Author: roovari

ಮೂಡಬಿದಿರೆ : ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಮತ್ತು ಜೈನ ಪ.ಪೂ.ಕಾಲೇಜಿನ ಜಂಟಿ ಆಶ್ರಯದಲ್ಲಿ ‘ಕವಿ ನಾಗಚಂದ್ರ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 25-09-2023ರಂದು ಮೂಡಬಿದಿರೆಯ ಜೈನ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಾಹಿತಿಗಳು ಹಾಗೂ ಉಪನ್ಯಾಸಕರು ಆಗಿರುವ ಶ್ರೀ ಟಿ.ಎ.ಎನ್ ಖಂಡಿಗೆ “ಹಳೆಗನ್ನಡ ಕಾಲದ ಜೈನ ಕವಿಯಾದ ನಾಗಚಂದ್ರನು ತನ್ನ ಕಾವ್ಯಗಳಿಂದಾಗಿ ಅಭಿನವ ಪಂಪನೆಂದೇ ಗುರುತಿಸಿಕೊಂಡವನು. ಕಾವ್ಯಕ್ಕೆ ಮೊತ್ತ ಮೊದಲು ಚೌಕಟ್ಟನ್ನು ನಿರ್ಮಿಸಿಕೊಟ್ಟ ಪಂಪನ ಮಾದರಿಯಲ್ಲಿಯೇ ನಾಗಚಂದ್ರನು ಕೂಡಾ ಅಪೂರ್ವ ಕಾವ್ಯಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾನೆ. ‘ಮಲ್ಲಿನಾಥ ಪುರಾಣ’ ಹಾಗೂ ‘ರಾಮಚಂದ್ರ ಚರಿತ ಪುರಾಣ’ ಎಂಬೆರಡು ತನ್ನ ಮೇರು ಕೃತಿಗಳೊಂದಿಗೆ ಜಿನೋಪಾಸನೆ ಹಾಗೂ ಕಲೋಪಾಸನೆ ಎರಡನ್ನೂ ಮಾಡಿಕೊಂಡು ಬಂದ ನಾಗಚಂದ್ರನು ಒಂದರಲ್ಲಿ ಧರ್ಮ ಹಾಗೂ ಇನ್ನೊಂದರಲ್ಲಿ ಕಾವ್ಯಧರ್ಮವನ್ನು ಇಟ್ಟುಕೊಂಡು ಪಂಪನ ಮಾದರಿಯಲ್ಲಿಯೇ ಕಾವ್ಯ ರಚಿಸಿದ್ದಾನೆ” ಎಂದರು. ಕ.ಸಾ.ಪ. ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ.ಕೆ.ವೇಣುಗೋಪಾಲ ಶೆಟ್ಟಿಯವರು ಅಧ್ಯಕ್ಷತೆಯನ್ನು ವಹಿಸಿ ಈ…

Read More

ವಿರಾಜಪೇಟೆ : ವಿರಾಜಪೇಟೆಯ ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿ ಹಾಗೂ ಮನೆ ಮನೆ ಕಾವ್ಯಗೋಷ್ಠಿ ಬಳಗದ ವತಿಯಿಂದ ‘ಕವಿಗೋಷ್ಠಿ’ಯು ದಿನಾಂಕ 24-09-2023ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ನಡೆಯಿತು. ಕೊಡಗಿನ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯನವರು ಅಧ್ಯಕ್ಷತೆ ವಹಿಸಿ ಕವಿತೆಗಳನ್ನು ವಿಮರ್ಶಿಸಿ ಕವಿಗಳನ್ನು ಪ್ರೋತ್ಸಾಹಿಸಿದರು. ಕೊಡಗಿನ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ.ಅನಂತ ಶಯನ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜ್ಹಿರ ಅಯ್ಯಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಕಾರ್ಯಕ್ರಮದಲ್ಲಿ ಗಿರೀಶ್ ಎಸ್. ಕಿಗ್ಗಾಲು, ಮೊಣ್ಣಂಡ ಶೋಭಾ ಸುಬ್ಬಯ್ಯ, ಕಸ್ತೂರಿ ಗೋವಿಂದಮ್ಮಯ್ಯ, ಶಿವದೇವಿ ಅವನೀಶ್ಚಂದ್ರ, ಸಾವಿತ್ರಿ ಹೆಚ್.ಜಿ., ಭಾಗ್ಯವತಿ ಅಣ್ಣಪ್ಪ ಟಿ.ವಿ., ಲವಿನ್ ಲೋಪೆಸ್, ಚಿಮ್ಮಚ್ಚಿರ ಪವಿತಾ ರಜನ್, ಈರಮಂಡ ಹರಿಣಿ ವಿಜಯ್, ಸಿಂಚನ ಜಿ.ಎನ್. ಗೊರಹಳ್ಳಿ, ಅನಂತ ಶಯನ ಬಿ.ಜಿ, ಮುಲ್ಲೇಂಗಡ ಮಧೋಶ್ ಪೂವಯ್ಯ, ಪುಷ್ಪಲತಾ ಶಿವಪ್ಪ, ಸೈಮನ್ ಎಸ್. ಮೇಕೇರಿ, ಮೂಕಳೆರ ಟೈನಿ ಪೂಣಚ್ಚ, ನಳಿನಾಕ್ಷಿ, ಜಗದೀಶ್…

Read More

ಮಂಗಳೂರು : ಸಂಗೀತ ಪರಿಷತ್ತಿನ ತ್ರಿಂಶತ್ ಸಂಭ್ರಮದ ಪ್ರಯುಕ್ತ ಭಾರತೀಯ ವಿದ್ಯಾಭವನ, ರಾಮಕೃಷ್ಣ ಮಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ದಿನಾಂಕ 24-09-2023ರಂದು ‘ಯುವ ಸಂಗೀತೋತ್ಸವ’ ಕೊಡಿಯಾಲ್‌ ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ಜರಗಿತು. ಸ್ಥಳೀಯ ಮತ್ತು ಕಾಸರಗೋಡು, ಕಾರ್ಕಳ, ಧರ್ಮಸ್ಥಳ, ಪುತ್ತೂರು, ಸುರತ್ಕಲ್ ಮತ್ತು ಬೆಳ್ಳಾರೆಯ ಹನ್ನೊಂದು ಮಂದಿ ಸಂಗೀತಗಾರರ ಪ್ರತಿಭೆ ಪ್ರದರ್ಶಿಸಲು ಉತ್ಸವ ವೇದಿಕೆಯಾಯಿತು. ಪ್ರತಿ ಒಂದೂವರೆ ಗಂಟೆ ಅವಧಿಯ ಕಛೇರಿಯಲ್ಲಿ ಮೃದಂಗ, ವಯೊಲಿನ್ ವಾದನದಲ್ಲಿ ಗಾಯಕರು ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಪ್ರಸ್ತುತ ಪಡಿಸಿದರು. ಪ್ರೇಕ್ಷಕರು ನಾದದ ಅಲೆಯಲ್ಲಿ ಮಿಂದರು. ಸಂಗೀತ ಪರಿಷತ್ತಿನ ಅಧ್ಯಕ್ಷ ಎಂ.ವಿ. ಪ್ರದೀಪ ಮಾತನಾಡಿ “1993ರಲ್ಲಿ ಆರಂಭವಾದ ಸಂಸ್ಥೆಗೆ 30 ವರ್ಷ ತುಂಬಿದ್ದು, ತ್ರಿಂಶತ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯು ಕರ್ನಾಟಕ ಶಾಸ್ತ್ರೀಯ ಸಂಗೀತದ ಕಾರ್ಯಕ್ರಮಗಳನ್ನಲ್ಲದೆ ತಿಂಗಳ ಕಾರ್ಯಕ್ರಮ, ಶ್ರಾವಣ ಸಂಗೀತೋತ್ಸವ, ಆರಾಧನಾ ಮಹೋತ್ಸವ, ಐದು ದಿನಗಳ ಸಂಗೀತ ಉತ್ಸವ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ” ಎಂದರು. ಮ್ಯಾಪ್ಸ್ ಕಾಲೇಜು ವಿದ್ಯಾರ್ಥಿ, ವಯೊಲಿನ್…

Read More

ಕಾರ್ಕಳ : ಕನ್ನಡ ಸಂಘ ಕಾಂತಾವರ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಜಂಟಿಯಾಗಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆಯುವ ತಿಂಗಳ ಉಪನ್ಯಾಸ ಕಾರ್ಯಕ್ರಮ ‘ಅರಿವು -ತಿಳಿವು’ ದಿನಾಂಕ 23-09-2023 ರಂದು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇವರು “ಬಿ.ಜಿ.ಎಲ್  ಸ್ವಾಮಿ ಎಂಬ ಗಿಡಮರಗಳ ಒಡನಾಡಿ” ಈ ವಿಷಯದಲ್ಲಿ ಉಪನ್ಯಾಸ ನೀಡುತ್ತಾ “ಕನ್ನಡ ಶಾಸನಗಳಿಂದ ಮೊತ್ತಮೊದಲಿಗೆ ಸಸ್ಯ ಸಂಕುಲಗಳ ಕುರಿತು ಅಧ್ಯಯನ ಮಾಡಿದ ಹೆಗ್ಗಳಿಕೆ ಡಾ.ಬಿ.ಜಿ ಎಲ್. ಸ್ವಾಮಿಯವರಿಗೆ ಸಲ್ಲುತ್ತದೆ. ‘ಹಸಿರು ಹೊನ್ನು’ ಕೃತಿ ಸಾಹಿತ್ಯ ಲೋಕದಲ್ಲಿ ಸಸ್ಯ ಶಾಸ್ತ್ರಗಳ ಕುರಿತಂತೆ ಇರುವ ಪ್ರಸಿದ್ಧ ಮತ್ತು ವೈಶಿಷ್ಯಪೂರ್ಣ ಕೃತಿಯಾಗಿದೆ. ಡಿ.ವಿ.ಜಿ.ಯವರು ಮಾನವ ಜಗತ್ತಿನ ಭಾವಗಳನ್ನು ಕುರಿತು ಬರೆದರೆ ಮಗ ಬಿ.ಜಿ.ಎಲ್ ಸ್ವಾಮಿಯವರು ಸಸ್ಯ ಸಂಕುಲಗಳ ಹೃದಯಗಳ ಹಾಗೂ ಭಾವಗಳ ಜೊತೆ ಬೆರೆತು ಅರಿತರು. ತಂದೆ ಡಿ.ವಿ.ಜಿ.ಯವರಿಂದ ಶಿಸ್ತುಬದ್ಧ ಬದುಕಿನೊಂದಿಗೆ ಹಾಸ್ಯ ವಿನೋದ ಪ್ರವೃತ್ತಿಯಿಂದಲೇ ವಿಡಂಬನೆಗಳನ್ನೂ ಮಾಡಿದವರು. ಅವರು…

Read More

ಬಾಗಲಕೋಟೆ : ನಟರಾಜ ಸಂಗೀತ ನೃತ್ಯ ನಿಕೇತನ ವಿದ್ಯಾಗಿರಿ ಬಾಗಲಕೋಟೆ ಸಂಸ್ಥೆಯು ಆಯೋಜಿಸುವ ಯುವ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಮತ್ತು ಡಾ.ಅನಷ್ಕು ಅವರ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 30-09-2023ರ ಭಾನುವಾರದಂದು ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದೆ. ಕಾರ್ಯಕ್ರಮದ ಜೊತೆಗೆ ಮಂಜುನಾಥ್ ಎನ್ ಪುತ್ತೂರು ಮತ್ತು ಡಾ.ಅನಷ್ಕು ಎರಡು ದಿನಗಳ ನೃತ್ಯ ಕಾರ್ಯಗಾರವನ್ನು ಕೂಡ ನಡೆಸಿಕೊಡಲಿದ್ದಾರೆ.ಇದು ಮಂಜುನಾಥ್ ಅವರ 75ನೇ ಕಾರ್ಯಗಾರವಾಗಿದೆ.

Read More

ಉಪ್ಪಿನಂಗಡಿ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಹಾಗೂ ಉಪ್ಪಿನಂಗಡಿ ಹೋಬಳಿ ಘಟಕ ಮತ್ತು ಜ್ಞಾನ ಗಂಗಾ ಪುಸ್ತಕ ಮಳಿಗೆ ಪುತ್ತೂರು ನೇತೃತ್ವದಲ್ಲಿ ಪುಸ್ತಕ ಹಬ್ಬ, ಪುಸ್ತಕದಾನಿಗಳ ಸಮಾವೇಶ ಹಾಗೂ ಉಪ್ಪಿನಂಗಡಿ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ದಿನಾಂಕ 29-09-2023, 30-09-2023 ಮತ್ತು 01-10-2023ರವರೆಗೆ ಮೂರು ದಿನ ಉಪ್ಪಿನಂಗಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಗ್ರಾಮ ಪಂಚಾಯತ್ ಉಪ್ಪಿನಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸತ್ಯಶಾಂತ ಪ್ರತಿಷ್ಠಾನ ನೆಕ್ಕಿಲಾಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಈ ಸಂಘಟನೆಗಳ ಸಹಕಾರದಲ್ಲಿ ಹಾಗೂ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ನಡೆಯುತ್ತದೆ.    ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗ್ರಾ.ಪಂ. ಅಧ್ಯಕ್ಷೆ ಲಲಿತಾ ಪುಸ್ತಕ ಮೇಳ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ್‌ ಕುಮಾರ್‌ ಪ್ರಥಮ ಪುಸ್ತಕ ದಾನ…

Read More

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲ ಇಲ್ಲಿನ ಯಕ್ಷಗಾನ ಸಂಘದ ನೇತೃತ್ವದಲ್ಲಿ ಯಕ್ಷಗಾನ ತಾಳಮದ್ದಳೆ ದಿನಾಂಕ 30-09-2023ನೇ ಶನಿವಾರ ಸಂಜೆ 4-00 ರಿಂದ ನಡೆಯಲಿದೆ. ಸುರತ್ಕಲ್ಲಿನ ವಾಸುದೇವ ರಾವ್ ಇವರ ಸಂಯೋಜನೆಯಲ್ಲಿ ತಡಂಬೈಲಿನ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ಸದಸ್ಯರು ‘ರುಕ್ಮಿಣಿ ಕಲ್ಯಾಣ’ ಪ್ರಸಂಗವನ್ನು ಪ್ರಸ್ತುತಪಡಿಸಲಿರುವರು. ಕಾರ್ಯಕ್ರಮದಲ್ಲಿ ಅರ್ಥಧಾರಿಗಳಾಗಿ ಶ್ರೀಮತಿಯರಾದ ಸುಲೋಚನಾ ವಿ.ರಾವ್, ಸುಮಿತ್ರ ಶಶಿಕಾಂತ ಕಲ್ಲೂರಾಯ ಹಾಗೂ ಸುಮತಿ ಭಟ್‌ ಕೆ.ಯನ್ ಭಾಗವಹಿಸಲಿರುವರು.

Read More

ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ (ಡಾ. ಸುಧಾ ಮೂರ್ತಿ ಹಾಗೂ ಡಾ. ಪಿ. ದಯಾನಂದ ಪೈ ಪ್ರಾಯೋಜಿತ) 2023ರ ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ ಎಂಬ ವಿನೂತನ ಕಾರ್ಯಕ್ರಮ ಸರಣಿಯ ಅಕ್ಟೋಬರ್ ತಿಂಗಳ ಕಾರ್ಯಕ್ರಮವು ದಿನಾಂಕ 08-10-2023ರಂದು ಸಂಜೆ ಗಂಟೆ 4ಕ್ಕೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕುಮಾರಿ ಭಾವನಾ ಭಟ್ ಹರಿಖಂಡಿಗೆ ಇವರಿಂದ ‘ಪಿಟೀಲು ವಾದನ’ ಹಾಗೂ ಕುಮಾರಿ ಪ್ರಿಯದರ್ಶಿನಿ ಭಟ್ ಹರಿಖಂಡಿಗೆ ಇವರಿಂದ ‘ವೀಣಾ ವಾದನ’ ವಿಶೇಷ ಕಾರ್ಯಕ್ರಮ ನಡೆಯಲಿದೆ. ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ರಾಜ್ಯ ಪ್ರಶಸ್ತಿ ಪುರಸ್ಕೃತರು ಭಾಸ್ಕರ್ ಕೊಗ್ಗ ಕಾಮತ್ ತಮಗೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.

Read More

ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಆಯೋಜಿಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭ ದಿನಾಂಕ 01-10-2023ನೇ ಭಾನುವಾರ ಬೆಳಿಗ್ಗೆ ಗಂಟೆ 11.00ಕ್ಕೆ ನಡೆಯಲಿದೆ. ಮಂಗಳೂರಿನ ಬಳ್ಳಾಲ್‌ಬಾಗಿನ ಲೋಕಯ್ಯ ಶೆಟ್ಟಿ ರಸ್ತೆಯಲ್ಲಿರುವ ಶ್ರೀ ದುರ್ಗಾ ಕಾಂಪ್ಲೆಕ್ಸ್‌ನ 3ನೇ ಮಹಡಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಗೌರವಾನ್ವಿತ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂ‌ರು ವಹಿಸಲಿರುವರು. ಮಂಗಳೂರಿನ ಸಿಮ್ ಟೆಕ್ನಾಲಜಿಸ್ ಗ್ರೂಪೀನ ಆಡಳಿತ ನಿರ್ದೇಶಕರಾದ ಶ್ರೀ ನವೀನ್ ಕಿಲ್ಲೆ ದೀಪ ಪ್ರಜ್ವಲನ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸನಾತನ ನಾಟ್ಯಾಲಯದ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಕೆ.ಶೆಟ್ಟಿ, ಮಂಗಳೂರಿನ ಸಿಂಫನಿ ಸಂಗೀತೋಪಕರಣ ಮಳಿಗೆ ಇದರ ಮಾಲಕರಾದ ಶ್ರೀ ಲಾಯ್ ನೊರೊನ್ಹಾ, ಮಂಗಳೂರಿನ ಕರ್ನಾಟಕ ಸಂಗೀತ ಕಲಾವಿದರಾದ ವಿದ್ವಾನ್ ಅನೀಶ್ ವಿ.ಭಟ್ ಭಾಗವಹಿಸಲಿದ್ದಾರೆ. ಇದೇ ಸ್ಥಳದಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ ಗಂಟೆ 11.00 ರಿಂದ 12.00ರ ತನಕ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ನಡೆಯಲಿದೆ. ಜೊತೆಗೆ ಸಂಗೀತ ಕಲಿಕೆಗೆ…

Read More

ಕಾಸರಗೋಡು : ಚಿನ್ಮಯ ವಿದ್ಯಾಲಯ, ವಿದ್ಯಾನಗರದ ತೇಜಸ್ ಸಭಾಂಗಣದಲ್ಲಿ ದಿನಾಂಕ 21-09-2023ರಂದು ಪ್ರಸಿದ್ಧ ಒಡಿಸ್ಸಿ ನೃತ್ಯ ಕಲಾವಿದೆ ಆರುಷಿ ಮುದುಗಲ್ ಪ್ರಸ್ತುತಪಡಿಸಿದ ಒಡಿಸ್ಸಿ ನೃತ್ಯ ಪ್ರದರ್ಶನವು ಸಾವಿರಾರು ಪ್ರೇಕ್ಷಕರನ್ನು ರಂಜಿಸಿತು. ಒಡಿಸ್ಸಿ ನೃತ್ಯದ ಆರಂಭಿಕ ಅಧ್ಯಯನ ಹಾಗೂ ತಾಂತ್ರಿಕ ಕೌಶಲಗಳನ್ನು ಇವರು ದೆಹಲಿಯ ಮಹಾವಿದ್ಯಾಲಯದಲ್ಲಿ ಗುರು ಮಾಧವಿ ಮುದಗಲ್ ಅವರಿಂದ ಅಭ್ಯಸಿಸಿ ಭಾರತದ ಶ್ರೇಷ್ಠ ಹತ್ತು ಒಡಿಸ್ಸಿ ಕಲಾವಿದರಲ್ಲಿ ಒಬ್ಬರೆನಿಸಿದ್ದಾರೆ. ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯ, ಯು.ಕೆ., ಬೆಲ್ಜಿಯಂ ಮೊದಲಾದ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ನೃತ್ಯೋತ್ಸವಗಳಲ್ಲಿ ಪ್ರದರ್ಶನ ನೀಡಿದ ಆರುಷಿ ಮುದಗಲ್ ಸ್ಪಿಕ್ ಮೆಕೆ ಸಂಘಟನೆಯ ಭಾಗವಾಗಿದ್ದು, ಯುವ ಜನರಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕಲೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶವನ್ನಿಟ್ಟುಕೊಂಡಿರುವರು. ಸಂಗೀತ ನಾಟಕ ಅಕಾಡೆಮಿಯಿಂದ ಉಸ್ತಾದ್ ಬಿಸ್ಮಿಲ್ಲ ಖಾನ್ ಪುರಸ್ಕಾರಕ್ಕೆ ಭಾಜನರಾದ ಇವರು ಎಫ್.ಐ.ಸಿ.ಸಿ.ಯಿಂದ ‘ಯುವ ವನಿತೆಯ ಸಾಧನೆ’, ಗುರು ಕೇಳು ಚರಣ್ ಮಹಾ ಪಾತ್ರರಿಂದ ‘ಯುವ ಪ್ರತಿಭಾ ಸಮ್ಮಾನ್’, ರಾಷ್ಟ್ರಪತಿಯಿಂದ ‘ಬಾಲಶ್ರೀ ಪುರಸ್ಕಾರ’, ರಾಜೀವ್ ಗಾಂಧಿ ಎಕ್ಸಲೆನ್ಸ್ ಪುರಸ್ಕಾರ ಮೊದಲಾದ…

Read More