Subscribe to Updates
Get the latest creative news from FooBar about art, design and business.
Author: roovari
ಶ್ರಾವಣದ ಸಂಜೆ. ಧೋ ಎಂದು ಸುರಿದ ಮಳೆ ಕೆಲವೇ ನಿಮಿಷಗಳಲ್ಲಿ ಗತಿ ಬದಲಿಸಿ ಸೋನೆಯಾಗಿ ಜಿನುಗತೊಡಗಿತ್ತು. ಅಷ್ಟರಲ್ಲಿ ಮೋಡ ಕಪ್ಪಿಟ್ಟು ಮತ್ತೊಂದು ಜಲಧಾರೆಗೆ ಸಿದ್ಧತೆ ನಡೆಸಿತ್ತು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಫಾದರ್ ಎಲ್.ಎಫ್.ರಸ್ಕಿನ್ಹ ಸಭಾಂಗಣದಲ್ಲಿ ಮೋಹಕ ಆಲಾಪವು ‘ಜೋಡ್’ನಲ್ಲಿ ಲಯವನ್ನು ಸಂಧಿಸಿ ‘ಜಾಲಾ’ದತ್ತ ಜಾರಿತ್ತು. ತಾಳದ ಜಾಡು ಹಿಡಿಯಲು ಸಜ್ಜಾಗಿದ್ದ ಶ್ರೋತೃಗಳು ರಸಯಾತ್ರೆಗೆ ಮನಸನ್ನು ಶ್ರುತಿಗೊಳಿಸುತ್ತಿದ್ದರು. ಮಂಗಳೂರಿನಲ್ಲಿ ದಿನಾಂಕ 25 ಆಗಸ್ಟ್ 2024ರಂದು ನಡೆದ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ ಸಂಗೀತ ಪ್ರೇಮಿಗಳ ಮನಸೂರೆಗೊಂಡಿತು. ಮುಂಬೈಯ ಸತ್ಯೇಂದ್ರಸಿಂಗ್ ಅವರ ಸಂತೂರ್ ವಾದನ ಮತ್ತು ಧಾರವಾಡದ ಸುಜಯೀಂದ್ರ ಅವರ ಗಾಯನ ಮಳೆ ರಾಗಗಳ ರಸ ಉಣಿಸಿತು. ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನ ಆಯೋಜಿಸಿದ್ದ ವಾದನ ಮತ್ತು ಗಾಯನ ಕಾರ್ಯಕ್ರಮ ‘ರಿಮ್ಜಿಮ್’ ತಣ್ಣಗಿನ ಸಂಜೆಯಲ್ಲಿ ಮಳೆರಾಗಗಳ ಬಿಸುಪು ನೀಡಿ ರಸಿಕರನ್ನು ಪುಳಕಗೊಳಿಸಿತು. ಸಂತೂರ್ನಲ್ಲಿ ಮುಂಬೈಯ ಸತ್ಯೇಂದ್ರ ಸಿಂಗ್ ಅವರು ‘ರಾಗ್ ಮೇಫ್’ ನುಡಿಸಿ ಕೋಮಲ ಶುದ್ಧ ಸ್ವರಗಳ ಲಾಲಿತ್ಯ ಪರಿಚಯಿಸಿದರು. ಗಾಯನ ಪ್ರಸ್ತುತಪಡಿಸಿದ ಹುಬ್ಬಳ್ಳಿಯ…
ಧಾರವಾಡ: ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು 2024ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಅಪ್ರಕಟಿತ ಕಥಾಸಂಕಲನಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು ರೂಪಾಯಿ 20,000 ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಆಸಕ್ತ ಲೇಖಕ/ಲೇಖಕಿಯರು ನಿಯಮಗಳಿಗನುಗುಣವಾಗಿ ಹಸ್ತಪ್ರತಿಗಳನ್ನು ಕಳುಹಿಸಲು ಸೂಚಿಸಲಾಗಿದೆ. ನಿಯಮಗಳು * ಈ ಕಥಾ ಪ್ರಶಸ್ತಿಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. * ಲಿಂಗ, ವಯೋಮಿತಿ, ಜಾತಿ, ಧರ್ಮ, ಪ್ರದೇಶ ಸೇರಿದಂತೆ ಯಾವುದೇ ಕೃತಕ ಮಾನದಂಡಗಳಿರುವುದಿಲ್ಲ. ಗುಣಮಟ್ಟವೊಂದೇ ಆಯ್ಕೆಯ ಮಾನದಂಡ. * ಕಥೆಗಳು ಈ ಮೊದಲು ಪುಸ್ತಕ ರೂಪದಲ್ಲಿ ಪ್ರಕಟವಾಗಿರಬಾರದು. ಪತ್ರಿಕೆ ಮತ್ತು ವಿಶೇಷಾಂಕಗಳಲ್ಲಿ (ಪ್ರಿಂಟ್ ಅಥವಾ ಡಿಜಿಟಲ್ ಮೀಡಿಯಾ) ಪ್ರಕಟವಾದ ಕಥೆಗಳನ್ನು ಕಳುಹಿಸಬಹುದು. * ಕನಿಷ್ಠ 5 ಮತ್ತು ಗರಿಷ್ಠ 20 ಅಪ್ರಕಟಿತ ಕಥೆಗಳನ್ನು ಕಳುಹಿಸಬಹುದು. * ಕಥೆಗಳನ್ನು ಎ-4 ಅಳತೆಯ ಕಾಗದದಲ್ಲಿ 12ಫಾಂಟ್ ಅಳತೆಯಲ್ಲಿ ತಪ್ಪಿಲ್ಲದಂತೆ ಬೆರಳಚ್ಚು ಮಾಡಿ ಕಳುಹಿಸಬೇಕು. * ಹಸ್ತಪ್ರತಿಗಳು ಕನಿಷ್ಠ 80 ಪುಟ ಮತ್ತು ಗರಿಷ್ಠ 120…
ಕಾಸರಗೋಡು: ಹೊಸಕೋಟೆಯ ಶ್ರೀ ನವಚೇತನ ನೃತ್ಯ ಕಲಾ ಅಕಾಡೆಮಿಯ 48ನೇ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದಿನಾಂಕ 23 ಆಗಸ್ಟ್ 2024ರಂದುಜರಗಿತು. ಈ ಸಂದರ್ಭದಲ್ಲಿ ಹೊರನಾಡ ಕನ್ನಡಿಗ ಸಾಧನೆಗಾಗಿ ಗುರುಪ್ರಸಾದ್ ಕೋಟೆಕಣಿ ಅವರನ್ನು `ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ನೀಡಿ ಸಮ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಜ್ಯ ನೃತ್ಯ ಪಟು ಗುರು ವಿದ್ವಾನ್ ಕೋಲಾರ ರಮೇಶ್, ಕೆಂಬಳಲುಪಾಳ್ಯ ಶ್ರೀ ನಾಗರಾಜು ಸ್ವಾಮಿ, ಕಲಾಶ್ರೀ ಗುರು ಸುಪರ್ಣ ವೆಂಕಟೇಶ್, ಬೆಂಗಳೂರು ಪೋಲೀಸ್ ವರಿಷ್ಠಾಧಿಕಾರಿ ಎ. ನಾಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕ ವಿ. ಎನ್. ಮಲ್ಲಿಕಾರ್ಜುನ ಸ್ವಾಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಡಿ.ದೇವರಾಜ್, ಅಂತರಾಷ್ಟ್ರೀಯ ಗಾಯಕ ಗೊ. ನಾ. ಸ್ವಾಮಿ, ಅಖಿಲ ಭಾರತ ಜನಪದ ಒಕ್ಕೂಟ ಅಧ್ಯಕ್ಷ ಕೆ. ನಾಗರಾಜ್, ಎಂಡೇವರ್ಸ್ ಇಂಟರ್ ನ್ಯಾಶನಲ್ ಸ್ಕೂಲ್ ಇಲ್ಲಿನ ಸಂಸ್ಥಾಪಕ ಎಂ. ಎಲ್. ಶಿವಶಂಕರ್ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು : 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ’ ಪ್ರಶಸ್ತಿಗಾಗಿ ಕಾಸರಗೋಡಿನ ಹಿರಿಯ ಸಂಶೋಧಕ ಡಾ. ಪಿ. ಶ್ರೀಕೃಷ್ಣ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಮೇರು ವಿದ್ವಾಂಸರಾದ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಗಳ ಬಂಧು-ಮಿತ್ರರು ಈ ದತ್ತಿಯನ್ನು ಸ್ಥಾಪಿಸಿದ್ದು, ಹಳಗನ್ನಡ ಸಾಹಿತ್ಯ, ಛಂದಸ್ಸು, ನಿಘಂಟು ರಚನೆ, ಗ್ರಂಥ ಸಂಪಾದನೆ, ಅನುವಾದ, ಭಾಷಾಶಾಸ್ತ್ರ ಮೊದಲಾದ ಶಾಸ್ತ್ರ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಕಾಸರಗೋಡಿನ ಪತ್ರೊಡಿ ಎಂಬ ಚಿಕ್ಕ ಗ್ರಾಮದಲ್ಲಿ ಜನಿಸಿದ ಡಾ. ಪಿ. ಶ್ರೀಕೃಷ್ಣ ಭಟ್ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿ ಮತ್ತು ಚಿನ್ನದ ಪದಕದೊಂದಿಗೆ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ‘ಕನ್ನಡ ವ್ಯಾಕರಣ ಪರಂಪರೆಯ ಮೇಲೆ ಸಂಸ್ಕೃತದ ಪ್ರಭಾವ’ ಎನ್ನುವ ವಿಷಯದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದರು. ಸುರತ್ಕಲ್ ನಲ್ಲಿ…
ಭಾರತದ ಜಾನಪದ ರಂಗಭೂಮಿಗೆ ಕರ್ನಾಟಕ ಕೊಟ್ಟ ಮಹತ್ತ್ವದ ದೇಣಿಗೆ ಎಂದರೆ ‘ಯಕ್ಷಗಾನ’. ಇದೊಂದು ಪರಿಪೂರ್ಣವೂ ವಿಶಿಷ್ಟವೂ ಆದ ಸಮ್ಮಿಶ್ರ ಕಲೆ. ಸಂಗೀತ, ಸಾಹಿತ್ಯ, ಮಾತುಗಾರಿಕೆ, ಅಭಿನಯ, ನೃತ್ಯ, ಅರ್ಥಾತ್ ವಾಚಿಕ, ಆಂಗಿಕ, ಆಹಾರ್ಯ, ಸಾತ್ವಿಕಗಳೆಲ್ಲ ಅಲ್ಲಿ ಏಕತ್ರಗೊಂಡಿರುವುದು ಗಮನೀಯ ಅಂಶ. ಯಕ್ಷಗಾನ ಜನಪದ ಸಂಸ್ಕೃತಿಯ ಗತಿಬಿಂಬವಾಗಿರುವಂತೆ ಅದು ಕನ್ನಡ ಸಂಸ್ಕೃತಿಯ ಜೀವಾಳವೂ ಆಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಕನ್ನಡ ಭಾಷೆ ಇಂದಿಗೂ ಶುದ್ಧವಾಗಿ ಉಳಿದು ಬಂದಿರುವುದು ಯಕ್ಷಗಾನದಲ್ಲಿ ಮಾತ್ರ. ಡಾ. ಗೋಪಾಲಕೃಷ್ಣ ಎಲ್. ಹೆಗಡೆ ವಿರಚಿತ ‘ಶೇಣಿ ಭಾರತ’ ಒಂದು ವಿದ್ವತ್ಪೂರ್ಣವೂ ಹಾಗೂ ಸೃಜನಶೀಲ ಪ್ರತಿಭೆಯ ವಿಲಾಸವನ್ನು ತೋರುವ ಉದ್ಗ್ರಂಥ. ವ್ಯಾಸಭಾರತವನ್ನು ಮರು ಸೃಷ್ಟಿ ಮಾಡಿದ ಕವಿ ಕೃತಿಗಳನ್ನು ಪಂಪ ಭಾರತ, ಕುಮಾರವ್ಯಾಸ ಭಾರತ ಎಂದು ಕರೆಯುವ ಹಾಗೆಯೇ ಶೇಣಿ ಭಾರತವೆಂದರೆ ಮಹಾಭಾರತದ ಪ್ರಸಂಗಗಳಿಗೆ ಬಹುಮುಖ ಪ್ರತಿಭೆಯ ಕಲಾವಿದ ಶೇಣಿ ಗೋಪಾಲಕೃಷ್ಣ ಭಟ್ ಅವರು ಅಲ್ಲಲ್ಲಿ ಹೇಳಿದ ಅರ್ಥವನ್ನು ಸಂಗ್ರಹಿಸಿ ನಿರ್ಮಿಸಿದ ಆಶು ಕಾವ್ಯ ಕೃತಿ. ಇದು ಇಪ್ಪತ್ತೊಂದನೆಯ ಶತಮಾನದ ಮಹತ್ವದ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 02 ಸೆಪ್ಟೆಂಬರ್ 2024ರಂದು ‘ವಾಲಿ ಮೋಕ್ಷ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್, ಗುಡ್ಡಪ್ಪ ಬಲ್ಯ, ಮಾಂಬಾಡಿ ವೇಣುಗೋಪಾಲ ಭಟ್, ಶುಭಾ ಅಡಿಗ ಹಾಗೂ ಭಾಸ್ಕರ್ ಬಾರ್ಯ ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.
ಮಂಗಳೂರು : ಕರಾವಳಿ ಲೇಖಕಿಯರ ವಾಚಕಿಯರ ಸಂಘದ ವತಿಯಿಂದ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣ ಕಾರ್ಯಕ್ರಮವು ಉರ್ವಸ್ಟೋರ್ ನ ಸಾಹಿತ್ಯ ಸದನದಲ್ಲಿ ದಿನಾಂಕ 24 ಆಗಸ್ಟ್ 2024ರಂದು ನಡೆಯಿತು. ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮನುಷ್ಯ ಜನ್ಮದ ಕ್ಷಣಿಕತೆ ಹಾಗೂ ನಶ್ವರತೆಗಳನ್ನು ತಿಳಿಸುತ್ತಾ ಇಂತಹ ಸಂಸ್ಮರಣ ಕಾರ್ಯಕ್ರಮಗಳು ದೇಹ ಅಳಿದರೂ ಖ್ಯಾತಿ ಅಮರವೆಂಬಂತೆ ಮಾನವರಿಗೆ ಮರುಜನ್ಮ ನೀಡುತ್ತವೆ ಎಂದು ಹೇಳಿದರು. ಡಾ. ಕೆ.ವಿ. ಜಲಜಾಕ್ಷಿಯವರ ಪತಿ ಹಾಗೂ ಕಾರ್ಯಕ್ರಮದ ಪ್ರಮುಖ ರೂವಾರಿ ಡಾ. ವಿ.ಜಿ. ಭಟ್ ಇವರು ಪ್ರಾಸ್ತಾವಿಕ ಭಾಷಣ ಮಾಡಿ ಜಲಜಾಕ್ಷಿಯವರ ಬಹುಮುಖ ಪ್ರತಿಭೆಯ ಜೀವನವನ್ನು ಕೊಂಡಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ. ಸೋಮಣ್ಣರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಡಾ. ಜಲಜಾಕ್ಷಿಯವರ ಸಾಹಿತ್ಯ ಸೇವೆ ಹಾಗೂ ವೃತ್ತಿ ನಿಷ್ಠೆಯನ್ನು ಶ್ಲಾಘಿಸಿದರು. “ಪ್ರಸ್ತುತ ಸಾಮಾಜಿಕ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಅತೀ ಅಗತ್ಯ.…
ಸುರತ್ಕಲ್: ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಮತ್ತು ನಾಗರಿಕ ಸಲಹಾ ಸಮಿತಿ (ರಿ), ಸುರತ್ಕಲ್ ಆಯೋಜಿಸುತ್ತಿರುವ ಸರಣಿ ಕಾರ್ಯಕ್ರಮ ‘ಉದಯರಾಗ – 55’ ದಿನಾಂಕ 01 ಸೆಪ್ಟೆಂಬರ್ 2024ರಂದು ಸುರತ್ಕಲ್ ಮೇಲು ಸೇತುವೆಯ ತಳಭಾಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಬ್ಯಾಂಕ್ ಪ್ರಬಂಧಕ ಮತ್ತು ರೋಟರಿ ಕ್ಲಬ್ ಸುರತ್ಕಲ್ ಇದರ ಸಾಮಾಜಿಕ ಸೇವಾ ವಿಭಾಗದ ನಿರ್ದೇಶಕ ರಾಮಚಂದ್ರ ಬಿ. ಕುಂದರ್ ಮಾತನಾಡಿ “ಸಂಗೀತವನ್ನು ಆಲಿಸಿದಾಗ ಮನಸ್ಸಿಗೆ ಸಂತೋಷವಾಗುವುದರೊಂದಿಗೆ ಮಾನಸಿಕ ಸಮಸ್ಯೆಗಳನ್ನು ಹೋಗಲಾಡಿಸಲೂ ಸಾಧ್ಯವಿದೆ. ಔದ್ಯೋಗಿಕ ಒತ್ತಡ ನಿವಾರಣೆಗೆ ಸಂಗೀತ ಅತ್ಯಂತ ಉಪಯುಕ್ತವಾದದ್ದು. ಸಂಗೀತದ ಆಸ್ವಾದಿಸುವಿಕೆಯಿಂದ ಕಾರ್ಯಕ್ಷಮತೆಯನ್ನು ವರ್ಧಿಸಲು ಸಾಧ್ಯ.” ಎಂದು ನುಡಿದರು. ಕಾರ್ತಿಕ್ ರಾವ್ ಇಡ್ಯಾ ಇವರ ನಿರ್ದೇಶನದಲ್ಲಿ ‘ಗಾಯನ ಮಿತ್ರರು ಸುರತ್ಕಲ್’ ಇವರಿಂದ ನಾಮ ಸಂಕೀರ್ತನ ಕಾರ್ಯಕ್ರಮ ನಡೆಯಿತು. ಹಾಡುಗಾರಿಕೆಯಲ್ಲಿ ಸಂಪತ್ ಎಸ್. ಬಿ. ಮತ್ತು ಶ್ರೀನಿಧಿ ರಾವ್, ಸಹಗಾಯನದಲ್ಲಿ ಸೌರವ್ ಶ್ರೀಯಾನ್, ಶೈಲೇಶ್ ಬೈಕಂಪಾಡಿ ಮತ್ತು ಲಕ್ಷ್ಮೀಶ ಸೂರಿಂಜೆ, ಹಾರ್ಮೋನಿಯಂನಲ್ಲಿ ವಿಜಯ್ ಆಚಾರ್ಯ ಕುಳಾಯಿ, ತಬಲಾದಲ್ಲಿ…
ಪ್ರಸಿದ್ಧ ‘ಸಾಧನ ಸಂಗಮ ಡಾನ್ಸ್ ಸೆಂಟರ್‘ ಇದರ ನೃತ್ಯಗುರುಗಳಾದ ಜ್ಯೋತಿ ಪಟ್ಟಾಭಿರಾಮ್ ಮತ್ತು ಡಾ. ಸಾಧನಾ ಶ್ರೀ ಗುರುದ್ವಯರ ಕಾಳಜಿಪೂರ್ಣ ಬದ್ಧತೆಯ ಭರತನಾಟ್ಯ ಮಾರ್ಗದರ್ಶನದಲ್ಲಿ ರೂಹು ತಳೆದ ಕಲಾಶಿಲ್ಪ ಕು. ಧೃತಿ ಪಿ. ಶೆಟ್ಟಿ ಬಹುಮುಖ ಪ್ರತಿಭೆ. ಶ್ರೀಮತಿ ಶೈಲಜಾ ಮತ್ತು ಪ್ರಶಾಂತ್ ಟಿ. ಇವರ ಪುತ್ರಿಯಾದ ಧೃತಿ ಕಳೆದ ಹತ್ತು ವರ್ಷಗಳ ತನ್ನ ಸತತ ಪರಿಶ್ರಮದ ಅಭ್ಯಾಸದಿಂದ, ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದ 5 ಹಂತಗಳ ಪರೀಕ್ಷೆಗಳು ಮತ್ತು ಕರ್ನಾಟಕ ಸರ್ಕಾರದ ಜ್ಯೂನಿಯರ್ ಮತ್ತು ಸೀನಿಯರ್ ನೃತ್ಯಪರೀಕ್ಷೆಗಳಲ್ಲಿ ಅತ್ಯುಚ್ಚ ಅಂಕಗಳನ್ನು ಗಳಿಸಿದ ವೈಶಿಷ್ಟ್ಯ ಅವರದು. ಎನ್. ಸಿ. ಸಿ. ಯಲ್ಲಿ ಮೆಡಲ್ ಗಳಿಸಿರುವ ಬಿ. ಕಾಂ. ವಿದ್ಯಾರ್ಥಿನಿ ಧೃತಿ, 8 ಸೆಪ್ಟೆಂಬರ್ 2024ರ ಭಾನುವಾರ ಬೆಳಗ್ಗೆ 10 ಗಂಟೆಗೆ ಬಸವೇಶ್ವರ ನಗರದ ಕೆ. ಇ. ಎ. ಪ್ರಭಾತ್ ರಂಗಮಂದಿರದಲ್ಲಿ ವಿದ್ಯುಕ್ತವಾಗಿ ತನ್ನ ರಂಗಪ್ರವೇಶವನ್ನು ‘’ನೃತ್ಯ ದ್ಯುತಿ’’ ಎಂಬ ವಿಶಿಷ್ಟ ಶೀರ್ಷಿಕೆಯಲ್ಲಿ ನೆರವೇರಿಸಿಕೊಳ್ಳಲಿದ್ದಾರೆ. ಇವರ ಸುಮನೋಹರ ನೃತ್ಯವಲ್ಲರಿಯನ್ನು ಕಣ್ತುಂಬಿಕೊಳ್ಳಲು ಎಲ್ಲಾ ಕಲಾರಸಿಕರಿಗೂ…
ಧಾರವಾಡ : ಅಭಿನಯ ಭಾರತಿ (ರಿ.) ಇದರ ವತಿಯಿಂದ ‘ವಜ್ರ ಸಿರಿ ರಂಗೋತ್ಸವ 2024’ ಕಾರ್ಯಕ್ರಮವು ಧಾರವಾಡ ಕರ್ನಾಟಕ ಕಾಲೇಜಿನ ಆವರಣದ ಸೃಜನಾ ರಂಗಮಂದಿರದಲ್ಲಿ ದಿನಾಂಕ 31 ಆಗಸ್ಟ್ 2024ರಂದು ಪ್ರಾರಂಭವಾಯಿತು. ವಜ್ರ ಸಿರಿ ರಂಗೋತ್ಸವದ ಪ್ರಥಮ ದಿನದ ಚಾಲನೆಯನ್ನು ಡಾ. ಅಜಿತ ಪ್ರಸಾದ ಇವರು ನೆರವೇರಿಸುತ್ತ “ದಿ. ಡಾ. ನಾ. ವಜ್ರಕುಮಾರ ಇವರು ಧರ್ಮಧಿಕಾರಿ ಡಿ. ಡಾ. ವೀರೇಂದ್ರ ಹೆಗ್ಗಡೆಯವರ ಅನುಗ್ರಹದಿಂದ ಅಳಿವಿನಂಚಿನ್ನಲ್ಲಿದ್ದ ಜೆ.ಎಸ್.ಎಸ್. ಸಂಸ್ಥೆಗಳನ್ನು ಉಳಿಸಿದ ರೀತಿ, 49 ವರ್ಷ ಕಾಲ ಸತತವಾಗಿ ಬೆಳೆಸಿದ ರೀತಿ ಮತ್ತು ಸಾಂಸ್ಕೃತಿಕ, ಶೈಕ್ಷಣಿಕ ವಾತಾವರಣಕ್ಕೆ ಪೂರಕವಾಗಿ ಅಭಿವೃದ್ಧಿಗೊಳಿಸಿದ ರೀತಿಯನ್ನು ಮರೆಯಲಾಗದು. ಈ ದಿಕ್ಕಿನಲ್ಲಿ ಅಭಿನಯ ಭಾರತಿ ಇಂದು ಮಾಡುತ್ತಿರುವ ‘ವಜ್ರ ಸಿರಿ ರಂಗೋತ್ಸವ’ ಶ್ಲಾಘನೀಯ” ಎಂದು ಹೇಳಿದರು. ಶ್ರೀಮತಿ ಸುಮನಾ ವಜ್ರಕುಮಾರ ಇವರು ದಿ. ನ. ವಜ್ರಕುಮಾರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಅವರ ಜತೆ ಡಾ. ಅಜಿತ್ ಪ್ರಸಾದ, ಬ್ರಹ್ಮ ಪ್ರಕಾಶ್, ಮಹಾವೀರ್ ಉಪಾಧ್ಯ, ಸೂರಜ್ ಜೈನ ಮಲ್ಲಿಕಾರ್ಜುನಪ್ಪ, ಶ್ರೀಮತಿ…