Author: roovari

ಮಂಗಳೂರು : ಪೊಳಲಿ ಶಂಕರ ನಾರಾಯಣ ಶಾಸ್ತ್ರಿ ಸ್ಮಾರಕ ಸಮಿತಿಯು ಆಯೋಜಿಸಿದ ಗೌರವಾರ್ಪಣೆ ಕಾರ್ಯಕ್ರಮವು ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಸಂಘದ ಮಾಸಿಕ ಹುಣ್ಣಿಮೆ ತಾಳಮದ್ದಳೆ ಕಾರ್ಯಕ್ರಮ ಜೊತೆಗೆ ದಿನಾಂಕ 26-12-2023ರಂದು ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಮಿತಿಯ ಸಂಚಾಲಕರಾದ ಡಾ. ಪ್ರಭಾಕರ್ ಜೋಶಿ ಹಾಗೂ ಸುಚೇತಾ ಜೋಶಿ ದಂಪತಿಯನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ “ಪೊಳಲಿ ಶಾಸ್ತ್ರಿ ಸ್ಮಾರಕ ಸಮಿತಿಯ ಸಂಚಾಲಕ ಡಾ. ಎಂ. ಪ್ರಭಾಕರ ಜೋಶಿ ಅವರು ಬಹುಮುಖ ಪ್ರತಿಭಾ ಸಂಪನ್ನರಾಗಿ ಯಕ್ಷಗಾನ ಮಕರಂದವೆಂಬ ಬೃಹತ್ ಸಂಸ್ಮರಣಾ ಗ್ರಂಥದ ಸಂಪಾದಕತ್ವದಲ್ಲಿ ಶ್ರಮವಹಿಸಿ ಒಂದು ದಾಖಲೆ ಗ್ರಂಥವನ್ನಾಗಿ ರೂಪಿಸಿ ಶಾಸ್ತ್ರಿಗಳ ಹೆಸರನ್ನು ಚಿರಂತನಗೊಳಿಸಿದ್ದಾರೆ.”ಎಂದರು ಗೌರವ ಸ್ವೀಕರಿಸಿದ ಡಾ. ಜೋಶಿ ಮಾತನಾಡಿ “ತಾಳಮದ್ದಳೆ ಪ್ರವಚನ ಕ್ಷೇತ್ರಕ್ಕೆ ಪೊಳಲಿ ಶಾಸ್ತ್ರಿಯವರ ಕೊಡುಗೆ ಅಸಾಮಾನ್ಯವಾದುದು. 1930-70 ಅವಧಿಯಲ್ಲಿ ಶಾಸ್ತ್ರಿಗಳು ತಮ್ಮ ಅಮೋಘ ಸೇವೆಯಿಂದ ಸ್ಮರಣೀಯರಾಗಿರುವರು. ತಾಳಮದ್ದಲೆಯ ನವೋದಯದ ನೇತಾರರಲ್ಲಿ ಶಾಸ್ತ್ರಿಯವರೂ ಒಬ್ಬರು.…

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇವರು ಆಯೋಜಿಸುವ ‘ಸಂಸ್ಕೃತಿ ಉತ್ಸವ – 2024’ ಕಾರ್ಯಕ್ರಮವು ದಿನಾಂಕ 23-01-2024 ಮತ್ತು 24-01-2024ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯಲಿರುವುದು. ದಿನಾಂಕ 23-01-2024ರಂದು ಖ್ಯಾತ ಗಡಿನಾಡ ಕನ್ನಡ ಕಲಾವಿದರಾದ ಕಾಸರಗೋಡು ಚಿನ್ನ ಇವರಿಗೆ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ.) ಹೆಬ್ರಿ ಪ್ರಾಯೋಜಿತ ‘ಶಾರದಾ ಕೃಷ್ಣ’ ಪುರಸ್ಕಾರ – 2024’ವನ್ನು ನೀಡಿ ಗೌರವಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತೇಜಸ್ವಿ ಅನಂತ್ ತಂಡದವರಿಂದ ಭಾರತದಲ್ಲಿ ವಿಶಿಷ್ಟವೆನಿಸಿದ ಪಿಕ್ಸೆಲ್ ಪೋಯಿ, ಯನಿ ಸೈಕಲ್, ಜಗ್ಗಲರ್ ವಿಶೇಷ ಕಾರ್ಯಕ್ರಮ ನಡೆಯಲಿದೆ. ದಿನಾಂಕ 23-01-2024ರಂದು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ ಕಾಯ್ಕಿಣಿ ಇವರಿಗೆ ಶ್ರೀಮತಿ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024’ನ್ನು ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ನಾಡಿನ ಪ್ರಸಿದ್ಧ ಕಲಾವಿದರಿಂದ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2023-24ನೇ ಸಾಲಿನ ಹಿರಿಯ ಸಾಹಿತಿ ನಾ. ಡಿಸೋಜಾ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮ ಸಲುವಾಗಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಥೆ ಬರೆಯುವ ಸ್ಪರ್ಧೆಯು ದಿನಾಂಕ 29-01-2024ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಾಲೇಜಿನ ಮೂಲಕ ಈ ಕೆಳಕಂಡ ವಿಳಾಸಕ್ಕೆ ದಿನಾಂಕ 15-01-2024ರ ಒಳಗೆ ಕಳುಹಿಸಿಕೊಡಬೇಕು. ಎಂ.ಪಿ. ಕೇಶವಕಾಮತ್‌, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್‌.ಜೆ.ಎಸ್‌.ಆರ್‌.ವೈ. ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಕಾರ್ಯಪ್ಪ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ 9663254859 ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಇವರನ್ನು ಸಂಪರ್ಕಿಸಬಹುದಾಗಿದೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ವಿರಚಿತ ಸೀತಾಪಹಾರದ ಪೂರ್ವ ಭಾಗದ ರಾವಣ-ಮಂಡೋದರಿ, ರಾವಣ-ಮಾರೀಚ ಹಾಗೂ ಶ್ರೀರಾಮ ಸೀತಾ ಲಕ್ಷ್ಮಣ ದಿನಾಂಕ 07-01-2024ರಂದು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ, ಶ್ರೀಪತಿ ಭಟ್ ಉಪ್ಪಿನಂಗಡಿ, ಪರೀಕ್ಷಿತ್‌ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಪೂಕಳ ಲಕ್ಷ್ಮೀನಾರಾಯಣ ಭಟ್ ಮತ್ತು ಗುಡ್ಡಪ್ಪ ಬಲ್ಯ (ರಾವಣ), ಭಾಸ್ಕರ್ ಬಾರ್ಯ (ಮಂಡೋದರಿ), ಹರೀಶ್ ಆಚಾರ್ಯ ಬಾರ್ಯ (ಮಾರೀಚ), ಶ್ರೀರಾಮ (ಅಚ್ಯುತ ಪಾಂಗಣ್ಣಾಯ ಕೋಡಿಬೈಲು), ಸೀತೆ (ತಾರಾನಾಥ ಸವಣೂರು), ಗುಡ್ಡಪ್ಪ ಬಲ್ಯ (ಲಕ್ಷ್ಮಣ) ಸಹಕರಿಸಿದರು. ಕಾರ್ಯದರ್ಶಿ ಹಾಗೂ ಸಹ ಕಾರ್ಯದರ್ಶಿಗಳಾದ ಆನಂದ ಸವಣೂರು, ಅಚ್ಯುತ ಪಾಂಗಣ್ಣಾಯ ಪ್ರಾಯೋಜಿಸಿದ್ದರು. ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ಮೊದಲು ಯಕ್ಷಗಾನ ಪ್ರಸಂಗಕರ್ತ ಸಾಹಿತಿ ವಿದ್ವಾಂಸರಾದ ಪ್ರೊ. ಅಮೃತ ಸೋಮೇಶ್ವರರವರಿಗೆ ನುಡಿನಮನ ಸಲ್ಲಿಸಲಾಯಿತು.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಪ್ರೊ. ಅಮೃತ ಸೋಮೇಶ್ವರರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 08-01-2024ರಂದು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಡಾ. ವಸಂತಕುಮಾರ ಪೆರ್ಲ ಮಾತನಾಡಿ “ಅಪಾರ ಪಾಂಡಿತ್ಯ ಹೊಂದಿದ್ದ ನಗುಮೊಗದ ನಿಗರ್ವಿ, ನಡೆ ಹಾಗೂ ನುಡಿಯಲ್ಲಿ ಉನ್ನತ ಆದರ್ಶಗಳನ್ನೇ ಪರಿಪಾಲಿಸಿದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರರದು. ಅವರು ಕರಾವಳಿಯ ಮೂರೂ ಜಿಲ್ಲೆಗಳ ಸಮರ್ಥ ಪ್ರತಿನಿಧಿಯಾಗಿ ಗೋಚರಿಸುತ್ತಿದ್ದರು ಮತ್ತು ಸರ್ವರನ್ನೂ ಸಮಭಾವ ಮತ್ತು ಸಮಪ್ರೀತಿಯಿಂದ ಕಾಣುತ್ತಿದ್ದರು. ಸಾಹಿತ್ಯ, ಕಲೆ, ಯಕ್ಷಗಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅವರದ್ದು ಶಿಖರಪ್ರಾಯ ಸಾಧನೆ.” ಎಂದು ನೆನಪಿಸಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಮಾರ್ಗದರ್ಶಕ ಸಮಿತಿ ಸದಸ್ಯ ಡಾ. ಮುರಲೀಮೋಹನ್ ಚೂಂತಾರು, ಕಸಾಪ ಕೇಂದ್ರ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿದರು. ಘಟಕದ ಡಾ. ಮೀನಾಕ್ಷಿ ರಾಮಚಂದ್ರ ಅಮೃತರೊಂದಿಗಿನ ಒಡನಾಟ, ಅವರ ಮಾರ್ಗದರ್ಶನ, ಒಲುಮೆ ಮತ್ತು ನರ್ಮದಕ್ಕನೂ ಸೇರಿ ಮನೆಯವರೆಲ್ಲರ…

Read More

ಶಿವಮೊಗ್ಗ : ಶಿವಮೊಗ್ಗದ ಮಾನಸ ಇಂಟರ್ನ್ಯಾಷನಲ್ ಸ್ಕೂಲ್ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ ‘ಮಾನಸ ರತ್ನ ಪ್ರಶಸ್ತಿ’ಯನ್ನು ಖ್ಯಾತ ರಂಗಭೂಮಿ ಕಲಾವಿದ, ಜನಪ್ರಿಯ ಕಾರ್ಯಕ್ರಮ ನಿರೂಪಕ, ಕ್ರಿಯಾಶೀಲ ಶಿಕ್ಷಕ ಹಾಗೂ ಹಲವಾರು ಸಾಮಾಜಿಕ ಶೈಕ್ಷಣಿಕ ಧಾರ್ಮಿಕ ಹಾಗೂ ನೌಕರರ ಸಂಘಟನೆಯ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುವ ಸುಬ್ರಹ್ಮಣ್ಯ ಜಿ. ಉಪ್ಪುಂದ ಇವರಿಗೆ ದಿನಾಂಕ 04-01-2024ರಂದು ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು. ಲಾವಣ್ಯ (ರಿ.) ಬೈಂದೂರು ನಾಟಕ ಸಂಸ್ಥೆಯ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನೆಗೆದ್ದಿರುವ ಸುಬ್ರಹ್ಮಣ್ಯ ಜಿ. ಉಪ್ಪುಂದ ಅವರು ಕಳೆದ ಎರಡು ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ಅಭಿನಯಿಸಿದ ‘ಮರಣ ಮೃದಂಗ’ ನಾಟಕದಲ್ಲಿ ಇವರ ಶ್ರೇಷ್ಠ ಅಭಿನಯವನ್ನು ಗುರುತಿಸಿ, ಕಾರ್ಯಕ್ರಮ ನಿರೂಪಕರಾಗಿ, ಶಿಕ್ಷಕರ ಮತ್ತು ನೌಕರರ ಸಂಘಟನೆ ಮುಖ್ಯಸ್ಥರಾಗಿ, ಹಲವಾರು ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡ ಪರಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.…

Read More

ಉಡುಪಿ : ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕ ಶ್ರೀ ಶಿವಕುಮಾರ ಅಳಗೋಡು ಅವರ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ. ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ಧ ಯಕ್ಷಕವಿಯಾಗಿರುವ ಶ್ರೀ ಶಿವಕುಮಾರರು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್‌ಎಸ್. ಆರ್. ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ರಚಿಸಿದ್ದಾರೆ. ಶ್ರೀಯುತರು ಮಂಗಳೂರು ವಿ.ವಿ. ಯಿಂದ ಕನ್ನಡ ಎಂ.ಎ. ಪದವಿಯನ್ನು ದ್ವಿತೀಯ ರ‍್ಯಾಂಕ್‌ನೊಂದಿಗೆ ಪಡೆದಿದ್ದು, ಎನ್.ಇ.ಟಿ., ಕೆ.ಎಸ್.ಇಟಿ. ಪರೀಕ್ಷೆಗಳಲ್ಲೂ ಉತ್ತೀರ್ಣರಾಗಿರುತ್ತಾರೆ. 9 ವಿಭಿನ್ನ ಕೃತಿಗಳನ್ನು ಪ್ರಕಟಿಸಿರುವ ಇವರು ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ನಿಟ್ಟೂರು ಅಳಗೋಡು ಸಮೀಪದ ಶ್ರೀಮತಿ ಗೀತಾ ಮತ್ತು ಶ್ರೀ ಅನಂತಮೂರ್ತಿಯವರ ಸುಪುತ್ರರಾಗಿರುತ್ತಾರೆ.

Read More

ಬೆಂಗಳೂರು : ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ ರಾಜ್ಯಮಟ್ಟದ ಮಹಿಳಾ ಸಮಾವೇಶ ‘ಅಭಿಜಾತೆ-2024’ ದಿನಾಂಕ 06 ಮತ್ತು 07-01-2024ರಂದು ಬೆಂಗಳೂರಿನ ಶಂಕರಪುರಂನಲ್ಲಿರುವ ಶ್ರೀ ಶೃಂಗೇರಿ ಶಂಕರಮಠದ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಲಾ ಸಾಧಕಿ ಭರತಾಂಜಲಿ ನೃತ್ಯ ಸಂಸ್ಥೆಯ ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರನ್ನು ‘ಧೀ ಶಕ್ತಿ’ ಪುರಸ್ಕಾರ ನೀಡಿ ಸಮ್ಮಾನಿಸಲಾಯಿತು. ಸಂಚಾಲಕಿ ಡಾ. ಶುಭ ಮಂಗಳಾ ಸುಧೀರ್ ಹಾಗೂ ಸಮ್ಮೇಳನ ಕಾರ್ಯಾಧ್ಯಕ್ಷೆ ಮೇದಿನಿ ಉದಯ ಗರುಡಾಚಾರ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಡಿಕೇರಿ : ಕೊಡಗು ಜಿಲ್ಲಾ, ವಿರಾಜಪೇಟೆ ತಾಲೂಕು ಅಮೃತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪ್ರೌಢಶಾಲೆ ಕೊಂಡಂಗೇರಿ ಇವುಗಳ ವತಿಯಿಂದ ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿನಿಧಿ ಕಾರ್ಯಕ್ರಮವು ದಿನಾಂಕ 04-01-2024ರಂದು ಕೊಂಡಂಗೇರಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ವಿರಾಜಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕೊಂಡಂಗೇರಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಯಂತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಕನ್ನಡ ಭಾಷೆಯನ್ನು ಉಳಿಸಿ, ಸಶಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕನ್ನಡ ಸಾಹಿತ್ಯದ ಅಭಿರುಚಿಯನ್ನು ಮೂಡಿಸಿಕೊಳ್ಳಬೇಕು.” ಎಂದು ಹೇಳಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ‘ಕೊಡಗಿನ ಮಹಿಳಾ ಸಾಹಿತಿಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಸೋಮೆಯಂಡ ಕೌಶಲ್ಯ ಸತೀಶ್ “ಮಹಿಳೆಯರ ಪ್ರತಿಭೆ ಅನಾವರಣಗೊಳ್ಳಲು ಪುರುಷರ ಸಹಕಾರ ಅತ್ಯಗತ್ಯ. ಕುಟುಂಬದ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಮಕ್ಕಳ ಭವಿಷ್ಯ ರೂಪಿಸಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು.”…

Read More

ಧಾರವಾಡ : ಕಾದಂಬರಿ ಪಿತಾಮಹ ಗಳಗನಾಥರ 155ನೇ ಜನ್ಮದಿನೋತ್ಸವ ಹಾಗೂ 2022-23ನೇ ಸಾಲಿನ ‘ಶ್ರೀ ಗಳಗನಾಥ ಮತ್ತು ನಾ. ಶ್ರೀ. ರಾಜಪುರೋಹಿತ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 05-01-2024ನೇ ಶುಕ್ರವಾರದಂದು ಧಾರವಾಡದ ಅಲೂರು ವೆಂಕಟರಾವ್ ಸ್ಮಾರಕ ಭವನದಲ್ಲಿ ನಡೆಯಿತು. ಗಳಗನಾಥ ಮತ್ತು ನಾ. ಶ್ರೀ. ರಾಜಪುರೋಹಿತ ಪ್ರತಿಷ್ಠಾನ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ರೂಪಾಯಿ 50 ಸಾವಿರ ನಗದನ್ನು ಒಳಗೊಂಡ 2022-23ನೇ ಸಾಲಿನ ‘ಗಳಗನಾಥ ಪ್ರಶಸ್ತಿ’ಯನ್ನು ಸಾಹಿತಿ ಜಯಂತ ಕಾಯ್ಕಿಣಿಗೆ ಹಾಗೂ ಅಷ್ಟೇ ಮೊತ್ತದ ‘ನಾ. ಶ್ರೀ. ರಾಜಪುರೋಹಿತ ಪ್ರಶಸ್ತಿ’ಯನ್ನು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡಮಿಯ ಅಧ್ಯಕ್ಷರಾದ ಡಾ. ದೇವರಕೊಂಡಾ ರೆಡ್ಡಿಯವರಿಗೆ, ಕಥೆಗಾರ ಹಾಗೂ ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಪ್ರದಾನಿಸಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಸಾಹಿತಿ ಜಯಂತ ಕಾಯ್ಕಿಣಿ ಮಾತನಾಡಿ “ನಾನು ಕಾದಂಬರಿ ಬರೆದಿಲ್ಲ. ಆದಾಗ್ಯೂ ಗಳಗನಾಥ ಅವರ ಹೆಸರಿನ ಪ್ರಶಸ್ತಿ ನೀಡಿರುವುದು ಖುಷಿ ಇದೆ. ಆದರೆ, ಇದು ರಾವಣನ ಕೈಯಲ್ಲಿ ಆತ್ಮಲಿಂಗ ಕೊಟ್ಟಂತೆ ಅನುಭವ ನೀಡಿದೆ ಎಂದರು. ಅನಾಮಿಕರಾಗಿ ಬರಿಯೋದು,…

Read More