Author: roovari

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ದಿನಾಂಕ 16-07-2024 ರಿಂದ 17-08-2024ರ ವರೆಗೆ ನಡೆಯಲಿರುವ 53ನೇ ವರ್ಷದ ‘ಪುರಾಣ ಕಾವ್ಯ ವಾಚನ – ಪ್ರವಚನ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 16-07-2024ರ ಮಂಗಳವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ‘ಜೈಮಿನಿ ಭಾರತ’ ಮತ್ತು ‘ತುರಂಗ ಭಾರತ’ ಪುರಾಣ ಕಾವ್ಯ ವಾಚನ ಹಾಗೂ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ವಿದ್ವಾಂಸ ಪ್ರೊ. ಎಮ್. ಪ್ರಭಾಕರ ಜೋಶಿ ಮಾತನಾಡಿ “ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ – ಪ್ರವಚನದಿಂದ ಪ್ರತಿ ಕಲೆಯೂ,  ಕಲಾವಿದರೂ ಬೆಳೆಯಬೇಕು. ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು…

Read More

ವಿಜಯಪುರ : ಕರ್ನಾಟಕ ಗಮಕ ಕಲಾ ಪರಿಷತ್ತಿನ ವಿಜಯಪುರ ಜಿಲ್ಲಾ ಶಾಖೆ, ಪಿ. ಡಿ. ಜೆ. ಶಾಲೆ ಹಾಗೂ ಕರ್ನಾಟಕ ರಾಜ್ಯ ಗಮಕ ಕಲಾ ಪರಿಷತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಕುಮಾರವ್ಯಾಸ ಪ್ರಶಸ್ತಿ’ ಪುರಸ್ಕೃತ ಗಮಕ ಕಲಾವಿದೆ ಶ್ರೀಮತಿ ಶಾಂತಾ ಕೌತಾಳ ಇವರಿಗೆ ಸನ್ಮಾನ ಹಾಗೂ ಗಮಕ ವಾಚನ ಸಮಾರಂಭವು ದಿನಾಂಕ 12-07-2024ರಂದು ವಿಜಯಪುರದ ಪಿ. ಡಿ. ಜೆ. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ. ಡಿ. ಜೆ. ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲರಾದ ಶ್ರೀಮತಿ ದೇವಕಿ ಕೆ. ಕುಲಕರ್ಣಿ ಮಾತನಾಡಿ “ಗಮಕ ಕಾರ್ಯಕ್ರಮದಿಂದ ವಿದ್ಯಾರ್ಥಿಗಳ ನೀತಿಮಟ್ಟ ಹೆಚ್ಚುತ್ತದೆ.” ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀನಿವಾಸ ಬಾಳಾಜಿ ಕುಲಕರ್ಣಿ, ಗಮಕ ಪರಿಷತ್ ಅಧ್ಯಕ್ಷ ಶ್ರೀ ಬಿ.ಎಂ.ಪಾಟೀಲ, ಗಮಕಿಗಳಾದ ಶ್ರೀಮತಿ ಭೂದೇವಿ ಕುಲಕರ್ಣಿ, ಪುಷ್ಪಾ ಕುಲಕರ್ಣಿ, ಕಲ್ಯಾಣರಾವ್ ದೇಶಪಾಂಡೆ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರ ಭಗವದ್ಗೀತೆಯ ಪಠಣದೊಂದಿಗೆ ಸಮಾರಂಭವು ಆರಂಭಗೊಂಡಿತು. ಗಮಕ ಪರಿಷತ್ತಿನ ಸದಸ್ಯರಾದ ಶ್ರೀ ಎಸ್.…

Read More

ಪುತ್ತೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಪುತ್ತೂರು ತಾಲೂಕು ಘಟಕ ಇದರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಹಯೋಗದೊಂದಿಗೆ ‘ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ’ ಕಾರ್ಯಕ್ರಮವನ್ನು ದಿನಾಂಕ 20-07-2024ರಂದು ಪುತ್ತೂರಿನ ಜೈನ ಭವನ ರಸ್ತೆಯ ರೋಟರಿ ಮನಿಷಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಇವರು ಉದ್ಘಾಟಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಸಿದ್ಧಿಕ್ ನೀರಾಜೆ ಇವರು ಅಧ್ಯಕ್ಷತೆ ವಹಿಸಲಿರುವರು. ಪುತ್ತೂರಿನ ಸಹಾಯಕ ಕಮಿಷನರ್ ಶ್ರೀ ಜುಬಿನ್ ಇವರು ಉಪನ್ಯಾಸ ನೀಡಲಿದ್ದು, ಪತ್ರಿಕಾ ವಿತರಕರಾದ ಶ್ರೀ ವಿಶ್ವನಾಥ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

Read More

ಮಂಗಳೂರು : ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ (ರಿ.) ಇದರ ತ್ರಿಂಶೋತ್ಸವ ಸಂಭ್ರಮದ ಅಂಗವಾಗಿ ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿ ಇದರ ಸಹಯೋಗದೊಂದಿಗೆ ಅರ್ಪಿಸುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -7’ದಲ್ಲಿ ದಿನಾಂಕ 21-07-2024ರಂದು ಮಧ್ಯಾಹ್ನ ಗಂಟೆ 1-30ರಿಂದ ‘ಜ್ಞಾನ‌ಸುಧಾ’ ವಿಚಾರ ಸಂಕಿರಣ ಸಂವಾದವು ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷಾರಾದ ಡಾ. ಎಂ.ಬಿ. ಪುರಾಣಿಕ್ ಇವರು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರವಿಶಂಕರ್ ರಾವ್ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದು, ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ‘ನೃತ್ಯ ಸಂಯೋಜನಾ ತಂತ್ರಗಾರಿಕೆ’ ಎಂಬ ವಿಷಯದ ಬಗ್ಗೆ ಸಂವಾದ ಸಹಿತ ಉಪನ್ಯಾಸ ಮತ್ತು ‘ಭರತನಾಟ್ಯ / ಅಭಿನಯ ಪ್ರಸ್ತುತಿಯಲ್ಲಿ ಪ್ರಸ್ತುತತೆ’ ಎಂಬ ವಿಷಯದ ಕುರಿತು ಸಂವಾದಾತ್ಮಕ ಪ್ರಾತ್ಯಕ್ಷಿಕೆಯಿಂದ ಕೂಡಿದ ವಿಚಾರ ಸಂಕಿರಣ ನಡೆಯಲಿದೆ. ಬೆಂಗಳೂರಿನ ಪ್ರಸಿದ್ಧ ಭರತನಾಟ್ಯ ಕಲಾವಿದ ವಿದ್ವಾನ್…

Read More

ಪಟ್ಟೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 15-07-2024ರಂದು ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷಧ್ರುವ-ಯಕ್ಷಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಹೆಜ್ಜೆ ಅಭ್ಯಾಸ ಮಾಡಿಸಿದರು. ಈ ಸಂದರ್ಭ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು, ಶಾಲಾ ಆಡಳಿತ ಸಮಿತಿ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಉಪಸ್ಥಿರಿದ್ದರು.

Read More

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ‘ಸನಾತನ ಗುರು ಪರಂಪರ’ ಕಾರ್ಯಕ್ರಮವು ದಿನಾಂಕ 20-07-2024ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿದೆ. ಧಾರ್ಮಿಕ ಚಿಂತಕರಾದ ಎನ್.ಆರ್. ದಾಮೋದರ ಶರ್ಮ ಬಾರ್ಕೂರು ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿಯ ಸಮೂಹದ ರಂಗ ನಿರ್ದೇಶಕರು, ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಕೀರ್ತಿಶೇಷ ಪ್ರೊ. ಉದ್ಯಾವರ ಮಾಧವ ಆಚಾರ್ಯ ಇವರ ‘ಗುರುಸಂಸ್ಮರಣೆ’, ಹಿರಿಯ ಕಲಾ ವಿಮರ್ಶಕಿ ಗುರು ವಿದುಷಿ ಪ್ರತಿಭಾ ಎಂ.ಎಲ್. ಸಾಮಗ ಇವರಿಗೆ ‘ಗುರು ನಮನ’ ಮತ್ತು ಉಳ್ಳಾಲದ ನೃತ್ಯ ಸೌರಭ ನಾಟ್ಯಾಲಯ ಇದರ ನೃತ್ಯ ಗುರುಗಳಾದ ವಿದ್ವಾನ್ ಪ್ರಮೋದ್ ಉಳ್ಳಾಲ್ ಇವರಿಗೆ ‘ಗುರುಪ್ರೇರಣ’ ಗೌರವ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶೀಲತಾ ನಾಗರಾಜ್ ಇವರ ಹಿರಿಯ ಶಿಷ್ಯೆಯರಾದ ನಾಟ್ಯ ವಿದುಷಿಯರಾದ ಶ್ರೀಮತಿ ಸಂಜನಾ ಭರತ್, ಶ್ರೀಮತಿ ವೈಶ್ಮ ಶೆಟ್ಟಿ ಮತ್ತು ಕುಮಾರಿಯರಾದ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ‘ಸಿನ್ಸ್ 1999 ಶ್ವೇತಯಾನ-43’ ಕಾರ್ಯಕ್ರಮದಡಿಯಲ್ಲಿ ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಕಾರದೊಂದಿಗೆ ರಸರಂಗ (ರಿ.) ಕೋಟ ಸಾದರ ಪಡಿಸಿದ ‘ಕಲೆ ಮತ್ತು ಶಿಕ್ಷಣ’ಕ್ಕೆ ಸಂಬಂಧಿಸಿದ ‘ಆಷಾಡದಲ್ಲೊಂದು ಚಿಂತನ – ಮಂಥನ’ ಸಂವಾದ ಕಾರ್ಯಕ್ರಮವು ದಿನಾಂಕ 17-07-2024ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ರಂಗಭೂಮಿಯ ವಿವಿಧ ವಾದ್ಯ ಪರಿಕರವನ್ನು ನುಡಿಸುವ ಮೂಲಕ ಸಂವಾದಕ ಗಣ್ಯರು ಚಾಲನೆ ನೀಡಿದರು. ಸಂವಾದಕ ಗಣ್ಯರ ಪರವಾಗಿ ಶ್ರೀಮತಿ ಅಭಿಲಾಷಾ ಎಸ್. ಮಾತನಾಡಿ “ಶಾಲಾ ಪಠ್ಯ ಪುಸ್ತಕಗಳನ್ನು ರಂಗಭೂಮಿಯಲ್ಲಿ ಅಳವಡಿಸಿದರೆ ಅನುಭವಜನ್ಯ ಚಟುವಟಿಕೆಗಳಾಗುತ್ತದೆ. ಕಲಾ ಮಾಧ್ಯಮವನ್ನು ಶಾಲೆಯಲ್ಲಿ ಚುರುಕುಗೊಳಿಸಿದರೆ ಪಂಚೇಂದ್ರಿಯಗಳಿಗೆ ಕೆಲಸ ಸಿಗುತ್ತದೆ. ಬರೇ ಓದು ಜೀವನವನ್ನು ಕಟ್ಟಿ ಕೊಡದು. ಲಡಾಕ್, ಉತ್ತರಕಾಂಡ ಹಾಗೂ ಕರ್ನಾಟಕಗಳ ಬಗ್ಗೆ ಒಂದಿಷ್ಟು ತಿಳಿಯುವುದಕ್ಕೆ ರಂಗ ಪಠ್ಯಗಳು ಪೂರಕವಾಗುತ್ತದೆ. ಶಿಕ್ಷಣದಲ್ಲಿ ಪ್ರತಿಯೊಂದು ಮಗುವಿಗೂ ಒಂದು ಕಲಾ ಪ್ರಕಾರದಲ್ಲಿ ಆಸಕ್ತಿಯನ್ನು ಹುಟ್ಟಿಸುವ ಕೆಲಸ ಶಿಕ್ಷಕರಿಂದ ಆಗಬೇಕು. ಜೀವನದಲ್ಲಿ ಏಳ್ಗೆಯನ್ನು ಕಂಡುಕೊಳ್ಳಬೇಕಾದರೆ ಮಕ್ಕಳು ಕಲಾ ಪ್ರಕಾರದಲ್ಲಿ…

Read More

ಕಾಸರಗೋಡು : ಚಂದ್ರಗಿರಿಯ ‘ಮೇಘರಂಜನಾ’ ತಂಡವು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮತ್ತು ‘ರಂಗ ಚಿನ್ನಾರಿ’ ಕಾಸರಗೋಡು ಇದರ ಸಹಕಾರದೊಂದಿಗೆ ಆಯೋಜಿಸಿದ ‘ಭಾವ ಶಿಬಿರ’ವು ದಿನಾಂಕ 13-07-2024 ರಂದು ಕಾಸರಗೋಡಿನ ಕೂಡ್ಲು ಗೋಪಾಲಕೃಷ್ಣ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ವ್ಯವಸ್ಥಾಪಕ ಹಾಗೂ ಗಾಯಕರಾದ ಕೆ. ಜಿ. ಶ್ಯಾನುಭೋಗ್ ಮಾತನಾಡಿ “ಸಂಗೀತವನ್ನು ಅಭ್ಯಾಸ ಮಾಡುವ ಮೂಲಕ ಸಂಸ್ಕಾರಯುತ ಜೀವನ ಸಾಗಿಸಲು ಸಾಧ್ಯ. ಶ್ರುತಿ, ತಾಳ, ಲಯಬದ್ಧವಾಗಿ ಸಂಗೀತವನ್ನು ಅಭ್ಯಾಸ ಮಾಡಬೇಕಾಗುತ್ತದೆ. ಅದನ್ನೇ ನಮ್ಮ ಜೀವನದಲ್ಲಿ ಅಳವಡಿಸಿದಾಗ ನಾವು ಸಭ್ಯರಾಗಿ ಬದುಕಬಹುದು. ಭಾವಗೀತೆಯ ಮೂಲಕ ಭಾವನೆಗಳನ್ನು ಅರ್ಥಮಾಡಿಕೊಳ್ಳಬಹುದು ಮತ್ತು ಅದರಿಂದ ಮಾನವೀಯತೆ ಮೌಲ್ಯಗಳನ್ನು ಹೆಚ್ಚಿಸಬಹುದು.” ಎಂದು ಹೇಳಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಮಾತನಾಡಿ “ಕಲಾ ಗ್ರಾಮವಾದ ಕೂಡ್ಲಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಗಬೇಕು ಮತ್ತು ಉದಯೋನ್ಮಖ ಕಲಾವಿದರ ಸೃಷ್ಟಿ ಆಗಬೇಕು.” ಎಂದು ಹೇಳಿದರು. ಅಧ್ಯಕ್ಷತೆ…

Read More

ಪ್ರಶಸ್ತಿ-ಪುರಸ್ಕಾರ-ಸಮ್ಮಾನ- ಈ ಮೂರರಲ್ಲಿ ವ್ಯತ್ಯಾಸವಿರುವುದು ಗೊತ್ತಿದ್ದವರಿಗಷ್ಟೇ ಗೊತ್ತು. ಇತ್ತೀಚಿನ ದಿನಗಳಲ್ಲಿ ಅವುಗಳೆಲ್ಲ ಒಂದೇ ಎಂದುಕೊಂಡವರೇ ಹೆಚ್ಚು. ಅವುಗಳಿಗೆ ಮಾನದಂಡದ ಮಾನವೇ ದಂಡವಾಗಿ ಪ್ರಶಸ್ತವಲ್ಲದವರು ಪ್ರಶಸ್ತರೆನಿಸುತಿದ್ದ ಬರ್ಬರವಾದ ಕಾಲಘಟ್ಟದಲ್ಲಿ ಡಾ. ಶ್ರೀಪಾದ ಶೆಟ್ಟರ ಆಲೋಚನಾ ವೇದಿಕೆಯ “ಸುಮನಶ್ರೀ ಪ್ರಶಸ್ತಿ”ಯು ಪ್ರತ್ಯೇಕವಾಗಿ -ವಿಶೇಷವಾಗಿ- ಅನನ್ಯವಾಗಿರುವ ಕುರಿತಂತೆ ತೆರೆದಿಡುವುದು ಸಕಾಲಿಕವೇ ಹೌದು. ಪ್ರಶಸ್ತಿಯ ಕುರಿತಂತೆ ಪರಾಮರ್ಶಿಸುವಾಗ ಮುಖ್ಯವಾಗಿ ಮೂರು ಸಂಗತಿಗಳನ್ನು ಗಮನಿಸಲೇಬೇಕು ಎಂಬುದು ನನ್ನ ಅಭಿಪ್ರಾಯ. ಒಂದು – ಪ್ರಶಸ್ತಿಯನ್ನು ಕೊಡುವವರು ಯಾರು ? ಇನ್ನೊಂದು ಪ್ರಶಸ್ತಿಯನ್ನು ಪಡೆಯುವವರು ಯಾರು ? ಮತ್ತೊಂದು – ಪ್ರಶಸ್ತಿಯನ್ನು ಕೊಡುವಾಗ ಇರುವವರು ಯಾರು?- ಈ ಅಂಶಗಳನ್ನು ಗಮನಿಸಿದಲ್ಲಿ ಆ ಪ್ರಶಸ್ತಿಯ ಘನತೆ ಏನು ಎಂಬುದು ಸ್ವಯಂವೇದ್ಯವಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಬಹುಮುಖಿ ಅಭಿಜಾತ ಪ್ರತಿಭೆಯಾದ ಡಾ. ಶ್ರೀಪಾದ ಶೆಟ್ಟಿಯವರು ಜಿಲ್ಲೆಯನ್ನು ಮೀರಿ ಬೆಳೆದು ನಾಡಿನ ಆಸ್ತಿಯಾಗಿದ್ದವರು. ಔಪಚಾರಿಕವಾಗಿ ಹಾಗೂ ಅನೌಪಚಾರಿಕವಾಗಿ ಅವರ ವಿದ್ಯಾರ್ಥಿಯಾದವರೆಲ್ಲ ಲಕ್ಷಾಂತರ ಸಂಖ್ಯೆಯಲ್ಲಿ ದೇಶ-ವಿದೇಶಗಳಲ್ಲಿ ಉನ್ನತವಾದ ಸ್ಥಾನಮಾನಗಳಲ್ಲಿದ್ದಾರೆ. ಮಾತು, ಬರವಣಿಗೆ ಹಾಗೂ ಸಂಘಟನೆಯೊಂದಿಗಿನ ಅವರ ಬದುಕು…

Read More

ಉಪ್ಪಿನಂಗಡಿ : ಉಪ್ಪಿನಂಗಡಿ ಪರಿಸರದ ನೆಕ್ಕಿಲಾಡಿ ನಿವಾಸಿ ತೆಂಕುತಿಟ್ಟಿನ ಅಗ್ರಮಾನ್ಯ ಹಿರಿಯ ಕಲಾವಿದರಾದ ಶ್ರೀಮಾನ್ ಕುಂಬ್ಳೆ ಶ್ರೀಧರ ರಾವ್ ಇವರ ಆಕಸ್ಮಿಕ ನಿಧನಕ್ಕೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವು ಉಪ್ಪಿನಂಗಡಿಯ ಶ್ರೀಗುರು ಸುಧೀಂದ್ರ ಕಲಾ ಮಂದಿರದಲ್ಲಿ ದಿನಾಂಕ 14-07-2024ರಂದು ಜರಗಿತು. ಶ್ರೀರಾಮ ಶಾಲೆಯ ಸಂಚಾಲಕರಾದ ಶ್ರೀ ಯು.ಜಿ. ರಾಧ ಇವರು ನುಡಿನಮನ ಸಲ್ಲಿಸುತ್ತಾ “ಶ್ರೀಧರಣ್ಣ ಇವರು ಕಲಾವಿದರಾಗಿ ಹೆಸರು ಗಳಿಸುವುದಕ್ಕಿಂತಲೂ ಹೆಚ್ಚು ಅವರು ಮಾಡಿದ ಪಾತ್ರಗಳು ಧ್ವನಿಯಾಗಿ ಹೆಸರುವಾಸಿಯಾಗಿ ಜೀವಕಳೆ ತಂದ ಅದ್ಭುತ ಕಲೆಗಾರ. ಶ್ರೀಧರ ರಾವ್ ಎಂಬ ಯಕ್ಷರಂಗದ ಅಮೂಲ್ಯ ರತ್ನವೊಂದು ಕಳಚಿಕೊಂಡದ್ದು ಯಕ್ಷಗಾನಕ್ಕೆ ಬಲು ದೊಡ್ಡ ನಷ್ಟ. ಅವರ ಸಹೃದಯತೆ, ಹೃದಯ ವೈಶಾಲ್ಯತೆ, ಕಲೆಯ ಪ್ರೀತಿ ವಿಶ್ವಾಸವು ಮುಂದಿನ ಯುವ ಯಕ್ಷಗಾನ ಕಲಾವಿದರಿಗೆ ಸ್ಪೂರ್ತಿದಾಯಕವಾಗಿರಲಿ” ಎಂದು ಆಶಿಸಿದರು. ಯಕ್ಷ ಸಂಗಮ ಉಪ್ಪಿನಂಗಡಿಯ ಕೃಷ್ಣ ಮಲ್ಲಿಗೆ ಮಾತನಾಡುತ್ತಾ ತನ್ನ ಮತ್ತು ಶ್ರೀಧರಣ್ಣನ ಜೊತೆ ಸುಮಾರು 25 ವರ್ಷಗಳ ಒಡನಾಟ ಸ್ಮರಿಸಿಕೊಂಡರು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧಾಕರ ಶೆಟ್ಟಿಯವರು…

Read More