Author: roovari

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಸಮಿತಿಯ ವತಿಯಿಂದ ಸಾಹಿತಿಗಳ ಮನೆಗೆ ಅಭಿಯಾನ ಕಾರ್ಯಕ್ರಮದಡಿಯಲ್ಲಿಯಲ್ಲಿ ಹೆಸರಾಂತ ಸಾಹಿತಿ, ಮಂಗಳ ಗಂಗೋತ್ರಿಯ ವಿಶ್ರಾಂತ ಉಪ ಕುಲಪತಿ ಪ್ರೊ‌ ಡಾ. ಚಿನ್ನಪ್ಪ ಗೌಡರ ನಿವಾಸದಲ್ಲಿ ಕಾರ್ಯಕ್ರಮವು ದಿನಾಂಕ 13 ಮಾರ್ಚ್ 2025ರಂದು ನಡೆಯಿತು. ಸಮಾರಂಭದಲ್ಲಿ ಶ್ರೀಯುತರಿಗೆ ಶಾಲು ಹಾರ ಫಲಸಹಿತವಾಗಿ ಗೌರವಿಸಲಾಯಿತು. ಮೂಲತಃ ವಿಟ್ಲ ಸಮೀಪದ ಕೂಡೂರಿನವರಾದ ಶ್ರೀಯುತರು ಪ್ರಸ್ತುತ ಅಸೈಗೋಳಿಯ ತಮ್ಮ ನಿವಾಸದಲ್ಲಿ ಪತ್ನಿ ಡಾ. ಶಾಂತಿಯವರ ಜೊತೆಗೆ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ತುಳು ಹಾಗೂ ಕನ್ನಡ ಸಾಹಿತ್ಯದ ವಿದ್ವಾಂಸರಾಗಿದ್ದಾರೆ. ಸನ್ಮಾನ ಸ್ವೀಕರಿಸಿದ ಮಾತನಾಡಿದ ಡಾ. ಚಿನ್ನಪ್ಪ ಗೌಡ ಮಾತನಾಡಿ “ದೇಶದ ಬಹು ಭಾಷೆಗಳಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದ್ದು, ಭಾರತೀಯ ಸಾಹಿತ್ಯದ ವ್ಯಾಪ್ತಿ, ವೈವಿಧ್ಯತೆ ಆಗಾಧವಾಗಿದೆ. ಸ್ವತಂತ್ರ ಕೃತಿ ರಚನೆಯ ಜೊತೆಗೆ ಇತರ ಭಾಷೆಯ ಪ್ರಮುಖ ಕೃತಿಗಳನ್ನು ಅನುವಾದ ಮಾಡುವ ಮೂಲಕ ನಮ್ಮ ಸಾಹಿತ್ಯಿಕ ಪರಂಪರೆಯನ್ನು ಎಲ್ಲೆಡೆ ಪಸರಿಸಲು ಸಾಹಿತಿಗಳು ಪ್ರಯತ್ನಿಸಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಅನುವಾದ ಕೃತಿಗಳೂ ಸ್ವಾತಂತ್ರ…

Read More

ಮುಂಡುಗೋಡು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸಿದ್ದಿ ಸಮುದಾಯದವರನ್ನು ಮುಖ್ಯ ನೆಲೆಗೆ ತರುವ ಉದ್ದೇಶದಿಂದ ‘ಸಿದ್ದಿ ಸಮಾವೇಶ’ವನ್ನು ದಿನಾಂಕ 15 ಮತ್ತು 16 ಮಾರ್ಚ್ 2025ರಂದು ಮುಂಡುಗೋಡಿನ ಲೊಯೋಲಾ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಿದ್ದಿ ಸಂಸ್ಕೃತಿ ಬಿಂಬಿಸುವ ಜಾನಪದ ಕಲಾತಂಡಗಳ ಪ್ರದರ್ಶನವು ಮೆರವಣಿಗೆಯೊಂದಿಗೆ ನಡೆಯಲಿದೆ. ‘ಸಿದ್ದಿ ಪರಂಪರೆ’, ‘ಸಿದ್ದಿಗಳ ಬದುಕಿನ ಆಯಾಮಗಳು (ಕಲೆ, ಸಂಸ್ಕೃತಿ)’, ‘ಸಿದ್ದಿಗಳ ಬದುಕು ನಿನ್ನೆ, ಇಂದು ಮತ್ತು ನಾಳೆ’, ‘21ನೇ ಶತಮಾನದಲ್ಲಿ ಸಿದ್ದಿಗಳಿಗೆ ಎದುರಾಗುತ್ತಿರುವ ಸಮಸ್ಯೆಗಳು/ ಸವಾಲುಗಳು ಮತ್ತು ಸಕಾರಾತ್ಮಕ ಸಾಧ್ಯತೆಗಳು’ ಎಂಬ ವಿಷಯಗಳಲ್ಲಿ ವಿಚಾರಗೋಷ್ಠಿಯು ವಿಭಾಗ ಮುಖ್ಯಸ್ಥರಾದ ಸ್ಟೀವನ್ ಕ್ವಾಡ್ರಸ್ ಪೆರ್ಮುದೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Read More

ಮೈಸೂರು : ‘ಥೇಮಾ’ ಥಿಯೇಟರ್ ಪ್ರಸ್ತುತ ಪಡಿಸುವ ಡಾ. ಎಸ್.ವಿ. ಸುಷ್ಮಾ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಎಲ್.ಎಸ್.ಡಿ.’ ಕನ್ನಡ ನಾಟಕ ಪ್ರದರ್ಶನವನ್ನು ದಿನಾಂಕ 16 ಮಾರ್ಚ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ನಟನ ರಂಗ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ಪರಿಕಲ್ಪನೆ ಹಾಗೂ ನಟನೆ ಸುನೇತ್ರಾ ಪಂಡಿತ, ಸ್ನೇಹ ಕಪ್ಪಣ್ಣ ಮತ್ತು ಡಾ. ಎಸ್.ವಿ. ಸುಷ್ಮಾ ಇವರು ನಿರ್ವಹಿಸಿದ್ದು, ಡಾ. ಎಸ್.ವಿ. ಕಶ್ಯಪ್ ಪರಿಕಲ್ಪನೆ ಹಾಗೂ ರಚನೆ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಜಾಣಗೆರೆ ಪತ್ರಿಕೆ ಪ್ರಕಾಶನ ಇದರ ವತಿಯಿಂದ ಸಾಹಿತಿ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಇವರ ‘ನುಡಿಗೋಲು 2’ ಅಪೂರ್ವ ಸಾಧಕರ ನುಡಿ ಸಂಕಥನ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 15 ಮಾರ್ಚ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಡಾ. ಅಗ್ರಹಾರ ಕೃಷ್ಣಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಹಿರಿಯ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಬಿ.ಎಂ. ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಬೈರಮಂಗಲ ರಾಮೇಗೌಡ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ಕವಿ ಚಿಂತಕರಾದ ಡಾ. ಬಂಜಗೆರೆ ಜಯಪ್ರಕಾಶ್ ಇವರು ಕೃತಿ ಪರಿಚಯ ಮಾಡಲಿರುವರು. ಸಭಾ ಕಾರ್ಯಕ್ರಮದ ಮೊದಲು ಲಿಮ್ಕಾ ದಾಖಲೆಯ ಡಾ. ಬಂಡ್ಲಹಳ್ಳಿ ವಿಜಯಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಇವರ ಸಹಕಾರದೊಂದಿಗೆ ಸುರತ್ಕಲ್ ಸಮೀಪ ಹೊಸಬೆಟ್ಟು ಮಾರುತಿ ಬಡಾವಣೆಯ ಶಾರದಾ ಮಂದಿರದಲ್ಲಿ ದಿನಾಂಕ 26 ಫೆಬ್ರವರಿ 2025ರಂದು ಶಾರದಾ ಮಾಸದ ಕೂಟ ಸುರತ್ಕಲ್ ಇವರಿಂದ ಇಡೀ ರಾತ್ರಿ ತಾಳಮದ್ದಲೆ ಕೂಟ ನಡೆಯಿತು. ಈ ಸಮಾರಂಭದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ “ಯಕ್ಷಗಾನ ತಾಳಮುದ್ದಳೆ ಕಾರ್ಯಕ್ರಮಗಳು ಅಹೋರಾತ್ರಿ ನಡೆಯುತ್ತಿದ್ದ ಕಾಲವೊಂದಿತ್ತು. ಈಗಿನ ಯುವ ಸಮುದಾಯಕ್ಕೆ ಅದರ ಕಲ್ಪನೆಯೂ ಇರಲಾರದು. ಆದರೆ ವಿನಯ ಆಚಾರ್ಯರ ನೇತೃತ್ವದಲ್ಲಿ ನಡೆದ ವಿಶಿಷ್ಟ ಪರಿಕಲ್ಪನೆಯ ಶಾರದಾ ಮಾಸದ ಕೂಟವು ತಾಳಮದ್ದಳೆಯ ಗತಕಾಲದ ಇತಿಹಾಸವು ಮರುಕಳಿಸುವಂತೆ ಮಾಡಿದೆ” ಎಂದು ಹೇಳಿದರು. ಯಕ್ಷಗಾನ ಹಿಮ್ಮೇಳ ವಾದನಗಳ ನುಡಿತದೊಂದಿಗೆ ಜರಗಿದ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹೊಸಬೆಟ್ಟು ಗುರುರಾಜ ಆಚಾರ್ಯ ಜಾಗಟೆ ಬಾರಿಸುವುದರ ಮೂಲಕ ನೆರವೇರಿಸಿದರು. ಯಕ್ಷಗುರು ಶಂಕರನಾರಾಯಣ ಮೈರ್ಪಾಡಿ, ಕರ್ಣಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಜೇಶ ಕುಳಾಯಿ,…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 15 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ಸನ್ಮಾನ್ಯ ಯು.ಟಿ. ಖಾದರ್ ಇವರ ಉಪಸ್ಥಿತಿಯಲ್ಲಿ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಡಾ. ಪುರುಷೋತ್ತಮ ಬಿಳಿಮಲೆ ಇವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Read More

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಇದರ ವತಿಯಿಂದ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಕಾರ್ಯಕ್ರಮವನ್ನು ದಿನಾಂಕ 16 ಮಾರ್ಚ್ 2025ರಂದು ಪೂರ್ವಾಹ್ನ 9-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಅಶೋಕ ನಗರ ಕಚೇರಿ ಬಳಿಯಿರುವ ಸಾಹಿತ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ. ‘ನಾಗಂದಿಗೆಯೊಳಗಿನ ಸಿಹಿ-ಕಹಿ’ ಬಿ.ಎಂ. ರೋಹಿಣಿಯವರ ಕೃತಿಗಳ ಓದು ಮತ್ತು ಸಂವಾದ ಕಾರ್ಯಕ್ರಮದಲ್ಲಿ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿಯವರು ಸಮನ್ವಯಕಾರರಾಗಿ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ. ಅಪರಾಹ್ನ 2-30 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಾಡೋಜ ಡಾ. ಸಾರಾ ಅಬೂಬಕರ್ ದತ್ತಿ ನಿಧಿಯ ‘ಸಾರಾ ದತ್ತಿ ಪ್ರಶಸ್ತಿ’ಯನ್ನು ಡಾ. ಗೀತಾ ಶೆಣೈ, ಚಂದ್ರಭಾಗಿ ರೈ ದತ್ತಿ ನಿಧಿಯ ‘ಚಂದ್ರಭಾಗಿ ರೈ ದತ್ತಿ ಬಹುಮಾನ ವಿಜೇತರು’ ರಾಜಲಕ್ಷ್ಮೀ ಕೋಡಿಬೆಟ್ಟು ಹಾಗೂ ಡಾ. ಮಮತಾ ತಿಲಕ್ ರಾವ್ ಮುಂಬೈ ದತ್ತಿನಿಧಿಯ…

Read More

ರಾಮನಗರ : ಪ್ರಸಿದ್ಧ ಕನ್ನಡ ಬರಹಗಾರ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಗೌರವಾರ್ಥವಾಗಿ, ತೇಜಸ್ವಿಯವರ ಕೃತಿಯ ವಿಷಯಗಳು ಮತ್ತು ಚೈತನ್ಯವನ್ನು ಪ್ರತಿಬಿಂಬಿಸುವ ತಮ್ಮ ಛಾಯಾಚಿತ್ರಗಳು ಮತ್ತು ವರ್ಣಚಿತ್ರಗಳನ್ನು ಸಲ್ಲಿಸಲು ನಾವು ಕಲಾವಿದರನ್ನು ಆಹ್ವಾನಿಸುತ್ತಿದ್ದೇವೆ. ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಜೀವನ, ಕೆಲಸ, ಕಾದಂಬರಿ ಪುಸ್ತಕ ಜಗತ್ತು, ಅವರ ಕನಸುಗಳು, ತೇಜಸ್ವಿಯವರ ವ್ಯಂಗ್ಯ ಚಿತ್ರಗಳು ಇವುಗಳನ್ನು ಸಂಬಂಧಿಸಿದ ವಿಷಯಗಳನ್ನು ಆಧರಿಸಿರಬೇಕು. ಲಿಖಿತ್ ಹೊನ್ನಾಪುರ ಸುಗ್ಗನಹಳ್ಳಿ ಅಂಚೆ, ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲೂಕು ರಾಮನಗರ ಜಿಲ್ಲೆ 561101 ಈ ಅಂಚೆ ವಿಳಾಸಕ್ಕೆ ಕಳುಹಿಸಲು ಕೋರುತ್ತೇವೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ : 9353062539.

Read More

ಮಂಗಳೂರು : ಕಳೆದ ನಾಲ್ಕೂವರೆ ದಶಕಗಳಿಂದ ತುಳು ಕೂಟದ ಮೂಲಕ ನೀಡಲಾಗುತ್ತಿರುವ ‘ರತ್ನವರ್ಮ ಹೆಗ್ಗಡೆ ಪ್ರಶಸ್ತಿ’ ವಿಜೇತರ ಪಟ್ಟಿಯನ್ನು ಘೋಷಿಸಲಾಗಿದೆ. ಡಾ. ವೀರೇಂದ್ರ ಹೆಗ್ಗಡೆಯವರು ಈ ಪ್ರಶಸ್ತಿಗಳನ್ನು ಪ್ರಾಯೋಜಿಸುತ್ತಾ ಬರುತಿದ್ದು, ವಿಜೇತರಿಗೆ ಪ್ರಶಸ್ತಿಯನ್ನು ದಿನಾಂಕ 14 ಎಪ್ರಿಲ್ 2025ರಂದು ‘ಬಿಸು ಪರ್ಬ’ ಆಚರಣೆಯ ಸಂದರ್ಭ ಶ್ರೀಮಾತೆ ಮಂಗಳಾದೇವಿ ಅಮ್ಮನವರ ಸಾನಿಧ್ಯದಲ್ಲಿ ಪ್ರದಾನಿಸಲಾಗುವುದು. ನಗದು ಸಹಿತ ಪ್ರಥಮ ಬಹುಮಾನವನ್ನು ಶ್ರೀ ಶಶಿರಾಜ್ ಕಾವೂರು ಇವರ ‘ಕರುಣೆದ ಕಣ್ಣ್’, ದ್ವಿತೀಯ ಬಹುಮಾನವನ್ನು ಅಕ್ಷತಾ ರಾಜ್, ಪೆರ್ಲ ಇವರ ‘ಯಜ್ಞ ಪುತ್ತೊಲಿ, ಹಾಗೂ ತೃತೀಯ ಬಹುಮಾನವನ್ನು ಗೀತಾ ನವೀನ್ ಇವರ ‘ಅಪ್ಪೆ ಮಹಾಮಾಯಿ’ ನಾಟಕ ಕೃತಿಗಳು ಪಡೆದಿರುತ್ತವೆ. ಅಲ್ಲದೇ, ಈ ಬಾರಿ ‘ಬಂಗಾರ್ ಪರ್ಬಾಚರಣೆ’ಯ ಪ್ರಯುಕ್ತ ಇನ್ನೆರೆಡು ನಗದು ರಹಿತ ಪ್ರೋತ್ಸಾಹಕ ಬಹುಮಾನ ನೀಡಲು ತುಳುಕೂಟ ನಿರ್ಧರಿಸಿದ್ದು, ಪ್ರಕಾಶ್ ಬಂಗೇರ ಬಗಂಬಿಲ ಇವರ ‘ಕರಿಮಣದ ಪಿರವು’ ಮತ್ತು ವಿಲಾಸ್ ಕುಮಾರ್ ನಿಟ್ಟೆ ಇವರ ‘ಗಗ್ಗರ’ ನಾಟಕ ಕೃತಿಗಳಿಗೆ ನೀಡಿರುತ್ತಾರೆ. ಎಲ್ಲಾ ಅಪ್ರಕಟಿತ ಹಸ್ತಪ್ರತಿ ನಾಟಕ ಕೃತಿಕಾರರಿಗೆ…

Read More

ಬೆಂಗಳೂರು : ಪ್ರವರ ಥಿಯೇಟರ್ ಬೆಂಗಳೂರು ಇದರ ಸಹಕಾರದೊಂದಿಗೆ ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘Mr. ರಾವ್ & ಅಸೋಸಿಯೇಟ್ಸ್’ ನಾಟಕ ಪ್ರದರ್ಶನವನ್ನು ದಿನಾಂಕ 15 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮ ಸಮುಚ್ಛಯದಲ್ಲಿ ಆಯೋಜಿಲಾಗಿದೆ. ಈ ನಾಟಕವನ್ನು ಭೀಷ್ಮ ರಾಮಯ್ಯ ರಚಿಸಿದ್ದು, ಬಾಷ್ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು. ಈ ನಾಟಕವು ತಂದೆ ತಾಯಿಗಳು ಅಂದ್ರೆ ಮಕ್ಕಳಿಗೆ ಜವಾಬ್ದಾರಿ ಆಗಬೇಕೆ ವಿನಹ, ಹಣ ಆಸ್ತಿ ಕೊಡೊ ತಿಜೋರಿಗಳಲ್ಲ ಎಂಬ ಪ್ರಸ್ತುತ ಸಮಾಜದ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಆಧುನಿಕ ಜಗತ್ತು ಮನುಷ್ಯನಲ್ಲಿ ಸೂಕ್ಷ್ಮ ಸಂವೇದನೆಯನ್ನು ನಶಿವುವಂತೆ ಮಾಡಿದೆ. ಮನುಷ್ಯ ಮನುಷ್ಯನ ನಡುವೆ ಸಂಬಂಧಗಳನ್ನು ಅಳಿಸುತ್ತಿವೆ. ಗಟ್ಟಿಯಾಗಿ ಇರಬೇಕಾದ ರಕ್ತ ಸಂಬಂಧಗಳನ್ನು ಜೊಳ್ಳು ಮಾಡುತ್ತಿವೆ. ಒಂಟಿಯಾಗಿ ಬದುಕುತ್ತಿದ್ದ ಮನುಷ್ಯನು ಸಂಬಂಧಗಳನ್ನು ಕಟ್ಟಿಕೊಂಡಿದ್ದೆ ಮುಪ್ಪಿಗೆ ಆತುಕೊಳ್ಳಲು. ಈ ಸಂಬಂಧಗಳನ್ನೇ ದಿಕ್ಕರಿಸಿ ಈ ಆತುವಿಕೆಯನ್ನು ಕತ್ತರಿಸಿ ಹೋಗುವಾಗ…

Read More