Author: roovari

ಮಂಗಳೂರು : ಉಮ್ಮಕ್ಕೆ ಚಾರಿಟೇಬಲ್ ಟ್ರಸ್ಟ್ ಮತ್ತು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಆಶ್ರಯದಲ್ಲಿ ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ದಿನಾಂಕ 17 ಆಗಸ್ಟ್ 2025ರಂದು ಆಯೋಜಿಸಿದ್ದ ಉಮ್ಮಕ್ಕೆನ ನೆಂಪು, ದತ್ತಿನಿಧಿ ಉಪನ್ಯಾಸ, ಕೂಡುಕಟ್ಟ್ ದ ಪಾತೆರಕತೆ, ಸಂತ ಕವಿ ಕನಕದಾಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ “ಸ್ವಹಿತವನ್ನು ಬಯಸದೆ ಪರರ ಹಿತಕ್ಕಾಗಿ ಸ್ಪಂದಿಸಿದ ಉಮ್ಮಕ್ಕೆಯವರ ಆದರ್ಶಗಳು ನಮಗೆ ಸ್ಫೂರ್ತಿಯಾಗಬೇಕು. ಹಿರಿಯರಾದ ವಾಸುದೇವ ಉಚ್ಚಿಲರು ದಕ್ಷಿಣ ಕನ್ನಡದ ಸಾಮಾಜಿಕ ಹೋರಾಟಗಳ ಮೂಲಕ ಪ್ರೇರಣೆ ನೀಡಿದವರು” ಎಂದು ನುಡಿದರು. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಮಾತನಾಡಿ “ಕೌಟುಂಬಿಕ ಸಂಬಂಧಗಳು ಮರೆಯಾಗುತ್ತಿರುವ ಸಂಧರ್ಭದಲ್ಲಿ ಹಿರಿಯರ ನೆನಪುಗಳನ್ನು ವಿಶಿಷ್ಟ ಮಾದರಿಯಲ್ಲಿ ಮಾಡುತ್ತಿರುವುದು ಶ್ಲಾಘನೀಯ” ಎಂದರು. ಸಂತ ಕವಿ ಕನಕದಾಸ ಪ್ರಶಸ್ತಿಯನ್ನು ಜನಪರ ಹೋರಾಟಗಾರ ವಾಸುದೇವ ಉಚ್ಚಿಲರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅದರಲ್ಲಿಯೂ ಕೋಟಿ ಸದಸ್ಯತ್ವದ ಅಭಿಯಾನವನ್ನು ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡು ಪರಿಷತ್ತಿನ ಕಾರ್ಯವ್ಯಾಪ್ತಿಯನ್ನು ಹಿಗ್ಗಿಸುವ ದೃಷ್ಟಿಯಿಂದ ಕಲಬುರಗಿ ಜಿಲ್ಲೆಯ ಕೈಲಾಸ ಪಾಟೀಲ್ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಕೈಲಾಸ ಪಾಟೀಲರು ಸಂಘಟನಾ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹತ್ವದ ಚಟುವಟಿಕೆಗಳನ್ನು ನಡೆಸಿರುತ್ತಾರೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿರುವ ಇವರು ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತ ಅಭಿಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ…

Read More

ಕುಶಾಲನಗರ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಇದರ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿನಾಂಕ 17 ಆಗಸ್ಟ್ 2025ರಂದು ಕುಶಾಲನಗರದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಟಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆಯಲ್ಲಿ ನೀಡಿದರು. ಸಾಹಿತ್ಯದ ನುಡಿಗಳನ್ನು ಹಿರಿಯ ಸಾಹಿತಿ ಭಾರಧ್ವಜ್ ಆನಂದ ತೀರ್ಥ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ. ರಘುಕೋಟಿ ವಹಿಸಿದರು. ವೇದಿಕೆಯಲ್ಲಿ ರಾಣಿ ರವೀಂದ್ರ, ಮಾಲದೇವಿ ಮೂರ್ತಿ, ಉಪನ್ಯಾಸಕ ಮಹೇಂದ್ರ ಉಪಸ್ಥಿತರಿದ್ದರು. ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಕವಿಗಳು ತಮ್ಮ ಕವನವನ್ನು ಪ್ರಸ್ತುತ ಪಡಿಸಿ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡರು.

Read More

ಉಡುಪಿ : ಸುಶಾಸನ ಪ್ರಸ್ತುತಿಯಡಿ ಕಿದಿಯೂರು ಹೊಟೇಲ್‌ನ ಶೇಷಶಯನ ಹಾಲ್ ನಲ್ಲಿ ದಿನಾಂಕ 15 ಆಗಸ್ಟ್ 2025ರಂದು ಜರಗಿದ ಸುಧಾಕರ ಆಚಾರ್ಯರ ಕಲಾರಾಧನೆಯ 35ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆಯಲ್ಲಿ ಶಿಕ್ಷಣ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಮೆಯವರನ್ನು ‘ತುಳುನಾಡ ಸುಶಾಸನ ಪುರಸ್ಕಾರ’ ಪ್ರದಾನ ಮಾಡಿ ಸಮ್ಮಾನಿಸಲಾಯಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ. ಜಿ. ಶಂಕರ್ ಅವರು ದಾಮ್ಮೆಯವರನ್ನು ಗೌರವಿಸಿ ಶುಭಹಾರೈಸಿದರು. ಉದ್ಯಮಿ ವಿ.ಜಿ. ಶೆಟ್ಟಿ, ಸುಶಾಸನದ ಸುಧಾಕರ ಆಚಾರ್ಯ, ಅಮಿತಾ, ಮೇದಿನಿ ಆಚಾರ್ಯ, ಆಚಾರ್ಯ ಯಾಸ್ಯ ಗೃತ್ಸ ಗೋವಿಂದ ಆಚಾರ್ಯ, ಡಾ. ಹರೀಶ್ ಜೋಷಿ, ರತನ್‌ರಾಜ್ ರೈ, ತ್ರಿಲೋಚನ ಶಾಸ್ತ್ರಿ ಉಪಸ್ಥಿತರಿದ್ದರು. ಪ್ರೊ. ಪವನ್ ಕಿರಣಕೆರೆ ಅಭಿನಂದನೆ ಭಾಷಣ ಮಾಡಿದರು. ‘ಯಾಜ್ಞಸೇನೆ’ ತಾಳಮದ್ದಳೆ, ಕಿರಿಯ ಹಿರಿಯ ಕಲಾವಿದರಿಂದ ‘ವೀರ ಅಭಿಮನ್ಯು’ ತೆಂಕು-ಬಡಗು ಕೂಡಾಟ ಪ್ರದರ್ಶನಗೊಂಡಿತು.

Read More

ಮಂಗಳೂರು : ನಾಟ್ಯಾಲಯ ಉರ್ವ (ರಿ.) ಆಯೋಜಿಸಿದ ಕೀರ್ತಿಶೇಷ ಗುರು ಶ್ರೀಮತಿ ಕಮಲಾ ಭಟ್ ಸಂಸ್ಮರಣೆ ಕಮಲಾಂಜಲಿ 2025 ಹಾಗೂ ಗುರು ಉಳ್ಳಾಲ ಮೋಹನ್ ಕುಮಾರ್ ಇವರ ಅಭಿನಂದನಾ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣ ದಾಸ ಅಸ್ರಣ್ಣ ಮಾತನಾಡಿ “ಸಾಹಿತ್ಯದ ಒಳ ಮರ್ಮವನ್ನು ಅರಿತು ಸೃಜನಶೀಲತೆಯಿಂದ ನೃತ್ಯ ಪ್ರದರ್ಶನ ಮಾಡಿದಾಗ ಬ್ರಹ್ಮಾನಂದ ಅನುಭವವನ್ನು ಅನುಭವಿಸಲು ಸಾಧ್ಯ. ಭಾರತೀಯ ಲಲಿತ ಕಲೆಗಳಲ್ಲಿ ಗುರು-ಶಿಷ್ಯ ಪರಂಪರೆಯನ್ನು ಭರತನಾಟ್ಯಕಲಾ ಪ್ರಕಾರದಲ್ಲಿ ಮಾತ್ರ ಕಾಣಲು ಸಾಧ್ಯ. ಇದು ಒಂದು ಒಳ್ಳೆಯ ಸಂಪ್ರದಾಯ. ಕೀರ್ತಿ ಶೇಷ ಕಮಲ ಭಟ್ ಇವರು ಶ್ರದ್ಧೆಯಿಂದ ಗುರುಗಳಾದ ಉಳ್ಳಾಲ ಮೋಹನ್ ಕುಮಾರ್ ಇವರಲ್ಲಿ ಕಲಿತು ಅಷ್ಟೇ ಶ್ರದ್ಧೆಯಿಂದ ನಗರದಲ್ಲಿ ಪಸರಿಸಿ ಕಲೆಯ ಶ್ರೀಮಂತಿಕೆಯನ್ನು ಉತ್ತುಂಗಕ್ಕೆ ಕೊಂಡೊಯ್ದವರು ಇಂದು ಅವರಿಂದ ಕಲಿತ ಹಿರಿಯ ಶಿಷ್ಯ ವಿದುಷಿ ವಿನಯ ಅದನ್ನು ಮುಂದುವರಿಸುತ್ತಾ ಇರೋದು ಅಭಿನಂದನೀಯ” ಎಂದರು. ಕಾರ್ಯಕ್ರಮದಲ್ಲಿ ಕಮಲ ಭಟ್ರ…

Read More

ಮಂಗಳೂರು : ಭರತಾಂಜಲಿ (ರಿ.) ಇದರ ತ್ರಿಂಶತ್ ಪ್ರಯುಕ್ತ ಪ್ರಸ್ತುತ ಪಡಿಸುವ ‘ನೃತ್ಯ ರತ್ನ ಶೋಧ’ ಏಕವ್ಯಕ್ತಿ ಭರತನಾಟ್ಯ ಸ್ಪರ್ಧೆಗೆ ಮೊದಲ ಸುತ್ತಿನಲ್ಲಿ ವಿಡಿಯೋ ಅಪ್ ಲೋಡ್ ಮಾಡಲು ದಿನಾಂಕ 31 ಆಗಸ್ಟ್ 2025 ಕೊನೆಯ ದಿನಾಂಕವಾಗಿರುತ್ತದೆ. ಸ್ಪರ್ಧೆಯು 13ರಿಂದ 17 ವರ್ಷದವರಿಗೆ ಜೂನಿಯರ್ ಮತ್ತು 18ರಿಂದ 25 ವರ್ಷದವರಿಗೆ ಸೀನಿಯರ್ ಎರಡು ವಿಭಾಗದಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗೆ 9480161839 ವಿದುಷಿ ಪ್ರಕ್ಷೀಲ ಜೈನ್ ಇವರನ್ನು ಸಂಪರ್ಕಿಸಿರಿ.

Read More

ಮೈಸೂರು : ನಿರಂತರ ಫೌಂಡೇಶನ್ (ರಿ.) ಮೈಸೂರು ಆಯೋಜಿಸಿರುವ ‘ಸಹಜ ರಂಗ 2025’ ಕಾಲೇಜು ವಿದ್ಯಾರ್ಥಿಗಳಿಗೆ ‘ರಂಗ ತರಬೇತಿ ಶಿಬಿರ’ವು ದಿನಾಂಕ 17 ಆಗಸ್ಟ್ 2025ರಂದು ಮೈಸೂರಿನ ಮಾನಸಗಂಗೋತ್ರಿ ಗಾಂಧಿಭವನ ಆವರಣದಲ್ಲಿ ಉದ್ಘಾಟನೆಗೊಂಡಿತು. ಈ ಶಿಬಿರದ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಿ. ಬಸವಲಿಂಗಯ್ಯನವರು ನೆರವೇರಿಸಿ “ರಂಗಭೂಮಿ ವರ್ತಮಾನದ ಕನ್ನಡಿಯಾಗಿ, ಸಮಾಜದಲ್ಲಿ ಪ್ರಶ್ನಿಸುವ ಮನೋಭಾವನೆಗಳನ್ನು ಬೆಳೆಸಬೇಕು” ಎಂದು ಅಭಿಪ್ರಾಯಪಟ್ಟರು. ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಸ್. ನರೇಂದ್ರ ಕುಮಾರ್ ಮಾತನಾಡಿ “ಸಂವಿಧಾನದ ಮೌಲ್ಯಗಳು ಹಾಗೂ ಆಶಯಗಳನ್ನು ಜನಸಾಮಾನ್ಯರಿಗೂ ತಲುಪಿಸುವ ಕಾರ್ಯ ಹೆಚ್ಚಾಗಿ ನಡೆಯಬೇಕು. ಸಂವಿಧಾನ ಹೇಳಿದ ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಮುಂದಿನ ತಲೆಮಾರಿಗೆ ಬಿತ್ತಲಿ” ಎಂದು ಹಾರೈಸಿದರು. ಡಾ. ಎಂ.ಡಿ. ಸುದರ್ಶನ್ ಮಾತನಾಡಿ “ನಿರಂತರ ರಂಗಭೂಮಿಯ ನಿಜವಾದ ಉದ್ದೇಶಗಳಿಗೆ ತಕ್ಕಂತೆ ಚಟುವಟಿಕೆಗಳನ್ನು ನಡೆಸುತ್ತಿದೆ. ಸಮಾಜಕ್ಕೆ ಅಗತ್ಯವಾದ ವಿಚಾರಗಳನ್ನು ಧಾಟಿಸುತ್ತಿದೆ” ಎಂದು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳೇ ರೂಪಿಸಿದ ಅಭಿಮುಖ…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ನಡೆದ ಜಗತ್ತಿಗೆ ಭಾರತದ ಆಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆ ದಿನಾಂಕಲ 12 ಆಗಸ್ಟ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಭಾರತೀಯ ಸೇನಾಧಿಕಾರಿ ಬೆಳ್ಳಾಲ ಗೋಪಿನಾಥ್ ರಾವ್ ಮಾತನಾಡಿ “ಧಾವಂತದ ಜಗತ್ತು ನಿಮಗಾಗಿ ಕಾಯುವುದಿಲ್ಲ. ಕಷ್ಟಗಳನ್ನು ಅನುಭವಿಸಿದಾಗ ಗೆಲುವು ಸಾಧಿಸುವುದು ಸುಲಭ. ಜೀವದ ಭಯ ಇಲ್ಲದೆ ಗುರಿ ಇಟ್ಟುಕೊಂಡು ಕೆಲಸ ಮಾಡಿ. ದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಮೂಡಿದಾಗ ದೇಶದ ಅಭಿವೃದ್ಧಿ ಸಾಧ್ಯ. ಸ್ವಾಮಿ ವಿವೇಕಾನಂದರ ಚಿಂತನೆಗಳ ಕಿಡಿ ನಿಮ್ಮಲ್ಲಿ ಹುಟ್ಟಿಕೊಂಡಾಗ ಬದುಕು ಉಜ್ವಲವಾಗುತ್ತದೆ” ಎಂದರು. ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ. ಎನ್. ಮಾತನಾಡಿ, “ಸ್ವಾಮಿ ವಿವೇಕಾನಂದರ ಚಿಂತನೆಗಳು, ನಡೆದು ಬಂದ ಹಾದಿ ಶತಮಾನಗಳವರೆಗೂ…

Read More

ಮಂಗಳೂರು : ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ ‘ಸಂಸ್ಕಾರ ಭಾರತೀ’ ಮಂಗಳೂರು ನಗರ ಇದರ ವತಿಯಿಂದ ‘ನಟರಾಜ ಪೂಜನ್’ ಕಾರ್ಯಕ್ರಮವನ್ನು ದಿನಾಂಕ 19 ಆಗಸ್ಟ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಬಲ್ಲಾಳ್ ಬಾಗ್ ಇಲ್ಲಿರುವ ಸನಾತನ ನಾಟ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಇದರ ಅಧ್ಯಕ್ಷರಾದ ಪುರುಷೋತ್ತಮ ಭಂಡಾರಿ ಇವರು ವಹಿಸಲಿದ್ದು, ಉಡುಪಿಯ ಕಲಾ ಚಿಂತಕರಾದ ಪ್ರೊ. ಎಂ.ಎಲ್. ಸಾಮಗ ಇವರು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಶ್ರೀವಿದ್ಯಾ ಇವರ ಶಿಷ್ಯೆ ಕುಮಾರಿ ರೆಮೋನಾ ಎವಟ್ ಪಿರೇರಾ ಇವರಿಗೆ ಅಭಿನಂದನೆ ಮಾಡಲಾಗುವುದು. ಕರ್ಣಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ಕುಮಾರಿ ಶ್ರೀಕರಿ ಮತ್ತು ಗುರು ಪ್ರತಿಮಾ ಶ್ರೀಧರ್ ಇವರ ಶಿಷ್ಯೆ ವಿದುಷಿ ಪ್ರಕ್ಷೀಲ ಜೈನ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಭಾಷೆಗೆ ಸಾಂವಿಧಾನಿಕವಾಗಿ ಮಾನ್ಯತೆ ದೊರೆತ ನೆನಪಿಗಾಗಿ ಪ್ರತಿ ವರ್ಷವೂ ಆಗಸ್ಟ್ 20ರಂದು ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದೆ. ಅದೇ ರೀತಿ ಈ ವರ್ಷ ದಿನಾಂಕ 20 ಆಗಸ್ಟ್ 2025ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಾಂಡ್ ಸೊಭಾಣ್ (ರಿ.) ಸಹಯೋಗದಲ್ಲಿ ಮಂಗಳೂರಿನ ಶಕ್ತಿನಗರದ ಕಲಾಂಗಣ್ ನಲ್ಲಿ ಶಾಲಾ ಕಾಲೇಜುಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸುವ ಮೂಲಕ ವೈಭವಯುತವಾಗಿ ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಆಚರಿಸುತ್ತಿದೆ. ಬೆಳಿಗ್ಗೆ 9-00 ಗಂಟೆಗೆ ಧ್ವಜಾರೋಹಣದ ಮೂಲಕ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನೆರವೇರುತ್ತದೆ. ಮಾಜಿ ಕಾರ್ಪೋರೇಟರ್ ಹಾಗೂ ಕೊಂಕಣಿ ಕಾರ್ಯಕರ್ತರಾದ ಶ್ರೀ ರಂಗನಾಥ ಸಿ. ಕಿಣಿಯವರು ಮುಖ್ಯ ಅತಿಥಿಗಳಾಗಿ, ಮಾಂಡ್ ಸೊಭಾಣ್ (ರಿ.) ಸಂಸ್ಥೆಯ ಅಧ್ಯಕ್ಷರಾದ ಶ್ರೀ ಲುವಿಸ್ ಜೆ. ಪಿಂಟೊ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10-00 ಗಂಟೆಯಿಂದ ಸಂಜೆ…

Read More