Author: roovari

ಕೊಪ್ಪಳ : ಮೇ ಸಾಹಿತ್ಯ ಮೇಳದ ಬಳಗದವರಾಗಿರುವ ದಾವಣಗೆರೆಯ ಉಪಪ್ರಾಚಾರ್ಯರಾದ ಕಲ್ಪಿತರಾಣಿ ಇವರು ತಮ್ಮ ತಂದೆಯ ಹೆಸರಿನಲ್ಲಿ ಪ್ರಯೋಜಿಸಿರುವ ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿಗೆ ಮೈಸೂರಿನ ಜನಾರ್ದನ ಜನ್ನಿ ಆಯ್ಕೆಯಾಗಿದ್ದಾರೆ. ಮೇ 25 ಹಾಗೂ 26ರಂದು ಕೂಪ್ಪಳದಲ್ಲಿ ನಡೆಯಲಿರುವ ಮೇ ಸಾಹಿತ್ಯ ಮೇಳದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಪ್ರಶಸ್ತಿಯು ಹತ್ತು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಈ ಪ್ರಶಸ್ತಿ ಕಳೆದ ವರ್ಷ ರಂಗಕರ್ಮಿ ಬಸವಲಿಂಗಯ್ಯ ಅವರಿಗೆ ಸಂದಾಯವಾಗಿತ್ತು. ಸಮುದಾಯದ ಗೌರವಾಧ್ಯಕ್ಷರಾಗಿ ಹಾಗೂ ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಮೈಸೂರಿನ ಜನಾರ್ದನ ಜನ್ನಿ ತಮ್ಮ ಕಂಚಿನ ಕಂಠದ ಕ್ರಾಂತಿಗೀತೆಗಳಿಂದ ಕರ್ನಾಟಕದ ಜನಚಳುವಳಿಗೆ ದೊಡ್ಡ ಶಕ್ತಿ ತುಂಬಿದವರು ಹಾಗೂ ಸಾಹಿತ್ಯದಷ್ಟೇ ಹಾಡುಗಾರಿಕೆಗೂ ಘನತೆಯನ್ನು ತಂದುಕೊಟ್ಟವರು ಮತ್ತು ಹೃದಯ ತುಂಬಿ ಹಾಡುತ್ತ ರಾಜ್ಯದ ಜನಗಳಲ್ಲಿ ಅರಿವಿನ ಎಚ್ಚರ ಮೂಡಿಸಿದವರು. ಎಂಬತ್ತು ತೊಂಬತ್ತರ ದಶಕಗಳಲ್ಲಿ ಎಲ್ಲಿಯೇ ಚಳವಳಿಗಳು ನಡೆದರೂ ಅಲ್ಲಿ ಜನ್ನಿ ಇರಲೇಬೇಕು ಎಂಬಂಥ ವಾತಾವರಣ ಇತ್ತು. ಈ ಮೂಲಕ ನೂರಾರು…

Read More

ಕಲಬುರಗಿ : 2013ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪ್ರಶಸ್ತಿ ಪುರಸ್ಕೃತ, ಪ್ರತಿಭಾವಂತ ಕವಿ ಹಾಗೂ ಕೇಂದ್ರೀಯ ವಿವಿಯ ಕನ್ನಡ ಸಂಶೋಧನಾ ವಿದ್ಯಾರ್ಥಿ ಆನಂದ ದಿನಾಂಕ 20-05-2024ರಂದು ವಿಧಿವಶರಾದರು. ಕೋಲಾರ ಮೂಲದ ವಿದ್ಯಾರ್ಥಿ ಆನಂದ್ ಲಕ್ಕೂರ್ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಪಿ. ಎಚ್‌. ಡಿ. ಅಧ್ಯಯನ ಮಾಡುತ್ತಿದ್ದ ಆನಂದ ಲಕ್ಕೂರ್ ಒಳ್ಳೆಯ ಬರಹ ಗಾರರಾಗಿದ್ದರು. 44 ವರ್ಷ ಪ್ರಾಯದ ಆನಂದ್ ಲಕ್ಕೂರ್ ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕರಾಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ರಚಿಸಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. 2013ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ…

Read More

ಮೂಡುಬಿದಿರೆ : ನಾಡು ಕಂಡ ಚಿಂತನಾಶೀಲ ಲೇಖಕರಾಗಿದ್ದ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಪ್ರತಿವರ್ಷವೂ ನೀಡುತ್ತಾ ಬಂದಿರುವ ‘ಶಿವರಾಮ ಕಾರಂತ ಪ್ರಶಸ್ತಿ’ಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಖ್ಯಾತ ಕವಿಗಳು ಬರಹಗಾರರು ಆಗಿರುವ ಬೆಂಗಳೂರಿನ ಡಾ. ಚಿನ್ನಸ್ವಾಮಿ ಮೂಡ್ನಾಕೂಡು, ಖ್ಯಾತ ಜಾನಪದ ವಿದ್ವಾಂಸರು ಸೃಜನಶೀಲ ಲೇಖಕರು ಆಗಿರುವ ಮೈಸೂರಿನ ಪ್ರೊ. ಕೃಷ್ಣಮೂರ್ತಿ ಹನೂರ, ಕನ್ನಡದ ಕೀಲಿಮಣೆ ವಿನ್ಯಾಸ ಸಂಶೋಧಿಸಿ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿದ ಉಡುಪಿಯ ಕೆ.ಪಿ. ರಾವ್ ಇವರುಗಳಿಗೆ ಮತ್ತು ಸಂಸ್ಕೃತಿಯನ್ನು ಕಟ್ಟುವ ಕಾಯಕದಲ್ಲಿ ಅರ್ಪಣಾ ಭಾವದಿಂದ 75 ವರ್ಷಗಳ ಕಾಲ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ಈ ವರ್ಷದ ‘ಶಿವರಾಮ ಕಾರಂತ ಪ್ರಶಸ್ತಿ’ಯನ್ನು ನೀಡಲು ಪ್ರತಿಷ್ಠಾನ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಮರನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ್ ಮಾವಿನ ಕುಳಿ ತಿಳಿಸಿದ್ದಾರೆ.

Read More

ಮಡಿಕೇರಿ : ಕೊಡವ ಮಕ್ಕಡ ಕೂಟದ 100ನೇ ಪುಸ್ತಕಕ್ಕೆ ಬರಹಗಾರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ನೂರು ಬರಹಗಾರರ ಲೇಖನಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು ಎಂದು ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಇವರು ತಿಳಿಸಿದ್ದಾರೆ. ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ, ಇತಿಹಾಸ ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ಬರಹ ಯಾವ ಭಾಷೆಯಲ್ಲಿ ಬೇಕಾದರೂ ಇರಬಹುದು. ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಕೊಡವ ಮಕ್ಕಡ ಕೂಟ, ಕೆ. ಬಾಡಗ, ಎಫ್.ಎಂ.ಕೆ.ಎಂ.ಸಿ. ಕಾಲೇಜು ಪೋಸ್ಟ್, ಮಡಿಕೇರಿ, ಕೊಡಗು ಈ ವಿಳಾಸಕ್ಕೆ ಕಳುಹಿಸಬಹುದು ಅಥವಾ ಬೊಳ್ಳಜಿರ ಬಿ. ಅಯ್ಯಪ್ಪ 9880778047 ಮೊ. ಸಂಖ್ಯೆಗೆ ವಾಟ್ಸ್ ಅಪ್ ಮಾಡಬಹುದು. ಲೇಖನಗಳನ್ನು ದಿನಾಂಕ 30-06-2024ರೊಳಗೆ ಕಳುಹಿಸಬೇಕು.

Read More

ಕೊಪ್ಪಳ : ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಮತ್ತು ಮೇ ಸಾಹಿತ್ಯ ಮೇಳ ಬಳಗ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ 10ನೇ ‘ಮೇ ಸಾಹಿತ್ಯ ಮೇಳ’ವು ದಿನಾಂಕ 25-05-2024 ಮತ್ತು 26-05-2024ರಂದು ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ನಡೆಯಲಿದೆ. ದಿನಾಂಕ 25-05-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಬಳ್ಳಾರಿ ಸಿ. ಚನ್ನಬಸವಣ್ಣ ಇವರು ಬಿ.ಆರ್. ತುಬಾಕಿ ದೇವೇಂದ್ರಪ್ಪ ಡೊಳ್ಳಿನ ಪುಸ್ತಕ ಮಳಿಗೆ ಹಾಗೂ ಏಕಪ್ಪ ಚಿತ್ರಗಾರ ಇವರು ಕಾಳಪ್ಪ ಪತ್ತಾರ ಚಿತ್ರಕಲಾ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2-00 ಗಂಟೆಗೆ ಗೋಷ್ಠಿ 1ರಲ್ಲಿ ‘ಸಂವಿಧಾನ ಭಾರತ’, ಗೋಷ್ಠಿ 2ರಲ್ಲಿ ‘ವರ್ತಮಾನದಲ್ಲಿ ಧರ್ಮ ರಾಜಕರಣ’ ಹಾಗೂ ಗೋಷ್ಠಿ 3ರಲ್ಲಿ ‘’ಬದುಕು – ಹಾಡು’ ಎಂಬ ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ. ಸಂಜೆ ಗಂಟೆ 7-00ರಿಂದ ಕವಿಗೋಷ್ಠಿ 1 ನಡೆಯಲಿದೆ. ದಿನಾಂಕ 26-05-2024ರಂದು ಬೆಳಗ್ಗೆ ಗಂಟೆ 9-00ಕ್ಕೆ ಕವಿಗೋಷ್ಠಿ 2 ಪ್ರಸ್ತುತಗೊಳ್ಳಲಿದೆ. ಗಂಟೆ 11-00ರಿಂದ ಗೋಷ್ಠಿ 4ರಲ್ಲಿ…

Read More

ನೃತ್ಯ, ಸಂಗೀತ, ಸಂಭಾಷಣೆ, ವೇಷಭೂಷಣ, ಪ್ರಸಾಧನ ಮತ್ತು ರಂಗ ತಂತ್ರಗಳನ್ನು ಒಂದು ವಿಶಿಷ್ಟ ಶೈಲಿ ಮತ್ತು ರೂಪದೊಂದಿಗೆ ಸಂಯೋಜಿಸುವ ಯಕ್ಷಗಾನದ ಕಲಾ ಪ್ರಕಾರವು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಮತ್ತು ಕಾಸರಗೋಡು ಜಿಲ್ಲೆಯ ಶ್ರೀಮಂತ ಕಲೆ. ಇಂತಹ ಶ್ರೀಮಂತ ಕಲೆಯಲ್ಲಿ ಮಿಂಚುತ್ತಿರುವವರು ರೇವತಿ ನವೀನ್. ಏಪ್ರಿಲ್ 09ರಂದು ಪೂವಪ್ಪ ಪೂಜಾರಿ ಹಾಗೂ ಕಮಲಾ ಪೂಜಾರಿ ಇವರ ಮಗಳಾಗಿ ರೇವತಿ ನವೀನ್ ಅವರ ಜನನ. SSLC ಇವರ ವಿದ್ಯಾಭ್ಯಾಸ. ಶಾಲಾ ದಿನಗಳಲ್ಲಿ ತಾಯಿಯ ಜೊತೆಗೆ ಯಕ್ಷಗಾನ ನೋಡಲು ಹೋಗುತ್ತಿದ್ದ ಕಾರಣ ನಾನು ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆಯಾಯಿತು ಎಂದು ಹೇಳುತ್ತಾರೆ ರೇವತಿ ನವೀನ್. ಯಕ್ಷಗಾನ ಗುರುಗಳು:- ಶಂಕರನಾರಾಯಣ ಮೈರ್ಪಾಡಿ, ಗಿರೀಶ್ ನಾವಡ ಕಾಟಿಪಳ್ಳ, ಪೂರ್ಣಿಮಾ ಯತೀಶ್ ರೈ, ವಾಸುದೇವ ರಾವ್ ತಡಂಬೈಲ್ ತಾಳಮದ್ದಳೆ ಗುರುಗಳು. ಮಾಲಿನಿ ದೂತ, ಪಾತ್ರಿ, ದ್ವಾರಪಾಲಕ, ಚಿತ್ರಗುಪ್ತ, ವನಪಾಲಕ, ದೇವೇಂದ್ರ ದೂತ, ಬ್ರಾಹ್ಮಣ, ಶುಕ್ರಾಚಾರ್ಯ, ಧರ್ಮರಾಯ ಇತ್ಯಾದಿ ಪಾತ್ರವನ್ನು ರಂಗದಲ್ಲಿ ನಿರ್ವಹಿಸಿದ್ದಾರೆ. ಯಕ್ಷಗಾನದ ಇಂದಿನ…

Read More

ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಂವಾದ ಕಾರ್ಯಕ್ರಮವನ್ನು ದಿನಾಂಕ 18-05-2024ರಂದು ಎಳನೀರು ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಈ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್‌.ಡಿ.ಎಂ. ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಬಿ.ಎ. ಕುಮಾರ ಹೆಗ್ಡೆ “ಸಾಹಿತ್ಯ, ಸಂಗೀತ ಮತ್ತು ಕಲೆಗಳಲ್ಲಿ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತಗೊಳಿಸುತ್ತದೆ. ಎಲ್ಲರೂ ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡಾಗ ಸಾತ್ವಿಕ ಪರಿಸರ ಉಂಟಾಗುತ್ತದೆ” ಎಂದು ಹೇಳಿದರು. ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡವರ ನೆನಪು ಸದಾ ಶಾಶ್ವತವಾಗಿರುತ್ತದೆ. ಸಾಹಿತ್ಯಕ್ಕೆ ಬದುಕನ್ನು ಹಗುರಗೊಳಿಸುವ ಸಾಮರ್ಥ್ಯವಿದೆ. ಕನ್ನಡ ಸಾಹಿತ್ಯದ ಜಾನಪದ, ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಸಾಹಿತ್ಯ ಪ್ರಕಾರಗಳು ಕಾಲಕಾಲಕ್ಕೆ ಬದುಕಿನ ಶ್ರೀಮಂತಿಕೆಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿವೆ” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ…

Read More

ಮಂಗಳೂರು: ಹರಿಕಥಾ ಪರಿಷತ್ ಮಂಗಳೂರು ಇದರ 14ನೇ ವಾರ್ಷಿಕೋತ್ಸವ ದಿನಾಂಕ 18-05-2024ರಂದು ಮಂಗಳೂರಿನ ಉರ್ವಸ್ಟೋರಿನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು “ಹರಿಕಥಾ ಕಲೆಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಹರಿಕಥಾ ಪರಿಷತ್ತಿನ ಕಾರ್ಯ ಶ್ಲಾಘನೀಯ. ಹರಿಕಥೆಯಂತಹ ಚಟುವಟಿಕೆಗಳಿಗೆ ಸರಕಾರದ ಪ್ರೋತ್ಸಾಹ ಏನೇನೂ ಸಾಲದು. ಸರಕಾರ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಜನತೆಯ ಸಹಕಾರವೂ ಅತ್ಯಗತ್ಯ.” ಎಂದರು. ಅಧ್ಯಕ್ಷತೆ ವಹಿಸಿದ್ದ ಹರಿಕಥಾ ಪರಿಷತ್ತಿನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಮಾತನಾಡಿ “ಈ ಕಲೆಯ ಮೇಲೆ ಮಕ್ಕಳು ಆಸಕ್ತಿ ವಹಿಸುವ ನಿಟ್ಟಿನಲ್ಲಿ ಹೆತ್ತವರು ಪ್ರೇರೇಪಿಸಬೇಕು.” ಎಂದರು. ಉರ್ವಸ್ಟೋರ್ ಶ್ರೀಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಹರಿದಾಸ ಪ್ರವಚನಕಾರರಾದ ಯಜೇಶ್ ಹೊಸಬೆಟ್ಟು, ಕಲಾಪೋಷಕ ರಘುರಾಮ್ ಭಟ್ ಕಣ್ವತೀರ್ಥ, ಹಾರ್ಮೋನಿಯಂ ಹಾಗೂ ಕೀಬೋರ್ಡ್ ವಾದಕರಾದ ಸತೀಶ್ ಸುರತ್ಕಲ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಅಧ್ಯಕ್ಷ ಎ. ಸಿ.…

Read More

ಪುತ್ತೂರು : ಬೆಂಗಳೂರಿನ ರಾಸಾ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟೇಬಲ್‌ ಟ್ರಸ್ಟ್ (ರಿ.) ಮತ್ತು ರಾಸಾ ಪಬ್ಲಿಕೇಷನ್ಸ್‌ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇದರ ಸಹಯೋಗದಲ್ಲಿ ‘ಕನ್ನಡ ನುಡಿ ಸಂಭ್ರಮ’ ಕಾರ್ಯಕ್ರಮವನ್ನು ದಿನಾಂಕ 25-05-2024ರಂದು ಬೆಳಿಗ್ಗೆ 10-00 ಗಂಟೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ, ಸಾಹಿತ್ಯ ಕವಿಗೋಷ್ಠಿ ಮತ್ತು ರಾಜ್ಯದ ವಿವಿಧ ಕ್ಷೇತ್ರಗಳ ಸೇವಾ ಸಾಧಕರಿಗೆ ‘ಕರ್ನಾಟಕ ಸೇವಾರತ್ನ ಪ್ರಶಸ್ತಿ-2024’ ಪ್ರದಾನ ನಡೆಯಲಿರುವುದು.

Read More

ಹೆಬ್ರಿ : ಅಂಬಾತನಯ ಮುದ್ರಾಡಿಯವರ ಪತ್ನಿ, ಮಕ್ಕಳು ಮತ್ತು ಕುಟುಂಬಿಕರು ಇವರ ವತಿಯಿಂದ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 25-05-2024ರಂದು ಅಪರಾಹ್ನ 3-00 ಗಂಟೆಗೆ ಮುದ್ರಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ವಹಿಸಲಿದ್ದು, ಉಡುಪಿಯ ಯಕ್ಷಗಾನ ಕಲಾರಂಗ ಇದರ ಕಾರ್ಯದರ್ಶಿಯಾದ ಶ್ರೀ ಮುರಳಿ ಕಡೆಕಾರ್ ಇವರು ಪ್ರಸಿದ್ಧ ಸಾಹಿತಿ, ಹರಿದಾಸ, ಅರ್ಥಧಾರಿ, ಪ್ರವಚನಕಾರ ಮತ್ತು ಚಿಂತಕರಾಗಿದ್ದ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆ ಮತ್ತು ಅಭಿನಂದನಾ ನುಡಿಗಳನ್ನಾಡಲಿರುವರು. ಹಿರಿಯ ಸ್ತ್ರೀ ವೇಷಧಾರಿ ಡಾ. ಕೋಳ್ಯೂರು ರಾಮಚಂದ್ರ ರಾವ್ ಇವರಿಗೆ ‘ಅಂಬಾತನಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ರುಕ್ಮಾಂಗದ ಚರಿತ್ರೆ’ ಎಂಬ ಪ್ರಸಂಗದ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ.

Read More