್ ಇಂಗ್ಲಿಷ್ ಮುಗಿಸಿ, ಪ್ರಸ್ತುತ ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ Masters Of Performing Arts- Bharathanatyam ಹಾಗೂ Masters In English Literature ವಿಷಯದಲ್ಲಿ ಉನ್ನತ ಪದವಿಯ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಮುಖಾಂತರ ನಡೆದ ಪ್ರತೀ ಶಾಲೆಗೂ ಬಡಗು ಯಕ್ಷ ಶಿಕ್ಷಣದ “ಯಕ್ಷ ಕಿಶೋರ” ಎಂಬ ಕಾರ್ಯಕ್ರಮದಿಂದ ೩ನೇ ತರಗತಿಯಲ್ಲಿ ಇರುವಾಗ ಯಕ್ಷಗಾನ ಕಲೆಗೆ ಪಾದಾರ್ಪಣೆಯಾಯಿತು. ಆಗ ಗುರುಗಳಾಗಿ ಶ್ರೀ ಮಂಜುನಾಥ ಕುಲಾಲ ಐರೋಡಿ, ಶ್ರೀ ಕೃಷ್ಣಮೂರ್ತಿ ಉರಾಳ ಹಾಗೂ ಶ್ರೀ ನರಸಿಂಹ ತುಂಗ ಅವರ ಬಳಿ ಬಡಗುತಿಟ್ಟು ಯಕ್ಷಗಾನವನ್ನು ಅಭ್ಯಾಸ ಮಾಡಿ, ಪ್ರಸ್ತುತ ಯಕ್ಷ ಗುರು ಶ್ರೀ ರಾಕೇಶ್ ರೈ ಅಡ್ಕ ಅವರ ಗರಡಿಯಲ್ಲಿ ತೆಂಕುತಿಟ್ಟು ಯಕ್ಷಗಾನವನ್ನು ಕಲಿಯುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಯಕ್ಷಗಾನದ ಮೇಲೆ ಆಸಕ್ತಿ ಬೆಳೆದಿತ್ತು. ತಂದೆ, ತಾಯಿ, ಅಜ್ಜ, ಅಜ್ಜಿ…

Read More

ಸುರತ್ಕಲ್ : ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟಿನ ಕೇಂದ್ರೀಯ ಮಹಿಳಾ ಘಟಕದ ‘ಪ್ರಮದಾ ಪ್ರಭಾ’ 6ನೇ ವಾರ್ಷಿಕ ಸಂಭ್ರಮವು ದಿನಾಂಕ 01-05-2023ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಟ್ಲ ಫೌಂಡೇಷನ್ ಟ್ರಸ್ಟಿನ ಪ್ರಧಾನ ಸಂಚಾಲಕ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ಮಾತನಾಡುತ್ತಾ “ಯಕ್ಷಗಾನದಲ್ಲಿ ಮಹಿಳೆಯರು ಮತ್ತು ಮಕ್ಕಳು ತೊಡಗಿಸಿಕೊಳ್ಳಬೇಕು. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹಿಳಾ ಘಟಕ ಕೆಲಸ ಮಾಡುವಂತಾಗಲಿ. ಇದಕ್ಕೆ ಪ್ರತೀ ವರ್ಷ ಪಟ್ಲ ಫೌಂಡೇಷನ್ ಟ್ರಸ್ಟಿಗೆ ಐದು ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡುವುದಾಗಿ” ಹೇಳಿದರು. ಇನ್ನೋರ್ವ ಮುಖ್ಯ ಅತಿಥಿ, ಖ್ಯಾತ ಉದ್ಯಮಿಗಳು ಹಾಗೂ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಗೌರವಾಧ್ಯಕ್ಷರೂ ಆದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಮಾತನಾಡಿ “ಪಟ್ಲ ಫೌಂಡೇಷನ್ ಟ್ರಸ್ಟಿಗೆ ಮಹಿಳಾ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಮಹಿಳಾ ಘಟಕ ಇನ್ನಷ್ಟು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ” ಎಂದರು. ಇನ್ನೋರ್ವ ಮುಖ್ಯ ಅತಿಥಿ ಜಾಗತಿಕ ಬಂಟರ ಸಂಘಗಳ…

Read More

ಕೊಡಗು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಪರಿಷತ್ತಿನ 109ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ದಿನಾಂಕ 05-05-2023ರಂದು ಸಾಹಿತ್ಯ ಪರಿಷತ್ತಿನ ಸದಸ್ಯೆ ಶ್ರೀಮತಿ ಚೊಕ್ಕಾಡಿ ಪ್ರೇಮ ರಾಘವಯ್ಯ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಅವರು ಕನ್ನಡ ಸಾಹಿತ್ಯ ಪರಿಷತ್ತು ಕುರಿತು ಮಾತನಾಡುತ್ತಾ “ಕನ್ನಡ ನಾಡು, ನುಡಿ, ಸಂಸ್ಕೃತಿಗಳ ರಕ್ಷಣೆ, ಉಳಿವು ಮತ್ತು ಪರಿಚಯ ಇವುಗಳಿಗಾಗಿ ಸ್ಥಾಪನೆಯಾದ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು 108 ವರ್ಷಗಳ ಹಿಂದೆ 1915ರಲ್ಲಿ ಮೈಸೂರು ಸಂಸ್ಥಾನದ ದೊರೆಗಳಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದಿವಾನರುಗಳಾದ ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ರವರು ಸ್ಥಾಪಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು 1935ರಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ಎಂದು ಮರುನಾಮಕರಣಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಲೋಕದ ಬೆಳವಣಿಗೆಗೆ ಅಪಾರವಾದ ಕೊಡುಗೆ ನೀಡಿದೆ. ಹೋಬಳಿ ಮಟ್ಟದಲ್ಲಿಯೂ ಪರಿಷತ್ತಿನ ಘಟಕಗಳನ್ನು ರಚಿಸುವ ಮೂಲಕ ಪ್ರತಿ…

Read More

ಮುಲ್ಕಿ : ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ವತಿಯಿಂದ ದಿನಾಂಕ 05-05-2023ರಂದು ಶುಕ್ರವಾರ ಮುಲ್ಕಿಯ ಸ್ವಾಗತ್ ಹೊಟೇಲು ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆಯಲ್ಲಿ ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡುತ್ತಾ “ಕನ್ನಡ ಶಾಲೆಗಳು ಮುಚ್ಚುತ್ತಿವೆ. ಏಳೆಂಟು ಕನ್ನಡ ಶಾಲೆಗಳನ್ನು ನಡೆಸುತ್ತಿರುವ ನನಗೆ ಕನ್ನಡ ಶಾಲೆಗಳನ್ನು ನಡೆಸುವ ಸವಾಲುಗಳ ಅರಿವಿದೆ. ಸರಕಾರ ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ಕೊಡದೆ ಅನ್ಯಾಯ ಮಾಡುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸುವ ಕೆಲಸ ಆಗಬೇಕಾಗಿದೆ. ಅಂಗಡಿ ಸಂಸ್ಥೆಗಳ ಫಲಕಗಳು ಇಂಗ್ಲಿಷ್ ಭಾಷೆಗಳಲ್ಲೇ ಇವೆ. ಕನ್ನಡದಲ್ಲಿ ಕಡ್ಡಾಯವಾಗಿದ್ದರೂ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಬೆಂಗಳೂರಿನವರಲ್ಲದವರು ಅಧ್ಯಕ್ಷರಾಗುವುದು ಸಾಧ್ಯವೇ ಇಲ್ಲ ಎಂಬಂತಿದ್ದ ಸಾಹಿತ್ಯ ಪರಿಷತ್ತಿನಲ್ಲಿ ಮುಲ್ಕಿಯವನಾದ ನಾನು ಅಧ್ಯಕ್ಷನಾದೆ. ಸಾಹಿತ್ಯ ಪರಿಷತ್ತಿನಲ್ಲಿ ಅನೇಕ ಬದಲಾವಣೆಗಳನ್ನು ತಂದೆ. ಲಕ್ಷಾಂತರ ರೂಪಾಯಿಯ ದತ್ತಿನಿಧಿಗಳನ್ನು ಸ್ಥಾಪಿಸಿದೆ. ನಷ್ಟದಲ್ಲಿದ್ದ ಸಂಸ್ಥೆಯನ್ನು ಲಾಭದಾಯಕವನ್ನಾಗಿಸಿದೆ. ಸಿಬಂದಿಗಳಲ್ಲಿ ಶಿಸ್ತು ತರುವ ಪ್ರಯತ್ನ ಮಾಡಿದೆ. ವಾಹನ ಶುಲ್ಕ, ಇತರ ಯಾವುದೇ ಭತ್ಯೆ ಪಡೆದಿಲ್ಲ. ಪರಿಷತ್ತು 90…

Read More

Guru Saroja Vaidyanathan, born on 19 September 1937, is a world-renowned choreographer, writer, guru, and a notable exponent of Bharatanatyam. Guru Ji (Saroja Vaidyanathan) started learning at age seven under the accomplished Guru Lalitha of Saraswati Gana Nilayam, Chennai (disciple of Guru Kattumannar Muthukumaran Pillai of Thanjavur). Academically, she holds a degree in D.LITT in dance from Indira Kala Sangeet Vishwavidyalaya, Khairagarh, and has undergone training in Carnatic Music under Professor P. Sambamoorthy at Madras University. Coming from a timeline where the dance was considered a social taboo for upper-caste women, Guru Ji became a precedent for young girls by…

Read More

ಯಕ್ಷಗಾನ ಪ್ರಸಂಗಗಳು ಪದ್ಯ ರೂಪದಲ್ಲಿರುವ ಕಥಾ ವಸ್ತುಗಳಾಗಿವೆ. ಯಕ್ಷಗಾನ ಅರ್ಥಗಾರಿಕೆಗೆ ಪ್ರಸಂಗಗಳು ಮೂಲ ಪಠ್ಯಗಳಾಗಿರುತ್ತವೆ. ಪ್ರಸಂಗವು ಪ್ರದರ್ಶನದ ಸಂವಿಧಾನವಾಗಿರುತ್ತದೆ. ಭಾಗವತರು ಮತ್ತು ಕಲಾವಿದರು ಪ್ರಸಂಗನಿಷ್ಠರಾಗಿ ಕಥಾವಸ್ತುವನ್ನು ಮುಂದಕ್ಕೆ ಒಯ್ಯುತ್ತಾರೆ. ಯಕ್ಷಗಾನ ಪ್ರಸಂಗಕರ್ತನನ್ನು ಯಕ್ಷಕವಿ ಎಂದು ಕರೆಯುತ್ತಾರೆ. ಇಂದು ನಾವು ಪರಿಚಯ ಮಾಡುವ ಯಕ್ಷ ಕವಿ ಚಾರ ಪ್ರದೀಪ ಹೆಬ್ಬಾರ್.21.08.1983ರಂದು ಸೀತಾರಾಮ್ ಹೆಬ್ಬಾರ್ ಮತ್ತು ಶ್ರೀಮತಿ ಗಿರಿಜಾ ಹೆಬ್ಬಾರ್ ಇವರ ಮಗನಾಗಿ ಚಾರ ಪ್ರದೀಪ ಹೆಬ್ಬಾರ್ ಅವರ ಜನನ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿಯನ್ನು ಪಡೆದಿರುತ್ತಾರೆ. ಹೊಸ ಪ್ರಸಂಗಗಳ ಬಗ್ಗೆ ಆಕ್ಷೇಪಗಳಿವೆ, ಅದರ ಬಗ್ಗೆ ನಿಮ್ಮ ಅಭಿಪ್ರಾಯ:- ಯಕ್ಷಗಾನ ಪರಂಪರೆಗೆ ಚ್ಯುತಿ ಬರದ ರೀತಿಯಲ್ಲಿ ಪ್ರಸಂಗ ರಚನೆ. ಪರಂಪರೆಯನ್ನು ಉಳಿಸುವ ಬೆಳೆಸುವ ಕಲೆಯಾಗಬೇಕು, ಸಿನಿಮಾ ಮಾದರಿ ರಾಗಗಳನ್ನು ಯಕ್ಷಗಾನಕ್ಕೆ ಬಳಸಬಾರದು, ಶ್ರೀಮಂತ ಕಲೆಯನ್ನು ಉಳಿಸಿ ಬೆಳೆಸಬೇಕು. ಪದ್ಯ ಬರೆಯುವ ಬಗ್ಗೆ ನಿಮ್ಮ ನಿಲುವು ಏನು:- ಪ್ರಸಂಕರ್ತರು ಎಂದ ಮೇಲೆ ಪದ್ಯವನ್ನು ಸ್ವತಃ ಅವರೇ ಬರೆಯಬೇಕು. ಸಿನಿಮಾ ಮಾದರಿ ಪದ್ಯವನ್ನು ರಚಿಸಬಾರದು, ಕಲೆಯ ಪರಂಪರೆಗೆ…

Read More

ಹೆಗ್ಗೋಡು: ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2023-24ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆಯ ಬಾಬ್ತು ಭಾಗಶಃ ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಬಳಸಿ https://ninasam.org/diploma-announcement-2023/

Read More