Author: roovari

ಮಂಗಳೂರು : ಬರಹಗಾರ್ತಿ ಅಕ್ಷತಾ ರಾಜ್ ಪೆರ್ಲ ಅವರ ‘ಮಂದಾರ ಮಲಕ’ ಮತ್ತು ಬರಹಗಾರ ಬಾಲಕೃಷ್ಣ ಕೊಡವೂರು ಅವರ ‘ಮಾಯದಪ್ಪೆ ಮಾಯಕಂದಾಲ್’ ತುಳು ನಾಟಕ ಕೃತಿಗಳ ಲೋಕಾರ್ಪಣಾ ಕಾರ್ಯಕ್ರಮವು ದಿನಾಂಕ 05-01-2024ರ ಶುಕ್ರವಾರದಂದು ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು “ಗಂಭೀರ ನಾಟಕಗಳತ್ತ ಪ್ರೇಕ್ಷಕರು ಒಲವು ತೋರುತ್ತಿರುವ ಸಂದರ್ಭದಲ್ಲಿ ಇವೆರಡು ಕೃತಿಗಳು ಬಿಡುಗಡೆಯಾಗಿರುವುದು ಸಕಾಲಿಕವಾಗಿದೆ. ಕೃತಿಗಳ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಇವು ರಂಗಕ್ಕೆ ಇಳಿಯಲಿ” ಎಂದು ಆಶಿಸಿದರು. ‘ಮಂದಾರ ಮಲಕ’ ಕೃತಿ ಪರಿಚಯಿಸಿದ ಪ್ರೊ. ಮೀನಾಕ್ಷಿ ರಾಮಚಂದ್ರ ಅವರು ಮಾತನಾಡಿ “ತುಳುವಿನ ವಾಲ್ಮೀಕಿ ಎಂದೇ ಖ್ಯಾತರಾಗಿರುವ ಮಂದಾರ ಕೇಶವ ಭಟ್ ಅವರ 446 ಪುಟಗಳ ‘ಮಂದಾರ ರಾಮಾಯಣ’ ಕೃತಿಯನ್ನು ಅಕ್ಷತಾ ರಾಜ್ ಅವರು ನಾಟಕ ರೂಪಕ್ಕೆ ಇಳಿಸಿದ್ದಾರೆ. ಮೂಲ ರಾಮಾಯಣಕ್ಕೆ ಕುಂದುಬಾರದಂತೆ ನಾಟಕ ನಿರೂಪಣೆ ಮಾಡಲಾಗಿದೆ. ನಾಟಕದಲ್ಲಿ ಸ್ತ್ರೀ ಪಾತ್ರಗಳು ಹೆಚ್ಚು ಪ್ರಭಾವ ಬೀರಿವೆ. ಮಂಥರೆ, ಶೂರ್ಪನಖಿ, ಶಬರಿಯಂತಹ ಸ್ತ್ರೀ ಪಾತ್ರಗಳ…

Read More

ಕಾಸರಗೋಡು : ಮಾಯ್ಪಾಡಿಯ ಡಯಟ್ ವಿದ್ಯಾಸಂಸ್ಥೆಯ TTC ವಿದ್ಯಾರ್ಥಿಗಳಿಗೆ ರಂಗಚಿನ್ನಾರಿಯ ಸಂಗೀತ ಘಟಕ ಸ್ವರಚಿನ್ನಾರಿಯು ಏರ್ಪಡಿಸಿದ ಒಂದು ದಿನದ ಕನ್ನಡ ನಾಡಗೀತೆ -ಭಾವಗೀತೆಗಳ ಕಲಿಕಾ ಶಿಬಿರ ‘ಕನ್ನಡ ಧ್ವನಿ’ ದಿನಾಂಕ 06-01-2024ರ ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಡಯಟ್ ಮಾಯ್ಪಾಡಿಯ ಪ್ರಾoಶುಪಾಲರು ಶ್ರೀ ಡಾ ಕೆ ರಘುರಾಮ್ ಭಟ್ ಉಧ್ಘಾಟಿಸಿ ಮಾತನಾಡುತ್ತಾ “ಕಾಸರಗೋಡಿನ ಕನ್ನಡಿಗರು ತಮ್ಮ ಮಾತೃಭಾಷೆಯನ್ನು ಗೌರವಿಸಿ ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಇಂತಹ ಕನ್ನಡದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅನಿವಾರ್ಯ ಮತ್ತು ರಂಗಚಿನ್ನಾರಿಯು ಈ ಕೆಲಸವನ್ನು ಮಾಡುತ್ತಿರುವುದು ಪ್ರಶಂಸನೀಯ. ಮುಂದೆಯೂ ವಿವಿಧ ಕನ್ನಡ ಕಾರ್ಯಕ್ರಮಗಳಿಗೆ ಸಂಸ್ಥೆ ಮುಕ್ತ ಬೆಂಬಲ ನೀಡಲಿದೆ.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಂಗಚಿನ್ನಾರಿ ನಿರ್ದೇಶಕರಲ್ಲಿ ಓರ್ವರಾದ ಶ್ರೀ ಕೆ ಸತೀಶ್ಚಂದ್ರ ಭಂಡಾರಿ ಮಾತನಾಡಿ ರಂಗಚಿನ್ನಾರಿಯ ಹುಟ್ಟಿನ ಉದ್ದೇಶ ಹಾಗೂ ಇದುವರೆಗೆ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡ ಶ್ರಮವನ್ನು ನೆನಪಿಸುತ್ತಾ “ವಿದ್ಯಾರ್ಥಿಗಳು ಭಾಷಾಭಿಮಾನ ಮತ್ತು ವಿದ್ಯೆ ಎರಡನ್ನೂ ಸಮಾನವಾಗಿ ಸ್ವೀಕರಿಸಿ ಮುನ್ನಡೆಯಿರಿ.” ಎಂದು ಕಿವಿಮಾತನ್ನು ಹೇಳಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ…

Read More

ಖ್ಯಾತ ಹಿರಿಯ ನಾಟ್ಯಗುರು ರೇವತಿ ನರಸಿಂಹನ್ ಅವರ ಬಳಿ ಬದ್ಧತೆಯಿಂದ ನಾಟ್ಯಾಭ್ಯಾಸ ಮಾಡುತ್ತಿರುವ ಬಹುಮುಖ ಪ್ರತಿಭೆ ಧನ್ಯ ಕಶ್ಯಪ್. ಶ್ರೀ ಮುರಳೀಧರ್ ಮತ್ತು ವೀಣಾ ಅವರ ಪುತ್ರಿಯಾದ ಧನ್ಯ, ಕಳೆದ 13 ವರ್ಷಗಳಿಂದ ನಿಷ್ಠೆಯಿಂದ ನೃತ್ಯ ಕಲಿಯುತ್ತಿದ್ದು, ನಾಡಿನಾದ್ಯಂತ ಅನೇಕ ಕಾರ್ಯಕ್ರಮಗಳನ್ನು ನೀಡಿ ಮೆಚ್ಚುಗೆ ಗಳಿಸಿದ್ದಾಳೆ. ನೃತ್ಯದ ವಿವಿಧ ಆಯಾಮಗಳನ್ನು ಅರಿತಿರುವ ಧನ್ಯ 13-01-2024ರ ಶನಿವಾರದಂದು ಸಂಜೆ 5.30 ಗಂಟೆಗೆ ಜಯನಗರದ ಜೆ.ಎಸ್.ಎಸ್. ಸಭಾಂಗಣದಲ್ಲಿ ವಿದ್ಯುಕ್ತವಾಗಿ ತನ್ನ ‘ರಂಗಪ್ರವೇಶ’ವನ್ನು ನೆರವೇರಿಸಿಕೊಳ್ಳಲಿದ್ದಾಳೆ. ಅವಳ ಮೋಹಕ ನೃತ್ಯವನ್ನುವೀಕ್ಷಿಸಲು ಕಲಾರಸಿಕರೆಲ್ಲರಿಗೂ ಆದರದ ಸ್ವಾಗತ. ಧನ್ಯಳಿಗೆ ಬಾಲ್ಯದಿಂದಲೂ ನೃತ್ಯಾಸಕ್ತಿ. ಸಾಂಸ್ಕೃತಿಕ ಪರಿಸರದಲ್ಲಿ ಹುಟ್ಟಿ-ಬೆಳೆದು ಬಂದ ಅವಳ ಕಲಾಪೋಷಣೆಗೆ ನೀರೆರೆದವರು ಅವಳ ತಂದೆ-ತಾಯಿ. ಏಕಾಗ್ರ ನಿಷ್ಠೆಯಿಂದ ನೃತ್ಯದ ಕಲಿಕೆಯಲ್ಲಿ ಅಪರಿಮಿತ ಶ್ರದ್ಧೆ ತೋರಿದ ಧನ್ಯ, ಕರ್ನಾಟಕ ಸರ್ಕಾರದ ಜ್ಯೂನಿಯರ್ ಮತ್ತು ಸೀನಿಯರ್ ನೃತ್ಯಪರೀಕ್ಷೆಗಳಲ್ಲಿ ‘ಡಿಸ್ಟಿಂಕ್ಷನ್’ ಗಳಿಸಿದ್ದಲ್ಲದೆ, ಸಂಗೀತ ವಿದುಷಿ ವಾಣಿ ಕಿರಣ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಜ್ಯೂನಿಯರ್ ಪರೀಕ್ಷೆಯಲ್ಲೂ ಶ್ರೇಷ್ಟಾಂಕಗಳನ್ನು ಗಳಿಸಿದ ಹೆಮ್ಮೆ ಅವಳದು. ‘ವಿದ್ವತ್’…

Read More

ಕೋಟ : ‘ಶಿವರಾಮ ಕಾರಂತ ಥೀಂ ಪಾರ್ಕ್’ ಕೋಟದಲ್ಲಿ ಗೌರವ ಗಣ್ಯರನೇಕರ ಉಪಸ್ಥಿತಿಯೊಂದಿಗೆ ದಿನಾಂಕ 31-12-2023ರಂದು ‘ಡಿ ಫಾರ್ ಡೈ’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮವನ್ನು ಕುಮಾರಿ ಕಾವ್ಯ ಹಂದೆ ಎಚ್. ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆ ಸಂಜೀವ ಕದ್ರಿಕಟ್ಟು ಇವರ ಸಂಸ್ಮರಣಾ ಕಾರ್ಯಕ್ರಮವೂ ಜರುಗಿತು. “ಒಂದರ್ಥದಲ್ಲಿ ಕಳೆದ ವರ್ಷಗಳ ಕೊಳೆಗಳನ್ನು ಕಿತ್ತೊಗೆಯುವ ಸಂದೇಶವನ್ನು ಸಾರಿದ ಡಿಸೈನರ್ ವಿಜಿತ್ ಇವರು ರಚಿಸಿ, ನಿರ್ದೇಶಿಸಿದ ‘ಡಿ ಫಾರ್ ಡೈ’ ಕಿರುಚಿತ್ರ ಹೊಸ ವರ್ಷಕ್ಕೆ ಹೊಸ ಆಯಾಮಗಳಾಗಿ ಹೊಸೆಯಲಿ. ಕಿರಿಯ ನಿರ್ದೇಶಕನಾಗಿ ಕಿರಿಯ ಕಲಾವಿದರನ್ನೊಡಗೂಡಿಕೊಂಡು ಕಿರಿಯವಳಾದ ನನ್ನಿಂದಲೇ ಉದ್ಘಾಟಿಸಿ, ಹಿರಿತನದ ಜವಾಬ್ದಾರಿಯನ್ನು ವಿಜಿತ್ ತಂಡ ಮೆರೆದಿದೆ” ಎಂದು ಕಿರಿಯ ರಂಗ ನಟಿ ಕು. ಕಾವ್ಯ ಹಂದೆ ಎಚ್. ಕಿರುಚಿತ್ರವನ್ನು ಉದ್ಘಾಟಿಸಿ ಮಾತನ್ನಾಡಿದರು. “ಹಲವಾರು ವರ್ಷಗಳ ಹಿಂದಿನಿಂದಲೂ ನಾಟಕ ರಚಿಸಿ, ನಿರ್ದೇಶಿಸಿ, ಅಭಿನಯಿಸುವ ಮೂಲಕ ಕಲಾ ಪ್ರಪಂಚಕ್ಕೆ ಕಾಲಿರಿಸಿದ ಸಂಜೀವ ಕದ್ರಿಕಟ್ಟು, ವ್ಯಾವಹಾರಿಕವಾಗಿ ಬಹು ಚಟುವಟಿಕೆಯಲ್ಲಿ ನಿರತನಾದ ಸಂದರ್ಭದಲ್ಲಿಯೂ…

Read More

ಮೈಸೂರು : ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಪ್ರಯುಕ್ತ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಶ್ರೀ ಕೊಟ್ಟೂರು ಬಸವೇಶ್ವರ ಸೇವಾ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಮತ್ತು ಸ್ವರ್ಣಭೂಮಿ ಫೌಂಡೇಷನ್ ಕರ್ನಾಟಕ ಇದರ ಸಹಕಾರದಲ್ಲಿ ‘ವಿಶ್ವಮಾನವ ಕುವೆಂಪು ಜನ್ಮದಿನಾಚರಣೆ’ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ 29-12-2023ರಂದು ನಡೆಯಿತು. ಇದೇ ಸಂದರ್ಭದಲ್ಲಿ ಕಾಸರಗೋಡು ನುಳ್ಳಿಪ್ಪಾಡಿ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದ ರೂವಾರಿಗಳಾದ ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ದಂಪತಿಗಳಿಗೆ ‘ಕುವೆಂಪು ವಿಶ್ವಮಾನವ ಕನ್ನಡರತ್ನ ಪ್ರಶಸ್ತಿ’ಯನ್ನು ಆದರ್ಶ ಕನ್ನಡ ದಂಪತಿಗಳು ಶೀರ್ಷಿಕೆಯಲ್ಲಿ ನೀಡಿ ಗೌರವಿಸಲಾಯಿತು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿದಾನಂದ ಗೌಡ, ಮೈಸೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಪಂಪ ಪ್ರಶಸ್ತಿ ಪುರಸೃತ ವಿದ್ವಾಂಸ ಡಾ. ಸಿ.ಪಿ.ಕೃಷ್ಣ ಕುಮಾರ್ (ಸಿ.ಪಿ.ಕೆ), ಕಾರ್ಯಕ್ರಮದ ರೂವಾರಿಯಾದ ಟಿ. ಶಿವಕುಮಾರ್ ಕೋಲಾರ, ಟಿ. ಸತೀಶ್ ಜವರೇ ಗೌಡ,…

Read More

ಬೆಂಗಳೂರು : ದ್ವಾರನ ಕುಂಟೆ ಪಾತಣ್ಣ ಪ್ರತಿಷ್ಠಾನವು ರಾಜ್ಯಮಟ್ಟದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗಾಗಿ ಕಾದಂಬರಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾದಂಬರಿಗಳು 2023ರಲ್ಲಿ ಪ್ರಕಟವಾಗಿರಬೇಕು. ಮೂರು ಪ್ರತಿಗಳನ್ನು ದಿನಾಂಕ 30-01-2024ರ ಒಳಗಾಗಿ ಕಳುಹಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನೀಫ್ ತಿಳಿಸಿದ್ದಾರೆ. ವಿಳಾಸ: ಅಧ್ಯಕ್ಷರು, ದ್ವಾರನ ಕುಂಟೆ ಪಾತಣ್ಣ ಪ್ರತಿಷ್ಠಾನ, ನಂ. 118, ‘ಹೊಂಬೆಳಕು’, 5ನೇ ಕ್ರಾಸ್, 1ನೇ ಬ್ಲಾಕ್, ಎಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು -560073. ಹೆಚ್ಚಿನ ಮಾಹಿತಿಗಾಗಿ 9686073837 /7760350244

Read More

ಮಂಗಳೂರು : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಯುನಿಟಿ ಮಿನಿ ಹಾಲ್ ಇಲ್ಲಿ ‘ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕೃತಿ ಲೋಕಾರ್ಪಣೆ’ ಸಮಾರಂಭವು ದಿನಾಂಕ 13-01-2024ರಂದು ಮುಂಜಾನೆ 9-00 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಬೆಂಗಳೂರಿನ ಕೇ.ಕ.ಸಾ.ವೇ. ಸ್ಥಾಪಕಾಧ್ಯಕ್ಷರಾದ ಶ್ರೀ ಕೊಟ್ರೇಶ ಉಪ್ಪಾರ ಇವರು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ವೇದಿಕೆ ಅಧ್ಯಕ್ಷರಾದ ಡಾ. ಸುರೇಶ ನೆಗಳಗುಳಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರತ್ನಾ ಭಟ್, ಹಾ.ಮ. ಸತೀಶ, ಡಾ. ಸುರೇಶ್ ನೆಗಳಗುಳಿ ಇವರ ‘ಕಡಲಹನಿ ಒಡಲ ಧ್ವನಿ’ ಎಂಬ ಗಜಲ್ ಸಂಕಲನವನ್ನು ಮಂಗಳೂರಿನ ಖ್ಯಾತ ಗಜಲ್ ಕವಿ, ನಟ, ಶ್ರೀ ಮಹಮ್ಮದ್ ಬಡ್ಡೂರು ಲೋಕಾರ್ಪಣಾ ಮಾಡಲಿದ್ದಾರೆ. ಪುತ್ತೂರಿನ ವಿಶ್ರಾಂತ ಮುಖ್ಯೋಪಾಧ್ಯಾಯಿನಿ, ಸಾಹಿತಿ, ಯಕ್ಷಗಾನ ಪಟು ಶ್ರೀಮತಿ ರತ್ನಾ ಕೆ. ಭಟ್ ತಲಂಜೇರಿ ಇವರು ಸಾಹಿತ್ಯ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದು, ಖ್ಯಾತ ವ್ಯಂಗ್ಯ ಚಿತ್ರಗಾರರು ಹಾಗೂ ನಗೆ ಚುಟುಕು ಕವಿಗಳಾದ…

Read More

ಮಂಗಳೂರು : ಕಳೆದ 12 ವರ್ಷಗಳಿಂದ ಶಿಕ್ಷಣ ಕಲೆ ಸಾಹಿತ್ಯ ಸಂಸ್ಕೃತಿ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಅರೆಹೊಳೆ ಪ್ರತಿಷ್ಠಾನ, ಕಳೆದ ಒಂಬತ್ತು ವರ್ಷಗಳಿಂದ ಮಂಗಳೂರಿನಲ್ಲಿ ನೀನಾಸಂ ತಿರುಗಾಟದ ನಾಟಕಗಳನ್ನು ಆಯೋಜಿಸುತ್ತಾ ಬಂದಿದೆ. ಈ ವರ್ಷ ಕಲಾಭಿ (ರಿ.) ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯ ಸಹಯೋಗದಲ್ಲಿ ರಂಗ ಸಂಗಾತಿ ಹಾಗೂ ರೂವಾರಿ ಸಹಕಾರದಲ್ಲಿ ಎರಡು ದಿನಗಳ ನಾಟಕೋತ್ಸವವನ್ನು ಹಮ್ಮಿಕೊಂಡಿದೆ. ದಿನಾಂಕ 12-01-2024 ಮತ್ತು 13-01-2024ರಂದು, ಪ್ರತೀ ಸಂಜೆ 7.00 ಗಂಟೆಗೆ ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಈ ನಾಟಕೋತ್ಸವದ ನಾಟಕಗಳು ಪ್ರದರ್ಶನಗೊಳ್ಳಲಿದೆ. ದಿನಾಂಕ 12-01-2024ರಂದು ಡಾ. ಚಂದ್ರಶೇಖರ ಕಂಬಾರ ಅವರ ರಚಿಸಿದ, ಕೆ.ಜಿ. ಕೃಷ್ಣಮೂರ್ತಿಯವರ ನಿರ್ದೇಶನದ ‘ಹುಲಿಯ ನೆರಳು’ ಮತ್ತು ದಿನಾಂಕ 13-01-2024ರಂದು ಲೂಯಿ ನ ಕೋಶಿ ಅವರ ರಚನೆಯ ಶ್ವೇತಾರಾಣಿ ಎಚ್.ಕೆ. ಇವರ ನಿರ್ದೇಶನದ ‘ಆ ಲಯ ಈ ಲಯ’ ನಾಟಕ ಪ್ರದರ್ಶನಗೊಳ್ಳಲಿದೆ. ‘ಹುಲಿಯ ನೆರಳು’ ಹುಲಿ ಬೇಟೆಯೊಂದರ ಹೆಳೆಯಲ್ಲಿ ಪ್ರಾರಂಭವಾಗುವ ಈ ನಾಟಕ ಕಣ್ಣಿಗೆ ಅಡ್ಡವಾಗಿರುವ ತೋರಿಕೆಯ ಪರದೆಯನ್ನು…

Read More

ಉಡುಪಿ : ದಿನಾಂಕ 06-01-2024 ರಂದು ನಿಧನರಾದ ತುಳುನಾಡ ಹಿರಿಯ ಸಾಹಿತಿ, ವಿದ್ವಾಂಸ ಡಾ. ಅಮೃತ ಸೋಮೇಶ್ವರರ ನಿಧನದ ಬಗ್ಗೆ ಸಂತಾಪ ಸಭೆ ದಿನಾಂಕ 08-01-2024ರಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆಯಿತು. ಸಭೆಯಲ್ಲಿ ಅಮೃತ ಸೋಮೇಶ್ವರ ಅವರ ವಿದ್ಯಾರ್ಥಿಯಾದ ಡಾ. ಪಾದೇಕಲ್ಲು ವಿಷ್ಣು ಭಟ್ಟ ಮಾತನಾಡಿ “ತುಳುನಾಡ ಹಿರಿಯ ಸಾಹಿತಿ, ವಿದ್ವಾಂಸ ಡಾ. ಅಮೃತ ಸೋಮೇಶ್ವರ ಅವರ ನಿಧನ ಸಾಹಿತ್ಯ ಲೋಕಕ್ಕೆ ಅಪಾರ ನಷ್ಟ ಉಂಟುಮಾಡಿದೆ. ಸೋಮೇಶ್ವರ ಅವರು ಕಾದಂಬರಿಕಾರರಾಗಿ, ಅನುವಾದಕರಾಗಿ, ಕಥಾಸಂಕಲನ, ಕವನ ಸಂಕಲನ, ರೇಡಿಯೋ ರೂಪಕ, ಧ್ವನಿಸುರುಳಿಗೆ ಸಾಹಿತ್ಯ, ನಾಟಕ, ಯಕ್ಷಗಾನ ಪ್ರಸಂಗಗಳು, ಯಕ್ಷಗಾನ ಕೃತಿಗಳು, ಗಾದೆಗಳು, ಶಬ್ದಕೋಶ, ವಚನ ಸಾಹಿತ್ಯ, ಪಾಡ್ದನ ಸಂಗ್ರಹ ಹೀಗೆ ಹತ್ತು ಹಲವು ನೆಲೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದವರು. ಅವರು ಕೈಯಾಡಿಸದ ಕ್ಷೇತ್ರವೇ ಇಲ್ಲವೆಂದು ಹೇಳಬಹುದಾದಷ್ಟು ವಿಶಾಲವಾದ ಕಾರ್ಯಕ್ಷೇತ್ರ ಅವರದ್ದಾಗಿತ್ತು.” ಎಂದರು. ಪ್ರೊ. ಮುರಳೀಧರ ಉಪಾಧ್ಯಾಯರು ಮಾತನಾಡಿ ಸೋಮೇಶ್ವರ ಅವರು ಪ್ರಾಧ್ಯಾಪಕರಾಗಿದ್ದಾಗ ಹೇಗೆ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದರು ಮತ್ತು ಅವರ…

Read More

ಕೋಟ : ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕರಲ್ಲೋರ್ವರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪರ ನೆನಪಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ಟ್ರಸ್ಟ್ ಕೊಡಮಾಡುವ 2023-24ರ ಸಾಲಿನ ಉಡುಪ ಪ್ರಶಸ್ತಿಗೆ ಕೋಟ ಅಮೃತೇಶ್ವರಿ ಮೇಳದ ಯಕ್ಷಗಾನ ಕಲಾವಿದ, ಮಟ್ಪಾಡಿ ತಿಟ್ಟಿನ ಕೋಟ ಸುರೇಶ್ ಬಂಗೇರ ಭಾಜನರಾಗಿದ್ದಾರೆ. ಯಕ್ಷಗಾನದ ದಂತಕಥೆ ಶಿರಿಯಾರ ಮಂಜು ನಾಯ್ಕರ ಮಾತುಗಾರಿಕೆ, ಗುರು ವೀರಭದ್ರ ನಾಯ್ಕರ ಹೆಜ್ಜೆಗಾರಿಕೆ, ಮೊಳಹಳ್ಳಿ ಹಿರಿಯ ನಾಯ್ಕ್ ಇವರ ರಂಗತಂತ್ರಗಳನ್ನು ಮೈಗೂಡಿಸಿಕೊಂಡು ಪ್ರಸಿದ್ದ ಪುರುಷ ವೇಷಧಾರಿಯಾಗಿ ಗುರುತಿಸಿಕೊಂಡು ಇದೀಗ ಯಕ್ಷರಂಗದಲ್ಲಿ ಎರಡನೆ ವೇಷದಲ್ಲಿ ಮಿಂಚುತ್ತಿರುವ ಸುರೇಶ್‌ ಇವರು ಸುಧನ್ವ, ಪುಷ್ಕಳ, ಶುಭ್ರಾಂಗ, ಮಾರ್ತಾಂಡತೇಜ, ಅರ್ಜುನ, ಕೃಷ್ಣ, ತಾಮ್ರಧ್ವಜ, ಪರಶುರಾಮ ಮೊದಲಾದ ಪಾತ್ರಗಳಲ್ಲದೆ ಹೊಸ ಪ್ರಸಂಗಗಳಲ್ಲೂ ಸೈ ಎನಿಸಿ, ಸೌಕೂರು, ಸಾಲಿಗ್ರಾಮ, ಪೆರ್ಡೂರು, ಕಮಲಶಿಲೆ, ಅಮೃತೇಶ್ವರಿ ಮೊದಲಾದ ಮೇಳಗಳಲ್ಲಿ ಸುಮಾರು 36 ವರ್ಷಗಳ ಕಾಲ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ದಿನಾಂಕ 11-02-2024ರ ಆದಿತ್ಯವಾರ ಕೋಟದ ಪಟೇಲರ ಮನೆಯ ಆವರಣದಲ್ಲಿ ಗಣ್ಯರ ಸಮಕ್ಷಮದಲ್ಲಿ ಹತ್ತು…

Read More